< ಮತ್ತಾಯನು 9 >

1 ಯೇಸು ದೋಣಿಯನ್ನು ಹತ್ತಿ ಸಮುದ್ರವನ್ನು ದಾಟಿ ತನ್ನ ಊರಿಗೆ ಬಂದನು.
येशू एउटा डुङ्गाभित्र प्रवेश गर्नुभयो, पारिपट्टि जानुभयो, र आफ्नो सहरमा आइपुग्‍नुभयो ।
2 ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
हेर, तिनीहरूले उहाँकहाँ ओछ्यानमा सुतिरहेको एउटा पक्षाघातीलाई ल्याए । तिनीहरूको विश्‍वास देखेर येशूले त्यो पक्षाघात भएको व्यक्‍तिलाई भन्‍नुभयो, “छोरा आनन्दित होऊ । तिम्रा पाप क्षमा भएका छन् ।”
3 ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಾನೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.
हेर, त्यहाँका केही शास्‍त्रीहरूले तिनीहरूका माझमा यसो भने, “यो मानिसले ईश्‍वर-निन्दा गरिरहेको छ ।”
4 ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?
येशूले तिनीहरूको विचारलाई थाहा पाउनुभयो र भन्‍नुभयो, “किन तिमीहरू आफ्ना हृदयमा दुष्‍ट विचार गरिरहेका छौ?
5 ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಅನ್ನುವುದೋ?
कुन कुराचाहिँ भन्‍न सजिलो छ, ‘तिम्रा पाप क्षमा भएका छन् भन्‍न कि उठ र हिँड भन्‍न?’
6 ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಅಂದನು.
तर मानिसका पुत्रलाई पृथ्‍वीमा पाप क्षमा गर्ने अधिकार छ भन्‍ने कुरा तिमीहरूले जान्‍न सक ।” उहाँले त्यस पक्षाघातीलाई भन्‍नुभयो, “उठ, आफ्नो ओछ्यान उठाऊ र आफ्नो घर जाऊ ।”
7 ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು.
त्यसपछि त्यो मानिस उठ्यो र आफ्नो घरतर्फ गयो ।
8 ಜನರು ಇದನ್ನು ನೋಡಿ ಆಶ್ಚರ್ಯಚಕಿತರಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.
जब भिडले यो देख्यो, तिनीहरू छक्‍क परेर मानिसहरूलाई यस्तो अधिकार दिनुभएको परमेश्‍वरको प्रशंसा गरे ।
9 ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
येशू त्यहाँबाट जाँदै गर्नुहुँदा उहाँले मत्ती नाउँ गरेको व्यक्‍तिलाई देख्‍नुभयो, जो कर उठाउने ठाउँमा बसिरहेका थिए । उहाँले तिनलाई भन्‍नुभयो, “मलाई पछ्याऊ ।” तिनी उठे र उहाँको पछि लागे ।
10 ೧೦ ಅನಂತರ ಯೇಸು ಅವನ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಂಕ್ತಿಯಲ್ಲೇ ಕುಳಿತುಕೊಂಡರು.
जब येशू खाना खान घरमा बस्‍नुभयो, हेर, धेरै कर उठाउने र पापी मानिसहरूले येशू र उहाँका चेलाहरूसँगै खाना खाए ।
11 ೧೧ ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು, “ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
जब फरिसीहरूले यो देखे, तिनीहरूले उहाँका चेलाहरूलाई भने, “किन तिमीहरूका गुरु कर उठाउनेहरू र पापीहरूसँग बसेर खान्छन्?”
12 ೧೨ ಯೇಸು ಅದನ್ನು ಕೇಳಿ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು.
जब येशूले यो सुन्‍नुभयो, उहाँले भन्‍नुभयो, “शरीरमा बलियो भएकाहरूलाई वैद्यको खाँचो पर्दैन, केवल तिनीहरूलाई मात्र खाँचो हुन्छ जो बिरामी छन् ।”
13 ೧೩ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.
जाओ र यसको अर्थ के हो सिक, ‘म दया चाहन्छु, तर बलिदान होइन ।’ किनकि म, धर्मीहरूलाई पश्‍चात्ताप गर्नलाई बोलाउन आएको होइनँ, तर पापीहरूका लागि आएको हुँ ।
14 ೧೪ ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು, “ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ; ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ,
त्यसपछि बप्‍तिस्मा-दिने यूहन्‍नाका चेलाहरू उहाँकहाँ आए, र भने, “किन हामी र फरिसीहरू प्रायः उपवास बस्तछौँ, तर तपाईंका चेलाहरू उपवास बस्दैनन्?”
15 ೧೫ “ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ
येशूले तिनीहरूलाई भन्‍नुभयो, “के विवाहमा आएकाहरू, दुलहा तिनीहरूका साथमा हुँदा-हुँदै दुःखी हुन्छन् र? तर ती दिन आउनेछन्, जब दुलहा तिनीहरूबाट टाढा लगिनेछ, र तिनीहरू उपवास बस्‍नेछन् ।
16 ೧೬ ಆ ತ್ಯಾಪೆಯು ಹಳೇ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.
कसैले पनि पुरानो वस्‍त्रमा नयाँ कपडाको टुक्रा जोड्दैन, किनकि त्यो टुक्रा वस्‍त्रबाट च्यातिनेछ, र त्यहाँ झन् नराम्रो दुलो हुनेछ ।
17 ೧೭ ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವುದಲ್ಲದೆ, ಬುದ್ದಲಿಗಳು ನಾಶವಾಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಸಂರಕ್ಷಿಸಲ್ಪಡುವವು” ಎಂದು ಹೇಳಿದನು.
न त कसैले पुरानो मद्यको मशकमा नयाँ दाखमद्य राख्दछ । तिनीहरूले त्यसो गरे भने, त्यो मशक फुट्नेछ र सबै दाखमद्य पोखिनेछ, र मद्यको मशक नष्‍ट हुनेछ । त्यसको सट्टामा, तिनीहरूले नयाँ दाखमद्यलाई नयाँ मद्यको मशकमा रख्दछन्, र दुवै सुरक्षित रहन्‍छन् ।”
18 ೧೮ ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು.
जब येशूले तिनीहरूलाई यो कुरा भनिरहनुभएको थियो, हेर, एउटा अधिकारी आए र येशूलाई दण्डवत् गरे । तिनले भने, “मेरी छोरी भर्खरै मरेकी छन्, तर आएर तपाईंले तिनको शिरमाथि हात राखिदिनुहोस् र तिनी फेरि जीवित हुनेछिन् ।”
19 ೧೯ ಯೇಸು ಎದ್ದು ಆ ಅಧಿಕಾರಿಯ ಹಿಂದೆ ಹೋಗುವಾಗ ಆತನ ಶಿಷ್ಯರು ಸಹ ಆತನನ್ನು ಹಿಂಬಾಲಿಸಿದರು.
त्यसपछि येशू उठ्नुभयो र तिनको पछि लाग्‍नुभयो र उहाँका चेलाहरू पनि पछि लागे ।
20 ೨೦ ಆಗ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು,
हेर, बाह्र वर्षदेखि धेरै रगत बग्‍ने एक जना स्‍त्री येशूको पछाडि आइन्, र उहाँको वस्‍त्रको छेउ छोइन् ।
21 ೨೧ “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ” ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.
किनकि तिनले आफैँलाई यसो भनेकी थिइन्, “मैले उहाँको वस्‍त्र मात्र छोएँ भने पनि, म निको पारिनेछु ।”
22 ೨೨ ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.
तर येशू पछाडि फर्कनुभयो र तिनलाई देख्‍नुभयो, र भन्‍नुभयो “छोरी, साहस गर । तिम्रो विश्‍वासले तिमीलाई निको पारेको छ ।” अनि ती स्‍त्री तुरुन्तै निको भइन् ।
23 ೨೩ ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ,
जब येशू त्यस अधिकारीको घरमा आउनुभयो, उहाँले बाँसुरी बजाउनेहरू र भिडले ठुलो हल्ला गरिरहेका देख्‍नुभयो ।
24 ೨೪ “ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ” ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು.
उहाँले भन्‍नुभयो, “पर जाओ, किनकि यी युवती मरेकी छैनन्, तर यिनी निदाएकी छन् ।” तर तिनीहरू उहाँको गिल्ला गरेर हाँसे ।
25 ೨೫ ಜನರನ್ನು ಹೊರಕ್ಕೆ ಕಳುಹಿಸಿದ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈ ಹಿಡಿಯಲು ಆಕೆ ಎದ್ದಳು.
जब भिडलाई बाहिर पठाइएको थियो, उहाँ कोठाभित्र जानुभयो र उहाँले तिनका हात समात्‍नुभयो, र ती युवती उठिन् ।
26 ೨೬ ಈ ಸುದ್ದಿ ಆ ದೇಶದೊಳಗೆಲ್ಲಾ ಹಬ್ಬಿತು.
यो खबर त्यस क्षेत्रको चारैतिर फैलियो ।
27 ೨೭ ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.
जब येशू त्यहाँबाट भएर जाँदै हुनुहुन्थ्यो, दुई जना दृष्‍टिविहीनले उहाँलाई पछ्याए । तिनीहरू ठुलो स्वरले कराइरहे र यसो भनिरहे, “दाऊदका पुत्र, हामीमाथि दया गर्नुहोस् ।”
28 ೨೮ ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, “ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ” ಎಂದು ಕೇಳಿದ್ದಕ್ಕೆ, ಅವರು “ಹೌದು, ಕರ್ತನೇ, ನಂಬುತ್ತೇವೆ” ಅಂದರು.
जब येशू घरभित्र आउनुभयो, ती दृष्‍टिविहीनहरू उहाँकहाँ आए । येशूले तिनीहरूलाई भन्‍नुभयो, “म यो गर्न सक्छु भनी के तिमीहरू विश्‍वास गर्छौ?” तिनीहरूले उहाँलाई भने “ज्यू, प्रभु ।”
29 ೨೯ ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ, “ನಿಮ್ಮ ನಂಬಿಕೆಯಂತೆ ನಿಮಗೆ ಆಗಲಿ” ಅಂದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು.
त्यसपछि येशूले तिनीहरूका आँखा छोएर भन्‍नुभयो, “तिमीहरूले विश्‍वास गरेअनुसार तिमीहरूका निम्ति यो गरियोस् ।”
30 ೩೦ ನಂತರ ಯೇಸು ಅವರಿಗೆ, “ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ” ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು.
अनि तिनीहरूका आँखा खोलिए । त्यसपछि येशूले तिनीहरूलाई कडासाथ आज्ञा गर्नुभयो र भन्‍नुभयो, “ख्याल गर, कि यो कुराबारे कसैलाई पनि थाहा नहोस् ।”
31 ೩೧ ಆದರೆ ಅವರು ಹೊರಟುಹೋಗಿ ಆ ದೇಶದೊಳಗೆಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು.
तर ती दुई जना मानिस बाहिर निस्के र यो खबर त्यो क्षेत्रभरि नै फैलाए ।
32 ೩೨ ಅವರು ಹೊರಟುಹೋಗುತ್ತಿರುವಾಗ ದೆವ್ವಹಿಡಿದ ಒಬ್ಬ ಮೂಕನನ್ನು ಯೇಸುವಿನ ಬಳಿಗೆ ಕರೆತಂದರು.
जब ती दुई जना मानिस जाँदै थिए, हेर, एक जना भूतात्मा लागेको बोल्न नसक्‍ने व्यक्‍तिलाई येशूकहाँ ल्याइयो ।
33 ೩೩ ದೆವ್ವ ಬಿಡಿಸಿದ ಮೇಲೆ ಮೂಕನಾಗಿದ್ದ ಅವನು ಮಾತನಾಡುವವನಾದನು. ಅದಕ್ಕೆ ಜನರು, “ಇಸ್ರಾಯೇಲಿನಲ್ಲಿ ಇಂಥ ಕಾರ್ಯವನ್ನು ಇದುವರೆಗೂ ಯಾರೂ ನೋಡಲಿಲ್ಲವೆಂದು” ಆಶ್ಚರ್ಯಚಕಿತರಾದರು.
जब त्यो भूतात्मा धपाइयो, तब त्‍यो व्यक्‍ति बोल्यो । भिडहरू छक्‍क परे र भने, “इस्राएलमा यस्तो कहिल्‍यै देखिएको थिएन!”
34 ೩೪ ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದು ಹೇಳಿದರು.
तर फरिसीहरूले यसो भनिरहेका थिए, “यसले भूतहरूको मालिकद्वारा भूतहरू निकाल्दछ ।”
35 ೩೫ ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
येशू सारा सहरमा र गाउँहरूमा जानुभयो । उहाँले राज्‍यको सुसमाचार प्रचार गर्दै र सबै किसिमका रोग र बिमारीहरूलाई निको पार्दै तिनीहरूका सभाघरहरूमा सिकाइरहनुभयो ।
36 ೩೬ ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.
जब उहाँले भिडलाई देख्‍नुभयो, उहाँ तिनीहरूका निम्ति दयाले भरिनुभयो, किनभने तिनीहरू विचलित र निराश थिए । तिनीहरू गोठालाविनाका भेडाहरूजस्‍तै थिए ।
37 ೩೭ ಆತನು ತನ್ನ ಶಿಷ್ಯರಿಗೆ, “ಬೆಳೆಯು ಬಹಳ ಇದೆ, ಆದರೆ ಕೆಲಸದವರು ಸ್ವಲ್ಪ.
उहाँले चेलाहरूलाई भन्‍नुभयो, “फसल त प्रशस्‍त छन्, तर खेतालाहरू थोरै छन् ।
38 ೩೮ ಆದುದರಿಂದ ಬೆಳೆಯ ಯಜಮಾನನನ್ನು, ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ” ಎಂದು ಹೇಳಿದನು.
यसकारण फसलका प्रभुलाई चाँडै प्रार्थना गर, ताकि उहाँले आफ्‍नो फसलका निम्ति खेतालाहरू पठाइदिनुभएको होस् ।”

< ಮತ್ತಾಯನು 9 >