< ಲೂಕನು 17 >

1 ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?
တပည့်တော်တို့အား တဖန်မိန့်တော်မူသည်ကား၊ မှားယွင်းစရာအကြောင်းရှိရမည်။ သို့သော်လည်း မှားယွင်းစရာအကြောင်းကိုဖြစ်စေသောသူသည် အမင်္ဂလာရှိ၏။
2 ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು.
ဤသူငယ်တစုံတယောက်ကို မှားယွင်းစေသည်ထက်၊ လည်ပင်း၌ ကြိတ်ဆုံကျောက်ကို ဆွဲ၍ ပင်လယ် ၌ ချခြင်းကို ခံရလျှင် အနေသာ၍ကောင်း၏။
3 ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು.
သင်တို့သည် ကိုယ်ကိုကိုယ် သတိပြုကြလော့။ သင်၏ ညီအစ်ကိုသည် သင့်ကိုပြစ်မှားလျှင် သူ့ကို ဆုံး မလော့။ သူသည် နောင်တရလျှင် သူ၏အပြစ်ကိုလွှတ်လော့။
4 ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.
တနေ့ခြင်းတွင် ခုနစ်ကြိမ်မြောက်အောင် သင့်ကိုပြစ်မှား၍၊ ခုနစ်ကြိမ်မြောက်အောင် သင့်ထံသို့ လှည့် ၍ နောင်တရပါ၏ဟုဆိုလျှင်၊ သူ၏အပြစ်ကို လွှတ်လော့ဟု မိန့်တော်မူ၏။
5 ಅಪೊಸ್ತಲರು ಕರ್ತನಿಗೆ, “ನಮ್ಮ ನಂಬಿಕೆಯನ್ನು ಹೆಚ್ಚಿಸು” ಎಂದು ಹೇಳಲು,
တမန်တော်တို့က၊ အကျွန်ုပ်တို့ ယုံကြည်ခြင်းစိတ်ကို တိုးပွားစေတော်မူပါဟု သခင်ဘုရားကို တောင်း ပန်ကြလျှင်၊
6 ಕರ್ತನು, “ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು” ಅಂದನು.
သခင်ဘုရားက၊ သင်တို့သည် မုန်ညင်းစေ့ခန့်မျှလောက်သော ယုံကြည်ခြင်းရှိလျှင် ထိုသဖန်းပင်ကို၊ အချင်းအပင်၊ သင်သည် အမြစ်နှင့်တကွနှုတ်၍ ပင်လယ်၌စိုက်လျက်နေလော့ဟု ဆိုကြသော် သင်တို့ စကားကို နားထောင်လိမ့်မည်။
7 “ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ, ‘ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ’ ಎಂದು ಹೇಳುವನೇ?
အစေအပါးသည် လယ်ထွန်သော်၎င်း၊ သိုး၊ နွားကျောင်းသော်၎င်း၊ လယ်ပြင်မှလာ၍ အိမ်သို့ဝင်သော အခါ၊ ထိုအစေအပါးကို၊ အသော့လာ၍ စားပွဲ၌ လျောင်းလော့ဟု သင်တို့တွင် အဘယ်သူပြောမည်နည်း။
8 ಹಾಗೆ ಹೇಳದೆ, ‘ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು. ಆ ಮೇಲೆ ನೀನು ಊಟಮಾಡು, ಕುಡಿ’ ಎಂದು ಹೇಳುವನಲ್ಲವೇ.
ထိုအစေအပါးကို၊ ငါစားစရာဘို့ပြင်လော့။ ငါစားသောက်စဉ်တွင် ခါးကိုစည်း၍ ငါ့ကို လုပ်ကျွေး လော့။ ထိုနောက်မှ သင်သည် စားသောက်ရမည်ဟု ပြောမည်မဟုတ်လော။
9 ತನ್ನ ಅಪ್ಪಣೆಯಂತೆ ನಡೆದ ಆ ಆಳಿಗೆ, ನಿನ್ನಿಂದ ಉಪಕಾರವಾಯಿತೆಂದು ಅವನಿಗೆ ಹೇಳುವನೇ? ಇದರಂತೆಯೇ ನಿಮ್ಮ ಸಂಗತಿ.
ထိုအစေအပါးသည် သခင်စီရင်သည်အတိုင်း ပြုသောကြောင့်၊ သခင်၌ ကျေးဇူးတင်သလော။ ကျေးဇူး မတင်။
10 ೧೦ ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ” ಎಂದು ಹೇಳಿದನು.
၁၀ထိုနည်းတူမှာ ထားတော်မူသမျှတို့ကို သင်တို့သည် ကျင့်ပြီးမှ၊ ငါတို့သည် သခင်၌ ကျေးဇူးပြုသော အစေအပါးဖြစ်သည်မဟုတ်။ ဝတ်ပြေရုံမျှသာရှိသည်ဟု ဝန်ခံကြလော့ဟု မိန့်တော်မူ၏။
11 ೧೧ ಯೇಸು ಯೆರೂಸಲೇಮಿಗೆ ಪ್ರಯಾಣಮಾಡುವಾಗ ಸಮಾರ್ಯ, ಗಲಿಲಾಯ ಸೀಮೆಗಳ ನಡುವೆ ಹಾದುಹೋದನು.
၁၁ယေရုရှလင်မြို့သို့ ကြွတော်မူစဉ်၊ ရှမာရိပြည် နှင့်ဂါလိလဲပြည်စပ်ကြား၌ ရှောက်သွားတော်မူ၏။
12 ೧೨ ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು,
၁၂ရွာတရွာသို့ ဝင်တော်မူသည်တွင်၊ နူနာစွဲသော သူတကျိပ်တို့သည် ခရီးဦးကြိုပြု၍ အဝေးကရပ်လျက်၊
13 ೧೩ “ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು” ಎಂದು ಕೂಗಿ ಹೇಳಿದರು.
၁၃သခင်ယေရှု၊ အကျွန်ုပ်တို့ကို ကယ်မသနားတော်မူပါဟု ဟစ်ကြော်ကြ၏။
14 ೧೪ ಆತನು ಅವರನ್ನು ನೋಡಿ, “ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
၁၄ယေရှုသည် မြင်တော်မူလျှင်၊ သင်တို့သည် ယဇ်ပုရောဟိတ်ထံသို့သွား၍ ကိုယ်ကိုပြကြလော့ဟု မိန့် တော်မူသည်အတိုင်း၊ သူတို့သည် သွားစဉ်တွင် သန့်ရှင်းခြင်းသို့ ရောက်ကြ၏။
15 ೧೫ ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ, ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು,
၁၅ထိုသူတို့တွင် တယောက်သောသူသည် အနာရောဂါကင်းလွတ်သည်ကို သိမြင်လျှင်၊ ပြန်လာ၍ ကြီး သော အသံနှင့် ဘုရားသခင်၏ ဂုဏ်တော်ကို ချီးမွမ်းလေ၏။
16 ೧೬ ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.
၁၆ခြေတော်ရင်း၌ ပြပ်ဝပ်၍ ကျေးဇူတော်ကြီးလှပါသည်ဟု ဝန်ခံလေ၏။ ထိုသူသည် ရှမာရိလူဖြစ် သတည်း။
17 ೧೭ ಯೇಸು ಇದನ್ನು ನೋಡಿ, “ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ?
၁၇ယေရှုကလည်း၊ တကျိပ်သောသူတို့သည် သန့်ရှင်းခြင်းသို့ ရောက်ကြသည်မဟုတ်လော။ ကိုးယောက် သောသူတို့သည် အဘယ်မှာရှိကြသနည်း။
18 ೧೮ ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?” ಎಂದು ಹೇಳಿ,
၁၈ဤတပါးအမျိုးသားကိုထား၍ ဘုရားသခင်၏ဂုဏ်တော်ကို ချီးမွမ်းခြင်းငှါ ပြန်လာသောသူ တယောက် မျှ မရှိသလောဟု မေးတော်မူပြီးမှ၊
19 ೧೯ ಅವನಿಗೆ, “ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ” ಎಂದು ಹೇಳಿದನು.
၁၉သင်ထ၍ သွားလော့။ သင်၏ယုံကြည်ခြင်းသည် သင်၏အနာကိုငြိမ်းစေပြီဟု ထိုသူအား မိန့်တော် မူ၏။
20 ೨೦ ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, “ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ.
၂၀ဖာရိရှဲတို့သည် လာ၍၊ ဘုရားသခင်၏ နိုင်ငံတော်သည် အဘယ်ကာလမှ တည်ပါမည်နည်းဟု မေး လျှောက်ကြလျှင်၊ ယေရှုက၊ ကောင်းကင်နိုင်ငံတော်သည် မျက်မြင်သောအရာ၌ မတည်။
21 ೨೧ ‘ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ’ ಎಂದು ಹೇಳುವುದಕ್ಕಾಗದು. ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ” ಎಂದು ಹೇಳಿದನು.
၂၁ဤအရပ်၌ကြည့်ပါ။ ထိုအရပ်၌ ကြည့်ပါဟု ပြောစရာအခွင့်မရှိ။ အကြောင်းမူကား၊ ဘုရားသခင်၏ နိုင်ငံတော်သည် သင်တို့၏အထဲ၌ရှိသည်ဟု မိန့်တော်မူ၏။
22 ೨೨ ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿನಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ.
၂၂တဖန် တပည့်တော်တို့အား မိန့်တော်မူသည်ကား၊ သင်တို့သည် လူသား၏နေ့ရက်တရက်ကိုမျှ တွေ့ မြင်လို၍၊ မတွေ့မမြင်ရသောအချိန်ကာလ ရောက်လိမ့်မည်။
23 ೨೩ ಜನರು ನಿಮಗೆ, ‘ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ’ ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ.
၂၃ဤအရပ်၌ကြည့်ပါ။ ထိုအရပ်၌ကြည့်ပါဟု သင်တို့အားပြောဆိုသော်လည်း မလိုက်မသွားကြနှင့်။
24 ೨೪ ಏಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು.
၂၄ကောင်းကင်တဘက်မှ ပြက်သောလျှပ်စစ်သည် ကောင်းကင်အနှံ့အပြား ထွန်းလင်းသကဲ့သို့၊ လူသား သည် မိမိနေ့ရက်၌ ဖြစ်တော်မူလတံ့။
25 ೨೫ ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಸಂತತಿಯಿಂದ ತಿರಸ್ಕರಿಸಲ್ಪಡಬೇಕು.
၂၅ထိုသို့မဖြစ်မှီ သူသည် များစွာသောဆင်းရဲဒုက္ခကို၎င်း၊ ယခုလူမျိုး၏ ငြင်းပယ်ခြင်းကို၎င်း ခံရမည်။
26 ೨೬ ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿನಗಳಲ್ಲಿಯೂ ನಡೆಯುವುದು.
၂၆နောဧလက်ထက်၌ဖြစ်သကဲ့သို့ လူသားလက်ထက်၌ ဖြစ်လိမ့်မည်။
27 ೨೭ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.
၂၇နောဧသည် သင်္ဘောထဲသို့ဝင်၍၊ ရေလွှမ်းမိုးခြင်းဖြစ်သဖြင့် လူခပ်သိမ်းတို့ကို သုတ်သင်ပယ်ရှင်းသည် နေ့တိုင်အောင် လူများတို့သည် စားသောက်လျက်၊ ထိမ်းမြားစုံဘက်လျက်နေကြ၏။
28 ೨೮ ಮತ್ತು ಲೋಟನ ದಿನಗಳಲ್ಲಿ ನಡೆದ ಪ್ರಕಾರ ನಡೆಯುವುದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರಾಟಮಾಡುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.
၂၈ထိုနည်းတူ၊ လောတလက်ထက်၌ လူများတို့သည် စားသောက်ရောင်းဝယ်လျက်၊ စိုက်ပျိုးလျက်၊ အိမ် ဆောက်လျက်နေသကဲ့သို့၎င်း၊
29 ೨೯ ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿನದಲ್ಲಿ, ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು.
၂၉လောတသည် သောဒုံမြို့မှထွက်သောနေ့၌ ကောင်းကင်မှ ကန့်နှင့်ရောသောမီးမိုဃ်းရွာ၍ ထိုလူ အပေါင်းတို့ကို သုတ်သင်ပယ်ရှင်းသကဲ့သို့၎င်း၊
30 ೩೦ ಮನುಷ್ಯಕುಮಾರನು ಪ್ರತ್ಯಕ್ಷವಾಗುವ ದಿನದಲ್ಲಿ ಅದೇ ರೀತಿಯಾಗಿ ಇರುವುದು.
၃၀လူသားပေါ်ထွန်းသောနေ့၌ ဖြစ်လိမ့်မည်။
31 ೩೧ ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು. ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು.
၃၁ထိုနေ့ရက်၌ အိမ်မိုးပေါ်မှာရှိသောသူသည် မိမိ အိမ်ထဲမှာရှိသောဥစ္စာကို ယူခြင်းငှါ မဆင်းစေနှင့်။ ထိုအတူ၊ လယ်၌ရှိသောသူသည် နောက်သို့လှည့်၍ မပြန်လာစေနှင့်။
32 ೩೨ ಲೋಟನ ಹೆಂಡತಿಯನ್ನು ನೆನಪಿಗೆ ತಂದುಕೊಳ್ಳಿರಿ.
၃၂လောတ၏မယားကို အောက်မေ့ကြလော့။
33 ೩೩ ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಪ್ರಾಣವನ್ನು ಕಳೆದುಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.
၃၃အကြင်သူသည် မိမိအသက်ကို ကယ်ဆယ်ခြင်းငှါရှာကြံ၏။ ထိုသူသည် အသက်ရှုံးလိမ့်မည်။ အကြင်သူသည် အသက်ရှုံး၏။ ထိုသူသည် မိမိအသက်ကို ကယ်ဆယ်လိမ့်မည်။
34 ೩೪ ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು. ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಕೈ ಬಿಡಲ್ಪಡುವನು.
၃၄ငါဆိုသည်ကား၊ ထိုနေ့ညဉ့်တွင် အိပ်ရာတခု၌ ရှိသောသူနှစ်ယောက်တို့တွင် တယောက်ကို သိမ်းယူ၍ တယောက်မူကား နေရစ်ရလတံ့။
35 ೩೫ ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು. ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.”
၃၅ကြိတ်ဆုံကြိတ်သောသူနှစ်ယောက်တို့တွင် တယောက်ကိုသိမ်းယူ၍ တယောက်မူကား နေရစ်ရလတံ့။
36 ೩೬ “ಹೊಲದಲ್ಲಿ ಇಬ್ಬರಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು” ಅಂದನು.
၃၆လယ်၌ရှိသော သူနှစ်ယောက်တို့တွင် တယောက်ကို သိမ်းယူ၍ တယောက်မူကား နေရစ်ရလတံ့ဟု မိန့်တော်မူလျှင်၊
37 ೩೭ ಈ ಮಾತಿಗೆ ಶಿಷ್ಯರು, “ಕರ್ತನೇ, ಅದು ಎಲ್ಲಿ ಆಗುವುದು?” ಎಂದು ಕೇಳಲು ಆತನು ಅವರಿಗೆ, “ಹೆಣ ಎಲ್ಲಿಯೋ ಅಲ್ಲಿಯೇ ರಣಹದ್ದುಗಳು ಬಂದು ಸೇರುವವು” ಎಂದು ಉತ್ತರಕೊಟ್ಟನು.
၃၇သခင်၊ အဘယ်အရပ်၌ ထိုသို့ဖြစ်ပမည်နည်းဟု မေးလျှောက်ကြသော်၊ အသေကောင်ရှိရာအရပ်၌ ရွှေ လင်းတတို့သည် စုဝေးကြလတံ့ဟု မိန့်တော်မူ၏။

< ಲೂಕನು 17 >