< ಅರಸುಗಳು - ದ್ವಿತೀಯ ಭಾಗ 20 >

1 ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನಾದ ಪ್ರವಾದಿ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ, ಏಕೆಂದರೆ ನೀನು ಬದುಕದೆ ಸಾಯುವೆ, ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.
याच सुमारास हिज्कीया आजारी पडून मरणास टेकला. तेव्हा आमोजचा मुलगा यशया हा संदेष्टा त्याच्याकडे येऊन म्हणाला, “परमेश्वराचे म्हणणे आहे, ‘तुझ्या घराची तू व्यवस्था कर, कारण तू मरणार, वाचणार नाहीस.”
2 ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ,
तेव्हा हिज्कीयाने आपले तोंड भिंतीकडे वळवले आणि परमेश्वराची प्रार्थना करून तो म्हणाला.
3 “ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.
“परमेश्वरा, मी तुझी मन: पूर्वक सेवा केली आहे हे लक्षात असू दे. तुझ्या दृष्टीने जे उचित तेच मी केले.” तेव्हा हिज्कीया फार रडला.
4 ಯೆಶಾಯನು ಅರಮನೆಯ ಆವರಣದ ಮಧ್ಯಕ್ಕೆ ಹೋಗುವ ಮುಂಚೆ ಯೆಹೋವ ದೇವರ ವಾಕ್ಯವು ಅವನಿಗೆ ಬಂದಿತು,
यशया मधला चौक ओलांडून शहराच्या बाहेर जाण्यापूर्वी पुन्हा त्यास परमेश्वराचे शब्द ऐकू आले. परमेश्वर म्हणाला,
5 ದೇವರು ಅವನಿಗೆ, “ನೀನು ಹಿಂದಿರುಗಿ ಹೋಗಿ ನನ್ನ ಜನರ ನಾಯಕನಾದ ಹಿಜ್ಕೀಯನಿಗೆ, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ. ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆ.
“पुन्हा मागे फिर आणि माझ्या प्रजेचा नेता हिज्कीया याच्याशी बोल.” त्यास म्हणावे, “तुझा पूर्वज दावीद याचा परमेश्वर देव म्हणतो: तुझी प्रार्थना मी ऐकली आहे आणि तुझे अश्रू पाहिले आहेत. तेव्हा मी तुला बरे करतो, तिसऱ्या दिवशी तू परमेश्वराचे मंदिर चढून जाशील.
6 ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಾಗಿ ಕೂಡಿಸುತ್ತೇನೆ. ನಿನ್ನನ್ನೂ, ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಯಿಂದ ಬಿಡಿಸುವೆನು. ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ, ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನು,’ ಎಂದು ಹೇಳು,” ಎಂದರು.
तुला मी आणखी पंधरा वर्ष आयुष्य दिले आहे. अश्शूरच्या राजाच्या हातून तुझी आणि या नगराची मी सोडवणूक करीन. या नगराचे मी रक्षण करीन स्वत: साठी तसेच माझा सेवक दावीद याला मी दिलेल्या वचनासाठी मी हे करीन.”
7 ಆಗ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತೆಗೆದುಕೊಂಡು ಬರಲು ಹೇಳಿದ್ದನು. ಅವರು ಹಾಗೆಯೇ ತೆಗೆದುಕೊಂಡು ಬಂದು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣಹೊಂದಿದನು.
मग यशया म्हणाला, “अंजीराचे मिश्रण करुन ते याच्या दुखऱ्या भागावर लावा.” तेव्हा त्यांनी अंजीरांचे मिश्रण करून हिज्कीयाच्या दुखऱ्या भागावर त्याचा लेप दिला. तेव्हा हिज्कीया बरा झाला.
8 ಹಿಜ್ಕೀಯನು ಯೆಶಾಯನಿಗೆ, “ಯೆಹೋವ ದೇವರು ನನ್ನನ್ನು ಸ್ವಸ್ಥಮಾಡುವರೆಂಬುದಕ್ಕೆ ಮತ್ತು ನಾನು ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆನೆಂಬುದಕ್ಕೆ ನನಗೆ ಗುರುತೇನು?” ಎಂದು ಕೇಳಿದನು.
हिज्कीया यशयाला म्हणाला, “परमेश्वराच्या कृपेने माझ्या प्रकृतीला उतार पडेल आणि तिसऱ्या दिवशी मी परमेश्वराचे मंदिर चढू शकेन याबद्दल काही खूण देता येईल का?”
9 ಯೆಶಾಯನು, “ಯೆಹೋವ ದೇವರು, ತಾವು ಹೇಳಿದ ಕಾರ್ಯವನ್ನು ಮಾಡುವರೆಂಬುದಕ್ಕೆ ಯೆಹೋವ ದೇವರ ಕಡೆಯಿಂದ ನಿನಗೆ ಉಂಟಾಗುವ ಗುರುತು, ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಬರಬೇಕೋ?” ಎಂದು ಕೇಳಿದನು.
यशया म्हणाला, “तुला काय हवे बोल. सावली दहा पावले पुढे जाऊ किंवा मागे येऊ दे? परमेश्वराने तुझ्या बाबतीत जे घडेल असे कबूल केले आहे त्याची ही खूण आहे.”
10 ಅದಕ್ಕೆ ಹಿಜ್ಕೀಯನು, “ನೆರಳು ಹತ್ತು ಮೆಟ್ಟಲು ಮುಂದೆ ಹೋಗುವುದು ಸಾಮಾನ್ಯ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡು,” ಎಂದನು.
१०हिज्कीया म्हणाला, “सावली दहा पावले पुढे जाणे स्वाभाविक आहे. तेव्हा तसे नको, ती दहा पावले मागे यावी.”
11 ಆಗ ಪ್ರವಾದಿಯಾದ ಯೆಶಾಯನು ಯೆಹೋವ ದೇವರಿಗೆ ಮೊರೆಯಿಟ್ಟದ್ದರಿಂದ, ದೇವರು ಆಹಾಜನ ಮೆಟ್ಟಲುಗಳಲ್ಲಿ ಇಳಿದು ಹೋದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದರು.
११मग यशया संदेष्ट्याने परमेश्वराची प्रार्थना केली याप्रकारे परमेश्वराने आहाजाची सावली दहा पावले मागे घेतली. जिथून ती पुढे गेली होती तिथेच ती पूर्ववत आली.
12 ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬಿಲೋನಿನ ಅರಸನೂ ಆದ ಮೆರೋದಕ್ ಬಲದಾನ್ ಎಂಬವನು, ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿದ್ದರಿಂದ ಪತ್ರಗಳನ್ನೂ, ಉಡುಗೊರೆಗಳನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು.
१२यावेळी बलदानचा मुलगा बरोदख-बलदान हा बाबेलचा राजा होता. त्याने हिज्कीयाकडे पत्रे आणि भेटवस्तू पाठवल्या. हिज्कीया आजारी असल्याचे त्याने ऐकले होते.
13 ಹಿಜ್ಕೀಯನು ಅವರ ಮಾತು ಕೇಳಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳ ತೈಲ ಮೊದಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ, ಆಯುಧ ಶಾಲೆಯನ್ನೂ, ತನ್ನ ಭಂಡಾರದಲ್ಲಿ ಇರುವುದೆಲ್ಲವನ್ನೂ ತೋರಿಸಿದನು. ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ, ತನ್ನ ಸಮಸ್ತ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
१३हिज्कीयाने त्याच्याकडून आलेल्या मनुष्यांचे आगतस्वागत केले. त्यांना आपल्या घरातील सर्व मौल्यवान वस्तू दाखवल्या. सोने, चांदी, मसाल्याचे पदार्थ, किंमती अत्तरे, शस्त्रास्त्रे असा आपला सर्व खजिना त्यांना दाखवला. आपल्या घरातील आणि राज्यातील कोणतीही गोष्ट त्याने त्यांना दाखवायची शिल्लक ठेवली नाही.
14 ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಂದ ಬಂದವರು ಮತ್ತು ಅವರು ನಿನಗೆ ಏನು ಹೇಳಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ಬಹುದೂರ ದೇಶವಾದ ಬಾಬಿಲೋನಿನಿಂದ ಬಂದವರು,” ಎಂದು ಹೇಳಿದನು.
१४तेव्हा यशया संदेष्टा राजाकडे येऊन म्हणाला, “हे लोक कोण? त्यांचे काय म्हणणे आहे?” हिज्कीया म्हणाला, “हे फार लांबच्या प्रांतातून बाबेलमधून आले आहेत.”
15 ಅದಕ್ಕೆ ಯೆಶಾಯನು ಪುನಃ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ನನ್ನ ಅರಮನೆಯಲ್ಲಿ ಇರುವುದೆಲ್ಲವನ್ನು ಅವರು ನೋಡಿದರು, ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇಲ್ಲ,” ಎಂದು ಉತ್ತರಕೊಟ್ಟನು.
१५यशयाने विचारले, “त्यांनी या घरातले काय काय पाहिले?” हिज्कीयाने सांगितले, “त्यांनी सगळेच पाहिले. माझे सगळे भांडार मी त्यांच्यापुढे उघडे केले.”
16 ಆಗ ಯೆಶಾಯನು ಹಿಜ್ಕೀಯನಿಗೆ, “ಯೆಹೋವ ದೇವರ ವಾಕ್ಯವನ್ನು ಕೇಳು:
१६तेव्हा यशया हिज्कीयाला म्हणाला, “आता परमेश्वराचा हा निरोप ऐक.
17 ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ನಿನ್ನ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಕೊಂಡೊಯ್ಯುವ ದಿವಸ ಬರುವುದು. ಇಲ್ಲಿ ಏನೂ ಉಳಿಯುವುದಿಲ್ಲ.
१७तुझ्या घरातील सर्व चीजवस्तू आणि तुझ्या पूर्वजांनी जमवलेले सर्व धन आत्ता बाबेलला नेण्यात येईल. ती वेळ आता येऊन ठेपली आहे. काही म्हणता काही मागे उरणार नाही. ही परमेश्वराची वाणी आहे.
18 ಬಾಬಿಲೋನಿನವರು ನಿನ್ನಿಂದ ಹುಟ್ಟುವಂಥ, ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು, ಅವರು ಬಾಬಿಲೋನಿನ ರಾಜನ ಅರಮನೆಯಲ್ಲಿ ಕಂಚುಕಿಗಳಾಗಿರುವರು,” ಎಂದನು.
१८बाबेलचे लोक तुझ्या मुलांना घेऊन जातील. ती मुले बाबेलच्या राजवाड्यात खोजे बनून राहतील.”
19 ಆಗ ಹಿಜ್ಕೀಯನು, “ನೀನು ಹೇಳಿದ ಯೆಹೋವ ದೇವರ ವಾಕ್ಯವು ಒಳ್ಳೆಯದೇ,” ಎಂದು ಯೆಶಾಯನಿಗೆ ಹೇಳಿದನು. ಅವನು, ಹೇಗೂ ನನ್ನ ಜೀವಮಾನದಲ್ಲಿ ಸಮಾಧಾನವು, ಭದ್ರತೆಯೂ ಇರುವುವು, ಎಂದುಕೊಂಡನು.
१९तेव्हा हिज्कीया यशयाला म्हणाला, “परमेश्वराचे म्हणणे योग्यच आहे.” तो पुढे म्हणाला, “निदान माझ्या कारकिर्दीत तरी शांतता लाभेल ना?”
20 ಹಿಜ್ಕೀಯನ ಇತರ ಕಾರ್ಯಗಳೂ, ಅವನ ಸಮಸ್ತ ಪರಾಕ್ರಮವೂ ಅವನು ಕೆರೆ ಮತ್ತು ಕಾಲುವೆಗಳನ್ನು ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರಮಾಡಿದ್ದೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
२०शहराला पाणीपुरवठा करणारी तळी आणि कालवे यांच्यासकट हिज्कीयाने जी कामगिरी बजावली तिची नोंद यहूदाच्या राजांचा इतिहास या पुस्तकात आहे.
21 ಹಿಜ್ಕೀಯನು ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಮಗ ಮನಸ್ಸೆಯು ಅವನಿಗೆ ಬದಲಾಗಿ ಅರಸನಾದನು.
२१हिज्कीया निधन पावला आणि त्याचा पूर्वजांशेजारी त्याचे दफन झाले. त्याचा मुलगा मनश्शे गादीवर आला.

< ಅರಸುಗಳು - ದ್ವಿತೀಯ ಭಾಗ 20 >