< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 23 >

1 ಏಳನೆಯ ವರ್ಷದಲ್ಲಿ ಯೆಹೋಯಾದಾವನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿಗಳಾಗಿರುವ ಯೆರೋಹಾಮನ ಮಗ ಅಜರ್ಯನನ್ನೂ, ಯೆಹೋಹಾನಾನನ ಮಗ ಇಷ್ಮಾಯೇಲನನ್ನೂ, ಓಬೇದನ ಮಗ ಅಜರ್ಯನನ್ನೂ, ಅದಾಯನ ಮಗ ಮಾಸೇಯನನ್ನೂ, ಜಿಕ್ರಿಯ ಮಗ ಎಲಿಷಾಫಾಟನನ್ನೂ ಕರೆದುಕೊಂಡು, ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು.
यहोयादाने सातव्या वर्षांनंतर आपले सामर्थ्य दाखवले. त्याने यरोहामाचा पुत्र अजऱ्या यहोहानानाचा पुत्र इश्माएल, ओबेदचा पुत्र अजऱ्या, अदायाचा पुत्र मासेया आणि जिख्रीचा पुत्र अलीशाफाट या मुख्य अधिकाऱ्यांशी करार केला.
2 ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲಿನ ಕುಟುಂಬದಲ್ಲಿ ಮುಖ್ಯಸ್ಥರನ್ನೂ ಕೂಡಿಸಿಕೊಂಡು, ಯೆರೂಸಲೇಮಿಗೆ ಬಂದರು.
त्यांनी यहूदाभर फिरुन यहूदाच्या नगरात विखुरलेल्या लेवींना आणि इस्राएलच्या कुलप्रमुखांना एकत्र आणले. मग ते सर्व यरूशलेम येथे गेले.
3 ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರಸನ ಸಂಗಡ ಒಡಂಬಡಿಕೆಯನ್ನು ಮಾಡಿದರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವ ದೇವರು ದಾವೀದನ ವಂಶದವರ ಬಗ್ಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಆಳತಕ್ಕವನು ಇವನೇ.
तेथे देवाच्या मंदिरात सर्व समुदायाने राजाशी करार केला. यहोयादा या लोकांस म्हणाला, “परमेश्वर दावीदाच्या संततीविषयी जे बोलला आहे त्यास अनुसरुन राजाचा पुत्र गादीवर येईल.
4 ಈಗ ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ಯಾಜಕರೂ, ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ದ್ವಾರಪಾಲಕರಾಗಿರಬೇಕು.
आता तुम्ही करायचे ते असे: तुमच्यापैकी जे एक-तृतीआंश याजक आणि लेवी शब्बाथाच्या दिवशी कामाला येतात त्यांनी मंदिरावर पहारा करावा.
5 ಇನ್ನೊಂದು ಭಾಗವು ಅರಮನೆಯನ್ನೂ, ಮತ್ತೊಂದು ಭಾಗವು ಅಸ್ತಿವಾರದ ಬಾಗಿಲನ್ನೂ, ಇತರ ಸಮಸ್ತ ಜನರೂ ಯೆಹೋವ ದೇವರ ಆಲಯದ ಅಂಗಳದಲ್ಲಿಯೂ ಇರಬೇಕು.
एकतृतीयांश लोकांनी राजमहालावर पहारा करावा, आणि उरलेल्या एकतृतीयांश लोकांनी वेशीपाशी असावे. यांच्याखेरीज बाकी सर्व लोकांनी परमेश्वराच्या मंदिराच्या दालनात रहावे.
6 ಆದರೆ ಯಾಜಕರೂ, ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಬೇರೆ ಯಾರೂ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪ್ರತಿಷ್ಠಿತರಾದುದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಯೆಹೋವ ದೇವರ ಆಜ್ಞಾನುಸಾರವಾಗಿ ಹೊರಗಿರಬೇಕು.
कोणालाही परमेश्वराच्या मंदिरात येऊ देऊ नये, याजक व सेवा करणारे लेवी यांनीच मात्र आत यावे कारण ते याच कामासाठी नेमलेले आहेत. पण इतरांनी परमेश्वराने नेमून दिलेली आपआपली कामे करायची आहेत.
7 ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾದರೂ ಆಲಯದಲ್ಲಿ ಬಂದರೆ, ಅವನನ್ನು ಸಂಹರಿಸಬೇಕು. ಆದರೆ ಅರಸನು ಒಳಗೆ ಬರುವಾಗಲೂ, ಹೊರಗೆ ಹೋಗುವಾಗಲೂ ನೀವು ಅವನ ಜೊತೆಯಲ್ಲಿಯೇ ಇರಬೇಕು,” ಎಂದು ಹೇಳಿದನು.
लेवींनी राजाला सर्व बाजूंनी घेराव घालावा. प्रत्येकाजवळ आपली तलवार सज्ज असावी. कोणी मंदिरात घुसायचा प्रयत्न केल्यास त्यास ठार करावे. सर्वांनी राजाची सावलीसारखी सोबत करावी.
8 ಹೀಗೆಯೇ ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಪ್ರಕಾರ ಲೇವಿಯರೂ ಸಮಸ್ತ ಯೆಹೂದದವರೂ ಮಾಡಿದರು. ಪ್ರತಿ ಮನುಷ್ಯನು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಬರತಕ್ಕ ಸಿಪಾಯಿಗಳನ್ನು ಕೂಡಿಸಿಕೊಂಡನು. ಏಕೆಂದರೆ ಯಾಜಕನಾದ ಯೆಹೋಯಾದನು ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ.
लेवी आणि यहूदा या सर्व लोकांनी यहोयादा या याजकाने ज्या आज्ञा केल्या त्या सर्वांचे पालन केले. यहोयादाने याजकांपैकी कोणाचीही गय केली नाही. त्यामुळे शब्बाथाच्या दिवशी आळीपाळीने आत येणाऱ्या व कामावरुन बाहेर जाणाऱ्या सर्वाची व्यवस्था केली.”
9 ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ, ದೊಡ್ಡ ಮತ್ತು ಸಣ್ಣ ಗುರಾಣಿಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು,
दावीद राजाचे भाले, छोट्या आणि मोठ्या ढाली ही शस्त्रे देवाच्या मंदिरामध्ये ठेवलेली होती. यहोयादा याजकाने शंभर सैनिकांच्या तुकड्यांच्या प्रमुखांना त्या दिल्या.
10 ಆಯುಧಗಳನ್ನು ಕೈಯಲ್ಲಿ ಹಿಡಿದುಕೊಂಡಿದ್ದ ಸಮಸ್ತ ಜನರನ್ನೂ ಬಲಿಪೀಠದ ಬಳಿಯಲ್ಲಿಯೂ, ಆಲಯದ ಬಳಿಯಲ್ಲಿಯೂ, ಆಲಯದ ಬಲಗಡೆಯ ಮೊದಲುಗೊಂಡು ಆಲಯದ ಎಡಗಡೆಯವರೆಗೂ ಅರಸನ ಸುತ್ತಲೂ ಇರಿಸಿದನು.
१०आणि त्यांनी कुठे, कसे उभे राहायचे ते सांगितले. प्रत्येकाजवळ आपआपले शस्त्र होते. मंदिराच्या सरळ उजव्या कोपऱ्यापासून डाव्या बाजूपर्यंत ही शस्त्रधारी माणसे उभी राहिली. वेदी, मंदिर आणि राजा यांच्याजवळ ती उभी होतीच.
11 ಆಗ ಯೆಹೋಯಾದಾವನು ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅವನನ್ನು ಅರಸನನ್ನಾಗಿ ಘೋಷಿಸಿ, ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.
११मग त्यांनी राज पुत्राला बाहेर आणले आणि त्याच्या मस्तकावर मुकुट चढवला. त्याच्या हाती आज्ञापट दिला. योवाशाला त्यांनी राजा केले. यहोयादा आणि त्याचे पुत्र यांनी त्यास अभिषेक केला. “राजा चिरायु होवो” असे ते सर्वजण म्हणाले.
12 ಆದರೆ ಅರಸನನ್ನು ಹರಸುತ್ತಾ, ಓಡುತ್ತಾ ಇದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ, ಅವಳು ಯೆಹೋವ ದೇವರ ಆಲಯದಲ್ಲಿ ಜನರ ಬಳಿಗೆ ಬಂದಳು.
१२लगबगीने जाणाऱ्या लोकांचा गलबला आणि राजाचा जयजयकार अथल्याने ऐकला. तेव्हा ती लोकांकडे परमेश्वराच्या मंदिरात आली.
13 ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.
१३पाहते तो तिला राजा दिसला. प्रवेशद्वाराशी तो राजस्तंभाजवळ उभा होता. कर्णे वाजवणारे कारभारी आणि लोक राजाजवळ उभे होते. देशभरचे लोक कर्णे वाजवून आनंद व्यक्त करत होते. गाणारे वाद्ये वाजवत होते आणि त्यांनी म्हटलेल्या स्तवनगीतापाठोपाठ लोक गात होते. तेव्हा आपली तीव्र नापसंती दाखविण्यासाठी अथल्याने आपले कपडे फाडले आणि “फितुरी! फितुरी!” असे ती ओरडली.
14 ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳನ್ನು ಹೊರಗೆ ಕರೆತಂದು ಅವರಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.
१४याजक यहोयादा याने सेनापतींना पुढे आणले. त्यांना तो म्हणाला, “तिला सैन्याच्या रांगांमधून बाहेर काढा. तिच्या मागे जो जाईल त्यास तलवारीने मारुन टाका.” मग याजकाने सैन्याला आज्ञा दिली कि, “परमेश्वराच्या मंदिरात अथल्याचा वध करु नका.”
15 ಆಗ ಅವರು ಅವಳನ್ನು ಅಧೀನಕ್ಕೆ ತೆಗೆದುಕೊಂಡು, ಅರಮನೆಯ ಬಳಿಯಲ್ಲಿ ಕುದುರೆ ಬಾಗಿಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದುಹಾಕಿದರು.
१५राजमहालाच्या घोडावेशीजवळ अथल्या पोहोचताच सैनिकांनी तिला पकडले आणि त्याठिकाणी तिला जिवे मारले.
16 ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ತನಗೂ, ಸಮಸ್ತ ಜನರಿಗೂ, ಅರಸನಿಗೂ ಒಡಂಬಡಿಕೆ ಮಾಡಿಸಿದನು.
१६यहोयादाने मग सर्व लोक आणि राजा यांच्याबरोबर एक करार केला. आपण सर्व परमेश्वराचे लोक आहोत असा तो करार होता.
17 ಸಮಸ್ತ ಜನರು ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು.
१७मग सर्वजण बआल देवतेच्या मंदिरात गेले आणि त्या मूर्तीची त्यांनी नासधूस केली. तिथल्या इतर मूर्ती आणि वेदीदेखील मोडून तोडून टाकल्या. बआलच्या वेदीपुढेच त्यांनी बआलचा याजक मत्तान याला ठार केले.
18 ಆಗ ಯೆಹೋಯಾದಾವನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವ ದೇವರ ಆಲಯದ ಪರಿಚಾರಕರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವ ದೇವರ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ಬೇರ್ಪಡಿಸಿದ್ದನು. ದಾವೀದನಿಂದ ನೇಮಕವಾದ ಪ್ರಕಾರ ಸಂತೋಷದಿಂದ ಹಾಡುತ್ತಾ ಮೋಶೆಯ ನಿಯಮದಲ್ಲಿ ಬರೆದಿರುವಂತೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುವುದು ಅವರ ಕರ್ತವ್ಯವಾಗಿತ್ತು.
१८यहोयादाने मग परमेश्वराच्या मंदीरातील याजकांची नेमणूक केली. हे याजक लेवी होते आणि दावीदाने त्यांना मंदिराचे मुखत्यारपद दिले होते. मोशेच्या नियमशास्त्राप्रमाणे परमेश्वरास होमबली अर्पण करणे, हे त्यांचे काम होते. दावीदाच्या आज्ञेनुसार आनंदाने गायन करत त्यांनी होमबली अर्पण केले
19 ಯೆಹೋವ ದೇವರ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಿಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿದನು.
१९कोणीही अशुद्धतेने मंदिराच्या आत येवू नये, म्हणून यहोयादाने परमेश्वराच्या मंदिराच्या प्रवेशद्वाराशीच द्वारपाल नेमले
20 ಅವನು ಶತಾಧಿಪತಿಗಳನ್ನೂ, ಗೌರವಸ್ಥರನ್ನೂ, ಜನರ ಅಧಿಪತಿಗಳನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕರೆತಂದನು. ಅವರು ಹೆಬ್ಬಾಗಿಲಿನಿಂದ ಅರಮನೆಗೆ ಬಂದು, ಅರಸನನ್ನು ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದರು.
२०सर्व सैन्याधिकारी, लोकनायक, सरदार आणि सर्व प्रजा यांना यहोयादाने आपल्याबरोबर घेतले. मग त्याने राजाला परमेश्वराच्या मंदिराबाहेर काढले. तिथून वरच्या वेशीतून ते राजमहालात पोचले. तेथे त्यांनी राजाला सिंहासनावर बसवले.
21 ಅತಲ್ಯಳನ್ನು ಖಡ್ಗದಿಂದ ಕೊಂದುಹಾಕಿದ್ದರಿಂದ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
२१अथल्याचा तलवारीने वध झाला त्यानंतर यहूदातील लोकांमध्ये आनंदी आनंद पसरला आणि यरूशलेम नगर शांत झाले.

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 23 >