< ಯೆಹೋಶುವನು 22 >

1 ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಕುಲದ ಅರ್ಧ ಜನರನ್ನು ಕರೆಸಿ ಅವರಿಗೆ,
אָז יִקְרָא יְהוֹשֻׁעַ לָרֽאוּבֵנִי וְלַגָּדִי וְלַחֲצִי מַטֵּה מְנַשֶּֽׁה׃
2 “ನೀವು ಯೆಹೋವನ ಸೇವಕನಾದ ಮೋಶೆಯ ಆಜ್ಞೆಗಳೆಲ್ಲವನ್ನು ಕೈಕೊಂಡಿದ್ದೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ್ದೀರಿ.
וַיֹּאמֶר אֲלֵיהֶם אַתֶּם שְׁמַרְתֶּם אֵת כָּל־אֲשֶׁר צִוָּה אֶתְכֶם מֹשֶׁה עֶבֶד יְהוָה וַתִּשְׁמְעוּ בְקוֹלִי לְכֹל אֲשֶׁר־צִוִּיתִי אֶתְכֶֽם׃
3 ಈ ಕಾಲದಲ್ಲೆಲ್ಲಾ ನೀವು ನಿಮ್ಮ ಸಹೋದರರಿಂದ ಬೇರ್ಪಡದೆ ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಾ ಬಂದಿದ್ದೀರಿ.
לֹֽא־עֲזַבְתֶּם אֶת־אֲחֵיכֶם זֶה יָמִים רַבִּים עַד הַיּוֹם הַזֶּה וּשְׁמַרְתֶּם אֶת־מִשְׁמֶרֶת מִצְוַת יְהוָה אֱלֹהֵיכֶֽם׃
4 ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.
וְעַתָּה הֵנִיחַ יְהוָה אֱלֹֽהֵיכֶם לַֽאֲחֵיכֶם כַּאֲשֶׁר דִּבֶּר לָהֶם וְעַתָּה פְּנוּ וּלְכוּ לָכֶם לְאָהֳלֵיכֶם אֶל־אֶרֶץ אֲחֻזַּתְכֶם אֲשֶׁר ׀ נָתַן לָכֶם מֹשֶׁה עֶבֶד יְהוָה בְּעֵבֶר הַיַּרְדֵּֽן׃
5 ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು, ಆತನ ಆಜ್ಞೆಗಳನ್ನು ಕೈಕೊಂಡು ಆತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಆತನನ್ನು ಸೇವಿಸಿರಿ,” ಎಂದು ಹೇಳಿ
רַק ׀ שִׁמְרוּ מְאֹד לַעֲשׂוֹת אֶת־הַמִּצְוָה וְאֶת־הַתּוֹרָה אֲשֶׁר צִוָּה אֶתְכֶם מֹשֶׁה עֶֽבֶד־יְהוָה לְאַהֲבָה אֶת־יְהוָה אֱלֹֽהֵיכֶם וְלָלֶכֶת בְּכָל־דְּרָכָיו וְלִשְׁמֹר מִצְוֺתָיו וּלְדָבְקָה־בוֹ וּלְעָבְדוֹ בְּכָל־לְבַבְכֶם וּבְכָל־נַפְשְׁכֶֽם׃
6 ಅವರನ್ನು ಆಶೀರ್ವದಿಸಿ ಕಳುಹಿಸಿದನು. ಅವರು ತಮ್ಮ ನಿವಾಸಗಳಿಗೆ ಹೋದರು.
וַֽיְבָרְכֵם יְהוֹשֻׁעַ וַֽיְשַׁלְּחֵם וַיֵּלְכוּ אֶל־אָהֳלֵיהֶֽם׃
7 ಮೋಶೆಯು ಮನಸ್ಸೆ ಕುಲದ ಅರ್ಧ ಜನರಿಗೆ ಬಾಷಾನಿನಲ್ಲಿ ಸ್ವತ್ತನ್ನು ಕೊಟ್ಟಿದ್ದನು. ಉಳಿದ ಅರ್ಧಜನರಿಗೆ ಯೆಹೋಶುವನು ಯೊರ್ದನಿನ ಪಶ್ಚಿಮದಲ್ಲಿ ಬೇರೆ ಕುಲದವರೊಂದಿಗೆ ಪಾಲುಕೊಟ್ಟಿದ್ದನು. ಇದಲ್ಲದೆ ಯೆಹೋಶುವನು ಅವರನ್ನು ಹೀಗೆ ಆಶೀರ್ವದಿಸಿ ತಮ್ಮ ಸ್ವಂತ ಸ್ಥಳಗಳಿಗೆ ಕಳುಹಿಸುವಾಗ
וְלַחֲצִי ׀ שֵׁבֶט הַֽמְנַשֶּׁה נָתַן מֹשֶׁה בַּבָּשָׁן וּלְחֶצְיוֹ נָתַן יְהוֹשֻׁעַ עִם־אֲחֵיהֶם מעבר בְּעֵבֶר הַיַּרְדֵּן יָמָּה וְגַם כִּי שִׁלְּחָם יְהוֹשֻׁעַ אֶל־אָהֳלֵיהֶם וַיְבָרֲכֵֽם׃
8 ಅವರನ್ನು ಆಶೀರ್ವದಿಸಿ “ನೀವು ಬಹಳ ಸಮೃದ್ಧಿಯುಳ್ಳವರಾಗಿ ದನಕುರಿ, ಬೆಳ್ಳಿಬಂಗಾರ, ತಾಮ್ರ, ಕಬ್ಬಿಣ, ವಸ್ತ್ರ, ಮೊದಲಾದ ವಸ್ತುಗಳನ್ನು ತೆಗೆದುಕೊಂಡು ನಿಮ್ಮನಿಮ್ಮ ನಿವಾಸಗಳಿಗೆ ಹೋಗಿರಿ. ನಿಮ್ಮ ಶತ್ರುಗಳಿಂದ ತೆಗೆದುಕೊಂಡ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲು ಕೊಡಿರಿ” ಎಂದನು
וַיֹּאמֶר אֲלֵיהֶם לֵאמֹר בִּנְכָסִים רַבִּים שׁוּבוּ אֶל־אָֽהֳלֵיכֶם וּבְמִקְנֶה רַב־מְאֹד בְּכֶסֶף וּבְזָהָב וּבִנְחֹשֶׁת וּבְבַרְזֶל וּבִשְׂלָמוֹת הַרְבֵּה מְאֹד חִלְקוּ שְׁלַל־אֹיְבֵיכֶם עִם־אֲחֵיכֶֽם׃
9 ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯಿಂದ ತಮಗೆ ಸಿಕ್ಕಿದ ಸ್ವತ್ತಾದ ಗಿಲ್ಯಾದ್ ದೇಶಕ್ಕೆ ಹೊರಟು ಹೋದರು.
וַיָּשֻׁבוּ וַיֵּלְכוּ בְּנֵי־רְאוּבֵן וּבְנֵי־גָד וַחֲצִי ׀ שֵׁבֶט הַֽמְנַשֶּׁה מֵאֵת בְּנֵי יִשְׂרָאֵל מִשִּׁלֹה אֲשֶׁר בְּאֶֽרֶץ־כְּנָעַן לָלֶכֶת אֶל־אֶרֶץ הַגִּלְעָד אֶל־אֶרֶץ אֲחֻזָּתָם אֲשֶׁר נֹֽאחֲזוּ־בָהּ עַל־פִּי יְהוָה בְּיַד־מֹשֶֽׁה׃
10 ೧೦ ರೂಬೇನ್ಯರೂ ಗಾದ್ಯರೂ ಹಾಗೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದಲ್ಲಿರುವ ಯೊರ್ದನಿನ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ದೊಡ್ಡ ಯಜ್ಞವೇದಿಯನ್ನು ಕಟ್ಟಿದರು.
וַיָּבֹאוּ אֶל־גְּלִילוֹת הַיַּרְדֵּן אֲשֶׁר בְּאֶרֶץ כְּנָעַן וַיִּבְנוּ בְנֵי־רְאוּבֵן וּבְנֵי־גָד וַחֲצִי שֵׁבֶט הַֽמְנַשֶּׁה שָׁם מִזְבֵּחַ עַל־הַיַּרְדֵּן מִזְבֵּחַ גָּדוֹל לְמַרְאֶֽה׃
11 ೧೧ ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಯ ಅರ್ಧ ಜನರು ಇಸ್ರಾಯೇಲ ದೇಶವಾದ ಕಾನಾನಿನ ಪೂರ್ವಕ್ಕಿರುವ ಯೊರ್ದನ್ ನದಿಯ ತೀರಪ್ರದೇಶದಲ್ಲಿ ಯಜ್ಞವೇದಿಯನ್ನು ಕಟ್ಟಿದ್ದಾರೆಂಬ ವರ್ತಮಾನವು ಮಿಕ್ಕ ಇಸ್ರಾಯೇಲರಿಗೂ ತಿಳಿದಾಗ,
וַיִּשְׁמְעוּ בְנֵֽי־יִשְׂרָאֵל לֵאמֹר הִנֵּה בָנוּ בְנֵֽי־רְאוּבֵן וּבְנֵי־גָד וַחֲצִי שֵׁבֶט הַֽמְנַשֶּׁה אֶת־הַמִּזְבֵּחַ אֶל־מוּל אֶרֶץ כְּנַעַן אֶל־גְּלִילוֹת הַיַּרְדֵּן אֶל־עֵבֶר בְּנֵי יִשְׂרָאֵֽל׃
12 ೧೨ ಅವರೆಲ್ಲರೂ ಶೀಲೋವಿನಲ್ಲಿ ಒಟ್ಟಿಗೆ ಸೇರಿ ಅವರೊಡನೆ ಹೋರಾಡಲು ಸಿದ್ಧರಾದರು.
וַֽיִּשְׁמְעוּ בְּנֵי יִשְׂרָאֵל וַיִּקָּהֲלוּ כָּל־עֲדַת בְּנֵֽי־יִשְׂרָאֵל שִׁלֹה לַעֲלוֹת עֲלֵיהֶם לַצָּבָֽא׃
13 ೧೩ ಅದಕ್ಕೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಮಹಾಯಾಜಕ ಎಲಿಯಾಜರನ ಮಗನಾದ ಫೀನೆಹಾಸನನ್ನು
וַיִּשְׁלְחוּ בְנֵֽי־יִשְׂרָאֵל אֶל־בְּנֵי־רְאוּבֵן וְאֶל־בְּנֵי־גָד וְאֶל־חֲצִי שֵֽׁבֶט־מְנַשֶּׁה אֶל־אֶרֶץ הַגִּלְעָד אֶת־פִּינְחָס בֶּן־אֶלְעָזָר הַכֹּהֵֽן׃
14 ೧೪ ಮತ್ತು ಕುಲಕ್ಕೆ ಒಬ್ಬನಂತೆ ಹತ್ತು ಮಂದಿ ನಾಯಕರನ್ನು ಕಳುಹಿಸಿದರು. ಇವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕುಲಗೋತ್ರ ಕುಟುಂಬಗಳಲ್ಲಿ ಮುಖ್ಯಸ್ಥನಾಗಿದ್ದನು.
וַעֲשָׂרָה נְשִׂאִים עִמּוֹ נָשִׂיא אֶחָד נָשִׂיא אֶחָד לְבֵית אָב לְכֹל מַטּוֹת יִשְׂרָאֵל וְאִישׁ רֹאשׁ בֵּית־אֲבוֹתָם הֵמָּה לְאַלְפֵי יִשְׂרָאֵֽל׃
15 ೧೫ ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,
וַיָּבֹאוּ אֶל־בְּנֵי־רְאוּבֵן וְאֶל־בְּנֵי־גָד וְאֶל־חֲצִי שֵֽׁבֶט־מְנַשֶּׁה אֶל־אֶרֶץ הַגִּלְעָד וַיְדַבְּרוּ אִתָּם לֵאמֹֽר׃
16 ೧೬ “ಯೆಹೋವನ ಸರ್ವ ಸಭೆಯ ಮಾತನ್ನು ಕೇಳಿರಿ; ನೀವು ಇಸ್ರಾಯೇಲಿನ ದೇವರಿಗೆ ವಿರುದ್ಧವಾಗಿ ಇಂಥ ದ್ರೋಹ ಮಾಡಿದ್ದೇಕೆ? ನಿಮಗೋಸ್ಕರ ಯಜ್ಞವೇದಿಯನ್ನು ಕಟ್ಟಿಕೊಂಡದ್ದರಿಂದ ನೀವು ಯೆಹೋವನಿಗೆ ದ್ರೋಹ ಮಾಡಿದಂತಾಯಿತು; ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಂತಾಯಿತು.
כֹּה אָמְרוּ כֹּל ׀ עֲדַת יְהוָה מָֽה־הַמַּעַל הַזֶּה אֲשֶׁר מְעַלְתֶּם בֵּאלֹהֵי יִשְׂרָאֵל לָשׁוּב הַיּוֹם מֵאַחֲרֵי יְהוָה בִּבְנֽוֹתְכֶם לָכֶם מִזְבֵּחַ לִמְרָדְכֶם הַיּוֹם בַּיהוָֽה׃
17 ೧೭ ನಾವು ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೋ? ಅದರ ದೆಸೆಯಿಂದ ಯೆಹೋವನ ಸಭೆಗೆ ವ್ಯಾಧಿ ಬಂದರೂ ನಾವು ಇನ್ನೂ ಅದರಿಂದ ಪೂರ್ಣ ಶುದ್ಧರಾಗಲಿಲ್ಲ.
הַמְעַט־לָנוּ אֶת־עֲוֺן פְּעוֹר אֲשֶׁר לֹֽא־הִטַּהַרְנוּ מִמֶּנּוּ עַד הַיּוֹם הַזֶּה וַיְהִי הַנֶּגֶף בַּעֲדַת יְהוָֽה׃
18 ೧೮ ಈಗ ನೀವು ಪುನಃ ಯೆಹೋವನನ್ನು ತಳ್ಳಿ ಬಿಡುತ್ತಿದ್ದೀರೋ? ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದರೆ, ನಾಳೆಯೇ ಯೆಹೋವನ ಕೋಪಾಗ್ನಿಯು ಇಸ್ರಾಯೇಲ್ ಸರ್ವಸಭೆಯ ಮೇಲೆ ಉರಿಯ ತೊಡಗುವುದು.
וְאַתֶּם תָּשֻׁבוּ הַיּוֹם מֵאַחֲרֵי יְהוָה וְהָיָה אַתֶּם תִּמְרְדוּ הַיּוֹם בַּֽיהוָה וּמָחָר אֶֽל־כָּל־עֲדַת יִשְׂרָאֵל יִקְצֹֽף׃
19 ೧೯ ನಿಮ್ಮ ದೇಶವು ಅಶುದ್ಧವಾಗಿದೆ ಎಂದು ತೋರಿದರೆ ಯೆಹೋವನ ಗುಡಾರವಿರುವ ಆತನ ಸ್ವಂತ ಸೀಮೆಗೆ ಬಂದು ನಮ್ಮ ಮಧ್ಯದಲ್ಲಿರುವ ಸ್ವತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಹೊರತು ನಿಮಗೋಸ್ಕರ ಇನ್ನೊಂದನ್ನು ಕಟ್ಟಿಕೊಂಡು ಯೆಹೋವನಿಗೂ ನಮಗೂ ವಿರೋಧವಾಗಿ ತಿರುಗಿ ಬೀಳಬೇಡಿರಿ.
וְאַךְ אִם־טְמֵאָה אֶרֶץ אֲחֻזַּתְכֶם עִבְרוּ לָכֶם אֶל־אֶרֶץ אֲחֻזַּת יְהוָה אֲשֶׁר שָֽׁכַן־שָׁם מִשְׁכַּן יְהוָה וְהֵאָחֲזוּ בְּתוֹכֵנוּ וּבַֽיהוָה אַל־תִּמְרֹדוּ וְאֹתָנוּ אֶל־תִּמְרֹדוּ בִּבְנֹֽתְכֶם לָכֶם מִזְבֵּחַ מִֽבַּלְעֲדֵי מִזְבַּח יְהוָה אֱלֹהֵֽינוּ׃
20 ೨೦ ಜೆರಹನ ಮಗನಾದ ಆಕಾನನು ಯೆಹೋವನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದಾಗ ಯೆಹೋವನ ಕೋಪವು ಇಸ್ರಾಯೇಲ್ಯರ ಸರ್ವಸಭೆಯ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಅನೇಕರು ಸಾಯಬೇಕಾಯಿತಲ್ಲಾ” ಎಂದು ಹೇಳಿದನು.
הֲלוֹא ׀ עָכָן בֶּן־זֶרַח מָעַל מַעַל בַּחֵרֶם וְעַֽל־כָּל־עֲדַת יִשְׂרָאֵל הָיָה קָצֶף וְהוּא אִישׁ אֶחָד לֹא גָוַע בַּעֲוֺנֽוֹ׃
21 ೨೧ ಆಗ ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆ ಕುಲದ ಅರ್ಧ ಜನರು ಇಸ್ರಾಯೇಲ್ ಕುಲಾಧಿಪತಿಗಳಿಗೆ ಹೀಗೆಂದು ಉತ್ತರಿಸಿದರು:
וַֽיַּעֲנוּ בְּנֵי־רְאוּבֵן וּבְנֵי־גָד וַחֲצִי שֵׁבֶט הַֽמְנַשֶּׁה וַֽיְדַבְּרוּ אֶת־רָאשֵׁי אַלְפֵי יִשְׂרָאֵֽל׃
22 ೨೨ “ದೇವಾಧಿದೇವನಾದ ಯೆಹೋವನು ಇದಕ್ಕೆ ಸಾಕ್ಷಿ; ಆ ದೇವಾಧಿದೇವನಾದ ಯೆಹೋವನಿಗೆ ಇದು ಗೊತ್ತಿದೆ. ಇಸ್ರಾಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಯೆಹೋವನ ವಿರುದ್ಧವಾಗಿ ಪಾಪಮಾಡಿದವರು ಆಗಿದ್ದರೆ ಯೆಹೋವನು ನಮ್ಮನ್ನು ಈ ಹೊತ್ತೇ ನಮ್ಮ ಜೀವವನ್ನು ತೆಗೆದುಬಿಡಲಿ.
אֵל ׀ אֱלֹהִים ׀ יְהוָה אֵל ׀ אֱלֹהִים ׀ יְהוָה הוּא יֹדֵעַ וְיִשְׂרָאֵל הוּא יֵדָע אִם־בְּמֶרֶד וְאִם־בְּמַעַל בַּֽיהוָה אַל־תּוֹשִׁיעֵנוּ הַיּוֹם הַזֶּֽה׃
23 ೨೩ ನಾವು ಯೆಹೋವನಿಂದ ವಿಮುಖರಾಗಿ ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯ ನೈವೇದ್ಯ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಈ ಯಜ್ಞವೇದಿಯನ್ನು ಕಟ್ಟಿದ್ದರೆ ಯೆಹೋವನು ತಾನೇ ನಮ್ಮನ್ನು ಶಿಕ್ಷಿಸಲಿ.
לִבְנוֹת לָנוּ מִזְבֵּחַ לָשׁוּב מֵאַחֲרֵי יְהוָה וְאִם־לְהַעֲלוֹת עָלָיו עוֹלָה וּמִנְחָה וְאִם־לַעֲשׂוֹת עָלָיו זִבְחֵי שְׁלָמִים יְהוָה הוּא יְבַקֵּֽשׁ׃
24 ೨೪ ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದ್ದೇವಷ್ಟೇ, ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ನಿಮಗೇನು ಪಾಲಿದೆ?’
וְאִם־לֹא מִדְּאָגָה מִדָּבָר עָשִׂינוּ אֶת־זֹאת לֵאמֹר מָחָר יֹאמְרוּ בְנֵיכֶם לְבָנֵינוּ לֵאמֹר מַה־לָּכֶם וְלַֽיהוָה אֱלֹהֵי יִשְׂרָאֵֽל׃
25 ೨೫ ರೂಬೇನ್ಯರೇ, ಗಾದ್ಯರೇ, ಯೆಹೋವನು ನಿಮಗೂ ನಮಗೂ ನಡುವೆ ಈ ಯೊರ್ದನ್ ನದಿಯನ್ನು ಮೇರೆಯಾಗಿ ಇಟ್ಟಿದ್ದಾನೆ. ಯೆಹೋವನಲ್ಲಿ ನಿಮಗೆ ಯಾವ ಪಾಲೂ ಇಲ್ಲ ಎಂದು ಹೇಳಿ ನಿಮ್ಮ ಮಕ್ಕಳು ನಮ್ಮ ಮಕ್ಕಳನ್ನು ದೈವಭಕ್ತಿಯಿಂದ ಬೇರ್ಪಡಿಸಿಯಾರೆಂದು ಭಯಪಟ್ಟೆವು.
וּגְבוּל נָֽתַן־יְהוָה בֵּינֵנוּ וּבֵינֵיכֶם בְּנֵי־רְאוּבֵן וּבְנֵי־גָד אֶת־הַיַּרְדֵּן אֵין־לָכֶם חֵלֶק בַּֽיהוָה וְהִשְׁבִּיתוּ בְנֵיכֶם אֶת־בָּנֵינוּ לְבִלְתִּי יְרֹא אֶת־יְהוָֽה׃
26 ೨೬ ಈ ಕಾರಣದಿಂದಲೇ, ‘ಬನ್ನಿ, ಒಂದು ಯಜ್ಞವೇದಿಯನ್ನು ಕಟ್ಟೋಣ. ಅದು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕಲ್ಲ,’
וַנֹּאמֶר נַעֲשֶׂה־נָּא לָנוּ לִבְנוֹת אֶת־הַמִּזְבֵּחַ לֹא לְעוֹלָה וְלֹא לְזָֽבַח׃
27 ೨೭ ಆದರೆ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಯಜ್ಞ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸಿ ಆರಾಧಿಸುವುದಕ್ಕೋಸ್ಕರ ನಮಗೂ ಹಕ್ಕಿದೆ ಎಂಬುದಕ್ಕೆ ಇದು ನಮಗೂ, ನಿಮಗೂ, ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಸಾಕ್ಷಿಯಾಗಿರುವುದು. ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ ಯೆಹೋವನಲ್ಲಿ ನಿಮಗೆ ಪಾಲಿಲ್ಲವೆಂದು ಹೇಳುವುದಕ್ಕೆ ಆಸ್ಪದವಿರುವುದಿಲ್ಲ.
כִּי עֵד הוּא בֵּינֵינוּ וּבֵינֵיכֶם וּבֵין דֹּרוֹתֵינוּ אַחֲרֵינוּ לַעֲבֹד אֶת־עֲבֹדַת יְהוָה לְפָנָיו בְּעֹלוֹתֵינוּ וּבִזְבָחֵינוּ וּבִשְׁלָמֵינוּ וְלֹא־יֹאמְרוּ בְנֵיכֶם מָחָר לְבָנֵינוּ אֵין־לָכֶם חֵלֶק בַּיהוָֽה׃
28 ೨೮ ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ರೀತಿಯಾಗಿ ಹೇಳಿದರೆ ನಾವು ಅವರಿಗೆ ‘ಯೆಹೋವನ ಯಜ್ಞವೇದಿಯ ಮಾದರಿಯನ್ನು ನೋಡಿರಿ: ನಮ್ಮ ಪೂರ್ವಿಕರು ಇದನ್ನು ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಲಿಲ್ಲ; ಇದು ನಮ್ಮ ನಿಮ್ಮ ಮಧ್ಯದಲ್ಲಿ ಒಂದು ಸಾಕ್ಷಿಯಾಗಿದೆಯಷ್ಟೆ’ ಎಂದು ಹೇಳುವೆವು.
וַנֹּאמֶר וְהָיָה כִּֽי־יֹאמְרוּ אֵלֵינוּ וְאֶל־דֹּרֹתֵינוּ מָחָר וְאָמַרְנוּ רְאוּ אֶת־תַּבְנִית מִזְבַּח יְהוָה אֲשֶׁר־עָשׂוּ אֲבוֹתֵינוּ לֹא לְעוֹלָה וְלֹא לְזֶבַח כִּי־עֵד הוּא בֵּינֵינוּ וּבֵינֵיכֶֽם׃
29 ೨೯ ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸುವುದಕ್ಕೋಸ್ಕರ ಬೇರೊಂದು ಯಜ್ಞವೇದಿಯನ್ನು ಕಟ್ಟಿ ಯೆಹೋವನಿಗೆ ವಿರುದ್ಧವಾಗಿ ದ್ರೋಹಿಗಳಾಗಿರದಂತಾಗಲಿ. ಹಾಗೆ ನಮಗೆ ಎಂದಿಗೂ ಆಗದಿರಲಿ” ಎಂದರು.
חָלִילָה לָּנוּ מִמֶּנּוּ לִמְרֹד בַּֽיהוָה וְלָשׁוּב הַיּוֹם מֵאַחֲרֵי יְהוָה לִבְנוֹת מִזְבֵּחַ לְעֹלָה לְמִנְחָה וּלְזָבַח מִלְּבַד מִזְבַּח יְהוָה אֱלֹהֵינוּ אֲשֶׁר לִפְנֵי מִשְׁכָּנֽוֹ׃
30 ೩೦ ಯಾಜಕನಾದ ಫೀನೆಹಾಸನೂ ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳಾಗಿರುವ ಇಸ್ರಾಯೇಲ್ ಪ್ರಭುಗಳು, ರೂಬೇನ್, ಗಾದ್, ಮನಸ್ಸೆಯ ಕುಲಗಳವರ ಮಾತುಗಳನ್ನು ಕೇಳಿ ಸಂತೋಷಪಟ್ಟರು.
וַיִּשְׁמַע פִּֽינְחָס הַכֹּהֵן וּנְשִׂיאֵי הָעֵדָה וְרָאשֵׁי אַלְפֵי יִשְׂרָאֵל אֲשֶׁר אִתּוֹ אֶת־הַדְּבָרִים אֲשֶׁר דִּבְּרוּ בְּנֵי־רְאוּבֵן וּבְנֵי־גָד וּבְנֵי מְנַשֶּׁה וַיִּיטַב בְּעֵינֵיהֶֽם׃
31 ೩೧ ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು ರೂಬೇನ್, ಗಾದ್, ಮನಸ್ಸೆ ಕುಲಗಳವರಿಗೆ “ನೀವು ಯೆಹೋವನಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಆತನು ನಮ್ಮ ಮಧ್ಯದಲ್ಲಿದ್ದಾನೆಂಬುದು ಈಗ ನಮಗೆ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲರನ್ನು ಯೆಹೋವನ ಶಿಕ್ಷಾಹಸ್ತದಿಂದ ತಪ್ಪಿಸಿದ್ದೀರಿ” ಎಂದನು.
וַיֹּאמֶר פִּֽינְחָס בֶּן־אֶלְעָזָר הַכֹּהֵן אֶל־בְּנֵי־רְאוּבֵן וְאֶל־בְּנֵי־גָד וְאֶל־בְּנֵי מְנַשֶּׁה הַיּוֹם ׀ יָדַעְנוּ כִּֽי־בְתוֹכֵנוּ יְהוָה אֲשֶׁר לֹֽא־מְעַלְתֶּם בַּֽיהוָה הַמַּעַל הַזֶּה אָז הִצַּלְתֶּם אֶת־בְּנֵי יִשְׂרָאֵל מִיַּד יְהוָֽה׃
32 ೩೨ ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು, ಪ್ರಭುಗಳು, ಗಿಲ್ಯಾದ್ ಸೀಮೆಯಲ್ಲಿದ್ದ ರೂಬೇನ್ಯರು, ಗಾದ್ಯರು ಇವರ ಬಳಿಯಿಂದ ಕಾನಾನ್ ದೇಶದಲ್ಲಿದ್ದ ಇಸ್ರಾಯೇಲರ ಬಳಿಗೆ ಬಂದು, ಅವರಿಗೆ ಈ ವರ್ತಮಾನವನ್ನು ತಿಳಿಸಲು
וַיָּשָׁב פִּֽינְחָס בֶּן־אֶלְעָזָר הַכֹּהֵן ׀ וְהַנְּשִׂיאִים מֵאֵת בְּנֵֽי־רְאוּבֵן וּמֵאֵת בְּנֵי־גָד מֵאֶרֶץ הַגִּלְעָד אֶל־אֶרֶץ כְּנַעַן אֶל־בְּנֵי יִשְׂרָאֵל וַיָּשִׁבוּ אוֹתָם דָּבָֽר׃
33 ೩೩ ಅವರು ಬಹು ಸಂತೋಷಪಟ್ಟು ದೇವರನ್ನು ಕೊಂಡಾಡಿ ರೂಬೇನ್ ಗಾದ್ ಕುಲಗಳೊಡನೆ ಯುದ್ಧ ಮಾಡಿ ಅವರ ದೇಶವನ್ನು ಹಾಳುಮಾಡಬೇಕೆಂಬ ಆಲೋಚನೆಯನ್ನು ಬಿಟ್ಟರು.
וַיִּיטַב הַדָּבָר בְּעֵינֵי בְּנֵי יִשְׂרָאֵל וַיְבָרֲכוּ אֱלֹהִים בְּנֵי יִשְׂרָאֵל וְלֹא אָמְרוּ לַעֲלוֹת עֲלֵיהֶם לַצָּבָא לְשַׁחֵת אֶת־הָאָרֶץ אֲשֶׁר בְּנֵי־רְאוּבֵן וּבְנֵי־גָד יֹשְׁבִים בָּֽהּ׃
34 ೩೪ ರೂಬೇನ್ಯರೂ ಗಾದ್ಯರೂ ಯೆಹೋವನೇ ದೇವರು ಎಂಬುದಕ್ಕೆ ಈ ಯಜ್ಞವೇದಿಯೇ ಸಾಕ್ಷಿ ಎಂದು ಹೇಳಿ ಅದಕ್ಕೆ ಏದ್ ಎಂಬ ಹೆಸರಿಟ್ಟರು.
וַֽיִּקְרְאוּ בְּנֵי־רְאוּבֵן וּבְנֵי־גָד לַמִּזְבֵּחַ כִּי עֵד הוּא בֵּֽינֹתֵינוּ כִּי יְהוָה הָאֱלֹהִֽים׃

< ಯೆಹೋಶುವನು 22 >