< ಲೂಕನು 8 >
1 ೧ ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ,
၁ကာလအနည်းငယ်ကြာသော်ကိုယ်တော်သည် မြို့ရွာများကိုဖြတ်ကြွလျက် ဘုရားသခင် နိုင်ငံတော်အကြောင်းသတင်းကောင်းကိုဟော ပြောတော်မူ၏။-
2 ೨ ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ, ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು,
၂တစ်ကျိပ်နှစ်ပါးသောတမန်တော်တို့သည်ကိုယ်တော် နှင့်အတူလိုက်ပါလာကြ၏။ အနာရောဂါဘေး၊ နတ်မိစ္ဆာဘေးမှကိုယ်တော်ကင်းလွတ်စေခဲ့သော အမျိုးသမီးအချို့တို့လည်းလိုက်ပါလာကြ၏။ ထိုသူတို့အနက်နတ်မိစ္ဆာခုနစ်ဖော်စွန့်ခွာသွား သောမာဂဒလမြို့သူမာရိ၊-
3 ೩ ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಸ್ವಂತ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದ್ದರು.
၃ဟေရုဒ်မင်း၏အိမ်ထောင်အုပ်ချုပ်ရေးမှူးခုဇ၏ ဇနီးယောဟန္န၊ ရှုရှန္နနှင့်အခြားအမျိုးသမီး များပါ၏။ ဤအမျိုးသမီးများသည်မိမိတို့ စရိတ်ဖြင့်ကိုယ်တော်နှင့်တပည့်တော်တို့အား လုပ်ကျွေးသမှုပြုကြ၏။
4 ೪ ಬಹುಜನರು ಗುಂಪುಗುಂಪಾಗಿ ಬೇರೆ ಬೇರೆ ಪಟ್ಟಣಗಳಿಂದ ಆತನ ಬಳಿಗೆ ಬರುತ್ತಿರಲು ಯೇಸು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನೆಂದರೆ,
၄အမြို့မြို့မှလာကြသောလူအပေါင်းတို့သည် အထံတော်တွင်စုရုံးလျက်နေကြစဉ်ကိုယ် တော်သည်ပုံဥပမာဆောင်၍၊-
5 ೫ “ಬಿತ್ತುವವನು ಬೀಜವನ್ನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು, ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು.
၅``မျိုးကြဲသူသည်မျိုးကြဲရန်ထွက်သွား၏။ မျိုးကြဲ သောအခါအချို့မျိုးစေ့များသည်လမ်းတွင်ကျ၏။ ထိုမျိုးစေ့တို့ကိုလူများကျော်နင်း၍ငှက်များ ကောက်စားကြ၏။-
6 ೬ ಬೇರೆ ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವು ಮೊಳೆತು ಬಂದರೂ ತೇವವಿಲ್ಲದ ಕಾರಣ ಒಣಗಿಹೋದವು.
၆အချို့မျိုးစေ့များသည်ကျောက်မြေပေါ်တွင်ကျ ၏။ အပင်များပေါက်ပြီးနောက်ရေမရသဖြင့် ညှိုးနွမ်းခြောက်သွေ့ကုန်၏။-
7 ೭ ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳೊಳಗೆ ಬಿದ್ದವು. ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅದುಮಿಬಿಟ್ಟವು.
၇အချို့မျိုးစေ့များသည်ဆူးတောတွင်ကျ၏။ ဆူးပင် များသည်အပင်ငယ်များနှင့်အတူကြီးထွားလာ ပြီးလျှင်ထိုအပင်ငယ်တို့ကိုလွှမ်းမိုးသွား၏။-
8 ೮ ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು, ಮೊಳೆತು, ನೂರರಷ್ಟು ಫಲವನ್ನು ಕೊಟ್ಟವು.” ಈ ಮಾತುಗಳನ್ನು ಹೇಳಿ ಆತನು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಕೂಗಿ ಹೇಳಿದನು.
၈အချို့မျိုးစေ့များကားမြေကောင်းမြေသန့်တွင်ကျ သဖြင့်အပင်ပေါက်၍အဆတစ်ရာသီးနှံများကို ဖြစ်ပွားစေ၏'' ဟုမိန့်တော်မူ၏။ ထိုနောက် ``ကြား တတ်သောနားရှိသူတို့ကြားကြကုန်လော့'' ဟု ကြွေးကြော်တော်မူ၏။
9 ೯ ಯೇಸುವಿನ ಶಿಷ್ಯರು ಈ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಿದಾಗ,
၉တပည့်တော်တို့သည်ဤပုံဥပမာ၏အနက် အဋ္ဌိပ္ပါယ်ကိုကိုယ်တော်အားမေးလျှောက်ကြ၏။-
10 ೧೦ ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.
၁၀ကိုယ်တော်က ``သင်တို့သည်ဘုရားသခင်၏ နိုင်ငံတော်နှင့်ဆိုင်သောနက်နဲသည့်အကြောင်း အရာများကိုသိနားလည်ရကြ၏။ အခြား သူတို့မူကားကြည့်လျက်နှင့်မမြင်၊ ကြားလျက် နှင့်နားမလည်၊ ပုံဥပမာများအားဖြင့်ဟောရ၏။
11 ೧೧ ಈ ಸಾಮ್ಯದ ಅರ್ಥವೇನಂದರೆ, ಆ ಬೀಜವೆಂದರೆ ದೇವರ ವಾಕ್ಯ.
၁၁``ဤပုံဥပမာ၏အနက်အဋ္ဌိပ္ပါယ်ကားဤသို့ တည်း။ မျိုးစေ့သည်ဘုရားသခင်၏နှုတ်ကပတ် တော်ကိုဆိုလို၏။-
12 ೧೨ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು.
၁၂လမ်းမြေတွင်ကျသည့်မျိုးစေ့သည်နှုတ်ကပတ် တရားတော်ကိုကြားသူများကိုဆိုလို၏။ သို့ ရာတွင်မာရ်နတ်သည်ထိုသူတို့ယုံကြည်၍ ကယ် တင်ခြင်းခံရကြမည်စိုးသဖြင့်လာ၍ သူတို့၏ စိတ်နှလုံးထဲမှနှုတ်ကပတ်တရားတော်ကို နုတ်ယူသွား၏။-
13 ೧೩ ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.
၁၃ကျောက်မြေတွင်ကျသည့်မျိုးစေ့သည်နှုတ်ကပတ် တရားတော်ကိုကြားသောအခါ ဝမ်းမြောက်စွာ ယုံကြည်ခံယူသူများကိုဆိုလိုသည်။ သို့ရာတွင် သူတို့၏စိတ်နှလုံးတွင်နှုတ်ကပတ်တော်သည် အမြစ်မစွဲ။ ကာလအနည်းငယ်သာယုံကြည် လက်ခံ၏။ သို့ရာတွင်စုံစမ်းနှောင့်ယှက်ခြင်းတွေ့ သောအခါသူတို့သည်ဖောက်ပြန်သူများ ဖြစ်ကြ၏။-
14 ೧೪ ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.
၁၄ဆူးတောတွင်ကျသည့်မျိုးစေ့ကားနှုတ်ကပတ် တရားတော်ကိုကြားပြီးနောက်စိုးရိမ်ကြောင့် ကြမှု၊ ချမ်းသာကြွယ်ဝမှု၊ ကာမဂုဏ်ခံစားမှု များကလွှမ်းမိုးသဖြင့်အောင်မြင်သောအသီး မသီးနိုင်သူများကိုဆိုလို၏။-
15 ೧೫ ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.
၁၅မြေကောင်းမြေသန့်တွင်ကျသောမျိုးစေ့မူကား နှုတ်ကပတ်တော်ကိုကြားပြီးနောက် ရိုးဖြောင့် ကောင်းမွန်သောစိတ်နှလုံးတွင်စွဲမြဲစွာခံယူ ကာအသီးသီးသူများကိုဆိုလိုသတည်း။
16 ೧೬ “ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
၁၆``ဆီမီးကိုထွန်းပြီးလျှင်တောင်းဖြင့်အုပ်ထား ခြင်း၊ ခုတင်အောက်မှာထားခြင်းကိုအဘယ်သူ မျှမပြုတတ်။ အခန်းထဲသို့ဝင်လာသူများ အလင်းကိုမြင်စေရန်ဆီမီးခုံပေါ်မှာသာ တင်ထားတတ်ကြ၏။
17 ೧೭ ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ ಮತ್ತು ಪ್ರಕಟವಾಗದೆ ಇರುವಂಥ ಒಂದು ಗುಟ್ಟೂ ಇರುವುದಿಲ್ಲ, ಅದು ಬಟ್ಟಬಯಲಾಗುವುದು.
၁၇``ကွယ်ဝှက်ထားသောအရာဟူသမျှသည်ပေါ် လာရမည်။ ဖုံးအုပ်ထားသောအရာဟူသမျှ သည်ပေါ်လွင်ထင်ရှားလာရမည်။
18 ೧೮ ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು.
၁၈``သို့ဖြစ်၍သင်တို့မည်သို့မည်ပုံကြားနာသည် ကိုသတိပြုကြလော့။ ရှိသူအားထပ်၍ပေး လိမ့်မည်။ မရှိသူထံမှရှိသည်ဟုထင်ရသော အရာရှိသမျှကိုပင်သိမ်းယူလိမ့်မည်'' ဟု မိန့်တော်မူ၏။
19 ೧೯ ಯೇಸುವಿನ ತಾಯಿಯೂ ತಮ್ಮಂದಿರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.
၁၉ကိုယ်တော်၏မယ်တော်နှင့်ညီတော်များသည် အထံတော်သို့လာကြ၏။ သို့ရာတွင်လူပရိ သတ်တိုးမပေါက်သဖြင့်ကိုယ်တော်အားတွေ့ ခွင့်မရနိုင်ကြ။-
20 ೨೦ ಜನರು ಆತನಿಗೆ, “ನಿನ್ನ ತಾಯಿಯು, ನಿನ್ನ ಸಹೋದರರು ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ” ಎಂದು ಹೇಳಿದಾಗ,
၂၀လူတို့က ``မယ်တော်နှင့်ညီတော်များသည်အရှင့် ကိုတွေ့လိုသဖြင့်အပြင်တွင်စောင့်နေကြပါ သည်'' ဟုလျှောက်ကြ၏။
21 ೨೧ ಆತನು ಅವರಿಗೆ, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ” ಎಂದು ಉತ್ತರಕೊಟ್ಟನು.
၂၁ထိုအခါကိုယ်တော်က ``ဘုရားသခင်၏နှုတ် ကပတ်တော်ကိုကြား၍လိုက်လျှောက်သူတို့ကား ငါ၏အမိ၊ ငါ၏ညီများပေတည်း'' ဟုမိန့်တော် မူ၏။
22 ೨೨ ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ, “ಸಮುದ್ರದ ಆಚೇ ದಡಕ್ಕೆ ಹೋಗೋಣ” ಎಂದು ಹೇಳಲು, ಅವರು ದೋಣಿಯನ್ನು ಸಾಗಿಸಿ ಹೊರಟರು.
၂၂တစ်နေ့သ၌ကိုယ်တော်နှင့်တပည့်တော်တို့သည် လှေပေါ်ကိုတက်ကြ၏။ ထိုနောက်ကိုယ်တော်က ``အိုင် တစ်ဖက်ကိုကူးကြကုန်အံ့'' ဟုမိန့်တော်မူသဖြင့် တပည့်တော်တို့သည်ရွက်လွှင့်ကြ၏။-
23 ೨೩ ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು, ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು.
၂၃သို့ရွက်လွှင့်ကြစဉ်ကိုယ်တော်သည်အိပ်စက်လျက် နေတော်မူ၏။ ထိုအချိန်၌အိုင်တွင်လေမုန်တိုင်း ကျသဖြင့်လှေသည်ရေနှင့်ပြည့်လုမတတ်ရှိ လေ၏။ တပည့်တော်တို့သည်ရေနစ်မည့်ဘေးနှင့် တွေ့ကြုံရကြ၏။-
24 ೨೪ ಹೀಗಿರಲಾಗಿ ಅವರು ಆತನ ಹತ್ತಿರ ಬಂದು, “ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ” ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು.
၂၄သူတို့သည်ကိုယ်တော်ကိုနှိုးပြီးလျှင် ``အရှင်၊ အရှင်၊ အကျွန်ုပ်တို့သေကြပါတော့မည်'' ဟု ဆိုကြ၏။ ကိုယ်တော်သည်အိပ်စက်ရာကထတော်မူ၍ လေနှင့်လှိုင်းများကိုဟန့်တားတော်မူသဖြင့် လေနှင့်လှိုင်းများသည်ငြိမ်သက်သွားလေ၏။-
25 ೨೫ ತರುವಾಯ ಆತನು, “ನಿಮ್ಮ ನಂಬಿಕೆ ಎಲ್ಲಿ?” ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, “ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?” ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು.
၂၅ကိုယ်တော်က ``သင်တို့သည်ယုံကြည်ခြင်း မရှိကြသလော'' ဟုတပည့်တော်တို့အား မေးတော်မူ၏။ တပည့်တော်တို့သည်ကြောက်ရွံ့အံ့သြလျက် ``ဤ သူကားအဘယ်သူနည်း။ လေနှင့်လှိုင်းများကို ပင်အမိန့်ပေး၍သူတို့သည်လိုက်နာကြပါ သည်တကား'' ဟုအချင်းချင်းပြောဆိုကြ၏။
26 ೨೬ ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಯನ್ನು ತಲುಪಿದರು.
၂၆ကိုယ်တော်နှင့်တပည့်တော်တို့သည်ဂါရစနယ် သို့ရွက်လွှင့်ကြ၏။ ဂါရစသည်ဂါလိလဲပြည် အိုင်တစ်ဖက်ကမ်းတွင်ရှိ၏။-
27 ೨೭ ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.
၂၇ကိုယ်တော်သည်ကမ်းပေါ်သို့တက်သောအခါ မြို့သားတစ်ဦးသည်ကိုယ်တော်ကိုလာရောက် တွေ့ဆုံ၏။ ထိုသူကိုနတ်မိစ္ဆာပူးကပ်နေသည် မှာကာလကြာလေပြီ။ သူသည်အဝတ်ကို မဝတ်၊ အိမ်တွင်လည်းမနေ၊ သင်္ချိုင်းဂူများ တွင်သာနေ၏။-
28 ೨೮ ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.
၂၈သခင်ယေရှုကိုမြင်လျှင်သူသည်အော်ဟစ်ပြီး လျှင်ရှေ့တော်မှာပျပ်ဝပ်လျက် ``အမြင့်မြတ်ဆုံး သောဘုရား၏သားတော်ယေရှု၊ အရှင်သည် အကျွန်ုပ်အားညှဉ်းဆဲတော်မမူပါနှင့်'' ဟု ကျယ်စွာလျှောက်ထား၏။-
29 ೨೯ ಏಕೆಂದರೆ, ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ನಿರ್ಜನ ಪ್ರದೇಶಗಳಿಗೆ ಓಡಿಸುತ್ತಿತ್ತು.
၂၉သို့လျှောက်ထားရသည့်အကြောင်းမှာကိုယ်တော် သည်ညစ်ညမ်းသောနတ်အားထိုသူ၏အထဲမှ ထွက်ခဲ့ရန်အမိန့်ပေးလိုက်သောကြောင့်ဖြစ်၏။ နတ်မိစ္ဆာသည်ထိုသူကိုကြိမ်ဖန်များစွာပူးကပ် ခဲ့၏။ သူ၏ခြေလက်တို့ကိုသံကြိုးများဖြင့် ချည်နှောင်ဖမ်းချုပ်စောင့်ကြပ်ထားသော်လည်း သူသည်သံကြိုးများကိုချိုးဖြတ်၍တော ကန္တာရသို့ထွက်ပြေးတတ်၏။
30 ೩೦ ಯೇಸುವು ಅವನಿಗೆ, “ನಿನ್ನ ಹೆಸರೇನೆಂದು?” ಕೇಳಲು ಅವನು, “ನನ್ನ ಹೆಸರು ದಂಡು” ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು.
၃၀သခင်ယေရှုကနတ်မိစ္ဆာအား ``သင့်နာမည် ကားအဘယ်နည်း'' ဟုမေးတော်မူ၏။ ``အကျွန်ုပ်နာမည်မှာလေဂေါင်ဖြစ်ပါသည်'' ဟု ပြန်၍လျှောက်၏။ ဤသို့လျှောက်ရသည့်အကြောင်း မှာထိုသူအားနတ်မိစ္ဆာများစွာပူးကပ်နေသော ကြောင့်ဖြစ်၏။-
31 ೩೧ ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು. (Abyssos )
၃၁နတ်မိစ္ဆာတို့သည် ``အကျွန်ုပ်တို့အားတွင်းနက်ကြီး ထဲသို့လားစေရန်အမိန့်ပေးတော်မမူပါနှင့်'' ဟုတောင်းပန်ကြ၏။ (Abyssos )
32 ೩೨ ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು, ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು. ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು,
၃၂ထိုအချိန်၌ဝက်အုပ်ကြီးတစ်အုပ်သည်တောင်ကုန်း ပေါ်တွင်ကျက်စားလျက်ရှိ၏။ နတ်မိစ္ဆာများသည် ထိုဝက်များကိုပူးဝင်ခွင့်ပြုရန်ကိုယ်တော်အား တောင်းပန်ကြ၏။-
33 ೩೩ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು. ಆ ಹಂದಿಗಳು ಉಗ್ರವಾಗಿ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು.
၃၃ကိုယ်တော်ခွင့်ပြုတော်မူသဖြင့်နတ်မိစ္ဆာများသည် လူမှခွာ၍ဝက်များကိုပူးဝင်ကြ၏။ ထိုအခါ ဝက်အုပ်တစ်အုပ်လုံးသည်အိုင်ကမ်းစောက်ကို တစ်ဟုန်တည်းပြေးဆင်းပြီးလျှင်ရေနစ်သေ ဆုံးကြကုန်၏။
34 ೩೪ ಮೇಯಿಸುವವರು ನಡೆದದ್ದನ್ನು ಕಂಡು ಓಡಿ ಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ಅದನ್ನು ತಿಳಿಸಲು,
၃၄ဤသို့ဖြစ်ပျက်သည့်အခြင်းအရာကိုဝက်ထိန်း တို့မြင်သောအခါထွက်ပြေးကြ၏။ သူတို့သည် မြို့နှင့်ကျေးလက်တောရွာများတွင်ထိုအဖြစ် အပျက်အကြောင်းကိုအနှံ့အပြားပြောကြား ကြ၏။-
35 ೩೫ ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.
၃၅လူတို့သည်ထိုအဖြစ်အပျက်ကိုကြည့်ရန်လာ ကြ၏။ သခင်ယေရှု၏ထံတော်သို့ရောက်ကြသော် နတ်မိစ္ဆာများစွန့်ခွာသွားသူသည်အဝတ်ဝတ် လျက် သခင်ယေရှု၏ခြေတော်ရင်းမှာအကောင်း ပကတိထိုင်လျက်နေသည်ကိုမြင်ကြလျှင် ကြောက်ရွံ့ကြ၏။-
36 ೩೬ ನಡೆದ ಸಂಗತಿಯನ್ನು ನೋಡಿದವರು ಆ ದೆವ್ವಹಿಡಿದಿದ್ದವನಿಗೆ ಬಿಡುಗಡೆಯಾದ ರೀತಿಯನ್ನು ಅವರಿಗೆ ತಿಳಿಸಲು,
၃၆မျက်မြင်သက်သေများကလည်းထိုသူနတ်မိစ္ဆာ ဘေးမှကင်းလွတ်လာပုံကိုလူတို့အားပြောပြ ကြ၏။-
37 ೩೭ ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.
၃၇ထိုအခါဂါရစနယ်ကလူအပေါင်းတို့ သည်လွန်စွာကြောက်လန့်ကြသဖြင့် မိမိတို့ အရပ်မှထွက်ခွာသွားတော်မူပါရန်ကိုယ်တော် အားတောင်းပန်ကြ၏။ သို့ဖြစ်၍ကိုယ်တော်သည် လှေပေါ်သို့တက်၍ထိုအရပ်မှထွက်ခွာတော် မူ၏။-
38 ೩೮ ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು, ನಾನು ನಿನ್ನ ಜೊತೆಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ,
၃၈နတ်မိစ္ဆာများစွန့်ခွာသွားသူသည်မိမိအား ကိုယ်တော်နှင့်အတူလိုက်ခွင့်ပြုရန်ပန်ကြား၏။-
39 ೩೯ ಆತನು, “ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಏನೇನು ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ನಿನ್ನವರಿಗೆ ವಿವರವಾಗಿ ಹೇಳು” ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು.
၃၉သို့ရာတွင်ကိုယ်တော်က ``အိမ်သို့ပြန်၍ဘုရား သခင်သည် သင့်အားမည်မျှကျေးဇူးပြုတော် မူကြောင်းကိုပြောကြားလော့'' ဟုမိန့်တော်မူ၏။ ထိုသူသည်အထံတော်မှထွက်သွားပြီးလျှင် မိမိအားသခင်ယေရှုမည်သို့ကျေးဇူးပြု တော်မူကြောင်းကိုတစ်မြို့လုံးအနှံ့အပြား ပြောကြားလေသည်။
40 ೪೦ ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನಿಗಾಗಿ ಕಾಯುತ್ತಿದ್ದು ಅವನನ್ನು ಸಂತೋಷದಿಂದ ಸ್ವೀಕರಿಸಿದರು.
၄၀သခင်ယေရှုပြန်လည်ကြွလာတော်မူသောအခါ လူပရိသတ်တို့သည်ကိုယ်တော်ကိုစောင့်မျှော်နေ ကြသည့်အလျောက်ခရီးဦးကြိုပြုကြ၏။-
41 ೪೧ ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರ್ಷದವಳಾದ ಅವನ ಒಬ್ಬಳೇ ಮಗಳು ಸಾಯುವ ಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನಸಮೂಹವು ಸುತ್ತಲಿನಿಂದಲೂ ಆತನನ್ನು ನೂಕಾಡುತ್ತಿತ್ತು.
၄၁ထိုအခါယာဣရုဆိုသူသည်ထံတော်သို့ရောက် လာ၏။ သူသည်တရားဇရပ်အုပ်ချုပ်ရေးမှူးဖြစ် ၏။ ကိုယ်တော်၏ခြေတော်ရင်းမှာပျပ်ဝပ်ကာသူ ၏အိမ်သို့ကြွတော်မူရန် ကိုယ်တော်အားတောင်း ပန်၏။-
၄၂ဤသို့တောင်းပန်ရသည့်အကြောင်းမှာသူ၏ တစ်ဦးတည်းသောတစ်ဆယ့်နှစ်နှစ်အရွယ် သမီးသည်သေအံ့ဆဲဆဲရှိနေသောကြောင့် ဖြစ်၏။ ကိုယ်တော်သည်သူနှင့်အတူလိုက်သွားသော အခါလူအပေါင်းတို့သည်ကိုယ်တော်ကို တိုးဝှေ့မိကြ၏။-
43 ೪೩ ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು.
၄၃အမျိုးသမီးတစ်ယောက်သည်တစ်ဆယ့်နှစ် နှစ်ပတ်လုံးသွေးသွန်ရောဂါစွဲခဲ့၏။ မိမိတွင် ရှိသမျှကြေးငွေများကိုအကုန်ခံ၍ဆေး ဆရာများနှင့်ကုသသော်လည်း အဘယ် ဆေးဆရာမျှရောဂါကိုမပျောက်စေနိုင်။-
44 ೪೪ ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು.
၄၄ထိုအမျိုးသမီးသည်ကိုယ်တော်၏နောက်က ကပ်လိုက်လျက်အဝတ်တော်ပန်းဖွားကိုတို့ထိ လေ၏။ ထိုခဏ၌သွေးသွန်နာပျောက်သွား၏။-
45 ೪೫ ಆಗ ಯೇಸುವು, “ನನ್ನನ್ನು ಮುಟ್ಟಿದವರಾರು?” ಎಂದು ಕೇಳಲು ಎಲ್ಲರೂ, ನಾನಲ್ಲ, ನಾನಲ್ಲ ಅನ್ನಲು ಪೇತ್ರನು, “ಗುರುವೇ, ಎಷ್ಟೋ ಜನರು ನಿನ್ನನ್ನು ಮೈಮೇಲೆ ಬೀಳುತ್ತಾ ನೂಕುತ್ತಿದ್ದಾರಲ್ಲಾ” ಅಂದನು.
၄၅သခင်ယေရှုက ``ငါ့ကိုအဘယ်သူတို့ထိ သနည်း'' ဟုမေးမြန်းတော်မူ၏။ လူအပေါင်း တို့ကမိမိတို့မတို့မထိရကြကြောင်းငြင်း ဆိုကြသောအခါပေတရုနှင့်အပေါင်းအဖော် များက ``အရှင်၊ လူပရိသတ်တို့သည်အရှင့်ကို တိုးဝှေ့နေကြပါ၏။ သို့ပါလျက်ငါ့ကိုအဘယ် သူတို့ထိသနည်းဟုအရှင်မိန့်တော်မူပါ သလော'' ဟုမေးလျှောက်ကြ၏။
46 ೪೬ ಆದರೆ ಯೇಸುವು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು” ಅಂದಾಗ,
၄၆သို့ရာတွင်သခင်ယေရှုက ``လူတစ်စုံတစ်ယောက် သည်အမှန်ပင်ငါ့ကိုတို့ထိလေပြီ။ ငါ၏ကိုယ်မှ တန်ခိုးထွက်သွားသည်ကိုငါသိ၏'' ဟုမိန့်တော် မူ၏။-
47 ೪೭ ಆ ಹೆಂಗಸು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಯೇಸುವಿಗೆ ಅಡ್ಡಬಿದ್ದು ತಾನು ಇಂಥ ಕಾರಣದಿಂದ ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂದೂ ಎಲ್ಲರ ಮುಂದೆ ತಿಳಿಸಿದಳು.
၄၇အမျိုးသမီးသည်မိမိပြုသည့်အမှုပေါ်သွား ကြောင်းသိရှိသောအခါ တုန်လှုပ်လျက်ရှေ့တော် သို့လာ၍ပျပ်ဝပ်၏။ ထိုနောက်ကိုယ်တော်အား အဘယ်ကြောင့်တို့ထိရသည့်အကြောင်းကို လည်းကောင်း၊ ချက်ချင်းပင်မိမိ၏ရောဂါ ပျောက်ကင်းသွားကြောင်းကိုလည်းကောင်းလူ အပေါင်းတို့၏ရှေ့တွင်လျှောက်၏။-
48 ೪೮ ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು” ಎಂದು ಹೇಳಿದನು.
၄၈ကိုယ်တော်က ``ငါ့သမီး၊ သင်၏ယုံကြည်ခြင်း သည်သင့်ကိုကျန်းမာစေပြီ။ စိတ်ချမ်းသာစွာ သွားပေတော့'' ဟုမိန့်တော်မူ၏။
49 ೪೯ ಆತನು ಇನ್ನೂ ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವನೊಬ್ಬನು ಬಂದು, “ನಿನ್ನ ಮಗಳು ಸತ್ತುಹೋದಳು, ಗುರುವಿಗೆ ತೊಂದರೆ ಕೊಡಬೇಡ” ಅಂದನು.
၄၉ယင်းသို့ကိုယ်တော်မိန့်တော်မူချိန်၌တရားဇရပ် အုပ်ချုပ်ရေးမှူး၏အိမ်မှလူတစ်ယောက်ရောက်လာ ၏။ ``အရှင်၏သမီးသေဆုံးပါပြီ။ အဘယ်ကြောင့် ဆရာတော်ကိုနှောင့်ယှက်ပါတော့မည်နည်း'' ဟု ပြော၏။
50 ೫೦ ಆದರೆ ಯೇಸು ಅದನ್ನು ಕೇಳಿ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು” ಎಂದು ಉತ್ತರಕೊಟ್ಟನು.
၅၀ထိုစကားကိုသခင်ယေရှုကြားတော်မူလျှင် တရားဇရပ်မှူးအား ``မစိုးရိမ်နှင့်။ သင့်မှာ ယုံကြည်ခြင်းသာရှိစေလော့။ သူငယ်မသည် ကျန်းမာလာပေအံ့'' ဟုမိန့်တော်မူ၏။
51 ೫೧ ತರುವಾಯ ಆತನು ಆ ಅಧಿಕಾರಿಯ ಮನೆಗೆ ಹೋಗಿ, ಪೇತ್ರ ಯೋಹಾನ ಯಾಕೋಬ ಮತ್ತು ಆ ಹುಡುಗಿಯ ತಂದೆತಾಯಿಯರನ್ನು ಹೊರತು ಬೇರೆ ಯಾರನ್ನೂ ತನ್ನ ಸಂಗಡ ಒಳಕ್ಕೆ ಬರಗೊಡಿಸಲಿಲ್ಲ.
၅၁ကိုယ်တော်သည်တရားဇရပ်မှူး၏အိမ်သို့ဝင် သောအခါ ပေတရု၊ ယာကုပ်၊ ယောဟန်နှင့်သူငယ် မ၏မိဘများမှတစ်ပါးမည်သူကိုမျှ မိမိ နှင့်အတူဝင်စေတော်မမူ။-
52 ೫೨ ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಡಿದುಕೊಳ್ಳುತ್ತಾ ಇದ್ದರು. ಯೇಸು ಅವರಿಗೆ, “ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ” ಅನ್ನಲು,
၅၂သူငယ်မသေသည့်အတွက် လူအပေါင်းတို့သည် ငိုကြွေးမြည်တမ်းလျက်နေကြ၏။ ကိုယ်တော် က ``မငိုကြွေးကြနှင့်။ သူငယ်မသေသည် မဟုတ်၊ အိပ်လျက်နေ၏'' ဟုမိန့်တော်မူ၏။
53 ೫೩ ಜನರು ಆಕೆ ಸತ್ತಳೆಂದು ತಿಳಿದುಕೊಂಡಿದ್ದರಿಂದ ಆತನನ್ನು ಪರಿಹಾಸ್ಯಮಾಡಿದರು.
၅၃ထိုအခါလူတို့သည်သူငယ်မသေဆုံးပြီး ကြောင်းကိုသိသဖြင့်ကိုယ်တော်ကိုပြောင်လှောင် ကြ၏။-
54 ೫೪ ಆದರೆ ಆತನು ಆಕೆಯ ಕೈ ಹಿಡಿದು, “ಮಗಳೇ, ಎದ್ದೇಳು” ಎಂದು ಕೂಗಿ ಹೇಳಿದನು.
၅၄ကိုယ်တော်သည်သူငယ်မ၏လက်ကိုဆုပ်ကိုင် ကာ ``ကလေးမ၊ ထလော့'' ဟုမိန့်တော်မူ၏။-
55 ೫೫ ಆಕೆಯ ಆತ್ಮವು ತಿರುಗಿ ಬಂದು ತಕ್ಷಣವೇ ಆಕೆ ಎದ್ದಳು. ತರುವಾಯ ಆತನು, ಈಕೆಗೆ ಊಟಮಾಡಿಸಿರಿ ಎಂದು ಅಪ್ಪಣೆಕೊಟ್ಟನು.
၅၅သူငယ်မသည်အသက်ပြန်ဝင်လာ၍ချက်ချင်း ပင်ထလေ၏။ ကိုယ်တော်သည်သူငယ်မအား အစားအစာကျွေးမွေးရန်မိန့်မှာတော်မူ၏။-
56 ೫೬ ಆಕೆಯ ತಂದೆತಾಯಿಗಳು ಬೆರಗಾದರು. ಆತನು, ಈ ನಡೆದ ಸಂಗತಿಯನ್ನು ಯಾರಿಗೂ ತಿಳಿಸಬೇಡಿರೆಂದು ಅವರಿಗೆ ಆಜ್ಞಾಪಿಸಿದನು.
၅၆မိဘတို့သည်များစွာအံ့သြကြ၏။ သို့ရာတွင် ကိုယ်တော်သည်ဤအဖြစ်အပျက်အကြောင်းကို မည်သူအားမျှမပြောရန်သူတို့အားပညတ် တော်မူ၏။