< ಮಾರ್ಕನು 11 >

1 ಅವರು ಯೆರೂಸಲೇಮಿಗೆ ಸಮೀಪಿಸಿ ಬೆತ್ಫಗೆ ಹಾಗೂ ಬೇಥಾನ್ಯದ ಬಳಿಯಲ್ಲಿರುವ ಎಣ್ಣೆಮರಗಳ ಗುಡ್ಡಕ್ಕೆ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು,
Καὶ ὅτε ἐγγίζουσιν εἰς Ἱεροσόλυμα, εἰς Βηθφαγὴ καὶ Βηθανίαν πρὸς τὸ Ὄρος τῶν Ἐλαιῶν, ἀποστέλλει δύο τῶν μαθητῶν αὐτοῦ,
2 “ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಗೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ; ಇದುವರೆಗೂ ಅದರ ಮೇಲೆ ಯಾರೂ ಸವಾರಿ ಮಾಡಿಲ್ಲ; ಅದನ್ನು ಬಿಚ್ಚಿ ಇಲ್ಲಿಗೆ ತನ್ನಿರಿ.
καὶ λέγει αὐτοῖς, “Ὑπάγετε εἰς τὴν κώμην τὴν κατέναντι ὑμῶν, καὶ εὐθὺς εἰσπορευόμενοι εἰς αὐτὴν, εὑρήσετε πῶλον δεδεμένον ἐφʼ ὃν οὐδεὶς ἀνθρώπων οὔπω ἐκάθισεν· λύσατε αὐτὸν καὶ φέρετε.
3 ಯಾರಾದರೂ ನಿಮ್ಮನ್ನು, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಇದು ಕರ್ತನಿಗೆ ಅಗತ್ಯವಾಗಿದೆ’ ಅನ್ನಿರಿ, ಅವರು ಬೇಗನೆ ಅದನ್ನು ಕಳುಹಿಸಿಕೊಡುವರು” ಎಂದು ಹೇಳಿ ಕಳುಹಿಸಿದನು.
Καὶ ἐάν τις ὑμῖν εἴπῃ, ‘Τί ποιεῖτε τοῦτο;’ Εἴπατε, ὅτι ‘Ὁ ˚Κύριος αὐτοῦ χρείαν ἔχει’, καὶ εὐθὺς αὐτὸν ἀποστέλλει πάλιν ὧδε.”
4 ಆ ಶಿಷ್ಯರು ಹೋಗಿ ಬೀದಿಯಲ್ಲಿ ಹೊರಗೆ ಬಾಗಿಲಿನ ಹತ್ತಿರ ಕತ್ತೆಮರಿಯನ್ನು ಕಟ್ಟಿರುವುದನ್ನು ಕಂಡು ಅದನ್ನು ಬಿಚ್ಚಿದರು.
Καὶ ἀπῆλθον, καὶ εὗρον πῶλον δεδεμένον πρὸς τὴν θύραν ἔξω ἐπὶ τοῦ ἀμφόδου, καὶ λύουσιν αὐτόν.
5 ಅಲ್ಲಿ ನಿಂತಿದ್ದವರಲ್ಲಿ ಕೆಲವರು, “ಈ ಕತ್ತೆಮರಿಯನ್ನು ಏಕೆ ಬಿಚ್ಚುತ್ತೀರಿ?” ಎಂದು ಅವರನ್ನು ಕೇಳಿದರು.
Καί τινες τῶν ἐκεῖ ἑστηκότων ἔλεγον αὐτοῖς, “Τί ποιεῖτε λύοντες τὸν πῶλον;”
6 ಅದಕ್ಕೆ ಯೇಸು ಹೇಳಿದಂತೆಯೇ ಅವರು ಹೇಳಿದರು ಆಗ ಜನರು ಅದನ್ನು ತೆಗೆದುಕೊಂಡು ಹೋಗಲು ಬಿಟ್ಟುಕೊಟ್ಟರು.
Οἱ δὲ εἶπον αὐτοῖς καθὼς εἶπεν ὁ ˚Ἰησοῦς, καὶ ἀφῆκαν αὐτούς.
7 ಶಿಷ್ಯರು ಆ ಕತ್ತೆಮರಿಯನ್ನು ಯೇಸುವಿನ ಬಳಿಗೆ ತಂದು ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಕಲು ಆತನು ಅದನ್ನು ಹತ್ತಿ ಕುಳಿತುಕೊಂಡನು.
Καὶ ἄγουσιν τὸν πῶλον πρὸς τὸν ˚Ἰησοῦν, καὶ ἐπιβάλλουσιν αὐτῷ τὰ ἱμάτια αὐτῶν, καὶ ἐκάθισεν ἐπʼ αὐτόν.
8 ಆಗ ಅನೇಕರು ತಮ್ಮ ಮೇಲಂಗಿಗಳನ್ನು ದಾರಿಯಲ್ಲಿ ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಳೆಯ ರೆಂಬೆಗಳನ್ನು ಕಡಿದು, ತಂದು ಹಾಸಿದರು.
Καὶ πολλοὶ τὰ ἱμάτια αὐτῶν ἔστρωσαν εἰς τὴν ὁδόν, ἄλλοι δὲ στιβάδας κόψαντες ἐκ τῶν ἀγρῶν.
9 ಯೇಸುವಿನ ಹಿಂದೆ ಹಾಗೂ ಮುಂದೆ ಹೋಗುತ್ತಿದ್ದವರು: “ಹೊಸನ್ನ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ;
Καὶ οἱ προάγοντες καὶ οἱ ἀκολουθοῦντες ἔκραζον, “Ὡσαννά! ‘Εὐλογημένος ὁ ἐρχόμενος ἐν ὀνόματι ˚Κυρίου!’
10 ೧೦ ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದವುಂಟಾಗಲಿ; ಮೇಲಣ ಲೋಕಗಳಲ್ಲಿ ಹೊಸನ್ನ” ಎಂದು ಆರ್ಭಟಿಸಿದರು.
Εὐλογημένη ἡ ἐρχομένη βασιλεία τοῦ πατρὸς ἡμῶν, Δαυίδ! Ὡσαννὰ ἐν τοῖς ὑψίστοις!”
11 ೧೧ ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯದೊಳಗೆ ಹೋಗಿ ಸುತ್ತಲೂ ನೋಡಿದನು, ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಬೇಥಾನ್ಯಕ್ಕೆ ಹೊರಟು ಹೋದನು.
Καὶ εἰσῆλθεν εἰς Ἱεροσόλυμα, εἰς τὸ ἱερόν· καὶ περιβλεψάμενος πάντα, ὀψίας ἤδη οὔσης τῆς ὥρας, ἐξῆλθεν εἰς Βηθανίαν μετὰ τῶν δώδεκα.
12 ೧೨ ಮರುದಿನ ಅವರು ಬೇಥಾನ್ಯವನ್ನು ಬಿಟ್ಟು ಬರುತ್ತಿರುವಾಗ ಆತನಿಗೆ ಹಸಿವಾಯಿತು.
Καὶ τῇ ἐπαύριον, ἐξελθόντων αὐτῶν ἀπὸ Βηθανίας, ἐπείνασεν.
13 ೧೩ ಎಲೆಗಳಿದ್ದ ಅಂಜೂರದ ಮರವನ್ನು ದೂರದಿಂದ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಏಕೆಂದರೆ ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.
Καὶ ἰδὼν συκῆν ἀπὸ μακρόθεν ἔχουσαν φύλλα, ἦλθεν εἰ ἄρα τι εὑρήσει ἐν αὐτῇ, καὶ ἐλθὼν ἐπʼ αὐτὴν, οὐδὲν εὗρεν εἰ μὴ φύλλα, ὁ γὰρ καιρὸς οὐκ ἦν σύκων.
14 ೧೪ ಆಗ ಯೇಸು ಆ ಮರಕ್ಕೆ, “ಇನ್ನೆಂದಿಗೂ ಒಬ್ಬರೂ ನಿನ್ನಲ್ಲಿ ಹಣ್ಣನ್ನು ತಿನ್ನದಿರಲಿ” ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿಸಿಕೊಂಡರು. (aiōn g165)
Καὶ ἀποκριθεὶς εἶπεν αὐτῇ, “Μηκέτι εἰς τὸν αἰῶνα, ἐκ σοῦ μηδεὶς καρπὸν φάγοι.” Καὶ ἤκουον οἱ μαθηταὶ αὐτοῦ. (aiōn g165)
15 ೧೫ ಅವರು ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುತ್ತಿದ್ದವರನ್ನೂ, ಕೊಳ್ಳುತ್ತಿದ್ದವರನ್ನೂ ಹೊರಡಿಸಿಬಿಡುವುದಕ್ಕೆ ತೊಡಗಿದನು; ನಾಣ್ಯಗಳನ್ನು ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿಹಾಕಿದನು; ಪಾರಿವಾಳಗಳನ್ನು ಮಾರುವವರ ಮಣೆಗಳನ್ನು ಉರುಳಿಸಿದನು;
Καὶ ἔρχονται εἰς Ἱεροσόλυμα, καὶ εἰσελθὼν εἰς τὸ ἱερὸν, ἤρξατο ἐκβάλλειν τοὺς πωλοῦντας καὶ τοὺς ἀγοράζοντας ἐν τῷ ἱερῷ, καὶ τὰς τραπέζας τῶν κολλυβιστῶν καὶ τὰς καθέδρας τῶν πωλούντων τὰς περιστερὰς κατέστρεψεν.
16 ೧೬ ಒಬ್ಬನನ್ನಾದರೂ ಸಾಮಾನುಗಳನ್ನು ಹೊತ್ತುಕೊಂಡು ದೇವಾಲಯದೊಳಕ್ಕೆ ಹಾದು ಹೋಗಗೊಡಿಸಲಿಲ್ಲ.
Καὶ οὐκ ἤφιεν ἵνα τις διενέγκῃ σκεῦος διὰ τοῦ ἱεροῦ.
17 ೧೭ ಮತ್ತು ಆತನು ಉಪದೇಶಮಾಡಿ, “‘ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವುದು’ ಎಂದು ಬರೆದಿದೆಯಲ್ಲಾ? ಆದರೆ‘ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ’” ಎಂದು ಹೇಳಿದನು.
Καὶ ἐδίδασκεν καὶ ἔλεγεν αὐτοῖς, “Οὐ γέγραπται, ὅτι ‘Ὁ οἶκός μου, οἶκος προσευχῆς κληθήσεται πᾶσιν τοῖς ἔθνεσιν’; Ὑμεῖς δὲ ἐποιήσατε αὐτὸν ‘σπήλαιον λῃστῶν’.”
18 ೧೮ ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.
Καὶ ἤκουσαν οἱ ἀρχιερεῖς καὶ οἱ γραμματεῖς, καὶ ἐζήτουν πῶς αὐτὸν ἀπολέσωσιν· ἐφοβοῦντο γὰρ αὐτόν, πᾶς γὰρ ὁ ὄχλος ἐξεπλήσσετο ἐπὶ τῇ διδαχῇ αὐτοῦ.
19 ೧೯ ಸಂಜೆಯಾದಾಗ ಯೇಸುವೂ, ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು.
Καὶ ὅταν ὀψὲ ἐγένετο, ἐξεπορεύοντο ἔξω τῆς πόλεως.
20 ೨೦ ಬೆಳಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು.
Καὶ παραπορευόμενοι πρωῒ, εἶδον τὴν συκῆν ἐξηραμμένην ἐκ ῥιζῶν.
21 ೨೧ ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, “ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ” ಎಂದು ಹೇಳಿದ್ದಕ್ಕೆ
Καὶ ἀναμνησθεὶς ὁ Πέτρος λέγει αὐτῷ, “Ῥαββί, ἴδε, ἡ συκῆ ἣν κατηράσω ἐξήρανται.”
22 ೨೨ ಯೇಸು ಹೇಳಿದ್ದೇನಂದರೆ, “ನಿಮಗೆ ದೇವರಲ್ಲಿ ನಂಬಿಕೆಯಿರಲಿ.
Καὶ ἀποκριθεὶς ὁ ˚Ἰησοῦς λέγει αὐτοῖς, “Ἔχετε πίστιν ˚Θεοῦ.
23 ೨೩ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.
Ἀμὴν, λέγω ὑμῖν ὅτι ὃς ἂν εἴπῃ τῷ ὄρει τούτῳ, ‘Ἄρθητι καὶ βλήθητι εἰς τὴν θάλασσαν’, καὶ μὴ διακριθῇ ἐν τῇ καρδίᾳ αὐτοῦ, ἀλλὰ πιστεύῃ ὅτι ὃ λαλεῖ γίνεται, ἔσται αὐτῷ.
24 ೨೪ ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.
Διὰ τοῦτο λέγω ὑμῖν, πάντα ὅσα προσεύχεσθε καὶ αἰτεῖσθε, πιστεύετε ὅτι ἐλάβετε, καὶ ἔσται ὑμῖν.
25 ೨೫ ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.
Καὶ ὅταν στήκητε προσευχόμενοι, ἀφίετε εἴ τι ἔχετε κατά τινος, ἵνα καὶ ὁ Πατὴρ ὑμῶν, ὁ ἐν τοῖς οὐρανοῖς, ἀφῇ ὑμῖν τὰ παραπτώματα ὑμῶν.”
26 ೨೬ ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
27 ೨೭ ಅವರು ಪುನಃ ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯದ ಆವರಣದಲ್ಲಿ ನಡೆದಾಡುತ್ತಿರಲಾಗಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ ಆತನ ಬಳಿಗೆ ಬಂದು,
Καὶ ἔρχονται πάλιν εἰς Ἱεροσόλυμα, καὶ ἐν τῷ ἱερῷ περιπατοῦντος αὐτοῦ, ἔρχονται πρὸς αὐτὸν οἱ ἀρχιερεῖς, καὶ οἱ γραμματεῖς, καὶ οἱ πρεσβύτεροι.
28 ೨೮ “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವುದಕ್ಕೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಆತನನ್ನು ಕೇಳಿದರು.
Καὶ ἔλεγον αὐτῷ, “Ἐν ποίᾳ ἐξουσίᾳ ταῦτα ποιεῖς; Ἢ τίς σοι ἔδωκεν τὴν ἐξουσίαν ταύτην, ἵνα ταῦτα ποιῇς;”
29 ೨೯ ಯೇಸು ಅವರಿಗೆ, “ನಾನೂ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನೂ ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.
Ὁ δὲ ˚Ἰησοῦς εἶπεν αὐτοῖς, “Ἐπερωτήσω ὑμᾶς κἀγὼ ἕνα λόγον, καὶ ἀποκρίθητέ μοι, καὶ ἐρῶ ὑμῖν ἐν ποίᾳ ἐξουσίᾳ ταῦτα ποιῶ.
30 ೩೦ ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಉತ್ತರಕೊಡಿರಿ ಅಂದನು.
Τὸ βάπτισμα τὸ Ἰωάννου, ἐξ οὐρανοῦ ἦν ἢ ἐξ ἀνθρώπων; Ἀποκρίθητέ μοι.”
31 ೩೧ ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ’ ಅಂದಾನು;
Καὶ διελογίζοντο πρὸς ἑαυτοὺς λέγοντες, ἐὰν εἴπωμεν, ‘Ἐξ οὐρανοῦ’, ἐρεῖ, ‘Διὰ τί οὖν οὐκ ἐπιστεύσατε αὐτῷ;’
32 ೩೨ ‘ಮನುಷ್ಯರಿಂದ ಬಂದಿತು’” ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು.
Ἀλλὰ εἴπωμεν, ‘Ἐξ ἀνθρώπων’;” (Ἐφοβοῦντο τὸν ὄχλον, ἅπαντες γὰρ εἶχον τὸν Ἰωάννην ὄντως ὅτι προφήτης ἦν.)
33 ೩೩ ಹೀಗಿರಲಾಗಿ ಅವರು, “ನಮಗೆ ಗೊತ್ತಿಲ್ಲ” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ” ಅಂದನು.
Καὶ ἀποκριθέντες τῷ ˚Ἰησοῦ λέγουσιν, “Οὐκ οἴδαμεν.” Καὶ ὁ ˚Ἰησοῦς λέγει αὐτοῖς, “Οὐδὲ ἐγὼ λέγω ὑμῖν ἐν ποίᾳ ἐξουσίᾳ ταῦτα ποιῶ.”

< ಮಾರ್ಕನು 11 >