< ನ್ಯಾಯಸ್ಥಾಪಕರು 21 >
1 ೧ ಇಸ್ರಾಯೇಲರೆಲ್ಲರೂ ಮಿಚ್ಪೆಯಲ್ಲಿದ್ದಾಗ ತಾವು ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವುದಿಲ್ಲವೆಂದು ಆಣೆಯಿಟ್ಟಿದ್ದರು.
၁မိဇပါမြို့၌စုရုံးစဉ်အခါကဣသရေလ အမျိုးသားတို့သည် ထာဝရဘုရားအား``ဗင်္ယာ မိန်အမျိုးသားတစ်စုံတစ်ယောက်ကိုမျှအကျွန်ုပ် တို့၏သမီးနှင့်လက်ထပ်ထိမ်းမြားခွင့်ပြုမည် မဟုတ်ပါ'' ဟုကျိန်ဆိုကတိပြုခဲ့ကြ၏။-
2 ೨ ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತು, ಗಟ್ಟಿಯಾಗಿ ಅಳುತ್ತಾ,
၂သို့ဖြစ်၍ယခုဣသရေလအမျိုးသားတို့ သည်ဗေသလမြို့သို့သွား၍ ဘုရားသခင် ၏ရှေ့တော်၌ညနေချမ်းအချိန်တိုင်အောင် ထိုင်လျက်၊-
3 ೩ “ಯೆಹೋವನೇ, ಇಸ್ರಾಯೇಲ್ಯರ ದೇವರೇ, ನಮ್ಮಲ್ಲಿ ಹೀಗೆ ಯಾಕೆ ಆಯಿತು? ಇಸ್ರಾಯೇಲರ ಒಂದು ಕುಲವು ಹಾಳಾಗಿ ಹೋಯಿತಲ್ಲಾ” ಎಂದು ಕೂಗಿದರು.
၃``အို ဣသရေလလူမျိုး၏ဘုရားသခင် ထာဝရဘုရား၊ အဘယ်ကြောင့်ဤသို့ဖြစ် ရပါသနည်း။ ဗင်္ယာမိန်အနွယ်သည်ဣသ ရေလလူမျိုးမှအဘယ်ကြောင့်ပျောက်ကွယ် ရပါတော့မည်နည်း'' ဟုပြင်းပြစွာဟစ် အော်ငိုကြွေးလျှောက်ထားကြ၏။
4 ೪ ಮರುದಿನ ಅವರು ಬೆಳಿಗ್ಗೆ ಎದ್ದು ಯಜ್ಞವೇದಿಯನ್ನು ಕಟ್ಟಿ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
၄နောက်တစ်နေ့နံနက်စောစော၌လူတို့သည် ထ၍ ထိုအရပ်တွင်ယဇ်ပလ္လင်တစ်ခုကိုတည် ဆောက်ကာ မိတ်သဟာယယဇ်နှင့်မီးရှို့ရာ ယဇ်တို့ကိုပူဇော်ကြ၏။-
5 ೫ ಮತ್ತು ಯೆಹೋವನ ಮುಂದೆ ಸಭೆ ಸೇರಿದಾಗ, ಬಾರದೆ ಇದ್ದಂಥ ಇಸ್ರಾಯೇಲರು ಯಾರಾರೆಂದು ವಿಚಾರಮಾಡಿದರು. ಯಾಕೆಂದರೆ ಮಿಚ್ಪೆಯಲ್ಲಿ, “ಯೆಹೋವನ ಸನ್ನಿಧಿಗೆ ಬಾರದವರನ್ನು ಕೊಂದು ಹಾಕುವೆವು” ಎಂದು ಆಣೆಯಿಟ್ಟು ಪ್ರಮಾಣಮಾಡಿದ್ದರು.
၅သူတို့က``ဣသရေလလူမျိုးအနွယ်အပေါင်း တို့အနက်မိဇပါမြို့ရှိ ထာဝရဘုရား၏ ရှေ့တော်သို့မလာမရောက်ဘဲနေခဲ့သည့်လူ စုရှိပါသလော'' ဟုမေးမြန်းကြ၏။ (အဘယ် ကြောင့်ဆိုသော်မိဇပါမြို့ထာဝရဘုရား ထံတော်သို့မလာမရောက်ဘဲနေသောသူ သည်သေဒဏ်ခံစေဟုကျိန်ဆိုကတိပြု ခဲ့ကြသောကြောင့်ဖြစ်၏။-)
6 ೬ ಇಸ್ರಾಯೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ಕಂಡು ದುಃಖದಿಂದ, “ಅಯ್ಯೋ, ಇಸ್ರಾಯೇಲರಾದ ನಮ್ಮಲ್ಲಿ ಒಂದು ಕುಲವು ಕಡಿಮೆಯಾಯಿತಲ್ಲಾ;
၆ဣသရေလအမျိုးသားတို့သည်မိမိတို့ ၏ညီများဖြစ်သော ဗင်္ယာမိန်အနွယ်ဝင်တို့ အတွက်ဝမ်းနည်းကြေကွဲလျက်``ယနေ့ပင် လျှင်ဣသရေလအမျိုးအနွယ်အပေါင်း တို့အနက်တစ်နွယ်ကိုဆုံးရှုံးရလေပြီ။-
7 ೭ ಜೀವದಿಂದುಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವುದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವುದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟಿದ್ದೇವಲ್ಲಾ” ಎಂದು ಗೋಳಾಡಿದರು.
၇ကျန်ရှိနေသေးသောဗင်္ယာမိန်အမျိုးသား တို့အတွက်မယားများရရှိနိုင်ရန် ငါတို့ အဘယ်သို့ပြုကြရပါမည်နည်း။ ငါတို့ သမီးများကိုသူတို့နှင့်ထိမ်းမြားခြင်းမပြု ဟုထာဝရဘုရားကိုတိုင်တည်၍ငါတို့ သစ္စာဆိုပြီးလေပြီ'' ဟုဆိုကြ၏။
8 ೮ ಮಿಚ್ಪೆಯಲ್ಲಿ ಯೆಹೋವನ ಮುಂದೆ ಸಭೆ ಸೇರಿದಾಗ, ಅದಕ್ಕೆ ಬಾರದಿದ್ದ ಇಸ್ರಾಯೇಲರು ಯಾರಾದರೂ ಇದ್ದಾರೋ ಎಂದು ವಿಚಾರಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.
၈မိဇပါမြို့၌စုရုံးရာသို့ဣသရေလ အမျိုးအနွယ်များထဲမှ မလာမရောက် သောလူစုရှိပါသလောဟုစုံစမ်းကြ သောအခါ ဂိလဒ်ပြည်ယာဗက်မြို့မှမည် သူတစ်ဦးတစ်ယောက်မျှမလာမရောက် ကြောင်းကိုသိရှိရကြလေသည်။-
9 ೯ ಜನರನ್ನು ಲೆಕ್ಕಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಯಾರೂ ಬರಲಿಲ್ಲವೆಂಬುದು ದೃಢವಾಯಿತು.
၉တပ်မတော်မှနာမည်ခေါ်စာရင်းကောက်ယူ သောအခါ ဂိလဒ်ပြည်ယာဗက်မြို့မှလူ တစ်စုံတစ်ယောက်မျှမပါဝင်ပေ။-
10 ೧೦ ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರ ಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ, “ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲಾ ನಿವಾಸಿಗಳನ್ನೂ, ಸ್ತ್ರೀಯರನ್ನೂ, ಚಿಕ್ಕ ಮಕ್ಕಳನ್ನೂ ಬಿಡದೆ ಸಂಹರಿಸಬೇಕು;
၁၀မိဇပါမြို့၌စုဝေးသောသူအပေါင်းတို့ က၊ မိမိတို့တွင်ရဲစွမ်းသတ္တိအရှိဆုံးလူ တစ်သောင်းနှစ်ထောင်အား``သင်တို့သွား၍ အမျိုးသမီးများနှင့်ကလေးများအပါ အဝင်ယာဗတ်မြို့သားအပေါင်းတို့အား သုတ်သင်ပစ်ကြလော့။ ယောကျာ်းနှင့်အပျို စင်မဟုတ်သောအမျိုးသမီးမှန်သမျှ ကိုသတ်ဖြတ်ပစ်ကြရမည်'' ဟုအမိန့် ပေးစေလွှတ်လိုက်လေသည်။-
11 ೧೧ ಹೇಗೂ ಪುರುಷರನ್ನು, ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲಮಾಡುವುದು ನಿಮ್ಮ ಕೆಲಸ” ಎಂದು ಆಜ್ಞಾಪಿಸಿ ಕಳುಹಿಸಿದರು.
၁၁
12 ೧೨ ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರಿದ್ದರು. ಪಟ್ಟಣವನ್ನು ಸಂಹರಿಸುವುದಕ್ಕೆ ಹೋದವರು ಇವರನ್ನು ಉಳಿಸಿ, ಕಾನಾನ್ ದೇಶದ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು.
၁၂ထိုသူတို့သည်ယာဗက်မြို့သားများအနက် အပျိုစင်လေးရာကိုတွေ့ရှိသဖြင့် သူတို့ အားရှိလောမြို့တပ်စခန်းသို့ခေါ်ဆောင် ခဲ့ကြ၏။ ရှိလောမြို့သည်ခါနာန်ပြည်တွင် ရှိသတည်း။
13 ೧೩ ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನ ವಾಕ್ಯವನ್ನು ಪ್ರಕಟಿಸಲು ಅವರು ತಿರುಗಿ ಬಂದರು.
၁၃ထိုနောက်စုဝေးသောသူအပေါင်းတို့က ရိမ္မုန် ကျောက်ရှိဗင်္ယာမိန်အမျိုးသားတို့ထံသို့ စစ်ပြေငြိမ်းရန် ကမ်းလှမ်းချက်သတင်းကို ပေးပို့လိုက်ကြ၏။-
14 ೧೪ ಇಸ್ರಾಯೇಲರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿ ತಂದ ಕನ್ಯೆಯರನ್ನು ಅವರಿಗೆ ಮದುವೆಮಾಡಿಕೊಟ್ಟರು; ಆದರೂ ಅನೇಕರಿಗೆ ಕನ್ಯೆಯರು ದೊರೆಯಲಿಲ್ಲ.
၁၄ဗင်္ယာမိန်အမျိုးသားတို့သည်ပြန်လာကြ သောအခါ အခြားဣသရေလအမျိုးတို့ ကမိမိတို့မသတ်ဘဲထားသည့် ယာဗက်မြို့ သူအမျိုးသမီးတို့ကိုပေးအပ်လိုက်လေ သည်။ သို့ရာတွင်ထိုအမျိုးသမီးအရေ အတွက်မှာထိုသူတို့အတွက်လုံလောက် မှုမရှိချေ။
15 ೧೫ ಯೆಹೋವನು ಇಸ್ರಾಯೇಲಿನ ಕುಲಗಳಲ್ಲಿ ಬೆನ್ಯಾಮೀನರನ್ನು ಬೇರ್ಪಡಿಸಿದ್ದರಿಂದ ಜನರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು.
၁၅ထာဝရဘုရားသည်ဣသရေလအမျိုး အနွယ်တို့၏စည်းလုံးမှုကိုပျက်ပြားစေ တော်မူပြီဖြစ်၍ လူတို့သည်ဗင်္ယာမိန်အမျိုး သားများအတွက်ဝမ်းနည်းကြလေသည်။-
16 ೧೬ ಸಭೆಯ ಹಿರಿಯರು, “ಉಳಿದಿರುವ ಬೆನ್ಯಾಮೀನ್ಯರಿಗೋಸ್ಕರ ಹೆಂಡತಿಯರನ್ನು ದೊರಕಿಸಿ ಕೊಡುವುದು ಹೇಗೆ? ಅವರ ಸ್ತ್ರೀಯರೆಲ್ಲಾ ಸಂಹಾರವಾದರಲ್ಲಾ.
၁၆သို့ဖြစ်၍ခေါင်းဆောင်တို့က``ဗင်္ယာမိန်အနွယ် ဝင်အမျိုးသမီးများမရှိကြတော့ပေ။ ကျန် ရှိနေသေးသည့်အမျိုးသားများအတွက် အဘယ်သို့လျှင် မယားများကိုငါတို့ရှာ ဖွေပေးရပါမည်နည်း။-
17 ೧೭ ಇಸ್ರಾಯೇಲ್ಯರ ಒಂದು ಪೂರ್ಣ ಕುಲವು ಅಳಿದುಹೋಗಬಾರದು; ತಪ್ಪಿಸಿಕೊಂಡು ಉಳಿದಿರುವ ಬೆನ್ಯಾಮೀನರಿಗೆ ಬಾಧ್ಯಸ್ಥರು ಹುಟ್ಟುಬೇಕಲ್ಲಾ.
၁၇ဣသရေလတစ်ဆယ့်နှစ်မျိုးရှိသည့် အနက်တစ်မျိုးပျောက်ကွယ်၍မသွား စေအပ်။-
18 ೧೮ ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವ ಇಸ್ರಾಯೇಲರು ಶಾಪಗ್ರಸ್ತರಾಗಲಿ ಎಂದು ಆಣೆಯಿಟ್ಟುಕೊಂಡಿದ್ದ ಕಾರಣ ನಾವು ಅವರಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಕ್ಕಾಗುವುದಿಲ್ಲ” ಎಂದು ಮಾತನಾಡಿಕೊಳ್ಳುತ್ತಿದ್ದರು.
၁၈သို့ရာတွင်ငါတို့သည်မိမိတို့၏သမီးများ နှင့်သူတို့အားထိမ်းမြားစုံဖက်ခွင့်လည်းမ ပြုနိုင်။ အဘယ်ကြောင့်ဆိုသော်ယင်းသို့စုံဖက် ရန်ခွင့်ပြုသူသည် ငါတို့၏ကျိန်စာသင့်မည် ဖြစ်သောကြောင့်တည်း'' ဟုဆွေးနွေးတိုင်ပင် ကြလေသည်။
19 ೧೯ ಆಗ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬುದು ಅವರ ನೆನಪಿಗೆ ಬಂದಿತು. (ಶೀಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ, ಲೆಬೋನದ ದಕ್ಷಿಣಕ್ಕೂ ಇರುತ್ತದೆ.)
၁၉ထိုနောက်သူတို့သည်ရှိလောမြို့၌နှစ်စဉ် ကျင်းပမြဲဖြစ်သော ထာဝရဘုရား၏ပွဲ တော်ကျရောက်တော့မည်ကိုသတိရကြ ၏။ (ရှိလောမြို့သည်ဗေသလမြို့၏မြောက် ဘက်၊ လေဗောနမြို့၏တောင်ဘက်၊ ဗေသလ မြို့မှရှေခင်မြို့သို့သွားသောလမ်းအရှေ့ ဘက်၌တည်ရှိသတည်း။-)
20 ೨೦ ಆಗ ಅವರು ಬೆನ್ಯಾಮೀನ್ಯರನ್ನು ಕರೆದು ಅವರಿಗೆ, “ಇಗೋ, ನೀವು ದ್ರಾಕ್ಷಿತೋಟಗಳಲ್ಲಿ ಅಡಗಿಕೊಳ್ಳಿರಿ;
၂၀သူတို့ကဗင်္ယာမိန်အမျိုးသားတို့အား``သင် တို့သည်စပျစ်ဥယျာဉ်များသို့သွား၍ ပုန်း အောင်း၍၊-
21 ೨೧ ಶೀಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ, ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶೀಲೋವಿನ ಕನ್ಯೆಯರಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಸೀಮೆಗೆ ಓಡಿಹೋಗಿರಿ.
၂၁စောင့်ဆိုင်းနေကြလော့။ ရှိလောမြို့သူတို့သည် ပွဲခံအံ့သောငှာကခုန်လျက်လာကြလိမ့် မည်။ ထိုအခါစပျစ်ဥယျာဉ်များမှထွက်၍ သင်တို့နှင့်အိမ်ထောင်ဖက်ပြုရန်နှစ်သက် ရာအမျိုးသမီးကိုဗင်္ယာမိန်ပြည်သို့ဖမ်း ဆီးခေါ်ဆောင်သွားကြလော့။-
22 ೨೨ ಅವರ ತಂದೆಗಳೂ, ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ, ‘ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು’ ಎಂದು ಹೇಳಿ ಸಮಾಧಾನಪಡಿಸುವೆವು” ಅಂದರು.
၂၂အကယ်၍သူတို့၏ဖခင်များသို့မဟုတ် မောင်များကလာရောက်ကန့်ကွက်လျှင် သင် တို့သည်သူတို့အား`ထိုအမျိုးသမီးတို့ကို ငါတို့အားသိမ်းပိုက်ခွင့်ပြုပါ။ အဘယ်ကြောင့် ဆိုသော်ငါတို့သည်သင်တို့အားတိုက်ခိုက်၍ သူတို့ကိုသိမ်းယူခြင်းမဟုတ်သောကြောင့် ဖြစ်ပါသည်။ ထိုမှတစ်ပါးသူတို့ကိုငါတို့ အားပေးစားသူမှာသင်တို့မဟုတ်သဖြင့် သင်တို့သည်မိမိတို့၏ကတိသစ္စာကိုချိုး ဖောက်ရာမရောက်ပါ' ဟုပြန်ပြောကြ လော့'' ဟူ၍မှာထားကြ၏။
23 ೨೩ ಅದರಂತೆಯೇ ಬೆನ್ಯಾಮೀನ್ಯರು ನೃತ್ಯಮಾಡುತ್ತ ಹೊರಗೆ ಬಂದಿದ್ದ ಕನ್ಯೆಯರಲ್ಲಿ ತಮ್ಮ ಸಂಖ್ಯೆಗೆ ಸರಿಯಾಗುವಷ್ಟು ಮಂದಿಯನ್ನು ಹೆಂಡತಿಯರನ್ನಾಗಿ ಹಿಡಿದುಕೊಂಡು ತಮ್ಮ ಸ್ವಾಧೀನವಾದ ಭೂಮಿಗೆ ಹೋಗಿ ಅಲ್ಲಿ ಪಟ್ಟಣಗಳನ್ನು ಕಟ್ಟಿ ವಾಸಮಾಡಿದರು.
၂၃ဗင်္ယာမိန်အမျိုးသားတို့သည်လည်းယင်းသို့ မှာထားသည့်အတိုင်းပြု၍ ကခုန်လျက်လာ ကြသောအမျိုးသမီးတို့အား ကိုယ်စီကိုယ် ငှရွေးယူဖမ်းဆီးခေါ်ဆောင်၍မိမိတို့နယ် မြေသို့ပြန်ပြီးလျှင်မိမိတို့၏မြို့များကို ပြန်လည်ထူထောင်ကာနေထိုင်ကြလေ၏။-
24 ೨೪ ಅನಂತರ ಇಸ್ರಾಯೇಲರು ತಮ್ಮ ತಮ್ಮ ಕುಲಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂದಿರುಗಿ ಹೋದರು.
၂၄တစ်ချိန်တည်းမှာပင်အခြားဣသရေလ အမျိုးသားတို့သည် မိမိတို့၏အမျိုးအနွယ်၊ အိမ်ထောင်စုနှင့်အိုးအိမ်ရှိရာအရပ်အသီး သီးသို့ပြန်လည်ထွက်ခွာသွားကြကုန်၏။
25 ೨೫ ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ; ಪ್ರತಿಯೊಬ್ಬನೂ ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು.
၂၅ထိုခေတ်အခါကဣသရေလလူမျိုးတွင် ရှင်ဘုရင်မရှိသေးချေ။ လူတိုင်းပင်မိမိ အလိုရှိသည်အတိုင်းပြုသတည်း။ တရားသူကြီးမှတ်စာပြီး၏။