< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 32 >

1 ಹಿಜ್ಕೀಯನು ಇಷ್ಟು ನಂಬಿಗಸ್ತಿಕೆಯಿಂದ ಎಲ್ಲವನ್ನೂ ಮಾಡಿದ ತರುವಾಯ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿಸಿ, ಅವುಗಳನ್ನು ತನಗಾಗಿ ಜಯಿಸಬೇಕೆಂದು ಮುತ್ತಿಗೆಹಾಕಿದನು.
हिज्कीयाने परमेश्वरावर भरवंसा ठेवून केलेल्या सगळ्या गोष्टी प्रत्यक्षात उतरल्यावर अश्शूरचा राजा सन्हेरीब यहूदावर चाल करून आला. नगराच्या तटबंदी बाहेर त्याने आपल्या सैन्यासह तळ ठोकला. आतील नगरांचा पाडाव करून ती जिंकून घ्यायचा त्याने बेत केला.
2 ಸನ್ಹೇರೀಬನು ಬಂದದ್ದನ್ನೂ, ಅವನು ಯೆರೂಸಲೇಮಿನ ಮೇಲೆ ಯುದ್ಧಮಾಡಲು ನಿಶ್ಚಯಿಸಿದ್ದನ್ನೂ ಹಿಜ್ಕೀಯನು ಕಂಡಾಗ,
यरूशलेमेवर हल्ला करायला सन्हेरीब आला आहे हे हिज्कीयाला कळले.
3 ಅವನು ಪಟ್ಟಣದ ಹೊರಗಿರುವ ನೀರಿನ ಬುಗ್ಗೆಗಳನ್ನು ಮುಚ್ಚಿಸುವುದಕ್ಕೆ ತನ್ನ ಪ್ರಧಾನರ ಮತ್ತು ತನ್ನ ಪರಾಕ್ರಮಶಾಲಿಗಳ ಸಂಗಡ ಯೋಚಿಸಿಕೊಂಡನು. ಅವರು ಅವನಿಗೆ ಸಹಾಯ ಕೊಟ್ಟರು.
तेव्हा तो आपल्या सरदारांशी आणि सैन्याच्या अधिकाऱ्यांशी बोलला. त्यांच्या साहाय्याने व त्यांच्याशी मसलत करून राजाने नगराबाहेरच्या झऱ्यांचे पाणी अडवायचा एकमताने निर्णय घेतला. त्या सर्वांनी त्यास मदत केली.
4 ಆದ್ದರಿಂದ ಅನೇಕ ಜನರು ಕೂಡಿಕೊಂಡು, “ನೀರು ಬುಗ್ಗೆಗಳನ್ನೂ, ದೇಶದ ಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟು, ಅಸ್ಸೀರಿಯದ ಅರಸರು ಬಂದು ಬಹಳ ನೀರು ದೊರಕಿಸಿಕೊಳ್ಳುವುದು ಏಕೆ?” ಎಂದರು.
झरे आणि आपल्या प्रांतामधून वाहणारी नदी लोकांनी एकत्र येऊन अडवली. ते म्हणाले, “अश्शूरच्या राजाला आत्ता इथवर आल्यावर त्यास मुबलक पाणी का मिळावे?”
5 ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು, ಬಿದ್ದುಹೋಗಿದ್ದ ಗೋಡೆಯನ್ನೆಲ್ಲಾ ಕಟ್ಟಿಸಿ, ಗೋಪುರಗಳ ಪರ್ಯಂತರ ಅದನ್ನು ಎತ್ತರಮಾಡಿ, ಅದರ ಹೊರಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ, ದಾವೀದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತಿ ಮಾಡಿ ಈಟಿಗಳನ್ನೂ, ಗುರಾಣಿಗಳನ್ನೂ ಬಹಳವಾಗಿ ಮಾಡಿಸಿದನು.
हिज्कीयाने पुढील उपाययोजनेने यरूशलेमची मजबुती वाढवली. तटबंदीची भिंत ज्याठिकाणी ढासळली होती तिथे बांधून काढली. भिंतीवर बुरुज बांधले. तटबंदी बाहेर दुसरा मजबूत कोट केला. दावीद नगरातील मिल्लो नावाच्या बूरूजाची मजबूती केली. शस्त्रे आणि ढाली आणखी करवून घेतल्या.
6 ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿಗಳನ್ನು ಇರಿಸಿ, ಪಟ್ಟಣದ ಬಾಗಿಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು, ಈ ಮಾತುಗಳಿಂದ ಅವರನ್ನು ಪ್ರೋತ್ಸಾಹಿಸಿದರು:
हिज्कीयाने प्रजेवर सेना नायकांच्या नेमणुका केल्या, आणि नगराच्या वेशीजवळच्या चौकात त्यांची सभा घेऊन त्यांच्याशी उत्तेजनपर बातचीत केली.
7 “ಬಲಗೊಳ್ಳಿರಿ, ಧೈರ್ಯವಾಗಿರಿ, ಅಸ್ಸೀರಿಯದ ಅರಸನ ನಿಮಿತ್ತವೂ, ಅವನ ಸಂಗಡ ಕೂಡಿರುವ ಮಹಾ ಗುಂಪಿನ ನಿಮಿತ್ತವೂ ಭಯಪಡಬೇಡಿರಿ, ನಿರಾಶರಾಗಬೇಡಿರಿ. ಏಕೆಂದರೆ ಅವನ ಸಂಗಡ ಇರುವವರಿಗಿಂತ ಮಿಗಿಲಾದದ್ದು ನಮ್ಮ ಸಂಗಡ ಇದೆ.
हिज्कीया त्यांना म्हणाला, “हिंमत बाळगा आणि द्दढ राहा. अश्शूरच्या राजाची किंवा त्याच्या विशाल सेनेची धास्ती घेऊ नका. आपली ताकद त्यांच्यापेक्षा जास्त आहे.
8 ನಮಗಾದರೋ ಸಹಾಯ ಮಾಡುವುದಕ್ಕೂ, ನಮ್ಮ ಯುದ್ಧಗಳನ್ನು ನಡಿಸುವುದಕ್ಕೂ ನಮ್ಮ ದೇವರಾದ ಯೆಹೋವ ದೇವರು ತಾವೇ ಇದ್ದಾರೆ,” ಎಂದು ಹೇಳಿದನು. ಆದ್ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಭರವಸೆಯುಳ್ಳವರಾದರು.
अश्शूरच्या राजाजवळ फक्त मनुष्यबळ आहे. आपल्या बाजूला तर साक्षात परमेश्वर देव आहे. तोच आपल्याला मदत करील.” आपल्या युध्दात तोच लढेल अशाप्रकारे यहूदाचा राजा हिज्कीयाचे धीराचे बोलणे ऐकून लोकांचा त्यावर विश्वास बसला आणि त्यांना हुरुप आला.
9 ಇದರ ತರುವಾಯ ಅಸ್ಸೀರಿಯದ ಅರಸನಾದ ಸನ್ಹೇರೀಬನೂ, ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ, ಅವನು ಯೆರೂಸಲೇಮಿನಲ್ಲಿರುವ ಯೆಹೂದದ ಅರಸನಾದ ಹಿಜ್ಕೀಯನ ಬಳಿಗೂ, ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳುಹಿಸಿದನು.
अश्शूरचा राजा सन्हेरीब याने लाखीशाचा पराभव करण्याच्या हेतूने आपल्या सैन्यासह लाखीश नगराजवळ तळ दिला होता. तेथून त्याने यहूदाचा राजा हिज्कीया आणि यरूशलेममधील यहूदी लोक यांच्यासाठी आपल्या सेवकांमार्फत निरोप पाठवला.
10 “ಅಸ್ಸೀರಿಯದ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ಉಳಿದಿರುವಿರಿ?
१०सेवक म्हणाले की, “अश्शूरचा राजा सन्हेरीब याचा संदेश असा आहे. यरूशलेमेला वेढा पडला असताना कशाच्या भरवंशावर तुम्ही तिथे राहता?”
11 ‘ನಮ್ಮ ದೇವರಾದ ಯೆಹೋವ ದೇವರು ಅಸ್ಸೀರಿಯದ ಅರಸನ ಕೈಯಿಂದ ನಮ್ಮನ್ನು ಬಿಡಿಸುವರು,’ ಎಂದು ಹಿಜ್ಕೀಯನು ಹೇಳಿ, ನಿಮ್ಮನ್ನು ಹಸಿವೆ ಮತ್ತು ದಾಹದಿಂದ ಸಾಯಿಸುವುದಕ್ಕೆ ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
११हिज्कीयाचा हा तुम्हास फसवण्याचा डाव आहे. यरूशलेमामध्ये अडकून तुम्ही तहानभुकेने व्याकुळ होऊन मरावे असा त्याचा अंतताः हेतू आहे. तो तुम्हास म्हणतो, “अश्शूरच्या राजापासून आपला देव परमेश्वर आपले रक्षण करील.”
12 ಈ ಹಿಜ್ಕೀಯನು ಅವನ ಪೂಜಾಸ್ಥಳಗಳನ್ನೂ, ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ, ‘ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು, ಅದರ ಮೇಲೆ ಧೂಪವನ್ನರ್ಪಿಸಬೇಕು,’ ಎಂದು ಹೇಳಿದ್ದಾನಲ್ಲವೇ?
१२पण त्यानेच परमेश्वराची उंचस्थाने आणि वेद्या काढून टाकल्या. तुम्हा यहूदी आणि यरूशलेमेच्या लोकांस त्याने सांगितले की तुम्ही फक्त एकाच वेदीवर उपासना केली पाहिजे आणि धूप जाळला पाहिजे.
13 “ನಾನೂ, ನನ್ನ ಪಿತೃಗಳು ದೇಶಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವಿತ್ತೋ?
१३माझ्या पूर्वजांनी आणि मी इतर देशांतल्या लोकांची कशी अवस्था करून टाकली ती तुम्हास माहीत आहे. त्या देशांतले दैवते काही आपल्या लोकांस वाचवू शकले नाहीत. मलाही ते त्यांचा नाश करण्यापासून परावृत्त करु शकले नाहीत.
14 ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವರುಗಳಲ್ಲಿ ನನ್ನ ಕೈಯಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವುದು? ಹಾಗಾದರೆ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?
१४माझ्या पूर्वजांनी इतर देशांचा नाश केला. त्यांच्या सर्व देवांपैकी आपल्या लोकांस विनाशातून सोडवणारा असा कोणी देव होता काय? तर तुमचा देव तरी तुम्हास माझ्या सामर्थ्यापासुन वाचवू शकेल असे वाटते का?
15 ಆದ್ದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ನಿಮ್ಮನ್ನು ದಾರಿತಪ್ಪಿಸಲು ಬಿಡಬೇಡಿರಿ. ಅವನ ಮಾತು ನಂಬಬೇಡಿರಿ. ನನ್ನ ಕೈಯೊಳಗಿಂದಲೂ, ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು? ಅನ್ನುತ್ತಾನೆ,” ಎಂದು ಹೇಳಿದರು.
१५हिज्कीयाच्या बतावणीला बळी पडू नका व त्याच्यावर विश्वास ठेऊ नका. आमच्या पासून आपल्या प्रजेचे रक्षण करण्यात कोणत्याच राष्ट्राच्या दैवताला अद्यापि यश आलेले नाही. तेव्हा तुमचा संहार करण्याला तुमचे दैवत माझ्या हातून तुम्हास वाचवू शकेल असे समजू नका.
16 ಹೀಗೆ ಅವನ ಸೇವಕರು ಇನ್ನೂ ದೇವರಾದ ಯೆಹೋವ ದೇವರಿಗೆ ವಿರೋಧವಾಗಿಯೂ, ಅವರ ಸೇವಕನಾದ ಹಿಜ್ಕೀಯನಿಗೆ ವಿರೋಧವಾಗಿಯೂ ಮಾತನಾಡಿದರು.
१६अश्शूरच्या राजाच्या सेवकांनी परमेश्वर देवाची आणि देवाचा सेवक हिज्कीया याची निंदानालस्ती केली.
17 ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ನಿಂದಿಸುವುದಕ್ಕೂ, ಅವರಿಗೆ ವಿರೋಧವಾಗಿ ಮಾತನಾಡುವುದಕ್ಕೂ ಪತ್ರಗಳನ್ನು ಬರೆದನು. ಅದರಲ್ಲಿ, “ಇತರ ದೇಶಗಳ ಜನಾಂಗಗಳ ದೇವರುಗಳು, ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ, ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸನು,” ಎಂದು ಬರೆದಿತ್ತು.
१७सन्हेरीबनच्या दासांनी पत्रांमध्ये इस्राएलाचा देव परमेश्वर याविषयी अपमानकारक मजकूरही लिहिला. तो असा होता. “इतर देशांच्या दैवतांना मी केलेल्या संहारापासून आपल्या प्रजेला वाचवता आले नाही. तसेच हिज्कीयाचा देवही मला त्याच्या प्रजेचा नाश करण्यापासून थोपवू शकणार नाही.”
18 ಇದಲ್ಲದೆ ಅವರು ಪಟ್ಟಣವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವುದಕ್ಕೂ, ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ದೊಡ್ಡ ಶಬ್ದದಿಂದ ಅವರನ್ನು ಕೂಗಿದರು.
१८मग अश्शूरच्या राजाच्या सेवकांनी तटबंदीवर उभ्या असलेल्या यरूशलेमेच्या लोकांस घाबरवण्यासाठी हिब्रू भाषेत मोठ्याने आरडाओरडा केला. असे करून यरूशलेम नगर ताब्यात घ्यायचा त्यांचा विचार होता.
19 ಮನುಷ್ಯರ ಕೈಕೆಲಸವಾದ ಭೂಮಿಯ ಜನರ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ, ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
१९जगभरचे लोक ज्या दैवतांची पूजा करतात त्या दैवतांविषयी हे सेवक वाईटसाईट बोलत राहिले. हांतानी बनवीलेल्या मुर्तीच्या व यरूशलेमेच्या परमेश्वरासही या सेवकांनी त्या देवतांच्याच रांगेला बसवले.
20 ಇದರ ನಿಮಿತ್ತ ಅರಸನಾದ ಹಿಜ್ಕೀಯನೂ, ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
२०यामुळे राजा हिज्कीया आणि आमोजचा पुत्र यशया संदेष्टा यांनी या प्रश्नावर स्वर्गाकडे तोंड करून मोठ्याने प्रार्थना केली.
21 ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು.
२१तेव्हा अश्शूरच्या राजाच्या छावणीवर परमेश्वराने आपला दूत पाठवला. या दूताने अश्शूरांचे सगळे सैन्य, त्यातील सरदार आणि अधिकारी यांना मारुन टाकले. एवढे झाल्यावर अश्शूरचा राजा माघार घेऊन आपल्या देशात परत गेला. त्याच्या प्रजेला त्याची शरम वाटली. राजा त्याच्या दैवताच्या देवळात गेला. तिथे त्याच्या पोटच्या पुत्रांना तलवारीने त्याने ठार केले.
22 ಹೀಗೆ ಯೆಹೋವ ದೇವರು ಹಿಜ್ಕೀಯನನ್ನೂ, ಯೆರೂಸಲೇಮಿನ ನಿವಾಸಿಗಳನ್ನೂ, ಅಸ್ಸೀರಿಯದ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ, ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ, ಸಮಸ್ತ ಕಡೆಯಿಂದ ಅವರನ್ನು ನಡೆಸಿದರು.
२२अशाप्रकारे परमेश्वराने अश्शूरचा राजा सन्हेरीब आणि त्याचे सैन्य यांच्यापासून हिज्कीया आणि यरूशलेमचे लोक यांचे संरक्षण केले. परमेश्वरास हिज्कीयाची आणि यरूशलेमेच्या प्रजेची काळजी होती.
23 ಅನೇಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರಿಗೆ ಅರ್ಪಣೆಗಳನ್ನೂ, ಯೆಹೂದದ ಅರಸನಾದ ಹಿಜ್ಕೀಯನಿಗೆ ಕಾಣಿಕೆಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಮುಂದೆ ಉನ್ನತವಾಗಿದ್ದನು.
२३बऱ्याच जणांनी परमेश्वरास वाहण्यास भेटवस्तू यरूशलेमेत आणल्या. यहूदाचा राजा हिज्कीया याच्यासाठी ही नजराणे आणले. या घटनेपासून सर्व राष्ट्रांना हिज्कीयाबद्दल आदर वाटू लागला.
24 ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಅವನು ಯೆಹೋವ ದೇವರನ್ನು ಪ್ರಾರ್ಥಿಸಲು, ದೇವರು ಅವನ ಸಂಗಡ ಮಾತನಾಡಿ ಅವನಿಗೆ ಒಂದು ಅದ್ಭುತವಾದ ಗುರುತನ್ನು ಕೊಟ್ಟರು.
२४या काळातच हिज्कीयाला आजारपणाने घेरले आणि तो मरणासन्न झाला. त्याने परमेश्वराची प्रार्थना केली. परमेश्वर त्याच्याशी बोलला याप्रकारे परमेश्वराने त्यास एक संकेत दिला.
25 ಆದರೆ ಹಿಜ್ಕೀಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಹೋದನು. ಏಕೆಂದರೆ ಅವನ ಹೃದಯವು ಅಹಂಕಾರದಿಂದ ತುಂಬಿತ್ತು. ಆದ್ದರಿಂದ ಅವನ ಮೇಲೆಯೂ, ಯೆಹೂದ ಮತ್ತು ಯೆರೂಸಲೇಮಿನ ಮೇಲೆಯೂ ಯೆಹೋವ ದೇವರ ರೌದ್ರ ಉಂಟಾಯಿತು.
२५पण हिज्कीयाला गर्व वाटू लागला होता. त्यामुळे त्याने परमेश्वराने दाखवलेल्या दयाळूपणाबद्दल त्यास धन्यवाद दिले नाहीत. या गोष्टीमुळे हिज्कीयावर आणि यहूदा व यरूशलेमेच्या लोकांवर परमेश्वर कोपला.
26 ಅನಂತರ ಹಿಜ್ಕೀಯನೂ, ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯದಲ್ಲಿ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ, ಹಿಜ್ಕೀಯನ ದಿವಸಗಳಲ್ಲಿ ಯೆಹೋವ ದೇವರ ರೌದ್ರವು ಅವರ ಮೇಲೆ ಬರಲಿಲ್ಲ.
२६परंतु यरूशलेमेचे लोक आणि हिज्कीया यांचे हृदयपरिवर्तन झाले आणि त्यांची वर्तणूक बदलली. त्यांच्यात नम्रता आली. त्यामुळे हिज्कीयाच्या हयातीत परमेश्वराचा रोष त्यांच्यावर ओढवला नाही.
27 ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ, ಘನವೂ ಇದ್ದುದರಿಂದ, ಅವನು ಬೆಳ್ಳಿಗೋಸ್ಕರವೂ, ಬಂಗಾರಕ್ಕೋಸ್ಕರವೂ, ರತ್ನಗಳಿಗೋಸ್ಕರವೂ, ಸುಗಂಧ ದ್ರವ್ಯಗಳಿಗೋಸ್ಕರವೂ, ಗುರಾಣಿಗಳಿಗೋಸ್ಕರವೂ, ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಉಗ್ರಾಣಗಳನ್ನು ಮಾಡಿಸಿದನು.
२७हिज्कीयाची भरभराट झाली, त्यास मान सन्मान मिळाला. चांदी, सोने, किंमती रत्ने, मसाल्याचे पदार्थ, ढाली इत्यादी नाना तऱ्हेच्या वस्तू ठेवण्यासाठी त्याने कोठारे केली.
28 ಇದಲ್ಲದೆ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನೂ, ಸಕಲ ವಿಧವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ, ಕುರಿಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.
२८धान्य, नवीन मद्य, तेल या लोकांकडून आलेल्या गोष्टी ठेवायलाही कोठारे बांधली, गुरेढोरे आणि मेंढ्या आपल्या कळपासाठी कोंडवाडे बांधले.
29 ಇದಲ್ಲದೆ ತನಗೆ ಪಟ್ಟಣಗಳನ್ನೂ, ದನಕುರಿಗಳ ದೊಡ್ಡ ಹಿಂಡುಗಳನ್ನೂ ಬಹಳವಾಗಿ ಮಾಡಿಕೊಂಡನು. ಏಕೆಂದರೆ ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟರು.
२९हिज्कीयाने नवीन नगरे वसवली. सर्व तऱ्हेचे पशू आणि मेंढरे यांचे कळप त्याच्याकडे होते. देव दयेने हिज्कीयाला समृध्दी आली.
30 ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು, ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿದನು.
३०याच हिज्कीयाने गीहोनचा यरूशलेम मधला वरचा प्रवाह अडवून त्यास दावीद नगराच्या पश्चिमेकडून सरळ खाली आणले होते. हिज्कीयाला त्याने हाती घेतलेल्या प्रत्येक कार्यात यश मिळाले.
31 ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾರಣೆ ಮಾಡಲು ಬಾಬಿಲೋನಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲಾದ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದಲ್ಲಿ ಇರುವ ಪ್ರತಿಯೊಂದನ್ನೂ ತಿಳಿದುಕೊಳ್ಳುವದಕ್ಕಾಗಿಯೂ ಪರಿಶೋಧಿಸುವುದಕ್ಕಾಗಿಯೂ ದೇವರು ಅವನನ್ನು ಕೈಬಿಟ್ಟರು.
३१एकदा देशात घडलेल्या चमत्कारांविषयी चौकशी करायला बाबेलच्या अधिपतींनी त्याच्याकडे राजदूत पाठवले. तेव्हा हिज्कीयाची पारख करावी आणि त्याचे मन जाणून घ्यावे म्हणून देवाने त्यास एकटे सोडले.
32 ಹಿಜ್ಕೀಯನ ಇತರ ಕಾರ್ಯಗಳೂ ಅವನ ಭಕ್ತಿಕಾರ್ಯಗಳೂ ಆಮೋಚನ ಮಗ ಪ್ರವಾದಿಯಾದ ಯೆಶಾಯನ ದರ್ಶನದ ಪುಸ್ತಕದಲ್ಲಿ ಮತ್ತು ಯೆಹೂದ ಇಸ್ರಾಯೇಲ್ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
३२हिज्कीयाने केलेल्या इतर गोष्टी आणि त्याचा लोकांविषयीचा दयाळूपणा, त्याची धार्मिक कृत्ये, त्याची परमेश्वरा प्रती एकनिष्ठा याविषयी आमोजचा पुत्र यशया संदेष्टा याचे दृष्टांत आणि यहूदा व इस्राएल राजांचा इतिहास या ग्रंथांमध्ये लिहिलेले आहे.
33 ಹಿಜ್ಕೀಯನು ತನ್ನ ಪಿತೃಗಳ ಬಳಿಗೆ ಸೇರಿದನು. ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದುದರಲ್ಲಿ ಅವನನ್ನು ಹೂಳಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ, ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗ ಮನಸ್ಸೆಯು ಅವನಿಗೆ ಬದಲಾಗಿ ಅರಸನಾದನು.
३३हिज्कीया मरण पावला आणि त्याचे त्याच्या पूर्वजांशेजारी दफन झाले. दाविदाच्या वंशजांच्या कबरीपाशी उंच भागावर लोकांनी त्याचे दफन केले. हिज्कीया मरण पावला तेव्हा यहूदा आणि यरूशलेममधील लोकांनी त्यास सन्मानपूर्वक निरोप दिला. हिज्कीयाच्या जागी त्याचा पुत्र मनश्शे गादीवर आला.

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 32 >