< ಅರಣ್ಯಕಾಂಡ 14 >
1 ೧ ಆಗ ಜನಸಮೂಹದವರೆಲ್ಲರೂ ತಮ್ಮ ಸ್ವರ ಎತ್ತಿ ಆ ರಾತ್ರಿಯೆಲ್ಲಾ ಗೋಳಾಡಿದರು.
၁ထိုအခါလူအပေါင်းတို့သည်တစ်ညလုံး ငိုကြွေးမြည်တမ်းကြလေသည်။-
2 ೨ ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು
၂သူတို့သည်မောရှေနှင့်အာရုန်တို့အား``ငါတို့ သည်အီဂျစ်ပြည်၌ဖြစ်စေ၊ ဤတောကန္တာရ ၌ပင်ဖြစ်စေသေရခြင်းကသာ၍ကောင်း ပါသေးသည်။-
3 ೩ ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವುದಕ್ಕೆ ಈ ದೇಶಕ್ಕೆ ಕರೆದುಕೊಂಡು ಬಂದನು. ನಮ್ಮ ಹೆಂಡತಿಯರು ಮತ್ತು ಮಕ್ಕಳು ಬೇರೆಯವರ ಪಾಲಾಗುವರು. ನಾವು ಐಗುಪ್ತ ದೇಶಕ್ಕೆ ತಿರುಗಿ ಹೋಗುವುದು ಒಳ್ಳೆಯದಲ್ಲವೇ” ಎಂದು ಮಾತನಾಡಿಕೊಂಡರು.
၃ထာဝရဘုရားသည်အဘယ်ကြောင့်ငါတို့ ကိုထိုပြည်သို့ပို့ဆောင်ရပါသနည်း။ ငါတို့ သည်စစ်ပွဲတွင်ကျဆုံးကြပါလိမ့်မည်။ ငါ တို့၏သားမယားတို့သည်လည်းရန်သူဖမ်း သွားခြင်းခံရပါလိမ့်မည်။ အီဂျစ်ပြည်သို့ ပြန်လျှင်ကောင်းမည်'' ဟုညည်းညူကြလေ သည်။-
4 ೪ ಹೀಗೆ ಅವರು ಒಬ್ಬರ ಸಂಗಡಲೊಬ್ಬರು, “ನಾವು ಬೇರೆ ನಾಯಕನನ್ನು ನೇಮಿಸಿಕೊಂಡು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗೋಣ” ಎಂದು ಮಾತನಾಡಿಕೊಂಡರು.
၄ထိုကြောင့်သူတို့က``ငါတို့ကိုအီဂျစ်ပြည်သို့ ပြန်၍ ပို့ဆောင်မည့်ခေါင်းဆောင်တစ်ဦးကိုရွေး ကြပါစို့'' ဟူ၍အချင်းချင်းပြောဆိုကြ လေသည်။
5 ೫ ಆಗ ಮೋಶೆ ಮತ್ತು ಆರೋನರು ಇಸ್ರಾಯೇಲರ ಸರ್ವಸಮೂಹದವರ ಮುಂದೆ ಅಡ್ಡಬಿದ್ದರು.
၅ထိုအခါမောရှေနှင့်အာရုန်တို့သည် လူ အပေါင်းတို့ရှေ့တွင်မြေပေါ်၌ပျပ်ဝပ် လျက်နေကြ၏။-
6 ೬ ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.
၆ခါနာန်ပြည်ကိုစုံစမ်းထောက်လှမ်းခဲ့သူများ အနက် နှစ်ဦးဖြစ်ကြသောနုန်၏သားယောရှု နှင့်ယေဖုန္နာ၏သားကာလက်တို့သည် ဝမ်းနည်း သည့်အနေဖြင့်မိမိတို့၏အဝတ်အင်္ကျီများ ကိုဆုတ်ဖြဲလျက်၊-
7 ೭ ಅವರು ಇಸ್ರಾಯೇಲರ ಸರ್ವಸಮೂಹದವರಿಗೆ ಹೀಗೆ ಹೇಳಿದರು, “ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು.
၇``ငါတို့စုံစမ်းထောက်လှမ်းခဲ့သောပြည် သည်အလွန်နေထိုင်ဖွယ်ကောင်းသောပြည် ဖြစ်သည်။-
8 ೮ ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಹಾಲೂ, ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.
၈ထာဝရဘုရားသည်ငါတို့ကိုစိတ်တော်နှင့် တွေ့လျှင်အစာရေစာပေါကြွယ်ဝ၍ မြေသြ ဇာထက်သန်သောထိုပြည်သို့ပို့ဆောင်လျက် အပိုင်စားပေးတော်မူမည်။-
9 ೯ ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.
၉ထာဝရဘုရားကိုမပုန်ကန်ကြပါနှင့်။ ခါနာန်ပြည်သားတို့ကိုလည်းမကြောက်ရွံ့ ကြပါနှင့်။ ငါတို့သည်သူတို့ကိုလွယ်ကူ စွာတိုက်ခိုက်အောင်မြင်နိုင်ပါမည်။ ထာဝရ ဘုရားသည်ငါတို့နှင့်အတူရှိတော်မူ၍ သူတို့ကိုကွယ်ကာစောင့်ရှောက်သောဘုရား များကိုလည်း နှိမ်နင်းအောင်မြင်တော်မူပြီး ဖြစ်၍မကြောက်ရွံ့ကြပါနှင့်'' ဟုလူတို့ အားပြောကြ၏။-
10 ೧೦ ಆದರೆ ಜನಸಮೂಹದವರೆಲ್ಲರೂ ಅವರ ಮಾತುಗಳನ್ನು ಕೇಳದೆ, ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರುವಾಗ, ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಪ್ರಕಾಶಿಸಿ ಇಸ್ರಾಯೇಲರೆಲ್ಲರಿಗೂ ಕಾಣಿಸಿಕೊಂಡಿತು.
၁၀လူအပေါင်းတို့သည်ထိုစကားကိုကြား လျှင် သူတို့နှစ်ဦးကိုကျောက်ခဲဖြင့်ပစ်သတ် ရန်ကြိုးစားအားထုတ်ကြလေသည်။ သို့ရာ တွင်ထိုခဏချင်း၌ထာဝရဘုရား၏ ဘုန်းရောင်ခြည်တော်သည် တဲတော်ပေါ်တွင် ထွန်းတောက်နေသည်ကိုသူတို့မြင်ကြ၏။
11 ೧೧ ಯೆಹೋವನು ಮೋಶೆಗೆ, “ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು?
၁၁ထာဝရဘုရားကမောရှေအား``ဤလူတို့ သည်မည်မျှကာလပတ်လုံးငါ့ကိုပစ်ပယ် ကြမည်နည်း။ ငါသည်သူတို့တွင်အံ့သြဖွယ် အမှုများစွာတို့ကိုပြခဲ့သော်လည်း သူတို့ သည်မည်မျှကာလပတ်လုံးငါ့ကိုမယုံ ကြည်မကိုးစားဘဲနေကြမည်နည်း။-
12 ೧೨ ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡುವೆನು. ಈ ಜನರಿಗಿಂತ ನಿನ್ನನ್ನು ದೊಡ್ಡದಾಗಿಯೂ, ಬಲಿಷ್ಠವಾಗಿಯೂ ಇರುವ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.
၁၂ငါသည်သူတို့ကိုကပ်ရောဂါဖြင့်ဖျက်ဆီး ပစ်မည်။ သို့ရာတွင်ငါသည်သင့်အားသူတို့ ထက်သာ၍များပြား၍ တန်ခိုးကြီးသောလူ မျိုး၏ဖခင်ဖြစ်စေမည်'' ဟုမိန့်တော်မူ၏။
13 ೧೩ ಅದಕ್ಕೆ ಮೋಶೆಯು ಯೆಹೋವನಿಗೆ, “ನೀನು ಹೀಗೆ ಮಾಡುವುದಾದರೆ ಐಗುಪ್ತ್ಯರು ಈ ಸುದ್ದಿಯನ್ನು ಕೇಳುವರು. ಅವರ ಕೈಯಿಂದ ನೀನು ಈ ಜನರನ್ನು ಭುಜಪರಾಕ್ರಮದಿಂದ ಬಿಡಿಸಿದ ಈ ಸಂಗತಿಯನ್ನು ಈ ಕಾನಾನ್ ದೇಶದ ನಿವಾಸಿಗಳಿಗೆ ತಿಳಿಸುವರು.
၁၃ထိုအခါမောရှေကထာဝရဘုရား အား``ကိုယ်တော်သည်ဤလူမျိုးကိုတန်ခိုး တော်အားဖြင့် အီဂျစ်ပြည်မှထုတ်ဆောင်တော် မူခဲ့ပါသည်။ အီဂျစ်အမျိုးသားတို့သည် ကိုယ်တော်၏လူမျိုးတော်အား ကိုယ်တော်ဘေး ဒဏ်သင့်စေကြောင်းကြားရသောအခါ၊-
14 ೧೪ ಅಲ್ಲದೆ ಯೆಹೋವನಾದ ನೀನು ಇಸ್ರಾಯೇಲರ ಮಧ್ಯದಲ್ಲಿ ಇರುವ ಸಂಗತಿಯನ್ನು, ನೀನು ಇಸ್ರಾಯೇಲರಿಗೆ ಪ್ರತ್ಯಕ್ಷವಾಗಿ ಕಾಣಿಸಿಕೊಳ್ಳುವುದನ್ನು, ಹಗಲಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಇದ್ದು ಇವರ ಮುಂದೆ ನಡೆದುಹೋಗುವುದಾಗಿ ಹಾಗೂ ನೀನಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಈ ದೇಶದವರು ಕೇಳಿದ್ದಾರೆ.
၁၄သူတို့ကဤပြည်ရှိပြည်သားတို့အားသတင်း ပြောကြားကြပါလိမ့်မည်။ ကိုယ်တော်သည် အကျွန်ုပ်တို့နှင့်အတူရှိတော်မူကြောင်းကို လည်းကောင်း၊ ကိုယ်တော်၏မိုးတိမ်သည်အကျွန်ုပ် တို့၏အထက်တွင်ထင်ရှားစွာတည်နေကြောင်း ကိုလည်းကောင်း၊ ကိုယ်တော်သည်နေ့အချိန်တွင် မိုးတိမ်တိုင်၊ ညအချိန်တွင်မီးတိမ်တိုင်အား ဖြင့်အကျွန်ုပ်တို့ရှေ့မှကြွသွားတော်မူကြောင်း ကိုလည်းကောင်း ဤပြည်ရှိပြည်သားများသိ ရပြီးဖြစ်ပါသည်။-
15 ೧೫ ಹೀಗಿರಲಾಗಿ ನೀನು ಒಂದೇ ಪೆಟ್ಟಿನಿಂದ ಈ ಜನರನ್ನೆಲ್ಲಾ ಸಾಯಿಸಿದರೆ ನಿನ್ನ ಪ್ರಖ್ಯಾತಿಯನ್ನು ಕೇಳಿದ ಜನಾಂಗದವರು ನಿನ್ನ ವಿಷಯದಲ್ಲಿ,
၁၅ယခုတွင်ကိုယ်တော်၏လူမျိုးတော်ကိုသုတ်သင် ပယ်ရှင်းတော်မူလျှင် ကိုယ်တော်၏ဂုဏ်သတင်း ကိုကြားခဲ့ဖူးသောလူမျိုးများက၊-
16 ೧೬ “‘ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಆ ಜನರನ್ನು ಸೇರಿಸುವುದಕ್ಕೆ ಶಕ್ತಿಸಾಲದೆ, ಅವರನ್ನು ಅರಣ್ಯದಲ್ಲಿ ಕೊಂದುಹಾಕಿಬಿಟ್ಟನು’ ಎಂದು ಮಾತನಾಡಿಕೊಳ್ಳುವರು.
၁၆ကိုယ်တော်သည်ပေးမည်ဟုကတိထားတော်မူ သောပြည်သို့မပို့ဆောင်နိုင်သောကြောင့် ဤသူ တို့ကိုတောကန္တာရ၌အဆုံးစီရင်တော်မူ သည်ဟုပြောကြပါလိမ့်မည်။-
17 ೧೭ ಈಗ ನೀನು ಹೇಳಿದ ಪ್ರಕಾರ ಯೆಹೋವನ ಬಲವು ದೊಡ್ಡದಾಗಿರಲಿ ಎಂದು ಬೇಡಿಕೊಳ್ಳುತ್ತೇನೆ. ನಿನ್ನ ವಿಷಯದಲ್ಲಿ,
၁၇သို့ဖြစ်၍ အို ထာဝရဘုရား၊ ယခုပင်ကိုယ်တော် ၏တန်ခိုးတော်ကိုပြတော်မူပါ။ ကိုယ်တော်က`ငါ ထာဝရဘုရားသည်သည်းခံသောသဘောရှိ ၏။ မေတ္တာကရုဏာနှင့်ကြွယ်ဝ၍ဒုစရိုက်အပြစ် နှင့်ပုန်ကန်ခြင်းအပြစ်တို့ကိုလွှတ်တော်မူ၏။ သို့ သော်လည်းမိဘတို့၏အပြစ်အတွက်သူတို့ ၏သားမြေးမှစ၍တတိယမျိုးဆက်၊ စတုတ္ထ မျိုးဆက်သို့တိုင်အောင်ပင်ဒဏ်ခတ်တော်မူမည်' ဟုကတိထားတော်မူသည့်အတိုင်းပြုတော် မူပါ။-
18 ೧೮ ‘ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ಹೇಳಿದ್ದಿ.
၁၈
19 ೧೯ ನಾವು ಐಗುಪ್ತ ದೇಶದಿಂದ ಬಂದ ದಿನದಿಂದ ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.
၁၉အို ထာဝရဘုရား၊ ကိုယ်တော်သည်ဤသူ တို့အီဂျစ်ပြည်မှထွက်ခွာလာချိန်မှ ယနေ့ အထိသူတို့ကူးလွန်ခဲ့သောအပြစ်များ ကိုဖြေလွှတ်တော်မူခဲ့သည့်နည်းတူ ကိုယ်တော် ၏ကြီးမားသောမေတ္တာကရုဏာတော်နှင့် အညီ ယခုလည်းသူတို့ပြုမိသောအပြစ် များကိုဖြေလွှတ်တော်မူရန်အကျွန်ုပ် တောင်းလျှောက်ပါ၏'' ဟုဆုတောင်းလေ သည်။
20 ೨೦ ಅದಕ್ಕೆ ಯೆಹೋವನು, “ನಿನ್ನ ಪ್ರಾರ್ಥನೆಯ ಮೇರೆಗೆ ನಾನು ಅವರನ್ನು ಕ್ಷಮಿಸಿದ್ದೇನೆ.
၂၀ထိုအခါထာဝရဘုရားက``သင်တောင်းပန် သည့်အတိုင်း ငါသည်သူတို့၏အပြစ်ကို လွှတ်တော်မူမည်။-
21 ೨೧ ಆದರೆ ನನ್ನ ಜೀವದಾಣೆ, ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರುವುದು.
၂၁ငါသည်အသက်ရှင်၍ငါ၏ဘုန်းအသရေ တော်သည် တစ်ကမ္ဘာလုံးတွင်ပျံ့နှံ့လျက်ရှိ သည်အတိုင်း၊-
22 ೨೨ ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ
၂၂ဤသူတို့အနက်မည်သူမျှထိုပြည်သို့မဝင် ရ။ သူတို့သည်ငါ၏တောက်ပသောဘုန်းအသ ရေတော်ကိုလည်းကောင်း၊ အီဂျစ်ပြည်နှင့်တော ကန္တာရတွင်ငါပြုခဲ့သောအံ့သြဖွယ်အမှု များကိုလည်းကောင်းတွေ့မြင်ခဲ့ရသော်လည်း သူတို့သည်ငါ့ကိုအကြိမ်ကြိမ်မထီလေးစား ပြု၍ငါ့စကားကိုလည်းနားမထောင်ခဲ့ကြ။-
23 ೨೩ ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ; ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.
၂၃သူတို့၏ဘိုးဘေးတို့အားငါပေးမည်ဟုကတိ ထားသောပြည်သို့သူတို့မဝင်ရ။ ငါ့ကိုပစ်ပယ် သူမှန်သမျှထိုပြည်သို့မဝင်ရ။-
24 ೨೪ ನನ್ನ ದಾಸನಾದ ಕಾಲೇಬನಿಗೆ ಅವರಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದುದ್ದರಿಂದ ಅವನು ಸಂಚರಿಸಿದ ಆ ದೇಶದಲ್ಲಿ ಅವನನ್ನು ಸೇರಿಸುವೆನು, ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.
၂၄သို့သော်လည်းငါ၏အစေခံကာလက်သည် အခြားသူတို့နှင့်ခြားနားသောသဘောရှိ၍ ငါ၏စကားကိုတစ်သဝေမတိမ်းလိုက်နာ သူဖြစ်ခြင်းကြောင့် သူစုံစမ်းထောက်လှမ်းခဲ့ သောပြည်သို့သူ့ကိုငါပို့ဆောင်မည်။ သူ၏ အဆက်အနွယ်တို့သည်အာမလက်အမျိုး သားနှင့်ခါနာန်အမျိုးသားတို့ယခုနေထိုင် ရာချိုင့်ဝှမ်းများရှိရာနယ်မြေကိုအပိုင်ရ လိမ့်မည်။ နက်ဖြန်နေ့တွင်သင်သည်ပြန်လှည့် ၍အာကာဘာပင်လယ်ကွေ့ဘက်ရှိတော ကန္တာရသို့သွားလော့'' ဟုမောရှေအား မိန့်တော်မူ၏။
25 ೨೫ ಅಮಾಲೇಕ್ಯರೂ, ಕಾನಾನ್ಯರೂ ಆ ತಗ್ಗಿನಲ್ಲಿ ವಾಸವಾಗಿದ್ದಾರೆ. ನೀವು ನಾಳೆ ಹಿಂದಿರುಗಿ ಕೆಂಪು ಸಮುದ್ರಕ್ಕೆ ಹೋಗುವ ದಾರಿಯಲ್ಲಿ ಅರಣ್ಯಕ್ಕೆ ಪ್ರಯಾಣಮಾಡಬೇಕು” ಎಂದು ಹೇಳಿದನು.
၂၅
26 ೨೬ ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,
၂၆ထာဝရဘုရားကမောရှေနှင့်အာရုန်တို့အား၊-
27 ೨೭ “ನನಗೆ ವಿರುದ್ಧವಾಗಿ ಗುಣುಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ಇಸ್ರಾಯೇಲರು ನನಗೆ ವಿರುದ್ಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು.
၂၇``ဤဆိုးယုတ်သောသူတို့သည်မည်မျှကာလ ပတ်လုံးညည်းညူလျက်ရှိကြမည်နည်း။ ဣသ ရေလအမျိုးသားတို့၏ညည်းညူသံကိုငါ ကြားရဖန်များလှပြီ။-
28 ೨೮ ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನು ಹೇಳುವುದೇನೆಂದರೆ, ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ; ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು.
၂၈ယခုသူတို့အားဤသို့ပြန်ပြောလော့။ `ငါ ထာဝရဘုရားသည်ငါ့ကိုယ်ကိုတိုင်တည်၍ သင်တို့တောင်းဆိုသည့်အတိုင်းငါပြုမည်။-
29 ೨೯ ನೀವು ನನಗೆ ವಿರುದ್ಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರು ಅಂದರೆ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರೆಲ್ಲರೂ ಅರಣ್ಯದಲ್ಲಿಯೇ ಸಾಯುವರು.
၂၉သင်တို့သည်တောကန္တာရ၌ပင်သေဆုံး ကြလိမ့်မည်။ ဤတောသည်သင်တို့၏သင်္ချိုင်း ဖြစ်လိမ့်မည်။ သင်တို့သည်ငါ့ကိုအပြစ်တင် ညည်းညူကြသောကြောင့် အသက်နှစ်ဆယ် ကျော်သူတစ်ယောက်မျှထိုပြည်သို့ မဝင်ရ။-
30 ೩೦ ಯೆಫುನ್ನೆಯ ಮಗನಾದ ಕಾಲೇಬನು ಮತ್ತು ನೂನನ ಮಗನಾದ ಯೆಹೋಶುವನು ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಸೇರುವುದಿಲ್ಲ.
၃၀သင်တို့ကိုနေထိုင်စေမည်ဟုကတိထား သောပြည်သို့ ကာလက်နှင့်ယောရှုမှတစ်ပါး မည်သူမျှမဝင်ရ။-
31 ೩೧ ಆದರೆ ಇತರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭವಿಸುವರು.
၃၁သင်တို့၏သားသမီးများကိုရန်သူဖမ်းသွား လိမ့်မည်ဟုသင်တို့ဆိုကြ၏။ သို့ရာတွင်ငါ သည်သင်တို့မသွားလိုသောပြည်သို့သင်တို့ ၏ကလေးများကိုပို့ဆောင်သဖြင့် သူတို့ သည်ထိုပြည်တွင်နေထိုင်ရလိမ့်မည်။-
32 ೩೨ ನೀವಂತೂ ಈ ಅರಣ್ಯದಲ್ಲಿ ಸಾಯುವಿರಿ.
၃၂သင်တို့မူကားဤတောကန္တာရ၌သေဆုံးရ ကြမည်။-
33 ೩೩ ನಿಮ್ಮೆಲ್ಲರ ಶವಗಳು ಈ ಮರುಭೂಮಿಯಲ್ಲಿ ಬೀಳುವವರೆಗೂ ನೀವು ಮಾಡಿದ ದ್ರೋಹದ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನಲ್ವತ್ತು ವರ್ಷ ಮರುಭೂಮಿಯಲ್ಲಿ ವಾಸಿಸಬೇಕು.
၃၃သင်တို့ယုံကြည်မှုကင်းမဲ့သောကြောင့်ဤ တောကန္တာရ၌သင်တို့အနက် နောက်ဆုံးသော သူကွယ်လွန်သည်အထိသင်တို့၏သားသမီး များသည်နှစ်ပေါင်းလေးဆယ်တိုင်တိုင်တော ကန္တာရ၌လှည့်လည်နေထိုင်ရကြမည်။-
34 ೩೪ ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲ್ವತ್ತು ದಿನಗಳ ಪ್ರಕಾರ, ಒಂದು ದಿನಕ್ಕೆ ಒಂದು ವರ್ಷವಾಗಿ ಈ ಪ್ರಕಾರ ನಲ್ವತ್ತು ವರ್ಷ ನಿಮ್ಮ ಪಾಪಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು.
၃၄သင်တို့ခါနာန်ပြည်ကိုစုံစမ်းထောက်လှမ်းခဲ့ သောရက်ပေါင်းလေးဆယ်အတွက် တစ်ရက်လျှင် တစ်နှစ်ကျဖြင့်သင်တို့၏အပြစ်ဒဏ်ကိုနှစ် ပေါင်းလေးဆယ်ခံရကြမည်။ သင်တို့သည်ငါ ၏ပစ်ပယ်ခြင်းဒဏ်ကိုခံရကြလိမ့်မည်။-
35 ೩೫ ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಪ್ರಕಾರವೇ ಮಾಡುತ್ತೇನೆ. ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು’” ಎಂದು ಹೇಳಿದನು.
၃၅ငါ့ကိုဆန့်ကျင်ဘက်ပြုသောဆိုးသွမ်းသည့် သင်တို့အပေါင်းကို ငါသည်မုချဒဏ်ခတ်မည်။ သင်တို့ရှိသမျှသည်တောကန္တာရတွင်သေ ကြေပျက်စီးလိမ့်မည်ဟု ငါထာဝရဘုရား မိန့်တော်မူပြီ'' ဟုမိန့်တော်မူ၏။
36 ೩೬ ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟ ಮನುಷ್ಯರು ಹಿಂದಿರುಗಿ ಬಂದು ಆ ದೇಶದ ವಿಷಯದಲ್ಲಿ ಅಶುಭ ಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟುವಂತೆ ಮಾಡಿದರು.
၃၆ခါနာန်ပြည်ကိုစုံစမ်းထောက်လှမ်းရန်မောရှေ စေလွှတ်သောသူတို့သည် မမှန်သတင်းကိုယူ ဆောင်ခဲ့ကြသဖြင့် ကြားရသောသူတို့သည် ထာဝရဘုရားအားအပြစ်တင်ညည်းတွား ကြ၏။ ထို့ကြောင့်ထာဝရဘုရားသည်မမှန် သတင်းယူဆောင်လာခဲ့သူတို့အား ကပ် ရောဂါဖြင့်သေဆုံးစေတော်မူ၏။-
37 ೩೭ ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.
၃၇
38 ೩೮ ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಮನುಷ್ಯರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಉಳಿದರು.
၃၈စုံစမ်းထောက်လှမ်းသူတစ်ဆယ့်နှစ်ဦးအနက် ယောရှုနှင့်ကာလက်သာလျှင်အသက်ချမ်း သာရာရလေသည်။
39 ೩೯ ಮೋಶೆ ಯೆಹೋವನ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸಲಾಗಿ ಅವರು ಬಹಳ ದುಃಖಪಟ್ಟರು.
၃၉မောရှေသည်ထာဝရဘုရားမိန့်တော်မူသမျှ ကို ဣသရေလအမျိုးသားတို့အားပြန်ကြား သောအခါ သူတို့သည်အလွန်ဝမ်းနည်း ကြေကွဲကြ၏။-
40 ೪೦ ಮರುದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದು ನಿಜ; ಯೆಹೋವನು ವಾಗ್ದಾನ ಮಾಡಿದ ಸ್ಥಳಕ್ಕೆ ಹತ್ತೋಣ ಬನ್ನಿ” ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋದರು.
၄၀နောက်တစ်နေ့နံနက်စောစောအချိန်တွင် သူတို့ သည်တောင်ကုန်းဒေသကိုဝင်ရောက်သိမ်းပိုက် ရန်စတင်ချီတက်ကြလေသည်။ သူတို့က``ထာ ဝရဘုရားကတိထားတော်မူသောပြည်သို့ ယခုငါတို့သွားပါမည်။ ငါတို့ပြစ်မှားမိ ကြောင်းဝန်ခံပါ၏'' ဟုဆိုကြလေသည်။
41 ೪೧ ಆದರೆ ಮೋಶೆ ಅವರಿಗೆ, “ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ಇದು ಸಫಲವಾಗುವುದಿಲ್ಲ.
၄၁သို့ရာတွင်မောရှေက``သင်တို့အဘယ်ကြောင့် ထာဝရဘုရား၏အမိန့်တော်ကို ယခုမနာ ခံကြသနည်း။ သင်တို့အကြံအောင်မြင်မည် မဟုတ်။-
42 ೪೨ ಯೆಹೋವನು ನಿಮ್ಮ ಸಂಗಡ ಇರುವುದಿಲ್ಲ, ಹತ್ತಬೇಡಿರಿ. ನೀವು ಶತ್ರುಗಳ ಮುಂದೆ ನಿಲ್ಲಲಾರದೆ ಬಿದ್ದು ಸತ್ತುಹೋಗುವಿರಿ.
၄၂မသွားကြနှင့်။ ထာဝရဘုရားသည်သင်တို့ နှင့်အတူမရှိသဖြင့် ရန်သူတို့သည်သင် တို့ကိုအနိုင်ရလိမ့်မည်။-
43 ೪೩ ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.
၄၃သင်တို့သည်အာမလက်အမျိုးသား၊ ခါနာန် အမျိုးသားတို့နှင့်ယှဉ်ပြိုင်တိုက်ခိုက်သောအခါ သင်တို့ကျဆုံးကြလိမ့်မည်။ သင်တို့သည်ထာဝရ ဘုရားကိုစွန့်ပစ်ခြင်းကြောင့် ကိုယ်တော်သည်သင် တို့နှင့်အတူရှိတော်မူမည်မဟုတ်'' ဟုဆို လေ၏။
44 ೪೪ ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತಿದರು. ಯೆಹೋವನ ಒಡಂಬಡಿಕೆಯ ಮಂಜೂಷವಾಗಲಿ ಮೋಶೆಯಾಗಲಿ ಪಾಳೆಯವನ್ನು ಬಿಟ್ಟು ಹೊರಡಲಿಲ್ಲ.
၄၄ထာဝရဘုရား၏ပဋိညာဉ်သေတ္တာတော်သည် လည်းကောင်း၊ မောရှေသည်လည်းကောင်းစခန်းမှ မထွက်ခွာသော်လည်း သူတို့သည်တောင်ကုန်း ဒေသသို့အရဲစွန့်၍ချီတက်ကြလေသည်။-
45 ೪೫ ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಮತ್ತು ಕಾನಾನ್ಯರೂ ಇಳಿದು ಬಂದು ಇಸ್ರಾಯೇಲರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಸಂಹರಿಸಿದರು.
၄၅ထိုအရပ်၌နေထိုင်ကြသောအာမလက် အမျိုးသားနှင့် ခါနာန်အမျိုးသားတို့သည် သူတို့တိုက်ခိုက်အောင်မြင်၍ သူတို့ကိုဟော မာမြို့တိုင်အောင်လိုက်လံတိုက်ခိုက်လေသည်။