< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 31 >

1 ಇದಾದನಂತರ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲರು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ, ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದು, ಸಮಸ್ತ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್, ಮನಸ್ಸೆ ದೇಶಗಳಲ್ಲಿ ಯಾವುದನ್ನೂ ಉಳಿಸಲಿಲ್ಲ, ಉನ್ನತ ಪೂಜಾಸ್ಥಳಗಳನ್ನು ಮತ್ತು ಬಲಿಪೀಠಗಳನ್ನು ಕೆಡವಿಹಾಕಿದರು. ಆಗ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಆಸ್ತಿಪಾಸ್ತಿಯಿರುವ ಪಟ್ಟಣಗಳಿಗೆ ತಿರುಗಿ ಹೋದರು.
अशा तऱ्हेने वल्हांडणाच्या उत्सवाची समाप्ती झाली. यरूशलेमेमध्ये त्यासाठी जमलेले इस्राएल लोक यहूदात आपापल्या गावी परतले. तिथे गेल्यावर त्यांनी दैवतांच्या दगडी मूर्ती फोडून टाकल्या. या परकीय दैवतांची पूजा होत असे. अशेराच्या मुर्तीही त्यांनी उखडून टाकल्या. यहूदा आणि बन्यामीन प्रांतातील सर्व उंचस्थाने आणि वेद्या त्यांनी उद्ध्वस्त केल्या. एफ्राइम आणि मनश्शे या प्रदेशातील लोकांनीही तेच केले. इतर देवतांच्या प्रार्थनेसाठी बनवण्यात आलेल्या सगळ्या गोष्टींचा त्यांनी नाश केला. व तेव्हाच सर्व इस्राएल लोक घरोघरी गेले.
2 ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜಕರ, ಲೇವಿಯರ ಸರತಿಗಳನ್ನು ನೇಮಿಸಿದನು. ದಹನಬಲಿಗಳನ್ನೂ ಮತ್ತು ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕೂ, ಸೇವಿಸುವುದಕ್ಕೂ ಯೆಹೋವ ದೇವರ ಪಾಳೆಯದ ಬಾಗಿಲುಗಳಲ್ಲಿ ಸ್ತೋತ್ರ ಮಾಡುವುದಕ್ಕೂ, ಕೊಂಡಾಡುವುದಕ್ಕೂ ಯಾಜಕರನ್ನೂ, ಲೇವಿಯರನ್ನೂ ನೇಮಿಸಿದನು.
लेव्याची आणि याजकांची अनेक गटामध्ये विभागणी केलेली होती. त्यापैकी प्रत्येक गटाला आपआपले विशेष कामकाज नेमून दिलेले होते. राजा हिज्कीयाने त्या सर्वांना आपला कारभार हाती घ्यायला सांगितले. होमार्पणे व शांत्यर्पणे वाहणे हे लेवीचे व याजकांचे नेमलेले काम होते. तसेच मंदिराच्या प्रवेशद्वाराजवळ परमेश्वराची स्तुतिस्तोत्रे म्हणणे व परमेश्वराच्या मंदिरात सेवा करणे हे ही त्यांचे काम होते.
3 ಅವನು ಯೆಹೋವ ದೇವರ ನಿಯಮದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಆಸ್ತಿಯಿಂದಲೇ ಅವನ ಭಾಗವನ್ನು ನೇಮಿಸಿದನು.
यज्ञात अर्पण करण्यासाठी म्हणून हिज्कीयाने आपल्या पशुधनातील काही पशू दिले. सकाळ संध्याकाळच्या होमार्पणा खातर त्यांचा उपयोग करण्यात आला. शब्बाथ, चंद्रदर्शने व इतर उत्सव कार्ये या दिवशीही होमार्पणे होत असत. हे परमेश्वराच्या नियमशास्त्रात लिहीले आहे.
4 ಯಾಜಕರೂ ಲೇವಿಯರೂ ಯೆಹೋವ ದೇವರ ನಿಯಮದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ತಕ್ಕ ಭಾಗವನ್ನು ಕೊಡಬೇಕೆಂದು ಯೆರೂಸಲೇಮಿನಲ್ಲಿ ಜನರಿಗೆ ಅವನು ಆಜ್ಞಾಪಿಸಿದನು.
आपल्या उत्पन्नातील ठराविक हिस्सा लोकांस लेवी व याजक यांना द्यावा लागत असे, तो त्यांनी द्यावा अशी यरूशलेमेतील लोकांसाठी आज्ञा राजा हिज्कीयाने केली. त्यामुळे नियतकार्य निर्वेधपणे परमेश्वराच्या नियमशास्त्रानुसार करणे याजकांना व लेवींना शक्य झाले.
5 ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ, ಇವುಗಳ ಮೊದಲನೆಯ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳವಾಗಿ ತಂದರು.
ही आज्ञा सर्व प्रजेच्या कानी गेली. त्याबरोबर इस्राएल लोकांनी आपले धान्याचे पीक, द्राक्ष, तेल, मध आणि इतर बागायती उत्पन्न या सगळ्याचा एक दशांश भाग आणून दिला.
6 ಇದಲ್ಲದೆ ಯೆಹೂದ ಪಟ್ಟಣಗಳಲ್ಲಿ ನಿವಾಸವಾಗಿರುವ ಇಸ್ರಾಯೇಲರು ಯೆಹೂದ್ಯರು ದನಗಳಲ್ಲಿಯೂ ಕುರಿಗಳಲ್ಲಿಯೂ ದಶಮಾಂಶ ತಂದರು. ತಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಮಾಡಿದ ಪರಿಶುದ್ಧ ವಸ್ತುಗಳಲ್ಲಿ ದಶಮಾಂಶದ ಪಾಲು ತಂದು, ರಾಶಿರಾಶಿಯಾಗಿ ಇಟ್ಟರು.
यहूदातील नगरवासी इस्राएली व यहूदी लोकांनीही आपली गुरे आणि शेळ्यामेंढ्या यांचा दहावा हिस्सा जमा केला. परमेश्वराकरिता आखून दिलेल्या जागेत धान्याच्याही राशी त्यांनी आणून ओतल्या. त्यांनी या सर्व वस्तूंचे ढीग रचले.
7 ಮೂರನೆಯ ತಿಂಗಳಲ್ಲಿ ರಾಶಿ ಮಾಡುವುದನ್ನು ಆರಂಭಿಸಿ, ಏಳನೆಯ ತಿಂಗಳಲ್ಲಿ ತೀರಿಸಿದರು.
लोकांनी या सर्व वस्तू आणून टाकायला तिसऱ्या महिन्यात सुरुवात केली आणि सातव्या महिन्यात हे काम संपले.
8 ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ, ಅವರು ಯೆಹೋವ ದೇವರನ್ನೂ ಸ್ತುತಿಸಿದರು, ಅವರ ಜನರಾದ ಇಸ್ರಾಯೇಲರನ್ನೂ ಆಶೀರ್ವದಿಸಿದರು.
राजा हिज्कीया आणि इतर सरदार यांनी जेव्हा या राशी पाहिल्या तेव्हा त्यांनी परमेश्वरास आणि इस्राएलाच्या प्रजेला धन्यवाद दिले.
9 ಆಗ ಹಿಜ್ಕೀಯನು ರಾಶಿಗಳನ್ನು ಕುರಿತು ಯಾಜಕರನ್ನೂ, ಲೇವಿಯರನ್ನೂ ವಿಚಾರಿಸಿದನು.
राजाने मग याजकांना आणि लेवींना या गोळा झालेल्या वस्तूंविषयी विचारले.
10 ಚಾದೋಕ್ ಸಂತಾನದ ಮುಖ್ಯಯಾಜಕ ಅಜರ್ಯನು, “ಜನರು ದೇವರಾದ ಯೆಹೋವ ದೇವರಿಗೆ ಕಾಣಿಕೆಯಾಗಿ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಯೆಹೋವ ದೇವರು ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.
१०तेव्हा सादोकाचा घराण्यातला मुख्य याजक अजऱ्या हिज्कीयाला म्हणाला की, “लोक परमेश्वराच्या मंदिरात धान्य व या सगळ्या गोष्टी अर्पण करायला लागल्यापासून आम्हास पोटभर खायला मिळू लागले आहे. अगदी तृप्त होईपर्यंत खाऊनही एवढे उरले आहे. परमेश्वराने आपल्या लोकांस आशीर्वाद दिला आहे, म्हणून तर इतके शिल्लक राहीले आहे.”
11 ಬಳಿಕ ಹಿಜ್ಕೀಯನು ಯೆಹೋವ ದೇವರ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು.
११हिज्कीयाने मग याजकांना परमेश्वराच्या मंदिरात कोठारे तयार ठेवायला सांगितली. त्याची आज्ञा अंमलात आणली गेली.
12 ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನು ತಮ್ಮ ಆದಾಯದ ದಶಮಾಂಶವನ್ನು ಹಾಗು ದೇವರಿಗೆ ಮುಡುಪಾಗಿ ಇಟ್ಟಿದ್ದನ್ನು ನಿರ್ವಂಚನೆಯಿಂದ ತಂದು, ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಯಲ್ಲಿ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು. ಅವನ ತಮ್ಮ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು.
१२याजकांनी परमेश्वरासाठी अर्पण केलेल्या वस्तू धान्याचा अथवा पशूंचा दहावा हिस्सा, इतर काही वाहिलेल्या गोष्टी आत आणल्या आणि मंदिरातील कोठारात जमा केल्या. कोनन्या लेवी हा या भांडारावरचा प्रमुख अधिकारी होता. शिमी त्याच्या हाताखाली होता. शिमी कोनन्याचा भाऊ होता.
13 ಅರಸನಾದ ಹಿಜ್ಕೀಯನು ನೇಮಿಸಿದ ಪ್ರಕಾರ, ಯೆಹೀಯೇಲ್, ಅಜಜ್ಯ, ನಹತ್, ಅಸಾಯೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ, ಇವರು ಕೋನನ್ಯನ ಸಹೋದರನಾದ ಶಿಮ್ಮಿಯ ಕೈಕೆಳಗೆ ಆಡಳಿತಗಾರರಾಗಿದ್ದರು. ಅಜರ್ಯನು ದೇವರ ಆಲಯದ ಅಧಿಪತಿಯಾಗಿದ್ದನು.
१३यहीएल, अजज्या, नहथ, असाएल, यरीमोथ, योजाबाद, अलीएल, इस्मख्या, महथ व बनाया यांच्यावर कोनन्या आणि शिमी या दोन भावांची देखरेख होती. राजा हिज्कीया आणि देवाच्या मंदिराचा प्रमुख अधिकारी अजऱ्या यांनी या मनुष्यांची निवड केली.
14 ಲೇವಿಯನಾಗಿರುವ ಇಮ್ನನ ಮಗ ಕೋರೆಯು ಎಂಬ ಪೂರ್ವದಿಕ್ಕಿನಲ್ಲಿರುವ ದ್ವಾರಪಾಲಕನು ಯೆಹೋವ ದೇವರ ಕಾಣಿಕೆಗಳನ್ನೂ, ಮಹಾಪರಿಶುದ್ಧವಾದವುಗಳನ್ನೂ ಪಾಲು ಹಂಚುವುದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಕಾಣಿಕೆಗಳ ಮೇಲ್ವಿಚಾರಕನಾಗಿದ್ದನು.
१४लोकांनी देवाला स्वखुशीने अर्पण केलेल्या सगळ्या गोष्टींवर कोरेची देखरेख होती. परमेश्वरास वाहिलेल्या या गोष्टींचे वाटप करण्याची जबाबदारी त्याच्यावर होती. तसेच परमेश्वरास आलेल्या पवित्र भेटवस्तूंची वाटणी करण्याचेही काम त्याचेच होते. कोरे पूर्वेकडच्या प्रवेशद्वाराचा द्वारपाल होता. त्याच्या पित्याचे नाव इम्नाना लेवी.
15 ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ನಂಬಿಗಸ್ತಿಕೆಯಿಂದ ಸರತಿ ಸರತಿಯಾಗಿ ಹಿರಿಯರು ಕಿರಿಯರು ಎಂಬ ವ್ಯತ್ಯಾಸಮಾಡದೆ ಪಾಲು ಹಂಚುವುದಕ್ಕೆ ಏದೆನನೂ, ಮಿನ್ಯಾಮೀನನೂ, ಯೇಷೂವನ ಶೆಮಾಯನೂ, ಅಮರ್ಯನೂ, ಶೆಕನ್ಯನೂ ಇದ್ದರು.
१५एदेन, मिन्यामीन, येशूवा, शमाया, अमऱ्या व शखन्या हे कोरेचे मदतनीस होते. याजक राहत त्या नगरात ते निष्ठेने आपली सेवा रुजू करत. याजकांच्या प्रत्येक गटांमधील आपापल्या भाऊबंदांना त्यांच्या वाटणीचा हिस्सा देत. हे वाटप करताना ते लहान मोठा अशा सर्वांनाच सारखाच भाग देत असत.
16 ವಂಶಾವಳಿಯ ದಾಖಲೆಯ ಪ್ರಕಾರ ಮೂರು ವರ್ಷ ಪ್ರಾಯ ಮೊದಲ್ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವುದಕ್ಕೂ,
१६लेवी घराण्याच्या इतिहासात ज्यांची नावे नोंदलेली होती असे, तीन वर्षे किंवा त्यापेक्षा जास्त वयाचे जे लेवी पुरुष परमेश्वरच्या मंदिरात नेमून दिलेल्या दैनंदिन कामासाठी जात त्यांना त्यांची वाटणी हे मदतनीस देत. अशा प्रकारे लेवीच्या प्रत्येक गटाला काम नेमून दिलेले होते.
17 ಹಾಗೆಯೇ ಇಪ್ಪತ್ತು ವರ್ಷ ಪ್ರಾಯ ಮೊದಲ್ಗೊಂಡು ವಂಶಾವಳಿಯ ದಾಖಲೆಯ ಪ್ರಕಾರ ಅವರವರ ಕೆಲಸಗಳಲ್ಲಿಯೂ, ಅವರವರ ಸರತಿಗಳಲ್ಲಿಯೂ ಇರುವ ಯಾಜಕರಿಗೂ, ಲೇವಿಯರಿಗೂ ಅವರ ಸಮಸ್ತ ಕೂಟದಲ್ಲಿ ವಂಶಾವಳಿಯ ದಾಖಲೆಯ ಪ್ರಕಾರ
१७याजकांना त्यांच्या वाटणीचा हिस्सा मिळत असे. ज्या लेवीची आपापल्या पितृकुळाप्रमाणे नोंद झाली होती त्यांना आणि किमान वीस वर्षे किंवा त्यापेक्षा वयाने मोठ्या असलेल्या लेवींना त्यांची वाटणी मिळत असे. त्यांच्यावरील जबाबदारीचे स्वरूप आणि त्यांचा गट यावर त्याचे प्रमाण ठरत. असे.
18 ಅವರ ಹೆಂಡತಿಯರಿಗೂ ಚಿಕ್ಕವರಿಗೂ ಪುತ್ರಪುತ್ರಿಯರಿಗೂ ಪಾಲು ಕೊಡುವುದಕ್ಕೂ ಇದ್ದರು. ಏಕೆಂದರೆ ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನೇ ತಾವು ಪರಿಶುದ್ಧಗೊಳಿಸುವಲ್ಲಿ ನಂಬಿಗಸ್ತರಾಗಿದ್ದರು.
१८ज्या लेवीची वंशावळ्यांमध्ये नोंद झालेली होती त्या सर्वांच्या अपत्यांना, पत्नींना पुत्र व कन्या यांनाही आपापला हिस्सा मिळे. परमेश्वराच्या सेवेसाठी ते नेहमीच पवित्र होऊन तप्तर असत म्हणून त्यांना हे दिले जाई.
19 ಯಾಜಕರಲ್ಲಿ ಸಮಸ್ತ ಗಂಡಸರಿಗೂ, ಲೇವಿಯರಲ್ಲಿ ಲಿಖಿತರಾದ ಸಮಸ್ತರಿಗೂ ಪಾಲನ್ನು ಕೊಡುವುದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ವಂಶಾವಳಿಯ ದಾಖಲೆಯ ಪ್ರಕಾರ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.
१९अहरोन वंशातील काही याजकांची लेवी राहत असत त्या गावांमध्ये शेत-शिवारे होती. काही अहरोनाचे वंशज नगरांमध्येही राहत होते. तेव्हा त्या नगरातील मनुष्यांची नावानिशी निवड करून त्यांना आपल्या उत्पन्नातला वाटा या अहरोन वंशजांना द्यायला निवडले होते. वंशावळीत नोंदवलेले सर्वजण आणि पुरुष लेवी यांना हा वाटा मिळे.
20 ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಉತ್ತಮವಾದದ್ದನ್ನೂ, ಸರಿಯಾದದ್ದನ್ನೂ, ಸತ್ಯವಾದದ್ದನ್ನೂ ನಡೆಸಿದನು.
२०राजा हिज्कीयाने अशाप्रकारे यहूदात चांगली कामगिरी केली. परमेश्वर देवाच्या दृष्टीने जे योग्य, बरोबर आणि सत्य ते त्याने केले.
21 ಇದಲ್ಲದೆ ದೇವರ ಆಲಯದ ಸೇವೆಯಲ್ಲಿಯೂ, ಮೋಶೆಯ ನಿಯಮದಲ್ಲಿಯೂ, ದೇವರ ಆಜ್ಞೆಗಳಲ್ಲಿಯೂ ಅವನು ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳನ್ನು ತನ್ನ ಪೂರ್ಣಹೃದಯದಿಂದ ಮಾಡಿ, ಅವನು ಅಭಿವೃದ್ಧಿ ಹೊಂದಿದನು.
२१हाती घेतलेल्या प्रत्येक कामात त्यास यश आले, उदाहरणार्थ, देवाच्या मंदिरातील उपासना, नियमशास्त्राचे पालन, परमेश्वरास शरण जाणे. हिज्कीयाने हे सर्व मनापासून केले त्यास यश लाभले.

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 31 >