< ಲೂಕನು 16 >

1 ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ, “ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ, ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ,
येशूने त्याच्या शिष्यांना एक दाखला सांगितला, “कोणीएक श्रीमंत मनुष्य असून, त्याचा एक कारभारी होता. हा कारभारी तुमचे पैसे उधळतो, अशी तक्रार त्या श्रीमंत मनुष्याकडे करण्यात आली.
2 ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು.
म्हणून त्या श्रीमंत मनुष्याने कारभाऱ्याला आत बोलावून म्हटले, तुझ्याविषयी मी हे काय ऐकत आहे? तर आता तुझ्या कारभाराचा हिशोब दे, कारण यापुढे तुला कारभार पाहावयचा नाही.
3 ಹೀಗಿರಲಾಗಿ ಆ ಪಾರುಪಾತ್ಯಗಾರನು, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಪಾರುಪಾತ್ಯೆಯ ಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ, ಭಿಕ್ಷೆ ಬೇಡುವುದಕ್ಕೆ ನನಗೆ ನಾಚಿಕೆಯಾಗುತ್ತದೆ.
तेव्हा कारभारी स्वतःशी म्हणाला, माझे मालक माझे कारभाऱ्याचे काम काढून घेत आहेत तर मी आता काय करू? शेतात कष्ट करण्याएवढे बळ माझ्या अंगात नाही व भीक मागण्याची मला लाज वाटते.
4 ಈ ಪಾರುಪಾತ್ಯೆಯ ಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ನನಗೆ ಗೊತ್ತಿದೆ’ ಎಂದು ತನ್ನೊಳಗೆ ಅಂದುಕೊಂಡು,
मला कारभाऱ्याच्या कामावरून ते काढून टाकतील तरीही लोकांनी मला त्यांच्या घरात घ्यावे यासाठी मी काय करावे हे मला माहिती आहे.
5 ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?’ ಎಂದು ಕೇಳಲು,
मग कारभाऱ्याने त्याच्या मालकाच्या प्रत्येक कर्जदाराला बोलावले. पहिल्याला तो म्हणाला, तू माझ्या मालकाकडून किती कर्ज घेतले आहे जे तुला फेडायचे आहे.
6 ಅವನು ‘ನೂರು ಬುದ್ದಲಿ ಎಣ್ಣೆ’ ಎಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ’ ಎಂದು ಹೇಳಿದನು.
तो म्हणाला, तीन हजार लिटर तेल. त्याने त्यास म्हटले, ही तुझी हिशोबाची वही घे आणि लवकर बसून यावर दीड हजार मांड
7 ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು.
नंतर दुसऱ्याला म्हटले, तुला किती देणे आहे? तो म्हणाला, वीस हजार किलो गहू तो त्यास म्हणाला, ही तुझी हिशोबाची वही घे व सोळा हजार मांड.
8 ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ. (aiōn g165)
अन्यायी कारभाऱ्याने शहाणपण केले. यावरुन धन्याने त्याची वाहवा केली; कारण या युगाचे लोक आपल्यासारख्यांविषयी प्रकाशाच्या लोकांपेक्षा शहाणे असतात. (aiōn g165)
9 “ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ. (aiōnios g166)
मी तुम्हास सांगतो, तुमच्यासाठी, तुमच्या अनीतीच्या धनाने मित्र मिळवा. यासाठी की, जेव्हा हे धन संपेल तेव्हा त्यांनी तुम्हास सार्वकालिक वस्तीत घ्यावे (aiōnios g166)
10 ೧೦ ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅಪ್ರಾಮಾಣಿಕನಾಗಿರುವವನು ಬಹಳವಾದದ್ದರಲ್ಲಿಯೂ ಅಪ್ರಾಮಾಣಿಕನಾಗಿರುವನು.
१०एखाद्यावर थोडासा विश्वास टाकणे शक्य असेल तर त्याच्यावर जास्त विश्वास टाकणे शक्य आहे व जो कोणी थोड्या गोष्टींविषयी अन्यायी आहे तो जास्त गोष्टींविषयी अन्यायी राहील.
11 ೧೧ ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು?
११म्हणून जर तुम्ही अनीतिकारक धनाविषयी विश्वासू नाही, तर मग खऱ्या धनाविषयी तुमच्यावर कोण विश्वास ठेवील?
12 ೧೨ ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಒಪ್ಪಿಸಿಕೊಟ್ಟಾರು?
१२जे दुसऱ्याचे आहे त्याविषयी तुम्ही विश्वासू नसाल तर जे तुमचे आहे ते तुम्हास कोण देईल?
13 ೧೩ ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ” ಅಂದನು.
१३कोणत्याही नोकराला दोन मालकांची सेवा करता येत नाही. एकाचा तो राग करील व दुसऱ्यावर तो प्रीती करील किंवा एकाला तो धरून राहील व दुसऱ्याला तुच्छ मानील. तुम्ही एकाच वेळी देवाची व पैशाची सेवा करू शकत नाही.”
14 ೧೪ ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.
१४मग ते परूशी धनाचे लोभी होते त्यांनी हे सर्व ऐकले व त्यांनी येशूचा तिरस्कार केला.
15 ೧೫ ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
१५येशू त्यांना म्हणाला, “तुम्ही स्वतःला लोकांसमोर नीतिमान म्हणून मिरवता, पण देव तुमची अंतःकरणे ओळखतो. जे लोकांस त्यांच्या दृष्टीत महान वाटते ते देवाच्या नजरेमध्ये अमंगळ आहे.
16 ೧೬ “ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ.
१६योहानापर्यंत नियमशास्त्र व संदेष्टे हे होते आणि तेव्हापासून देवाच्या राज्याची सुवार्ता गाजवली जात आहे व प्रत्येकजण त्यामध्ये शिरण्याचा जोराने प्रयत्न करीत आहे.
17 ೧೭ ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವುದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.
१७नियमशास्त्राचा एकही काना किंवा मात्रा नाहीसा होण्यापेक्षा आकाश व पृथ्वीचे नाहीसे होणे सोपे आहे.
18 ೧೮ “ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.
१८जो कोणी आपल्या पत्नीला सोडून देतो व दुसरीबरोबर लग्न करतो तो व्यभिचार करतो आणि जो कोणी, पतीने सोडून दिलेल्या स्त्री सोबत लग्न करतो तो व्यभिचार करतो.
19 ೧೯ “ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.
१९कोणीएक श्रीमंत मनुष्य होता तो जांभळे आणि महागडे खादीचे कपडे घालीत असे. प्रत्येक दिवस तो ऐशोआरामात घालवीत असे.
20 ೨೦ ಅವನ ಮನೇ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. ಇವನು ಮೈತುಂಬಾ ಹುಣ್ಣೆದ್ದವನು.
२०त्याच्या फाटकाजवळ लाजर नावाचा एक गरीब मनुष्य पडून होता आणि त्याच्या अंगावर फोड आलेले होते.
21 ೨೧ ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು. ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
२१त्या श्रीमंत मनुष्याच्या जेवणाच्या टेबलावरून जे काही खाली पडेल ते तरी आपल्याला खायला मिळेल अशी तो अपेक्षा करत असे याशिवाय कुत्री येऊन त्याचे फोड चाटीत असत.
22 ೨೨ ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.
२२मग असे झाले की, तो गरीब मनुष्य मरण पावला व देवदूतांनी त्यास अब्राहामाच्या ऊराशी नेऊन ठेवले. नंतर श्रीमंत मनुष्यही मरण पावला व त्यास पुरले गेले.
23 ೨೩ ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ, (Hadēs g86)
२३श्रीमंत मनुष्य मृतलोकात यातना भोगीत होता, तेथून त्याने वर पाहीले व दूरवर असलेल्या अब्राहामाला आणि लाजराला त्याच्या बाजूला पाहिले, (Hadēs g86)
24 ೨೪ ‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.
२४तो ओरडून म्हणाला, हे पित्या अब्राहामा, माझ्यावर दया कर आणि लाजराला पाठव यासाठी की तो बोटाचे टोक पाण्यात बुडवून माझी जीभ थंड करील, कारण या आगीमध्ये मी भयंकर दुखः सहन करीत आहे.
25 ೨೫ ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.
२५परंतु अब्राहाम म्हणाला, माझ्या मुला, ध्यानात घे की तुझ्या जीवनात जशा तुला चांगल्या गोष्टी मिळाल्या, तशा लाजराला वाईट गोष्टी मिळाल्या. पण आता त्यास आराम मिळत आहे व तू दुःखात आहेस.
26 ೨೬ ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು’ ಅಂದನು.
२६आणि या सगळ्याशिवाय, तुमच्या व आमच्यामध्ये एक मोठी दरी ठेवलेली आहे, यासाठी की, येथून तुमच्याकडे कोणाला जाता येणार नाही व तुमच्याकडून कोणालाही आमच्याकडे येता येणार नाही.
27 ೨೭ ಆಗ ಅವನು, ‘ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
२७तो श्रीमंत मनुष्य म्हणाला, मग तुला मी विनंती करतो की, पित्या, लाजराला माझ्या वडिलांच्या घरी पाठव,
28 ೨೮ ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ. ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ತಿಳಿಸಿ ಹೇಳಲಿ’ ಅಂದನು.
२८लाजराला माझ्या पाच भावांकडे जाऊन त्यांना सावध करू दे म्हणजे ते तरी या दुःखाच्या ठिकाणी येणार नाहीत.
29 ೨೯ ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ, ಅವುಗಳನ್ನು ಕೇಳಲಿ’ ಅನ್ನಲು,
२९पण अब्राहाम म्हणाला, तुझ्या भावांजवळ मोशे आणि संदेष्टये आहेत त्यांचे त्यांनी ऐकावे.
30 ೩೦ ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು.
३०तो श्रीमंत मनुष्य म्हणाला, नाही, हे पित्या अब्राहामा, मरण पावलेल्यामधून कोणी माझ्या भावांकडे गेला तर ते पश्चात्ताप करतील.
31 ೩೧ ಅಬ್ರಹಾಮನು ಅವನಿಗೆ, ‘ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ’ ಎಂದು ಹೇಳಿದನು.”
३१अब्राहाम त्यास म्हणाला, जर ते मोशेचे आणि संदेष्टयांचे ऐकत नाहीत तर मरण पावलेल्यातून जर कोणी उठला तरी त्यांची खात्री होणार नाही.”

< ಲೂಕನು 16 >