< ಸಮುವೇಲನು - ದ್ವಿತೀಯ ಭಾಗ 10 >

1 ಇದರ ತರುವಾಯ, ಅಮ್ಮೋನಿಯರ ಅರಸನು ಮರಣಹೊಂದಿದನು. ಅವನಿಗೆ ಬದಲಾಗಿ ಅವನ ಮಗ ಹಾನೂನನು ಅರಸನಾದನು.
पुढे अम्मोन्याचा राजा नाहाश मरण पावला. त्याच्यानंतर त्याचा मुलगा हानून राज्यावर आला.
2 ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದರು.
दावीद म्हणाला, हानूनाचा वडील नाहाशचा माझ्यावर लोभ होता याने माझ्यावर दया केली, म्हणून त्याचा मुलगा हानून याच्याशी मी सौजन्याने वागेन. मग दावीदाने हानूनला पितृशोक झाला म्हणून त्याच्या सांत्वनेसाठी आपल्या सेवकांना पाठवले. ते सेवक अम्मोन्यांच्या प्रांतात आले.
3 ಆಗ ಅಮ್ಮೋನಿಯರ ಪ್ರಧಾನರು ತಮ್ಮ ಯಜಮಾನನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತಾಪ ಸೂಚಿಸುವವರನ್ನು ಕಳುಹಿಸಿದ್ದರಿಂದ, ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ಯೋಚಿಸುತ್ತೀಯೋ? ದಾವೀದನು ತನ್ನ ಸೇವಕರನ್ನು ಈ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೂ ಶೋಧಿಸುವುದಕ್ಕೂ ಅದನ್ನು ಕೆಡವಿ ಹಾಕುವುದಕ್ಕೂ ನಿನ್ನ ಬಳಿಗೆ ಕಳುಹಿಸಿದ್ದಾನಲ್ಲವೇ,” ಎಂದರು.
पण अम्मोनी अधिकारी त्यांचा स्वामी हानून याला म्हणाले, तुमच्या सांत्वनेसाठी माणसे पाठवून दावीद तुमच्या वडीलांचा मान राखतोय असे तुम्हास वाटते का? उलट गुप्तपणे तुमच्या प्रांतातील खबर काढायला त्याने या लोकांस पाठवले आहे. त्यांचा तुझ्याविरूद्ध उठाव करायचा बेत आहे.
4 ಆದ್ದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು, ಅವರ ಅರ್ಧ ಗಡ್ಡವನ್ನು ಬೋಳಿಸಿ, ಅವರ ವಸ್ತ್ರಗಳನ್ನು ಬೆನ್ನ ಹಿಂದೆ ಮಧ್ಯದಿಂದ ಸೊಂಟದ ಕೆಳಗಿನವರೆಗೂ ಕತ್ತರಿಸಿ, ಅವರನ್ನು ಕಳುಹಿಸಿಬಿಟ್ಟನು.
तेव्हा हानूनने दावीदाच्या त्या सेवकांना ताब्यात घेतले, आणि त्यांच्या दाढ्या अर्ध्या छाटल्या त्यांची कंबरेखालची वस्त्रे मध्यभागी फाडून ठेवली. एवढे करून त्यांना त्याने परत पाठवले.
5 ಅವರು ಈ ವಿಷಯದ ಕುರಿತು ದಾವೀದನಿಗೆ ಹೇಳಿ ಕಳುಹಿಸಿದಾಗ, ಬಹಳ ಅಪಮಾನ ಹೊಂದಿದ ಅವರಿಗೆ ದಾವೀದನು ತನ್ನ ಆಳುಗಳನ್ನು ಅವರಿಗೆದುರಾಗಿ ಕಳುಹಿಸಿ, “ನಿಮ್ಮ ಗಡ್ಡಗಳು ಬೆಳೆಯುವವರೆಗೂ ಯೆರಿಕೋವಿನಲ್ಲಿ ಇರಿ. ಆಮೇಲೆ ತಿರುಗಿ ಬನ್ನಿರಿ” ಎಂದು ಹೇಳಿಸಿದನು.
लोकांकडून हे दावीदाला कळले तेव्हा त्याने आपल्या या सेवकांची गाठ घेण्यास माणसे पाठवली. हे सेवक खूप लज्जीत झाले होते. दावीदाने त्यांना सांगितले, तुमच्या दाढ्या वाढून पूर्ववत होईपर्यंत यरीहो येथेच राहा मग यरूशलेम येथे या.
6 ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅವರು ದೂತರನ್ನು ಕಳುಹಿಸಿ ಬೇತ್‌ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಇರುವ ಇಪ್ಪತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ, ಟೋಬ್ ದೇಶದಿಂದ ಹನ್ನೆರಡು ಸಾವಿರ ಜನರನ್ನೂ, ಮಾಕದ ಅರಸನನ್ನೂ ಅವನ ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
आपण दावीदाचे शत्रुत्व ओढवले आहे हे अम्मोन्यांच्या लक्षात आले. तेव्हा त्यांनी बेथ-रहोब आणि सोबा येथील अरामी माणसे मोलाने घेतली. अराम्यांचे पायदळ वीस हजारांचे होते. शिवाय त्यांनी, माका राजाची एक हजार माणसे तसेच तोबाचे बारा हजार सैनिक घेतले.
7 ದಾವೀದನು ಇದನ್ನು ಕೇಳಿದಾಗ, ಅವನು ಯೋವಾಬನನ್ನೂ, ಪರಾಕ್ರಮಶಾಲಿಗಳಾದ ಸಮಸ್ತ ಸೈನಿಕರನ್ನೂ ಕಳುಹಿಸಿದನು.
दावीदाने हे ऐकले, तेव्हा आपल्या लढाऊ सैन्यासह यवाबाला पाठवले.
8 ಆಗ ಅಮ್ಮೋನಿಯರು ಹೊರಟು ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬಿನಿಂದಲೂ ಟೋಬಿನಿಂದಲೂ ಮಾಕಾನಿಂದಲೂ ಬಂದ ಅರಾಮ್ಯರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು.
तेव्हा अम्मोनी लोक बाहेर पडून युध्दाला सज्ज झाले व नगराच्या वेशीपाशी त्यांनी व्यूह रचला, सोबा आणि रहोब येथील अरामी तसेच माकाचे व तोबाचे सैनिक हे सर्व मिळून स्वतंत्रपणे युद्धासाठी उभे राहिले.
9 ಯೋವಾಬನು, ಯುದ್ಧವು ತನ್ನ ವಿರೋಧವಾಗಿ ಹಿಂದೆಯೂ, ಮುಂದೆಯೂ ಇರುವುದನ್ನು ಕಂಡಾಗ, ಅವನು ಇಸ್ರಾಯೇಲಿನ ಎಲ್ಲಾ ಶ್ರೇಷ್ಠ ಸೈನಿಕರನ್ನು ಆಯ್ದುಕೊಂಡು, ಅರಾಮ್ಯರಿಗೆ ಎದುರಾಗಿ ನಿಲ್ಲಿಸಿದನು.
अम्मोन्यांनी पुढून तसेच मागून आपल्याला घेरले आहे हे यवाबाने पाहिले तेव्हा त्याने इस्राएलातील उत्तम योद्ध्यांची निवड केली त्यांना अराम्यांच्या विरूद्ध लढायला सज्ज केले.
10 ಉಳಿದ ಜನರನ್ನು ಅಮ್ಮೋನಿಯರಿಗೆದುರಾಗಿ ವ್ಯೂಹ ಕಟ್ಟುವ ಹಾಗೆ, ಅವರನ್ನು ತನ್ನ ತಮ್ಮನಾದ ಅಬೀಷೈಯನ ಕೈಯಲ್ಲಿ ಒಪ್ಪಿಸಿಕೊಟ್ಟು,
१०मग आपला भाऊ अबीशय याच्या हवाली आणखी काही मनुष्यांना करून अम्मोन्याचा सामना करायला सांगितले.
11 ಅವನಿಗೆ ಯೋವಾಬನು, “ಅರಾಮ್ಯರು ನನಗಿಂತ ಬಲವುಳ್ಳವರಾದರೆ, ನೀನು ನನಗೆ ಸಹಾಯಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳವರಾದರೆ, ನಾನು ಬಂದು ನಿನಗೆ ಸಹಾಯ ಮಾಡುವೆನು.
११यवाब अबीशयला म्हणाला, अरामी मला भारी पडत आहेत असे दिसले, तर तू माझ्या मदतीला ये. जर अम्मोनी प्रबल आहेत असे लक्षात आले तर मी तुझ्या मदतीला येईन.
12 ದೃಢವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಧೈರ್ಯವಾಗಿ ಹೋರಾಡೋಣ, ಯೆಹೋವ ದೇವರು ತಮ್ಮ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ,” ಎಂದನು.
१२हिम्मत बाळग आपल्या लोकांसाठी, देवाच्या नगरांसाठी आपण पराक्रमाची शिकस्त करू. परमेश्वर त्यास योग्य वाटेल तसे करील.
13 ಆಗ ಯೋವಾಬನೂ, ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ದಾಳಿಮಾಡಲು ಹತ್ತಿರವಾದಾಗ, ಅರಾಮ್ಯರು ಓಡಿಹೋದರು.
१३यानंतर यवाबाने आपल्या लोकांसह अराम्यांवर चढाई केली. अरामी लोकांनी त्यांच्या समोरून पळ काढला.
14 ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನಿಯರು ಕಂಡಾಗ, ಅವರು ಅಬೀಷೈಯನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಅಡಗಿಕೊಂಡರು. ಆಗ ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವುದನ್ನು ಬಿಟ್ಟು, ಯೆರೂಸಲೇಮಿಗೆ ತಿರುಗಿಹೋದನು.
१४अराम्यांनी पलायन केलेले पाहताच, अम्मोनीही अबीशय समोरून पळून गेले आणि आपल्या नगरात परतले. अम्मोन्यांबरोबरच्या या लढाई नंतर यवाब यरूशलेमेला परतला.
15 ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಸೋತುಹೋದೆವೆಂದು ತಿಳಿದಾಗ, ಅವರೆಲ್ಲರು ಒಟ್ಟಾಗಿ ಕೂಡಿಬಂದರು.
१५इस्राएलानी आपला पराभव केला हे अराम्यांनी पाहिले. तेव्हा ते सर्व एकत्र आले आणि त्यांनी (मोठे सैन्य उभारले)
16 ಹದದೆಜೆರನು ನದಿಯ ಆಚೆಯಲ್ಲಿರುವ ಇತರ ಅರಾಮ್ಯರನ್ನು ಕರೆಯಿಸಿಕೊಂಡದ್ದರಿಂದ ಅವರು ಹೆಲಾಮಿಗೆ ಬಂದರು. ಹದದೆಜೆರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು.
१६हद्देजरने नदीच्या पलीकडे राहणाऱ्या अराम्यांना एकत्र आणण्यासाठी माणसे पाठवली. हे अरामी हेलाम येथे आले. हद्देजरचा सेनापती शोबख याने त्यांचे नेतृत्व केले.
17 ಅದನ್ನು ದಾವೀದನಿಗೆ ತಿಳಿಸಿದಾಗ, ಅವನು ಸಮಸ್ತ ಇಸ್ರಾಯೇಲರನ್ನು ಕೂಡಿಸಿಕೊಂಡು, ಯೊರ್ದನನ್ನು ದಾಟಿ ಹೆಲಾಮಿಗೆ ಬಂದನು. ಅರಾಮ್ಯರು ದಾವೀದನಿಗೆದುರಾಗಿ ವ್ಯೂಹ ಕಟ್ಟಿ ಯುದ್ಧಮಾಡಿದರು.
१७हे दावीदाच्या कानावर आले. तेव्हा त्याने सर्व इस्राएलींना एकत्र आणले. यार्देन नदी पार करून ते हेलाम येथे गेले. तेथे अराम्यांनी सर्व तयारीनिशी हल्ला केला.
18 ಆಗ ಅರಾಮ್ಯರು ಇಸ್ರಾಯೇಲರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ರಥಗಳನ್ನೂ ಹಾಳು ಮಾಡಿ, ನಲವತ್ತು ಸಾವಿರ ಕಾಲಾಳುಗಳನ್ನೂ ಕೊಂದು, ಅವರ ಸೇನಾಧಿಪತಿಯಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಮರಣಹೊಂದಿದನು.
१८पण दावीदाने अराम्यांचा पराभव केला. अराम्यांनी इस्राएल लोकां समोरून पळ काढला. दावीदाने सातशे रथांवरील माणसे आणि चाळीस हजार घोडेस्वार यांना ठार केले. अरामी सैन्याचा प्रमुख शोबख यालाही दावीदाने ठार केले.
19 ಹದದೆಜೆರನ ಸೇವಕರಾದ ಸಮಸ್ತ ಅರಸರು ತಾವು ಇಸ್ರಾಯೇಲರ ಮುಂದೆ ಸೋತುಹೋದದ್ದನ್ನು ಕಂಡಾಗ, ಅವರು ಇಸ್ರಾಯೇಲರ ಸಂಗಡ ಸಂಧಾನ ಮಾಡಿಕೊಂಡು ಅವರಿಗೆ ಅಧೀನರಾದರು. ತರುವಾಯ ಅರಾಮ್ಯರು ಅಮ್ಮೋನಿಯರಿಗೆ ಮತ್ತೆ ಸಹಾಯ ಮಾಡುವುದಕ್ಕೆ ಭಯಪಟ್ಟರು.
१९हद्देजरच्या मांडलीक राजांनीही इस्राएलांनी केलेला हा पराभव पाहिला. तेव्हा त्यांनी इस्राएलाशी तह केला व इस्राएलांचे ते चाकर झाले. पुन्हा अम्मोन्यांना मदत करायची अराम्यांनी धास्ती घेतली.

< ಸಮುವೇಲನು - ದ್ವಿತೀಯ ಭಾಗ 10 >