< ಓಬದ್ಯನು 1 >

1 ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋಮನ್ನು ಕುರಿತು ಹೀಗೆ ನುಡಿಯುತ್ತಾನೆ: ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ. ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ಹೊರಡಿರಿ! ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳೋಣ”
ओबदियाले देखेका दर्शन । एदोमको विषयमा परमप्रभु परमेश्‍वर यसो भन्‍नुहुन्छ: “हामीले परमप्रभुबाट एउटा सन्देश सुनेका छौं, र जातिहरूका बिचमा एक जना राजदूतलाई यसो भनेर पठाइएको छ, ‘उठ! हामी युद्धको निम्ति त्यसको विरुद्धमा उठौं!’
2 ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿ ಮಾಡಿದ್ದೇನೆ. ನೀನು ಬಹಳವಾಗಿ ತಾತ್ಸಾರಕ್ಕೆ ಗುರಿಯಾಗಿರುವಿ.
हेर्, म तिमीहरूलाई जाति-जातिका बिचमा सानो तुल्याउनेछु, तिमीहरू अति घृणित हुनेछौ ।
3 ಉನ್ನತ ಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ, ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು? ಎಂದುಕೊಳ್ಳುವ ಜನರೇ, ನಿಮ್ಮ ಹೃದಯದ ಒಣ ಹೆಮ್ಮೆಯು ನಿಮ್ಮನ್ನು ಮೋಸಗೊಳಿಸಿದೆ.
ए चट्टानका छेदहरूमा, आ-आफ्ना अग्ला घरहरूमा बस्‍नेहरू हो । आ-आफ्ना हृदयमा यसो भन्‍नेहरू “कसले मलाई तल जमिनमा खसाल्‍छ र?” तिमीहरूको हृदयको घमण्डले तिमीहरूलाई धोका दिएको छ ।
4 ನೀನು ಹದ್ದಿನಂತೆ ಮೇಲಕ್ಕೆ ಏರಿದರೂ, ನಿನ್ನ ಗೂಡು ನಕ್ಷತ್ರ ಮಂಡಲದಲ್ಲಿ ನೆಲೆಗೊಂಡಿದ್ದರೂ, ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು. ಇದು ಯೆಹೋವನ ನುಡಿ.
तिमीहरू गरूडझैं उचाइमा उडे पनि र तिमीहरूको गुँड ताराहरूका बिचमा भए पनि, तिमीहरूलाई त्यहाँबाट म तल ल्याउनेछु, परमप्रभु भन्‍नुहुन्छ ।
5 ಕಳ್ಳರು ನಿನ್ನಲ್ಲಿ ನುಗ್ಗಿದರೆ, ರಾತ್ರಿ ವೇಳೆಯಲ್ಲಿ ಪಂಜುಗಳ್ಳರು ನಿನ್ನ ಮೇಲೆ ಬಿದ್ದರೆ, ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುವರಲ್ಲವೇ? ಆಹಾ! ನೀನು ಎಷ್ಟು ಭಂಗಪಟ್ಟಿದ್ದೀ! ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ, ಹಕ್ಕಲನ್ನು ಉಳಿಸುವುದಿಲ್ಲವೋ?
तिमीहरूकहाँ चोरहरू आउँदा, रातमा डाँकुहरू आउँदा— तिमीहरूको कस्तो सर्वनाश होला!— के तिनीहरूले आफूलाई चाहिने जति मात्र चोरेर लाँदैनन् र? दाख बाटुल्‍नेहरू तिमीहरूकहाँ आए भने, तिनीहरूले अलिअलि सिलाहरू छोड्‍दैनन् र?
6 ಏಸಾವನ ಆಸ್ತಿಯು ಸಂಪೂರ್ಣ ನಾಶವಾಗಿ ಅದರ ನಿಧಿನಿಕ್ಷೇಪಗಳು ಸಂಪೂರ್ಣವಾಗಿ ಸೂರೆಯಾಗಿದ್ದು ಹೇಗೆ?
तर एसाव कसरी लुटिएको छ, त्यसका लुकाइएका धनसम्पत्तिको खोजिनेछ ।
7 ನಿನ್ನ ಮಿತ್ರ ಮಂಡಲಿಯವರೆಲ್ಲರೂ ನಿನ್ನನ್ನು ನಿನ್ನ ಮೇರೆಯ ಆಚೆಗೆ ತಳ್ಳಿಬಿಟ್ಟಿದ್ದಾರೆ, ನಿನ್ನ ಆಪ್ತರು ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ವಿವೇಕವಿಲ್ಲದೆ ನಿನಗೆ ಉರುಲೊಡ್ಡಿದ್ದಾರೆ.
तेरा मित्रराष्‍ट्रका सबै मानिसहरूले तँलाई सिमाना कटाउनेछन् । तँसँग मिलापमा भएका मानिसहरूले तँलाई धोका दिएका छन्, र तेरो विरूद्धमा प्रबल भएका छन् । तेरो रोटी खानेहरूले नै तेरोमुनि पासो थापेका छन् । उसमा कुनै सुझबुझ नै छैन ।
8 ಯೆಹೋವನು ಇಂತೆನ್ನುತ್ತಾನೆ. “ಆ ದಿನದಲ್ಲಿ ನಾನು ಎದೋಮಿನೊಳಗೆ ಜ್ಞಾನಿಗಳನ್ನು ಅಳಿಸದೇ ಬಿಡುವೆನೋ,” ಏಸಾವನ ಪರ್ವತದೊಳಗಿಂದ ವಿವೇಕವನ್ನು ಕಿತ್ತುಹಾಕದೇ ಇರುವೆನೇ?
परमप्रभु भन्‍नुहुन्छ, “त्यो दिनमा के म एदोमबाट बुद्धिमान् मानिसहरूलाई र एसावका पहाडबाट समझदारलाई नाश गर्नेछैनँ र?”
9 ತೇಮಾನ್ ಪಟ್ಟಣವೇ, ನಿನ್ನ ಶೂರರು ಧೈರ್ಯಗೆಟ್ಟು ಎಲ್ಲರೂ ಹತರಾಗಿ ಏಸಾವನ ಪರ್ವತದೊಳಗೆ ನಿರ್ಮೂಲರಾಗುವರು.
ए तेमान, तेरा बलवान मानिसहरू निराश हुनेछन्, जसको कारणले एसावका पहाडबाट सबै मानिसहरू काटिएर सखाप हुनेछन् ।
10 ೧೦ ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿಮಿತ್ತ ಅವಮಾನವು ನಿನ್ನನ್ನು ಕವಿಯುವುದು. ನಿತ್ಯನಾಶನಕ್ಕೆ ಗುರಿಯಾಗುವಿ.
तेरो भाइ याकूबमाथि गरिएको क्रूरताको कारणले, तँ शर्ममा पर्नेछस्, र तँ सधैंको निम्ति नाश हुनेछस् ।
11 ೧೧ ಅನ್ಯರು ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ, ಮ್ಲೇಚ್ಛರು ಅವನ ಪುರದ್ವಾರಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಲ್ಲಿ ನೀನು ಅವನಿಗೆ ಸಹಾಯ ಮಾಡದೆ ಸುಮ್ಮನೆ ನಿಂತಿದ್ದೆ. ನೀನೂ ಅವರಂತೆ ನಿನ್ನ ತಮ್ಮನಿಗೆ ಒಬ್ಬ ಶತ್ರುವಿನಂತೆ ಕಂಡುಬಂದಿ.
तँ एक्‍लै खडा भएको दिनमा, अनजान मानिसहरूले त्यसको धन खोसेर लगेका र परदेशीहरू त्यसका मूल ढोकाहरूभित्र पसेका र यरूशलेमको निम्ति चिट्ठा हालेका दिनमा, तँ पनि तीमध्‍ये एकझैं थिइस् ।
12 ೧೨ ನಿನ್ನ ತಮ್ಮನ ದುರ್ದಿನದಲ್ಲಿ ಅವನ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು. ಯೆಹೂದ್ಯರ ನಾಶನದ ದಿನದಲ್ಲಿ ಹಿಗ್ಗಬಾರದಾಗಿತ್ತು. ಅವರ ಇಕ್ಕಟ್ಟಿನ ವೇಳೆಯಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು.
तर आफ्नो भाइको दुर्भाग्यको दिनमा हर्षित नहो, र यहूदाका मानिसहरूको विनाशको दिनमा तिनीहरूमाथि आनन्दित नहो । तिनीहरूको विपत्तिको दिनमा घमण्ड नगर् ।
13 ೧೩ ನನ್ನ ಜನರ ವಿಪತ್ಕಾಲದಲ್ಲಿ ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಾಗಿತ್ತು, ಅವರ ವಿಪತ್ಕಾಲದಲ್ಲಿ ಅವರ ಕೇಡಿಗೆ ನಿನ್ನಂಥವನ ಕಣ್ಣು ಅರಳಬಾರದಾಗಿತ್ತು. ಅವರ ವಿಪತ್ಕಾಲದಲ್ಲಿ ಅವರ ಆಸ್ತಿಯ ಮೇಲೆ ನೀನು ಕೈಹಾಕಬಾರದಾಗಿತ್ತು.
मेरा मानिसहरूको विपत्तिको दिनमा तिनीहरूका मूल ढोकाभित्र प्रवेश नगर् । तिनीहरूको आपदको दिनमा तिनीहरूको कष्‍टमाथि हर्षित नहो । तिनीहरूको विनाशको दिनमा तिनीहरूको धन-सम्पत्ति नलुट् ।
14 ೧೪ ನೀನು ಮರಣದಿಂದ ಓಡಿಹೋಗುವವರನ್ನು ಹಿಡಿದು ಕೊಲ್ಲುವುದಕ್ಕೆ ಅವರ ಮಾರ್ಗಗಳಲ್ಲಿ ನಿಂತು ಅವರನ್ನು ಸಂಹರಿಸಿದೆ. ಆ ಇಕ್ಕಟ್ಟಿನ ವೇಳೆಯಲ್ಲಿ ಪ್ರಾಣ ಉಳಿಸಿಕೊಂಡವರನ್ನು ಹಿಡಿದು ಶತ್ರುಗಳಿಗೆ ಒಪ್ಪಿಸಿಕೊಟ್ಟೆ.
त्यसका भगुवाहरूलाई काट्नलाई दोबाटोमा खडा नहो, र विपत्तिको दिनमा त्यसका बाँकी बचेकाहरूलाई नसुम्‍पी ।
15 ೧೫ ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ. ಎದೋಮೇ, ನೀನು ಮಾಡಿದ್ದೇ ನಿನಗಾಗುವುದು. ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವುದು.
किनकि सबै जातिहरूमाथि परमप्रभुको दिन नजिकै छ । तैंले जस्तो गरेको छस्, तँलाई त्यस्तै गरिनेछ । तेरा कामहरू तेरो आफ्‍नै थाप्‍लोमा फर्किनेछन् ।
16 ೧೬ ನನ್ನ ಜನರೇ, ನೀವು ನನ್ನ ಪವಿತ್ರಪರ್ವತದಲ್ಲಿ ನನ್ನ ದಂಡನೆಯ ಕಹಿ ಪಾನಮಾಡಿದ್ದಿರಿ. ನಿಮ್ಮ ಸುತ್ತಲಿರುವ ಸಕಲ ಜನಾಂಗಗಳೂ ಹೀಗೆ ನಿತ್ಯವಾಗಿ ಪಾನಮಾಡುವವು. ಹೌದು ಆ ರಾಜ್ಯಗಳು ಹೀಗೆ ಕುಡಿದು ಕಬಳಿಸಿ ಅಸ್ತಿತ್ವದಲ್ಲಿ ಇಲ್ಲದಂತೆ ಆಗುವವು.
किनकि जसरी तैंले मेरो पवित्र पर्वतमा पिएको छस्, त्‍यसरी नै सारा जातिहरूले त्यहाँ सधैं पिउनेछन् । तिनीहरूले पिउनेछन् र निल्‍नेछन् अनि तिनीहरू कहिल्यै अस्तित्वमा नभएझैं हुनेछन् ।
17 ೧೭ ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು, ಆ ಪರ್ವತವು ಪರಿಶುದ್ಧವಾಗಿರುವುದು; ಯಾಕೋಬನ ವಂಶದವರು ತಮ್ಮ ಸ್ವತ್ತುಗಳನ್ನು ಅನುಭವಿಸುವರು.
तर भाग्‍न सफल भएकाहरू सियोन पर्वतमा रहनेछन् र त्यो पवित्र हुनेछ । अनि याकूबको घरानाले तिनीहरूका आ-आफ्ना सम्पत्तिको अधिकार गर्नेछन् ।
18 ೧೮ ಯಾಕೋಬನವಂಶ ಅಗ್ನಿಯಾಗಿಯೂ, ಯೋಸೇಫನ ವಂಶ ಜ್ವಾಲೆಯಾಗಿಯೂ, ಇವೆರಡೂ ಸೇರಿ ಕೊಳೆಯಂತೆ ಇರುವ ಏಸಾವನ ವಂಶವನ್ನು ಧಗಧಗನೆ ದಹಿಸಿ ಭಸ್ಮ ಮಾಡುವವು. ಏಸಾವನ ವಂಶದವರಲ್ಲಿ ಯಾರೂ ಉಳಿಯರು, ಇದು ಯೆಹೋವನೇ ನುಡಿದಿದ್ದಾನೆ.
याकूबको घराना आगो हुनेछ, र योसेफको घराना ज्वाला हुनेछ, र एसावको घराना झिंजाहरू हुनेछ, र तिनीहरूले त्यसलाई जलाउनेछन् र भस्म पार्नेछन् । एसावको घरानामा कोही पनि बाँच्‍नेछैन, किनकि परमप्रभुले नै यसो भन्‍नुभएको छ ।”
19 ೧೯ ಆಗ ದಕ್ಷಿಣ ಪ್ರಾಂತ್ಯದವರು ಏಸಾವಿನ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವರು, ಇಳಕಲಿನ ಪ್ರದೇಶದವರು ಫಿಲಿಷ್ಟಿಯರನ್ನೂ, ಎಫ್ರಾಯೀಮಿನ ಭೂಮಿಯನ್ನೂ ಮತ್ತು ಸಮಾರ್ಯದ ನೆಲವನ್ನೂ ವಶಮಾಡಿಕೊಳ್ಳುವರು. ಬೆನ್ಯಾಮೀನಿನವರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.
नेगेवका मानिसहरूले एसावको डाँडामा अधिकार गर्नेछन् र शेपेलाका मानिसहरूले पलिश्‍तीहरूको देशमा अधिकार गर्नेछन् । तिनीहरूले एफ्राइम र सामरियाका देशमा अधिकार गर्नेछन् । अनि बेन्यामीनले गिलादमा अधिकार गर्नेछ ।
20 ೨೦ ಸೆರೆಹೋಗಿರುವ ಆ ದಂಡಿನ ಇಸ್ರಾಯೇಲರು ಕಾನಾನ್ಯರ ದೇಶವನ್ನು ಚಾರೆಪತಿನವರೆಗೆ ತಮ್ಮದಾಗಿ ಮಾಡಿಕೊಳ್ಳುವರು. ಸೆಫಾರ ದಿನದಲ್ಲಿ ಸೆರೆಯಾಗಿ ಹೋಗಿರುವ ಯೆರೂಸಲೇಮಿನವರು ದಕ್ಷಿಣ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.
निर्वासनमा गएको इस्राएलका मानिसहरूको समुहले कनान देशदेखि सारपतसम्मका देश अधिकार गर्नेछ । सपारादमा भएका यरूशलेमका निर्वासितहरूले नेगेवका सहरहरूमा अधिकार गर्नेछन् ।
21 ೨೧ ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವನ ಪರ್ವತವನ್ನು ಆಳುವರು. ಆಗ ಆ ರಾಜ್ಯವು ಯೆಹೋವನದಾಗಿರುವುದು.
उद्धार गर्नेहरू एसावको पहाडी देशमा शासन गर्नलाई सियोन पर्वतसम्म जानेछन्, र त्यो राज्य परमप्रभुको हुनेछ ।

< ಓಬದ್ಯನು 1 >