< ಯೋಹಾನನು 11 >

1 ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು.
लाजरस नाम गरेका मानिस बिरामी थिए । तिनी तिनकी दिदीहरू मरियम र मार्थाको गाउँ बेथानियाका थिए ।
2 ಈ ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.
यिनी तिनै मरियम थिइन् जसले प्रभुलाई मूर्रले अभिषेक गरिन् र उहाँका खुट्टा आफ्नो कपालले पुछेकी थिइन्, जसका भाइ लाजरस बिरामी थिए ।
3 ಹೀಗಿರಲಾಗಿ ಅವನ ಸಹೋದರಿಯರು, “ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ” ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು.
यी दुई दिदी-बहिनीले येशूलाई बोलाउन पठाए “प्रभु, हेर्नुहोस्, तपाईंले जसलाई माया गर्नुहुन्छ तिनी बिरामी छन् ।”
4 ಯೇಸು ಇದನ್ನು ಕೇಳಿ, “ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು” ಎಂದು ಹೇಳಿದನು.
जब येशूले यो सुन्‍नुभयो, उहाँले भन्‍नुभयो, “यस बिरामीले मृत्युमा पुर्‍याउँदैन, तर बरु यो परमेश्‍वरको महिमाको निम्ति हो, ताकि परमेश्‍वरका पुत्र यसद्वारा महिमित हुन सकून् ।”
5 ಮಾರ್ಥಳನ್ನು ಆಕೆಯ ತಂಗಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದನು.
येशूले मार्था र तिनकी बहिनी अनि लाजरसलाई माया गर्नुहुन्थ्यो ।
6 ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆಯೂ ಎರಡು ದಿನ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡನು.
त्यसैले, जब येशूले लाजरस बिरामी भएको सुन्‍नुभयो, उहाँ अरू दुई दिन त्यही ठाउँमा बस्‍नुभयो जहाँ उहाँ हुनुहुन्थ्यो ।
7 ಬಳಿಕ ಆತನು ತನ್ನ ಶಿಷ್ಯರಿಗೆ, “ನಾವು ಪುನಃ ಯೂದಾಯಕ್ಕೆ ಹೋಗೋಣ” ಎಂದು ಹೇಳಿದನು.
यसपछि उहाँले चेलाहरूलाई भन्‍नुभयो, “फेरि यहूदियातिर जाऔँ ।”
8 ಆತನ ಶಿಷ್ಯರು ಆತನಿಗೆ, “ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?” ಎಂದರು.
चेलाहरूले उहाँलाई भने, “रब्बी, अहिले नै यहूदीहरूले तपाईंलाई ढुङ्गा हान्‍न खोजिरहेका थिए र तपाईं फेरि त्यहीँ फर्केर जाँदै हुनुहुन्छ?”
9 ಯೇಸು, “ಹಗಲಿಗೆ ಹನ್ನೆರಡು ತಾಸುಗಳು ಉಂಟಲ್ಲವೇ? ಒಬ್ಬನು ಹಗಲಿನಲ್ಲಿ ನಡೆದರೆ, ಈ ಲೋಕದ ಬೆಳಕು ಕಾಣಿಸುವುದರಿಂದ ಅವನು ಎಡವುದಿಲ್ಲ.
येशूले जवाफ दिनुभयो, “के दिनमा बाह्र घण्टा उज्यालो हुँदैन र? यदि कोही दिनको समयमा हिँड्छ भने त्यसलाई ठेस लाग्दैन, किनकि त्यसले यस संसारको उज्यालोको सहायताले देख्छ ।
10 ೧೦ ರಾತ್ರಿಯಲ್ಲಿ ನಡೆದರೆ ತನ್ನಲ್ಲಿ ಬೆಳಕಿಲ್ಲದ್ದರಿಂದ ಅವನು ಎಡವುತ್ತಾನೆ” ಎಂದು ಉತ್ತರಕೊಟ್ಟನು.
तापनि त्यो राति हिँड्छ भने त्यसलाई ठेस लाग्छ, किनकि त्यसमा उज्यालो हुँदैन ।”
11 ೧೧ ಇದನ್ನು ಹೇಳಿದ ಮೇಲೆ ಆತನು ಅವರಿಗೆ, “ನಮ್ಮ ಮಿತ್ರನಾದ ಲಾಜರನು ನಿದ್ರೆ ಮಾಡುತ್ತಿದ್ದಾನೆ, ಆದುದರಿಂದ ನಾನು ಹೋಗಿ ಅವನನ್ನು ನಿದ್ರೆಯಿಂದ ಎಬ್ಬಿಸಬೇಕಾಗಿದೆ” ಎಂದು ಹೇಳಿದನು.
उहाँले यी कुराहरू उहाँले तिनीहरूलाई भन्‍नुभयो, “हाम्रा साथी लाजरस मस्त निद्रामा परेका छन्, तर म जाँदै छु, ताकि म तिनलाई निद्राबाट बिउँझाउन सकूँ ।”
12 ೧೨ ಅದಕ್ಕೆ ಶಿಷ್ಯರು, “ಅವನು ನಿದ್ರೆ ಮಾಡುತ್ತಿದ್ದರೆ ಸ್ವಸ್ಥನಾಗುವನು” ಎಂದರು.
यसकारण चेलाहरूले उहाँलाई भने, “प्रभु, यदि तिनी निद्रामा परेका छन् भने तिनी होसमा आउनेछन् ।”
13 ೧೩ ಯೇಸು ಅವನ ಮರಣವನ್ನು ಕುರಿತು ಅದನ್ನು ಹೇಳಿದ್ದನು, ಆದರೆ ಅವರು ವಿಶ್ರಾಂತಿಗಾಗಿ ಮಲಗಿದ್ದಾನೆಂಬುದಾಗಿ ಹೇಳಿದನೆಂದು ಯೋಚಿಸಿದರು.
अहिले येशूले तिनको मृत्युको बारेमा बोल्नुभएको थियो, तर उहाँ आरामको निद्राको बारेमा बोलिरहनुभएको छ भन्‍ने तिनीहरूले सोचे ।
14 ೧೪ ಆಗ ಯೇಸು ಸ್ಪಷ್ಟವಾಗಿ ಅವರಿಗೆ, “ಲಾಜರನು ಸತ್ತು ಹೋಗಿದ್ದಾನೆ.
त्यसपछि येशूले तिनीहरूलाई स्पष्‍ट रूपमा भन्‍नुभयो, “लाजरस मरेको छ ।
15 ೧೫ ನಾನು ಅಲ್ಲಿ ಇಲ್ಲದೆ ಹೋದದ್ದು ಒಳ್ಳೆಯದೇ, ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಬನ್ನಿ, ನಾವು ಅವನ ಬಳಿಗೆ ಹೋಗೋಣ” ಎಂದು ಹೇಳಿದನು
म त्यहाँ नभएकोमा तिमीहरूका खातिर म खुसी छु, ताकि तिमीहरूले विश्‍वास गर्न सक । तिनीकहाँ जाऔँ ।”
16 ೧೬ ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಸಾಯುವುದಕ್ಕೆ ಹೋಗೋಣ” ಎಂದು ಹೇಳಿದನು.
दिदुमस भनिने थोमाले उनका सङ्गी चेलाहरूलाई भने, “हामी पनि जाऔँ, कि हामी पनि येशूसँगै मर्न सकौँ ।”
17 ೧೭ ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿನಗಳಾಯಿತೆಂದು ಆತನಿಗೆ ತಿಳಿದು ಬಂದಿತು.
जब येशू आउनुभयो, लाजरसलाई चिहानमा राखेको चार दिन भइसकेको उहाँले पाउनुभयो ।
18 ೧೮ ಬೇಥಾನ್ಯವು ಯೆರೂಸಲೇಮಿಗೆ ಸಮೀಪವಾಗಿತ್ತು. ಯೆರುಸಲೇಮಿನಿಂದ ಸುಮಾರು ಒಂದು ಹರಿದಾರಿಯಷ್ಟು ಅಂತರವಿತ್ತು.
बेथानिया यरूशलेमबाट नजिकै करिब तिन किलोमिटर दुरीमा पर्थ्यो ।
19 ೧೯ ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.
धेरै यहूदीहरू मरियम र मार्थाकहाँ तिनीहरूका भाइको बारेमा तिनीहरूलाई सान्त्वना दिन आएका थिए ।
20 ೨೦ ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ ಆತನನ್ನು ಎದುರುಗೊಳ್ಳುವುದಕ್ಕೆ ಎದ್ದು ಹೋದಳು. ಆದರೆ ಮರಿಯಳು ಮನೆಯಲ್ಲೇ ಉಳಿದುಕೊಂಡಿದ್ದಳು.
जब मार्थाले येशू आउँदै हुनुहुन्छ भन्‍ने सुनिन्, तिनी उहाँलाई भेट्न गइन्, तर मरियमचाहिँ घरमा नै बसिरहेकी थिइन् ।
21 ೨೧ ಆಗ ಮಾರ್ಥಳು ಯೇಸುವಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ.
त्यसपछि मार्थाले येशूलाई भनिन्, “प्रभु, यदि तपाईं यहाँ हुनुभएको भए मेरा भाइ मर्ने थिएनन् ।
22 ೨೨ ಈಗಲಾದರೂ ನೀನು ದೇವರನ್ನು ಏನು ಕೇಳಿಕೊಂಡರೂ ಅದನ್ನು ದೇವರು ನಿನಗೆ ಅನುಗ್ರಹಿಸುವನೆಂದು ನಾನು ಬಲ್ಲೆನು” ಎಂದು ಹೇಳಿದಳು.
म जान्दछु, कि अहिले पनि तपाईंले परमेश्‍वरसँग जे माग्‍नुहुन्छ सो उहाँले तपाईंलाई दिनुहुनेछ ।”
23 ೨೩ ಯೇಸು ಆಕೆಗೆ, “ನಿನ್ನ ತಮ್ಮನು ಪುನಃ ಎದ್ದು ಬರುವನು” ಎಂದು ಹೇಳಿದನು.
येशूले तिनलाई भन्‍नुभयो, “तिम्रा भाइ फेरि जीवित हुनेछन् ।”
24 ೨೪ ಮಾರ್ಥಳು ಆತನಿಗೆ, “ಸತ್ತವರಿಗೆ ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು” ಅಂದಳು.
मार्थाले उहाँलाई भनिन्, “म जान्दछु, कि तिनी अन्त्यको दिनको पुनरुथानमा फेरि जीवित हुनेछन्” ।
25 ೨೫ ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,
येशूले तिनलाई भन्‍नुभयो, “पुनरुथान र जीवन म नै हुँ; जसले मलाई विश्‍वास गर्छ, त्यो मरे तापनि जीवित हुनेछ ।
26 ೨೬ ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?” ಎಂದು ಕೇಳಿದಕ್ಕೆ, (aiōn g165)
जसले मलाई विश्‍वास गर्छ र ममा जिउँछ त्यो कहिल्यै मर्नेछैन । के तिमी यो विश्‍वास गर्छ्यौ?” (aiōn g165)
27 ೨೭ ಆಕೆಯು ಆತನಿಗೆ, “ಹೌದು ಕರ್ತನೇ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಾನು ನಂಬಿದ್ದೇನೆ” ಅಂದಳು.
तिनले उहाँलाई भनिन्, “हो प्रभु, म विश्‍वास गर्छु, तपाईं नै संसारमा आइरहनुभएका परमेश्‍वरका पुत्र अर्थात् ख्रीष्‍ट हुनुहुन्छ ।”
28 ೨೮ ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು, “ಗುರುವು ಬಂದಿದ್ದಾರೆ, ನಿನ್ನನ್ನು ಕರೆಯುತ್ತಿದ್ದಾರೆ” ಎಂದಳು.
जब तिनले यो भनिन्, तिनी त्यहाँबाट गइन् र तिनकी बहिनी मरियमलाई सुटुक्‍क बोलाइन् । तिनले भनिन्, “गुरुज्यू यहाँ हुनुहुन्छ र तिमीलाई बोलाउँदै हुनुहुन्छ ।”
29 ೨೯ ಮರಿಯಳು ಇದನ್ನು ಕೇಳಿದಾಗ ತಟ್ಟನೆ ಎದ್ದು ಆತನ ಬಳಿಗೆ ಹೋದಳು.
जब तिनले यो सुनिन्, तिनी झट्टै उठिन् र उहाँकहाँ गइन् ।
30 ೩೦ ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ. ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು.
येशू अझै पनि त्यस गाउँभित्र आउनुभएको थिएन, तर उहाँ त्यही ठाउँमा हुनुहुन्थ्यो जहाँ मार्थाले उहाँलाई भेटेकी थिइन् ।
31 ೩೧ ಮರಿಯಳೊಂದಿಗೆ ಮನೆಯಲ್ಲಿ ಇದ್ದುಕೊಂಡು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯ ಹಿಂದೆ ಹೋದರು.
त्यसैले, तिनीसँग घरमा भएका र तिनलाई सान्त्वना दिइरहेका यहूदीहरूले जब मरियम झट्टै उठेर बाहिर गइरहेकी देखे, तिनीहरूले तिनी चिहानमा रुन गइरहेकी छन् भन्‍ने सोची तिनीहरू पनि तिनको पछि लागे ।
32 ೩೨ ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಗಳಿಗೆ ಅಡ್ಡಬಿದ್ದು ಆತನಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದಳು.
त्यसपछि जब मरियम येशू हुनुभएको ठाउँमा आइन् र उहाँलाई देखिन्, तिनी उहाँको पाउमा घोप्‍टो परिन्, र उहाँलाई भनिन्, “प्रभु, यदि तपाईं यहाँ हुनुभएको भए मेरा भाइ मर्ने थिएनन् ।”
33 ೩೩ ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರು ಅಳುವುದನ್ನು ಯೇಸು ನೋಡಿದಾಗ ಯೇಸುವು ಆತ್ಮದಲ್ಲಿ ವ್ಯಸನಪಟ್ಟು ನೊಂದುಕೊಂಡು,
जब येशूले तिनी र तिनीसँग आएका यहूदीहरू पनि रोइरहेको देख्‍नुभयो, उहाँ आत्मामा अति विचलित हुनुभयो, र दुःखित हुनुभयो ।
34 ೩೪ “ಅವನನ್ನು ಎಲ್ಲಿ ಇಟ್ಟಿದ್ದೀರಿ?” ಎಂದನು. ಅವರು ಆತನಿಗೆ, “ಕರ್ತನೇ, ಬಂದು ನೋಡು” ಎಂದರು.
उहाँले भन्‍नुभयो, “तिमीहरूले तिनलाई कहाँ राखेका छौ?” उनीहरूले उहाँलाई भने, “प्रभु आउनुहोस्, र हेर्नुहोस् ।”
35 ೩೫ ಯೇಸು ಕಣ್ಣೀರಿಟ್ಟನು.
येशू रुनुभयो ।
36 ೩೬ ಅದಕ್ಕೆ ಯೆಹೂದ್ಯರು, “ಆಹಾ! ಈತನು ಅವನ ಮೇಲೆ ಎಷ್ಟೋ ಮಮತೆ ಇಟ್ಟಿದ್ದಾನೆ” ಎಂದರು.
त्यसपछि यहूदीहरूले भने, “हेर, उहाँले लाजरसलाई कति माया गर्नुहुन्थ्यो!”
37 ೩೭ ಅವರಲ್ಲಿ ಕೆಲವರು, “ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ, ಈ ಮನುಷ್ಯನನ್ನು ಸಾಯದ ಹಾಗೆ ಮಾಡಬಹುದಿತ್ತಲ್ಲಾ?” ಎಂದರು.
तर तिनीहरूमध्ये केहीले भने, “के अन्धाका आँखा खोल्ने यी मानिसले यस मानिसलाई पनि नमर्ने तुल्याउने बनाउन सक्दैनथ्यो र?”
38 ೩೮ ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು.
त्यसपछि फेरि येशू आत्मामा आफैँ अति विचलित हुनुभयो, र चिहानतिर जानुभयो । यो एउटा गुफा थियो र यसलाई एउटा ढुङ्गाले ढाकेको थियो ।
39 ೩೯ ಯೇಸು, “ಆ ಕಲ್ಲನ್ನು ತೆಗೆದು ಹಾಕಿರಿ” ಎನ್ನಲು, ತೀರಿಹೋದವನ ಸಹೋದರಿಯಾದ ಮಾರ್ಥಳು ಆತನಿಗೆ, “ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು” ಎಂದಳು.
येशूले भन्‍नुभयो, “ढुङ्गा हटाऊ ।” लाजरस जो मरेका थिए, तिनकी दिदी मार्थाले येशूलाई भनिन्, “प्रभु, अहिलेसम्म त शरीर कुहिसकेको हुनेछ, किनकि तिनी मरेको चार दिन भइसक्यो ।”
40 ೪೦ ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದು ಉತ್ತರ ಕೊಟ್ಟನು
येशूले तिनलाई भन्‍नुभयो, “के मैले तिमीलाई भनिनँ, कि यदि तिमीले विश्‍वास गर्‍यौ भने तिमीले परमेश्‍वरको महिमा देख्‍नेछौ?”
41 ೪೧ ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
त्यसैले, तिनीहरूले ढुङ्गा हटाए । येशूले आफ्ना आँखा माथितिर उठाउनुभयो, र भन्‍नुभयो, “हे पिता, मेरो बिन्ती सुन्‍नुभएकोमा म तपाईंलाई धन्यवाद दिन्छु ।
42 ೪೨ ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು.
म जान्दथेँ, तपाईंले मेरो बिन्ती सधैँ सुन्‍नुहुन्छ, तर मेरो वरिपरि उभिरहेका यो भिडको कारण मैले यो भनेँ, ताकि तपाईंले मलाई पठाउनुभएको छ भन्‍ने तिनीहरूले विश्‍वास गर्न सकून् ।”
43 ೪೩ ಆತನು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
उहाँले यी कुराहरू भन्‍नुभएपछि उहाँले ठुलो सोरमा भन्‍नुभयो, “लाजरस, बाहिर आऊ!”
44 ೪೪ ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ತಿದ್ದವು. ಅವನ ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅವರಿಗೆ, “ಅವನನ್ನು ಬಿಡಿಸಿರಿ, ಅವನು ಹೋಗಲಿ” ಎಂದು ಹೇಳಿದನು.
मरेको मानिस बाहिर आयो, त्यसका हात र खुट्टाहरू कपडाले बाँधिएका थिए; त्यसको अनुहार कपडाले बेह्रिएको थियो । येशूले तिनीहरूलाई भन्‍नुभयो, “त्यसलाई खोलिदेओ, र त्यसलाई जान देओ ।”
45 ೪೫ ಆದುದರಿಂದ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯವನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.
त्यसपछि मरियमकहाँ आएका र येशूले जे गर्नुभयो सो दखेका धेरै यहूदीहरूले उहाँमा विश्‍वास गरे ।
46 ೪೬ ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕಾರ್ಯಗಳನ್ನು ಅವರಿಗೆ ಹೇಳಿದರು.
तर तिनीहरूमध्ये केही फरिसीहरूकहाँ गए र येशूले गर्नुभएका ती कुराहरू तिनीहरूलाई बताइदिए ।
47 ೪೭ ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.
त्यसपछि मुख्य पुजारीहरू र फरिसीहरूले परिषद्‌का सदस्यहरूलाई भेला पारे, र भने, “हामीले के गर्ने? यस मानिसले धेरै चिह्न‍हरू गर्छन् ।
48 ೪೮ ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು.
यदि हामीले यसलाई यसरी नै छोडिदियौँ भने सबैले यसलाई विश्‍वास गर्नेछन्; रोमीहरू आउनेछन् अनि हाम्रो ठाउँ र हाम्रो जाति दुवै लिनेछन् ।”
49 ೪೯ ಆಗ ಅವರಲ್ಲಿ ಆ ವರ್ಷಕ್ಕೆ ಮಹಾಯಾಜಕನಾಗಿದ್ದ ಕಾಯಫನೆಂಬುವನು ಅವರಿಗೆ, “ನಿಮಗೇನೂ ತಿಳಿಯುತ್ತಿಲ್ಲ.
तैपनि तिनीहरूमध्ये कैयाफा नामका मानिस जो त्यस वर्ष प्रधान पुजारी थिए तिनले तिनीहरूलाई भने, “तिमीहरू केही पनि जान्दैनौ ।
50 ೫೦ ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಆಲೋಚಿಸುವುದೂ ಇಲ್ಲ” ಎಂಬುದಾಗಿ ಹೇಳಿದನು.
सम्पूर्ण राष्‍ट्र नै नष्‍ट हुनुभन्दा मानिसहरूका निम्ति एक जना मर्नु नै तिमीहरूका निम्ति उत्तम हो भन्‍ने तिमीहरू ठान्दैनौ ।”
51 ೫೧ ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ, ಆದರೆ ತಾನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ, ಯೇಸು ಆ ಜನರಿಗೋಸ್ಕರ ಹಾಗೂ
अब यो तिनले आफ्नै तर्फबाट भनेका थिएनन् । बरु उनी त्यस वर्षका प्रधान पुजारी भएको कारणले येशू राष्‍ट्रको निम्ति मर्नुपर्छ भनी तिनले अगमवाणी गरेका थिए ।
52 ೫೨ ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು
राष्‍ट्रको निम्ति मात्र होइन, तर छरपष्‍ट भएका परमेश्‍वरका सन्तानहरूसँगै एक होऊन् भनेर पनि हो ।
53 ೫೩ ಅವರು ಆ ದಿನದಿಂದ ಆತನನ್ನು ಕೊಲ್ಲುವುದಕ್ಕೆ ಆಲೋಚಿಸುತ್ತಿದ್ದರು.
त्यसैले, त्यस दिनदेखि उनीहरूले येशूलाई कसरी मार्ने भनी योजना बनाउन थाले ।
54 ೫೪ ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ, ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ, ಎಫ್ರಾಯೀಮ್ ಎಂಬ ಊರಲ್ಲಿ ತನ್ನ ಶಿಷ್ಯರ ಜೊತೆ ಇದ್ದನು.
येशू यहूदीहरू माझ खुलमखुला हिँड्‍डुल गर्नुभएन, तर उहाँ त्यहाँबाट उजाड-स्थान नजिकैको गाउँमा रहेको एफ्राइम भनिने सहरमा जानुभयो । त्यहाँ उहाँ चेलाहरूसँग बस्‍नुभयो ।
55 ೫೫ ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು.
अब यहूदीहरूको निस्तार-चाड नजिकै थियो र धेरै जना आफैँलाई शुद्ध पार्न गाउँहरूबाट निस्तार-चाड अगि नै यरूशलेम गए ।
56 ೫೬ ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಅವನು ಹಬ್ಬಕ್ಕೆ ಬಾರದೇ ಇದ್ದಾನೋ? ನಿಮಗೆ ಹೇಗೆ ತೋರುತ್ತದೆ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಾ ಇದ್ದರು.
तिनीहरूले येशूलाई खोजिरहेका थिए । तिनीहरू मन्दिरमा खडा भइरहँदा एक-अर्कामा भन्दै थिए, “तिमीहरूलाई कस्तो लाग्छ? उनी चाडमा आउने छैनन् र?”
57 ೫೭ ಆಗ ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಹಿಡಿಯಬೇಕೆಂಬುದಾಗಿ ಯೋಚಿಸಿ, ಅವನಿರುವ ಸ್ಥಳವು ಯಾರಿಗಾದರೂ ಗೊತ್ತಾದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.
अहिले मुख्य पुजारीहरू र फरिसीहरूले यो उर्दी जारी गरेका थिए, कि यदि कसैले येशू कहाँ हुनुहुन्थ्यो भनी जान्दथ्यो भने, त्यसले त्यो भन्‍नुपर्छ ताकि तिनीहरूले उहाँलाई पक्रन सकून् ।

< ಯೋಹಾನನು 11 >