< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 33 >

1 ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಐವತ್ತೈದು ವರ್ಷ ಯೆರೂಸಲೇಮಿನಲ್ಲಿ ಆಳಿದನು.
मनश्शे यहूदाचा राजा झाला तेव्हा बारा वर्षांचा होता. त्याने यरूशलेमेमध्ये पंचावन्न वर्षे राज्य केले.
2 ಆದರೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಜನಾಂಗಗಳ ಅಸಹ್ಯವಾದವುಗಳನ್ನು ಅವನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
त्यांचे आचरण परमेश्वराच्या दृष्टीने वाईट असे होते. वाईट वर्तणुकीमुळे ज्या देशांना परमेश्वराने इस्राएलपुढून हुसकून लावले त्यांच्या निंद्य प्रथांचेच मनश्शेने अनुकरण केले
3 ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.
हिज्कीयाने जी उंचस्थाने उद्ध्वस्त केली होती तिच मनश्शेने पुन्हा बांधली. त्याने बआल देवतांसाठी वेद्या केल्या आणि अशेराचे स्तंभ उभे केले. नक्षत्रांपुढे नतमस्तक होऊन तो त्या तारांगणांची पूजाही करत असे.
4 ಇದಲ್ಲದೆ ಯೆರೂಸಲೇಮಿನಲ್ಲಿ, “ನನ್ನ ಹೆಸರು ಯುಗಯುಗಕ್ಕೂ ಇರುವುದು,” ಎಂದು ಯೆಹೋವ ದೇವರು ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ಅವನು ಬಹಳ ಬಲಿಪೀಠಗಳನ್ನು ಕಟ್ಟಿಸಿದನು.
परमेश्वराच्या मंदिरात त्याने त्या इतर दैवतांसाठी वेद्या बांधल्या. “माझे नाव यरूशलेमामध्ये चिरकाल राहील” असे याच मंदिराबद्दल परमेश्वराने म्हटले होते.
5 ಯೆಹೋವ ದೇವರ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಸಮಸ್ತ ನಕ್ಷತ್ರಮಂಡಲಕ್ಕಾಗಿ ಬಲಿಪೀಠಗಳನ್ನು ಕಟ್ಟಿಸಿದನು.
या परमेश्वराच्या मंदिराच्या दोन्ही अंगणांत मनश्शेने सर्व नक्षत्रांसाठी वेद्या बांधल्या.
6 ಇದಲ್ಲದೆ ಮನಸ್ಸೆಯು ಬೆನ್ ಹಿನ್ನೋಮ್ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನೂ ಮಾಟವನ್ನೂ ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.
बेन हिन्नोमच्या खोऱ्यात त्याने आपल्या पोटच्या पुत्रांचा यज्ञात बली दिला. जादूटोणा, चेटूक यातही तो पारंगत होता. चेटूक करणारे आणि मृतात्म्याशी संबंध ठेवणारे यांच्याशी मनश्शेचे संबंध होते. परमेश्वराने निषिध्द मानलेली बरीच कृत्ये मनश्शेने केली. त्याच्या या गैरवर्तनामुळे परमेश्वराचा संताप झाला.
7 ಮನಸ್ಸೆಯು ತಾನು ಮಾಡಿದ ವಿಗ್ರಹವನ್ನು ದೇವರ ಆಲಯದಲ್ಲಿ ಇಟ್ಟನು. ಆ ಆಲಯದ ಬಗ್ಗೆ ದೇವರು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಹೇಳಿದ್ದೇನೆಂದರೆ, “ನಾನು ಈ ಆಲಯದಲ್ಲಿ ಮತ್ತು ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಶಾಶ್ವತವಾಗಿ ಸ್ಥಾಪಿಸುತ್ತೇನೆ.
मनश्शेने एका कोरीव मूर्तीची स्थापनाही देवाच्या मंदिरात केली. या मंदिराविषयी दावीद व त्याचा पुत्र शलमोन यांना देव असे म्हणाला होता, “या मंदिरात आणि यरूशलेमेमध्ये माझे नाव चिरकाल राहील. इस्राएलच्या सर्व कुळांमधून मी यरूशलेमेला निवडले.
8 ನಾನು ಮೋಶೆಯ ಮುಖಾಂತರ ಆಜ್ಞಾಪಿಸಿದ ಎಲ್ಲಾ ಅಪ್ಪಣೆಗಳನ್ನೂ, ಕಾನೂನುಗಳನ್ನೂ, ವಿಧಿಗಳನ್ನೂ ಕೈಗೊಂಡು ನಡೆಯುವುದರಲ್ಲಿ ಅವರು ಜಾಗರೂಕರಾಗಿದ್ದರೆ, ನಾನು ಅವರ ಪಿತೃಗಳಿಗೆ ನೇಮಕ ಮಾಡಿದ ದೇಶವನ್ನು ಪುನಃ ಇಸ್ರಾಯೇಲರು ಬಿಟ್ಟುಹೋಗುವಂತೆ ಮಾಡುವುದಿಲ್ಲ,” ಎಂದು ಹೇಳಿದ್ದರು.
त्यांच्या पूर्वजांना कबूल केलेल्या प्रदेशातून मी आता इस्राएल लोकांस बाहेर पडू देणार नाही. पण त्यांना दिलेल्या आज्ञा मात्र त्यांनी कसोशीने पाळल्या पाहिजेत. मोशेद्वारे त्यांना दिलेल्या विधी, नियम व आज्ञा त्यांनी पाळायला हवेत.”
9 ಆದರೆ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಇಸ್ರಾಯೇಲರ ಮುಂದೆಯೇ ಯೆಹೋವ ದೇವರಿಂದ ನಾಶಹೊಂದಿದ ಇತರ ಜನಾಂಗಗಳಿಗಿಂತ ಅಧಿಕವಾಗಿ ಕೆಟ್ಟದ್ದನ್ನು ಮಾಡಲು ಮನಸ್ಸೆಯು ಅವರನ್ನು ಪ್ರೇರೇಪಿಸಿದನು.
मनश्शेने मात्र यहूदा लोक आणि यरूशलेमचे लोक यांना दुराचरणाला प्रवृत केले. इस्राएल लोकांपूर्वी ज्या राष्ट्रांना परमेश्वराने हुसकावून लावले त्यांच्यापेक्षाही हे लोक दुराचरणी होते.
10 ಯೆಹೋವ ದೇವರು ಮನಸ್ಸೆಯೊಂದಿಗೂ, ಅವನ ಜನರೊಂದಿಗೂ ಮಾತನಾಡಿದರು. ಆದರೆ ಅವರು ಲಕ್ಷಿಸಲಿಲ್ಲ.
१०परमेश्वर मनश्शेशी व इतर लोकांशी बोलला पण कोणीही परमेश्वराचे ऐकले नाही.
11 ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.
११तेव्हा अश्शूरच्या राजाच्या सेनापतीकरवी परमेश्वराने यहूदावर हल्ला केला. या सेनापतींनी मनश्शेला आकड्यांनी जखडून पकडले. त्याच्या हातात पितळी बेड्या ठोकल्या. अशा रीतीने मनश्शेला कैद करून त्यांनी बाबेलला नेले.
12 ಮನಸ್ಸೆಯು ಬಾಧೆಯಲ್ಲಿರುವಾಗ ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಂಡನು ಮತ್ತು ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಪ್ರಾರ್ಥನೆಮಾಡಿದನು.
१२मनश्शेचे हाल झाले तेव्हा त्याने परमेश्वर देवाची करुणा भाकली. त्याच्या पूर्वजांच्या देवासमोर मनश्शे नम्र झाला.
13 ಆಗ ಯೆಹೋವ ದೇವರು ಕನಿಕರಪಟ್ಟು, ಅವನ ಬಿನ್ನಹವನ್ನು ಕೇಳಿ, ಯೆರೂಸಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರುಗಿ ಬರಮಾಡಿದರು. ಆಗ ಯೆಹೋವ ದೇವರೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
१३त्याने देवाची प्रार्थना केली व मदतीसाठी याचना केली. मनश्शेचा धावा ऐकून परमेश्वरास त्याची दया आली. म्हणून त्यास पुन्हा यरूशलेमेला आणून परमेश्वराने त्यास गादीवर बसवले. परमेश्वर हाच खरा देव आहे हे तेव्हा मनश्शेला पटले.
14 ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ಮೀನು ಬಾಗಿಲ ದ್ವಾರದವರೆಗಿರುವ ತಗ್ಗಿನಲ್ಲಿ ಓಫೇಲ್ ಗುಡ್ಡದ ಸುತ್ತಲೂ ಗೋಡೆಯನ್ನು ಕಟ್ಟಿಸಿ, ಅದನ್ನು ಬಹಳ ಎತ್ತರಮಾಡಿ, ಯೆಹೂದದ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.
१४या घटनेनंतर मनश्शेने दावीद नगराभोवती आणखी एक कोट बांधला. हा कोट गीहोनच्या पश्चिमेकडील खोऱ्यात मासळी दरवाजाजवळ ओफेल टेकडी सभोवती असून खूप उंच होता. यहूदामधील सर्व तटबंदीच्या नगरांमध्ये त्याने अधिकारी नेमले.
15 ಅವನು ಅನ್ಯದೇವರುಗಳನ್ನೂ, ಯೆಹೋವ ದೇವರ ಆಲಯದಲ್ಲಿರುವ ವಿಗ್ರಹವನ್ನೂ ಯೆಹೋವ ದೇವರ ಆಲಯದ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ, ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.
१५परक्या देवतांच्या मूर्ती त्याने हटवल्या. परमेश्वराच्या मंदिरातील मूर्ती काढून टाकली. मंदिराच्या टेकडीवर तसेच यरूशलेमामध्ये बांधलेल्या वेद्यांही काढून यरूशलेम नगराबाहेर टाकून दिल्या.
16 ಅವನು ಯೆಹೋವ ದೇವರ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ಸಮಾಧಾನದ ಬಲಿಗಳನ್ನೂ, ಸ್ತೋತ್ರದ ಬಲಿಗಳನ್ನೂ ಅರ್ಪಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿದನು.
१६नंतर त्याने परमेश्वराची वेदी स्थापन केली आणि त्यावर शांत्यर्पणे आणि उपकारस्मरणाची अर्पणे वाहिली. समस्त यहूदी लोकांस त्याने इस्राएलाचा परमेश्वर देव याची उपासना करायची आज्ञा केली.
17 ಜನರು ತಮ್ಮ ದೇವರಾದ ಯೆಹೋವ ದೇವರಿಗೆ ಮಾತ್ರ ಬಲಿಯನ್ನರ್ಪಿಸುವಾಗ, ಇನ್ನೂ ಉನ್ನತ ಸ್ಥಳಗಳಲ್ಲಿಯೇ ಬಲಿಯನ್ನು ಅರ್ಪಿಸುತ್ತಾ ಇದ್ದರು.
१७लोक अजूनही उंचस्थानी यज्ञ करीतच होते पण आता ते फक्त त्यांच्या परमेश्वर देवाप्रीत्यर्थ करीत होते.
18 ಮನಸ್ಸೆಯ ಇತರ ಕ್ರಿಯೆಗಳೂ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ, ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
१८मनश्शेची बाकीची कृत्ये तसेच त्याने केलेली देवाची प्रार्थना तसेच परमेश्वर देवाच्यावतीने द्रष्टे त्याच्याशी जे बोलले ती वचने हे सगळे इस्राएलच्या राजांच्या बखरीत लिहिलेले आहे.
19 ಇದಲ್ಲದೆ ಅವನ ಪ್ರಾರ್ಥನೆಯೂ, ಅವನು ದೇವರಿಗೆ ಭಿನ್ನವಿಸಿದ್ದೂ, ಅವನ ಸಮಸ್ತ ಪಾಪವೂ, ಅವನ ಅಪನಂಬಿಕೆಯೂ, ಅವನು ತಗ್ಗಿಸಿಕೊಳ್ಳುವುದಕ್ಕಿಂತ ಮುಂಚೆ ಕಟ್ಟಿಸಿದ ಉನ್ನತ ಸ್ಥಳಗಳನ್ನೂ, ನಿಲ್ಲಿಸಿದ ಅಶೇರ ಸ್ತಂಭಗಳೂ, ಕೆತ್ತಿಸಿದ ವಿಗ್ರಹಗಳೂ, ಸ್ಥಾಪಿಸಿದ ಸ್ಥಳಗಳೂ ಪ್ರವಾದಿಗಳ ದಾಖಲೆಗಳಲ್ಲಿ ಬರೆದಿರುತ್ತವೆ.
१९मनश्शेची प्रार्थना आणि परमेश्वरास त्याचे गाऱ्हाणे ऐकून करुणा वाटणे हे द्रष्टयांच्या बखरीत आहे. मनश्शेला उपरती होण्यापूर्वीची त्याची पापे व वाईट काम, उंचस्थाने व अशेरा स्तंभ जिथे उभारले ती स्थाने कोरीव मूर्ती याचेही तपशील याच बखरीत आहेत.
20 ಮನಸ್ಸೆಯು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನನ್ನು ಅವನ ಅರಮನೆಯಲ್ಲಿ ಹೂಳಿಟ್ಟರು. ಅವನ ಮಗ ಆಮೋನನು ಅವನಿಗೆ ಬದಲಾಗಿ ಅರಸನಾದನು.
२०पुढे मनश्शे मरण पावला व पूर्वजांबरोबर त्याचे दफन झाले. त्याच्या राजमहालातच लोकांनी त्यास पुरले. त्याच्या जागी त्याचा पुत्र आमोन राज्य करु लागला.
21 ಆಮೋನನು ಅರಸನಾದಾಗ ಇಪ್ಪತ್ತೆರಡು ವರ್ಷದವನಾಗಿದ್ದನು, ಅವನು ಯೆರೂಸಲೇಮಿನಲ್ಲಿ ಎರಡು ವರ್ಷ ಆಳಿದನು.
२१आमोन बाविसाव्या वर्षी यहूदाचा राजा झाला. तो यरूशलेमेमध्ये दोन वर्षे गादीवर होता.
22 ಆದರೆ ಅವನು ತನ್ನ ತಂದೆ ಮನಸ್ಸೆಯು ಮಾಡಿದ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು. ಆಮೋನನು ತನ್ನ ತಂದೆ ಮನಸ್ಸೆಯು ಮಾಡಿದ ಕೆತ್ತಿದ ವಿಗ್ರಹಗಳಿಗೆ ಬಲಿಗಳನ್ನು ಅರ್ಪಿಸಿ ಅವುಗಳನ್ನು ಪೂಜಿಸಿದನು.
२२परमेश्वराच्या दृष्टीने निषिध्द अशी कृत्ये त्याने केली. आपले पिता मनश्शे यांच्याप्रमाणेच तो परमेश्वराच्या इच्छेविरुध्द वागला. पित्यानी करून घेतलेल्या कोरीव मूर्तीपुढे यज्ञ करून आमोनाने त्यांची पूजा केली.
23 ಆಮೋನನು ತನ್ನ ತಂದೆ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ, ಯೆಹೋವ ದೇವರ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ. ಆದರೆ ಆಮೋನನು ಅಧಿಕವಾಗಿ ಅಪರಾಧ ಮಾಡಿದನು.
२३पुढे त्याचे पिता मनश्शे जसे परमेश्वरास नम्रपणे शरण गेले तसा तो गेला नाही. उलट आमोनाची दुष्कृत्ये वाढतच चालली.
24 ಆದ್ದರಿಂದ ಆಮೋನನ ಸೇವಕರು ಅವನ ವಿರುದ್ಧ ಒಳಸಂಚುಮಾಡಿ, ಅವನ ಅರಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.
२४आमोनच्या सेवकांनी कट रचून त्याची त्याच्या महालातच हत्या केली.
25 ಆದರೆ ದೇಶದ ಜನರು ಅರಸನಾದ ಆಮೋನನ ವಿರುದ್ಧ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ, ದೇಶದ ಜನರು ಅವನ ಮಗ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
२५पण राजा आमोन विरुध्द कारस्थान करणाऱ्यांचा यहूदी लोकांनी काटा काढला. मग आमोनचा पुत्र योशीया याला लोकांनी राजा केले.

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 33 >