< ಸಮುವೇಲನು - ಪ್ರಥಮ ಭಾಗ 23 >

1 “ಫಿಲಿಷ್ಟಿಯರು ಕೆಯೀಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆ,” ಎಂದು ದಾವೀದನಿಗೆ ತಿಳಿಸಿದರು.
तेव्हा कोणी दावीदाला सांगितले की, पाहा पलिष्टी कईल्याशी लढतात व खळी लुटत आहेत.
2 ಆದ್ದರಿಂದ ದಾವೀದನು, “ನಾನು ಈ ಫಿಲಿಷ್ಟಿಯರನ್ನು ಹೊಡೆಯಲು ಹೋಗಲೋ?” ಎಂದು ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು, “ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ನಗರವನ್ನು ರಕ್ಷಿಸು,” ಎಂದರು.
म्हणून दावीदाने परमेश्वरास विचारले, तो म्हणाला, “मी जाऊन त्या पलिष्ट्यांना मारून कईल्याचे रक्षण करू काय?” मग परमेश्वर दावीदाला म्हणाला, जा पलिष्टयांना मारून कईल्याचे रक्षण कर.
3 ಆಗ ದಾವೀದನ ಜನರು ಅವನಿಗೆ, “ಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ. ಆದರೆ ನಾವು ಫಿಲಿಷ್ಟಿಯರ ಸೈನ್ಯಗಳಿಗೆ ವಿರೋಧವಾಗಿ ಕೆಯೀಲಾ ನಗರಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವುದು,” ಎಂದರು.
तेव्हा दावीदाच्या मनुष्यांनी म्हटले, “पाहा आम्हास येथे यहूदात भय आहे; मग आम्ही कईल्यांकडे पलिष्टांच्या सैन्यावर चालून गेलो तर ते कितीतरी अधिक धोकादायक होईल!”
4 ದಾವೀದನು ತಿರುಗಿ ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು ಉತ್ತರವಾಗಿ, “ನೀನೆದ್ದು ಕೆಯೀಲಾ ನಗರಕ್ಕೆ ಹೋಗು; ಏಕೆಂದರೆ ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು.
मग दावीदाने आणखी परमेश्वरास विचारले, आणि परमेश्वराने उत्तर देऊन म्हटले, “उठून खाली कईल्याकडे जा, कारण मी पलिष्ट्यांस तुझ्या हाती देईन.”
5 ಹಾಗೆಯೇ ದಾವೀದನೂ, ಅವನ ಜನರೂ ಎದ್ದು ಕೆಯೀಲಾ ನಗರಕ್ಕೆ ಹೋಗಿ, ಫಿಲಿಷ್ಟಿಯರ ಸಂಗಡ ಯುದ್ಧಮಾಡಿ, ಅವರ ಪಶುಗಳನ್ನು ಹಿಡಿದುಕೊಂಡು ಬಂದು, ಅವರನ್ನು ಪೂರ್ಣವಾಗಿ ಸೋಲಿಸಿದರು. ಈ ಪ್ರಕಾರ ದಾವೀದನು ಕೆಯೀಲಾ ನಗರದ ನಿವಾಸಿಗಳನ್ನು ರಕ್ಷಿಸಿದನು.
मग दावीद व त्याची माणसे कईला येथे जाऊन पलिष्ट्यांशी लढली आणि त्यांनी त्यांची गुरेढोरे नेली व त्यांचा मोठा वध केला; असे दावीदाने कईलकरास तारले.
6 ಅಹೀಮೆಲೆಕನ ಮಗ ಅಬಿಯಾತರನು ಕೆಯೀಲಾ ನಗರದಲ್ಲಿ ಇರುವ ದಾವೀದನ ಬಳಿಗೆ ಓಡಿ ಬಂದಾಗ, ಅವನ ಕೈಯಲ್ಲಿ ಏಫೋದು ಇತ್ತು.
त्यानंतर असे झाले की, अहीमलेखाचा मुलगा अब्याथार दावीदाकडे कईला येथे पळून गेला तेव्हा त्याने आपल्या हाती एफोद आणले.
7 ದಾವೀದನು ಕೆಯೀಲಾ ನಗರಕ್ಕೆ ಬಂದಿದ್ದಾನೆ ಎಂಬ ವಿಷಯ ಸೌಲನಿಗೆ ಮುಟ್ಟಿತು. ಆಗ ಅವನು, “ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಏಕೆಂದರೆ ಅವನು ಬಾಗಿಲುಗಳೂ, ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಈಗ ತಪ್ಪಿಸಿಕೊಳ್ಳಲಾರನು,” ಎಂದುಕೊಂಡನು.
दावीद कईल्याला गेला असे कोणी सांगितले; “तेव्हा शौल म्हणाला, परमेश्वराने तुला माझ्या हाती दिले आहे. कारण वेशीच्या व अडसराच्या नगरात शिरून तो कोंडला गेला आहेस.”
8 ಆಗ ಸೌಲನು ದಾವೀದನನ್ನೂ, ಅವನ ಜನರನ್ನೂ ಮುತ್ತಿಕೊಳ್ಳಲು ತನ್ನ ಸೈನಿಕರನ್ನು ಯುದ್ಧಕ್ಕೆ ಹೋಗಲು ಕೆಯೀಲಾ ನಗರಕ್ಕೆ ಕರೆದನು.
मग कईल्याकडे उतरावे आणि दावीदाला व त्याच्या मनुष्यांना वेढा घालावा म्हणून शौलाने सर्व लोकांस लढाईला बोलावले.
9 ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿದ್ದರಿಂದ ಯಾಜಕನಾದ ಅಬಿಯಾತರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದನು.
आपल्याबद्दल शौल वाईट योजीत आहे, हे दावीदाला कळले म्हणून तो अब्याथार याजकाला म्हणाला, “एफोद इकडे आण.”
10 ಆಗ ದಾವೀದನು, “ಇಸ್ರಾಯೇಲ್ ದೇವರಾದ ಯೆಹೋವ ದೇವರೇ, ಸೌಲನು ಕೆಯೀಲಾ ನಗರಕ್ಕೆ ಬಂದು, ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿಮ್ಮ ಸೇವಕನು ಖಂಡಿತವಾಗಿ ಕೇಳಿದನು.
१०मग दावीद म्हणाला, “हे परमेश्वरा इस्राएलाच्या देवा शौल माझ्यामुळे नगराचा नाश करायला कईल्यावर येऊ पाहत आहे असे तुझ्या सेवकाने खचित ऐकले आहे;
11 ಕೆಯೀಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿಮ್ಮ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ದಯಮಾಡಿ ಇದನ್ನು ನಿಮ್ಮ ಸೇವಕನಿಗೆ ತಿಳಿಸಿರಿ,” ಎಂದನು. ಅದಕ್ಕೆ ಯೆಹೋವ ದೇವರು, “ಅವನು ಬರುವನು,” ಎಂದರು.
११तर कईलकर मला शौलाच्या हाती देतील काय? तुझ्या सेवकाने ऐकल्याप्रमाणे शौल खाली येईल काय? हे परमेश्वरा इस्राएलाच्या देवा मी तुला विंनती करतो, हे तू आपल्या सेवकाला सांग.” परमेश्वर बोलला, “तो खाली येईल.”
12 ಅನಂತರ ದಾವೀದನು, “ಕೆಯೀಲಾ ಪಟ್ಟಣದವರು ನನ್ನನ್ನೂ, ನನ್ನ ಜನರನ್ನೂ ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ?” ಎಂದು ಕೇಳಿದನು. ಯೆಹೋವ ದೇವರು, “ಅವರು ಒಪ್ಪಿಸಿಕೊಡುವರು,” ಎಂದರು.
१२मग दावीद म्हणाला कईलकर मला व माझ्या मनुष्यांना शौलाच्या हाती देतील काय? परमेश्वर बोलला, ते तुला त्याच्या हाती देतील.
13 ಆದ್ದರಿಂದ ದಾವೀದನೂ, ಹೆಚ್ಚು ಕಡಿಮೆ ಆರುನೂರು ಮಂದಿಯಿದ್ದ ತನ್ನ ಜನರೂ ಎದ್ದು ಕೆಯೀಲಾವನ್ನು ಬಿಟ್ಟು ವಿವಿಧ ಕಡೆಗಳಲ್ಲಿ ಅಲೆದಾಡಿದರು. ದಾವೀದನು ಕೆಯೀಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ಗೊತ್ತಾಗಲು ಅವನು ಪ್ರಯಾಣವನ್ನು ನಿಲ್ಲಿಸಿಬಿಟ್ಟನು.
१३मग दावीद व त्याची माणसे उठून कईल्यांतून निघून गेली; ती सुमारे सहाशे माणसे होती. त्यांना जेथे जायला मिळाले तेथे ती गेली; तेव्हा दावीद कईल्यातून पळाला असे शौलाला कोणी सांगितले आणि त्याने तिकडे जायचे सोडले.
14 ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ, ಜೀಫ್ ಎಂಬ ಮರುಭೂಮಿಯ ಬೆಟ್ಟದಲ್ಲಿಯೂ ವಾಸವಾಗಿದ್ದನು. ಸೌಲನು ದಿನವೂ ಅವನನ್ನು ಹುಡುಕುತ್ತಿದ್ದನು. ಆದರೆ ದೇವರು ದಾವೀದನನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.
१४आणि दावीद रानातील गडामध्ये राहू लागला. तो जीफ रानात डोंगराळ प्रदेशात राहू लागला. शौल नित्य त्याचा शोध करीत गेला, परंतु परमेश्वराने त्यास त्याच्या हाती दिले नाही.
15 ತನ್ನ ಪ್ರಾಣವನ್ನು ತೆಗೆಯುವುದಕ್ಕೆ ಸೌಲನು ಹೊರಟಿದ್ದಾನೆಂದು ದಾವೀದನು ತಿಳಿದಾಗ, ಅವನು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು.
१५आपला जीव घ्यायला शौल निघाला आहे असे दावीदाने पाहिले आणि दावीद जीफ रानातील एका झाडीत होता;
16 ಆಗ ಸೌಲನ ಮಗ ಯೋನಾತಾನನು ಎದ್ದು ಮರುಭೂಮಿಯಲ್ಲಿರುವ ದಾವೀದನ ಬಳಿಗೆ ಹೋಗಿ, ಅವನನ್ನು ದೇವರಲ್ಲಿ ಬಲಪಡಿಸಿ ಸಹಾಯಮಾಡಿದನು.
१६शौलाचा मुलगा योनाथान उठून झाडीत दावीदाकडे गेला आणि त्याने त्याचा हात परमेश्वराच्याठायी सबळ केला.
17 ಯೋನಾತಾನನು ಅವನಿಗೆ, “ಭಯಪಡಬೇಡ, ಏಕೆಂದರೆ ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವುದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ. ನಾನು ನಿನಗೆ ಎರಡನೆಯವನಾಗಿರುವೆನು ಮತ್ತು ಹೀಗೆ ಆಗುವುದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ,” ಎಂದನು.
१७तो त्यास म्हणाला, “भिऊ नको कारण माझा बाप शौल याच्या हाती तू लागणार नाहीस. तू तर इस्राएलावर राजा होशील आणि तुझ्याजवळ मीच पहिला तुझा सहाय्यक होईन हे माझा बाप शौलही जाणतो.”
18 ಅವರಿಬ್ಬರೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಹೋರೆಷದಲ್ಲಿಯೇ ಉಳಿದನು. ಆದರೆ ಯೋನಾತಾನನು ತನ್ನ ಮನೆಗೆ ಹೋದನು.
१८तेव्हा त्या दोघांनी परमेश्वराच्यासमोर करार केला. मग दावीद झाडीत राहिला व योनाथान आपल्या घरी गेला.
19 ಆಗ ಜೀಫ್ಯರು ಗಿಬೆಯದಲ್ಲಿರುವ ಸೌಲನ ಬಳಿಗೆ ಬಂದು, “ದಾವೀದನು ನಮ್ಮ ಪಕ್ಷವಾಗಿಯೇ ಹೋರೆಷದ ಗಿರಿಗಳಲ್ಲಿ ಅಂದರೆ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದನಲ್ಲವೇ?
१९जीफी लोक शौलाकडे गिबा येथे येऊन म्हणाले, “यशीमोनाच्या दक्षिणेकडे हकीला डोंगरातील झाडीत गडामध्ये दावीद आम्हाजवळ लपून राहिला आहे की नाही?
20 ಈಗ ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ. ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು,” ಎಂದರು.
२०तर आता हे राजा, खाली येण्याच्या आपल्या सर्व मनोरथप्रमाणे खाली ये, म्हणजे त्यास राजाच्या हाती देणे हे आमचे काम असेल.”
21 ಆಗ ಸೌಲನು, “ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ, ಯೆಹೋವ ದೇವರಿಂದ ನಿಮಗೆ ಆಶೀರ್ವಾದವಾಗಲಿ.
२१तेव्हा शौल म्हणाला, “तुम्हास परमेश्वरापासून आशीर्वाद मिळेल कारण तुम्ही माझ्यावर दया केली आहे.
22 ನೀವು ದಯಮಾಡಿ ಹೋಗಿ ಅವನು ಹೆಜ್ಜೆ ಇಡುವ ಸ್ಥಳವನ್ನೂ, ಅಲ್ಲಿ ಅವನನ್ನು ನೋಡಿದವರು ಯಾರು ಎಂಬುದನ್ನೂ ಇನ್ನೂ ಸೂಕ್ಷ್ಮವಾಗಿ ತಿಳಿದುಕೊಂಡು ನೋಡಿರಿ. ಏಕೆಂದರೆ ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾನೆಂದು ನನಗೆ ಹೇಳುತ್ತಾರೆ.
२२मी तुम्हास विनंती करतो तुम्ही जा आणखी मन लावून त्याचा माग काढा आणि तेथे त्यास कोणी पाहिले याची माहिती काढून पाहा कारण तो फार चतुराईने वागतो असे मला कळाले आहे.
23 ಅವನು ಅಡಗಿಕೊಂಡಿರುವ ಸಮಸ್ತ ರಹಸ್ಯ ಸ್ಥಳಗಳನ್ನೂ ನೋಡಿ ತಿಳಿದುಕೊಂಡು, ನಿಶ್ಚಯವಾದ ವರ್ತಮಾನವನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ. ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ, ಯೆಹೂದದ ಸಹಸ್ರ ಕುಲದಲ್ಲಿಯೂ ಅವನನ್ನು ಹುಡುಕಿ ಅವನನ್ನು ಹಿಡಿಯುವೆನು,” ಎಂದನು.
२३तर जेथे तो लपून राहतो त्या सर्व लपण्याच्या जागा पाहून त्यांची खात्री करून घ्या, मग खरे वर्तमान घेऊन माझ्याकडे परत या; त्यानंतर मी तुम्हाबरोबर जाईन आणि असे होईल की, तो त्या मुलुखात असला तर मी त्यास यहूदाच्या सर्व हजारांतून त्यास हुडकून काढीन.”
24 ಆದ್ದರಿಂದ ಅವರು ಎದ್ದು ಸೌಲನ ಮುಂದೆ ಜೀಫಕ್ಕೆ ಹೊರಟು ಹೋದರು. ಆದರೆ ದಾವೀದನೂ, ಅವನ ಜನರೂ ಯೆಷಿಮೋನಿನ ದಕ್ಷಿಣ ದಿಕ್ಕಿನಲ್ಲಿ ಇರುವ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಮಾವೋನಿನ ಮರುಭೂಮಿಯಲ್ಲಿದ್ದರು.
२४मग ते उठले आणि शौलापुढे जीफाकडे गेले; परंतु दावीद व त्याची माणसे यशीमोनाच्या दक्षिणेकडे मावोनाच्या रानात अराबात होती.
25 ಸೌಲನೂ, ಅವನ ಜನರೂ ಅವನನ್ನು ಹುಡುಕಲು ಬಂದರು. ಇದು ದಾವೀದನಿಗೆ ತಿಳಿದಾಗ, ಅವನು ಬಂಡೆಗಳಲ್ಲಿ ಇಳಿದು ಮಾವೋನಿನ ಮರುಭೂಮಿಯಲ್ಲಿ ವಾಸಿಸಿದನು. ಅದನ್ನು ಸೌಲನು ಕೇಳಿ ಮಾವೋನಿನ ಮರುಭೂಮಿಯಲ್ಲಿ ದಾವೀದನನ್ನು ಹಿಂದಟ್ಟಿದನು.
२५शौल व त्याची माणसे त्याचा शोध करायला आली. हे कोणी दावीदाला सांगितले, म्हणून तो खडकावरून उतरून मावोनाच्या रानात राहिला हे ऐकून शौल मावोनाच्या रानात दावीदाच्या मागे लागला.
26 ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು. ದಾವೀದನೂ, ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು. ಸೌಲನಿಗೆ ಭಯಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆಪಡುತ್ತಿದ್ದರು. ಆಗ ಸೌಲನೂ, ಅವನ ಜನರೂ ಅವರನ್ನು ಹಿಡಿಯುವಂತೆ ಸುತ್ತಿಕೊಂಡರು.
२६शौल डोंगराच्या एका बाजूने चालला आणि दावीद व त्याची माणसे डोंगराच्या दुसऱ्या बाजूने चालली आणि दावीदाने शौलापासून पळायला घाई केली कारण शौल व त्याची माणसे, दावीदाला आणि त्याच्या मनुष्यांना धरायला घेरीत होती.
27 ಆದರೆ ಒಬ್ಬ ಸೇವಕನು ಸೌಲನ ಬಳಿಗೆ ಬಂದು, “ನೀನು ತ್ವರೆಯಾಗಿ ಬಾ. ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ,” ಎಂದನು.
२७परंतु एक निरोप्या शौलाकडे येऊन म्हणाला, लवकर ये कारण पलिष्ट्यांनी देशावर घाला घातला आहे.
28 ಆದ್ದರಿಂದ ಸೌಲನು ದಾವೀದನನ್ನು ಹಿಂದಟ್ಟುವುದನ್ನು ಬಿಟ್ಟು, ಫಿಲಿಷ್ಟಿಯರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಸೇಲಾ ಅಮ್ಮಾಲೆಕೋತ್ ಎಂದರೆ, ಅಡ್ಡ ಬೆಟ್ಟ ಎಂದು ಹೆಸರಿಟ್ಟರು.
२८तेव्हा शौल दावीदाचा पाठलाग सोडून पलिष्ट्यांवर चाल करून गेला. याकरिता त्या जागेचे नाव सेला हम्मालकोथ म्हणजे निसटून जाण्याचा खडक असे पडले.
29 ದಾವೀದನು ಆ ಸ್ಥಳವನ್ನು ಬಿಟ್ಟು ಹೋಗಿ ಏನ್ಗೆದಿಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.
२९मग दावीद तेथून वर जाऊन एन-गेदीच्या गडामध्ये राहिला.

< ಸಮುವೇಲನು - ಪ್ರಥಮ ಭಾಗ 23 >