< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 14 >

1 ಅಬೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು, ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಆಸನು ಅವನಿಗೆ ಬದಲಾಗಿ ಅರಸನಾದನು, ಅವನ ದಿವಸಗಳಲ್ಲಿ ಹತ್ತು ವರ್ಷ ದೇಶವು ಶಾಂತವಾಗಿತ್ತು.
अबीयाला पुढे आपल्या पूर्वजांसोबत चिरविश्रांती मिळाली. दावीद नगरात लोकांनी त्याचे दफन केले. त्याचा पुत्र आसा हा त्यानंतर राज्य करु लागला आसाच्या कारकिर्दीत लोकांस दहा वर्षे शांतता लाभली.
2 ಆಸನು ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನೂ, ಸರಿಯಾದದ್ದನ್ನೂ ಮಾಡಿದನು.
आसाने परमेश्वर देवाच्या दृष्टीने चांगले आणि उचित असा कारभार केला.
3 ಅವನು ಅನ್ಯದೇವರುಗಳ ಬಲಿಪೀಠಗಳನ್ನೂ, ಉನ್ನತ ಪೂಜಾಸ್ಥಳಗಳನ್ನೂ ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅವುಗಳ ಅಶೇರ ಸ್ತಂಭಗಳನ್ನು ಕಡಿದುಹಾಕಿದನು.
त्याने मूर्तीपूजेसाठी वापरात येणाऱ्या परक्या वेद्या काढून टाकल्या. उच्चस्थाने पाडली आणि पवित्र मानले जाणारे स्तंभ फोडून टाकले. आसाने अशेरा देवीचे खांबही उदध्वस्त केले.
4 ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹುಡುಕಲೂ, ನಿಯಮವನ್ನೂ, ಆಜ್ಞೆಯನ್ನೂ ಕೈಗೊಳ್ಳಲು ಯೆಹೂದ್ಯರಿಗೆ ಆಜ್ಞಾಪಿಸಿದನು.
त्याने यहूदी लोकांस परमेश्वर देवाला अनुसरायची आज्ञा केली. त्यांच्या पूर्वजांचा देव तोच. त्या परमेश्वराने घालून दिलेल्या आज्ञा आणि नियम पाळायला फर्मावले.
5 ಇದಲ್ಲದೆ ಅವನು ಉನ್ನತ ಪೂಜಾಸ್ಥಳಗಳನ್ನೂ, ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಶಾಂತವಾಗಿತ್ತು.
यहूदाच्या सगळ्या नगरांमधली उच्चस्थाने आणि धूप जाळायच्या वेद्या आसाने काढून टाकल्या. आसाच्या कारकीर्दीत त्यामुळे राज्यात शांतता नांदत होती.
6 ಇದಲ್ಲದೆ ಅವನು ಯೆಹೂದದಲ್ಲಿ ಕೋಟೆಗಳುಳ್ಳ ಪಟ್ಟಣಗಳನ್ನು ಕಟ್ಟಿದನು. ಏಕೆಂದರೆ ದೇಶವು ಶಾಂತವಾಗಿತ್ತು. ಯೆಹೋವ ದೇವರು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರ್ಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.
या काळात आसाने यहूदात भक्कम तटबंदीची नगरे बांधली. परमेश्वराने शांतता दिल्यामुळे या काळात आसा युध्दमुक्त राहिला.
7 ಅವನು ಯೆಹೂದದವರಿಗೆ, “ದೇಶವು ನಮ್ಮ ಮುಂದೆ ಇರುವಾಗ ಈ ಪಟ್ಟಣಗಳನ್ನು ಕಟ್ಟಿ, ಅವುಗಳ ಸುತ್ತಲೂ ಗೋಡೆಗಳನ್ನೂ, ಗೋಪುರಗಳನ್ನೂ, ಬಾಗಿಲುಗಳನ್ನೂ, ಅಗುಳಿಗಳನ್ನೂ ಮಾಡೋಣ. ಏಕೆಂದರೆ ನಾವು ನಮ್ಮ ದೇವರಾದ ಯೆಹೋವ ದೇವರನ್ನು ಹುಡುಕಿದೆವು. ನಾವು ಅವರನ್ನು ಹುಡುಕಿದ್ದರಿಂದ ಅವರು ಎಲ್ಲಾ ಕಡೆಯಲ್ಲಿಯೂ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾರೆ,” ಎಂದನು. ಹಾಗೆಯೇ ಅವರು ಸೈನ್ಯವನ್ನು ಕಟ್ಟಿ ವೃದ್ಧಿಹೊಂದಿದರು.
आसा यहूदातील लोकांस म्हणाला, “ही नगरे बांधून त्याभोवती तटबंदी करु. त्यांना कोट, बुरुज, वेशी आणि अडसर करु. या प्रदेशात आपण राहत आहोत, तो आपलाच आहे. परमेश्वर देवाला अनुसरल्यामुळे हा देश आपल्याला मिळाला आहे. त्याने आपल्याला स्वास्थ्यही दिले आहे.” तेव्हा त्यांनी ते बांधले व यश मिळविले.
8 ಇದಲ್ಲದೆ ಆಸನಿಗೆ ದೊಡ್ಡ ಗುರಾಣಿಗಳನ್ನೂ, ಈಟಿಗಳನ್ನೂ ಹಿಡಿಯುವ ಸೈನ್ಯವಿತ್ತು. ಯೆಹೂದದವರು ಮೂರು ಲಕ್ಷ ಮಂದಿಯೂ, ಬೆನ್ಯಾಮೀನವರಲ್ಲಿ ಚಿಕ್ಕ ಗುರಾಣಿಗಳನ್ನು ಹಿಡಿಯುವ, ಬಿಲ್ಲುಗಳನ್ನು ಎಸೆಯುವ ಎರಡು ಲಕ್ಷದ ಎಂಬತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿ ಯುದ್ಧವೀರರಾಗಿದ್ದರು.
आसाच्या सैन्यात यहूदाच्या वंशातील तीन लाख जण आणि बन्यामीन वंशातील दोन लाख ऐंशी हजार पुरुष होते. यहूदा लोकांकडे मोठ्या ढाली आणि भाले होते. बन्यामिनाकडे लहान ढाली होत्या. तसेच धनुष्यबाण होते. हे सर्व पराक्रमी आणि बलवान लढवय्ये होते.
9 ಆದರೆ ಕೂಷ್ಯನಾದ ಜೆರಹನು ಅವರಿಗೆ ವಿರೋಧವಾಗಿ ಹೊರಟು, ಮಾರೇಷಾದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ಯುದ್ಧವೀರರೂ, ಮುನ್ನೂರು ರಥಗಳೂ ಇದ್ದವು.
पुढे जेरहने आसावर स्वारी केली. जेरह हा कूशी होता त्याच्याकडे दहा लाख सैनिक आणि तीनशे रथ होते. जेरह आपल्या सैन्याला घेऊन मारेशा नगरापर्यंत आला.
10 ಆಸನು ಅವನಿಗೆದುರಾಗಿ ಹೊರಟುಹೋದನು. ಮಾರೇಷಾದ ಬಳಿಯಲ್ಲಿ ಚೆಫಾತಾದ ತಗ್ಗಿನಲ್ಲಿ ವ್ಯೂಹ ಕಟ್ಟಿದರು.
१०आसा त्याच्याशी सामना करायला निघाला. मारेशा जवळच्या सफाथाच्या खोऱ्यात त्यांची लढाई सुरू झाली.
11 ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.
११आसा आपल्या परमेश्वर देवाला हाक मारुन म्हणाला, “परमेश्वरा, या बलाढ्य सेनेपुढे दुर्बलांना तूच मदत करु शकतोस. तूच आमच्या मदतीला उभा राहा. आम्ही तुझ्यावर भरवसा ठेवून आहोत. तुझे नाव घेऊनच आम्ही या विशाल सेनेला तोंड देणार आहोत. परमेश्वर देवा, तुझ्यावर कोणी वर्चस्व मिळवू नये.”
12 ಆಗ ಯೆಹೋವ ದೇವರು ಕೂಷ್ಯರನ್ನು ಆಸನ ಮುಂದೆಯೂ, ಯೆಹೂದದವರ ಮುಂದೆಯೂ ಸೋಲುವಂತೆ ಮಾಡಿದರು. ಆದ್ದರಿಂದ ಕೂಷ್ಯರು ಓಡಿಹೋದರು.
१२मग परमेश्वराने आसाच्या यहूदा सेनेकडून कूशी सैन्याचा पराभव करवला. कूशी सैन्याने पळ काढला.
13 ಆಗ ಆಸನೂ, ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನವರೆಗೂ ಹಿಂದಟ್ಟಿದರು. ಹೆಚ್ಚಿನ ಸಂಖ್ಯೆಯಲ್ಲಿ ಕೂಷ್ಯರು ಸೋತುಹೋದರು. ಅವರು ಯೆಹೋವ ದೇವರ ಮುಂದೆಯೂ, ಅವರ ಸೈನ್ಯದ ಮುಂದೆಯೂ ನಾಶವಾದರು. ಯೆಹೂದ್ಯರು ಬಹು ಕೊಳ್ಳೆಯನ್ನು ಒಯ್ದರು.
१३आसाच्या सैन्याने गरारपर्यंत कुशींचा पाठलाग केला. त्यामध्ये कूशींची एवढी प्राणहानी झाली की पुन्हा लढाईला उभे राहायचे बळ त्यांच्यात राहिले नाही. परमेश्वरापुढे आणि त्याच्या सैन्यापुढे ते पार धुळीस मिळाले. आसाच्या लोकांनी कूर्शींच्या मौल्यवान वस्तू लुटल्या.
14 ಇದಲ್ಲದೆ ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ವಶಪಡಿಸಿಕೊಂಡರು. ಯೆಹೋವ ದೇವರ ಭಯವು ಅವರ ಮೇಲೆ ಇತ್ತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದುದರಿಂದ, ಅವುಗಳನ್ನೆಲ್ಲಾ ವಶಪಡಿಸಿಕೊಂಡರು.
१४गरारच्या आसपासच्या सर्व गावांचा आसाच्या सैन्याने पराभव केला. तिथल्या लोकांनी परमेश्वराची धास्ती घेतली. या गावांमध्ये लुटण्यासारखे बरेच काही होते. ते आसाच्या सैन्याने घेतले.
15 ಪಶುಗಳಿದ್ದ ಡೇರೆಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂಸಲೇಮಿಗೆ ತಿರುಗಿ ಬಂದರು.
१५मेंढपाळांच्या वस्त्यांवर आसाच्या सैन्याने धाड घातली. तेथून त्यांनी बरीच मेंढरे आणि उंट घेतले आणि ते यरूशलेमेला परतले.

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 14 >