< ಅರಸುಗಳು - ದ್ವಿತೀಯ ಭಾಗ 25 >

1 ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯ ಸಮೇತ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿಸಿದನು.
सिद्कीयाने बाबेलाच्या राजाविरुध्द बंड केले आणि त्याच्या आज्ञा पाळण्याचे त्याने नाकारले. त्यामुळे बाबेलचा राजा नबुखद्नेस्सर आपल्या सैन्यासह यरूशलेमेवर चाल करून गेला. सिद्कीयाच्या कारकिर्दीचे ते नववे वर्ष, दहावा महिना, दहावा दिवस होता. नबुखद्नेस्सरच्या सैन्याने यरूशलेमेला वेढा देऊन लोकांचे येणे जाणे रोखले. मग त्याने नगराभोवती कचऱ्याचे अडसर निर्माण केले.
2 ಅರಸನಾದ ಚಿದ್ಕೀಯನ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆಹಾಕಿದನು.
सिद्कीया राजाच्या कारकिर्दीचे अकरावे वर्ष उजाडेपर्यंत या नगराला वेढा चालू राहिला.
3 ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣದಲ್ಲಿ ಕ್ಷಾಮವು ಬಲವಾದದ್ದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.
दुष्काळाने परिस्थिती बिकट झाली होती. चौथ्या महिन्याच्या नवव्या दिवसापर्यंत नगरातील सामान्य मनुष्याची अन्नान्नदशा झाली.
4 ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
मग नगराच्या तटाला एक खिंड पाडण्यात आली; दोन्ही तटांच्यामध्ये जी वेस राजाच्या बागेजवळ होती त्या वाटेने सर्व योद्धे रातोरात पळून गेले; नगरास खास्द्यांचा वेढा पडलाच होता; इकडे राजाने अराबाचा रस्ता धरला.
5 ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಅವನನ್ನು ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.
खास्दी सैन्याने राजाचा पाठलाग केला आणि त्यांना यरीहोजवळ गाठले. तेव्हा सिद्कीयाचे सैन्य त्यास एकटा सोडून पळून गेले.
6 ಅವರು ಅರಸನನ್ನು ಹಿಡಿದುಕೊಂಡರು. ರಿಬ್ಲದಲ್ಲಿರುವ ಬಾಬಿಲೋನಿನ ಅರಸನ ಬಳಿಗೆ ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.
बाबेल देशाच्या लोकांनी राजा सिद्कीयाला धरुन रिब्ला येथे आपल्या राजाकडे नेले. या लोकांनी सिद्कीयाला जबर शासन करण्याचे ठरवले.
7 ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದರು. ತರುವಾಯ ಅವನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ ಅವನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.
त्यांनी सिद्कीयाच्या मुलांना त्याच्या नजरेसमोर जिवे मारले. नंतर सिद्कीयाचे डोळे काढले आणि त्यास जेरबंद करून बाबेलला नेले.
8 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದ ಐದನೆಯ ತಿಂಗಳಿನ, ಏಳನೆಯ ದಿನದಲ್ಲಿ ಬಾಬಿಲೋನಿನ ಅರಸನ ಸೇವಕನೂ, ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದು,
बाबेलचा राजा नबुखद्नेस्सर याच्या कारकिर्दीच्या एकोणिसाव्या वर्षी, पाचव्या महिन्यात सातव्या दिवशी नबूजरदान यरूशलेमेवर चाल करून आला. नबुजरदान हा राजाच्या उत्तम, निवडक सैन्याचा नायक होता.
9 ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.
या नबुजरदानने परमेश्वराचे मंदिर, राजवाडा आणि यरूशलेममधील सर्व घरे जाळून टाकली. मोठमोठे वाडेही त्याने उद्ध्वस्त केले.
10 ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಬಾಬಿಲೋನಿಯರ ಸೈನ್ಯದವರೆಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆಗಳನ್ನು ಕೆಡವಿಬಿಟ್ಟರು.
१०मग खास्दी सैन्याने यरूशलेमची तटबंदी पाडली.
11 ಕಾವಲಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು.
११नगरात अजून असलेले लोक बाबेलाच्या राज्याकडे फितून गेलेले लोक व उरलेले लोक यांना गारद्यांचा नायक नबूजरदानाने ताब्यात घेतले आणि त्यांच्यापैकी जे शरण यायला तयार होते त्यांच्यासह सर्वांना कैदी म्हणून नेले.
12 ಆದರೆ ಕಾವಲಿನ ಅಧಿಪತಿಯು ಹೊಲಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಬೇಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.
१२अगदीच दरिद्री लोकांस तेवढे त्याने तेथेच राहू दिले. द्राक्षमळे आणि शेतीची देखभाल करण्यासाठी त्याने त्यांना तिथे ठेवले.
13 ಯೆಹೋವ ದೇವರ ಆಲಯದಲ್ಲಿದ್ದ ಕಂಚಿನ ಸ್ತಂಭಗಳನ್ನೂ, ಪೀಠಗಳನ್ನೂ, ಕಂಚಿನ ಸಮುದ್ರವೆಂಬ ಪಾತ್ರೆಯನ್ನೂ ಬಾಬಿಲೋನಿಯರು ಒಡೆದುಹಾಕಿ, ಅದರ ಕಂಚನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.
१३परमेश्वराच्या मंदिरातील सर्व पितळी पात्रांची खास्दी सैन्याने मोडतोड केली. पितळी खांब, ढकलगाड्या, मोठमोठी पितळी घंगाळी यांची मोडतोड करून ते पितळ त्यांनी बाबेलला नेले.
14 ಇದಲ್ಲದೆ ಅವರು ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು ಮತ್ತು ಸಮಸ್ತ ಕಂಚಿನ ಸಲಕರಣೆಗಳನ್ನೂ ತೆಗೆದುಕೊಂಡು ಹೋದರು.
१४इतर पात्रे, फावडी, वाती कापण्याच्या कात्र्या, पळ्या, पितळी थाळ्या ही परमेश्वराच्या मंदिरातली सर्व उपकरणेही त्यांनी घेतली.
15 ಕಾವಲುಗಾರರ ಅಧಿಪತಿಯು ಅಗ್ನಿ ಪಾತ್ರೆಗಳನ್ನೂ, ತಟ್ಟೆಗಳನ್ನೂ, ಬಂಗಾರ ಬೆಳ್ಳಿಗಳಿಂದ ಮಾಡಿದ ಎಲ್ಲವನ್ನೂ ತೆಗೆದುಕೊಂಡನು.
१५अग्नीपात्रे, वाडगे, सोने-चांदीच्या लोभापायी सोन्यारुप्याची भांडीही नबुजरदानने हस्तगत केली.
16 ಸೊಲೊಮೋನನು ಯೆಹೋವ ದೇವರ ಆಲಯಕ್ಕಾಗಿ ಮಾಡಿಸಿದ್ದ ಎರಡು ಕಂಬಗಳು, ಕಂಚಿನ ಸಮುದ್ರವೆಂಬ ಪಾತ್ರೆ, ಚಕ್ರದ ಬಂಡಿಗಳು, ಇವುಗಳನ್ನು ಮಾಡುವುದಕ್ಕೆ ತೂಕ ಮಾಡಲಾರದಷ್ಟು ಕಂಚು ಹಿಡಿದಿತ್ತು.
१६अशाप्रकारे, नबुजरदानने बळकावलेल्या वस्तू दोन पितळी स्तंभ. एक मोठे पितळी घंगाळ परमेश्वराच्या मंदिरासाठी शलमोनने करवून घेतलेल्या ढकलगाड्या, यांत इतके पितळ होते की त्याचे वजन करणे शक्य नव्हते.
17 ಪ್ರತಿಯೊಂದು ಕಂಬ ಎಂಟು ಮೀಟರ್ ಎತ್ತರವಿತ್ತು. ಪ್ರತಿಯೊಂದರ ಮೇಲೆ ಸುಮಾರು ಒಂದೂವರೆ ಮೀಟರ್ ಎತ್ತರವಾದ ಒಂದು ಕಂಚಿನ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ಕಂಚಿನ ಜಾಲರಿ ಹಾಗೂ ದಾಳಿಂಬೆ ಹಣ್ಣುಗಳು ಇದ್ದವು.
१७प्रत्येक स्तंभाची उंची सत्तावीस फूट त्यावरील कळस साडेचार फूट उंचीचे तेही पितळी असून त्यावर जाळीकाम आणि डाळिंबाची नक्षी होती, दोन्ही स्तंभ अगदी सारखेच होते.
18 ಕಾವಲುಗಾರರ ಅಧಿಪತಿಯು ಮುಖ್ಯಯಾಜಕನಾದ ಸೆರಾಯನನ್ನೂ, ಎರಡನೆಯ ಯಾಜಕನಾದ ಚೆಫನ್ಯನನ್ನೂ, ಮೂವರು ದ್ವಾರಪಾಲಕರನ್ನೂ ಹಿಡಿದುಕೊಂಡು ಹೋದನು.
१८नबुजरदानने लोकांस मंदिरातून खाली नेले व मुख्य याजक सराया दुय्यम याजक सफन्या आणि तीन द्वारपाल
19 ಇದಲ್ಲದೆ ಪಟ್ಟಣದೊಳಗಿಂದ ಸೈನಿಕರ ಮೇಲಿದ್ದ ಒಬ್ಬ ಅಧಿಕಾರಿಯನ್ನೂ, ಅರಸನ ಐದು ಮಂದಿ ಸಲಹೆಗಾರರನ್ನೂ, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಮಾಡುವ ಸೇನಾಧಿಪತಿಯ ಲೇಖಕನನ್ನೂ, ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶದ ಜನರಲ್ಲಿ ಅರವತ್ತು ಮಂದಿಯನ್ನೂ ತೆಗೆದುಕೊಂಡನು.
१९आणि शहरातून एक सैन्याधिकारी अजूनही नगरात असलेले राजाचे पांच सल्लागार सैन्याधिकाऱ्याचा सचिव. हा जनगणना प्रमुख असून सैनिकांची निवड करत असे. शहरात सापडलेली साठ माणसेही त्याने घेतली.
20 ಇವರನ್ನೆಲ್ಲಾ ಕಾವಲಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋಗಿ, ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು.
२०बाबेलातील रिब्ला येथे नबूजरदानाने या सर्वांना राजासमोर हजर केले.
21 ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.
२१बाबेलाच्या राजाने त्या सर्वांची हमाथ देशातील रिब्ला येथे हत्या केली. अशाप्रकारे यहूदी यांना आपल्या भूमीतून बंदीवान म्हणून जावे लागले.
22 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ, ಶಾಫಾನನ ಮೊಮ್ಮಗನೂ, ಅಹೀಕಾಮನ ಮಗನೂ ಆದ ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿದನು.
२२बाबेलचा राजा नबुखद्नेस्सरने काही लोकांस यहूदातच राहू दिले. त्यामध्ये एकजण होता त्याचे नाव गदल्या. हा अहीकामचा मुलगा आणि अहीकाम शाफानचा. या गदल्याला नबुखद्नेस्सरने यहूदा प्रांतावर अधिकारी म्हणून नेमले.
23 ಆದರೆ ಬಾಬಿಲೋನಿನ ಅರಸನು ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಕೇಳಿದ ಮೇಲೆ, ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ, ನೆತನ್ಯನ ಮಗ ಇಷ್ಮಾಯೇಲನೂ, ಕಾರೇಹನ ಮಗ ಯೋಹಾನಾನ್, ನೆಟೋಫದವನಾದ ತನ್ಹುಮೆತನ ಮಗ ಸೆರಾಯ್, ಮಾಕಾತ್ಯರಲ್ಲಿ ಒಬ್ಬನ ಮಗ ಯಾಜನ್ಯ, ಇವರೆಲ್ಲರೂ ತಮ್ಮ ಜನರಸಹಿತವಾಗಿ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.
२३नथन्याचा मुलगा इश्माएल, कारेहाचा मुलगा यहोहानान आणि नटोफाथी तन्हुमेथाचा मुलगा सराया व माकाथीचा मुलगा याजन्या हे सैन्यातील सरदार होते. त्यांनी बाबेलाच्या राजाने गदल्याला अधिकारी केल्याचे ऐकले म्हणून ते त्यास भेटायला मिस्पा येथे आले.
24 ಆಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ಬಾಬಿಲೋನಿಯದ ಸೈನಿಕರಿಗೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,” ಎಂದನು.
२४गदल्याने त्या सर्वांना शपथ दिली आणि तो त्यांना म्हणाला, “खास्दी अधिकाऱ्यांचे भय बाळगू नका. या देशातच राहून बाबेलाच्या राजाची सेवा करा, म्हणजे तुमचे भले होईल.”
25 ಆದರೆ ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಬಾಬಿಲೋನಿಯರನ್ನೂ ಕೊಂದುಹಾಕಿದರು.
२५अलीशामचा मुलगा नथन्या याचा मुलगा इश्माएल हा राजसंतानांपैकी होता. त्याने आणखी दहाजणांसमवेत सातव्या महिन्यात गदल्यावर हल्ला केला आणि सर्व यहूदी तसेच खास्दी यांना मिस्पा येथे ठार केले.
26 ಆಗ ಹಿರಿಕಿರಿಯರಾದ ಸಮಸ್ತ ಜನರೂ, ದಂಡುಗಳ ಅಧಿಪತಿಗಳೂ ಬಾಬಿಲೋನಿಯದವರಿಗೆ ಹೆದರಿ ಎದ್ದು ಈಜಿಪ್ಟಿಗೆ ಹೋದರು.
२६मग सर्व सैन्याधिकारी आणि लोक मिसरला पळून गेले. खास्दी लोकांच्या धास्तीने कनिष्ठ पदावर असलेल्यापासून श्रेष्ठ पदावर असलेल्यांपर्यंत सर्व पळाले.
27 ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿವಸದಲ್ಲಿ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು.
२७पुढे अबील मरोदख हा बाबेलचा राजा झाला. त्याने यहूदाचा राजा यहोयाखीन याची कैदेतून सुटका केली. यहोयाखीनाला तोपर्यंत तुरुंगात पडून सदतीस वर्षे झाली होती. अबील मरोदखने सत्तेवर आल्यावर बाराव्या महिन्याच्या सत्ताविसाव्या दिवशी हे सुटकेचे काम केले.
28 ಇದಲ್ಲದೆ ಅವನ ಸಂಗಡ ಪ್ರೀತಿಯಿಂದ ಮಾತನಾಡಿ, ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸರಿಗಿಂತ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.
२८त्याच्याशी त्याने चांगले बोलून बाबेलात जे राजे त्याच्या बंदीत होते त्याने त्यांच्याहून त्यास दरबारात उच्चासन दिले.
29 ಅವನ ಸೆರೆಯ ವಸ್ತ್ರಗಳನ್ನು ತೆಗೆದು ರಾಜವಸ್ತ್ರ ತೊಡಿಸಿದನು. ಹೀಗೆ ಯೆಹೋಯಾಖೀನನು ಬದುಕಿದ ಸಕಲ ದಿವಸಗಳಲ್ಲಿ ಅರಸನ ಪಂಕ್ತಿಯಲ್ಲಿಯೇ ಊಟಮಾಡುತ್ತಿದ್ದನು.
२९अबील मरोदखने त्यास तुरुंगातले कपडे बदलायला लावले. पुढे आयुष्यभर यहोयाखीन अबील मरोदखच्या शेजारी मेजावर बसून जेवत असे.
30 ಅವನು ಬದುಕಿರುವವರೆಗೂ ಅವನಿಗೆ ಬೇಕಾಗಿದ್ದ ಎಲ್ಲಾ ಪದಾರ್ಥಗಳು ಬಾಬಿಲೋನಿನ ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು.
३०अबील मरोदख राजाने त्यास पुढे त्याच्या आयुष्यभर रोज जेवण दिले.

< ಅರಸುಗಳು - ದ್ವಿತೀಯ ಭಾಗ 25 >