< ಅರಣ್ಯಕಾಂಡ 6 >

1 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
وَقَالَ الرَّبُّ لِمُوسَى:١
2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ,
«أَوْصِ بَنِي إِسْرَائِيلَ وَقُلْ لَهُمْ: أَيُّ رَجُلٍ أَوِ امْرَأَةٍ تَعَهَّدَ بِنَذْرٍ خَاصٍّ يَتَنَسَّكُ فِيهِ لِلرَّبِّ،٢
3 ವಿಶೇಷವಾದ ಹರಕೆಯನ್ನು ಮಾಡಿದಾಗ ದ್ರಾಕ್ಷಾರಸವನ್ನೂ ಮತ್ತು ಮದ್ಯಪಾನವನ್ನೂ ಮುಟ್ಟಬಾರದು. ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯಪಾನದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು. ಹಸಿ ಅಥವಾ ಒಣಗಿದ ದ್ರಾಕ್ಷಿ ಹಣ್ಣನ್ನೂ ತಿನ್ನಬಾರದು.
فَلْيَمْتَنِعْ عَنِ الْخَمْرِ وَالْمُسْكِرِ، وَلا يَشْرَبْ خَلَّ الْخَمْرِ وَلا خَلَّ الْمُسْكِرِ أَوْ نَقِيعَ الْعِنَبِ، وَلا يَأْكُلْ عِنَباً رَطْباً وَلا يَابِساً.٣
4 ಅವನು ಹರಕೆಮಾಡಿ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ದ್ರಾಕ್ಷಾಲತೆಯಿಂದ ಬೆಳೆದ ಬೀಜವನ್ನಾಗಲಿ, ಸಿಪ್ಪೆಯನ್ನಾಗಲಿ ತಿನ್ನಬಾರದು.
لَا يَذُقْ كُلَّ أَيَّامِ نَذْرِهِ شَيْئاً مِنْ نِتَاجِ الْكَرْمَةِ حَتَّى بُذُورِ الْعِنَبِ وَقِشْرِهِ.٤
5 “ಅವನು ತನ್ನ ಹರಕೆಯ ದಿನಗಳಲ್ಲಿ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ದೇವರಿಗೆ ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.
وَلا يَحْلِقْ رَأْسَهُ طَوَالَ مُدَّةِ نَذْرِهِ إِلَى أَنْ تَتِمَّ الأَيَّامُ الَّتِي نَذَرَ فِيهَا نَفْسَهُ لِلرَّبِّ، لأَنَّهُ مُقَدَّسٌ، فَعَلَيْهِ أَنْ يُرْخِيَ خُصَلَ شَعْرِ رَأْسِهِ.٥
6 ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳಲ್ಲಿ ಯಾವ ಶವವನ್ನೂ ಮುಟ್ಟಬಾರದು.
لَا يَقْرُبْ جَسَدَ مَيْتٍ كُلَّ أَيَّامِ نَذْرِهِ لِلرَّبِّ.٦
7 ತಾಯಿ, ತಂದೆ, ಅಣ್ಣ, ತಮ್ಮ, ಅಕ್ಕ, ತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿಮಿತ್ತ ಅವನು ತನ್ನನ್ನು ದೇವರಿಂದ ಪ್ರತ್ಯೇಕಿಸಿ ಅಪವಿತ್ರಮಾಡಿಕೊಳ್ಳಬಾರದು. ಏಕೆಂದರೆ ತಾನು ದೇವರಿಗೆ ಮೀಸಲಾಗಿ ಬಿಟ್ಟ ಕೂದಲು ತಲೆಯ ಮೇಲೆ ಇದೆಯಲ್ಲಾ.
سَوَاءٌ كَانَ الْمَيْتُ أَبَاهُ أَمْ أُمَّهُ أَمْ أَخَاهُ أَمْ أُخْتَهُ فَلا يَتَنَجَّسْ مِنْ أَجْلِهِمْ عِنْدَ مَوْتِهِمْ، لأَنَّ رَمْزَ نُسْكِ إِلَهِهِ عَلَى رَأْسِهِ.٧
8 ತಾನು ಪ್ರತಿಷ್ಠಿಸಿಕೊಂಡಿರುವ ದಿನಗಳೆಲ್ಲೆಲ್ಲಾ ಅವನು ಯೆಹೋವನಿಗೆ ಮೀಸಲಾಗಿಯೇ ಇರಬೇಕು.
وَيَكُونُ كُلَّ أَيَّامِ نَذْرِهِ مُقَدَّساً لِلرَّبِّ.٨
9 ಯಾರಾದರೂ ಆಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತರೆ, ತಾನು ಪ್ರತಿಷ್ಠಿಸಿಕೊಂಡ ತಲೆಯ ಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.
وَإذَا تَنَجَّسَ شَعْرُ انْتِذَارِهِ عَلَى أَثَرِ مَوْتِ أَحَدٍ عِنْدَهُ بَغْتَةً، يَحْلِقُ شَعْرَهُ بَعْدَ ذَلِكَ بِسَبْعَةِ أَيَّامٍ فَيَطْهُرُ.٩
10 ೧೦ ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.
ثُمَّ فِي الْيَوْمِ الثَّامِنِ يَأْتِي بِيَمَامَتَيْنِ أَوْ فَرْخَيْ حَمَامٍ إِلَى الْكَاهِنِ عِنْدَ مَدْخَلِ خَيْمَةِ الاجْتِمَاعِ.١٠
11 ೧೧ ಯಾಜಕನು ಒಂದನ್ನು ದೋಷಪರಿಹಾರ ಯಜ್ಞವಾಗಿ, ಇನ್ನೊಂದನ್ನು ಸರ್ವಾಂಗಹೋಮವಾಗಿ ಸಮರ್ಪಿಸಿ ಶವಸೋಂಕಿದವನಿಗಾಗಿ ದೋಷಪರಿಹಾರ ಮಾಡಿ ಅವನ ತಲೆಯ ಕೂದಲನ್ನು ಆ ದಿನದಿಂದ ಪವಿತ್ರವೆಂದು ನಿರ್ಣಯಿಸಬೇಕು.
فَيُقَدِّمُ الْكَاهِنُ أَحَدَهُمَا ذَبِيحَةَ خَطِيئَةٍ وَالآخَرَ مُحْرَقَةً، وَيُكَفِّرُ عَنْهُ خَطِيئَتَهُ لِوُجُودِهِ أَمَامَ جُثَّةِ مَيْتٍ، وَيُقَدِّسُ رَأْسَهُ فِي ذَلِكَ الْيَوْمِ بِعَيْنِهِ.١١
12 ೧೨ ಅವನು ಎಷ್ಟು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದಾನೋ, ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದುದರಿಂದ ಕಳೆದುಹೋದ ದಿನಗಳು ವ್ಯರ್ಥವಾದುದೆಂದು ಪರಿಗಣಿಸಬೇಕು.
وَلا تُحْسَبُ لَهُ أَيَّامُ نَذْرِهِ الَّتِي سَبَقَتْ تَنْجِيسَهُ بِسَبَبِ الْمَيْتِ، وَعَلَيْهِ أَنْ يَبْدَأَ عَدَّ أَيَّامِ فَتْرَةِ نَذْرِهِ مِنْ جَدِيدٍ، وَيَأْتِيَ بِحَمَلٍ حَوْلِيٍّ وَيُقَدِّمَهُ ذَبِيحَةَ إِثْمٍ.١٢
13 ೧೩ ನಾಜೀರನು ತನ್ನ ವ್ರತದಿನಗಳು ಮುಗಿದಾಗ ತನ್ನನ್ನು ಸಮರ್ಪಿಸಬೇಕಾದ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬರಬೇಕು.
وَهَذِهِ هِيَ شَرِيعَةُ النَّذِيرِ عِنْدَمَا يَسْتَوْفِي أَيَّامَ نَذْرِهِ: يَأْتِي إِلَى مَدْخَلِ خَيْمَةِ الاجْتِمَاعِ،١٣
14 ೧೪ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವುವೆಂದರೆ: ಅವನು ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಟಗರಿನ ಮರಿಯನ್ನು, ದೋಷಪರಿಹಾರ ಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಹೆಣ್ಣು ಕುರಿಮರಿಯನ್ನು, ಸಮಾಧಾನಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಟಗರನ್ನು ತರಬೇಕು.
فَيُقَدِّمُ قُرْبَانَهُ لِلرَّبِّ حَمَلاً حَوْلِيًّا، بِلا عَيْبٍ، لِيَكُونَ مُحْرَقَةً، وَنَعْجَةً حَوْلِيَّةً، صَحِيحَةً، لِتَكُونَ ذَبِيحَةَ خَطِيئَةٍ، وَكَبْشاً سَلِيماً لِيَكُونَ ذَبِيحَةَ سَلامَةٍ.١٤
15 ೧೫ ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು.
فَضْلاً عَنْ سَلٍّ مِنْ كَعْكِ فَطِيرٍ مَعْجُونٍ بِزَيْتٍ، وَرِقَاقٍ غَيْرِ مُخْتَمِرَةٍ مَدْهُونَةٍ بِالزَّيْتِ مَعَ تَقْدِمَةِ دَقِيقٍ وَخَمْرٍ.١٥
16 ೧೬ ಯಾಜಕನು ಇವುಗಳನ್ನು ಯೆಹೋವನ ಸನ್ನಿಧಿಗೆ ತಂದು ನಾಜೀರನ ದೋಷಪರಿಹಾರಕ ಯಜ್ಞವನ್ನೂ ಮತ್ತು ಸರ್ವಾಂಗಹೋಮವನ್ನೂ ಸಮರ್ಪಿಸಬೇಕು.
فَيُقَدِّمُهَا الْكَاهِنُ أَمَامَ الرَّبِّ ذَبِيحَةَ خَطِيئَتِهِ وَمُحْرَقَتَهُ.١٦
17 ೧೭ ಆ ಟಗರನ್ನೂ, ಪುಟ್ಟಿ ತುಂಬಾ ಹುಳಿಯಿಲ್ಲದ ರೊಟ್ಟಿಗಳನ್ನೂ, ಯಾಜಕನು ಯೆಹೋವನಿಗೆ ಸಮಾಧಾನಯಜ್ಞವಾಗಿ ಸಮರ್ಪಿಸಬೇಕು. ಅವನು ತಂದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ನೈವೇದ್ಯಮಾಡಬೇಕು.
ثُمَّ يُقَرِّبُ كَبْشَ ذَبِيحَةِ السَّلامِ مَعَ سَلِّ كَعْكِ الْفَطِيرِ. وَأَخِيراً يَرْفَعُ الْكَاهِنُ تَقْدِمَةَ الدَّقِيقِ وَالْخَمْرَ.١٧
18 ೧೮ ಆಗ ನಾಜೀರನು ತನ್ನ ಸಮರ್ಪಣೆಯ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.
ثُمَّ يَحْلِقُ النَّذِيرُ شَعْرَ انْتِذَارِهِ عِنْدَ مَدْخَلِ خَيْمَةِ الاجْتِمَاعِ، وَيُحْرِقُهُ عَلَى نَارِ ذَبِيحَةِ السَّلامِ.١٨
19 ೧೯ ತರುವಾಯ ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ, ಪುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು, ಹಾಗೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡು ನಾಜೀರನು ಕ್ಷೌರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಅರ್ಪಿಸಬೇಕು.
ثُمَّ يَأْخُذُ الْكَاهِنُ كَتِفَ الْكَبْشِ بَعْدَ سَلْقِهِ، وَكَعْكَةَ فَطِيرٍ وَاحِدَةً وَرِقَاقَةً وَاحِدَةً. وَيَضَعُهَا بَيْنَ يَدَيِ النَّذِيرِ بَعْدَ حَلْقِهِ شَعْرَ انْتِذَارِهِ.١٩
20 ೨೦ ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸಿ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಿಸಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬೇಕು.
وَيُرَجِّحُهَا الْكَاهِنُ أَمَامَ الرَّبِّ، فَتَكُونُ نَصِيباً مُقَدَّساً لِلْكَاهِنِ مَعَ صَدْرِ التَّرْجِيحِ وَسَاقِ الذَّبِيحَةِ. وَبَعْدَ ذَلِكَ يَشْرَبُ النَّذِيرُ خَمْراً.٢٠
21 ೨೧ ಹರಕೆಮಾಡಿಕೊಂಡ ನಾಜೀರರ ವ್ರತ ನಿಯಮವು ಇದೇ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೆವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.”
هَذِهِ هِيَ شَرِيعَةُ النَّذِيرِ الَّذِي يَنْذُرُ تَقْدِمَةً لِلرَّبِّ وَقْتَ نُسْكِهِ، فَضْلاً عَنْ تَقْدِمَاتِهِ الطَّوْعِيَّةِ الَّتِي يَبْذُلُهَا. وَعَلَيْهِ أَنْ يَفِيَ بِمَا نَذَرَ حَسَبَ شَرِيعَةِ انْتِذَارِهِ».٢١
22 ೨೨ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
وَقَالَ الرَّبُّ لِمُوسَى:٢٢
23 ೨೩ “ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಹೀಗೆ ಆಶೀರ್ವದಿಸಬೇಕು. ಈ ಪ್ರಕಾರ ಅವರಿಗೆ ಹೇಳಬೇಕು,
«أَوْصِ هَرُونَ وَأَبْنَاءَهُ قَائِلاً: هَذَا مَا يُبَارِكُونَ بِهِ بَنِي إِسْرَائِيلَ قَائِلِينَ لَهُمْ:٢٣
24 ೨೪ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ;
يُبَارِكُكَ الرَّبُّ وَيَحْرُسُكَ.٢٤
25 ೨೫ ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ;
يُضِيءُ الرَّبُّ بِوَجْهِهِ عَلَيْكَ وَيَرْحَمُكَ.٢٥
26 ೨೬ ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.
يَلْتَفِتُ الرَّبُّ بِوَجْهِهِ إِلَيْكَ وَيَمْنَحُكَ سَلاماً.٢٦
27 ೨೭ ಹೀಗೆ ಅವರು ಇಸ್ರಾಯೇಲರನ್ನು ಕುರಿತು ನನ್ನ ಹೆಸರನ್ನು ಉಚ್ಚರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.”
وَهَكَذَا يَجْعَلُونَ اسْمِي عَلَى بَنِي إِسْرَائِيلَ وَأَنَا أُبَارِكُهُمْ».٢٧

< ಅರಣ್ಯಕಾಂಡ 6 >