< ಸಮುವೇಲನು - ದ್ವಿತೀಯ ಭಾಗ 15 >

1 ಇದರ ತರುವಾಯ ಅಬ್ಷಾಲೋಮನು ತನಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವುದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.
यानंतर अबशालोमने स्वत: साठी रथ आणि घोड्यांची तयारी केली, तो रथातून जात असताना पन्नास माणसे त्याच्यापुढे धावत असत.
2 ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಿಲ ಬಳಿಯಲ್ಲಿ ನಿಂತುಕೊಂಡು, ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು, “ನೀನು ಯಾವ ಪಟ್ಟಣದವನು?” ಎಂದು ಕೇಳಿದನು. ಅದಕ್ಕವನು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಇಂಥ ಕುಲಕ್ಕೆ ಸೇರಿದವರು,” ಎಂದು ಉತ್ತರ ಕೊಡುವನು.
रोज लवकर ऊठून सकाळीच तो वेशीपाशी जाई. आपल्या अडचणी घेऊन निवाड्यासाठी राजाकडे जायला निघालेल्या लोकांस भेटून त्यांच्याशी बोलत असे. चौकशी करून तो विचारी, तू कोणत्या शहरातून आलास? तो सांगत असे, मी इस्राएलच्या अमुक वंशातला.
3 ಆಗ ಅಬ್ಷಾಲೋಮನು ಅವನಿಗೆ, “ನೋಡು ನಿನ್ನ ಕಾರ್ಯವು ಒಳ್ಳೆಯದೂ, ನ್ಯಾಯವಾದದದ್ದೂ ಆಗಿದೆ. ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವುದಕ್ಕೆ ಯಾವನೂ ಇಲ್ಲ,” ಅನ್ನುವನು.
तेव्हा अबशालोम म्हणे, तुमचे म्हणणे खरे आहे, पण राजा तुमच्या अडचणीत लक्ष घालणार नाही.
4 ಇದಲ್ಲದೆ ಅಬ್ಷಾಲೋಮನು, “ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ನೇಮಕವಾಗಿದ್ದರೆ ಎಷ್ಟೋ ಒಳ್ಳೆಯದು. ಆಗ ವ್ಯಾಜ್ಯವಾದರೂ, ನ್ಯಾಯವಿಚಾರಣೆಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ, ನಾನು ಅವನಿಗೆ ನೀತಿಯಿಂದ ನ್ಯಾಯತೀರಿಸುವೆನು,” ಅನ್ನುವನು.
अबशालोम पुढे म्हणे, मला कोणी येथे न्यायाधीश म्हणून नेमले तर किती बरे होईल. तसे झाले तर फिर्याद घेऊन येणाऱ्या प्रत्येकाला मी मदत करू शकेन. यांच्या प्रकरणांना मी न्याय देऊ शकेन.
5 ಯಾವನಾದರೂ ಅವನಿಗೆ ವಂದಿಸುವುದಕ್ಕೆ ಬಂದರೆ, ಕೂಡಲೆ ತನ್ನ ಕೈಯನ್ನು ಚಾಚಿ ಅಂಥವನನ್ನು ಎತ್ತಿ ಮುದ್ದಿಡುತ್ತಿದ್ದನು.
अशावेळी कोणी त्याच्याजवळ येऊन त्यास आभिवादन करू लागला, तर अबशालोम त्या मनुष्यास मित्रासारखी वागणूक देई. आपला हात पुढे करून तो त्यास स्पर्श करी त्याचे चुंबन घेई.
6 ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲರೆಲ್ಲರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲರ ಹೃದಯಗಳನ್ನು ಗೆದ್ದುಕೊಂಡನು.
राजा दावीदाकडे न्याय मागण्यासाठी आलेल्या सर्व इस्राएलांना त्याने अशाच प्रकारची वागणुक देऊन सर्व इस्राएलांची मने जिंकली.
7 ನಾಲ್ಕು ವರ್ಷಗಳಾದ ತರುವಾಯ ಅಬ್ಷಾಲೋಮನು ಅರಸನಿಗೆ, “ನಾನು ಯೆಹೋವ ದೇವರಿಗೆ ಮಾಡಿಕೊಂಡಿದ್ದ ನನ್ನ ಹರಕೆಯನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವುದಕ್ಕೆ ಅಪ್ಪಣೆಕೊಡಬೇಕು.
पुढे चार वर्षानी अबशालोम राजा दावीदाला म्हणाला, हेब्रोनमध्ये मी परमेश्वरास नवस बोललो होतो. तो फेडण्यासाठी मला जाऊ द्या.
8 ಏಕೆಂದರೆ, ‘ಯೆಹೋವ ದೇವರು ನನ್ನನ್ನು ಯೆರೂಸಲೇಮಿಗೆ ತಿರುಗಿ ನಿಜವಾಗಿಯೂ ಬರಮಾಡಿದರೆ, ನಾನು ಯೆಹೋವ ದೇವರನ್ನು ಸೇವಿಸುವೆನು,’ ಎಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಹರಕೆ ಮಾಡಿಕೊಂಡಿದ್ದನು,” ಎಂದನು.
अराममधील गशूर येथे राहत असताना मी तो बोललो होतो, परमेश्वराने मला पुन्हा यरूशलेमेला नेले, तर मी परमेश्वराच्या सेनेला वाहून घेईन असे मी बोललो होतो.
9 ಅರಸನು ಅವನಿಗೆ, “ಸಮಾಧಾನವಾಗಿ ಹೋಗು,” ಎಂದನು. ಆಗ ಅವನು ಎದ್ದು ಹೆಬ್ರೋನಿಗೆ ಹೋದನು.
तेव्हा राजा दावीदाने त्यास निश्चिंत होऊन जाण्यास सांगितले. अबशालोम हेब्रोन येथे आला.
10 ಅಬ್ಷಾಲೋಮನು ಇಸ್ರಾಯೇಲಿನ ಸಮಸ್ತ ಗೋತ್ರಗಳಿಗೆ ಗೂಢಚಾರರನ್ನು ಕಳುಹಿಸಿ ಅವರಿಗೆ, “ನೀವು ತುತೂರಿಯ ಶಬ್ದ ಕೇಳಿದಾಗ, ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಘೋಷಿಸಿರಿ’ ಎಂದು ಹೇಳಿರಿ,” ಎಂದನು.
१०पण त्याने इस्राएलच्या सर्व वंशामध्ये हेर पाठवून लोकांस कळवले रणशिंग फुंकल्याचे ऐकल्यावर अबशालोम हेब्रोनचा राजा झाला आहे असा तुम्ही घोष करा.
11 ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲಾದ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ಒಳಸಂಚನ್ನು ಏನೂ ತಿಳಿಯದೆ ಯಥಾರ್ಥ ಮನಸ್ಸುಳ್ಳವರಾಗಿದ್ದರು.
११अबशालोमने स्वत: बरोबर दोनशे माणसे घेतली यरूशलेम सोडून ती त्याच्या बरोबर निघाली. पण त्यांना त्याच्या बेताची कल्पना नव्हती.
12 ಅಬ್ಷಾಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ, ದಾವೀದನ ಆಲೋಚನಾಗಾರನಾಗಿರುವ ಗಿಲೋವಿನ ಅಹೀತೋಫೆಲನನ್ನು ಗಿಲೋವೆಂಬ ಅವನ ಪಟ್ಟಣದಿಂದ ಕರೆಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ, ಒಳಸಂಚಿನ ಗುಂಪು ಬಲವಾಯಿತು.
१२अहिथोफेल हा तेव्हा दावीदाचा एक सल्लागार होता. हा गिलो या गावाचा होता. यज्ञ करत असताना अबशालोमने अहिथोफेलला गिलोहून बोलावून घेतले. सर्व काही अबशालोमच्या योजने प्रमाणे सुरळीत चालले होते. त्यास अधिकाधिक पाठिंबा मिळत होता.
13 ದಾವೀದನ ಬಳಿಗೆ ಒಬ್ಬ ದೂತನು ಬಂದು, “ಇಸ್ರಾಯೇಲರ ಹೃದಯಗಳು ಅಬ್ಷಾಲೋಮನ ಕಡೆ ತಿರುಗಿಕೊಂಡಿವೆ,” ಎಂದನು.
१३एका निरोप्याने दाविदास वर्तमान सांगितले की इस्राएलच्या लोकांचा कल अबशालोमकडे झुकत आहे.
14 ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಸಮಸ್ತ ಸೇವಕರಿಗೆ, “ಏಳಿರಿ, ನಾವು ಓಡಿಹೋಗೋಣ. ಇಲ್ಲದಿದ್ದರೆ ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಂಡು ಹೋಗಲಾರೆವು. ಅವನು ಫಕ್ಕನೆ ನಮ್ಮನ್ನು ಹಿಡಿದು, ನಮ್ಮ ಮೇಲೆ ಕೇಡನ್ನು ಬರಮಾಡಿ, ಪಟ್ಟಣವನ್ನು ಖಡ್ಗದಿಂದ ಹೊಡೆಯದ ಹಾಗೆ ಹೊರಟು ಹೋಗುವುದಕ್ಕೆ ತ್ವರೆಮಾಡಿರಿ,” ಎಂದನು.
१४तेव्हा यरूशलेमेमध्ये आपल्या भोवती असलेल्या सर्व सेवकांना दावीद म्हणाला, आता आपण पळ काढला पाहिजे. आपण येथून निसटलो नाही तर अबशालोमच्या तावडीत सापडू. त्याने पकडायच्या आतच आपण तातडीने निघून जाऊ. नाही तर तो आपल्यापैकी कोणालाही शिल्लक ठेवणार नाही. यरूशलेमेच्या लोकांस तो मारून टाकेल.
15 ಆಗ ಅರಸನ ಸೇವಕರು ಅರಸನಿಗೆ, “ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ, ಅದನ್ನು ಮಾಡುವುದಕ್ಕೆ ನಿನ್ನ ಸೇವಕರು ಸಿದ್ಧವಾಗಿದ್ದೇವೆ,” ಎಂದರು.
१५तेव्हा राजाचे सेवक त्यास म्हणाले, तुम्ही म्हणाल ते करायला आम्ही तयार आहोत.
16 ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು, ಅವನೂ, ಅವನ ಮನೆಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.
१६आपल्या कुटुंबातील सर्वांसह राजा बाहेर पडला. आपल्या दहा उपपत्नी होत्या त्यांना त्याने घराचे रक्षण करायला म्हणून मागे ठेवले.
17 ಅರಸನೂ, ಅವನ ಹಿಂದೆ ಸಮಸ್ತ ಜನರೂ ಹೊರಟುಹೋಗಿ ಪಟ್ಟಣದ ಕಡೆಯ ಮನೆಯ ಬಳಿ ಬಂದು ಅಲ್ಲಿ ನಿಂತರು.
१७राजा आणि त्याच्या मागोमाग सर्व लोक निघून गेले अगदी शेवटच्या घरापाशी ते थांबले.
18 ಅವನ ಸಮಸ್ತ ಸೇವಕರೂ, ಸಮಸ್ತ ಕೆರೇತ್ಯರೂ, ಸಮಸ್ತ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತೀಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.
१८त्याचे सर्व सेवक तसेच एकूणएक करेथी, पलेथी आणि सहाशे गित्ती राजामागोमाग चालत गेले.
19 ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ಕಂಡು, “ನೀನು ನಮ್ಮ ಸಂಗಡ ಬರುವುದು ಏಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ, ಅರಸನ ಸಂಗಡ ಇರು. ಏಕೆಂದರೆ ನೀನು ವಿದೇಶಿ. ನಿನ್ನ ದೇಶದಿಂದ ಸೆರೆಯಾಳಾಗಿ ಬಂದವನು.
१९गथ येथील इत्तयला राजा म्हणाला, तू ही आमच्याबरोबर कशाला येतोस? मागे फिर आणि नवीन राजा अबशालोम याला साथ दे. तू परकाच आहेस ही तुझी माय भूमी नव्हे.
20 ನೀನು ನಿನ್ನೆ ಬಂದವನು. ನಾನು ಎಲ್ಲಿಗೆ ಹೋಗುತ್ತೇನೋ ನನಗೇ ಗೊತ್ತಿಲ್ಲ. ಆದುದರಿಂದ ನಾನು ನಿನ್ನನ್ನು ನಮ್ಮ ಸಂಗಡ ಸುಮ್ಮನೇ ತಿರುಗಾಡಿಸುವುದು ಏಕೆ? ನೀನು ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಕ್ಕೆ ಹೋಗು. ದಯೆಯೂ, ನಂಬಿಗಸ್ತಿಕೆಯೂ ನಿನ್ನ ಸಂಗಡ ಇರಲಿ,” ಎಂದನು.
२०तू कालच येऊन मला मिळालास. आम्ही वाट फुटेल तिकडे जाणार तू कशाला भटकत फिरतोस? तेव्हा तुझ्या बांधवांसह परत फिर, तुला प्रेमाची आणि न्यायाची वागणूक मिळो.
21 ಆದರೆ ಇತ್ತೈಯೂ ಅರಸನಿಗೆ ಉತ್ತರವಾಗಿ, “ಯೆಹೋವ ದೇವರ ಜೀವದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ, ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ, ಸಾವಾದರೂ ಬದುಕಾದರೂ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು,” ಎಂದನು.
२१पण इत्तय राजाला म्हणाला परमेश्वराची शपथ, तुम्ही जिवंत असेपर्यंत मी तुमची साथ सोडणार नाही. आता जगणे मरणे तुमच्याबरोबरच.
22 ಆಗ ದಾವೀದನು ಇತ್ತೈಗೆ, “ನೀನು ಹೋಗಿ ದಾಟು,” ಎಂದನು. ಆದ್ದರಿಂದ ಗಿತ್ತೀಯನಾದ ಇತ್ತೈಯೂ, ಅವನ ಸಮಸ್ತ ಮನುಷ್ಯರೂ, ಅವನ ಸಂಗಡ ಇರುವ ಸಮಸ್ತ ಚಿಕ್ಕವರೂ ಕೂಡ ದಾಟಿಹೋದರು.
२२दावीद इत्तयला म्हणाला, मग चल तर, किद्रोन ओहोळा पलीकडे आपण जाऊ. तेव्हा इत्तय आपल्या बरोबरच्या सर्व मुला-मनुष्यांसह किद्रोन ओहोळा पलीकडे गेला.
23 ಜನರೆಲ್ಲಾ ದಾಟಿಹೋಗುವಾಗ, ದೇಶದವರೆಲ್ಲಾ ಮಹಾಧ್ವನಿಯಿಂದ ಅತ್ತರು. ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು. ಹಾಗೆಯೇ ಅವನ ಜನರೆಲ್ಲರೂ ದಾಟಿ ಮರುಭೂಮಿಯ ಮಾರ್ಗವಾಗಿ ನಡೆದುಹೋದರು.
२३सर्व लोक मोठ्याने आकांत करत होते. राजाने ही किद्रोन झरा ओलांडला मग सर्वजण वाळवंटाकडे निघाले.
24 ಚಾದೋಕನೂ, ಅವನ ಸಂಗಡ ಇರುವ ಸಮಸ್ತ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಅಬಿಯಾತರನು, ಜನರೆಲ್ಲರು ಪಟ್ಟಣದಿಂದ ದಾಟಿಹೋಗುವವರೆಗೆ ಯಜ್ಞ ಸಮರ್ಪಿಸುತ್ತಾ ಮುಂದೆ ನಡೆಯುತ್ತಿದ್ದನು.
२४सादोक आणि त्याच्या बरोबरचे सर्व लेवी देवाचा कोश घेऊन निघाले होते. त्यांनी देवाचा कराराचा कोश खाली ठेवला. यरूशलेमेमधून सर्व लोक बाहेर पडेपर्यंत अब्याथार कोशाजवळ उभा राहून अर्पणे अर्पित होता.
25 ಆಗ ಅರಸನು ಚಾದೋಕನಿಗೆ, “ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರುಗಿ ತೆಗೆದುಕೊಂಡು ಹೋಗು. ಯೆಹೋವ ದೇವರ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ, ಅವರು ತಿರುಗಿ ನನ್ನನ್ನು ಬರಮಾಡಿ ಅದನ್ನೂ, ಅದರ ವಾಸಸ್ಥಳವನ್ನೂ ನನಗೆ ತೋರಿಸುವರು.
२५राजा दावीद सादोकाला म्हणाला, हा देवाचा कोश यरूशलेमेला परत घेऊन जा. परमेश्वराची कृपा असेल तर तो मला पुन्हा येथे आणेल. यरूशलेम आणि हे त्याचे मंदिर मला पुन्हा पाहता येईल.
26 ಒಂದು ವೇಳೆ ಅವರು, ‘ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು’ ಹೇಳಿದರೆ ಇಗೋ, ಅವರು ತಮ್ಮ ದೃಷ್ಟಿಗೆ ತೋಚಿದ ಹಾಗೆ ನನಗೆ ಮಾಡಲಿ,” ಎಂದನು.
२६पण तो माझ्यावर प्रसन्न नसेल तर त्याच्या मनात असेल ते माझे होईल.
27 ಅರಸನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರುಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳು ಅಹೀಮಾಚನೂ, ಅಬಿಯಾತರನ ಮಗ ಯೋನಾತಾನನೂ ನಿನ್ನ ಸಂಗಡ ಹೋಗಲಿ.
२७पुढे राजा सादोक याजकाला म्हणाला, तू द्रष्टा आहेस तू सुखरुप नगरात परत जा. तुझा पुत्र अहीमास आणि अब्याथारचा मुलगा योनाथान यांनाही घेऊन जा.
28 ನೋಡು, ನನಗೆ ತಿಳಿಸುವುದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವವರೆಗೂ, ನಾನು ಮರುಭೂಮಿಯ ಬಳಿಯಲ್ಲಿ ಇರುವೆನು,” ಎಂದನು.
२८हा प्रदेश ओलांडून वाळवंट लागते, त्याठिकाणी मी तुझा संदेश येईपर्यंत थांबतो.
29 ಹಾಗೆಯೇ ಚಾದೋಕನೂ, ಅಬಿಯಾತರನೂ ದೇವರ ಮಂಜೂಷವನ್ನು ತಿರುಗಿ ಯೆರೂಸಲೇಮಿಗೆ ತೆಗೆದುಕೊಂಡುಹೋಗಿ ಅಲ್ಲಿದ್ದರು.
२९तेव्हा देवाचा कोश घेऊन सादोक आणि अब्याथार यरूशलेमेला परतले आणि तिथेच राहिले.
30 ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿಕೊಂಡು, ಬರಿಗಾಲಿನಿಂದ ಎಣ್ಣೆಮರಗಳ ಗುಡ್ಡವನ್ನು ಏರಿದನು. ಅವನ ಸಂಗಡ ಇರುವ ಸಮಸ್ತ ಜನರೂ, ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆ ಏರಿದರು.
३०दावीद शोक करत जैतूनाच्या डोंगरावर गेला. मस्तक झाकून, अनवाणी तो चालत राहिला त्याच्याबरोबरच्या लोकांनीही त्याचे अनुकरण केले तेही रडत होते.
31 ಅಹೀತೋಫೆಲನು ಅಬ್ಷಾಲೋಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾನೆಂದು ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು, “ಯೆಹೋವ ದೇವರೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವನ್ನಾಗಿ ಮಾಡಿಬಿಡು,” ಎಂದನು.
३१एकाने दावीदाला सांगितले अहिथोफेल हा अबशालोम बरोबर कारस्थाने करणाऱ्यांपैकी आहे. तेव्हा दावीदाने देवाची करूणा भाकली तो म्हणाला, परमेश्वरा, अहिथोफेलचा सल्ला निष्फळ ठरु दे.
32 ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿದಾಗ, ಅರ್ಕಿಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅವನನ್ನು ಎದುರುಗೊಳ್ಳಲು ಬಂದನು.
३२दावीद डोंगरमाथ्यावर पोहोचला येथे तो अनेकदा देवाची आराधना करत असे. त्या वेळी हूशय अर्की त्यास भेटायला आला. त्याचा अंगरखा फाटलेला होता. त्याने डोक्यात माती घालून घेतलेली होती.
33 ಆಗ ದಾವೀದನು ಅವನಿಗೆ, “ನೀನು ನನ್ನ ಸಂಗಡ ಬಂದರೆ, ನನಗೆ ಭಾರವಾಗಿರುವೆ.
३३दावीद हूशयला म्हणाला, तू माझ्याबरोबर आलास तर एवढे लोक आहेत त्यामध्ये आणखी तुझा भार.
34 ನೀನು ಪಟ್ಟಣಕ್ಕೆ ತಿರುಗಿ ಹೋಗಿ ಅಬ್ಷಾಲೋಮನಿಗೆ, ‘ಅರಸನೇ, ನಾನು ನಿನ್ನ ಸೇವಕನಾಗಿರುವೆನು. ನಾನು ಇಂದಿನವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ, ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು,’ ಎಂದು ಹೇಳಿದರೆ, ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಬಹುದು.
३४पण तू यरूशलेमेला परतलास तर अहिथोफेलची मसलत तू धुळीला मिळवू शकशील. अबशालोमला सांग, महाराज मी तुमचा दास आहे. मी तुमच्या वडीलांच्या सेवेत होतो, पण आता तुमची सेवा करीन.
35 ಅಲ್ಲಿ ಯಾಜಕರಾದ ಚಾದೋಕನೂ, ಅಬಿಯಾತರನೂ ನಿನ್ನ ಬಳಿಯಲ್ಲಿ ಇಲ್ಲವೋ? ಆದ್ದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ, ಅದನ್ನು ಯಾಜಕರಾದ ಚಾದೋಕನಿಗೂ, ಎಬ್ಯಾತಾರನಿಗೂ ತಿಳಿಸು.
३५सादोक आणि अब्याथार हे याजक तुझ्याबरोबर असतील. राजाच्या घरी जे ऐकशील ते सगळे त्यांच्या कानावर घालत जा.
36 ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ. ಚಾದೋಕನ ಮಗ ಅಹೀಮಾಚನೂ, ಅಬಿಯಾತರನ ಮಗ ಯೋನಾತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಕೈಯಿಂದ ನನಗೆ ಹೇಳಿ ಕಳುಹಿಸಬೇಕು,” ಎಂದನು.
३६सादोकाचा मुलगा अहीमास आणि अब्याथारचा योनाथान हे ही त्यांच्या बरोबर आहेत. त्यांच्या मार्फत तू मला खबर कळवत जा.
37 ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣದೊಳಗೆ ಬಂದನು. ಆಗ ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.
३७तेव्हा दावीदाचा मित्र हूशय यरूशलेमेमध्ये परतला. अबशालोम ही तेथे आला.

< ಸಮುವೇಲನು - ದ್ವಿತೀಯ ಭಾಗ 15 >