< ಯೆಹೋಶುವನು 20 >

1 ಯೆಹೋವನು ಯೆಹೋಶುವನನ್ನು ಕುರಿತು,
וידבר יהוה אל יהושע לאמר
2 “ನೀನು ಇಸ್ರಾಯೇಲರಿಗೆ ‘ನಾನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ನೀವು ನಿಮಗೋಸ್ಕರ ಕೆಲವು ಆಶ್ರಯ ನಗರಗಳನ್ನು ಗೊತ್ತು ಮಾಡಿಕೊಳ್ಳಿರಿ;
דבר אל בני ישראל לאמר תנו לכם את ערי המקלט אשר דברתי אליכם ביד משה
3 ನಿಮ್ಮಲ್ಲಿ ತಿಳಿಯದೆ ಆಕಸ್ಮಾತ್ತಾಗಿ ನರಹತ್ಯಮಾಡಿದವನು ಅಲ್ಲಿಗೆ ಓಡಿಹೋಗಲಿ. ಹತವಾದವನ ಸಮೀಪ ಬಂಧುವು ಮುಯ್ಯಿತೀರಿಸದಂತೆ ಅವು ನಿಮಗೆ ಆಶ್ರಯಸ್ಥಾನಗಳಾಗಿರಲಿ.
לנוס שמה רוצח מכה נפש בשגגה בבלי דעת והיו לכם למקלט מגאל הדם
4 ಅಂಥ ಪಟ್ಟಣಕ್ಕೆ ಓಡಿ ಹೋದವನು ಮೊದಲು ಊರ ಬಾಗಿಲಲ್ಲೇ ನಿಂತುಕೊಂಡು ಅಲ್ಲಿನ ಹಿರಿಯರಿಗೆ ತನ್ನ ಸಂಗತಿಯನ್ನು ತಿಳಿಯಪಡಿಸಲಿ. ಅವರು ಅವನನ್ನು ಊರೊಳಕ್ಕೆ ಸೇರಿಸಿಕೊಂಡು, ಅವನ ವಾಸಕ್ಕೆ ಸ್ಥಳ ಕೊಡಲಿ
ונס אל אחת מהערים האלה ועמד פתח שער העיר ודבר באזני זקני העיר ההיא את דבריו ואספו אתו העירה אליהם ונתנו לו מקום וישב עמם
5 ಹತವಾದವನ ಸಮೀಪ ಬಂಧುವು ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಏಕೆಂದರೆ ಅವನು ನೆರೆಯವನನ್ನು ಹಳೆಯ ದ್ವೇಷವೇನೂ ಇಲ್ಲದೆ ಆಕಸ್ಮಾತ್ತಾಗಿ ಕೊಂದನು.
וכי ירדף גאל הדם אחריו ולא יסגרו את הרצח בידו כי בבלי דעת הכה את רעהו ולא שנא הוא לו מתמול שלשום
6 ಒಂದು ಸಭೆಯನ್ನು ಸೇರಿಸಿ ಅಂಥವನನ್ನು ವಿಚಾರಿಸಬೇಕು; ಮತ್ತು ಅವನು ಆಗಿನ ಮಹಾಯಾಜಕನ ಜೀವಮಾನವೆಲ್ಲಾ ಅದೇ ಪಟ್ಟಣದಲ್ಲಿ ಇರಬೇಕು. ಆ ನಂತರ ತಾನು ಬಿಟ್ಟು ಬಂದ ಪಟ್ಟಣದಲ್ಲಿರುವ ಮನೆಗೆ ಹಿಂತಿರುಗಿ ಹೋಗಬಹುದು’ ಎಂದು ಹೇಳು” ಎಂದನು.
וישב בעיר ההיא עד עמדו לפני העדה למשפט עד מות הכהן הגדול אשר יהיה בימים ההם אז ישוב הרוצח ובא אל עירו ואל ביתו--אל העיר אשר נס משם
7 ಇಸ್ರಾಯೇಲ್ಯರು ನಫ್ತಾಲಿ ಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬ ಪಟ್ಟಣಗಳನ್ನು ನೇಮಿಸಿದರು.
ויקדשו את קדש בגליל בהר נפתלי ואת שכם בהר אפרים ואת קרית ארבע היא חברון בהר יהודה
8 ಇವುಗಳನ್ನು ಮಾತ್ರವಲ್ಲದೆ, ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನು ನೇಮಿಸಿದನು.
ומעבר לירדן יריחו מזרחה נתנו את בצר במדבר במישר ממטה ראובן ואת ראמת בגלעד ממטה גד ואת גלון (גולן) בבשן ממטה מנשה
9 ಇಸ್ರಾಯೇಲ್ಯರೆಲ್ಲರಿಗೂ ಹಾಗೂ ಅವರ ಮಧ್ಯದಲ್ಲಿ ವಾಸಮಾಡುತ್ತಿದ್ದ ಪರದೇಶಿಗಳಿಗೂ ಇವು ಆಶ್ರಯ ನಗರಗಳಾಗಿ ನೇಮಕ ಆಗಿದ್ದವು. ಬೇರೊಬ್ಬನನ್ನು ಆಕಸ್ಮಾತ್ತಾಗಿ ಕೊಂದವನು ಓಡಿಹೋಗಿ ಹತನಾದವನ ಹತ್ತಿರದ ಬಂಧುವಿನಿಂದ ತಲೆ ತಪ್ಪಿಸಿ ಕೊಳ್ಳಬಹುದು. ಅಲ್ಲದೆ ತಾನು ನ್ಯಾಯ ಸಭೆಯ ಮುಂದೆ ನಿಲ್ಲುವವರೆಗೆ ಅಲ್ಲೇ ಇರಬಹುದಾಗಿದೆ.
אלה היו ערי המועדה לכל בני ישראל ולגר הגר בתוכם לנוס שמה כל מכה נפש בשגגה ולא ימות ביד גאל הדם עד עמדו לפני העדה

< ಯೆಹೋಶುವನು 20 >