< ಯಾಜಕಕಾಂಡ 19 >

1 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
2 “ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, ‘ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.
“ಇಸ್ರಾಯೇಲರ ಸಭೆಯವರೆಲ್ಲರ ಸಂಗಡ ಮಾತನಾಡಿ, ಅವರಿಗೆ ಹೀಗೆ ಹೇಳಬೇಕು: ‘ನೀವು ಪರಿಶುದ್ಧರಾಗಿರಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರಾದ ನಾನು ಪರಿಶುದ್ಧನಾಗಿದ್ದೇನೆ.
3 “‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.
“‘ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತಾಯಿಗೂ ತನ್ನ ತಂದೆಗೂ ಭಯಪಟ್ಟು, ನನ್ನ ವಿಶ್ರಾಂತಿಯ ದಿನಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
4 “‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.
“‘ನೀವು ವಿಗ್ರಹಗಳ ಕಡೆಗೆ ತಿರುಗಿಕೊಳ್ಳಬೇಡಿರಿ. ಇಲ್ಲವೆ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
5 “‘ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು.
“‘ನೀವು ನಿಮ್ಮ ಯೆಹೋವ ದೇವರಿಗೆ ಸಮಾಧಾನದ ಬಲಿಯನ್ನು ಸಮರ್ಪಿಸುವುದಾದರೆ, ನೀವು ಆತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿಯೇ ಅರ್ಪಿಸಬೇಕು.
6 ನೀವು ಮಾಡುವ ಯಜ್ಞದ ಮಾಂಸವನ್ನು ಆ ದಿನದಲ್ಲಿಯಾಗಲಿ ಇಲ್ಲವೇ ಮರುದಿನದಲ್ಲಿಯಾಗಲಿ ಊಟಮಾಡಬೇಕು. ಮೂರನೆಯ ದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
ಅದನ್ನು ನೀವು ಸಮರ್ಪಿಸಿದ ದಿನದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು. ಆದರೆ ಅದು ಮೂರನೆಯ ದಿನದವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.
7 ಮೂರನೆಯ ದಿನದ ತನಕ ಉಳಿದದ್ದು ಹೇಯವಾದುದರಿಂದ ಅದರಲ್ಲಿ ಏನಾದರೂ ತಿಂದರೆ ಆ ಯಜ್ಞವು ಯೆಹೋವನಿಗೆ ಅಂಗೀಕಾರವಾಗುವುದೇ ಇಲ್ಲ.
ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ, ಅದು ಅಸಹ್ಯವಾದದ್ದು, ಅದು ಅಂಗೀಕೃತವಾಗುವುದಿಲ್ಲ.
8 ಅದರಲ್ಲಿ ಏನಾದರೂ ತಿಂದವನು ಯೆಹೋವನ ಪವಿತ್ರ ದ್ರವ್ಯವನ್ನು ಹೊಲೆಮಾಡಿದವನಾದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನನ್ನು ಕುಲದಿಂದ ಹೊರಗೆ ಹಾಕಬೇಕು.
ಆದ್ದರಿಂದ ಅದನ್ನು ತಿನ್ನುವ ಪ್ರತಿಯೊಬ್ಬರೂ ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು. ಏಕೆಂದರೆ ಯೆಹೋವ ದೇವರಿಗೆ ಪವಿತ್ರವಾದದ್ದನ್ನು ಅವರು ಅಶುದ್ಧಮಾಡಿದ್ದಾನೆ. ಅಂಥವರನ್ನು ತಮ್ಮ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.
9 “‘ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು.
“‘ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು. ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು.
10 ೧೦ ದ್ರಾಕ್ಷಿಯ ತೋಟಗಳಲ್ಲಿಯೂ ಹಕ್ಕಲಾಯಬಾರದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಮತ್ತು ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು.
ನಿಮ್ಮ ದ್ರಾಕ್ಷಿತೋಟದಲ್ಲಿ ಹಕ್ಕಲಾಯಬಾರದು. ಇಲ್ಲವೆ ಪ್ರತಿಯೊಂದು ದ್ರಾಕ್ಷಿಯನ್ನೂ ಕೂಡಿಸಬಾರದು. ನೀವು ಅವುಗಳನ್ನು ಬಡವರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
11 ೧೧ “‘ಕದಿಯಬಾರದು, “‘ಮೋಸಮಾಡಬಾರದು, “‘ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು.
“‘ಕದಿಯಬಾರದು. “‘ಸುಳ್ಳಾಡಬಾರದು. “‘ಒಬ್ಬರಿಗೊಬ್ಬರು ಮೋಸಮಾಡಬಾರದು.
12 ೧೨ “‘ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿಮ್ಮ ದೇವರ ನಾಮವನ್ನು ಅಪಕೀರ್ತಿಗೆ ಒಳಪಡಿಸಬಾರದು. ನಾನು ಯೆಹೋವನು.
“‘ನನ್ನ ಹೆಸರಿನಲ್ಲಿ ಸುಳ್ಳು ಪ್ರಮಾಣ ಮಾಡಬಾರದು. ನಿಮ್ಮ ದೇವರ ಹೆಸರನ್ನು ಅಗೌರವಿಸಬಾರದು. ನಾನೇ ಯೆಹೋವ ದೇವರು.
13 ೧೩ “‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.
“‘ನಿಮ್ಮ ನೆರೆಯವನನ್ನು ವಂಚಿಸಬಾರದು. “‘ಇಲ್ಲವೆ ಅವನನ್ನು ಸುಲಿದುಕೊಳ್ಳಬಾರದು. ಕೂಲಿಯಾಳಿನ ಕೂಲಿಯು ನಿಮ್ಮ ಬಳಿಯಲ್ಲಿ ರಾತ್ರಿಯೆಲ್ಲಾ ಮತ್ತು ಮುಂಜಾನೆಯವರೆಗೆ ಇರಬಾರದು.
14 ೧೪ ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಅವರ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು.
“‘ಕಿವುಡನನ್ನು ಶಪಿಸಬಾರದು. ಇಲ್ಲವೆ ಕಣ್ಣು ಕಾಣದವನನ್ನು ಮುಗ್ಗರಿಸುವಂತೆ ಮಾಡಬಾರದು. ನಿಮ್ಮ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.
15 ೧೫ “‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.
“‘ವ್ಯಾಜ್ಯ ತೀರಿಸುವಾಗ ನೀನು ಅನ್ಯಾಯ ಮಾಡದಿರು. ಬಡವನ ಮುಖ ದಾಕ್ಷಿಣ್ಯವನ್ನಾಗಲಿ, ಬಲಿಷ್ಠನ ಘನತೆಯನ್ನಾಗಲಿ ಲಕ್ಷಿಸದೆ ನಿಷ್ಪಕ್ಷಪಾತವಾಗಿ ತೀರ್ಪುಕೊಡು. ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯವಾಗಿ ತೀರ್ಪುಮಾಡು.
16 ೧೬ “‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.
“‘ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ. “‘ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ. ನಾನೇ ಯೆಹೋವ ದೇವರು.
17 ೧೭ “‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.
“‘ನಿನ್ನ ಹೃದಯದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ, ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
18 ೧೮ “‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.
“‘ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸದವನಾಗಿಯೂ, ಸೇಡು ತೀರಿಸದೆಯೂ ಇರು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು. ನಾನೇ ಯೆಹೋವ ದೇವರು.
19 ೧೯ “‘ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. “‘ನಿಮ್ಮ ಪಶುಗಳನ್ನು ಬೇರೆ ಜಾತಿಯ ಪಶುಗಳೊಂದಿಗೆ ಕೂಡಿಸಿ ತಳಿಪಡಿಯಬಾರದು; “‘ನಿಮ್ಮ ಹೊಲಗಳಲ್ಲಿ ಮಿಶ್ರಬೀಜಗಳನ್ನು ಬಿತ್ತಬಾರದು; “‘ನಾರು ಮತ್ತು ಉಣ್ಣೆ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.
“‘ನೀನು ನನ್ನ ಆಜ್ಞೆಗಳನ್ನು ಕೈಗೊಳ್ಳಬೇಕು. “‘ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ. “‘ನಿನ್ನ ಹೊಲದಲ್ಲಿ ಮಿಶ್ರವಾದ ಬೀಜಗಳನ್ನು ಬಿತ್ತಬೇಡ. “‘ಇದಲ್ಲದೆ ನಾರು ಮತ್ತು ಉಣ್ಣೆ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.
20 ೨೦ “‘ಒಬ್ಬನ ಅಧೀನದಲ್ಲಿರುವ ದಾಸಿ ಹಣಕೊಡುವುದರಿಂದಾಗಲಿ ಅಥವಾ ಉಚಿತವಾಗಿಯಾಗಲಿ ಬಿಡುಗಡೆಯನ್ನು ಹೊಂದದೆ ಇದ್ದರೆ, ಯಾವನಾದರೂ ಅವಳನ್ನು ಸಂಗಮಿಸಿದರೆ ಅವರಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯವಾಗಿ ನ್ಯಾಯವಿಚಾರಣೆ ಆಗಬೇಕು. ಅವಳು ಸ್ವತಂತ್ರಳಲ್ಲವಾದುದರಿಂದ ಅವರಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.
“‘ಒಬ್ಬ ಪುರುಷನಿಗೆ ನಿಶ್ಚಿತವಾಗಿರುವ ದಾಸಿಯಾದ ಒಬ್ಬ ಸ್ತ್ರೀಯೊಂದಿಗೆ ಒಬ್ಬ ಮನುಷ್ಯನು ಸಂಗಮಿಸುವುದಕ್ಕಾಗಿ ಮಲಗಿದರೆ ಅವಳು ಬಿಡುಗಡೆಯನ್ನು ಹೊಂದಿರದಿದ್ದರೆ, ಇಲ್ಲವೆ ಅವಳಿಗೆ ಸ್ವಾತಂತ್ರ್ಯವನ್ನು ಕೊಡದಿರದಿದ್ದರೆ, ತಕ್ಕ ಶಿಕ್ಷೆಯಾಗಬೇಕು. ಅವಳು ಸ್ವತಂತ್ರಳಲ್ಲದ ಕಾರಣ ಅವಳಿಗೆ ಮರಣದಂಡನೆಯನ್ನು ವಿಧಿಸಬಾರದು.
21 ೨೧ ಆ ಪುರುಷನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ಒಂದು ಟಗರನ್ನು ತರಬೇಕು.
ಅವನು ಪ್ರಾಯಶ್ಚಿತ್ತ ಬಲಿಯ ಟಗರಾದ ತನ್ನ ಪ್ರಾಯಶ್ಚಿತ್ತ ಬಲಿಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಎದುರಿನಲ್ಲಿ ತರಬೇಕು.
22 ೨೨ ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತಯಜ್ಞವಾಗಿ ಯೆಹೋವನಿಗೆ ಸಮರ್ಪಿಸಿ, ಅವನಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಬಲಿಯಾಗಿರುವ ಟಗರಿನಿಂದ ಯಾಜಕನು ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನು ಮಾಡಿದ ಪಾಪವನ್ನು ಅವನಿಗೆ ಕ್ಷಮಿಸಲಾಗುವುದು.
23 ೨೩ “‘ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ, ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು.
“‘ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ, ಅದರ ಫಲವನ್ನು ಮೂರು ವರುಷಗಳವರೆಗೆ ಅಶುದ್ಧವೆಂದೆಣಿಸಿ ಅದನ್ನು ತಿನ್ನಬಾರದು.
24 ೨೪ ನಾಲ್ಕನೆಯ ವರ್ಷದಲ್ಲಿ ಅದರ ಎಲ್ಲಾ ಹಣ್ಣುಗಳೂ ದೇವರದಾಗಿರಬೇಕು; ಅವುಗಳನ್ನು ಯೆಹೋವನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು.
ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಯೆಹೋವ ದೇವರ ಸ್ತೋತ್ರಕ್ಕಾಗಿ ಪರಿಶುದ್ಧವಾಗಿರುವುದು.
25 ೨೫ ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.
ಐದನೆಯ ವರುಷದಲ್ಲಿ ಅದರ ಫಲವನ್ನು ನೀವು ತಿನ್ನಬೇಕು. ಆಗ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
26 ೨೬ “‘ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “‘ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.
“‘ರಕ್ತದೊಂದಿಗೆ ಯಾವುದನ್ನೂ ನೀವು ತಿನ್ನಬಾರದು. “‘ಇದಲ್ಲದೆ ಮಂತ್ರವನ್ನು ಮಾಡಬಾರದು. ಇಲ್ಲವೆ ಶಕುನಗಳನ್ನು ನೋಡಬಾರದು.
27 ೨೭ “‘ಚಂಡಿಕೆ ಬಿಡಬಾರದು ಹಾಗೂ ಗಡ್ಡವನ್ನು ವಿಕಾರಗೊಳಿಸಬಾರದು.
“‘ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು. ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ಕೆಡಿಸಬಾರದು.
28 ೨೮ “‘ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು.
“‘ಸತ್ತವರಿಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು. ನಿಮ್ಮ ಮೇಲೆ ಯಾವ ಹಚ್ಚೆಗಳನ್ನೂ ಹಚ್ಚಿಸಿಕೊಳ್ಳಬಾರದು. ನಾನೇ ಯೆಹೋವ ದೇವರು.
29 ೨೯ “‘ಮಗಳನ್ನು ವೇಶ್ಯೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ವೇಶ್ಯಾವಾಟಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವುದು.
“‘ನಿನ್ನ ಮಗಳು ವೇಶ್ಯೆಯಾಗುವಂತೆ ವ್ಯಭಿಚಾರಕ್ಕೆ ಬಿಡಬಾರದು. ಹಾಗೆ ಮಾಡಿದರೆ, ದೇಶವು ವೇಶ್ಯೆತನಕ್ಕೆ ಒಳಪಡುವುದು ಮತ್ತು ಕೆಟ್ಟತನದಿಂದ ತುಂಬಿಹೋಗುವುದು.
30 ೩೦ “‘ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.
“‘ನನ್ನ ವಿಶ್ರಾಂತಿಯ ದಿನಗಳನ್ನು ನೀವು ಆಚರಿಸಬೇಕು. ನನ್ನ ಪರಿಶುದ್ಧಸ್ಥಳದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನೇ ಯೆಹೋವ ದೇವರು.
31 ೩೧ “‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.
“‘ಮಾಟಗಾರರನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಅಶುದ್ಧವಾಗದಂತೆ ಭೂತಪ್ರೇತಗಳನ್ನು ವಿಚಾರಿಸುವವರನ್ನು ಅನುಸರಿಸಬೇಡ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
32 ೩೨ “‘ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.
“‘ತಲೆ ನೆರೆತ ವೃದ್ಧರ ಮುಂದೆ ಎದ್ದು ನಿಂತುಕೊಳ್ಳಬೇಕು, ಅವರ ಸಮ್ಮುಖವನ್ನು ಗೌರವಿಸು. ನಿನ್ನ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.
33 ೩೩ “‘ನಿಮ್ಮ ದೇಶದಲ್ಲಿ ವಾಸವಾಗಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು.
“‘ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ, ಅವನನ್ನು ಉಪದ್ರವ ಪಡಿಸಬೇಡಿರಿ.
34 ೩೪ ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತ ದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.
ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೇ ಸ್ವದೇಶದವನಂತಿರಲಿ. ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಏಕೆಂದರೆ ನೀವು ಸಹ ಈಜಿಪ್ಟ್ ದೇಶದಲ್ಲಿ ಪರಕೀಯರಾಗಿದ್ದಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
35 ೩೫ “‘ನ್ಯಾಯವಿಚಾರಣೆ, ತೂಕ, ಅಳತೆ ಮತ್ತು ಪರಿಮಾಣಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು.
“‘ನಿಮ್ಮ ನಿರ್ಣಯದಲ್ಲಿಯೂ, ಅಳೆಯುವುದರಲ್ಲಿಯೂ, ತೂಕದಲ್ಲಿಯೂ, ಅಳತೆಯಲ್ಲಿಯೂ ನೀವು ಅನ್ಯಾಯ ಮಾಡಬೇಡಿರಿ.
36 ೩೬ ತಕ್ಕಡಿ, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.
ತಕ್ಕಡಿ, ತೂಕದ ಕಲ್ಲುಗಳು, ಕಿಲೋಗ್ರಾಂ ಮತ್ತು ಲೀಟರ್ ನ್ಯಾಯಯುತವಾಗಿರಲಿ. ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಯೆಹೋವ ದೇವರು ನಾನೇ.
37 ೩೭ ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಯೆಹೋವನು’” ಎಂದು ಹೇಳಿದನು.
“‘ಆದ್ದರಿಂದ ನನ್ನ ಎಲ್ಲಾ ಆಜ್ಞೆಗಳನ್ನೂ, ನನ್ನ ಎಲ್ಲಾ ನ್ಯಾಯಗಳನ್ನೂ ನೀವು ಅನುಸರಿಸಿ ನಡೆಯಬೇಕು. ನಾನೇ ಯೆಹೋವ ದೇವರು,’” ಎಂದು ಹೇಳಿದರು.

< ಯಾಜಕಕಾಂಡ 19 >