< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 28 >
1 ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಆದರೆ ಅವನು ತನ್ನ ತಂದೆಯಾದ ದಾವೀದನ ಹಾಗೆ ನಡೆಯದೆ, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಲಿಲ್ಲ.
၁အာခတ်သည်အသက်နှစ်ဆယ်၌နန်းတက်၍ ယေရုရှလင်မြို့တွင်တစ်ဆယ့်ခြောက်နှစ်နန်း စံရလေသည်။ သူသည်ဘေးတော်ဒါဝိဒ်မင်း ၏ကောင်းသောစံနမူနာကိုမလိုက်ဘဲ ထာဝရဘုရားမနှစ်သက်သောအမှုတို့ ကိုပြု၍၊-
2 ಆಹಾಜನು ಇಸ್ರಾಯೇಲಿನ ಅರಸರ ಮಾರ್ಗದಲ್ಲಿ ನಡೆದು, ಆರಾಧಿಸುವುದಕ್ಕಾಗಿ ಬಾಳನ ಎರಕ ಹೊಯ್ದ ವಿಗ್ರಹಗಳನ್ನು ಮಾಡಿಸಿದನು.
၂ဣသရေလဘုရင်တို့၏လမ်းစဉ်ကိုလိုက်၏။ သူသည်ဗာလဘုရား၏ရုပ်တုများကို သွန်းလုပ်စေ၍၊-
3 ಇದಲ್ಲದೆ ಆಹಾಜನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಧೂಪವನ್ನರ್ಪಿಸಿ, ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.
၃ဟိန္နုံချိုင့်ဝှမ်းတွင်နံ့သာပေါင်းကိုမီးရှို့ ပူဇော်၏။ သူသည်ဣသရေလအမျိုးသား တို့ချီတက်လာချိန်၌ ထာဝရဘုရားနှင် ထုတ်တော်မူသောလူမျိုးတို့၏စက်ဆုတ် ရွံရှာဖွယ်ကောင်းသည့်ဋ္ဌလေ့ထုံးစံတို့ကို အတုခိုး၍ မိမိ၏သားတော်များကိုပင် မီးရှို့၍ပူဇော်သကာအဖြစ်ဖြင့်ရုပ်တု တို့အားပူဇော်လေသည်။-
4 ಇದಲ್ಲದೆ ಅವನು ಪೂಜಾಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಎಲ್ಲಾ ಹಸಿರಾದ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.
၄ရုပ်တုကိုးကွယ်ရာဌာနများ၌လည်းကောင်း၊ တောင်ကုန်းများပေါ်၌လည်းကောင်း၊ အရိပ် ကောင်းသည့်သစ်ပင်ရှိသမျှတို့အောက်၌ လည်းကောင်းအာခတ်သည်ယဇ်များကို ပူဇော်၍နံ့သာပေါင်းကိုမီးရှို့၏။
5 ಆದ್ದರಿಂದ ಆಹಾಜನ ದೇವರಾದ ಯೆಹೋವ ದೇವರು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದರು. ಅರಾಮ್ಯರು ಅವನನ್ನು ಹೊಡೆದು, ಅವರಲ್ಲಿ ಅನೇಕರನ್ನು ಸೆರೆಹಿಡಿದು, ದಮಸ್ಕಕ್ಕೆ ತೆಗೆದುಕೊಂಡು ಹೋದರು. ಇದಲ್ಲದೆ ಆಹಾಜನು ಇಸ್ರಾಯೇಲಿನ ಅರಸನ ಕೈವಶವಾಗಿ, ಅವನಿಂದಲೂ ಕಠಿಣವಾಗಿ ಸೋತು ಹೋದನು.
၅အာခတ်သည်အပြစ်ပြုသဖြင့်ထာဝရဘုရား သည် ရှုရိဘုရင်အားသူ့ကိုနှိမ်နင်း၍ ယုဒပြည် သူအမြောက်အမြားကိုသုံ့ပန်းများအဖြစ် ဖြင့် ဒမာသက်မြို့သို့သိမ်းသွားခွင့်ပေးတော် မူ၏။ ထာဝရဘုရားသည်ရေမလိ၏သား၊ ဣသရေလဘုရင်ပေကာအားအာခတ်ကို နှိမ်နင်း၍တစ်နေ့ချင်းတွင် ယုဒတပ်သား တစ်သိန်းနှစ်သောင်းကိုလည်းသတ်ဖြတ်ခွင့် ပေးတော်မူ၏။ သူတို့သည်မိမိတို့ဘိုးဘေး များ၏ဘုရားသခင်ထာဝရဘုရား အားစွန့်ပစ်ကြသဖြင့် ကိုယ်တော်သည် ဤသို့ဖြစ်ပျက်စေတော်မူခြင်းဖြစ် သတည်း။-
6 ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ರೆಮಲ್ಯನ ಮಗ ಪೆಕಹನು ಒಂದೇ ದಿವಸದೊಳಗೆ ಅವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.
၆
7 ಇದಲ್ಲದೆ ಎಫ್ರಾಯೀಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ಮಾಸೇಯನನ್ನೂ, ಅರಮನೆಯ ನಾಯಕನಾದ ಅಜ್ರೀಕಾಮನನ್ನೂ, ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು.
၇ဇိခရိဆိုသူဣသရေလတပ်သားတစ်ယောက် သည် အာခတ်၏သားတော်မာသေယ၊ နန်းတော် အုပ်ချုပ်ရေးမှူးအာဇရိကံနှင့်ဘုရင့်အမတ် ချုပ်ဧလကာနတို့ကိုလုပ်ကြံသတ်ဖြတ် လိုက်လေသည်။-
8 ಇಸ್ರಾಯೇಲರು ತಮ್ಮ ಸಹೋದರರಲ್ಲಿ ಎರಡು ಲಕ್ಷಮಂದಿ ಸ್ತ್ರೀಯರನ್ನೂ, ಪುತ್ರಪುತ್ರಿಯರನ್ನೂ ಸೆರೆಯಾಗಿ ತೆಗೆದುಕೊಂಡು ಹೋದರು. ಅವರಿಂದ ಬಹು ಕೊಳ್ಳೆಯನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಬಂದರು.
၈ဣသရေလတပ်မတော်သည်မိမိတို့၏ဆွေ မျိုးသားချင်းဖြစ်ကြသောအမျိုးသားတို့ အနက် ယုဒအမျိုးသမီးနှင့်ကလေးနှစ်သိန်း ကိုဖမ်းဆီး၍လက်ရပစ္စည်းအမြောက်အမြား နှင့်တကွရှမာရိမြို့သို့သိမ်းသွားကြ၏။
9 ಯೆಹೋವ ದೇವರ ಪ್ರವಾದಿ ಒಬ್ಬನು ಅಲ್ಲಿ ಇದ್ದನು. ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯಕ್ಕೆದುರಾಗಿ ಹೊರಟುಹೋಗಿ ಅವರಿಗೆ, “ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ಯೆಹೂದದ ಮೇಲೆ ಕೋಪಗೊಂಡದ್ದರಿಂದ, ದೇವರು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿದ್ದಾರೆ. ನೀವು ಆಕಾಶಕ್ಕೆ ಮುಟ್ಟುವ ಉಗ್ರತೆಯಿಂದ ಅವರನ್ನು ಕೊಂದುಹಾಕಿದ್ದೀರಿ.
၉သြဒက်အမည်ရှိထာဝရဘုရား၏ပရော ဖက်သည် ရှမာရိမြို့တွင်နေထိုင်၏။ သူသည် တိုက်ပွဲမှပြန်လာသောဣသရေလတပ်မ တော်ကိုမြို့အဝင်ဝမှဆီးကြိုပြီးလျှင်``သင် တို့ဘိုးဘေးများ၏ဘုရားသခင်ထာဝရ ဘုရားသည်ယုဒပြည်သူတို့ကိုအမျက် ထွက်တော်မူသဖြင့် သင်တို့အားသူတို့ကို နှိမ်နင်းခွင့်ပေးတော်မူ၏။ သို့ရာတွင်သင် တို့သည်မိမိတို့အမျက်ဒေါသကိုမချုပ် တည်းဘဲသုတ်သင်သတ်ဖြတ်မှုကိုပြုခဲ့ ကြ၏။-
10 ಈಗ ನಿಮಗೆ ದಾಸರೂ, ದಾಸಿಯರೂ ಆಗಿರುವ ಹಾಗೆ ಯೆಹೂದದ ಮತ್ತು ಯೆರೂಸಲೇಮಿನ ಮಕ್ಕಳನ್ನು ನಿಮ್ಮ ವಶಮಾಡಬೇಕೆಂದು ಇದ್ದೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧಗಳು ಇಲ್ಲವೋ?
၁၀ယခုအခါ၌လည်းယေရုရှလင်မြို့သူမြို့ သားများနှင့်ယုဒပြည်သူတို့အားကျွန်ခံ စေရန် သင်တို့အကြံရှိကြပါသည်တကား။ သင်တို့သည်လည်းသင်တို့ဘုရားသခင် ထာဝရဘုရားကိုပြစ်မှားသူများဖြစ် သည်ကိုမသိကြပါသလော။-
11 ಆದ್ದರಿಂದ ನೀವು ನನ್ನ ಮಾತು ಕೇಳಿ ನಿಮ್ಮ ನಿಮ್ಮ ಸಹೋದರರಲ್ಲಿ ನೀವು ಸೆರೆಯಾಗಿ ತೆಗೆದುಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಏಕೆಂದರೆ ಯೆಹೋವ ದೇವರ ಕೋಪಾಗ್ನಿಯು ನಿಮ್ಮ ಮೇಲೆ ಇರುವುದು,” ಎಂದನು.
၁၁ငါ့စကားကိုနားထောင်ကြလော့။ ဤသုံ့ပန်း များသည် ငါတို့၏ညီအစ်ကိုများဖြစ်ပေ သည်။ သူတို့ကိုပြန်၍လွှတ်လိုက်ကြလော့။ သို့မဟုတ်ပါမူဘုရားသခင်သည်အမျက် တော်ထွက်၍ သင်တို့အားဒဏ်ခတ်တော်မူ လိမ့်မည်'' ဟုပြော၏။
12 ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗ ಅಜರ್ಯನೂ, ಮೆಷಿಲ್ಲೇಮೋತನ ಮಗ ಬೆರೆಕ್ಯನೂ, ಶಲ್ಲೂಮನ ಮಗ ಹಿಜ್ಕೀಯನೂ, ಹದ್ಲೈಯನ ಮಗ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧವಾಗಿ ಎದ್ದು
၁၂ထိုအခါမြောက်ပိုင်းနိုင်ငံအကြီးအကဲ လေးဦးဖြစ်ကြသော ယောဟနန်၏သား အာဇရိ၊ မေရှိလေမုတ်၏သားဗေရခိ၊ ရှလ္လုံ ၏သားဟေဇကိနှင့် ဟာဒလဲ၏သား အာမသာတို့သည်လည်း တပ်မတော်၏ အပြုအမူကိုကန့်ကွက်ကြလေသည်။-
13 ಅವರಿಗೆ, “ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ. ಏಕೆಂದರೆ ನಾವು ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದ್ದೇವೆ. ನೀವು ನಮ್ಮ ಪಾಪಗಳನ್ನೂ, ನಮ್ಮ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾಧವು ದೊಡ್ಡದಾಗಿದೆ. ಇಸ್ರಾಯೇಲಿನ ಮೇಲೆ ಯೆಹೋವ ದೇವರ ಉಗ್ರಕೋಪವು ಉಂಟಾಯಿತು,” ಎಂದರು.
၁၃သူတို့က``သင်တို့၏သုံ့ပန်းများကိုဤမြို့ ထဲသို့မခေါ်ခဲ့ကြနှင့်။ ငါတို့အားအမျက် တော်ထွက်၍ဒဏ်ခတ်စေလောက်အောင်ပင် ထာဝရဘုရားကိုငါတို့ပြစ်မှားခဲ့လေပြီ။ ယခုသင်တို့သည်ငါတို့အပြစ်ကိုပိုမို ကြီးလာအောင်ပြုလိုကြသည်တကား'' ဟုဆိုကြ၏။-
14 ಆಗ ಸೈನ್ಯದವರು ಸೆರೆಯವರನ್ನೂ, ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ, ಸಮಸ್ತ ಕೂಟದ ಮುಂದೆಯೂ ಬಿಟ್ಟುಬಿಟ್ಟರು.
၁၄သို့ဖြစ်၍တပ်မတော်သားတို့သည်ပြည် သူများနှင့် ခေါင်းဆောင်များလက်သို့သုံ့ပန်း များနှင့်လက်ရပစ္စည်းများကိုပေးအပ် လိုက်ကြ၏။-
15 ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದವರು ಎದ್ದು ಸೆರೆಯವರನ್ನು ತೆಗೆದುಕೊಂಡು, ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ, ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕೊಟ್ಟು, ಅವರ ತಲೆಗಳಿಗೆ ಎಣ್ಣೆಯನ್ನು ಹಚ್ಚಿ, ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ, ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ತೆಗೆದುಕೊಂಡು ಬಂದರು. ಆಗ ಅವರು ಸಮಾರ್ಯಕ್ಕೆ ಹಿಂದಿರುಗಿದರು.
၁၅ပြည်သူတို့သည်သုံ့ပန်းများအားလက်ရ ပစ္စည်းများထဲက အဝတ်အစားဝေငှပေးရေး အတွက်အကြီးအကဲလေးဦးကိုခန့်ကြ ၏။ အကြီးအကဲတို့သည်သုံ့ပန်းများဝတ် ဆင်ရန်အဝတ်အစားများ၊ ဖိနပ်များနှင့် စားရန်အစားအစာအလုံအလောက်ကို ပေး၍ သူတို့၏ဒဏ်ရာများကိုသံလွင်ဆီ နှင့်လိမ်းပေးကြ၏။ အားနည်းသူတို့ကို မြည်းစီးစေလျက် ယုဒနယ်မြေရှိစွန် ပလွံမြို့ခေါ်ယေရိခေါမြို့သို့အရောက် ပို့ကြ၏။ ထိုနောက်ဣသရေလအမျိုး သားတို့သည်ရှမာရိမြို့သို့ပြန်ကြ၏။
16 ಅದೇ ಕಾಲದಲ್ಲಿ ಅರಸನಾದ ಆಹಾಜನು ಅಸ್ಸೀರಿಯದ ಅರಸರ ಬಳಿಗೆ ಕಳುಹಿಸಿ ಸಹಾಯ ಬೇಡಿಕೊಂಡನು.
၁၆ဧဒုံအမျိုးသားတို့သည်ယုဒပြည်ကိုတစ်ဖန် လာရောက်တိုက်ခိုက်ကာ သုံ့ပန်းအမြောက်အမြား ကိုဖမ်းဆီးခေါ်ဆောင်သွားသဖြင့် အာခတ်မင်း သည်အာရှုရိဘုရင်ထံအကူအညီတောင်း ခံလေသည်။-
17 ಏಕೆಂದರೆ ಎದೋಮ್ಯರು ತಿರುಗಿಬಂದು ಯೆಹೂದದವರನ್ನು ಸಂಹರಿಸಿ, ಕೆಲವರನ್ನು ಸೆರೆಯಾಗಿ ತೆಗೆದುಕೊಂಡು ಹೋದರು.
၁၇
18 ಇದಲ್ಲದೆ ಫಿಲಿಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ, ಯೆಹೂದದ ದಕ್ಷಿಣ ಪ್ರಾಂತದಲ್ಲಿಯೂ ನುಗ್ಗಿ, ಬೇತ್ ಷೆಮೆಷ್, ಅಯ್ಯಾಲೋನ್, ಗೆದೇರೋತ್, ಸೋಕೋ ಅದರ ಗ್ರಾಮಗಳನ್ನೂ, ತಿಮ್ನಾ ಅದರ ಗ್ರಾಮಗಳನ್ನೂ, ಗಿಮ್ಜೋ ಅದರ ಗ್ರಾಮಗಳನ್ನೂ ತೆಗೆದುಕೊಂಡು ಅಲ್ಲಿ ವಾಸವಾಗಿದ್ದರು.
၁၈ထိုအချိန်ကာလ၌ပင်ဖိလိတ္တိအမျိုးသား တို့သည် ယုဒပြည်တောင်ပိုင်းနှင့်အနောက် ဘက်ရှိတောင်ခြေရင်းမြို့များကိုတိုက်ခိုက် ကြ၏။ သူတို့သည်ဗက်ရှေမက်မြို့၊ အာဇလုန် မြို့၊ ဂေဒရုတ်မြို့၊ ရှောခေါမြို့၊ တိမနာမြို့၊ ဂိမဇောမြို့များနှင့်ကျေးရွာများကိုသိမ်း ယူပြီးလျှင် ထိုမြို့ရွာတို့တွင်အတည်တကျ နေထိုင်ကြလေသည်။-
19 ಇಸ್ರಾಯೇಲಿನ ಅರಸನಾದ ಆಹಾಜನ ನಿಮಿತ್ತ ಯೆಹೋವ ದೇವರು ಯೆಹೂದ್ಯ ಪ್ರಾಂತ್ಯವನ್ನು ತಗ್ಗಿಸಿದರು. ಏಕೆಂದರೆ ಅವನು ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ, ಯೆಹೋವ ದೇವರಿಗೆ ಮಹಾ ದ್ರೋಹ ಮಾಡಿದನು. ಯೆಹೋವ ದೇವರಿಗೆ ಅತ್ಯಂತ ಅಪನಂಬಿಗಸ್ತನಾಗಿದ್ದನು.
၁၉ယုဒဘုရင်အာခတ်သည်ပြည်သူတို့အား အခွင့်အရေးများဆုံးရှုံးစေလျက် ထာဝရ ဘုရားကိုသစ္စာဖောက်သဖြင့်ထာဝရဘုရား သည် ယုဒပြည်ကိုဒုက္ခရောက်စေတော်မူ၏။-
20 ಆಗ ಅಸ್ಸೀರಿಯದ ಅರಸ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು, ಅವನಿಗೆ ನೆರವಾಗುವುದಕ್ಕೆ ಬದಲಾಗಿ ಬಾಧೆಪಡಿಸಿದನು.
၂၀သို့ဖြစ်၍အာရှုရိဧကရဇ်မင်းတိဂလတ် ပိလေသာသည် အာခတ်အားအကူအညီ ပေးမည့်အစားဆန့်ကျင်ဘက်ပြု၍ဒုက္ခ ရောက်စေ၏။-
21 ಆಹಾಜನು ಯೆಹೋವ ದೇವರ ಆಲಯದಿಂದಲೂ, ಅರಮನೆಯಿಂದಲೂ, ಪ್ರಧಾನರಿಂದಲೂ ಆಸ್ತಿಯ ಒಂದು ಪಾಲನ್ನು ತೆಗೆದುಕೊಂಡು, ಅಸ್ಸೀರಿಯದ ಅರಸನಿಗೆ ಕಾಣಿಕೆಯಾಗಿ ಕೊಟ್ಟನು, ಆದರೂ ಅವನು ಆಹಾಜನಿಗೆ ಸಹಾಯ ಮಾಡಲಿಲ್ಲ.
၂၁အာခတ်သည်ဗိမာန်တော်၊ နန်းတော်နှင့်ပြည် သူခေါင်းဆောင်များ၏အိမ်တို့မှရွှေ၊ ငွေ၊ ဘဏ္ဍာရှိသမျှကိုယူ၍အာရှုရိဘုရင် အားပေးသော်လည်းအကျိုးမရှိချေ။
22 ಇದಲ್ಲದೆ ಈ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಇನ್ನೂ ಅಧಿಕವಾಗಿ ಯೆಹೋವ ದೇವರಿಗೆ ಅಪನಂಬಿಗಸ್ತನಾದನು.
၂၂ဤသို့အာခတ်မင်းသည်အခြေအနေ အဆိုးရွားဆုံးအချိန်၌ ထာဝရဘုရား အားယခင်ကထက်ပို၍ပြစ်မှားလေသည်။-
23 ಕೊನೆಗೆ ಆಹಾಜನು, “ಅರಾಮಿನ ಅರಸರ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ, ಅವು ನನಗೆ ಸಹ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ,” ಎಂದುಕೊಂಡು ತನ್ನನ್ನು ಸೋಲಿಸಿದ ದಮಸ್ಕದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಆ ದೇವರುಗಳು ಅವನನ್ನೂ, ಸಮಸ್ತ ಇಸ್ರಾಯೇಲರನ್ನೂ ಬೀಳುವಂತೆ ಮಾಡಿದವು.
၂၃သူသည်မိမိအားနှိမ်နင်းခဲ့သည့်အာရှုရိ အမျိုးသားတို့၏ဘုရားများကိုယဇ်ပူဇော် လေ၏။ သူက``အာရှုရိဘုရားတို့သည် အာရှုရိဘုရင်များကိုကူမကြ၏။ သို့ ဖြစ်၍သူတို့အားငါယဇ်ပူဇော်ပါက သူတို့သည် ငါ့ကိုလည်းကူမကောင်းကူမ ကြလိမ့်မည်'' ဟုဆို၏။ သို့ရာတွင်ထိုအမှု တို့သည် သူနှင့်သူ၏ပြည်သူတို့အပေါ် သို့ဘေးအန္တရာယ်ဆိုက်ရောက်စေလေသည်။-
24 ಇದಲ್ಲದೆ ಆಹಾಜನು ದೇವರ ಮನೆಯ ಸಲಕರಣೆಗಳನ್ನು ಕೂಡಿಸಿ, ದೇವರ ಆಲಯದ ಸಾಮಗ್ರಿಗಳನ್ನು ಚೂರುಚೂರು ಮಾಡಿ ಕತ್ತರಿಸಿ, ಯೆಹೋವ ದೇವರ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು, ಯೆರೂಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
၂၄ထို့အပြင်အာခတ်သည်ဗိမာန်တော်အသုံး အဆောင်ရှိသမျှကိုယူ၍ အပိုင်းပိုင်းချိုးဖဲ့ ၏။ ဗိမာန်တော်တံခါးတို့ကိုလည်းပိတ်ထား လိုက်ပြီးလျှင် ယေရုရှလင်မြို့၌အနှံ့ အပြားယဇ်ပလ္လင်များကိုတည်လေသည်။-
25 ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪ ಸುಡುವುದಕ್ಕೆ ಎತ್ತರ ಸ್ಥಳಗಳನ್ನು ಕಟ್ಟಿಸಿ, ತನ್ನ ಪಿತೃಗಳ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದನು.
၂၅သူသည်ယုဒပြည်မြို့ကြီးမြို့ငယ်ဟူသမျှ တွင် လူမျိုးခြားသားများ၏ဘုရားများအား နံ့သာပေါင်းကိုမီးရှို့ပူဇော်ရန် ရုပ်တုကိုးကွယ် ရာဌာနများကိုလည်းတည်ဆောက်၏။ ဤနည်း အားဖြင့်မိမိအပေါ်သို့ ဘိုးဘေးများ၏ ဘုရားသခင်ထာဝရဘုရား၏အမျက်တော် ကိုသက်ရောက်စေလေသည်။
26 ಅವನ ಆಳ್ವಿಕೆಯಲ್ಲಿಯ ಇತರ ಕ್ರಿಯೆಗಳೂ, ಅವನ ಸಕಲ ಮಾರ್ಗಗಳೂ, ಮೊದಲನೆಯವುಗಳೂ, ಕಡೆಯವುಗಳೂ ಯೆಹೂದದ ಮತ್ತು ಇಸ್ರಾಯೇಲರ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
၂၆နန်းသက်အစမှအဆုံးအာခတ်ပြုသော အခြားအမှုအရာတို့ကို ယုဒရာဇဝင် နှင့်ဣသရေလရာဇဝင်တွင်ရေးထား သတည်း။-
27 ಆಹಾಜನು ಮೃತನಾಗಿ ತನ್ನ ಪಿತೃಗಳ ಬಳಿಯಲ್ಲಿ ಸೇರಿದನು. ಆದರೆ ಅವನನ್ನು ಇಸ್ರಾಯೇಲಿನ ಅರಸರ ಸಮಾಧಿಯ ಸ್ಥಳದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.
၂၇အာခတ်ကွယ်လွန်သောအခါသူ၏အလောင်း ကို ယေရုရှလင်မြို့တွင်သင်္ဂြိုဟ်ကြသော်လည်း ဘုရင်များ၏သင်္ချိုင်းတော်တွင်မသင်္ဂြိုဟ်ကြ။ သူ၏သားတော်ဟေဇကိသည်ခမည်းတော် ၏အရိုက်အရာကိုဆက်ခံ၍နန်းတက် လေသည်။