< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 34 >

1 ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದನು, ಅವನು ಮೂವತ್ತೊಂದು ವರ್ಷ ಯೆರೂಸಲೇಮಿನಲ್ಲಿ ಆಳಿದನು.
योशीया, राजा झाला तेव्हा आठ वर्षांचा होता. त्याने यरूशलेमेमध्ये एकतीस वर्षे राज्य केले.
2 ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.
त्याने वर्तन योग्य प्रकारचे होते परमेश्वराची त्याच्याकडून जशी अपेक्षा होती तसेच तो वागला आपला पूर्वज दावीद याच्याप्रमाणे त्याने सत्कृत्ये केली. सन्मार्गावरुन तो ढळला नाही.
3 ಅವನು ಇನ್ನೂ ಬಾಲಕನಾಗಿರುವಾಗ, ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪೂರ್ವಜನಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ ತೆಗೆದುಹಾಕಿ, ಯೆಹೂದ ಮತ್ತು ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.
आपल्या कारकिर्दीच्या आठव्या वर्षीच तो आपला पूर्वज दावीद याच्या परमेश्वराच्या भजनी लागला. योशीयाने लहान वयातच हा मार्ग पत्करला आणि कारकिर्दीच्या बाराव्या वर्षी यहूदा आणि यरूशलेमेला शुद्ध केले, उंचस्थाने, अशेरा देवीचे खांब, कोरीव आणि ओतीव मूर्ती यांची मोडतोड केली.
4 ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯ ಸ್ತಂಭಗಳನ್ನು ಕಡಿದುಹಾಕಿ; ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ, ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿಗಳ ಮೇಲೆ ಚಿಲ್ಲಿಸಿ,
लोकांनी त्याच्या समोरच बआलदेवतांच्या मूर्ती फोडून टाकल्या. वरच्या भागात असलेल्या धूप जाळण्याच्या वेद्या योशीयाने उद्ध्वस्त केल्या. अशेराच्या मूर्ती ओतीव आणि कोरीव मूर्तीचाही त्याने पार चुराडा करून टाकला आणि हे चूर्ण, ज्या लोकांनी बआल देवतांसाठी यज्ञ केले त्यांच्या कबरीवर पसरले.
5 ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು; ಯೆಹೂದ ಪ್ರಾಂತ್ಯವನ್ನೂ, ಯೆರೂಸಲೇಮ ಪಟ್ಟಣವನ್ನೂ ಶುಚಿಮಾಡಿದರು.
बआल देवतांची पूजा करणाऱ्या याजकांच्या अस्थी देखील त्याने त्यांच्याच वेद्यांवर जाळून टाकल्या. अशाप्रकारे त्याने यहूदा आणि यरूशलेमला शुद्ध केले.
6 ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಪಟ್ಟಣಗಳ ಸುತ್ತಲೂ ಶುಚಿಮಾಡಿದರು.
मनश्शे, एफ्राइम, शिमोन, नफताली येथपर्यंतच्या शहरांतून आणि त्यांच्या आसपासच्या पडीक जागेत त्याने हेच केले.
7 ಅವನು ಬಲಿಪೀಠಗಳನ್ನೂ, ಅಶೇರ ಸ್ತಂಭಗಳನ್ನೂ ಕೆಡವಿಹಾಕಿ, ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿಮಾಡಿ, ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡವಿದ ತರುವಾಯ ಯೆರೂಸಲೇಮಿಗೆ ಹಿಂದಿರುಗಿದನು.
त्याने वेद्या मोडून टाकल्या, अशेरा खांबांची मोडतोड करून चूर्ण केले धूपाच्या वेद्या उखडणे ही इस्राएलभरची मोहीम उरकल्यावर योशीया यरूशलेमेला परतला.
8 ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಅವನು ದೇಶವನ್ನೂ, ಆಲಯವನ್ನೂ ಶುಚಿ ಮಾಡಿದ ತರುವಾಯ ತನ್ನ ದೇವರಾದ ಯೆಹೋವ ದೇವರ ಆಲಯವನ್ನು ದುರಸ್ತಿ ಮಾಡುವುದಕ್ಕೆ ಅಚಲ್ಯನ ಮಗನಾದ ಶಾಫಾನನನ್ನೂ, ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ, ರಾಜಲೇಖಕನಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
योशीयाने राज्याची सूत्रे हाती घेतल्याच्या अठराव्या वर्षी शाफान, मासेया, आणि योवाह यांना परमेश्वर देवाचे मंदिर दुरुस्तीसाठी पाठवले. शाफानच्या पित्याचे नाव असल्या, मासेया हा नगराचा कारभारी होता आणि योवाहाचे पिता योवाहाज. योवाह हा बखरकार होता. यहूदा आणि मंदिर यांच्या शुद्धीकरणासाठी मंदिराच्या डागडुजीचे हे काम योशीयाने अंगावर घेतले.
9 ಇವರು ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಜನರಿಂದಲೂ, ಇಸ್ರಾಯೇಲಿನ ಉಳಿದವರಿಂದಲೂ, ಯೆಹೂದ ಬೆನ್ಯಾಮೀನರಿಂದಲೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಂದಲೂ ಕೂಡಿಸಿದ ಹಣವನ್ನು ತೆಗೆದುಕೊಂಡು ದೇವರ ಆಲಯಕ್ಕೆ ತಂದು ಮಹಾಯಾಜಕನಾದ ಹಿಲ್ಕೀಯನಿಗೆ ಕೊಟ್ಟರು.
ही माणसे हिल्कीया या मुख्य याजकाकडे गेली. मनश्शे, एफ्राइम आणि उर्वरित सर्व इस्राएलातून लोकांनी देवाच्या मंदिरासाठी दिलेला पैसा लेवी द्वारपालांनी जमा केला होता. सर्व यहूदा प्रांत, बन्यामिनचा प्रदेश आणि यरूशलेमेतून देखील त्यांनी पैसे जमा केले होते. ही रक्कम हिल्कीयाकडे त्यांनी सुपूर्त केली.
10 ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಯೆಹೋವ ದೇವರ ಆಲಯವನ್ನು ಭದ್ರಮಾಡಿ, ದುರಸ್ತಿ ಮಾಡುವವರಿಗೆ ಅದನ್ನು ಕೊಟ್ಟರು.
१०मग, परमेश्वराच्या मंदिराच्या बांधकामावर देखरेख करणाऱ्यांना लेवींनी हे पैसे दिले आणि परमेश्वराच्या मंदिराची दुरुस्ती करण्यासाठी कामगारांना दिले.
11 ಕೆತ್ತಿದ ಕಲ್ಲುಗಳನ್ನೂ, ತೊಲೆಗಳಿಗೋಸ್ಕರ ಮರಗಳನ್ನೂ, ಯೆಹೂದದ ಅರಸರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಹಲಿಗೆಗಳನ್ನು ಕೊಂಡುಕೊಳ್ಳಲೂ, ಬಡಗಿಯರಿಗೂ, ಕಲ್ಲುಕೆಲಸದವರಿಗೂ ಆ ಹಣವನ್ನು ಕೊಟ್ಟರು.
११तासलेले चिरे, लाकूड यांच्या खरेदीसाठी गवंडी, सुतार या लोकांस पैसे देण्यात आले. मंदिराच्या दुरुस्तीसाठी आणि कडीपाटासाठी लाकूड लागले. यहूदाचा राजांनी यापूर्वी मंदिराची योग्य देखभाल न केल्यामुळे मंदिराच्या इमारती जीर्ण झाल्या होत्या.
12 ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿದರು. ಅವರ ವಿಚಾರಣೆಯ ಮೇಲ್ವಿಚಾರಕರು ಯಾರೆಂದರೆ ಮೆರಾರೀಯ ಪುತ್ರರಲ್ಲಿ ಲೇವಿಯರಾದ ಯಹಾತನೂ, ಓಬದ್ಯನೂ; ಕೊಹಾತ್ಯರ ಮಕ್ಕಳಲ್ಲಿ ಜೆಕರ್ಯನೂ, ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವರಾದ ಲೇವಿಯರೆಲ್ಲರೂ ಅದನ್ನು ನಡೆಸುತ್ತಾ ಇದ್ದರು.
१२कामगारांनी मन लावून काम केले. यहथ व ओबद्या हे मरारी कुळातील लेवी देखरेख करत होते. कहाथी वंशातील जखऱ्या आणि मशुल्लाम हे ही देखरेखीच्या कामावर होते. वाद्ये वाजवण्यात निपुण असलेले लेवीसुध्दा होते.
13 ಇದಲ್ಲದೆ ಕಾರ್ಮಿಕರ ಮೇಲೆಯೂ, ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ಮೇಲ್ವಿಚಾರಕರಾಗಿದ್ದರು. ಲೇವಿಯರಲ್ಲಿ ಕೆಲವರು ಕಾರ್ಯದರ್ಶಿಗಳೂ, ಬರಹಗಾರರೂ, ದ್ವಾರಪಾಲಕರೂ ಆಗಿದ್ದರು.
१३ते कारागिरांवर आणि मजुरांवर देखरेख करत होते. चिटणीस, कारभारी आणि द्वारपाल म्हणून काही लेवी काम करत होते.
14 ಯೆಹೋವ ದೇವರ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತೆಗೆದುಕೊಂಡು ಬರುವಾಗ, ಯಾಜಕನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಯೆಹೋವ ದೇವರ ನಿಯಮದ ಗ್ರಂಥವನ್ನು ಕಂಡುಕೊಂಡನು.
१४परमेश्वराच्या मंदिरातील पैसा लेवी बाहेर आणत असताना हिल्कीया या याजकाला मोशेद्वारे आलेला नियमशास्त्राचा ग्रंथ सापडला.
15 ಆಗ ಹಿಲ್ಕೀಯನು ಉತ್ತರಕೊಟ್ಟು ಕಾರ್ಯದರ್ಶಿಯಾದ ಶಾಫಾನನಿಗೆ, “ಯೆಹೋವ ದೇವರ ಆಲಯದಲ್ಲಿ ನಿಯಮ ಗ್ರಂಥವು ನನಗೆ ಸಿಕ್ಕಿತು,” ಎಂದು ಹೇಳಿದನು. ಹಿಲ್ಕೀಯನು ಆ ಗ್ರಂಥವನ್ನು ಶಾಫಾನನಿಗೆ ಒಪ್ಪಿಸಿದನು.
१५हिल्कीयाने शाफान चिटणीसास असे सांगितले कि, “परमेश्वराच्या मंदिरात मला नियमशास्त्राचा ग्रंथ सापडला आहे.” मग हिल्कीयाने शाफानाला तो ग्रंथ दिला.
16 ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡುಹೋಗಿ, ಅರಸನಿಗೆ ಈ ಮಾತನ್ನು ತಿರುಗಿ ಹೇಳಿದನು. “ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಿದ್ದಾರೆ.
१६शाफानने तो योशीयाकडे आणला. राजाला तो म्हणाला, “तुझे सेवक तुझ्या आज्ञेप्रमाणे वागत आहेत.
17 ಇದಲ್ಲದೆ ಅವರು ಯೆಹೋವ ದೇವರ ಆಲಯದಲ್ಲಿ ದೊರಕಿದ ಹಣವನ್ನು ತೆಗೆದು ಮೇಲ್ವಿಚಾರಕರ ಕೈಯಲ್ಲಿ ಮತ್ತು ಕೆಲಸದವರ ಕೈಯಲ್ಲಿ ಒಪ್ಪಿಸಿದ್ದಾರೆ.
१७परमेश्वराच्या मंदिरातील पैसा घेऊन त्यातून ते देखरेख करणाऱ्यांना आणि मजुरांना वेतन देत आहेत”
18 ಕಾರ್ಯದರ್ಶಿಯಾದ ಶಾಫಾನನು ಅರಸನಿಗೆ ಯಾಜಕನಾದ ಹಿಲ್ಕೀಯನು ನನಗೆ ಗ್ರಂಥವನ್ನು ಕೊಟ್ಟಿದ್ದಾನೆ,” ಎಂದು ತಿಳಿಸಿದನು. ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು.
१८शाफान पुढे राजाला म्हणाला, “याजक हिल्कीयाने मला हे पुस्तक दिले आहे.” शाफानने मग राजाला पुस्तकातील मजकूर वाचून दाखवला.
19 ಅರಸನು ದೇವರ ನಿಯಮದ ವಾಕ್ಯಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.
१९तो नियमशास्त्रग्रंथ ऐकत असता राजा योशीयाने आपले कपडे फाडले.
20 ಹಿಲ್ಕೀಯನಿಗೂ, ಶಾಫಾನನ ಮಗನಾದ ಅಹೀಕಾಮನಿಗೂ, ಮೀಕನ ಮಗನಾದ ಅಬ್ದೋನನಿಗೂ, ಕಾರ್ಯದರ್ಶಿಯಾದ ಶಾಫಾನನಿಗೂ, ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ,
२०आणि हिल्कीया, शाफानचा पुत्र अहीकाम, मीखाचा पुत्र अब्दोन, चिटणीस शाफान आणि आपला सेवक असाया यांना योशीयाने आज्ञा केली की.
21 “ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಇಸ್ರಾಯೇಲ್ ಮತ್ತು ಯೆಹೂದದಲ್ಲಿ ಉಳಿದವರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ನಮ್ಮ ಮೇಲೆ ಸುರಿದ ಯೆಹೋವ ದೇವರ ಕೋಪವು ದೊಡ್ಡದಾಗಿದೆ,” ಎಂದು ಹೇಳಿದನು.
२१“माझ्या आणि इस्राएल व यहूदा येथे आता शिल्लक असलेल्या लोकांच्या वतीने परमेश्वरास जाऊन विचारा. या पुस्तकातील वचनांविषयी त्यास विचारा. आपल्या पूर्वजांनी परमेश्वराचे म्हणणे न जुमानल्यामुळे परमेश्वराचा आपल्यावर कोप झाला आहे. आपल्या पूर्वजांचे वर्तन या पुस्तकातील वचनांना अनुसरुन नव्हते.”
22 ಆಗ ಹಿಲ್ಕೀಯನೂ ಅರಸನ ಜನರೂ ಹಸ್ರನ ಮಗನೂ ತೊಕ್ಹತನ ಮಗನೂ ಪ್ರವಾದಿನಿ ಹುಲ್ದಳ ಬಳಿಗೆ ಹೋಗಿ ವಿಚಾರಿಸಿದರು. ಆಕೆಯು ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ, ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು.
२२हिल्कीया आणि राजाचे सेवक हुल्दा नावाच्या संदेष्टीकडे गेले. हुल्दा ही शल्लूमची पत्नीशल्लूम ताकहतचा आणि ताकहत इस्त्राचा पुत्र. इस्त्रा राजाच्या वस्त्रागाराचा प्रमुख होता. हुल्दा यरूशलेमेच्या नवीन भागात राहत होती. हिल्कीया आणि राजाचे सेवकांनी तिला सर्व जे घडले ते सांगितले.
23 ಹುಲ್ದಳು ಅವರಿಗೆ, “ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಇಸ್ರಾಯೇಲ್ ದೇವರಾದ ಯೆಹೋವ ದೇವರ ಮಾತುಗಳನ್ನು ತಿಳಿಸಿರಿ:
२३हुल्दा त्यांना म्हणाली, “इस्राएलाचा परमेश्वर देव याचे म्हणणे असे आहे.” राजा योशीयाला म्हणावे:
24 ‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ, ಯೆಹೂದದ ಅರಸನ ಮುಂದೆ ಅವರು ಓದಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನೂ ಬರಮಾಡುವೆನು.
२४परमेश्वर म्हणतो, “या प्रदेशावर आणि इथे राहणाऱ्या लोकांवर मी कोप आणणार आहे.” यहूदाच्या राजाला जे पुस्तक वाचून दाखवण्यात आले. त्यातील मजकुरात आहेत ती सर्व संकटे त्यांच्यावर ओढवतील.
25 ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಯುವುದು, ಅದು ಆರಿಹೋಗುವುದಿಲ್ಲ.’
२५माझ्याकडे पाठ फिरवून इतर देवतांपुढे त्यांनी धूप जाळला म्हणून मी असे करणार आहे. आपल्या दुष्कृत्यांमुळे लोकांनी मला सतंप्त केले आहे. या क्रोधाचा अंगार त्यांच्यावर बरसेल आणि तो शांत होणार नाही.
26 ಆದರೆ ಯೆಹೋವ ದೇವರನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ, ‘ನೀವು ಕೇಳಿದ ಮಾತುಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ,
२६पण यहूदाचा राजा योशीया याला सांग, त्यानेच तुला माझ्याकडे पाठवले आहे की तू नुकतेच जे ऐकलेस त्याविषयी इस्राएलाचा परमेश्वर देव म्हणतो:
27 ಈ ಸ್ಥಳಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ, ನಿನ್ನನ್ನು ನನ್ನ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ, ನಾನು ನಿನ್ನ ಮೊರೆಯನ್ನು ಕೇಳಿದೆನು,
२७योशीयाने, पश्चातापाने देवासमोर विनम्र झाला. खेदाने आपले कपडे फाडलेस. तू रडलास. तू मृदू अंत: करणाचा असल्यामुळे
28 ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು. ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು.
२८तुझ्या पूर्वजांकडे मी तुला नेईन. तुला शांत मरण येईल. या प्रदेशावर आणि लोकांवर जी संकटे कोसळतील ती तुला पाहायला लागणार नाहीत. हिल्कीया आणि राजाचे सेवक यासर्वांनी हा निरोप राजाला येऊन सांगितला.
29 ಅನಂತರ ಅರಸನಾದ ಯೋಷೀಯನು ಯೆಹೂದದ, ಯೆರೂಸಲೇಮಿನ ಹಿರಿಯರೆಲ್ಲರನ್ನು ಕರೆಕಳುಹಿಸಿ ತನ್ನ ಬಳಿಯಲ್ಲಿ ಒಟ್ಟಾಗಿ ಕೂಡಿಸಿದನು.
२९तेव्हा राजा योशीयाने यहूदा आणि यरूशलेममधील सर्व वयोवृद्धांना भेटीसाठी एकत्र बोलावले.
30 ಆಗ ಅರಸನೂ ಅವನ ಸಂಗಡ ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ ಯಾಜಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಯೆಹೋವ ದೇವರ ಆಲಯಕ್ಕೆ ಹೋದರು. ಅರಸನು ಯೆಹೋವ ದೇವರ ಆಲಯದಲ್ಲಿ ದೊರಕಿದ ಒಡಂಬಡಿಕೆಯ ಗ್ರಂಥದ ಮಾತುಗಳನ್ನೆಲ್ಲಾ ಅವರು ಕೇಳುವಂತೆ ಓದಿದನು.
३०राजा परमेश्वराच्या मंदिरात गेला. यहूदातील सर्व प्रजा, यरूशलेममधील सर्व थोर तसेच सामान्य माणसे, याजक आणि लेवी हे सर्व राजासोबत होते. परमेश्वराच्या मंदिरात सापडलेल्या कराराच्या ग्रंथातील सर्व वचने तेथे राजाने त्यांना वाचून दाखवली.
31 ಅರಸನು ತನ್ನ ಸ್ತಂಭದಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ದೇವರ ಸಾಕ್ಷಿಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ನೆರವೇರಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು.
३१मग राजा उभा राहिला. त्याने परमेश्वराशी करार केला. परमेश्वरास अनुसरायचे, त्याचे आज्ञा, नियम आणि विधी पाळायचे त्याने कबूल केले. हे सर्व त्याने मन: पूर्वक करायचे मान्य केले. नियमशास्त्रातील वचनांप्रमाणे वागायचे कबूल केले.
32 ಇದಲ್ಲದೆ ಅವನು ಯೆರೂಸಲೇಮಿನಲ್ಲಿಯೂ, ಬೆನ್ಯಾಮೀನಿನಲ್ಲಿಯೂ ಪ್ರತಿಯೊಬ್ಬರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.
३२मग त्याने यरूशलेम आणि बन्यामीन मधील लोकांसही या करारपालनात सामील करून घेतले. यरूशलेमचे लोक आपल्या पूर्वजांच्या देवाचा करार पाळू लागले.
33 ಹೀಗೆ ಯೋಷೀಯನು ಇಸ್ರಾಯೇಲರಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದುಹಾಕಿ, ಇಸ್ರಾಯೇಲಿನಲ್ಲಿ ಸಿಕ್ಕಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹಿಂಬಾಲಿಸುವುದನ್ನು ಬಿಡದೆ ಇದ್ದರು.
३३इस्राएलमध्ये वेगवेगळ्या देशांमधील विविध मूर्ती होत्या. पण त्या सर्व अनिष्ट मूर्ती योशीयाने फोडून तोडून टाकल्या. इस्राएल लोकांस त्याने परमेश्वर देवाची सेवा करायला लावले. आणि योशीया जिवंत असेपर्यंत लोक आपल्या पूर्वजांचा देव परमेश्वर याचीच उपासना करत होते.

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 34 >