< ನೆಹೆಮೀಯನು 2 >
1 ೧ ನಾನು ಅರಸನ ಪಾನಸೇವಕನಾಗಿದ್ದನು. ಅರಸನಾದ ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅರಸನ ಸನ್ನಿಧಿಯಲ್ಲಿ ಇದ್ದಾಗ ಹಿಂದೆ ಎಂದೂ ಮನಗುಂದಿದವನಂತೆ ಇರಲಿಲ್ಲ.
१अर्तहशश्त राजाच्या कारकिर्दीच्या विसाव्या वर्षी नीसान महिन्यात त्याने द्राक्षरस निवडला होता आणि मी द्राक्षरस घेतला आणि तो राजाला दिला. यापूर्वी मी कधी त्याच्या उपस्थितीत असताना उदास झालो नव्हतो.
2 ೨ ಅರಸನು ನನಗೆ, “ನಿನ್ನ ಮುಖ ಕಳೆಗುಂದಿರುವುದೇಕೆ? ನೀನು ಅಸ್ವಸ್ಥನಂತೆ ಕಾಣುವುದಿಲ್ಲ; ಇದು ಮನೋವೇದನೆಯಿಂದಾಗಿದೆಯೇ ಹೊರತು ಬೇರೇನೂ ಕಾರಣ ಇರಲಾರದು” ಎಂದು ಹೇಳಲು ನನಗೆ ಮಹಾ ಭೀತಿಯುಂಟಾಯಿತು.
२म्हणून राजाने मला विचारले, “तुझा चेहरा असा उदास का दिसतो? तू आजारी दिसत नाहीस. तू तर मनातून दु: खी दिसतोस.” मग मी फार घाबरलो.
3 ೩ ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು.
३मी राजाला म्हणालो, “राजा चिरायु होवो! माझ्या पूर्वजांच्या जेथे कबरी आहेत ते नगर उद्ध्वस्त झाले आहे, नगराच्या वेशीसुध्दा आगीत भस्म झाल्या आहेत, तर माझा चेहरा उदास का होणार नाही?”
4 ೪ ಆಗ ಅರಸನು, “ನಿನ್ನ ಅಪೇಕ್ಷೆಯೇನು” ಎಂದು ನನ್ನನ್ನು ಕೇಳಿದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ,
४यावर राजा मला म्हणाला, “तुझ्यासाठी मी काय करावे असे तुला वाटते?” मी स्वर्गातील देवाची प्रार्थना केली.
5 ೫ ಅರಸನಿಗೆ ಹೀಗೆ ಉತ್ತರಕೊಟ್ಟೆನು, “ಅರಸನೇ ನಿಮ್ಮ ಚಿತ್ತವಿರುವುದಾದರೆ ಮತ್ತು ತಮ್ಮ ಸೇವಕನಾದ ನಾನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವನ್ನು ತಿರುಗಿ ಕಟ್ಟುವುದಕ್ಕಾಗಿ ಯೆಹೂದ ದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು” ಎಂದು ಹೇಳಿದೆನು.
५मग मी राजाला उत्तर दिले, “महाराजांची मर्जी असेल आणि आपल्या दासावर आपली कृपादृष्टी झाली असेल तर मला माझ्या पूर्वजांच्या कबरी जेथे आहेत त्या यहूदातील यरूशलेमास जाऊन नगराची पुन्हा बांधणी करण्यास पाठवा.”
6 ೬ ರಾಣಿಯು ಅರಸನ ಹತ್ತಿರದಲ್ಲೇ ಕುಳಿತುಕೊಂಡಿದ್ದಳು. ಅರಸನು ನನಗೆ, “ಪ್ರಯಾಣಕ್ಕೆ ನಿನಗೆಷ್ಟು ಕಾಲ ಬೇಕು? ಯಾವಾಗ ಹಿಂದಿರುಗುವಿ” ಎಂದು ವಿಚಾರಿಸಿದಾಗ ನಾನು ಕಾಲವನ್ನು ಸೂಚಿಸಲು ಅರಸನು ಒಪ್ಪಿಕೊಂಡು ಅಪ್ಪಣೆಕೊಟ್ಟನು.
६(राणीसुद्धा त्याच्याजवळच बसलेली होती) राजाने मला विचारले, “तुला या कामासाठी जाऊन यायला किती दिवस लागतील? तू परत केव्हा येशील?” राजा मला आनंदाने पाठविण्यास तयार झाला जेव्हा मी त्यास वेळ ठरवून दिली.
7 ೭ ತರುವಾಯ ನಾನು ಅರಸನಿಗೆ, “ನದಿಯಾಚೆಯ ದೇಶಾಧಿಪತಿಗಳು ತಮ್ಮ ಪ್ರಾಂತ್ಯಗಳ ಮೂಲಕ ಹಾದು ಯೆಹೂದ ಸೀಮೆಗೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡುವ ಹಾಗೂ
७मग मी राजाला असेही म्हणालो, “राजाची माझ्यावर मर्जी असेल तर माझी आणखी एक विनंती आहे. मी यहूदा देशी पोहचेपर्यंत नदीच्या पश्चिमेकडील प्रदेशातून जाऊ देण्याविषयी तेथल्या अधिकाऱ्यांच्या नावानिशी पत्रे द्यावीत.
8 ೮ ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.
८प्रार्थनामंदिराच्या भोवतालच्या व नगराच्या भिंती आणि माझे घर यांच्यासाठी मला मजबूत लाकूड लागणार आहे. त्यासाठी राजाचा वनाधिकारी आसाफ याला पत्र द्यावे.” राजाने मला तशी पत्रे आणि मी मागितले ते सर्वकाही दिले. देवाची माझ्यावर कृपा असल्यामुळे राजाने हे दिले.
9 ೯ ಅರಸನು ನನ್ನನ್ನು ಕಳುಹಿಸುವಾಗ ಸೇನಾಧಿಪತಿಗಳನ್ನೂ, ರಾಹುತರನ್ನೂ ನನ್ನೊಡನೆ ಕಳುಹಿಸಿದನು. ಹೀಗೆ ನಾನು ನದಿಯಾಚೆಯ ದೇಶಾಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು.
९मग मी नदीच्या पश्चिमेकडे असलेल्या, प्रदेशाच्या अधिकाऱ्यांकडे गेलो आणि त्यांना राजाने दिलेली पत्रे दिली. राजाने माझ्यासोबत सैन्यातले अधिकारी आणि घोडेस्वारही पाठवले होते.
10 ೧೦ ಇಸ್ರಾಯೇಲರ ಹಿತಚಿಂತಕನೊಬ್ಬನು ಬಂದಿದ್ದಾನೆಂಬ ವರ್ತಮಾನವು ಹೋರೋನ್ ಪಟ್ಟಣದವನಾದ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನಿಗೂ ತಲುಪಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.
१०होरोनी शहराचा सनबल्लट आणि अम्मोनी तोबीया यांना माझा बेत ऐकून माहीत होता, इस्राएलींच्या मदत शोधण्यासाठी कोणी एकजण आला आहे म्हणून ते खूप नाराज झाले.
11 ೧೧ ಅನಂತರ ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿನಗಳವರೆಗೂ ಇದ್ದೆನು.
११याकरिता मी यरूशलेमेला गेलो आणि तेथे तीन दिवस होतो.
12 ೧೨ ಆಮೇಲೆ ಯೆರೂಸಲೇಮಿಗಾಗಿ ಮಾಡತಕ್ಕ ಕಾರ್ಯದ ವಿಷಯವಾಗಿ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾನೆಂಬುದನ್ನು ಯಾರಿಗೂ ತಿಳಿಸದೆ, ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರೆದುಕೊಂಡು ಹೊರಟೆನು. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ.
१२मग मी रात्री उठलो, मी काहीजणांना घेऊन बाहेर पडलो. यरूशलेमसाठी काही करण्याचा जो विचार देवाने माझ्या मनात घातला होता त्याबद्दल मी कोणाला काही सांगितले नाही. मी ज्याच्यावर बसलो होतो तो सोडून माझ्याबरोबर कोणताही पशू नव्हता.
13 ೧೩ ನಾನು ರಾತ್ರಿವೇಳೆಯಲ್ಲಿ ತಗ್ಗಿನ ಬಾಗಿಲಿನಿಂದ ಹೊರಟು ಹಾಳುಬಿದ್ದ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಿಲುಗಳನ್ನೂ ನೋಡುತ್ತಾ, ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆನು.
१३मी रात्री खोरे वेशीने बाहेर पडून अजगराच्या झऱ्याकडे, उकिरडा वेशीकडे जाऊन यरूशलेमची मोडलेली तटबंदीची भिंत आणि त्यातील आगीच्या भक्ष्यस्थानी पडलेली प्रवेशद्वारे यांची पाहाणी केली.
14 ೧೪ ಅಲ್ಲಿಂದ ಬುಗ್ಗೆ ಬಾಗಿಲನ್ನು ಹಾದು ಅರಸನ ಕೊಳಕ್ಕೆ ಬಂದೆನು. ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿರಲಿಲ್ಲ.
१४मग कारंजाचे प्रवेशद्वार आणि राजाचा तलाव यांच्याकडे गेलो. पण माझा घोडा पलीकडे जाऊ शकेल इतकीही जागा नव्हती.
15 ೧೫ ಅದಕಾರಣ ನಾನು ರಾತ್ರಿಯಲ್ಲಿ ಹಳ್ಳದ ಬದಿಯ ಮಾರ್ಗವಾಗಿ ಹೋಗಿ ಗೋಡೆಯನ್ನು ಪರೀಕ್ಷಿಸಿದೆನು. ಆ ಮೇಲೆ ಪುನಃ ತಗ್ಗಿನ ಬಾಗಿಲಿನಿಂದ ಹಿಂತಿರುಗಿ ಮನೆಗೆ ಬಂದೆನು.
१५तेव्हा मी रात्री भिंतीची बारकाईने तपासणी करत खोऱ्यातून वेशीतून आत शिरलो आणि परत फिरलो.
16 ೧೬ ನಾನು ಆ ವರೆಗೆ ಯೆಹೂದ್ಯರಿಗೂ, ಯಾಜಕರಿಗೂ, ಶ್ರೀಮಂತರಿಗೂ, ಅಧಿಕಾರಿಗಳಿಗೂ ಕೆಲಸ ಮಾಡುವ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬುದು ಯಾರಿಗೂ ಗೊತ್ತಾಗಲಿಲ್ಲ.
१६मी कोठे गेलो आणि मी काय केले हे अधिकाऱ्यांना माहित नव्हते आणि यहूदी, याजक, राजाचे कुटुंबीय, अधिकारी आणि जे बांधकामाचे काम करणार होते यांच्यापैकी कोणालाही मी काही बोललो नव्हतो.
17 ೧೭ ನಾನು ಅವರಿಗೆ, “ನಮ್ಮ ದುರಾವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ; ಯೆರೂಸಲೇಮ್ ಪಟ್ಟಣವು ಹಾಳು ಬಿದ್ದಿದೆ, ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ; ಬನ್ನಿರಿ, ಯೆರೂಸಲೇಮಿನ ಗೋಡೆಯನ್ನು ಕಟ್ಟೋಣ. ಹೀಗೆ ಮಾಡಿದರೆ ನಮ್ಮ ಮೇಲಣ ನಿಂದೆಯು ಅಳಿಸಿ ಹೋಗುವುದು” ಎಂದು ಹೇಳಿದೆನು.
१७मग मी या सगळयांना म्हणालो, “इथे आपल्याला काय त्रास आहे तो तुम्ही पाहतच आहात. यरूशलेम उजाड आणि उद्ध्वस्त झाले आहे व त्याच्या वेशी आगीत जळून गेल्या आहेत. चला, आता आपण यरूशलेमची तटबंदी पुन्हा बांधू या, म्हणजे आपली आणखी अप्रतिष्ठा होणार नाही.”
18 ೧೮ ಇದಲ್ಲದೆ, ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ, ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು, “ಬನ್ನಿರಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಪರಸ್ಪರ ಧೈರ್ಯ ನೀಡಿದರು.
१८देवाची माझ्यावर कृपा असल्याचे व राजा माझ्याशी काय बोलला ते मी त्यांना सांगितले. तेव्हा ते म्हणाले, “आपण आताच उठू आणि बांधू!” म्हणून आम्ही या सत्कार्याला सुरुवात केली.
19 ೧೯ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ, ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ, “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರುದ್ಧವಾಗಿ ತಿರುಗಿ ಬೀಳಬೇಕೆಂದಿದ್ದೀರೋ?” ಎಂದು ಕೇಳಿದರು.
१९पण आम्ही पुन्हा बांधकाम करत असल्याची खबर होरोनाचा सनबल्लट, अम्मोनी अधिकारी तोबीया आणि अरबी गेशेम यांना लागली तेव्हा त्यांनी अगदी नीच पातळीवर जाऊन आमचा उपहास केला. आणि ते म्हणाले, “हे काय करताय तुम्ही? राजाविरुध्द बंड करणार आहात का?”
20 ೨೦ ನಾನು ಅವರಿಗೆ, “ಪರಲೋಕದ ದೇವರು ನಮಗೆ ಕಾರ್ಯವನ್ನು ಸಾಧಿಸಿಕೊಡುವನು. ಆದುದರಿಂದ ಆತನ ಸೇವಕರಾದ ನಾವು ಕಟ್ಟುವುದಕ್ಕೆ ಮನಸ್ಸುಮಾಡಿದ್ದೇವೆ. ನಿಮಗಾದರೋ ಯೆರೂಸಲೇಮಿನಲ್ಲಿ ಯಾವ ಪಾಲೂ, ಹಕ್ಕೂ, ಹೆಸರೂ, ಸ್ಮಾರಕವೂ ಇರುವುದಿಲ್ಲ” ಎಂದು ಉತ್ತರಕೊಟ್ಟೆನು.
२०पण मी त्यांना असे म्हणालो “स्वर्गातील देवच आम्हास यश देईल. आम्ही देवाचे सेवक असून आम्ही हे नगर पुन्हा उभारू. पण यरूशलेमात तुमचा काहीएक अधिकार, वाटा व ऐतिहासीक हक्क नाही.”