< ಜೆಕರ್ಯನು 1 >

1 ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಅದ ಜೆಕರ್ಯನೆಂಬ ಪ್ರವಾದಿಗೆ ಈ ವಾಕ್ಯವನ್ನು ದಯಪಾಲಿಸಿದನು.
दारा के दूसरे बरस के आठवें महीने में ख़ुदावन्द का कलाम ज़करियाह नबी बिन बरकियाह — बिन — 'इददू पर नाज़िल हुआ:
2 ಅದೇನೆಂದರೆ, “ಯೆಹೋವನು ನಿಮ್ಮ ಪೂರ್ವಿಕರ ಮೇಲೆ ಬಹು ಕೋಪಗೊಂಡಿದ್ದಾನೆ.
कि “ख़ुदावन्द तुम्हारे बाप — दादा से सख़्त नाराज़ रहा।
3 ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು, ‘ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ’” ಇದು ಸೇನಾಧೀಶ್ವರನಾದ ಯೆಹೋವನ ನುಡಿ, “ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
इसलिए तू उनसे कह, रब्ब — उल — अफ़वाज यूँ फ़रमाता है: कि तुम मेरी तरफ़ रुजू' हो, रब्ब — उल — अफ़वाज का फ़रमान है, तो मैं तुम्हारी तरफ़ से रुजू' हूँगा रब्ब — उल — अफ़वाज फ़रमाता है।
4 ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.
तुम अपने बाप — दादा की तरह न बनो, जिनसे अगले नबियों ने बा आवाज़ — ए — बुलन्द कहा, रब्ब — उल — अफ़वाज यूँ फ़रमाता है, कि तुम अपनी बुरे चाल चलन और बद'आमाली से बाज़ आओ; लेकिन उन्होंने न सुना और मुझे न माना, ख़ुदावन्द फ़रमाता है।
5 “ನಿಮ್ಮ ಪೂರ್ವಿಕರು ಎಲ್ಲಿ? ಪ್ರವಾದಿಗಳು ಸದಾಕಾಲ ನಿತ್ಯನಿರಂತರವಾಗಿ ಇರುವರೇ?
तुम्हारे बाप दादा कहाँ हैं? क्या अम्बिया हमेशा ज़िन्दा रहते हैं?
6 ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.
लेकिन मेरा कलाम और मेरे क़ानून, जो मैंने अपने ख़िदमत गुज़ार नबियों को फ़रमाए थे, क्या वह तुम्हारे बाप — दादा पर पूरे नहीं हुए? चुनाँचे उन्होंने रुजू' लाकर कहा, कि रब्ब — उल — अफ़वाज ने अपने इरादे के मुताबिक़ हमारी 'आदात और हमारे 'आमाल का बदला दिया है।”
7 ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಹನ್ನೊಂದನೆಯ ತಿಂಗಳಿನ ಅಂದರೆ ಶೆಬಾಟ್ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನ ವಾಕ್ಯವು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನಾದ ಜೆಕರ್ಯನೆಂಬ ಪ್ರವಾದಿಗೆ ಕೇಳಿಬಂತು,
दारा के दूसरे बरस और ग्यारहवें महीने या'नी माह — ए — सबात की चौबीसवीं तारीख़ को ख़ुदावन्द का कलाम ज़करियाह नबी बिन — बरकियाह — बिन — 'इद्दु पर नाज़िल हुआ
8 “ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು, ಕಂದು, ಬಿಳಿ ಕುದುರೆಗಳು ಮತ್ತು ಅವರ ಸವಾರರಿದ್ದರು.
कि मैंने रात को रोया में देखा कि एक शख़्स सुरंग घोड़े पर सवार, मेंहदी के दरख़्तों के बीच नशेब में खड़ा था, और उसके पीछे सुरंग और कुमैत और नुक़रह घोड़े थे।
9 ನನಗೆ ಕನಸಿನ ಅರ್ಥವನ್ನು ವಿವರಿಸುವ ದೇವದೂತನನ್ನು, ‘ಸ್ವಾಮಿ ಇವರು ಯಾರು?’” ಎಂದು ನಾನು ಕೇಳಲು ಆತನು ನನಗೆ, “ಇವರು ಇಂಥವರೆಂದು ನಿನಗೆ ತೋರಿಸುವೆನು” ಎಂಬುದಾಗಿ ಹೇಳಿದನು.
तब मैंने कहा, ऐ मेरे आक़ा, यह क्या हैं?' इस पर फ़रिश्ते ने, जो मुझ से गुफ़्तगू करता था कहा, 'मैं तुझे दिखाऊँगा कि यह क्या हैं।
10 ೧೦ ಕೂಡಲೆ ಸುಗಂಧವೃಕ್ಷಗಳ ನಡುವೆ ನಿಂತಿದ್ದವನು, “ಇವರು ಲೋಕಸಂಚಾರಾರ್ಥವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟನು.
और जो शख़्स मेंहदी के दरख़्तों के बीच खड़ा था, कहने लगा, 'ये वह हैं जिनको ख़ुदावन्द ने भेजा है कि सारी दुनिया में सैर करें।
11 ೧೧ ಆಗ ಅವರು ಸುಗಂಧವೃಕ್ಷಗಳ ನಡುವೆ ನಿಂತಿದ್ದ ಆ ಯೆಹೋವನ ದೂತನಿಗೆ, “ನಾವು ಲೋಕದಲ್ಲಿ ಸಂಚರಿಸಿ ಬಂದಿದ್ದೇವೆ. ಇಗೋ ಲೋಕವೆಲ್ಲಾ ನೆಮ್ಮದಿಯಾಗಿ ಸುಮ್ಮನಿದೆ” ಎಂದು ಅರಿಕೆಮಾಡಿದರು.
और उन्होंने ख़ुदावन्द के फ़रिश्ते से, जो मेंहदी के दरख़्तों के बीच खड़ा था कहा, हम ने सारी दुनिया की सैर की है, और देखा कि सारी ज़मीन में अमन — ओ — अमान है।
12 ೧೨ ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು,
फिर ख़ुदावन्द के फ़रिश्ते ने कहा, 'ऐ रब्ब — उल — अफ़वाज तू येरूशलेम और यहूदाह के शहरों पर, जिनसे तू सत्तर बरस से नाराज़ है, कब तक रहम न करेगा?
13 ೧೩ ನನ್ನೊಂದಿಗೆ ಮಾತನಾಡಿದ ದೂತನಿಗೆ, ಯೆಹೋವನು ಕರುಣೆ ಹಾಗೂ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು.
और ख़ुदावन्द ने उस फ़रिश्ते को जो मुझ से गुफ़्तगू करता था, मुलायम और तसल्ली बख़्श जवाब दिया।
14 ೧೪ ಆಗ ಆ ದೂತನು ನನಗೆ ಈ ಅಪ್ಪಣೆ ಮಾಡಿದನು, “ನೀನು ಹೀಗೆ ಸಾರಿ ಹೇಳಬೇಕು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಯೆರೂಸಲೇಮಿಗೂ, ಚೀಯೋನಿಗೂ ಅವಮಾನವಾಯಿತಲ್ಲಾ’ ಎಂದು ಬಹಳವಾಗಿ ಅಸಮಾಧಾನಗೊಂಡಿದ್ದೇನೆ.
तब उस फ़रिश्ते ने जो मुझ से गुफ़्तगू करता था, मुझ से कहा, बुलन्द आवाज़ से कह, रब्ब — उल — अफ़वाज यूँ फ़रमाता है कि मुझे येरूशलेम और सिय्यून के लिए बड़ी गै़रत है।
15 ೧೫ ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”
और मैं उन क़ौमों से जो आराम में हैं, निहायत नाराज़ हूँ; क्यूँकि जब मैं थोड़ा नाराज़ था, तो उन्होंने उस आफ़त को बहुत ज़्यादा कर दिया।
16 ೧೬ ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ನಾನು ಕನಿಕರವುಳ್ಳವನಾಗಿ ಯೆರೂಸಲೇಮಿಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಪುನಃ ಅಲ್ಲಿ ಕಟ್ಟಲ್ಪಡುವುದು; ಯೆರೂಸಲೇಮಿನಲ್ಲಿ ನೂಲು ಎಳೆಯಲ್ಪಡುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
इसलिए ख़ुदावन्द यूँ फ़रमाता है, कि मैं रहमत के साथ येरूशलेम को वापस आया हूँ; उसमें मेरा घर ता'मीर किया जाएगा, रब्ब — उल — अफ़वाज फ़रमाता है, और येरूशलेम पर फिर सूत खींचा जाएगा।
17 ೧೭ ಮತ್ತೊಮ್ಮೆ ಹೀಗೆ ಸಾರಿ ಹೇಳು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವುದು; ಯೆಹೋವನು ಇನ್ನು ಚೀಯೋನನ್ನು ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.”
फिर बुलन्द आवाज़ से कह, रब्ब — उल — अफ़वाज यूँ फ़रमाता है: मेरे शहर दोबारा ख़ुशहाली से मा'मूर होंगे, क्यूँकि ख़ुदावन्द फिर सिय्यून को तसल्ली बख़्शेगा, और येरूशलेम को क़ुबूल फ़रमाएगा।
18 ೧೮ ನಾನು ಕಣ್ಣೆತ್ತಿ ನೋಡಲು ಇಗೋ, ನಾಲ್ಕು ಕೊಂಬುಗಳು ಕಾಣಿಸಿದವು.
फिर मैंने आँख उठाकर निगाह की, और क्या देखता हूँ कि चार सींग हैं।
19 ೧೯ ವಿವರಿಸುವ ದೂತನನ್ನು ಕುರಿತು, “ಇವು ಏನು?” ಎಂದು ನಾನು ಕೇಳಿದ್ದಕ್ಕೆ ಅವನು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನು ಚದುರಿಸುವ ಕೊಂಬುಗಳು” ಎಂದು ಉತ್ತರಕೊಟ್ಟನು.
और मैंने उस फ़रिश्ते से जो मुझ से गुफ़्तगू करता था पूछा, कि “यह क्या हैं?” उसने मुझे जवाब दिया, “यह वह सींग हैं, जिन्होंने यहूदाह और इस्राईल और येरूशलेम को तितर — बितर किया है।”
20 ೨೦ ಅನಂತರ ಯೆಹೋವನು ನನಗೆ ನಾಲ್ಕು ಮಂದಿ ಕಮ್ಮಾರರನ್ನು ತೋರಿಸಿದನು.
फिर ख़ुदावन्द ने मुझे चार कारीगर दिखाए।
21 ೨೧ ಆಗ ನಾನು, “ಇವರು ಏನು ಮಾಡುವುದಕ್ಕೆ ಬಂದಿದ್ದಾರೆ?” ಎಂದು ಕೇಳಲು ಅವನು, “ಈ ಕೊಂಬುಗಳು ಯೆಹೂದದವರಲ್ಲಿ ಯಾರೂ ತಲೆಯೆತ್ತದಂತೆ ಅವರನ್ನು ಚದುರಿಸಿವೆಯಷ್ಟೆ; ಇವರಾದರೋ ಯೆಹೂದ ದೇಶದವರನ್ನು ಚದುರಿಸಬೇಕೆಂದು ತಲೆಯೆತ್ತಿದ ಜನಾಂಗಗಳ ಕೊಂಬುಗಳನ್ನು ಹೆದರಿಸಿ ಕೆಡುವುದಕ್ಕೆ ಬಂದಿದ್ದಾರೆ” ಎಂದು ಹೇಳಿದನು.
तब मैंने कहा, “यह क्यूँ आए हैं?” उसने जवाब दिया, “यह वह सींग हैं, जिन्होंने यहूदाह को ऐसा तितर — बितर किया कि कोई सिर न उठा सका; लेकिन यह इसलिए आए हैं कि उनको डराएँ, और उन क़ौमों के सींगों को पस्त करें जिन्होंने यहूदाह के मुल्क को तितर — बितर करने के लिए सींग उठाया है।”

< ಜೆಕರ್ಯನು 1 >