< ಸಮುವೇಲನು - ದ್ವಿತೀಯ ಭಾಗ 11 >

1 ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ, ಅವನ ಸಂಗಡದಲ್ಲಿದ್ದ ಅವನ ಸೇವಕರನ್ನೂ, ಸಮಸ್ತ ಇಸ್ರಾಯೇಲರನ್ನೂ ಕಳುಹಿಸಿದನು. ಅವರು ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ ರಬ್ಬ ನಗರಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.
वसंत ऋतूमध्ये ज्यावेळी राजे युध्द मोहिमांवर जातात त्यावेळी दावीदाने यवाबाला सर्व नोकरा चाकरांचा लवाजमा आणि समस्त इस्राएलांना अम्मोन्यांच्या संहारासाठी पाठवले. यवाबाच्या सैन्याने अम्मोन्यांच्या राब्बा या राजधानीच्या शहराला वेढा घातला दावीद मात्र यरूशलेम येथेच राहिला.
2 ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು, ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇದ್ದು, ಸ್ನಾನ ಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಕಂಡನು.
संध्याकाळी तो आपल्या पलगांवरून उठला, आणि राजमहालाच्या छतावरून फिरु लागला. तिथून त्यास एक स्त्री स्नान करताना दिसली. ती अतिशय रुपवान होती.
3 ಆ ಸ್ತ್ರೀಯು ಬಹು ಸೌಂದರ್ಯವುಳ್ಳ ರೂಪವತಿಯಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವುದಕ್ಕೆ ಕಳುಹಿಸಿದಾಗ ಒಬ್ಬನು, “ಅವಳು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಬತ್ಷೆಬೆಳು,” ಎಂದನು.
तेव्हा दावीदाने आपल्या सेवकवर्गाला बोलवून तिची माहिती काढली सेवकाने सांगितले ती अलीयमची मुलगी बथशेबा, उरीया हित्ती याची पत्नी आहे.
4 ಆಗ ದಾವೀದನು ದೂತರನ್ನು ಕಳುಹಿಸಿ ಅವಳನ್ನು ಬರಮಾಡಿಕೊಂಡನು. ಅವಳು ಅವನ ಬಳಿಗೆ ಬಂದಾಗ, ಅವಳು ತನ್ನ ಮೈಲಿಗೆಯನ್ನು ಕಳೆದುಕೊಂಡು ಶುಚಿಯಾಗಿದ್ದದರಿಂದ, ದಾವೀದನು ಅವಳ ಸಂಗಡ ಮಲಗಿದನು.
तिला आपल्याकडे घेऊन यायला दावीदाने निरोप्याला पाठवले. ती आल्यावर दावीदाने तिच्याशी शरीरसंबंध केला, नंतर स्नान करून शुध्द होऊन ती पुन्हा आपल्या घरी परतली.
5 ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ, “ತಾನು ಗರ್ಭವತಿ,” ಎಂಬ ವಿಷಯವನ್ನು ದಾವೀದನಿಗೆ ಹೇಳಿ ಕಳುಹಿಸಿದಳು.
पण बथशेबा गर्भवती राहिली दावीदाला तिने निरोप पाठवला तिने सांगितले, मी गरोदर आहे.
6 ಆಗ ದಾವೀದನು, “ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸು,” ಎಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯನನ್ನು ದಾವೀದನ ಬಳಿಗೆ ಕಳುಹಿಸಿದನು.
दावीदाने यवाबाला निरोप पाठवला की, उरीया हित्तीला माझ्याकडे पाठवा. तेव्हा यवाबाने उरीया हित्तीला दावीदाकडे पाठवले.
7 ಊರೀಯನು ದಾವೀದನ ಬಳಿಗೆ ಬಂದಾಗ, ದಾವೀದನು ಅವನನ್ನು, “ಯೋವಾಬನೂ ಸೈನ್ಯದವರೂ ಹೇಗಿದ್ದಾರೆ? ಮತ್ತು ಯುದ್ಧವು ಹೇಗಿದೆ?” ಎಂದು ವಿಚಾರಿಸಿದನು.
उरीया आल्यावर दावीद त्याच्याशी बोलला. उरीयाला त्याने यवाब, सर्व सैन्य, लढाई यांचे वर्तमान विचारले.
8 ದಾವೀದನು ಊರೀಯನಿಗೆ, “ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ,” ಎಂದನು. ಊರೀಯನು ಅರಸನ ಮನೆಯಿಂದ ಹೊರಟುಹೋದನು. ನಂತರ ಅರಸನು ಅವನಿಗೆ ಉಪಹಾರ ಕಳುಹಿಸಿದನು.
मग दावीद उरीयाला म्हणाला, घरी जा आणि आराम कर उरीया महालातून बाहेर पडला त्यानंतर त्याच्यासाठी राजातर्फे भेट पाठवण्यात आली.
9 ಆದರೆ ಊರೀಯನು ತನ್ನ ಮನೆಗೆ ಹೋಗದೆ, ಅರಮನೆಯ ಬಾಗಿಲ ಬಳಿಯಲ್ಲಿ ತನ್ನ ಅರಸನ ಸಮಸ್ತ ಸೇವಕರ ಸಂಗಡ ಮಲಗಿದ್ದನು.
पण उरीया घरी गेला नाही. तो महालाच्या बाहेरच दाराशी झोपून राहिला. राजाच्या सेवक वर्गाप्रमाणेच तो तिथे झोपला.
10 ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ದಾವೀದನು ಊರೀಯನಿಗೆ, “ನೀನು ಪ್ರಯಾಣದಿಂದ ಬರಲಿಲ್ಲವೋ? ಏಕೆ ನಿನ್ನ ಮನೆಗೆ ಹೋಗಲಿಲ್ಲ?” ಎಂದನು.
१०उरीया घरी परतला नसल्याचे सेवकांनी दावीदाला सांगितले. तेव्हा दावीद उरीयाला म्हणाला, तू लांबून प्रवास करून आला आहेस, तर तू घरी का गेला नाहीस?
11 ಊರೀಯನು ದಾವೀದನಿಗೆ, “ಮಂಜೂಷವೂ, ಇಸ್ರಾಯೇಲಿನವರೂ, ಯೆಹೂದದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ; ನನ್ನ ಒಡೆಯನಾದ ಯೋವಾಬನೂ, ನನ್ನ ಒಡೆಯನ ಸೇವಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವುದಕ್ಕೂ, ಕುಡಿಯುವುದಕ್ಕೂ, ನನ್ನ ಹೆಂಡತಿಯ ಸಂಗಡ ಮಲಗುವುದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವುದಿಲ್ಲ,” ಎಂದನು.
११उरीया दावीदाला म्हणाला, पवित्र कराराचा कोश, इस्राएलचे सैनिक, आणि यहूदा हे राहुट्यांमध्ये राहत आहेत. माझा धनी यवाब आणि महाराजांचे (दावीदाचे) सेवक ही खुल्या मैदानात तळ देऊन आहेत. अशावेळी मीच तेवढे घरी जाऊन खाणेपिणे करणे आणि पत्नीच्या सहवासात झोपणे योग्य होणार नाही.
12 ಆಗ ದಾವೀದನು ಊರೀಯನಿಗೆ, “ಈ ಹೊತ್ತು ಇಲ್ಲಿರು. ನಾಳೆ ನಿನ್ನನ್ನು ಕಳುಹಿಸುತ್ತೇನೆ,” ಎಂದನು. ಹಾಗೆಯೇ ಊರೀಯನೂ ಆ ದಿನವೂ, ಮಾರನೆಯ ದಿವಸವೂ ಯೆರೂಸಲೇಮಿನಲ್ಲಿ ಇದ್ದನು.
१२दावीद उरीयाला म्हणाला, आजच्या दिवस इथे राहा उद्या मी तुला युध्दभूमीवर पाठवतो. उरीयाने त्या दिवशी यरूशलेमेमध्येच मुक्काम केला.
13 ದಾವೀದನು ಅವನನ್ನು ಕರೆದಾಗ, ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ, ತನ್ನ ಯಜಮಾನನ ಸೇವಕರ ಸಂಗಡ ಮಲಗುವುದಕ್ಕೆ ಹೊರಟುಹೋದನು.
१३दुसऱ्या दिवशी सकाळी दावीदाने त्यास भेटायला बोलावले. दावीदाबरोबर उरीयाने भोजन केले. दावीदाने त्यास बेहोश होईपर्यंत मद्य पाजले पण तरी उरीया घरी गेला नाही. त्या संध्याकाळीसुद्धा तो राजाच्या सेवकांबरोबरच महालाच्या दाराशी झोपायला गेला.
14 ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು, ಊರೀಯನ ಕೈಯಲ್ಲಿ ಕಳುಹಿಸಿದನು.
१४दुसऱ्या दिवशी सकाळी दावीदाने यवाबासाठी एक पत्र लिहून ते उरीयाला न्यायला सांगितले.
15 ಆ ಪತ್ರದಲ್ಲಿ, “ಊರೀಯನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂದೆ ನಿಲ್ಲಿಸಿ, ಅವನು ಗಾಯಗೊಂಡು ಸಾಯುವಂತೆ, ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿದುಕೊಳ್ಳಿರಿ,” ಎಂದು ಬರೆದಿದ್ದನು.
१५त्या पत्रात दावीदाने लिहिले होते, आघाडीवर जेथे तुंबळ युध्द चालले असेल, तेथे उरीयाला पाठवा. त्यास एकट्याला तेथे सोडा, म्हणजे तो युध्दात कामी येईल.
16 ಹಾಗೆಯೇ ಯೋವಾಬನು ಆ ಪಟ್ಟಣವನ್ನು ಮುತ್ತಿಗೆ ಹಾಕುವಾಗ, ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳಿದುಕೊಂಡು, ಅಲ್ಲಿ ಊರೀಯನನ್ನು ನಿಲ್ಲಿಸಿದನು.
१६यवाबाने नगराची टेहेळणी करून सर्वात लढवय्ये अम्मोनी कोठे आहेत ते पाहिले, आणि उरीयाला तेथे नेमले.
17 ಪಟ್ಟಣದ ಮನುಷ್ಯರು ಹೊರಟು ಯೋವಾಬನ ಸಂಗಡ ಯುದ್ಧಮಾಡುವಾಗ, ದಾವೀದನ ಸೇವಕರಾದವರಲ್ಲಿ ಕೆಲವರು ಸತ್ತರು. ಇದಲ್ಲದೆ ಹಿತ್ತಿಯನಾದ ಊರೀಯನೂ ಸತ್ತನು.
१७राब्बा नगरातील लोक यवाब विरूद्ध चालून आले. दावीदाची काही माणसे मारली गेली उरीया हित्ती हा त्यापैकी एक होता.
18 ಆಗ ಯೋವಾಬನು ಯುದ್ಧದ ವರ್ತಮಾನಗಳನ್ನೆಲ್ಲಾ ದಾವೀದನಿಗೆ ತಿಳಿಸುವುದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನೆಂದರೆ:
१८नंतर यवाबाने युध्दातील हकिकतीचे सविस्तरवृत्त संदेशवाहकाद्वारे दावीदाला पाठवले.
19 “ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ,
१९युध्दात जे जे झाले ते सर्व सांगायला त्याने आपल्या नोकराला सांगितले.
20 ಅರಸನಿಗೆ ಕೋಪ ಉರಿದು, ‘ನೀವು ಯುದ್ಧಮಾಡುವುದಕ್ಕೆ ಪಟ್ಟಣಕ್ಕೆ ಇಷ್ಟು ಸಮೀಪವಾಗಿ ಸೇರಿದ್ದೇನು?
२०यवाब सेवकाला म्हणाला, कदाचित राजा संतापून म्हणेल यवाबाचे सैन्य नगराच्या इतके जवळ भिडले कसे? शत्रू तटाच्या भिंतीवरून शिरसंधान करतील हे त्यास ठाऊक असायला हवे.
21 ಅವರು ಗೋಡೆಯಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗ ಅಬೀಮೆಲೆಕನನ್ನು ಕೊಂದವರ‍್ಯಾರು? ತೆಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ, ಅವನು ಸತ್ತನಲ್ಲವೋ? ನೀವು ಗೋಡೆಗೆ ಅಷ್ಟು ಸಮೀಪ ಏಕೆ ಹೋದಿರಿ?’ ಎಂದು ಕೇಳಿದರೆ; ಆಗ ನೀನು ಅವನಿಗೆ, ನಿಮ್ಮ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು,” ಎಂದನು.
२१तेबेसमध्ये यरुब्बेशेथाचा पुत्र अबीमलेख याला एका स्त्रीने मारले हे आठवते ना? तिने तटबंदीवरून जात्याची तळी उचलून अबीमलेखवर टाकली. असे असताना हा इतक्या जवळ का गेला? राजा दावीद असे काही म्हणाला, तर त्यास हे ही म्हणावे की, उरीया हित्ती हा तुमचा सेवकही यामध्ये मारला गेला.
22 ಹಾಗೆಯೇ ಆ ದೂತನು ಹೋಗಿ ದಾವೀದನಿಗೆ ಯೋವಾಬನು ತನ್ನೊಂದಿಗೆ ಕಳುಹಿಸಿದ ವರ್ತಮಾನಗಳನ್ನೆಲ್ಲಾ ತಿಳಿಸಿದನು.
२२निरोप्याने दावीदाकडे जाऊन यवाबाने जे जे सांगायला सांगितले ते सर्व कथन केले.
23 ಆ ದೂತನು ದಾವೀದನಿಗೆ, “ಆ ಮನುಷ್ಯರು ನಿಶ್ಚಯವಾಗಿ ನಮ್ಮ ಮೇಲೆ ಬಲಗೊಂಡು ಬಯಲಿನಲ್ಲಿ ನಮ್ಮ ಮೇಲೆ ಹೊರಟುಬಂದಾಗ, ನಾವು ಪಟ್ಟಣದ ಬಾಗಿಲವರೆಗೆ ಅವರ ಮೇಲೆ ಬಂದೆವು.
२३तो म्हणाला, अम्मोन्यांनी आमच्यावर मैदानात हल्ला केला आम्ही त्यांचा सामना करून त्यांना नगराच्या वेशीपर्यंत पळवून लावले.
24 ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದ ಕಾರಣ, ಅರಸನ ಸೇವಕರಲ್ಲಿ ಕೆಲವರು ಸತ್ತರು. ಇದಲ್ಲದೆ ನಿನ್ನ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನು,” ಎಂದನು.
२४मग तटबंदीवरील काही लोकांनी आपल्या शिपायांवर बाणांचा वर्षाव केला त्यामध्ये काही जण ठार झाले उरीया हित्ती हा तुमचा सेवकही प्राणाला मुकला.
25 ಆಗ ದಾವೀದನು ಆ ದೂತನಿಗೆ, “ನೀನು ಯೋವಾಬನಿಗೆ, ‘ಇದು ನಿನ್ನನ್ನು ಕದಲಿಸದಿರಲಿ. ಖಡ್ಗವು ಇವನನ್ನಾದರೂ ಸರಿ, ಅವನನ್ನಾದರೂ ಸರಿ ತಿಂದುಬಿಡುವುದು. ನೀನು ಪಟ್ಟಣವನ್ನು ನಿರ್ಮೂಲ ಮಾಡುವ ಹಾಗೆ, ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ,’ ಎಂದು ಹೇಳಿ, ಅವನನ್ನು ಬಲಪಡಿಸು,” ಎಂದನು.
२५दावीद त्या निरोप्याला म्हणाला, यवाबाला सांग निराश होऊ नको. हिम्मत सोडू नको. तलवारीने कोणाचाही संहार होऊ शकतो. राब्बावर आणखी जोरदार हल्ला चढवा, तुम्ही जिंकाल. यवाबाला माझा हा निरोप सांगून प्रोत्साहन दे.
26 ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ, ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.
२६उरीया मरण पावल्याचे बथशेबाला कळले तिने पतिनिधनाबद्दल शोक केला.
27 ದುಃಖದ ದಿವಸಗಳು ತೀರಿದ ತರುವಾಯ, ದಾವೀದನು ಅವಳನ್ನು ತನ್ನ ಮನೆಗೆ ಕರೆಯಕಳುಹಿಸಿದನು. ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕಾರ್ಯವು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದಾಗಿತ್ತು.
२७काही काळाने तिचे दुःख ओसरल्यावर दावीदाने सेवकाकरवी तिला आपल्याकडे आणले. ती त्याची पत्नी झाली आणि त्याच्या पुत्राला तिने जन्म दिला. पण दावीदाचे हे नीच कृत्य परमेश्वरास पसंत पडले नाही.

< ಸಮುವೇಲನು - ದ್ವಿತೀಯ ಭಾಗ 11 >