< ಕೀರ್ತನೆಗಳು 2 >

1 ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?
क्यों मचा रहे हैं राष्ट्र यह खलबली? क्यों देश-देश जुटे हैं विफल षड़्‍यंत्र की रचना में?
2 ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,
याहवेह तथा उनके अभिषिक्त के विरोध में संसार के राजाओं ने एका किया है एकजुट होकर शासक सम्मति कर रहे हैं:
3 “ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ, ಬೇಡಿಗಳನ್ನು ಮುರಿದು ಬಿಸಾಡೋಣ” ಎಂದು ಮಾತನಾಡಿಕೊಳ್ಳುತ್ತಾರಲ್ಲಾ.
“चलो, तोड़ फेंकें उनके द्वारा डाली गई ये बेड़ियां, उतार डालें उनके द्वारा बांधी गई ये रस्सियां.”
4 ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.
वह, जो स्वर्गिक सिंहासन पर विराजमान हैं, उन पर हंसते हैं, प्रभु उनका उपहास करते हैं.
5 ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ,
तब वह उन्हें अपने प्रकोप से डराकर अपने रोष में उन्हें संबोधित करते हैं,
6 “ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.
“अपने पवित्र पर्वत ज़ियोन पर स्वयं मैंने अपने राजा को बसा दिया है.”
7 ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
मैं याहवेह की राजाज्ञा की घोषणा करूंगा: उन्होंने मुझसे कहा है, “तुम मेरे पुत्र हो; आज मैं तुम्हारा जनक हो गया हूं.
8 ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.
मुझसे मांगो, तो मैं तुम्हें राष्ट्र दे दूंगा तथा संपूर्ण पृथ्वी को तुम्हारी निज संपत्ति बना दूंगा.
9 ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.
तुम उन्हें लोहे के छड़ से टुकड़े-टुकड़े कर डालोगे; मिट्टी के पात्रों समान चूर-चूर कर दोगे.”
10 ೧೦ ಆದುದರಿಂದ ಅರಸುಗಳಿರಾ, ವಿವೇಕಿಗಳಾಗಿರಿ; ದೇಶಾಧಿಪತಿಗಳಿರಾ, ಬುದ್ಧಿವಾದಕ್ಕೆ ಕಿವಿಗೊಡಿರಿ.
तब राजाओ, बुद्धिमान बनो; पृथ्वी के न्यायियों, सचेत हो जाओ.
11 ೧೧ ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.
श्रद्धा भाव में याहवेह की आराधना करो; थरथराते हुए आनंद मनाओ.
12 ೧೨ ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.
पूर्ण सच्चाई में पुत्र को सम्मान दो, ऐसा न हो कि वह क्रोधित हो जाए और तुम मार्ग में ही नष्ट हो जाओ, क्योंकि उसका क्रोध शीघ्र भड़कता है. धन्य होते हैं वे सभी, जो उनका आश्रय लेते हैं.

< ಕೀರ್ತನೆಗಳು 2 >