< ಅರಸುಗಳು - ದ್ವಿತೀಯ ಭಾಗ 11 >

1 ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ಕಂಡಾಗ, ಅವಳು ಎದ್ದು ರಾಜಸಂತಾನದವರನ್ನೆಲ್ಲಾ ನಾಶಮಾಡಲು ಆರಂಭಿಸಿದಳು.
अहज्याची आई अथल्या हिने आपला मुलगा मरण पावला हे पाहिल्यावर, ती उठली आणि सर्व राजसंतानाची हत्या केली.
2 ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಆದ ಯೆಹೋಷೆಬಳು ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನು ಹತನಾಗದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯಳಿಗೆ ಕಾಣದ ಹಾಗೆ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು.
पण यहोशेबा, ही राजा योरामाची मुलगी आणि अहज्याची बहीण. योवाश हा राजाच्या अनेक मुलांपैकी एक. इतर मुलांची हत्या होत असताना यहोशेबाने योवाशाला बाजूला घेतले आणि आपल्या झोपायच्या खोलीत लपवून ठेवले. तिने योवाश आणि त्याची दाई यांना लपवले. यहोशेबा आणि ती दाई यांनी योवाशाला अथल्याच्या तावडीतून सोडवले म्हणून तो मारला गेला नाही.
3 ಹೀಗೆ ಅವನು ಯೆಹೋಷೆಬಳ ಸಂಗಡ ಆರು ವರ್ಷ ಯೆಹೋವ ದೇವರ ಆಲಯದಲ್ಲಿ ಗುಪ್ತವಾಗಿದ್ದನು, ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು.
योवाश आणि यहोशेबा परमेश्वराच्या मंदिरात सहा वर्षे लपून राहिले. आणि यहूदावर अथल्याचे राज्य होते.
4 ಏಳನೆಯ ವರ್ಷದಲ್ಲಿ ಯೆಹೋಯಾದಾವನು ಶತಾಧಿಪತಿಯಾದವರನ್ನೂ, ಕಾರಿ ಎಂಬ ಸಿಪಾಯಿಗಳ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯಿಸಿ, ತನ್ನ ಬಳಿಗೆ ಯೆಹೋವ ದೇವರ ಆಲಯಕ್ಕೆ ಕರೆದುಕೊಂಡು ಬಂದನು. ಅವರ ಸಂಗಡ ಒಡಂಬಡಿಕೆಯನ್ನು ಮಾಡಿ, ಯೆಹೋವ ದೇವರ ಆಲಯದಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು, ಅನಂತರ ಅವನಿಗೆ ಅರಸನ ಮಗನನ್ನು ತೋರಿಸಿದನು.
सातव्या वर्षी महायाजक यहोयादाने अधिकाऱ्यांना त्यांच्या हुजरे आणि पहारेकरी यांच्यासुद्धा बोलावून घेतले. आणि त्यांना आपल्याबरोबर परमेश्वराच्या मंदिरात नेले. यहोयादाने त्यांच्याशी शपथ व करार करून घेऊन, मग योवाश या राजपुत्राला त्यांच्यापुढे आणले.
5 ಅವರಿಗೆ, “ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ಅರಮನೆಯ ಕಾವಲುಗಾರರಾಗಿರಬೇಕು.
यहोयादाने त्यांना एक आज्ञा केली. तो म्हणाला, “तुम्हास आता मी सांगतो तसे करायचे आहे. प्रत्येक शब्बाथला तुमच्यापैकी एकतृतीयांश लोकांनी आत यायचे. राजाचे त्याच्या घरात तुम्ही संरक्षण करायचे.
6 ಇನ್ನೊಂದು ಭಾಗವು ಸೂರ್ ಎಂಬ ಬಾಗಿಲ ಬಳಿಯಲ್ಲಿಯೂ, ಮತ್ತೊಂದು ಭಾಗವು ಕಾವಲಿನ ಹಿಂದೆ ಇರುವ ಬಾಗಿಲ ಬಳಿಯಲ್ಲಿಯೂ ಇರಿ. ಹೀಗೆಯೇ ದೇವಾಲಯ ಕಾವಲು ಮುರಿಯದ ಹಾಗೆ ಅದನ್ನು ಕಾಯಿರಿ.
आणि दुसरे एकतृतीयांश लोकांच्या गटाने सूर वेशीवर थांबायचे आणि तिसऱ्या एकतृतीयांश गटाने पहारेकऱ्यांच्या मागे राहायचे.
7 ಇದಲ್ಲದೆ ಸಬ್ಬತ್ ದಿನದಲ್ಲಿ ಹೊರಡುವ ನಿಮ್ಮೆಲ್ಲರಲ್ಲಿ ಎರಡು ಭಾಗ ಯೆಹೋವ ದೇವರ ಆಲಯದಲ್ಲಿರುವ ಅರಸನನ್ನು ಕಾಯುವವರಾಗಿರಿ.
आणि शब्बाथ दिवसास जे सेवा करत नाही, असे दोन गट परमेश्वराच्या मंदिराचे रक्षण करतील आणि राजा योवाशाला संरक्षण देतील.
8 ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ಇರಬೇಕು. ಯಾವನಾದರೂ ನಿಮ್ಮ ಸಾಲುಗಳಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಆದರೆ ಅರಸನು ಹೊರಗೆ ಹೋಗುವಾಗಲೂ, ಒಳಗೆ ಬರುವಾಗಲೂ ನೀವು ಅವನ ಜೊತೆಯಲ್ಲಿಯೇ ಇರಬೇಕು,” ಎಂದು ಆಜ್ಞಾಪಿಸಿದನು.
राजा योवाश बाहेर जाईल व आत येईल, तिथे सतत तुम्ही त्याच्याबरोबर राहिले पाहिजे. तुम्ही त्याच्याभोवती कडे करावे व प्रत्येक पहारेकऱ्याच्या हातात शस्त्र असेल आणि कोणीही आपल्या फार जवळ आल्यास तुम्ही त्यास मारुन टाकावे.”
9 ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಪ್ರಕಾರ ಶತಾಧಿಪತಿಗಳು ಮಾಡಿದರು. ಪ್ರತಿ ಮನುಷ್ಯನು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಬರತಕ್ಕ ಸಿಪಾಯಿಗಳನ್ನು ಯೆಹೋಯಾದಾವನ ಬಳಿಗೆ ಕರೆದುಕೊಂಡು ಬಂದರು.
याजक यहोयादाने ज्या ज्या आज्ञा दिल्या त्या सर्वांचे त्या शताधीपतींनी पालन केले. प्रत्येक अधिकाऱ्याने आपल्या मनुष्यांना बरोबर घेतले. जी शब्बाथात आत येणारी होती आणि जी शब्बाथात बाहेर जाणारी होती हे सर्व लोक यहोयादाकडे गेले.
10 ಆಗ ಯಾಜಕನು ಯೆಹೋವ ದೇವರ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ, ಗುರಾಣಿಗಳನ್ನೂ ಶತಾಧಿಪತಿಗಳಿಗೆ ಕೊಟ್ಟನು.
१०याजक यहोयादाने शेकडो भाले आणि ढाली अधिकाऱ्यांच्या हवाली केल्या. दावीद राजाची परमेश्वराच्या मंदिरात ठेवलेली शस्त्रे ती हीच.
11 ಕಾವಲುಗಾರರಲ್ಲಿ ಪ್ರತಿ ಮನುಷ್ಯನು ತನ್ನ ಆಯುಧಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಬಳಿಯಲ್ಲಿಯೂ, ಆಲಯದ ಬಳಿಯಲ್ಲಿಯೂ, ಆಲಯದ ಬಲಗಡೆಯ ಮೊದಲುಗೊಂಡು, ಆಲಯದ ಎಡಗಡೆಯವರೆಗೂ ಅರಸನ ಸುತ್ತಲೂ ನಿಂತುಕೊಂಡರು.
११मंदिराच्या डाव्या टोकापासून उजव्या टोकापर्यंत हे रखवालदार हातात आपापली शस्त्रे घेऊन उभे राहिले. ते वेदी आणि मंदिर यांच्याभोवती तसेच राजा मंदिरात येई तेव्हा त्याच्या भोवती उभे राहत.
12 ಆಗ ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅರಸನನ್ನಾಗಿ ಮಾಡಿ ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು ಚಪ್ಪಾಳೆ ಹೊಡೆದು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.
१२मग यहोयादाने योवाशाला बाहेर काढले. त्यास त्यांनी मुकुट घातला आणि आज्ञापट दिला. मग त्यांनी त्यास राजा करून त्याचा अभिषेक केला व टाळ्या वाजवून त्यांनी “राजा चिरायू होवो” म्हणून जयघोष केला.
13 ಅತಲ್ಯಳು ಕಾವಲುಗಾರರ ಮತ್ತು ಜನರ ಶಬ್ದವನ್ನೂ ಕೇಳಿದಾಗ, ಯೆಹೋವ ದೇವರ ಆಲಯದಲ್ಲಿ ಜನರ ಬಳಿಗೆ ಬಂದಳು.
१३हुजऱ्यांचा आणि लोकांचा हा गलबला राणी अथल्याच्या कानावर गेला. तेव्हा ती परमेश्वराच्या मंदिरापाशी गेली.
14 ಅಲ್ಲಿ ಅರಸನು ಪದ್ಧತಿಯ ಪ್ರಕಾರ ಕಂಬದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.
१४राजाची रीतीप्रमाणे स्तंभाजवळ उभे रहायची जी जागा तिथे अथल्याने राजाला उभे असलेले पाहिले. नेते आणि लोक कर्णे वाजवीत आहेत हे ही तिने पाहिले. लोकांस खूप आनंद झालेला आहे हे तिच्या लक्षात आले. कर्ण्यांचा आवाज ऐकून तिने नाराजी प्रदर्शित करण्याकरता आपली वस्त्रे फाडली आणि ती “फितुरी! फितुरी!” म्हणून ओरडू लागली.
15 ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.
१५हुजऱ्यांवरील अधिकाऱ्यांना याजक यहोयादाने आज्ञा दिली, “अथल्याला मंदिराच्या आवाराबाहेर काढावे. तिच्या अनुयायांचा तलवारीने वध करावा. मात्र परमेश्वराच्या मंदिरात तो करु नये.”
16 ಆಗ ಅವರು ಅವಳನ್ನು ಅಧೀನಕ್ಕೆ ತೆಗೆದುಕೊಂಡು, ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಂದುಹಾಕಿದರು.
१६मग तिला जाण्यासाठी त्यांनी वाट केली व राज मंदीराकडे घोडे ज्या दारातून आत येत असत त्या दाराने तिला बाहेर काढून तिचा त्यांनी वध केला.
17 ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ಯೆಹೋವ ದೇವರಿಗೂ, ಅರಸನಿಗೂ, ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಹಾಗೆಯೇ ಅರಸನಿಗೂ, ಜನರಿಗೂ ಮಧ್ಯದಲ್ಲಿ ಒಡಂಬಡಿಕೆ ಮಾಡಿಸಿದನು.
१७यहोयादाने नंतर परमेश्वर, राजा आणि लोक यांच्यात करार केला. राजा आणि लोक या दोघांवरही परमेश्वराची सत्ता आहे, असे त्या करारात होते. यहोयादाने या खेरीज राजा आणि लोक यांच्यातही एक करार केला. राजाची लोकांबाबत असलेली कर्तव्ये त्यामध्ये होती. तसेच लोकांनी राजाचे आज्ञापालन आणि अनुयायित्व करावे असे त्यामध्ये म्हटले होते.
18 ದೇಶದ ಜನರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಆಗ ಯಾಜಕನಾದ ಯೆಹೋಯಾದಾವನು ಯೆಹೋವ ದೇವರ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು.
१८यानंतर लोक बाल या देवतेच्या देवळात गेले. त्यांनी बआलाच्या मूर्तीची तसेच तेथील वेद्यांची नासधूस, मोडतोड केली. त्यांचे तुकडे तुकडे केले बालाचा याजक मत्तान याला वेद्यांसमोरच लोकांनी ठार केले. याजक यहोयाद याने परमेश्वराच्या मंदिरावर पहारेकरी नेमले.
19 ಅವನು ಶತಾಧಿಪತಿಗಳನ್ನೂ, “ಕಾರಿ” ಎಂಬ ಸಿಪಾಯಿಗಳ ಅಧಿಕಾರಿಗಳನ್ನೂ, ಕಾವಲುಗಾರರನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕಾವಲುಗಾರರ ಬಾಗಿಲ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಬಂದು, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
१९सर्व लोकांस घेऊन तो परमेश्वराच्या मंदिराकडून राजाच्या निवासस्थानी गेला. राजाचे विशेष हुजरे, सुरक्षा सैनिक आणि अधिकारी राजाबरोबर होते. त्यांच्यापाठोपाठ बाकीचे लोक गेले. राजमहालाच्या प्रवेशद्वारापर्यंत ते गेले. राजा योवाश मग सिंहासनावर बसला.
20 ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಖಡ್ಗದಿಂದ ಕೊಂದುಹಾಕಿದ್ದರಿಂದ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
२०लोक आनंदात होते आणि नगरात शांतता नांदत होती. राणी अथल्याला राजाच्या महालात तलवारीने मारले.
21 ಯೋವಾಷ್ ಅರಸನಾದಾಗ ಏಳು ವರ್ಷದವನಾಗಿದ್ದನು.
२१योवाश राजा झाला तेव्हा सात वर्षांचा होता.

< ಅರಸುಗಳು - ದ್ವಿತೀಯ ಭಾಗ 11 >