< ಓಬದ್ಯನು 1 >

1 ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋಮನ್ನು ಕುರಿತು ಹೀಗೆ ನುಡಿಯುತ್ತಾನೆ: ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ. ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ಹೊರಡಿರಿ! ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳೋಣ”
အရှင်ထာဝရဘုရားသည် ဧဒုံပြည်ကို ရည်မှတ် ၍ မိန့်တော်မူသည်ကား၊ ထာဝရဘုရား ကြွေးကြော်တော် မူသံကို ငါတို့သည် ကြားကြ၏။ သင်တို့ထ၍ ဧဒုံပြည်ကို တိုက်ခြင်းငှါ စစ်ချီကြလော့ဟု၊ တပါးအမျိုးသားတို့ထံသို့ သံတမန်ကို စေလွှတ်တော်မူပြီ။
2 ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿ ಮಾಡಿದ್ದೇನೆ. ನೀನು ಬಹಳವಾಗಿ ತಾತ್ಸಾರಕ್ಕೆ ಗುರಿಯಾಗಿರುವಿ.
သင့်ကို တပါးအမျိုးသားတို့တွင် ယုတ်မာစေခြင်း ငှါ ငါစီရင်သဖြင့်၊ သင်၏အသရေသည် အလွန်ရှုတ်ချ ခြင်းရှိလိမ့်မည်။
3 ಉನ್ನತ ಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ, ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು? ಎಂದುಕೊಳ್ಳುವ ಜನರೇ, ನಿಮ್ಮ ಹೃದಯದ ಒಣ ಹೆಮ್ಮೆಯು ನಿಮ್ಮನ್ನು ಮೋಸಗೊಳಿಸಿದೆ.
ကျောက်ကြားတို့၌နေ၍ မြင့်သောအရပ်ကို ခိုလှုံလျက်၊ ငါ့ကို မြေသို့ အဘယ်သူ နှိမ့်ချနိုင်သနည်းဟု အောက်မေ့သောသူ ဖြစ်သောကြောင့်၊ သင်၏မာနသည် သင့်ကို လှည့်စားပြီ။
4 ನೀನು ಹದ್ದಿನಂತೆ ಮೇಲಕ್ಕೆ ಏರಿದರೂ, ನಿನ್ನ ಗೂಡು ನಕ್ಷತ್ರ ಮಂಡಲದಲ್ಲಿ ನೆಲೆಗೊಂಡಿದ್ದರೂ, ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು. ಇದು ಯೆಹೋವನ ನುಡಿ.
သင်သည် ရွှေလင်းတကဲ့သို့ ကိုယ်ကို ချီးမြှောက် ၍၊ ကြယ်တို့တွင် အသိုက်ကို လုပ်သော်လည်း၊ ထိုအရပ်မှ သင့်ကို ငါနှိမ့်ချမည်ဟု ထာဝရဘုရား မိန့်တော်မူ၏။
5 ಕಳ್ಳರು ನಿನ್ನಲ್ಲಿ ನುಗ್ಗಿದರೆ, ರಾತ್ರಿ ವೇಳೆಯಲ್ಲಿ ಪಂಜುಗಳ್ಳರು ನಿನ್ನ ಮೇಲೆ ಬಿದ್ದರೆ, ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುವರಲ್ಲವೇ? ಆಹಾ! ನೀನು ಎಷ್ಟು ಭಂಗಪಟ್ಟಿದ್ದೀ! ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ, ಹಕ್ಕಲನ್ನು ಉಳಿಸುವುದಿಲ್ಲವೋ?
ညဉ့်အခါ သူခိုးထားပြတို့သည် သင်ရှိရာသို့ လာ လျှင်၊ စိတ်ပြေလောက်အောင်သာ ခိုးယူကြလိမ့်မည် မဟုတ်လော။ စပျစ်သီးကို ဆွတ်သောသူတို့သည် လာ လျှင်၊ သူတပါးလိုက်၍ ဆွတ်စရာဘို့ ကြွင်းစေကြလိမ့်မည် မဟုတ်လော။
6 ಏಸಾವನ ಆಸ್ತಿಯು ಸಂಪೂರ್ಣ ನಾಶವಾಗಿ ಅದರ ನಿಧಿನಿಕ್ಷೇಪಗಳು ಸಂಪೂರ್ಣವಾಗಿ ಸೂರೆಯಾಗಿದ್ದು ಹೇಗೆ?
သင်သည် အလွန်ပျက်စီးပြီတကား။ ဧသော သည် အလွန်အစစ်ခံရပြီတကား။ သူဝှက်ထားသော ဥစ္စာ ကို အလွန်ရှာဖွေကြသည်တကား။
7 ನಿನ್ನ ಮಿತ್ರ ಮಂಡಲಿಯವರೆಲ್ಲರೂ ನಿನ್ನನ್ನು ನಿನ್ನ ಮೇರೆಯ ಆಚೆಗೆ ತಳ್ಳಿಬಿಟ್ಟಿದ್ದಾರೆ, ನಿನ್ನ ಆಪ್ತರು ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ವಿವೇಕವಿಲ್ಲದೆ ನಿನಗೆ ಉರುಲೊಡ್ಡಿದ್ದಾರೆ.
သင်နှင့်မိဿဟာယဖွဲ့သော သူအပေါင်းတို့ သည် ပြည်စွန်းသို့ နှင်ကြပြီ။ အဆွေလုပ်သော သူတို့သည် သင့်ကို လှည့်စား၍ နိုင်ကြပြီ။ သင်နှင့်အတူ စားသောက် သောသူတို့သည် သင့်အောက်၌ ကျော့ကွင်းကို ထောင် ထားကြပြီ။ သင်၏ဥာဏ်ပညာ ကုန်ပြီ။
8 ಯೆಹೋವನು ಇಂತೆನ್ನುತ್ತಾನೆ. “ಆ ದಿನದಲ್ಲಿ ನಾನು ಎದೋಮಿನೊಳಗೆ ಜ್ಞಾನಿಗಳನ್ನು ಅಳಿಸದೇ ಬಿಡುವೆನೋ,” ಏಸಾವನ ಪರ್ವತದೊಳಗಿಂದ ವಿವೇಕವನ್ನು ಕಿತ್ತುಹಾಕದೇ ಇರುವೆನೇ?
ထာဝရဘုရား မိန့်တော်မူသည်ကား၊ ထိုကာလ ၌ ဧဒုံပြည်မှ ပညာရှိတို့ကို၎င်း၊ ဧသော၏တောင်မှ ဥာဏ် ကောင်းသော သူတို့ကို၎င်း ငါပယ်ရှားမည်။
9 ತೇಮಾನ್ ಪಟ್ಟಣವೇ, ನಿನ್ನ ಶೂರರು ಧೈರ್ಯಗೆಟ್ಟು ಎಲ್ಲರೂ ಹತರಾಗಿ ಏಸಾವನ ಪರ್ವತದೊಳಗೆ ನಿರ್ಮೂಲರಾಗುವರು.
အိုတေမန်မြို့၊ ဧသော၏တောင်မှ ခပ်သိမ်းသော သူတို့ကို ပယ်ဖြတ်မည်အကြောင်း၊ သင်၏ သူရဲတို့သည် ကြောက်ကြလိမ့်မည်။
10 ೧೦ ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿಮಿತ್ತ ಅವಮಾನವು ನಿನ್ನನ್ನು ಕವಿಯುವುದು. ನಿತ್ಯನಾಶನಕ್ಕೆ ಗುರಿಯಾಗುವಿ.
၁၀သင်သည် ညီယာကုပ်ကို အသေသတ်ခြင်း၊ အနိုင်အထက်ပြုခြင်းအပြစ်ကြောင့် ကိုယ်တိုင်အရှက်ကွဲ ၍၊ အကုန်အစင်ပယ်ဖြတ်ခြင်းကို ခံရလိမ့်မည်။
11 ೧೧ ಅನ್ಯರು ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ, ಮ್ಲೇಚ್ಛರು ಅವನ ಪುರದ್ವಾರಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಲ್ಲಿ ನೀನು ಅವನಿಗೆ ಸಹಾಯ ಮಾಡದೆ ಸುಮ್ಮನೆ ನಿಂತಿದ್ದೆ. ನೀನೂ ಅವರಂತೆ ನಿನ್ನ ತಮ್ಮನಿಗೆ ಒಬ್ಬ ಶತ್ರುವಿನಂತೆ ಕಂಡುಬಂದಿ.
၁၁သင်သည် တဘက်၌နေသောနေ့၊ တကျွန်းတ နိုင်ငံသားတို့သည် သူ၏အမှုထမ်းများကို သိမ်းသွားသော နေ့၊ တပါးအမျိုးသားတို့သည် သူ၏မြို့တံခါးထဲသို့ ဝင်၍ ယေရုရှလင်မြို့ကို စာရေးတံချသောနေ့၌ သင်သည် လက်ခံသောသူဖြစ်၏။
12 ೧೨ ನಿನ್ನ ತಮ್ಮನ ದುರ್ದಿನದಲ್ಲಿ ಅವನ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು. ಯೆಹೂದ್ಯರ ನಾಶನದ ದಿನದಲ್ಲಿ ಹಿಗ್ಗಬಾರದಾಗಿತ್ತು. ಅವರ ಇಕ್ಕಟ್ಟಿನ ವೇಳೆಯಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು.
၁၂သင်၏ညီသည် တပါးအမျိုးသားဖြစ်သောနေ့၌ သူ၏အမှုကို သင်မကြည့်သင့်။ ယုဒအမျိုးသားတို့သည် ပျက်စီးသောနေ့၌ မဝါကြွားသင့်။ ဒုက္ခခံရသောနေ့၌ စော်ကားသောစကားကို မပြောသင့်။
13 ೧೩ ನನ್ನ ಜನರ ವಿಪತ್ಕಾಲದಲ್ಲಿ ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಾಗಿತ್ತು, ಅವರ ವಿಪತ್ಕಾಲದಲ್ಲಿ ಅವರ ಕೇಡಿಗೆ ನಿನ್ನಂಥವನ ಕಣ್ಣು ಅರಳಬಾರದಾಗಿತ್ತು. ಅವರ ವಿಪತ್ಕಾಲದಲ್ಲಿ ಅವರ ಆಸ್ತಿಯ ಮೇಲೆ ನೀನು ಕೈಹಾಕಬಾರದಾಗಿತ್ತು.
၁၃ငါ၏လူတို့သည် ဘေးဥပဒ်ကို ခံရသောနေ့၌ သူတို့နေရာတံခါးအတွင်းသို့ မဝင်သင့်။ ဘေးဥပဒ်ကို ခံရ သောနေ့၌ သူတို့၏ဆင်းရဲဒုက္ခကို မကြည့်မရှုသင့်။ ဘေး ဥပဒ်ကို ခံရသောနေ့၌ သူတို့ဥစ္စာကို မလုမယူသင့်။
14 ೧೪ ನೀನು ಮರಣದಿಂದ ಓಡಿಹೋಗುವವರನ್ನು ಹಿಡಿದು ಕೊಲ್ಲುವುದಕ್ಕೆ ಅವರ ಮಾರ್ಗಗಳಲ್ಲಿ ನಿಂತು ಅವರನ್ನು ಸಂಹರಿಸಿದೆ. ಆ ಇಕ್ಕಟ್ಟಿನ ವೇಳೆಯಲ್ಲಿ ಪ್ರಾಣ ಉಳಿಸಿಕೊಂಡವರನ್ನು ಹಿಡಿದು ಶತ್ರುಗಳಿಗೆ ಒಪ್ಪಿಸಿಕೊಟ್ಟೆ.
၁၄လွတ်သောသူတို့ကို ဆီးတားခြင်းငှါ ဖြတ်လမ်း၌ မရပ်မနေသင့်။ အမှုရောက်သောနေ့၌ ကျန်ကြွင်းသော သူတို့ကို မအပ်သင့်။
15 ೧೫ ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ. ಎದೋಮೇ, ನೀನು ಮಾಡಿದ್ದೇ ನಿನಗಾಗುವುದು. ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವುದು.
၁၅အကြောင်းမူကား၊ ထာဝရဘုရား၏နေ့ရက် သည် ခပ်သိမ်းသောလူမျိုးတို့နှင့် နီးပြီ။ သင်ပြုသည်အ တိုင်း သင်၌ သူတပါးပြုလိမ့်မည်။ သင်ပြုသောအမှုသည် သင့်ခေါင်းပေါ်သို့ ရောက်ရလိမ့်မည်။
16 ೧೬ ನನ್ನ ಜನರೇ, ನೀವು ನನ್ನ ಪವಿತ್ರಪರ್ವತದಲ್ಲಿ ನನ್ನ ದಂಡನೆಯ ಕಹಿ ಪಾನಮಾಡಿದ್ದಿರಿ. ನಿಮ್ಮ ಸುತ್ತಲಿರುವ ಸಕಲ ಜನಾಂಗಗಳೂ ಹೀಗೆ ನಿತ್ಯವಾಗಿ ಪಾನಮಾಡುವವು. ಹೌದು ಆ ರಾಜ್ಯಗಳು ಹೀಗೆ ಕುಡಿದು ಕಬಳಿಸಿ ಅಸ್ತಿತ್ವದಲ್ಲಿ ಇಲ್ಲದಂತೆ ಆಗುವವು.
၁၆ယုဒအမျိုးသားတို့သည် သန့်ရှင်းသော ငါ့တောင် ပေါ်မှာ စားသောက်သကဲ့သို့၊ ပတ်လည်၌နေသော လူမျိုး အပေါင်းတို့သည် စားသောက်ရကြလိမ့်မည်။ စားသောက် ၍ မျိုသဖြင့် မရှိဘူးသောသူကဲ့သို့ ဖြစ်ရကြလိမ့်မည်။
17 ೧೭ ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು, ಆ ಪರ್ವತವು ಪರಿಶುದ್ಧವಾಗಿರುವುದು; ಯಾಕೋಬನ ವಂಶದವರು ತಮ್ಮ ಸ್ವತ್ತುಗಳನ್ನು ಅನುಭವಿಸುವರು.
၁၇ဇိအုန်တောင်ပေါ်မှာ ဘေးလွတ်သောသူအချို့ ရှိကြလိမ့်မည်။ သန့်ရှင်းသောအရပ်ဖြစ်လိမ့်မည်။ ယာ ကုပ်အမျိုးသည် မိမိပိုင်ထိုက်သောမြေကို ပိုင်ရလိမ့်မည်။
18 ೧೮ ಯಾಕೋಬನವಂಶ ಅಗ್ನಿಯಾಗಿಯೂ, ಯೋಸೇಫನ ವಂಶ ಜ್ವಾಲೆಯಾಗಿಯೂ, ಇವೆರಡೂ ಸೇರಿ ಕೊಳೆಯಂತೆ ಇರುವ ಏಸಾವನ ವಂಶವನ್ನು ಧಗಧಗನೆ ದಹಿಸಿ ಭಸ್ಮ ಮಾಡುವವು. ಏಸಾವನ ವಂಶದವರಲ್ಲಿ ಯಾರೂ ಉಳಿಯರು, ಇದು ಯೆಹೋವನೇ ನುಡಿದಿದ್ದಾನೆ.
၁၈ယာကုပ်အမျိုးသည် မီး၊ ယောသပ်အမျိုးသည် မီးလျှံ၊ ဧသောအမျိုးသည် အမှိုက်ဖြစ်လျက် မီးညှိ၍ လောင်သဖြင့်၊ ဧသောအမျိုးသား မကျန်ကြွင်းရ။ ထာဝရ ဘုရားမိန့်တော်မူပြီ။
19 ೧೯ ಆಗ ದಕ್ಷಿಣ ಪ್ರಾಂತ್ಯದವರು ಏಸಾವಿನ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವರು, ಇಳಕಲಿನ ಪ್ರದೇಶದವರು ಫಿಲಿಷ್ಟಿಯರನ್ನೂ, ಎಫ್ರಾಯೀಮಿನ ಭೂಮಿಯನ್ನೂ ಮತ್ತು ಸಮಾರ್ಯದ ನೆಲವನ್ನೂ ವಶಮಾಡಿಕೊಳ್ಳುವರು. ಬೆನ್ಯಾಮೀನಿನವರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.
၁၉တောင်မျက်နှာသားတို့သည် ဧသော၏တောင် ကို၎င်း၊ မြေညီသောအရပ်သားတို့သည် ဖိလိတ္တိပြည်ကို ၎င်း၊ ဧဖရိမ်လယ်ပြင်နှင့် ရှမာရိလယ်ပြင်ကို၎င်း၊ ဗင်္ယာ မိန်အမျိုးသည် ဂိလဒ်ပြည်ကို၎င်း သိမ်းယူကြလိမ့်မည်။
20 ೨೦ ಸೆರೆಹೋಗಿರುವ ಆ ದಂಡಿನ ಇಸ್ರಾಯೇಲರು ಕಾನಾನ್ಯರ ದೇಶವನ್ನು ಚಾರೆಪತಿನವರೆಗೆ ತಮ್ಮದಾಗಿ ಮಾಡಿಕೊಳ್ಳುವರು. ಸೆಫಾರ ದಿನದಲ್ಲಿ ಸೆರೆಯಾಗಿ ಹೋಗಿರುವ ಯೆರೂಸಲೇಮಿನವರು ದಕ್ಷಿಣ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.
၂၀သိမ်းသွားခြင်းကို ခံရ၍၊ ခါနနိလူတို့တွင်ရှိသော ဣသရေလအမျိုးအလုံးအရင်းသည် ဇရတ္တမြို့တိုင်အောင်၎င်း၊ သိမ်းသွားခြင်းကို ခံရ၍ သေဖရဒ်ပြည်၌ရှိသော ယေရုရှလင်မြို့သားတို့သည် တောင်မျက်နှာ မြို့ရွာတို့ကို ၎င်း သိမ်းယူကြလိမ့်မည်။
21 ೨೧ ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವನ ಪರ್ವತವನ್ನು ಆಳುವರು. ಆಗ ಆ ರಾಜ್ಯವು ಯೆಹೋವನದಾಗಿರುವುದು.
၂၁ဧသော၏တောင်ကို တရားစီရင်ခြင်းငှါ ကယ် တင်သောသူတို့သည် ဇိအုန်တောင်ပေါ်သို့ တက်ကြလိမ့် မည်။ တိုင်းနိုင်ငံသည်လည်း ထာဝရဘုရား၏ နိုင်ငံတော် ဖြစ်လိမ့်သတည်း။

< ಓಬದ್ಯನು 1 >