< ಪ್ರಕಟಣೆ 14 >

1 ಆನಂತರ ನಾನು ನೋಡಲಾಗಿ ಯಜ್ಞದ ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.
ତତ୍ପରେ ମୁଁ ଦୃଷ୍ଟିପାତ କଲି, ଆଉ ଦେଖ, ସିୟୋନ ପର୍ବତ ଉପରେ ମେଷଶାବକ ଆଉ ଯେଉଁମାନଙ୍କ କପାଳରେ ତାହାଙ୍କ ନାମ ଓ ତାହାଙ୍କ ପିତାଙ୍କ ନାମ ଲିଖିତ ଥିଲା, ଏପରି ଏକ ଲକ୍ଷ ଚୌରାଳିଶ ହଜାର ଲୋକଙ୍କୁ ତାହାଙ୍କ ସହିତ ଦଣ୍ଡାୟମାନ ଥିବାର ଦେଖିଲି।
2 ಇದಲ್ಲದೆ ಪರಲೋಕದಿಂದ ಜಲಪ್ರವಾಹದ ಘೋಷದಂತೆಯೂ ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಮಹಾಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು.
ପୁଣି, ମୁଁ ସ୍ୱର୍ଗରୁ ବହୁବନ୍ୟାଜଳ ଓ ମହାବଜ୍ରନାଦ ତୁଲ୍ୟ ଗୋଟିଏ ସ୍ୱର ଶୁଣିଲି; ଯେଉଁ ସ୍ୱର ମୁଁ ଶୁଣିଲି, ତାହା ବୀଣାବାଦକମାନଙ୍କ ବୀଣାର ଶଦ୍ଦ ପରି।
3 ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
ସେମାନେ ସିଂହାସନ, ଚାରି ପ୍ରାଣୀ ଓ ପ୍ରାଚୀନମାନଙ୍କ ସମ୍ମୁଖରେ ଗୋଟିଏ ନୂତନ ଗୀତ ଗାନ କଲେ, ପୁଣି, ପୃଥିବୀରୁ କ୍ରୀତ ସେହି ଏକ ଲକ୍ଷ ଚୌରାଳିଶ ହଜାର ଲୋକଙ୍କ ବିନା ଆଉ କେହି ସେ ଗୀତ ଶିଖି ପାରିଲେ ନାହିଁ।
4 ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.
ସେମାନେ ସ୍ତ୍ରୀମାନଙ୍କ ସହିତ ଆପଣା ଆପଣାକୁ କଳୁଷିତ କରି ନ ଥିଲେ କାରଣ ସେମାନେ ଶୁଚି କରି ରଖିଥିଲେ। ମେଷଶାବକ ଯେକୌଣସି ସ୍ଥାନକୁ ଗମନ କରନ୍ତି, ସେ ସ୍ଥାନକୁ ସେମାନେ ତାହାଙ୍କର ଅନୁଗାମୀ ହୁଅନ୍ତି। ସେମାନେ ଈଶ୍ବର ଓ ମେଷଶାବକଙ୍କ ଉଦ୍ଦେଶ୍ୟରେ ପ୍ରଥମଜାତ ଫଳ ସ୍ୱରୂପେ ମନୁଷ୍ୟମାନଙ୍କ ମଧ୍ୟରୁ କ୍ରୀତ ହୋଇଅଛନ୍ତି;
5 ಇವರ ಬಾಯಲ್ಲಿ ಸುಳ್ಳು ಇರಲೇ ಇಲ್ಲ. ಇವರು ನಿರ್ದೋಷಿಗಳಾಗಿದ್ದಾರೆ.
ସେମାନଙ୍କ ମୁଖରେ କୌଣସି ମିଥ୍ୟାକଥା ନାହିଁ, ସେମାନେ ନିର୍ଦ୍ଦୋଷ।
6 ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು. (aiōnios g166)
ପରେ ମୁଁ ଆଉ ଜଣେ ଦୂତଙ୍କୁ ଆକାଶର ମଧ୍ୟଭାଗରେ ଉଡ଼ିବାର ଦେଖିଲି, ସେ ପୃଥିବୀନିବାସୀ ସମସ୍ତ ଜାତି, ଗୋଷ୍ଠୀ, ଭାଷାବାଦୀ ଓ ବଂଶୀୟ ଲୋକଙ୍କ ନିକଟରେ ପ୍ରଚାର କରିବା ନିମନ୍ତେ ଏକ ଅନନ୍ତକାଳସ୍ଥାୟୀ ସୁସମାଚାର ପ୍ରାପ୍ତ ହୋଇ ଉଚ୍ଚସ୍ୱରରେ କହିଲେ, (aiōnios g166)
7 ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.
ଈଶ୍ବରଙ୍କୁ ଭୟ କର ଓ ତାହାଙ୍କୁ ଗୌରବ ଦିଅ, କାରଣ ତାହାଙ୍କ ବିଚାର ସମୟ ଉପସ୍ଥିତ, ପୁଣି, ଯେ ଆକାଶ, ପୃଥିବୀ, ସମୁଦ୍ର ଓ ନିର୍ଝରିଣୀ ସମୂହ ସୃଷ୍ଟି କରିଅଛନ୍ତି, ତାହାଙ୍କୁ ପ୍ରଣାମ କର।
8 ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.
ତାହାଙ୍କ ପଶ୍ଚାତରେ ଆଉ ଜଣେ, ଅର୍ଥାତ୍‍ ଦ୍ୱିତୀୟ ଦୂତ ଆସି କହିଲେ, ଯେଉଁ ମହାନଗରୀ ବାବିଲ ସମସ୍ତ ଜାତିଙ୍କୁ ଆପଣା ବ୍ୟଭିଚାରର କାମରୂପ ସୁରା ପାନ କରାଇଅଛି, ସେ ପତିତ, ଅଧଃପତିତ ହୋଇଅଛି।
9 ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ,
ସେମାନଙ୍କ ପଶ୍ଚାତରେ ଆଉ ଜଣେ, ଅର୍ଥାତ୍‍ ତୃତୀୟ ଦୂତ ଆସି ଉଚ୍ଚସ୍ୱରରେ କହିଲେ, ଯଦି କେହି ସେହି ପଶୁ ଓ ତାହାର ପ୍ରତିମାକୁ ପ୍ରଣାମ କରେ ପୁଣି, ଆପଣା କପାଳରେ କି ହାତରେ ତାହାର ଚିହ୍ନ ଗ୍ରହଣ କରେ,
10 ೧೦ ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.
ତେବେ ସେ ମଧ୍ୟ, ଅମିଶ୍ରିତ ଭାବେ ପ୍ରସ୍ତୁତ କରାଯାଇଥିବା ଈଶ୍ବରଙ୍କ କୋପରୂପ ସୁରା ପାନ କରିବ, ପୁଣି, ପବିତ୍ର ଦୂତଗଣଙ୍କ ଓ ମେଷଶାବକଙ୍କ ସାକ୍ଷାତରେ ଅଗ୍ନି ଓ ଗନ୍ଧକ ଦ୍ୱାରା ଯନ୍ତ୍ରଣା ପ୍ରାପ୍ତ ହେବ।
11 ೧೧ ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು. (aiōn g165)
ଏପରି ଲୋକମାନଙ୍କ ଯନ୍ତ୍ରଣାର ଧୂମ ଯୁଗେ ଯୁଗେ ଉଠୁଥିବ; ଯେଉଁମାନେ ପଶୁ ଓ ତାହାର ପ୍ରତିମାକୁ ପ୍ରଣାମ କରନ୍ତି ପୁଣି, ତାହାର ନାମର ଚିହ୍ନ ଗ୍ରହଣ କରନ୍ତି, ସେମାନଙ୍କର ଦିବାରାତ୍ର ବିଶ୍ରାମ ନାହିଁ। (aiōn g165)
12 ೧೨ ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.
ଏଠାରେ ସାଧୁମାନଙ୍କର, ଅର୍ଥାତ୍‍ ଯେଉଁମାନେ ଈଶ୍ବରଙ୍କ ଆଜ୍ଞା ପାଳନ କରନ୍ତି ଓ ଯୀଶୁଙ୍କ ପ୍ରତି ବିଶ୍ୱାସ ରଖନ୍ତି, ସେମାନଙ୍କର ଧୈର୍ଯ୍ୟ ଆବଶ୍ୟକ।
13 ೧೩ ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.
ପୁଣି, ମୁଁ ସ୍ୱର୍ଗରୁ ଏହି ବାଣୀ ଶୁଣିଲି, ଲେଖ, ଯେଉଁମାନେ ଏଣିକି ପ୍ରଭୁଙ୍କଠାରେ ଥାଇ ମରନ୍ତି, ସେମାନେ ଧନ୍ୟ; ହଁ, ଆତ୍ମା କହୁଅଛନ୍ତି, ସେମାନେ ଆପଣା ଆପଣା ପରିଶ୍ରମରୁ ବିଶ୍ରାମ ପ୍ରାପ୍ତ ହେବେ, କାରଣ ସେମାନଙ୍କ କର୍ମ ସେମାନଙ୍କର ଅନୁବର୍ତ୍ତୀ ହେବ।
14 ೧೪ ಆಗ ನಾನು ನೋಡಲಾಗಿ ಇಗೋ, ಒಂದು ಬಿಳಿ ಮೇಘವು ಕಾಣಿಸಿತು. ಆ ಮೇಘದ ಮೇಲೆ ಮನುಷ್ಯಕುಮಾರನಂತಿದ್ದ ಒಬ್ಬಾತನು ಕುಳಿತಿರುವುದನ್ನು ಕಂಡೆನು. ಆತನ ತಲೆಯ ಮೇಲೆ ಚಿನ್ನದ ಕಿರೀಟವೂ, ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು.
ତତ୍ପରେ ମୁଁ ଦୃଷ୍ଟିପାତ କଲି, ଆଉ ଦେଖ, ଶୁଭ୍ରବର୍ଣ୍ଣ ଖଣ୍ଡେ ମେଘ, ତହିଁ ଉପରେ ମନୁଷ୍ୟପୁତ୍ରଙ୍କ ସଦୃଶ ଜଣେ ଉପବିଷ୍ଟ, ତାହାଙ୍କ ମସ୍ତକରେ ସୁବର୍ଣ୍ଣ ମୁକୁଟ ଓ ହସ୍ତରେ ତୀକ୍ଷ୍ଣ ଦାଆ।
15 ೧೫ ಆಗ ಮತ್ತೊಬ್ಬ ದೂತನು ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು.
ସେଥିରେ ମନ୍ଦିରରୁ ଆଉ ଜଣେ ଦୂତ ବାହାରି ସେହି ମେଘାଚ୍ଛନ୍ନ ବ୍ୟକ୍ତିଙ୍କୁ ଉଚ୍ଚସ୍ୱରରେ କହିଲେ, ଆପଣଙ୍କ ଦାଆ ଲଗାଇ ଶସ୍ୟ କାଟନ୍ତୁ, କାରଣ କାଟିବାର ସମୟ ଉପସ୍ଥିତ, ଆଉ ପୃଥିବୀର ଶସ୍ୟ ପରିପକ୍ୱ ହୋଇଅଛି।
16 ೧೬ ಮೇಘದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು. ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು.
ତହୁଁ ସେହି ମେଘାଛନ୍ନ ବ୍ୟକ୍ତି ପୃଥିବୀରେ ଆପଣା ଦାଆ ଲଗାନ୍ତେ ସେଥିର ଶସ୍ୟ କଟାଗଲା।
17 ೧೭ ಮತ್ತೊಬ್ಬ ದೇವದೂತನು ಪರಲೋಕದಲ್ಲಿರುವ ದೇವಾಲಯದೊಳಗಿನಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು.
ତତ୍ପରେ ସ୍ୱର୍ଗସ୍ଥ ମନ୍ଦିରରୁ ଆଉ ଜଣେ ଦୂତ ବାହାରି ଆସିଲେ, ତାହାଙ୍କ ହସ୍ତରେ ମଧ୍ୟ ଗୋଟିଏ ତୀକ୍ଷ୍ଣ ଦାଆ ଥିଲା।
18 ೧೮ ತರುವಾಯ ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷಿಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರಾ ಮಾಗಿವೆ” ಎಂದು ಮಹಾಧ್ವನಿಯಿಂದ ಕೂಗಿದನು.
ପୁଣି, ବେଦି ନିକଟରୁ ଆଉ ଜଣେ ଦୂତ ବାହାର ହେଲେ, ସେ ଅଗ୍ନି ଉପରେ କ୍ଷମତା ପ୍ରାପ୍ତ; ଯାହାଙ୍କ ହସ୍ତରେ ତୀକ୍ଷ୍ଣ ଦାଆ ଥିଲା, ତାହାଙ୍କୁ ସେ ଉଚ୍ଚସ୍ୱରରେ ଡାକି କହିଲେ, ତୁମ୍ଭର ତୀକ୍ଷ୍ଣ ଦାଆ ଲଗାଅ ଓ ପୃଥିବୀର ଦ୍ରାକ୍ଷାପେଣ୍ଡାସବୁ ସଂଗ୍ରହ କର, କାରଣ ସେଥିର ଦ୍ରାକ୍ଷାଫଳସବୁ ପରିପକ୍ୱ ହୋଇଅଛି।
19 ೧೯ ಆಗ ಆ ದೂತನು ತನ್ನ ಕುಡುಗೋಲಿನಿಂದ ಭೂಮಿಯ ಮೇಲಿನ ದ್ರಾಕ್ಷಿಬಳ್ಳಿಯಲ್ಲಿದ್ದ ದ್ರಾಕ್ಷಿಹಣ್ಣನ್ನು ಕೊಯ್ದು ಕೂಡಿಸಿ, ದೇವರ ರೌದ್ರವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಹಾಕಿದನು.
ତହିଁରେ ସେହି ଦୂତ ପୃଥିବୀରେ ଆପଣା ଦାଆ ଲଗାଇ ସେଥିର ଦ୍ରାକ୍ଷାଫଳସବୁ ସଂଗ୍ରହ କଲେ ଓ ଈଶ୍ବରଙ୍କ କ୍ରୋଧରୂପ ମହା ଦ୍ରାକ୍ଷାକୁଣ୍ଡରେ ସେହିସବୁ ନିକ୍ଷେପ କଲେ।
20 ೨೦ ಆಗ ಆಲೆಯನ್ನು ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.
ନଗରର ବାହାରେ ସେହି ଦ୍ରାକ୍ଷାକୁଣ୍ଡ ଦଳିତ ହେଲା, ଆଉ ସେଥିରୁ ରକ୍ତ ବାହାର ହୋଇ ଅଶ୍ୱମାନଙ୍କ ଲଗାମ ପର୍ଯ୍ୟନ୍ତ ଉଠି ଏକ ଶହ କୋଶ ପର୍ଯ୍ୟନ୍ତ ବ୍ୟାପ୍ତ ହେଲା।

< ಪ್ರಕಟಣೆ 14 >