< ಲೂಕನು 20 >

1 ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು,
Καὶ ἐγένετο ἐν μιᾷ τῶν ἡμερῶν ἐκείνων, διδάσκοντος αὐτοῦ τὸν λαὸν ἐν τῷ ἱερῷ καὶ εὐαγγελιζομένου, ἐπέστησαν οἱ ἱερεῖς καὶ οἱ γραμματεῖς σὺν τοῖς πρεσβυτέροις,
2 “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ಹೇಳು” ಎಂದು ಆತನನ್ನು ಕೇಳಲು,
καὶ εἶπον πρὸς αὐτόν, λέγοντες, Εἰπὲ ἡμῖν, ἐν ποίᾳ ἐξουσίᾳ ταῦτα ποιεῖς, ἢ τίς ἐστιν ὁ δούς σοι τὴν ἐξουσίαν ταύτην;
3 ಯೇಸು ಅವರಿಗೆ, “ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ನನಗೆ ಹೇಳಿರಿ.
Ἀποκριθεὶς δὲ εἶπε πρὸς αὐτούς, Ἐρωτήσω ὑμᾶς κἀγὼ ἕνα λόγον, καὶ εἴπατέ μοι·
4 ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಎಂದು ಅವರನ್ನು ಕೇಳಿದನು.
Τὸ βάπτισμα Ἰωάννου ἐξ οὐρανοῦ ἦν, ἢ ἐξ ἀνθρώπων;
5 ಆಗ ಅವರು, “‘ಪರಲೋಕದಿಂದ ಬಂದಿತೆಂದು ನಾವು ಹೇಳಿದರೆ ಮತ್ತೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು,
Οἱ δὲ συνελογίσαντο πρὸς ἑαυτούς, λέγοντες ὅτι Ἐὰν εἴπωμεν, Ἐξ οὐρανοῦ, ἐρεῖ, Διὰ τί οὐκ ἐπιστεύσατε αὐτῷ;
6 ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು,
Ἐὰν δὲ εἴπωμεν, Ἐξ ἀνθρώπων, πᾶς ὁ λαὸς καταλιθάσει ἡμᾶς· πεπεισμένος γάρ ἐστιν Ἰωάννην προφήτην εἶναι.
7 ಅದು ಎಲ್ಲಿಂದ ಬಂದಿತೋ ನಾವರಿಯೆವು ಎಂದು ಉತ್ತರಕೊಟ್ಟರು.
Καὶ ἀπεκρίθησαν μὴ εἰδέναι πόθεν.
8 ಆಗ ಯೇಸು ಅವರಿಗೆ, “ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವುದಿಲ್ಲ” ಎಂದು ಹೇಳಿದನು.
Καὶ ὁ Ἰησοῦς εἶπεν αὐτοῖς, Οὐδὲ ἐγὼ λέγω ὑμῖν ἐν ποίᾳ ἐξουσίᾳ ταῦτα ποιῶ.
9 ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.
Ἤρξατο δὲ πρὸς τὸν λαὸν λέγειν τὴν παραβολὴν ταύτην· Ἄνθρωπος ἐφύτευσεν ἀμπελῶνα, καὶ ἐξέδοτο αὐτὸν γεωργοῖς, καὶ ἀπεδήμησε χρόνους ἱκανούς·
10 ೧೦ ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.
καὶ ἐν καιρῷ ἀπέστειλε πρὸς τοὺς γεωργοὺς δοῦλον, ἵνα ἀπὸ τοῦ καρποῦ τοῦ ἀμπελῶνος δῶσιν αὐτῷ. Οἱ δὲ γεωργοὶ δείραντες αὐτὸν ἐξαπέστειλαν κενόν.
11 ೧೧ ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
Καὶ προσέθετο πέμψαι ἕτερον δοῦλον· οἱ δὲ κἀκεῖνον δείραντες καὶ ἀτιμάσαντες ἐξαπέστειλαν κενόν.
12 ೧೨ ಆ ಮೇಲೆ ಮೂರನೆಯವನನ್ನು ಕಳುಹಿಸಲು ಅವರು ಅವನನ್ನೂ ಗಾಯಗೊಳಿಸಿ ಹೊರಕ್ಕೆ ಅಟ್ಟಿದರು.
Καὶ προσέθετο πέμψαι τρίτον· οἱ δὲ καὶ τοῦτον τραυματίσαντες ἐξέβαλον.
13 ೧೩ ಆಗ ಆ ದ್ರಾಕ್ಷಿಯ ತೋಟದ ಧಣಿಯು, ‘ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡನು.
Εἶπε δὲ ὁ κύριος τοῦ ἀμπελῶνος, Τί ποιήσω; Πέμψω τὸν υἱόν μου τὸν ἀγαπητόν· ἴσως τοῦτον ἰδόντες ἐντραπήσονται.
14 ೧೪ ಆದರೆ ಆ ಒಕ್ಕಲಿಗರು ದ್ರಾಕ್ಷಿಯ ತೋಟದ ಯಜಮಾನನ ಮಗನನ್ನು ಕಂಡು, ‘ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವುದು’ ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು,
Ἰδόντες δὲ αὐτὸν οἱ γεωργοὶ διελογίζοντο πρὸς ἑαυτούς, λέγοντες, Οὗτός ἐστιν ὁ κληρονόμος· δεῦτε, ἀποκτείνωμεν αὐτόν, ἵνα ἡμῶν γένηται ἡ κληρονομία.
15 ೧೫ ಅವನನ್ನು ದ್ರಾಕ್ಷಿಯ ತೋಟದಿಂದ ಹೊರಕ್ಕೆ ದೊಬ್ಬಿ, ಕೊಂದು ಹಾಕಿದರು. ಹಾಗಾದರೆ ದ್ರಾಕ್ಷಿಯ ತೋಟದ ಧಣಿಯು ಅವರಿಗೆ ಏನು ಮಾಡಿಯಾನು?
Καὶ ἐκβαλόντες αὐτὸν ἔξω τοῦ ἀμπελῶνος, ἀπέκτειναν. Τί οὖν ποιήσει αὐτοῖς ὁ κύριος τοῦ ἀμπελῶνος;
16 ೧೬ ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು.
Ἐλεύσεται καὶ ἀπολέσει τοὺς γεωργοὺς τούτους, καὶ δώσει τὸν ἀμπελῶνα ἄλλοις. Ἀκούσαντες δὲ εἶπον, Μὴ γένοιτο.
17 ೧೭ ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು’ ಎಂದು ಬರೆದಿರುವ ಮಾತೇನು?
Ὁ δὲ ἐμβλέψας αὐτοῖς εἶπε, Τί οὖν ἐστι τὸ γεγραμμένον τοῦτο, Λίθον ὃν ἀπεδοκίμασαν οἱ οἰκοδομοῦντες, οὗτος ἐγενήθη εἰς κεφαλὴν γωνίας;
18 ೧೮ “ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ಯಾರ ಮೇಲೆ ಬೀಳುವುದೋ ಅದು ಅವನನ್ನು ಪುಡಿಪುಡಿ ಮಾಡುವುದು” ಅಂದನು.
Πᾶς ὁ πεσὼν ἐπ᾽ ἐκεῖνον τὸν λίθον συνθλασθήσεται· ἐφ᾽ ὃν δ᾽ ἂν πέσῃ, λικμήσει αὐτόν.
19 ೧೯ ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.
Καὶ ἐζήτησαν οἱ ἀρχιερεῖς καὶ οἱ γραμματεῖς ἐπιβαλεῖν ἐπ᾽ αὐτὸν τὰς χεῖρας ἐν αὐτῇ τῇ ὥρᾳ, καὶ ἐφοβήθησαν· ἔγνωσαν γὰρ ὅτι πρὸς αὐτοὺς τὴν παραβολὴν ταύτην εἶπε.
20 ೨೦ ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.
Καὶ παρατηρήσαντες ἀπέστειλαν ἐγκαθέτους, ὑποκρινομένους ἑαυτοὺς δικαίους εἶναι, ἵνα ἐπιλάβωνται αὐτοῦ λόγου, εἰς τὸ παραδοῦναι αὐτὸν τῇ ἀρχῇ καὶ τῇ ἐξουσίᾳ τοῦ ἡγεμόνος.
21 ೨೧ ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.
Καὶ ἐπηρώτησαν αὐτόν, λέγοντες, Διδάσκαλε, οἴδαμεν ὅτι ὀρθῶς λέγεις καὶ διδάσκεις· καὶ οὐ λαμβάνεις πρόσωπον, ἀλλ᾽ ἐπ᾽ ἀληθείας τὴν ὁδὸν τοῦ Θεοῦ διδάσκεις.
22 ೨೨ ಕೈಸರನಿಗೆ ಕಂದಾಯ ಕೊಡುವುದು ಸರಿಯೋ ಸರಿಯಲ್ಲವೋ?” ಎಂದು ಆತನನ್ನು ಕೇಳಿದರು.
Ἔξεστιν ἡμῖν Καίσαρι φόρον δοῦναι, ἢ οὔ;
23 ೨೩ ಯೇಸು ಅವರ ಕುಯುಕ್ತಿಯನ್ನು ಅರಿತುಕೊಂಡು,
Κατανοήσας δὲ αὐτῶν τὴν πανουργίαν, εἶπε πρὸς αὐτούς, Τί με πειράζετε;
24 ೨೪ ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು.
Ἐπιδείξατέ μοι δηνάριον· τίνος ἔχει εἰκόνα καὶ ἐπιγραφήν; Ἀποκριθέντες δὲ εἶπον, Καίσαρος.
25 ೨೫ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
Ὁ δὲ εἶπεν αὐτοῖς, Ἀπόδοτε τοίνυν τὰ Καίσαρος Καίσαρι, καὶ τὰ τοῦ Θεοῦ τῷ Θεῷ.
26 ೨೬ ಯೇಸು ಜನರ ಮುಂದೆ ಹೇಳಿದ ಮಾತಿನಲ್ಲಿ ಅವರು ಯಾವ ತಪ್ಪನ್ನೂ ಹಿಡಿಯಲಾಗದೆ, ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮನಾದರು.
Καὶ οὐκ ἴσχυσαν ἐπιλαβέσθαι αὐτοῦ ῥήματος ἐναντίον τοῦ λαοῦ· καὶ θαυμάσαντες ἐπὶ τῇ ἀποκρίσει αὐτοῦ, ἐσίγησαν.
27 ೨೭ ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ,
Προσελθόντες δέ τινες τῶν Σαδδουκαίων, οἱ ἀντιλέγοντες ἀνάστασιν μὴ εἶναι, ἐπηρώτησαν αὐτόν,
28 ೨೮ “ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.
λέγοντες, Διδάσκαλε, Μωσῆς ἔγραψεν ἡμῖν, Ἐάν τινος ἀδελφὸς ἀποθάνῃ ἔχων γυναῖκα, καὶ οὗτος ἄτεκνος ἀποθάνῃ, ἵνα λάβῃ ὁ ἀδελφὸς αὐτοῦ τὴν γυναῖκα, καὶ ἐξαναστήσῃ σπέρμα τῷ ἀδελφῷ αὐτοῦ.
29 ೨೯ ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
Ἑπτὰ οὖν ἀδελφοὶ ἦσαν· καὶ ὁ πρῶτος λαβὼν γυναῖκα, ἀπέθανεν ἄτεκνος·
30 ೩೦ ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು.
καὶ ἔλαβεν ὁ δεύτερος τὴν γυναῖκα, καὶ οὗτος ἀπέθανεν ἄτεκνος.
31 ೩೧
Καὶ ὁ τρίτος ἔλαβεν αὐτὴν ὡσαύτως. Ὡσαύτως δὲ καὶ οἱ ἑπτά· οὐ κατέλιπον τέκνα, καὶ ἀπέθανον.
32 ೩೨ ಕಡೆಯಲ್ಲಿ ಆ ಹೆಂಗಸೂ ಸತ್ತಳು.
Ὕστερον δὲ πάντων ἀπέθανε καὶ ἡ γυνή.
33 ೩೩ ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ” ಅಂದರು.
Ἐν τῇ οὖν ἀναστάσει, τίνος αὐτῶν γίνεται γυνή; Οἱ γὰρ ἑπτὰ ἔσχον αὐτὴν γυναῖκα.
34 ೩೪ ಯೇಸು ಅವರಿಗೆ, “ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ ಹಾಗೂ ಮದುವೆಮಾಡಿಕೊಡುತ್ತಾರೆ. (aiōn g165)
Καὶ ἀποκριθεὶς εἶπεν αὐτοῖς ὁ Ἰησοῦς, Οἱ υἱοὶ τοῦ αἰῶνος τούτου γαμοῦσι καὶ ἐκγαμίσκονται· (aiōn g165)
35 ೩೫ ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ. (aiōn g165)
οἱ δὲ καταξιωθέντες τοῦ αἰῶνος ἐκείνου τυχεῖν καὶ τῆς ἀναστάσεως τῆς ἐκ νεκρῶν οὔτε γαμοῦσιν οὔτε ἐκγαμίζονται· (aiōn g165)
36 ೩೬ ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಏಕೆಂದರೆ ಅವರು ದೇವದೂತರಿಗೆ ಸರಿಸಮಾನರೂ, ಪುನರುತ್ಥಾನವನ್ನು ಹೊಂದಿದವರಾಗಿವುದ್ದರಿಂದ ಅವರು ದೇವರ ಮಕ್ಕಳೂ ಆಗಿರುತ್ತಾರೆ.
οὔτε γὰρ ἀποθανεῖν ἔτι δύνανται· ἰσάγγελοι γάρ εἰσι, καὶ υἱοί εἰσι τοῦ Θεοῦ, τῆς ἀναστάσεως υἱοὶ ὄντες.
37 ೩೭ ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
Ὅτι δὲ ἐγείρονται οἱ νεκροί, καὶ Μωσῆς ἐμήνυσεν ἐπὶ τῆς βάτου, ὡς λέγει, Κύριον τὸν Θεὸν Ἀβραὰμ καὶ τὸν Θεὸν Ἰσαὰκ καὶ τὸν Θεὸν Ἰακώβ.
38 ೩೮ ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ” ಎಂದು ಹೇಳಿದನು.
Θεὸς δὲ οὐκ ἔστι νεκρῶν, ἀλλὰ ζώντων· πάντες γὰρ αὐτῷ ζῶσιν.
39 ೩೯ ಶಾಸ್ತ್ರಿಗಳಲ್ಲಿ ಕೆಲವರು, “ಬೋಧಕನೇ, ಚೆನ್ನಾಗಿ ಹೇಳಿದಿ” ಅಂದರು.
Ἀποκριθέντες δέ τινες τῶν γραμματέων εἶπον, Διδάσκαλε, καλῶς εἶπας.
40 ೪೦ ಆತನನ್ನು ಇನ್ನೇನು ಕೇಳುವುದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.
Οὐκέτι δὲ ἐτόλμων ἐπερωτᾷν αὐτὸν οὐδέν.
41 ೪೧ ಆಗ ಯೇಸು, “ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು?
Εἶπε δὲ πρὸς αὐτούς, Πῶς λέγουσι τὸν Χριστὸν υἱὸν Δαυὶδ εἶναι;
42 ೪೨ “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ.
Καὶ αὐτὸς Δαυὶδ λέγει ἐν βίβλῳ ψαλμῶν, Εἶπεν ὁ Κύριος τῷ Κυρίῳ μου, Κάθου ἐκ δεξιῶν μου,
43 ೪೩
ἕως ἂν θῶ τοὺς ἐχθρούς σου ὑποπόδιον τῶν ποδῶν σου.
44 ೪೪ “ದಾವೀದನು ಆತನನ್ನು ‘ಒಡೆಯನೆಂದು’ ಹೇಳಿದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಅವರನ್ನು ಕೇಳಿದನು.
Δαυὶδ οὖν Κύριον αὐτὸν καλεῖ, καὶ πῶς υἱὸς αὐτοῦ ἐστιν;
45 ೪೫ ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ,
Ἀκούοντος δὲ παντὸς τοῦ λαοῦ, εἶπε τοῖς μαθηταῖς αὐτοῦ,
46 ೪೬ “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ.
Προσέχετε ἀπὸ τῶν γραμματέων τῶν θελόντων περιπατεῖν ἐν στολαῖς, καὶ φιλούντων ἀσπασμοὺς ἐν ταῖς ἀγοραῖς, καὶ πρωτοκαθεδρίας ἐν ταῖς συναγωγαῖς, καὶ πρωτοκλισίας ἐν τοῖς δείπνοις·
47 ೪೭ ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು” ಅಂದನು.
οἳ κατεσθίουσι τὰς οἰκίας τῶν χηρῶν, καὶ προφάσει μακρὰ προσεύχονται. Οὗτοι λήψονται περισσότερον κρίμα.

< ಲೂಕನು 20 >