< ಅರಸುಗಳು - ಪ್ರಥಮ ಭಾಗ 20 >

1 ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸರಿದ್ದರು. ಅವನು ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ, ಅದರ ಮೇಲೆ ಯುದ್ಧಮಾಡಿದನು.
बेन-हदाद अरामाचा राजा होता. त्याने आपल्या सर्व सैन्याची जमवाजमव केली. त्याच्या बाजूला बत्तीस राजे होते. त्यांच्याकडे घोडे आणि रथ होते. त्यांनी शोमरोनला वेढा घातला आणि युध्द पुकारले.
2 ಅವನು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ದೂತರನ್ನು ಪಟ್ಟಣದೊಳಗೆ ಕಳುಹಿಸಿ, “ಬೆನ್ಹದದನು ಹೀಗೆ ಹೇಳುತ್ತಾನೆ:
इस्राएलचा राजा अहाब याच्याकडे नगरात बेनहदादने दूतांकरवी निरोप पाठवला
3 ‘ನಿನ್ನ ಬೆಳ್ಳಿಯೂ, ನಿನ್ನ ಬಂಗಾರವೂ ನನ್ನವು. ನಿನ್ನ ಪತ್ನಿಯರೂ, ನಿನ್ನ ಮಕ್ಕಳೆಲ್ಲರೂ ನನ್ನವರು,’” ಎಂಬುದಾಗಿ ಅವನಿಗೆ ಹೇಳಿದನು.
संदेश असा होता, “बेन-हदादचे म्हणणे आहे, तुमच्याकडील सोने रुपे तुम्ही मला द्यावे. तसेच तुझ्या स्त्रिया आणि पुत्रेही माझ्या हवाली करावी.”
4 ಇಸ್ರಾಯೇಲಿನ ಅರಸನು ಉತ್ತರವಾಗಿ, “ಅರಸನಾದ ನನ್ನ ಒಡೆಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು, ನನಗುಂಟಾದ ಸಮಸ್ತವೂ ನಿನ್ನದು,” ಎಂದನು.
यावर इस्राएलाच्या राजाचे उत्तर असे होते, “महाराज मी तर आता तुमच्याच ताब्यात आहे, हे मला मान्य आहे. त्यामुळे जे माझे ते सर्व तुमचेच आहे.”
5 ಆ ದೂತರು ತಿರುಗಿಬಂದು ಅವನಿಗೆ, “ಬೆನ್ಹದದನು ಹೇಳುವುದೇನೆಂದರೆ, ‘ನಿನ್ನ ಬೆಳ್ಳಿಯನ್ನೂ, ನಿನ್ನ ಬಂಗಾರವನ್ನೂ, ನಿನ್ನ ಸ್ತ್ರೀಯರನ್ನೂ, ನಿನ್ನ ಮಕ್ಕಳನ್ನೂ, ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನಲ್ಲವೇ?
अहाबाकडे हे दूत पुन्हा एकदा आले आणि म्हणाले, “बेन-हदादचे म्हणणे असे आहे, ‘तुझ्याजवळचा सोन्याचांदीचा ऐवज तसेच बायकामुले तू माझ्या स्वाधीन केली पाहिजेस.
6 ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು. ಅವರು ನಿನ್ನ ಅರಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ, ನಿಮಗೆ ಅಮೂಲ್ಯವಾದುವುಗಳನ್ನೆಲ್ಲಾ ಅವರು ತೆಗೆದುಕೊಂಡು ಹೋಗುವರು,’” ಎಂದನು.
उद्याच मी माझ्या मनुष्यांचे एक शोधपथक तिकडे पाठवणार आहे. ते तुझ्या तसेच तुझ्या कारभाऱ्यांच्या घराची झडती घेतील. त्यांच्या डोळ्यांना जे आवडेल ते स्वत: च्या हाताने घेतील. ती माणसे त्या वस्तू मला आणून देतील.”
7 ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆ, “ಇವನು ಎಂಥಾ ಕೇಡನ್ನು ಹುಡುಕುತ್ತಾನೆ, ಎಂದು ನೋಡಿರಿ. ಏಕೆಂದರೆ ಅವನು ನನ್ನ ಹೆಂಡತಿಯರಿಗೋಸ್ಕರವೂ, ನನ್ನ ಮಕ್ಕಳಿಗೋಸ್ಕರವೂ, ನನ್ನ ಬೆಳ್ಳಿಗೋಸ್ಕರವೂ, ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ, ನಾನು ಕೊಡುವುದಿಲ್ಲವೆಂದು ಅವನಿಗೆ ಹೇಳಲಿಲ್ಲ,” ಎಂದನು.
तेव्हा इस्राएलचा राजा अहाबाने आपल्या देशातील सर्व वडिलधाऱ्या मनुष्यांची सभा घेतली. अहाब त्यांना म्हणाला, “हे पाहा, हा मनुष्य माझे कसे अनिष्ट करू पाहत आहे. आधी त्याने माझ्या जवळचे सोनेचांदी तसेच माझी स्त्रिया पुत्रे मागितली. त्यास मी कबूल झालो. आणि आता त्यास सर्वच हवे आहे.”
8 ಆಗ ಹಿರಿಯರೂ, ಜನರೂ ಅವನಿಗೆ, “ಅವನ ಮಾತು ಕೇಳದೆ ಒಪ್ಪದಿರು,” ಎಂದರು.
यावर ती वडिलधारी मंडळी आणि इतर लोक अहाबाला म्हणाले, “त्याच्या म्हणण्याला मान झुकवू नको. तो म्हणतो तसे करु नको.”
9 ಆದ್ದರಿಂದ ಅವನು ಬೆನ್ಹದದನ ದೂತರಿಗೆ, “ನೀವು ಅರಸನಾದ ನನ್ನ ಒಡೆಯನಿಗೆ ಹೇಳಬೇಕಾದದ್ದೇನೆಂದರೆ, ‘ನೀನು ಮೊದಲು ಹೇಳಿದ ಸಮಸ್ತವನ್ನೂ ಮಾಡುವೆನು. ಆದರೆ ಈ ಸಾರಿ ಹೇಳಿದ ಕಾರ್ಯವನ್ನು ನಾನು ಮಾಡಲಾರೆ,’ ಎಂದು ಹೇಳಿರಿ,” ಎಂದನು. ದೂತರು ಹೋಗಿ ಈ ಮಾತುಗಳನ್ನು ಬೆನ್ಹದದನಿಗೆ ಹೇಳಿದರು.
मग राजा अहाबाने बेन-हदादकडे निरोप्याला सांगितले की “माझा स्वामी अहाब राजास सांग” तुझी पहिली मागणी मला मान्य आहे. पण तुझ्या दुसऱ्या आज्ञेचे मी पालन करु शकत नाही. बेन-हदादला त्याच्या दूतांनी हा निरोप सांगितला.
10 ಆಗ ಬೆನ್ಹದದನು ದೂತರನ್ನು ಕಳುಹಿಸಿ ಅಹಾಬನಿಗೆ, “ನನ್ನ ಸೈನಿಕರು ಸಮಾರ್ಯದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಬಿಟ್ಟರೆ ದೇವರುಗಳು ನನಗೆ ಇದಕ್ಕಿಂತ ಹೆಚ್ಚಾಗಿ ನನಗೆ ಕೆಟ್ಟದ್ದನ್ನು ಮಾಡಲಿ,” ಎಂದು ಅವನಿಗೆ ಇನ್ನೊಂದು ಸುದ್ದಿಯನ್ನು ಹೇಳಿ ಕಳುಹಿಸಿದನು.
१०तेव्हा बेन-हदादकडून अहाबाला दुसरा निरोप आला. त्या निरोपात म्हटले होते, “शोमरोनचा मी पूर्ण विध्वंस करीन. तिथे काहीही शिल्लक उरणार नाही. आठवणी दाखल काही घेऊन यावे असेही माझ्या मनुष्यांना काही राहणार नाही. असे झाले नाहीतर देव माझे तसे करो व त्यापेक्षा अधिक करो.”
11 ಅದಕ್ಕೆ ಇಸ್ರಾಯೇಲಿನ ಅರಸನು ಉತ್ತರವಾಗಿ, “ಅವನಿಗೆ ಹೇಳು, ‘ತನ್ನ ಆಯುಧಗಳನ್ನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೊಗಳಿಕೊಳ್ಳದೆ ಇರಲಿ’” ಎಂದನು.
११इस्राएलच्या राजाचे त्यास उत्तर गेले. त्यामध्ये म्हटले होते. “बेन-हदादला जाऊन सांगा की, जो चिलखत चढवतो त्याने, जो ते उतरवण्याइतक्या दीर्घ काळापर्यंत जगतो त्याने इतकी फुशारकी मारू नये.”
12 ಬೆನ್ಹದದನೂ, ಅವನ ಸಂಗಡ ಡೇರೆಗಳಲ್ಲಿ ಕುಡಿಯುತ್ತಿದ್ದ ಅರಸರು, ಈ ವಾರ್ತೆಯನ್ನು ಕೇಳುತ್ತಲೇ, ಅವನು ತನ್ನ ಸೇವಕರಿಗೆ, “ಆಕ್ರಮಣ ಮಾಡುವುದಕ್ಕೆ ಸಿದ್ಧಮಾಡಿರಿ,” ಎಂದನು. ಹಾಗೆಯೇ ಪಟ್ಟಣಕ್ಕೆ ವಿರೋಧವಾಗಿ ಯುದ್ಧಕ್ಕೆ ಸಿದ್ಧಮಾಡಿದರು.
१२राजा बेन-हदाद इतर राजांच्या बरोबर आपल्या तंबूत मद्यपान करत बसला होता. त्यावेळी हे दूत आले आणि राजाला हा संदेश दिला. त्याबरोबर बेनहदादने आपल्या मनुष्यांना नगरापुढे चढाईचा व्यूह रचायला सांगितले. “त्याप्रमाणे लोकांनी आपापल्या जागा घेतल्या.”
13 ಆಗ, ಒಬ್ಬ ಪ್ರವಾದಿಯು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ಬಂದು, “ಈ ದೊಡ್ಡ ಗುಂಪನ್ನು ನೋಡಿದೆಯೋ? ನಾನೇ ಯೆಹೋವ ದೇವರೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.
१३तेव्हा इकडे एक संदेष्टा इस्राएलाचा अहाब राजांकडे आला. राजाला तो म्हणाला, “अहाब राजा, परमेश्वराचे तुला सांगणे आहे की, ‘एवढी मोठी सेना बघितलीस? मी, प्रत्यक्ष परमेश्वर, तुझ्या हस्ते या सैन्याचा पराभव करवीन. म्हणजे मग मीच परमेश्वर असल्याबद्दल तुझी खात्री पटेल.”
14 ಅಹಾಬನು, “ಯಾರ ಕೈಯಿಂದ?” ಎಂದನು. ಅದಕ್ಕವನು, “‘ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳಿಂದಲೇ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಆಗ ಅಹಾಬನು, “ಯುದ್ಧ ಪ್ರಾರಂಭ ಮಾಡುವವನು ಯಾರು?” ಎಂದನು. ಅದಕ್ಕೆ ಆ ಪ್ರವಾದಿಯು, “ನೀನೇ,” ಎಂದನು.
१४अहाबाने विचारले. “या पराभवासाठी तू कोणाला हाताशी धरशील?” तेव्हा तो संदेष्टा म्हणाला, “प्रांत अधिकाऱ्यांच्या हाताखालच्या तरुणांची परमेश्वर मदत घेईल” यावर राजाने विचारले, “या सैन्याचे नेतृत्व कोण करील?” “तूच ते करशील” असे संदेष्ट्याने सांगितले.
15 ಅಹಾಬನು ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳನ್ನು ಲೆಕ್ಕಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಿದ್ದರು. ಅವರ ತರುವಾಯ ಇಸ್ರಾಯೇಲರಾದ ಸೈನಿಕರನ್ನು ಲೆಕ್ಕಮಾಡಿದಾಗ ಏಳು ಸಾವಿರ ಜನರಿದ್ದರು.
१५तेव्हा अहाब राजाने अधिकाऱ्यांच्या हाताखालच्या तरुणांची कुमक गोळा केली. त्या तरुणांची संख्या दोनशे बत्तीस भरली. मग राजाने इस्राएलाच्या सर्व फौजेला एकत्र बोलावले. तेव्हा ते एकंदर सात हजार होते.
16 ಅವರು ಮಧ್ಯಾಹ್ನದಲ್ಲಿ ಹೊರಟರು. ಆದರೆ ಬೆನ್ಹದದನೂ, ಅವರ ಸಹಾಯಕರಾದ ಮೂವತ್ತೆರಡು ಮಂದಿ ಅರಸರೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.
१६राजा बेन-हदाद आणि त्याच्या बाजूचे बत्तीस राजे दुपारी आपापल्या तंबूमध्ये मद्यपान करण्यात आणि नशेत गुंग होते. त्यावेळी अहाबाने हल्ला चढवला.
17 ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳ ಮೊದಲು ಸೈನ್ಯವಾಗಿ ಬಂದರು. ಬೆನ್ಹದದನು ಪತ್ತೆದಾರರನ್ನು ಕಳುಹಿಸಿದನು. “ಅವರು ತಿರುಗಿಬಂದು ಸಮಾರ್ಯದಿಂದ ಸೈನಿಕರು ಬಂದಿದ್ದಾರೆ,” ಎಂದು ಅವನಿಗೆ ತಿಳಿಸಿದರು.
१७तरुण मदतनीस आधी चालून गेले. तेव्हा “शोमरोनमधून सैन्य बाहेर आल्याचे राजा बेन-हदादच्या मनुष्यांनी त्यास सांगितले.”
18 ಆಗ ಅವರು, “ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ, ಅವರನ್ನು ಜೀವಿತರಾಗಿ ಹಿಡಿಯಿರಿ. ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ, ಅವರನ್ನು ಜೀವಿತರಾಗಿ ಹಿಡಿಯಿರಿ,” ಎಂದನು.
१८तेव्हा बेन-हदाद म्हणाला, “ते हल्ला करायला आले असतील किंवा सलोख्याची किनंती करायला आले असतील. त्यांना जिवंत पकडा.”
19 ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳೂ, ಅವರ ಹಿಂದೆ ಬಂದ ಸೈನಿಕರೂ, ಪಟ್ಟಣದಿಂದ ಹೊರಗೆ ಬಂದಾಗ,
१९राजा अहाबाच्या तरुणांची तुकडी नगरातून बाहेर पडली आणि इस्राएलचे सैन्य मागोमाग येत होते.
20 ಪ್ರತಿ ಸೈನಿಕನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದರು. ಆಗ ಅರಾಮ್ಯರು ಓಡಿಹೋದರು. ಇಸ್ರಾಯೇಲರು ಅವರನ್ನು ಹಿಂದಟ್ಟಿದರು. ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು.
२०प्रत्येक इस्राएलीने समोरुन येणाऱ्याला ठार केले. त्याबरोबर अरामामधली माणसे पळ काढू लागली. इस्राएलाच्या सैन्याने त्यांचा पाठलाग केला. राजा बेन-हदाद तर एका रथाच्या घोड्यावर बसून पळाला.
21 ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ, ರಥಗಳನ್ನೂ ಹೊಡೆದು, ಅರಾಮ್ಯರನ್ನು ಮಹಾ ಸಂಹಾರದಿಂದ ನಾಶಮಾಡಿಬಿಟ್ಟನು.
२१इस्राएल राजाने सेनेचे नेतृत्व करून अरामाच्या फौजेतील सर्व घोडे आणि रथ पळवले. अरामाची मोठी कत्तल उडवली.
22 ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಬಲಗೊಂಡು, ನೀನು ಏನು ಮಾಡಬೇಕೆಂಬುವುದನ್ನು ಆಲೋಚಿಸು. ಏಕೆಂದರೆ ವಸಂತ ಋತುವಿನಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು,” ಎಂದನು.
२२यानंतर तो संदेष्टा इस्राएल राजा अहाबाकडे गेला आणि म्हणाला, “अरामाचा राजा बेन-हदाद पुढच्या वसंत ऋतुत पुन्हा तुझ्यावर चालून येईल. तेव्हा तू आता परत जा आणि आपल्या सैन्याची ताकद आणखी वाढव. काळजीपूर्वक आपल्या बचावाचे डावपेच आख.”
23 ಆದರೆ ಅರಾಮಿನ ಅರಸನ ಸೇವಕರು ಅವನಿಗೆ, “ಅವರ ದೇವರುಗಳು, ಪರ್ವತಗಳ ದೇವರುಗಳು, ಆದ್ದರಿಂದ ಅವರು ನಮ್ಮನ್ನು ಜಯಿಸಿದರು. ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧಮಾಡಿದರೆ, ನಿಶ್ಚಯವಾಗಿ ನಾವು ಅವರಿಗಿಂತ ಬಲಶಾಲಿಗಳಾಗಿರುವೆವು.
२३अरामाच्या राजाचे अधिकारी त्यास म्हणाले, “इस्राएलाचा देव हा पहाडावरील देव आहे. आपण डोंगराळ भागात लढलो. म्हणून इस्राएलांचा जय झाला. तेव्हा आता आपण सपाटीवर लढू म्हणजे जिंकू.
24 ಇದಲ್ಲದೆ ನೀನು ಮಾಡಬೇಕಾದದ್ದೇನೆಂದರೆ, ಅರಸರನ್ನು ತೆಗೆದುಹಾಕಿ ಅವರಿಗೆ ಪ್ರತಿಯಾಗಿ ಅಧಿಪತಿಗಳನ್ನು ನೇಮಿಸಬೇಕು.
२४आता तुम्ही असे करायला हवे त्या राजांकडे सैन्याचे नेतृत्व न देता त्यांच्या जागी सेनापती नेमा.
25 ನಂತರ ನೀನು ಕಳೆದುಕೊಂಡ ಸೈನ್ಯದ ಹಾಗೆ ಕುದುರೆಗೆ ಕುದುರೆಯೂ, ರಥಕ್ಕೆ ರಥವೂ ಬೇರೆ ಸೈನ್ಯವನ್ನು ಲೆಕ್ಕಿಸು. ಆಗ ನಾವು ಸಮಭೂಮಿಯಲ್ಲಿ ಅವರ ಸಂಗಡ ಯುದ್ಧ ಮಾಡೋಣ. ನಿಶ್ಚಯವಾಗಿ ನಾವು ಅವರಿಗಿಂತ ಬಲಶಾಲಿಗಳಾಗುವೆವು,” ಎಂದರು. ಅವನು ಅವರ ಮಾತನ್ನು ಕೇಳಿ ಹಾಗೆಯೇ ಮಾಡಿದನು.
२५जेवढ्या सेनेचा संहार झाला तेवढी पुन्हा उभी करा. घोडे आणि रथ मागवा. मग आपण सपाटीवर इस्राएली लोकांचा सामना करु म्हणजे जय आपलाच.” बेनहदादने हा सल्ला मानला आणि सर्व तजवीज केली.
26 ವಸಂತ ಕಾಲದಲ್ಲಿ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ, ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಅಫೇಕಿಗೆ ಹೋದನು.
२६वसंत ऋतुत बेन-हदादने अराममधील लोकांस एकत्र आणले आणि तो इस्राएलवरील हल्ल्यासाठी अफेक येथे आला.
27 ಆದ್ದರಿಂದ ಇಸ್ರಾಯೇಲರು ಲೆಕ್ಕ ಮಾಡಿ ಆಹಾರವನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲರು ಅವರಿಗೆದುರಾಗಿ ದಂಡಿಳಿದಿರುವಾಗ, ಅವರು ಆಡುಮರಿಗಳ ಎರಡು ಮಂದೆಗಳ ಹಾಗಿದ್ದರು. ಆದರೆ ಅರಾಮ್ಯರು ಮೈದಾನದಲ್ಲಿ ಸಂಪೂರ್ಣವಾಗಿ ಆವರಿಸಿದ್ದರು.
२७इस्राएलही युध्दाला सज्ज झाले. अरामी सैन्याविरुध्द लढायला गेले. अराम्यांच्या समोरच त्यांनी आपला तळ दिला. शत्रूसैन्याशी तुलना करता, इस्राएल म्हणजे शेरडांच्या दोन लहान कळपांसारखे दिसत होते. अरामी फौजेने सगळा प्रदेश व्यापला होता.
28 ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾಯೇಲಿನ ಅರಸನಿಗೆ, “ಯೆಹೋವ ದೇವರು ತಗ್ಗುಗಳ ದೇವರಾಗಿರದೆ ಪರ್ವತಗಳ ದೇವರಾಗಿದ್ದನೆಂಬುದಾಗಿ ಅರಾಮ್ಯರು ಹೇಳಿದ್ದರಿಂದ, ‘ನಾನು ಯೆಹೋವ ದೇವರಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.
२८एक देवाचा मनुष्य (संदेष्टा) इस्राएलाच्या राजाकडे एक निरोप घेऊन आला. निरोप असा होता. “परमेश्वर म्हणतो, ‘मी डोंगराळ भागातला देव आहे असे या अरामी लोकांचे म्हणणे आहे. सपाटीवरचा मी देव नव्हे असे त्यांना वाटते. तेव्हा या मोठ्या सेनेचा मी तुमच्या हातून पराभव करणार आहे. म्हणजे संपूर्ण प्रदेशाचा मी परमेश्वर आहे हे तुम्ही जाणाल.”
29 ಏಳು ದಿವಸ ಎರಡು ಸೈನ್ಯಗಳೂ ಎದುರುಬದುರಾಗಿ ದಂಡಿಳಿದಿದ್ದರು. ಆದರೆ ಏಳನೆಯ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ, ಇಸ್ರಾಯೇಲರು ಅರಾಮ್ಯರಲ್ಲಿ ಲಕ್ಷಮಂದಿ ಕಾಲಾಳುಗಳನ್ನು ಒಂದೇ ದಿವಸದಲ್ಲಿ ಸಂಹರಿಸಿದರು.
२९दोन्ही सेना सात दिवस समोरासमोर तळ देऊन बसल्या होत्या. सातव्या दिवशी लढाईला सुरुवात झाली. इस्राएल लोकांनी अरामाचे एक लक्ष सैनिक एका दिवसात ठार केले.
30 ಮಿಕ್ಕಾದವರು ಅಫೇಕೆಂಬ ಪಟ್ಟಣದೊಳಗೆ ಓಡಿಹೋದರು. ಅಲ್ಲಿ ಒಂದು ಗೋಡೆ ಉಳಿದುಕೊಂಡವರಲ್ಲಿ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿದ್ದಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
३०जे बचावले ते अफेक येथे पळून गेले. यातील सत्तावीस हजार सैनिकांवर शहराची भिंत कोसळून पडली. बेन-हदादनेही या शहरात पळ काढला होता. तो एका आतल्या खोलीत लपला होता.
31 ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲಿನ ಮನೆಯ ಅರಸರು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿಯನ್ನು ಸೊಂಟಕ್ಕೆ ಕಟ್ಟಿಕೊಂಡು, ಹಗ್ಗಗಳನ್ನು ನಮ್ಮ ತಲೆಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ. ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು,” ಎಂದರು.
३१त्याचे सेवक त्यास म्हणाले, “इस्राएलाचे राजे दयाळू आहेत असे आम्ही ऐकून आहो. आपण कबंरेस गोणताट नेसून आणि डोक्याभोवती दोरखंड आवळून इस्राएलाच्या राजाकडे जाऊ कदाचित् तो आपल्याला जीवदान देईल.”
32 ಹಾಗೆಯೇ ಅವರು ಗೋಣಿಯನ್ನು ತಮ್ಮ ನಡುವುಗಳಿಗೆ ಕಟ್ಟಿಕೊಂಡು, ಹಗ್ಗಗಳನ್ನು ತಮ್ಮ ತಲೆಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು, “ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ,” ಎಂದರು. ಅದಕ್ಕೆ ಅರಸನು, “ಅವನು ಇನ್ನೂ ಬದುಕಿದ್ದಾನೋ? ಅವನು ನನ್ನ ಸಹೋದರನು,” ಎಂದನು.
३२त्या सर्वांनी मग गोणताट घातले. डोक्याभोवती दोरी बांधली आणि ते इस्राएलाच्या राजाकडे आले. त्यास म्हणाले, “तुमचा दास बेन-हदाद तुमच्याकडे जीवदान मागत आहे.” अहाब म्हणाला, “म्हणजे तो अजून जिवंत आहे? तो माझा बंधूच आहे.”
33 ಆದರೆ ಆ ಮನುಷ್ಯರು ಈ ಮಾತನ್ನು ಶುಭಸೂಚನೆಯಾಗಿ ನೆನಸಿ, ಅವನ ಮಾತಿಗೆ ಉತ್ತರವಾಗಿ, “ನಿನ್ನ ಸಹೋದರನಾದ ಬೆನ್ಹದದನು ಇದ್ದಾನೆ,” ಎಂದು ಹೇಳಿದರು. ಆಗ ಅಹಾಬನು, “ನೀವು ಹೋಗಿ ಅವನನ್ನು ಕರೆದುಕೊಂಡು ಬನ್ನಿರಿ,” ಎಂದನು. ಬೆನ್ಹದದನು ಅವನ ಬಳಿಗೆ ಹೊರಟುಬಂದಾಗ ಅಹಾಬನು ಅವನನ್ನು ರಥದಲ್ಲಿ ಕುಳ್ಳಿರಿಸಿಕೊಂಡನು.
३३बेन-हदादला अहाब ठार करणार नाही अशा अर्थाचे त्याने काहीतरी आश्वासक बोलावे अशी बेनहदादच्या बरोबरच्या लोकांची इच्छा होती. तेव्हा अहाबाने बेन-हदादला भाऊ म्हटल्यावर ते ताबडतोब, “हो, बेन-हदाद तुमचा भाऊ जिवंत आहे” अहाब म्हणाल, “जा आणि त्यास आणा” त्याप्रमाणे तो आला. मग राजा अहाबाने त्यास आपल्याबरोबर रथात बसायला सांगितले.
34 ಆಗ ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣಗಳನ್ನು ತಿರುಗಿಕೊಡುತ್ತೇನೆ. ನನ್ನ ತಂದೆ ಸಮಾರ್ಯದಲ್ಲಿ ಮಾಡಿದ ಹಾಗೆಯೇ, ದಮಸ್ಕದಲ್ಲಿ ನೀನು ನಿನಗಾಗಿ ಬೀದಿಗಳನ್ನು ಮಾಡಿಸಬೇಕು,” ಎಂದನು. ಅದಕ್ಕೆ ಅಹಾಬನು, “ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳುಹಿಸಿಬಿಡುತ್ತೇನೆ,” ಎಂದನು. ಹೀಗೆಯೇ ಅಹಾಬನು ಬೆನ್ಹದದನ ಸಂಗಡ ಒಡಂಬಡಿಕೆಯನ್ನು ಮಾಡಿ, ಅವನನ್ನು ಕಳುಹಿಸಿಬಿಟ್ಟನು.
३४बेन-हदाद अहाबाला म्हणाला, “माझ्या वडिलांनी तुझ्या वडिलांकडून जी गावे घेतली ती मी तुला परत करीन. मग, माझ्या वडिलांनी शोमरोनात जशा बाजारपेठा वसवल्या तशा तुला दिमिष्कात करता येतील” अहाब त्यावर म्हणाला, “या करारावर ती तुला मुक्त करायला तयार आहे.” तेव्हा या दोन राजांनी आपसात शांतीचा करार केला. मग राजा अहाबाने राजा बेन-हदादला मुक्त केले.
35 ಆದರೆ ಪ್ರವಾದಿಗಳ ಮಂಡಲಿಯಲ್ಲಿ ಒಬ್ಬನು ಯೆಹೋವ ದೇವರ ಮಾತಿನಿಂದ ತನ್ನ ಜೊತೆಗಾರನಿಗೆ, “ನೀನು ನಿನ್ನ ಆಯುಧದಿಂದ ನನ್ನನ್ನು ಹೊಡೆ,” ಎಂದನು. ಆದರೆ ಆ ಜೊತೆಗಾರನನ್ನು ಹೊಡೆಯಲೊಲ್ಲದೆ ಇದ್ದನು.
३५त्यानंतर संदेष्टयांच्या शिष्यापैकी एका संदेष्ट्याने दुसऱ्या संदेष्ट्याला म्हटले, “मला एक फटका मार.” परमेश्वराचीच तशी आज्ञा होती म्हणून तो असे म्हणाला, पण दुसऱ्या संदेष्ट्यांने तसे करायचे नाकारले.
36 ಆಗ ಪ್ರವಾದಿಯು ಇವನಿಗೆ, “ನೀನು ಯೆಹೋವ ದೇವರ ಮಾತನ್ನು ಕೇಳದೆ ಹೋದದ್ದರಿಂದ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲುವುದು,” ಎಂದನು. ಅವನು ಪ್ರವಾದಿಯನ್ನು ಬಿಟ್ಟು ಹೋದಾಗಲೇ ಸಿಂಹವು ಅವನನ್ನು ಕಂಡು ಕೊಂದುಹಾಕಿತು.
३६तेव्हा पहिला संदेष्टा म्हणाला, “तू परमेश्वराची आज्ञा पाळली नाहीस. तेव्हा तू इथून बाहेर पडशील तेव्हा सिंह तुझा जीव घेईल” तो दुसरा संदेष्टा तेथून निघाला तेव्हा खरोखरच सिंहाने त्यास ठार मारले.
37 ಪ್ರವಾದಿಯು ಮತ್ತೊಬ್ಬನನ್ನು ಕಂಡುಕೊಂಡು, “ದಯಮಾಡಿ, ನನ್ನನ್ನು ಹೊಡೆ,” ಎಂದನು. ಆ ಮನುಷ್ಯನು ಅವನನ್ನು ಗಾಯವಾಗುವಷ್ಟು ಹೊಡೆದನು.
३७मग हा पहिला संदेष्टा एका मनुष्याकडे गेला. त्यास त्याने स्वत: ला “फटका मारायला” सांगितले. त्या मनुष्याने तसे केले आणि संदेष्ट्याला घायाळ केले.
38 ಆಗ ಪ್ರವಾದಿಯು ಹೋಗಿ ತನ್ನ ಕಣ್ಣುಗಳನ್ನು ಮುಂಡಾಸದಿಂದ ಮುಚ್ಚಿಕೊಂಡು ತನ್ನನ್ನು ಮರೆಮಾಡಿಕೊಂಡು, ಅರಸನಾದ ಅಹಾಬನಿಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು.
३८त्या संदेष्ट्याने मग स्वत: च्या तोंडाभोवती एक फडके गुंडाळून घेतले. त्यामुळे तो कोण हे कोणालाही ओळखू येऊ शकत नव्हते. हा संदेष्टा मग वाटेवर राजाची वाट पाहत बसला.
39 ಅರಸನು ಹಾದು ಹೋಗುತ್ತಿರುವಾಗ, ಪ್ರವಾದಿಯು ಅರಸನಿಗೆ ಕೂಗಿ ಹೇಳಿದ್ದೇನೆಂದರೆ, “ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ಸೆರೆಯವನನ್ನು ನನ್ನ ಬಳಿಗೆ ಹಿಡಿದುಕೊಂಡು ಬಂದು, ‘ಈ ಮನುಷ್ಯನನ್ನು ಕಾಯಿ. ಇವನು ತಪ್ಪಿಸಿಕೊಂಡುಹೋದರೆ ನಿನ್ನ ಪ್ರಾಣವು ಇವನ ಪ್ರಾಣಕ್ಕೆ ಬದಲಾಗಿರುವುದು. ಇಲ್ಲವೆ ನೀನು ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಡಬೇಕು,’ ಎಂದನು.
३९राजा तिथून जात होता. तेव्हा संदेष्टा त्यास म्हणाला, “मी लढाईवर गेलो होतो. आपल्यापैकी एकाने एका शत्रू सैनिकाला माझ्यापुढे आणले आणि मला सांगितले, ‘याच्यावर नजर ठेव. हा पळाला तर याच्या जागी तुला आपला जीव द्यावा लागेल किंवा शंभर रत्तल चांदीचा दंड भरावा लागेल.’
40 ಆದರೆ ನಿನ್ನ ಸೇವಕನು ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ತಪ್ಪಿಸಿಕೊಂಡುಹೋದನು,” ಎಂದನು. ಇಸ್ರಾಯೇಲಿನ ಅರಸನು ಅವನಿಗೆ, “ನಿನ್ನ ತೀರ್ಪಿನ ಹಾಗೆಯೇ ಆಗಲಿ, ನೀನು ಸರಿಯಾಗಿ ನಿರ್ಣಯಿಸಿದಿ,” ಎಂದನು.
४०पण मी इतर कामात गुंतलो होतो. तेव्हा तो मनुष्य पळून गेला यावर इस्राएलाचा राजा म्हणाला, त्या सैनिकाला तू निसटू दिलेस हा तुझा गुन्हा तुला मान्य आहे.” तेव्हा निकाल उघडच आहे. “तो मनुष्य म्हणाला ते तू केले पाहिजेस.”
41 ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಮುಂಡಾಸವನ್ನು ತೆಗೆದು ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳಿದುಕೊಂಡನು.
४१आता त्या संदेष्ट्याने तोंडावरचे फडके काढले. इस्राएली राजाने त्यास पाहिले आणि तो संदेष्टा असल्याचे त्याने ओळखले.
42 ಆಗ ಪ್ರವಾದಿಯು ಅಹಾಬನಿಗೆ, “ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಪೂರ್ಣ ನಾಶಕ್ಕೆ ಒಪ್ಪಿಸಿದ ಮನುಷ್ಯನನ್ನು ನೀನು ಬಿಟ್ಟುಬಿಟ್ಟ ಕಾರಣ, ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣ ಹೋಗುವುದು, ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು,’” ಎಂದನು.
४२मग तो संदेष्टा राजाला म्हणाला, “परमेश्वर म्हणतो, मी ज्याचा वध करावा म्हणून सांगितले. त्यास तू मोकळे सोडलेस. तेव्हा आता त्याच्या जागी तू आहेस. तू मरशील. तुझ्या शत्रूच्या ठिकाणी तुझे लोक असतील तेही जिवाला मुकतील.”
43 ಆಗ ಇಸ್ರಾಯೇಲಿನ ಅರಸನು ಬೇಸರದಿಂದಲೂ, ಕೋಪದಿಂದಲೂ ತನ್ನ ಅರಮನೆಗೆ ಹೋಗಲು ಹೊರಟು ಸಮಾರ್ಯಕ್ಕೆ ಬಂದನು.
४३यानंतर इस्राएलचा राजा शोमरोनाला आपल्या घरी परतला. तो अतिशय संतापला होता आणि चितांग्रस्त झाला होता.

< ಅರಸುಗಳು - ಪ್ರಥಮ ಭಾಗ 20 >