< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 16 >

1 ಅವರು ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ಅವರು ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
त्यांनी देवाचा कोश दावीदाने उभारलेल्या तंबूमध्ये आत आणून ठेवला. मग त्यांनी देवापुढे होमार्पणे आणि शांत्यर्पणे अर्पिली.
2 ದಾವೀದನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದ ತರುವಾಯ, ಅವನು ಯೆಹೋವ ದೇವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ,
मग होमार्पणे आणि शांत्यर्पणे अर्पिण्याचे समाप्त केल्यावर दावीदाने परमेश्वराच्या नावाने लोकांस आशीर्वाद दिला.
3 ಇಸ್ರಾಯೇಲಿನ ಪ್ರತಿಯೊಬ್ಬ ಪುರುಷನಿಗೂ ಸ್ತ್ರೀಗೂ, ಒಂದು ರೊಟ್ಟಿಯನ್ನೂ, ಖರ್ಜೂರದ ಉಂಡೆಯನ್ನೂ, ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಹಂಚಿದನು.
मग त्याने इस्राएलातील प्रत्येक स्त्री-पुरुषाला एकएक भाकर, एक मांसाचा तुकडा आणि खिसमिसांची एकएक ढेप वाटून दिली.
4 ಇದಲ್ಲದೆ ಯೆಹೋವ ದೇವರ ಮಂಜೂಷದ ಮುಂದೆ ಸೇವೆಮಾಡಲೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸ್ಮರಿಸುವುದಕ್ಕೂ, ಕೊಂಡಾಡುವುದಕ್ಕೂ, ಹೊಗಳುವುದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.
मग दावीदाने काही लेवींची परमेश्वराच्या कोशापुढे सेवा करण्यास आणि इस्राएलाचा देव परमेश्वर याचे गुणगान गाणे, त्याचे आभार मानणे, स्तुती करणे हे त्यांचे काम नेमून दिले.
5 ಅವರು ಯಾರೆಂದರೆ: ಮುಖ್ಯಸ್ಥನಾದ ಆಸಾಫನೂ, ಅವನ ತರುವಾಯ ಜೆಕರ್ಯನೂ, ಯೆಜೀಯೇಲನೂ, ಶೆಮೀರಾಮೋತನೂ, ಯೆಹೀಯೇಲನೂ, ಮತ್ತಿತ್ಯನೂ, ಎಲೀಯಾಬನೂ, ಬೆನಾಯನೂ, ಓಬೇದ್ ಏದೋಮನೂ, ಯೆಹಿಯೇಲನೂ ಇವರು ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಿದ್ದರು. ಆದರೆ ಆಸಾಫನು ತಾಳಗಳನ್ನು ಬಾರಿಸುತ್ತಿದ್ದನು.
आसाफ हा पहिल्या गटाचा मुख्य होता. त्याचा गट झांज वाजवीत असे. जखऱ्या दुसऱ्या गटाचा प्रमुख होता. इतर लेवी उज्जियेल, शमीरामोथ, यहीएल, मत्तिथ्या, अलीयाब, बनाया, ओबेद-अदोम, आणि ईयेल. हे सतारी आणि वीणा वाजवत असत.
6 ಇದಲ್ಲದೆ ಯಾಜಕರಾದ ಬೆನಾಯನೂ, ಯಹಜಿಯೇಲನೂ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು.
बनाया आणि याहजिएल हे याजक नेहमी देवाच्या कराराच्या कोशापुढे कर्णे वाजवत असत.
7 ಆಸಾಫನಿಗೂ, ಅವನ ಜೊತೆ ಲೇವಿಯರಿಗೂ ಯೆಹೋವ ದೇವರ ಸ್ತೋತ್ರಗೀತೆ ಹಾಡಲು ದಾವೀದನು ಪ್ರಥಮವಾಗಿ ಆ ದಿನದಲ್ಲೇ ನೇಮಿಸಿದನು. ಅವರು ಹೀಗೆಂದು ಹಾಡಿದರು:
तेव्हा त्यादिवशी पहिल्याने दावीदाने आसाफाला आणि त्याच्या भावांना परमेश्वराची उपकारस्तुती करायला हे गीत गाण्यास दिले.
8 ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ, ಅವರ ಹೆಸರನ್ನು ಸಾರಿ ಹೇಳಿರಿ, ಜನರಲ್ಲಿ ದೇವರ ಕ್ರಿಯೆಗಳನ್ನು ತಿಳಿಯಪಡಿಸಿರಿ.
परमेश्वराचे स्तवन करा. त्याच्या नावाने हाक मारा. राष्ट्रांस त्याची कृत्ये कळवा.
9 ದೇವರಿಗೆ ಹಾಡಿರಿ, ದೇವರಿಗೆ ಕೀರ್ತನೆ ಹಾಡಿರಿ, ದೇವರ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.
त्याचे गायन करा, त्याचे स्तुतीगान करा. त्याच्या सर्व आश्र्चर्यकारक कृत्यांविषयी बोला.
10 ದೇವರ ಪರಿಶುದ್ಧ ನಾಮವನ್ನು ಹೊಗಳಿರಿ, ಯೆಹೋವ ದೇವರನ್ನು ಹುಡುಕುವವರ ಹೃದಯವು ಸಂತೋಷಿಸಲಿ.
१०त्याच्या पवित्र नावाचा अभिमान धरा. जे परमेश्वरास शोधतात त्यांचे अंतःकरण आनंदीत होवो.
11 ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ, ಅವರ ಮುಖವನ್ನು ಯಾವಾಗಲೂ ಹುಡುಕಿರಿ.
११परमेश्वरास व त्याच्या सामर्थ्याला शोधा. निरंतर त्याच्या समक्षतेचा शोध करा.
12 ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ, ಅವರ ಬಾಯಿಂದ ಹೊರಟ ನ್ಯಾಯ ನಿರ್ಣಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
१२त्याने केलेल्या आश्र्चर्यकारक कृत्यांची आठवण करा. त्याच्या तोंडचे न्याय आणि चमत्काराची कृत्ये यांचे स्मरण करा.
13 ಅವರ ಸೇವಕನಾದ ಇಸ್ರಾಯೇಲಿನ ಸಂತತಿಯೇ, ಅವರು ಆಯ್ದುಕೊಂಡ ಯಾಕೋಬನ ಮಕ್ಕಳೇ,
१३त्याचा सेवक इस्राएल याचे वंशजहो, त्याने निवडलेल्या, याकोबाच्या लोकांनो,
14 ಅವರೇ ನಮ್ಮ ದೇವರಾದ ಯೆಹೋವ ಆಗಿದ್ದಾರೆ. ಅವರ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಇವೆ.
१४तो परमेश्वर, आमचा देव आहे. त्याचे न्याय सर्व पृथ्वीवर आहेत.
15 ದೇವರು ತಮ್ಮ ಒಡಂಬಡಿಕೆಯನ್ನೂ, ಸಾವಿರ ತಲಾಂತರಗಳಿಗೆ ಆಜ್ಞಾಪಿಸಿದ ತಮ್ಮ ಮಾತನ್ನೂ,
१५त्याच्या कराराचे सर्वकाळ स्मरण करा. त्याने हजारो पिढ्यांस आज्ञापिलेले त्याचे वचन आठवा.
16 ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಇಸಾಕನಿಗೆ ಇಟ್ಟ ಆಣೆಯನ್ನೂ ಯುಗಯುಗಕ್ಕೂ ಜ್ಞಾಪಕಮಾಡಿಕೊಳ್ಳಿರಿ.
१६त्याने अब्राहामाशी केलेल्या कराराची आठवण ठेवा. आणि त्याने इसहाकाशी आपली शपथ वाहिली.
17 ದೇವರು ಅದನ್ನು ಯಾಕೋಬನಿಗೆ ತೀರ್ಪನ್ನಾಗಿ ದೃಢಪಡಿಸಿದರು, ಅವರು ಇಸ್ರಾಯೇಲರಿಗೆ ನಿತ್ಯ ಒಡಂಬಡಿಕೆಯಾಗಿ ಸ್ಥಾಪಿಸಿ ಹೇಳಿದ್ದೇನೆಂದರೆ:
१७याकोबासाठी त्याने तोच नियम केला. आणि इस्राएलाशी सर्वकाळचा करार केला.
18 “ನಾನು ನಿಮಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.”
१८तो म्हणाला, “मी तुला कनान देश तुमच्या वतनाचा वाटा असा देईन.”
19 ಆಗ ಅವರು ಅಲ್ಪಸಂಖ್ಯಾತರೂ, ಬಹು ಸ್ವಲ್ಪ ಮಂದಿಯಾಗಿಯೂ, ಪರದೇಶಸ್ಥರಾಗಿಯೂ ನಾಡಿನಲ್ಲಿ ಇದ್ದರು.
१९मी हे म्हणालो त्यावेळी तुम्ही संख्येने अगदी थोडे होता, फार थोडके होता, परक्या प्रदेशात उपरे असे होता.
20 ಅವರು ಜನಾಂಗದಿಂದ ಜನಾಂಗಕ್ಕೂ, ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋಗುತ್ತಿದ್ದರು.
२०तुम्ही एका राष्ट्रातून दुसऱ्या राष्ट्रात भटकत होता. एका राज्यातून दुसऱ्यात जात होता.
21 ಜನರು ಅವರಿಗೆ ಕೇಡು ಮಾಡದಂತೆ ದೇವರು ತಡೆದರು. ಹೌದು, ಅವರಿಗೋಸ್ಕರ ದೇವರು ಅರಸರನ್ನು ಗದರಿಸಿ:
२१पण त्याने कोणाकडूनही त्यांना दु: ख होऊ दिले नाही. त्याने त्यांच्यासाठी राजांना शिक्षा दिली.
22 ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ. ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.
२२तो राजांना म्हणाला, “माझ्या अभिषिक्तांना स्पर्श करू नका. माझ्या संदेष्ट्यांना इजा करू नका.”
23 ಸಮಸ್ತ ಭೂನಿವಾಸಿಗಳೇ, ಯೆಹೋವ ದೇವರಿಗೆ ಹಾಡಿರಿ. ಅವರ ರಕ್ಷಣೆಯನ್ನು ದಿನಂಪ್ರತಿ ಸಾರಿ ಹೇಳಿರಿ.
२३पृथ्वीवरील समस्त लोकहो, परमेश्वराचे स्तवन करा. त्याचे तारण दिवसेंदिवस सर्वांना सांगा.
24 ಜನಾಂಗಗಳಲ್ಲಿ ಅವರ ಘನತೆಯನ್ನೂ, ಎಲ್ಲಾ ಜನಾಂಗಗಳಲ್ಲಿ ಅವರ ಅದ್ಭುತಗಳನ್ನೂ ವಿವರಿಸಿರಿ.
२४त्याच्या गौरवाची कृत्ये सर्व राष्ट्रांना कळवा सर्व राष्ट्राला त्याच्या आश्चर्यकारक कृत्ये जाहीर सांगा.
25 ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ.
२५परमेश्वर थोर व परमस्तुत्य आहे. आणि सर्व दैवतांपेक्षा त्याचेच भय धरणे योग्य आहे.
26 ಏಕೆಂದರೆ ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಯೆಹೋವ ದೇವರು ಆಕಾಶಮಂಡಲವನ್ನು ನಿರ್ಮಿಸಿದವರು.
२६कारण सर्व राष्ट्रांतले सगळी दैवते म्हणजे नुसत्या मूर्ती आहेत. पण परमेश्वराने आकाश निर्माण केले.
27 ಅವರ ಸನ್ನಿಧಿಯಲ್ಲಿ ಘನತೆಯೂ ಪ್ರಭೆಯೂ; ಅವರ ಪರಿಶುದ್ಧ ಸ್ಥಳದಲ್ಲಿ ಬಲವೂ ಸಂತೋಷವೂ ಇವೆ.
२७महिमा आणि प्रताप त्याच्यापुढे आहेत. सामर्थ्य आणि आनंद त्याच्या स्थानी आहेत.
28 ಜನಾಂಗದ ಕುಟುಂಬಗಳೇ, ಯೆಹೋವ ದೇವರ ಮುಂದೆ, ನೀವು ಮಹಿಮೆಯನ್ನೂ ಬಲವನ್ನೂ ಅರ್ಪಿಸಿರಿ.
२८अहो लोकांच्या कुळांनो परमेश्वराच्या महिम्याची आणि सामर्थ्याची स्तुती करा.
29 ಯೆಹೋವ ದೇವರ ಹೆಸರಿಗೆ ಸಲ್ಲತಕ್ಕ ಗೌರವವನ್ನು ಸಲ್ಲಿಸಿರಿ; ಕಾಣಿಕೆಯನ್ನು ತೆಗೆದುಕೊಂಡು ದೇವರ ಸನ್ನಿಧಿಗೆ ಬನ್ನಿರಿ. ಪರಿಶುದ್ಧತೆ ಎಂಬ ಭೂಷಣದೊಡನೆ ಯೆಹೋವ ದೇವರನ್ನು ಆರಾಧಿಸಿರಿ.
२९परमेश्वरास त्याच्या नावाचे योग्य ते गौरव द्या. त्याच्यापुढे आपली अर्पणे आणा. पावित्र्यानेयुक्त होऊन परमेश्वराची आराधना करा.
30 ಸಮಸ್ತ ಭೂನಿವಾಸಿಗಳೇ, ಅವರ ಮುಂದೆ ಭಯಪಡಿರಿ. ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ.
३०त्याच्यासमोर सर्व पृथ्वीचा भीतीने थरकाप होतो पण त्याने पृथ्वीला स्थिर स्थापले आहे. ते हलवता येणार नाही.
31 ಆಕಾಶವು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ. ಯೆಹೋವ ದೇವರು ಆಳುತ್ತಾರೆಂದು ಜನಾಂಗಗಳಲ್ಲಿ ಹೇಳಲಿ.
३१पृथ्वी उल्हासित होवो आणि आकाश आनंदित होवो; राष्ट्रामधल्या लोकांस सांगा की, “परमेश्वर राज्य करतो.”
32 ಸಮುದ್ರವೂ ಅದರಲ್ಲಿರುವುದೆಲ್ಲವೂ ಘೋಷಿಸಲಿ. ಹೊಲಗಳೂ ಅವುಗಳಲ್ಲಿರುವ ಸಮಸ್ತವೂ ಉತ್ಸಾಹಪಡಲಿ.
३२समुद्र आणि त्यातले सर्वकाही आनंदाने गर्जना करो शेत व त्यातील सर्वकाही उत्सव करोत.
33 ಆಗ ಅಡವಿಯ ಮರಗಳೆಲ್ಲಾ ಯೆಹೋವ ದೇವರ ಮುಂದೆಯೇ ಉತ್ಸಾಹಧ್ವನಿ ಮಾಡಲಿ. ದೇವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ.
३३अरण्यातील वृक्ष परमेश्वरासमोर हर्षभरित होऊन गातील कारण साक्षात तोच पृथ्वीचा न्याय करायला आला आहे.
34 ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರು ಒಳ್ಳೆಯವರು; ಅವರ ಪ್ರೀತಿ ಶಾಶ್ವತವಾಗಿರುವುದು.
३४परमेश्वराचे उपकारस्मरण करा, कारण तो चांगला आहे. कारण त्याची दया सर्वकाळ टिकणारी आहे.
35 ನಮ್ಮ ರಕ್ಷಣೆಯ ದೇವರೇ, “ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸಿರಿ, ಜನಾಂಗಗಳೊಳಗಿಂದ ನಮ್ಮನ್ನು ಬಿಡುಗಡೆ ಮಾಡಿ ಒಂದುಗೂಡಿಸಿರಿ.”
३५आणि म्हणा, “हे आमच्या तारणाऱ्या देवा, आम्हास तार. आम्हास एकत्र करून इतर राष्ट्रापासून सोडीव. आणि तुझ्या पवित्र नावाची उपकारस्तुती करावी आणि तुझ्या स्तुतीने विजयी व्हावे.”
36 ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯುಂಟಾಗಲಿ, ಜನರೆಲ್ಲರೂ, “ಆಮೆನ್,” ಎಂದು ಹೇಳಲಿ. ನೀವು, “ಯೆಹೋವ ದೇವರನ್ನು ಸ್ತುತಿಸಿರಿ,” ಎಂದು ಹೇಳಿದರು.
३६इस्राएलाचा देव परमेश्वर अनादी काळापासून अनंतकाळापर्यंत धन्यवादित असो. सर्व लोकांनी “आमेन” म्हणून परमेश्वराचे स्तवन केले.
37 ಪ್ರತಿದಿನದ ಅವಶ್ಯಕತೆಗಳಿಗೆ ಅನುಗುಣವಾಗಿ ನಿಯಮಿತವಾಗಿ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಸೇವೆ ಸಲ್ಲಿಸಲು ದಾವೀದನು ಆಸಾಫ್ ಮತ್ತು ಅವನ ಸಹಚರರನ್ನು ನೇಮಿಸಿದನು.
३७मग आसाफ आणि त्याचे भाऊ यांनी कोशापुढे दररोजच्या कामाप्रमाणे नित्य सेवा करावी म्हणून दावीदाने त्यांना परमेश्वराच्या कराराच्या कोशासमोर ठेवले.
38 ಓಬೇದ್ ಏದೋಮ್ ಮತ್ತು ಅವನ ಸಹಚರರಾದ ಅರವತ್ತೆಂಟು ಮಂದಿಯೂ, ದ್ವಾರಪಾಲಕರಾದ ಯೆದುತೂನನ ಮಗ ಓಬೇದ್ ಎದೋಮ್ ಮತ್ತು ಹೋಸ ನೇಮಕವಾಗಿದ್ದರು.
३८त्या कामात त्यांना मदत करण्यासाठी दावीदाने ओबेद-अदोम यांच्याबरोबर अडुसष्ट नातेवाईकांना त्यामध्ये समाविष्ट केले. यदूथूनाचा पुत्र ओबेद-अदोम, ह्याना होसासोबत, द्वारपाल केले होते.
39 ಗಿಬ್ಯೋನಿನಲ್ಲಿರುವ ಉನ್ನತ ಸ್ಥಳದಲ್ಲಿ ಯೆಹೋವ ದೇವರ ಗುಡಾರದ ಮುಂದೆ ಸೇವೆಮಾಡುವದಕ್ಕೆ ದಾವೀದನು ಯಾಜಕನಾದ ಚಾದೋಕನನ್ನೂ ಮತ್ತು ಅವನ ಸಹೋದರರನ್ನು ನೇಮಿಸಿದನು.
३९सादोक याजक आणि त्याच्याबरोबरचे इतर याजक यांनी गिबोन येथील उच्चस्थानी असलेल्या परमेश्वराच्या निवासमंडपासमोर सेवा करण्यास नेमले.
40 ಯೆಹೋವ ದೇವರು ಇಸ್ರಾಯೇಲಿಗೆ ಆಜ್ಞಾಪಿಸಿದ ಮೋಶೆಯ ನಿಯಮದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡಲೂ ಅವರು ಪ್ರತಿದಿನವೂ ಉದಯಕಾಲದಲ್ಲಿ ಮತ್ತು ಸಾಯಂಕಾಲದಲ್ಲಿ ದಹನಬಲಿಪೀಠದ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುತ್ತಿದ್ದರು.
४०ते दररोज सकाळी आणि संध्याकाळी होमार्पणासाठी असलेल्या वेदीवर परमेश्वरास होमार्पणे करत असत. परमेश्वराच्या नियमशास्त्रात जे लिहिले आहे, त्याने इस्राएलांस आज्ञा केल्याप्रमाणे ते सर्व करावे म्हणून त्यांना नेमले होते.
41 “ದೇವರ ಪ್ರೀತಿ ನಿತ್ಯವಾಗಿ ನೆಲೆಗೊಂಡಿರುವುದು,” ಎಂದು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಹೇಮಾನನೂ, ಯೆದುತೂನನೂ ಹೆಸರು ಹೆಸರಾಗಿ ಆಯ್ಕೆಗೊಂಡು, ನೇಮಕರಾಗಿದ್ದರು.
४१आणि त्यांच्याबरोबर हेमान, यदूथून व बाकीचे नावे घेऊन निवडलेल्यांनी परमेश्वराची उपकारस्तुती करावी, कारण त्याची दया सर्वकाळ टिकणारी आहे.
42 ಅದರ ಸಂಗಡ ತುತೂರಿ ಊದಲು, ತಾಳ ಬಾರಿಸಲು, ದೇವರ ಗೀತವಾದ್ಯಗಳೂ ಸಹಿತವಾಗಿ ಹೇಮಾನನೂ, ಯೆದುತೂನನೂ ಮೇಲ್ವಿಚಾರಕರಾಗಿದ್ದರು. ಯೆದುತೂನನ ಪುತ್ರರು ದ್ವಾರಪಾಲಕರಾಗಿದ್ದರು.
४२हेमान आणि यदूथून यांना झांजा वाजवणे, कर्णे फुंकणे व देवासाठी इतर वाद्यांवर संगीत वाजवणे यांचे ते प्रमुख होते. यदूथूनाचे पुत्र द्वाररक्षक होते.
43 ತರುವಾಯ ಜನರೆಲ್ಲರು ತಮ್ಮ ತಮ್ಮ ಮನೆಗೆ ಹೋದರು. ದಾವೀದನು ತನ್ನ ಕುಟುಂಬವನ್ನು ಆಶೀರ್ವದಿಸುವುದಕ್ಕೆ ಹೋದನು.
४३नंतर सर्व लोक आपल्या घरी परत गेले आणि दावीदही आपल्या घरास आशीर्वाद देण्यासाठी परत गेला.

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 16 >