< ಜೆಕರ್ಯನು 1 >

1 ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಅದ ಜೆಕರ್ಯನೆಂಬ ಪ್ರವಾದಿಗೆ ಈ ವಾಕ್ಯವನ್ನು ದಯಪಾಲಿಸಿದನು.
ဒါရိမင်းကြီး နန်းစံနှစ်နှစ်၊ အဋ္ဌမလတွင်၊ ဣဒေါ သား ဗာရခိ၏သား ပရောဖက်ဇာခရိသို့ ရောက်လာ သော ထာဝရဘုရား၏နှုတ်ကပတ်တော်ဟူမူကား၊
2 ಅದೇನೆಂದರೆ, “ಯೆಹೋವನು ನಿಮ್ಮ ಪೂರ್ವಿಕರ ಮೇಲೆ ಬಹು ಕೋಪಗೊಂಡಿದ್ದಾನೆ.
ထာဝရဘုရားသည် သင်တို့ ဘိုးဘေးများကို အလွန်အမျက်ထွက်တော်မူပြီ။
3 ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು, ‘ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ’” ಇದು ಸೇನಾಧೀಶ್ವರನಾದ ಯೆಹೋವನ ನುಡಿ, “ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
သို့သော်လည်း၊ ကောင်းကင်ဗိုလ်ခြေအရှင် ထာဝရဘုရား၏အမိန့်တော်ကို သူတို့အား ဆင့်ဆိုရမည် မှာ၊ ငါ့ထံသို့ ပြန်၍လာကြလော့ဟု၊ ကောင်းကင်ဗိုလ်ခြေ အရှင်ထာဝရဘုရားမိန့်တော်မူ၏။
4 ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.
ရှေးပရောဖက်တို့က၊ သင်တို့မကောင်းသော လမ်း၊ မကောင်းသော အကျင့်များကို ယခု ကြဉ်ရှောင် ကြလော့ဟု၊ ကောင်းကင်ဗိုလ်ခြေအရှင် ထာဝရဘုရား မိန့်တော်မူသည်ကို ဆင့်ဆိုလျက် ကြွေးကြော်သော်လည်း နားမကြား၊ ငါ့စကားကိုလည်း နားမထောင်သော သင်တို့ ဘိုးဘေးများကဲ့သို့ မပြုကြနှင့်ဟု၊ ထာဝရဘုရား မိန့်တော် မူ၏။
5 “ನಿಮ್ಮ ಪೂರ್ವಿಕರು ಎಲ್ಲಿ? ಪ್ರವಾದಿಗಳು ಸದಾಕಾಲ ನಿತ್ಯನಿರಂತರವಾಗಿ ಇರುವರೇ?
ဘိုးဘေးတို့သည် အဘယ်မှာ ရှိကြသနည်း။ ပရောဖက်တို့သည် အစဉ်အမြဲ အသက် ရှင်တတ်ကြ သလော။
6 ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.
ငါ၏ ကျွန်ပရောဖက်တို့၌ ငါမှာထားသော ငါ၏ ပညတ်စကားတို့သည် သင်တို့ ဘိုးဘေးများကို မှီကြပြီ မဟုတ်လော။ သူတို့သည် သတိရ၍ ငါတို့ကျင့်ကြံပြုမူ သည်နှင့်အလျောက်၊ ကောင်းကင်ဗိုလ်ခြေအရှင် ဘုရား သခင် ထာဝရဘုရားသည် ငါတို့၌ စီရင်မည်ဟု အကြံ ရှိတော်မူသည်အတိုင်း၊ စီရင်တော်မူပြီဟု ပြောဆိုကြသည် မဟုတ်လောဟု မိန့်တော်မူ၏။
7 ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಹನ್ನೊಂದನೆಯ ತಿಂಗಳಿನ ಅಂದರೆ ಶೆಬಾಟ್ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನ ವಾಕ್ಯವು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನಾದ ಜೆಕರ್ಯನೆಂಬ ಪ್ರವಾದಿಗೆ ಕೇಳಿಬಂತು,
ဒါရိမင်းကြီး နန်းစံနှစ်နှစ်၊ ဧကာဒသမလတည်း ဟူသော ရှေဗတ်လနှစ်ဆယ်လေးရက်နေ့တွင်၊ ထာဝရ ဘုရား၏နှုတ်ကပတ်တော်သည် ဣဒေါသားဖြစ်သော ဗာရခိ၏သား ပရောဖက်ဇာခရိသို့ ရောက်လာ၍၊
8 “ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು, ಕಂದು, ಬಿಳಿ ಕುದುರೆಗಳು ಮತ್ತು ಅವರ ಸವಾರರಿದ್ದರು.
ညဉ့်အခါမြင်ရသော ရူပါရုံဟူမူကား၊ မြင်းနီကို စီးသော လူတဦးသည် ထင်ရှား၍ ချိုင့်တွင်ရှိသော မုရတု တော၌ ရပ်၏။ သူ့နောက်မှာနီသောမြင်း၊ ညိုသော မြင်း၊ ဖြူသောမြင်းတို့သည် ရှိကြ၏။
9 ನನಗೆ ಕನಸಿನ ಅರ್ಥವನ್ನು ವಿವರಿಸುವ ದೇವದೂತನನ್ನು, ‘ಸ್ವಾಮಿ ಇವರು ಯಾರು?’” ಎಂದು ನಾನು ಕೇಳಲು ಆತನು ನನಗೆ, “ಇವರು ಇಂಥವರೆಂದು ನಿನಗೆ ತೋರಿಸುವೆನು” ಎಂಬುದಾಗಿ ಹೇಳಿದನು.
ငါကလည်း၊ အိုသခင်၊ ထိုသူတို့ကား အဘယ်သူ နည်းဟု မေးသော်၊ ငါနှင့်ပြောဆိုသော ကောင်းကင်တမန် က၊ ထိုသူတို့ကား အဘယ်သူဖြစ်သည်ကို ငါပြမည်ဟု ဆိုပြီးမှ၊
10 ೧೦ ಕೂಡಲೆ ಸುಗಂಧವೃಕ್ಷಗಳ ನಡುವೆ ನಿಂತಿದ್ದವನು, “ಇವರು ಲೋಕಸಂಚಾರಾರ್ಥವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟನು.
၁၀မုရတုတော၌ ရပ်သော လူက၊ ထိုသူတို့သည် မြေကြီးအရပ်ရပ်တို့ကို လှည့်လည်၍ သွားစေခြင်းငှါ၊ ထာဝရဘုရား စေလွှတ်တော်မူသောသူဖြစ်ကြသည်ဟု ပြန်ပြော၏။
11 ೧೧ ಆಗ ಅವರು ಸುಗಂಧವೃಕ್ಷಗಳ ನಡುವೆ ನಿಂತಿದ್ದ ಆ ಯೆಹೋವನ ದೂತನಿಗೆ, “ನಾವು ಲೋಕದಲ್ಲಿ ಸಂಚರಿಸಿ ಬಂದಿದ್ದೇವೆ. ಇಗೋ ಲೋಕವೆಲ್ಲಾ ನೆಮ್ಮದಿಯಾಗಿ ಸುಮ್ಮನಿದೆ” ಎಂದು ಅರಿಕೆಮಾಡಿದರು.
၁၁ထိုသူတို့ကလည်း၊ အကျွန်ုပ်တို့သည် မြေကြီး အရပ်ရပ်တို့ကို လှည့်လည်၍ သွားပါပြီ။ မြေကြီး တရှောက်လုံး တော၌ရပ်သော ထာဝရဘုရား၏ ကောင်း ကင်တမန်အား ပြန်လျှောက်ကြ၏။
12 ೧೨ ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು,
၁၂တဖန် ထာဝရဘုရား၏ ကောင်းကင်တမန်က၊ အို ကောင်းကင်ဗိုလ်ခြေအရှင်ထာဝရဘုရား၊ ကိုယ်တော် သည် အနှစ်ခုနစ်ဆယ်ပတ်လုံး အမျက်ထွက်တော်မူသော ယေရုရှလင်မြို့နှင့် ယုဒမြို့များကို အဘယ်မျှကာလပတ် လုံး မသနားဘဲ နေတော်မူမည်နည်းဟု မေးလျှောက် သော်၊
13 ೧೩ ನನ್ನೊಂದಿಗೆ ಮಾತನಾಡಿದ ದೂತನಿಗೆ, ಯೆಹೋವನು ಕರುಣೆ ಹಾಗೂ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು.
၁၃ထာဝရဘုရားသည် ငါနှင့်ပြောဆိုသော ကောင်း ကင်တမန်အား ကောင်းသောစကား၊ နှစ်သိမ့်စေသော စကားပြန်ပြောတော်မူ၏။
14 ೧೪ ಆಗ ಆ ದೂತನು ನನಗೆ ಈ ಅಪ್ಪಣೆ ಮಾಡಿದನು, “ನೀನು ಹೀಗೆ ಸಾರಿ ಹೇಳಬೇಕು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಯೆರೂಸಲೇಮಿಗೂ, ಚೀಯೋನಿಗೂ ಅವಮಾನವಾಯಿತಲ್ಲಾ’ ಎಂದು ಬಹಳವಾಗಿ ಅಸಮಾಧಾನಗೊಂಡಿದ್ದೇನೆ.
၁၄ငါနှင့် ပြောဆိုသော ကောင်းကင်တမန်က လည်း၊ ကောင်းကင်ဗိုလ်ခြေအရှင် ထာဝရဘုရား၏ အမိန့်တော်ကို ဆင့်ဆို၍ ကြွေးကြော်ရမည်မှာ၊ ငါသည် ယေရုရှလင်မြို့နှင့် ဇိအုန်တောင်အဘို့ အလွန်ကြင်နာ သောစိတ်အားကြီး၏။
15 ೧೫ ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”
၁၅ငြိမ်ဝပ်စွာနေသော တပါးအမျိုးသားတို့ကို အလွန်အမျက်ထွက်၏။ အကြောင်းမူကား၊ ငါသည် ယေရုရှလင်မြို့ကို အနည်းငယ်အမျက်ထွက်သောအခါ သူတို့သည် ဝိုင်း၍ ညှဉ်းဆဲကြပြီ။
16 ೧೬ ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ನಾನು ಕನಿಕರವುಳ್ಳವನಾಗಿ ಯೆರೂಸಲೇಮಿಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಪುನಃ ಅಲ್ಲಿ ಕಟ್ಟಲ್ಪಡುವುದು; ಯೆರೂಸಲೇಮಿನಲ್ಲಿ ನೂಲು ಎಳೆಯಲ್ಪಡುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
၁၆ထိုကြောင့် ထာဝရဘုရားမိန့်တော်မူသည်ကား၊ ကျေးဇူးပြုချင်သောစိတ်နှင့် ယေရုရှလင်မြို့သို့ ငါပြန်လာ ပြီ။ ဤမြို့တွင် ငါ့အိမ်ကို တည်ဆောက်ရမည်။ မြို့ရာကို လည်း တိုင်းထွာရမည်ဟု၊ ကောင်းကင်ဗိုလ်ခြေအရှင် ထာဝရဘုရား မိန့်တော်မူ၏။
17 ೧೭ ಮತ್ತೊಮ್ಮೆ ಹೀಗೆ ಸಾರಿ ಹೇಳು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವುದು; ಯೆಹೋವನು ಇನ್ನು ಚೀಯೋನನ್ನು ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.”
၁၇တဖန် ကောင်းကင်ဗိုလ်ခြေအရှင် ထာဝရ ဘုရား၏အမိန့်တော်ကို ဆင့်ဆို၍ ကြွေးကြော်ရမည်မှာ၊ ငါ၏မြို့ရွာတို့သည် အရပ်ရပ်၌ နှံ့ပြား၍ စည်ပင်ကြလိမ့် မည်။ ထာဝရဘုရားသည် ဇိအုန်တောင်သားတို့ကို နှစ် သိမ့်စေဦးမည်။ ယေရုရှလင်မြို့သားတို့ကို ရွေးကောက်၍ ပြုစုဦးမည်ဟု မိန့်တော်မူ၏။
18 ೧೮ ನಾನು ಕಣ್ಣೆತ್ತಿ ನೋಡಲು ಇಗೋ, ನಾಲ್ಕು ಕೊಂಬುಗಳು ಕಾಣಿಸಿದವು.
၁၈တဖန် ငါမျှော်ကြည့်၍ ဦးချိုလေးချောင်းကို မြင်၏။
19 ೧೯ ವಿವರಿಸುವ ದೂತನನ್ನು ಕುರಿತು, “ಇವು ಏನು?” ಎಂದು ನಾನು ಕೇಳಿದ್ದಕ್ಕೆ ಅವನು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನು ಚದುರಿಸುವ ಕೊಂಬುಗಳು” ಎಂದು ಉತ್ತರಕೊಟ್ಟನು.
၁၉ငါနှင့် ပြောဆိုသော ကောင်းကင်တမန်အား လည်း၊ ထိုဦးချိုတို့ကား အဘယ်သို့နည်းဟု မေးမြန်းသော်၊ ထိုဦးချိုတို့သည် ယုဒပြည်၊ ဣသရေလပြည်၊ ယေရုရှလင် မြို့တို့ကို အရပ်ရပ်သို့ ကွဲပြားစေသော ဦးချိုဖြစ်သည်ဟု ပြန်ပြော၏။
20 ೨೦ ಅನಂತರ ಯೆಹೋವನು ನನಗೆ ನಾಲ್ಕು ಮಂದಿ ಕಮ್ಮಾರರನ್ನು ತೋರಿಸಿದನು.
၂၀ထာဝရဘုရားသည်လည်း လက်သမားလေးဦး တို့ကို ပြတော်မူ၏။
21 ೨೧ ಆಗ ನಾನು, “ಇವರು ಏನು ಮಾಡುವುದಕ್ಕೆ ಬಂದಿದ್ದಾರೆ?” ಎಂದು ಕೇಳಲು ಅವನು, “ಈ ಕೊಂಬುಗಳು ಯೆಹೂದದವರಲ್ಲಿ ಯಾರೂ ತಲೆಯೆತ್ತದಂತೆ ಅವರನ್ನು ಚದುರಿಸಿವೆಯಷ್ಟೆ; ಇವರಾದರೋ ಯೆಹೂದ ದೇಶದವರನ್ನು ಚದುರಿಸಬೇಕೆಂದು ತಲೆಯೆತ್ತಿದ ಜನಾಂಗಗಳ ಕೊಂಬುಗಳನ್ನು ಹೆದರಿಸಿ ಕೆಡುವುದಕ್ಕೆ ಬಂದಿದ್ದಾರೆ” ಎಂದು ಹೇಳಿದನು.
၂၁ငါကလည်း၊ ဤသူတို့သည် အဘယ်အမှုကို ပြုခြင်းငှါ လာပါသနည်းဟု မေးလျှောက်သော်၊ ကောင်း ကင်တမန်က၊ ထိုဦးချိုတို့သည် အဘယ်သူမျှ မျှော်၍ မကြည့်ဝံ့အောင်၊ ယုဒပြည်သားတို့ကို ကွဲပြားစေသော ဦးချိုဖြစ်ကြ၏။ ဤလက်သမားတို့သည် ယုဒပြည်သားတို့ ကို ခြိမ်းမောင်း၍၊ တပါးအမျိုး၏ ဦးချိုတို့ကို ရှုတ်ချသော သူ ဖြစ်ကြသည်ဟု ပြန်ပြော၏။

< ಜೆಕರ್ಯನು 1 >