< ನ್ಯಾಯಸ್ಥಾಪಕರು 6 >

1 ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದ್ದರಿಂದ ಆತನು ಅವರನ್ನು ಏಳು ವರ್ಷಗಳ ಕಾಲ ಮಿದ್ಯಾನ್ಯರ ಕೈಗೆ ಒಪ್ಪಿಸಿದನು.
नंतर इस्राएलाच्या लोकांनी परमेश्वराच्या दृष्टीने जे वाईट ते केले, त्याने त्यांना मिद्यानाच्या नियंत्रणाखाली सात वर्षे ठेवले.
2 ಮಿದ್ಯಾನ್ಯರ ಹಸ್ತವು ಬಲಗೊಂಡಿದ್ದರಿಂದ ಇಸ್ರಾಯೇಲರು ಅವರಿಗೆ ಹೆದರಿ ಪರ್ವತಗಳಲ್ಲಿ ಗುಹೆಗಳನ್ನು, ಕಂದರಗಳನ್ನು ಮಾಡಿಕೊಂಡು ಅದರಲ್ಲಿ ವಾಸಿಸುತ್ತಿದ್ದರು.
तेव्हा मिद्यानाने इस्राएलावर अधिकाराने जुलूम केला; मिद्यान्यांमुळे इस्राएलाच्या लोकांनी आपल्यासाठी डोंगरातील भुयारे, गुहा व किल्ले यांचा आश्रय घेतला.
3 ಇವರು ಬಿತ್ತನೆಮಾಡಿದಾಗಲೆಲ್ಲಾ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳಿದುಕೊಳ್ಳುತ್ತಿದ್ದರು.
आणि असे झाले की, जर इस्राएली पिकांची लागवड करीत, तर मिद्यानी व अमालेकी आणि पूर्वेकडले लोक त्यावर हल्ला करीत.
4 ಅವರು ಗಾಜಾ ಪ್ರಾಂತ್ಯದವರೆಗಿದ್ದ ಎಲ್ಲಾ ಭೂಮಿಯ ಹುಟ್ಟುವಳಿಯನ್ನು ಹಾಳುಮಾಡಿಬಿಡುತ್ತಿದ್ದುದರಿಂದ ಇವರಿಗೆ ದವಸಧಾನ್ಯವಾಗಲಿ, ಕುರಿ, ದನ, ಕತ್ತೆಗಳಾಗಲಿ ಉಳಿಯಲೇ ಇಲ್ಲ.
त्यांनी त्याच्याविरुध्द सैन्याचा तळ देऊन गज्जापर्यंत भूमीच्या पिकांचा नाश केला आणि इस्राएलात काही अन्न आणि मेंढरे, गाय, बैल किंवा गाढव असे काही एक शिल्लक ठेवले नाही.
5 ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ಮಿಡತೆಗಳಂತೆ ಗುಂಪುಗುಂಪಾಗಿ ಬರುತ್ತಿದ್ದರು. ಅವರೂ ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು.
जेव्हा ते आपली जनावरे व तंबू घेऊन आले ते टोळांच्या थव्यासारखे आत आले आणि त्यांची व त्यांच्या उंटाची संख्या मोजणे अशक्य होते; असे ते देशावर आक्रमण करून नाश करावयास आले होते.
6 ಇಸ್ರಾಯೇಲರು ಮಿದ್ಯಾನ್ಯರ ದೆಸೆಯಿಂದ ಬಹಳವಾಗಿ ಕುಗ್ಗಿಹೋಗಿ ಯೆಹೋವನಿಗೆ ಮೊರೆಯಿಟ್ಟರು.
तेव्हा मिद्यानामुळे इस्राएलाची कठीण दुर्बल अवस्था झाली आणि इस्राएल लोकांनी परमेश्वराकडे मोठ्याने रडून हाक मारली.
7 ಇಸ್ರಾಯೇಲರು ಮಿದ್ಯಾನ್ಯರ ಹಿಂಸೆಯನ್ನು ಸಹಿಸಲಾರದೆ ಯೆಹೋವನಿಗೆ ಮೊರೆಯಿಟ್ಟಾಗ
जेव्हा इस्राएलाच्या संतानानी मिद्यान्यांमुळे परमेश्वराकडे मोठ्याने रडून हाक मारली तेव्हा असे झाले की,
8 ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳಿರಿ; ಆತನು ಹೇಳುವುದೇನೆಂದರೆ ‘ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರೆತಂದೆನು.
परमेश्वराने कोणी भविष्यवादी इस्राएलाच्या लोकांजवळ पाठवला; तेव्हा तो त्यांना बोलला, इस्राएलाचा देव परमेश्वर असे म्हणतो, मी तुम्हाला मिसरातून काढून वर आणले, दास्याच्या घरातून बाहेर काढून आणले;
9 ಐಗುಪ್ತ್ಯರಿಂದ ನಿಮ್ಮನ್ನು ಬಿಡಿಸಿದ್ದಲ್ಲದೆ ಬೇರೆ ಎಲ್ಲಾ ಬಾಧಕರಿಂದಲೂ ನಿಮ್ಮನ್ನು ಬಿಡಿಸಿ, ಅವರನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ನಿಮಗೆ ಕೊಟ್ಟೆನು.
असे मी तुम्हाला मिसऱ्यांच्या हातातून व तुमच्या सर्व जाचणाऱ्यांच्या हातातून सोडवले; आणि त्यांना तुमच्यापुढून घालवून त्यांचा देश तुम्हाला दिला.
10 ೧೦ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ, ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುತ್ತಿದ್ದಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಆಜ್ಞಾಪಿಸಿದ್ದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’” ಅಂದನು.
१०तेव्हा मी तुम्हाला असे सांगितले की, “मी तुमचा देव परमेश्वर आहे; ज्या अमोऱ्यांच्या देशात तुम्ही राहत आहा, त्यांच्या देवांना भिऊ नका, तरी तुम्ही माझी आज्ञा पाळली नाही.”
11 ೧೧ ಆ ಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.
११आणखी परमेश्वराचा दूत येऊन अबियेजेरी योवाश याच्या अफ्रा येथील एला झाडाखाली बसला; तेव्हा त्याचा पुत्र गिदोन मिद्यांन्यापासून गहू लपवावा म्हणून द्राक्षकुंडात गव्हाची मळणी करत होता.
12 ೧೨ ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಅಂದನು.
१२आणि परमेश्वराचा दूत त्यास दर्शन देऊन त्यास बोलला, “हे बलवान वीरा, परमेश्वर तुझ्याबरोबर आहे.”
13 ೧೩ ಆಗ ಗಿದ್ಯೋನನು ಅವನಿಗೆ “ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ” ಅಂದನು.
१३तेव्हा गिदोन त्यास बोलला, “हे माझ्या प्रभू, जर परमेश्वर आमच्याबरोबर आहे तर हे सर्व आमच्या बाबतीत का घडले? परमेश्वराने आम्हांला मिसरातून बाहेर आणले आणि त्याच्या अद्भुत कृत्यांबद्दल आमचे पूर्वज आम्हाजवळ सांगत आले, परमेश्वराने आम्हांला मिसरातून वर आणले की नाही? आता तर परमेश्वराने आमचा त्याग करून आम्हांला मिद्यान्यांच्या हाती दिले आहे.”
14 ೧೪ ಆಗ ಯೆಹೋವನು ಅವನನ್ನು ಚೆನ್ನಾಗಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ನಿನ್ನ ಈ ಬಲದಿಂದ ಇಸ್ರಾಯೇಲ್ಯರನ್ನು ಮಿದ್ಯಾನ್ಯರಿಂದ ಬಿಡಿಸು” ಎಂದು ಹೇಳಿದನು.
१४मग परमेश्वराने त्याच्याकडे बघितले आणि म्हटले, “तू आपल्या या बळाने जा, आणि इस्राएलांना मिद्यान्यांच्या ताब्यातून सोडव; मी तुला पाठवले आहे की नाही?”
15 ೧೫ ಆಗ ಗಿದ್ಯೋನನು ಆತನಿಗೆ, “ಕರ್ತನೇ, ನಾನು ಇಸ್ರಾಯೇಲ್ಯರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆಯು ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು” ಅಂದನು.
१५गिदोन त्यास बोलला, “हे माझ्या प्रभू, मी इस्राएलला कसा सोडवणार? पाहा, मनश्शेत माझे घराणे कमजोर आहे, आणि मी आपल्या पित्याच्या घरात कमी महत्त्वाचा आहे.”
16 ೧೬ ಯೆಹೋವನು ಅವನಿಗೆ, “ನಾನು ನಿನ್ನ ಸಂಗಡ ಇರುವುದರಿಂದ ನೀನು ಮಿದ್ಯಾನ್ಯರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸಂಹರಿಸಿಬಿಡುವಿ” ಅಂದನು.
१६परमेश्वर त्यास बोलला, “खरोखर मी तुझ्याबरोबर राहीन, जसे एका मनुष्यास मारावे तसे तू एकजात सर्व मिद्यान्यांना ठार करशील.”
17 ೧೭ ಅವನು ಆತನಿಗೆ, “ಕರ್ತನೇ, ದಯವಿರಲಿ; ನನ್ನೊಂದಿಗೆ ಮಾತನಾಡುತ್ತಿರುವವರು ತಾವೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.
१७गिदोन त्यास बोलला, “तुझी कृपादृष्टी माझ्यावर असली तर तूच माझ्याशी बोलत आहेस याविषयी मला काही चिन्ह दाखव.
18 ೧೮ ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವ ವರೆಗೆ ತಾವು ಈ ಸ್ಥಳವನ್ನು ಬಿಡಬಾರದು” ಎಂದು ಬಿನ್ನವಿಸಲು ಆತನು, “ನೀನು ತಿರುಗಿ ಬರುವ ವರೆಗೆ ನಾನು ಇಲ್ಲೇ ಇರುವೆನು” ಅಂದನು.
१८मी तुला विनंती करतो, मी तुझ्याकडे येईपर्यंत तू येथून जाऊ नको; म्हणजे मी आपली भेट आणून तुझ्यापुढे ठेवीन.” तेव्हा तो बोलला, “तू परत येईपर्यंत मी येथेच थांबतो.”
19 ೧೯ ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ತೆಗೆದುಕೊಂಡು, ಒಂದು ಏಫಾ ಅಂದರೆ ಸುಮಾರು ಮೂವ್ವತ್ತು ಸೇರು ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು, ಮಾಂಸವನ್ನು ಸಿದ್ಧಮಾಡಿ, ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು, ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು.
१९गिदोनाने जाऊन एक करडू व एफाभर सपिठाच्या बेखमीर भाकरी तयार केल्या; त्याने मांस टोपलीत घातला आणि रस्सा पातेल्यात घातला, मग त्याच्याजवळ एला झाडाखाली नेऊन ते सादर केले.
20 ೨೦ ಆಗ ದೇವದೂತನು ಅವನಿಗೆ, “ಮಾಂಸವನ್ನೂ, ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಅದರ ಮೇಲೆ ಹೊಯ್ಯಿ” ಅನ್ನಲು ಅವನು ಹಾಗೆಯೇ ಮಾಡಿದನು.
२०तेव्हा देवाच्या दूताने त्यास सांगितले, “तू मांस व बेखमीर भाकरी या खडकावर आणून ठेव, आणि त्यावर रस्सा ओत.” मग गिदोनाने तसे केले.
21 ೨೧ ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ, ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು.
२१तेव्हा परमेश्वराच्या दूताने आपल्या हातातल्या काठीच्या टोकाने मांसास व बेखमीर भाकरीला स्पर्श केला; मग खडकातून अग्नी निघाला आणि त्याने ते मांस व बेखमीर भाकरी भस्म केल्या; परमेश्वराचा दूतही निघून गेला आणि यापुढे गिदोन त्यास पाहू शकला नाही.
22 ೨೨ ಆತನು ಯೆಹೋವನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಕರ್ತನೇ, ಯೆಹೋವನೇ, ಯೆಹೋವನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು.
२२तेव्हा गिदोनाला समजले की तो परमेश्वराचा दूत होता; गिदोन म्हणाला, हाय हाय, “हे प्रभू देवा! कारण मी परमेश्वराचा दूत समोरासमोर, पाहिला आहे!”
23 ೨೩ ಆದರೆ ಯೆಹೋವನು ಅವನಿಗೆ, “ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವುದಿಲ್ಲ” ಅಂದನು.
२३परमेश्वर त्यास म्हणाला, “तुला शांती असो! भिऊ नको, तू मरणार नाहीस.”
24 ೨೪ ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು; ಅದು ಈ ವರೆಗೂ ಅಬೀಯೆಜೆರನ ಗೋತ್ರದವರ ಒಫ್ರದಲ್ಲಿರುತ್ತದೆ.
२४तेव्हा गिदोनाने तेथे परमेश्वरासाठी वेदी बांधली, त्याचे नाव परमेश्वर शांती आहे, असे ठेवले; ती आजपर्यंत अबियेजेऱ्यांच्या अफ्रा येथे अजून आहे.
25 ೨೫ ಅದೇ ದಿನ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನೂ, ಏಳು ವರ್ಷದ ಇನ್ನೊಂದು ಹೋರಿಯನ್ನೂ ತೆಗೆದುಕೊಂಡು ಹೋಗಿ ನಿನ್ನ ತಂದೆಯು ಕಟ್ಟಿರುವ ಬಾಳನ ಯಜ್ಞವೇದಿಯನ್ನು ಕೆಡವಿ, ಅದರ ಬಳಿಯಲ್ಲಿರುವ ಅಶೇರವೆಂಬ ವಿಗ್ರಹಸ್ತಂಭವನ್ನು ಕಡಿದುಹಾಕು.
२५आणि असे झाले की, त्याच रात्री परमेश्वराने त्यास सांगितले की, “तू आपल्या पित्याचा गोऱ्हा घे आणि सात वर्षांचा दुसरा गोऱ्हा घे आणि आपल्या बापाची बआल देवासाठीची वेदी ती मोडून टाक आणि तिच्याजवळची अशेरा कापून टाक.
26 ೨೬ ಈ ಗುಡ್ದದ ಶಿಖರದಲ್ಲಿ ಯೆಹೋವನಿಗೋಸ್ಕರ ನೇಮಕವಾದ ರೀತಿಯಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸು. ನೀನು ಕಡಿದು ಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ, ಆ ಎರಡನೆಯ ಹೋರಿಯನ್ನೂ ಸರ್ವಾಂಗಹೋಮವಾಗಿ ಸಮರ್ಪಿಸು” ಎಂದು ಹೇಳಿದನು.
२६मग या खडकाच्या उच्चस्थानी आपला देव परमेश्वर याच्यासाठी वेदी बांध आणि योग्य मार्गाने बांधणी कर. त्या दुसऱ्या गोऱ्ह्याचे होमार्पण, अशेराच्या तोडलेल्या लाकडाचा उपयोग करून कर.”
27 ೨೭ ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ ಯೆಹೋವನು ಹೇಳಿದಂತೆಯೇ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ, ಊರಿನವರಿಗೂ ಹೆದರಿಕೊಂಡಿದ್ದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.
२७तेव्हा गिदोनाने आपल्या चाकरातील दहा माणसे बरोबर घेऊन जसे परमेश्वराने त्यास सांगितले होते तसे केले; परंतु असे झाले की, दिवस असता ते करायला तो आपल्या वडिलाच्या घराण्याला व त्या नगराच्या मनुष्यांना घाबरला, यास्तव रात्री त्याने केले.
28 ೨೮ ಊರಿನ ಜನರು ಹೊತ್ತಾರೆಯಲ್ಲೆದ್ದು ಬಾಳನ ಯಜ್ಞವೇದಿಯು ಕೆಡವಲ್ಪಟ್ಟಿರುವುದನ್ನೂ, ಅದರ ಸಮೀಪದಲ್ಲಿದ್ದ ವಿಗ್ರಹಸ್ತಂಭವು ಕಡಿಯಲ್ಪಟ್ಟಿರುವುದನ್ನೂ, ಹೊಸದಾಗಿ ಕಟ್ಟಿದ ಯಜ್ಞವೇದಿಯ ಮೇಲೆ ಎರಡನೆಯ ಹೋರಿಯು ಯಜ್ಞವಾದದ್ದನ್ನೂ ಕಂಡು,
२८मग सकाळी त्या नगराची माणसे उठली तर पाहा, बआलाची वेदी मोडलेली होती तिच्याजवळची अशेराही तोडलेली होते आणि बांधलेल्या वेदीवर दुसऱ्या गोऱ्ह्याचा होम केलेला होता.
29 ೨೯ “ಹೀಗೆ ಮಾಡಿದವರಾರು?” ಎಂದು ಒಬ್ಬರನ್ನೊಬ್ಬರು ವಿಚಾರಿಸುವಲ್ಲಿ ಯೋವಾಷನ ಮಗನಾದ ಗಿದ್ಯೋನನೇ ಎಂದು ತಿಳಿದು ಬಂದಿತು.
२९तेव्हा ते एकमेकांना म्हणाले, “ही गोष्ट कोणी केली? मग त्यांनी विचारपूस व शोध केल्यावर म्हटले, योवाशाचा पुत्र गिदोन, याने ही गोष्ट केली आहे.”
30 ೩೦ ಆ ಜನರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ಕರೆದುಕೊಂಡು ಬಾ; ಅವನು ಸಾಯಬೇಕು; ಯಾಕೆಂದರೆ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನು ಕಡಿದುಹಾಕಿದ್ದಾನೆ” ಅಂದರು.
३०नंतर त्या नगराच्या मनुष्यांनी योवाशाला सांगितले, “तू आपल्या पुत्राला बाहेर आण, त्यास तर मारावयाचे आहे, कारण त्याने बआलाची वेदी मोडून टाकली आणखी तिच्याजवळची अशेराची मूर्ती तोडून टाकली आहे.”
31 ೩೧ ಯೋವಾಷನು ತನಗೆ ವಿರೋಧವಾಗಿ ನಿಂತವರೆಲ್ಲರಿಗೆ, “ಬಾಳನಿಗೋಸ್ಕರ ನೀವು ವ್ಯಾಜ್ಯಮಾಡಬೇಕೋ? ನೀವು ಅವನನ್ನು ರಕ್ಷಿಸಬೇಕೋ? ಅವನಿಗಾಗಿ ವ್ಯಾಜ್ಯಮಾಡುವವರು ಈ ಹೊತ್ತೇ ಕೊಲ್ಲಲ್ಪಡಲಿ. ಬಾಳನು ದೇವನಾಗಿದ್ದರೆ ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯಮಾಡಲಿ” ಎಂದನು.
३१तेव्हा योवाश आपणावर जे उठले होते त्या सर्वांना म्हणाला, “बआलाचा कैवार तुम्ही घेता काय? तुम्ही त्याचा बचाव करू पाहता काय? जो त्याचा कैवार घेईल तो आज सकाळ आहे तोच मारला जावो; जर तो देव असला तर, ज्याने त्याची वेदी मोडली त्याच्याविरुध्द त्याने स्वत: चा कैवार घ्यावा.”
32 ೩೨ ಆ ದಿನದಲ್ಲಿ ಅವನು, “ಬಾಳನು ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟವನೊಡನೆ ತಾನೇ ವ್ಯಾಜ್ಯಮಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.
३२तेव्हा त्याच दिवशी त्याने त्यास “यरूब्बाल” म्हटले, तो म्हणाला, “गिदोनाने बआलाची वेदी पाडून टाकली म्हणून बआलानेच त्याच्याविरुध्द स्वतःचा बचाव करावा,” कारण त्याची वेदी गिदोनाने मोडून वेगळी केली.
33 ೩೩ ಇಷ್ಟರಲ್ಲಿ ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣದೇಶದವರೂ ಸೇರಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.
३३नंतर सर्व मिद्यानी व अमालेकी व पूर्वेकडले लोक एकत्र जमले, आणि त्यांनी यार्देन नदी ओलांडून येऊन आणि इज्रेलाच्या खोऱ्यात तळ दिला.
34 ೩೪ ಆಗ ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತ್ತು. ಅವನು ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.
३४परंतु परमेश्वराचा आत्मा गिदोनावर त्यास मदत करण्यासाठी आला; गिदोनाने कर्णा फुंकला, तेव्हा अबीयेजेराचे वंशज त्याच्याजवळ अशाप्रकारे त्याच्यामागे जाण्यासाठी एकत्र आले.
35 ೩೫ ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಲಾಗಿ ಅವರೂ ಕೂಡಿಬಂದರು. ಆಶೇರ್, ಜೆಬುಲೂನ್, ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ಯುದ್ಧಪ್ರಯಾಣಕ್ಕೋಸ್ಕರ ಸೇರಿಕೊಂಡರು.
३५मग त्याने सगळ्या मनश्शेत जासूद पाठवले तेव्हा तेही त्याच्याजवळ एकत्र झाले; नंतर आशेर व जबुलून व नफतालीत त्याने जासूद पाठवले, तेव्हा ते त्यांच्याशी मिळायला चढून गेले.
36 ೩೬ ಮತ್ತು ಗಿದ್ಯೋನನು ದೇವರಿಗೆ, “ನೀನು ಹೇಳಿದಂತೆ ಇಸ್ರಾಯೇಲ್ಯರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೋ ಇಲ್ಲವೋ ಎಂಬುದನ್ನು ತಿಳಿಯಪಡಿಸು.
३६मग गिदोन देवाला बोलला, “जसे मला सांगितले तसा जर तू माझ्या हाताने इस्राएलांना तारणार असलास;
37 ೩೭ ಇಗೋ, ನಾನು ಕಣದಲ್ಲಿ ಕುರಿಯ ಉಣ್ಣೆಯನ್ನು ಇಡುತ್ತೇನೆ; ಅದರಲ್ಲಿ ಮಾತ್ರ ಮಂಜುಬಿದ್ದು ನೆಲವೆಲ್ಲಾ ಒಣಗಿದ್ದರೆ ನೀನು ಹೇಳಿದಂತೆಯೇ ಇಸ್ರಾಯೇಲರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೆಂದು ತಿಳಿಯುವೆನು” ಎಂಬುದಾಗಿ ವಿಜ್ಞಾಪಿಸಿದನು.
३७तर पाहा, मी खळ्यात कातरलेली लोकर ठेवतो; जर लोकरीवर मात्र दहिवर पडेल आणि सर्व भूमी कोरडी राहील, तर मला कळेल की जसे मला सांगितले, तसा तू माझ्या हाताने इस्राएलाला तारशील.”
38 ೩೮ ಹಾಗೆಯೇ ಆಯಿತು; ಅವನು ಮರುದಿನ ಹೊತ್ತಾರೆಯಲ್ಲಿ ಎದ್ದು ಉಣ್ಣೆಯನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು.
३८नंतर तसे झाले; म्हणजे सकाळी जेव्हा तो उठला, तेव्हा त्याने ती लोकर दाबून तिच्यातून पिळून वाटीभर पाणी काढले.
39 ೩೯ ಅವನು ತಿರುಗಿ ದೇವರಿಗೆ, “ಸ್ವಾಮೀ, ಸಿಟ್ಟಾಗಬಾರದು; ಇನ್ನೊಂದು ಸಾರಿ ಮಾತನಾಡುತ್ತೇನೆ. ಇನ್ನು ಒಂದೇ ಸಾರಿ ಈ ಉಣ್ಣೆಯಿಂದ ನಿನ್ನನ್ನು ಪರೀಕ್ಷಿಸುವುದಕ್ಕೆ ಅಪ್ಪಣೆಯಾಗಲಿ; ಈ ಉಣ್ಣೆ ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿ ಬಿದ್ದಿರಲಿ” ಅಂದನು.
३९मग गिदोन देवाला बोलला, “तू माझ्यावर रागावू नको, मी आणखी एक वेळेस बोलतो; आता केवळ या वेळेस या लोकरीच्या व्दारे एक वेळ मी परीक्षा पाहतो: ही लोकर तेवढी कोरडी राहून बाकी अवघ्या जमिनीवर दहिवर पडेल असे कर.”
40 ೪೦ ಆ ರಾತ್ರಿ ದೇವರು ಹಾಗೆಯೇ ಮಾಡಿದನು; ಉಣ್ಣೆ ಮಾತ್ರ ಒಣಗಿತ್ತು, ನೆಲದ ಮೇಲೆಲ್ಲಾ ಹನಿ ಬಿದ್ದಿತ್ತು.
४०तेव्हा त्या रात्री देवाने तसे केले म्हणजे ती लोकर मात्र कोरडी राहिली आणि संपूर्ण भूमीवर दहिवर पडले.

< ನ್ಯಾಯಸ್ಥಾಪಕರು 6 >