< ಸಮುವೇಲನು - ದ್ವಿತೀಯ ಭಾಗ 18 >

1 ದಾವೀದನು ತನ್ನ ಸಂಗಡದಲ್ಲಿದ್ದ ಜನರನ್ನು ಲೆಕ್ಕ ಮಾಡಿ, ಅವರ ಮೇಲೆ ಸಾವಿರ ಜನರಿಗೂ, ನೂರು ಜನರಿಗೂ ಅಧಿಪತಿಗಳನ್ನು ನೇಮಿಸಿದನು.
दावीदाने आपल्या बरोबरच्या लोकांची शिरगणती केली. मग, शंभर-शंभर, हजार हजार मनुष्यांवर अधिकारी, सरदार नेमले.
2 ದಾವೀದನು ಜನರಲ್ಲಿ ಮೂರನೆಯ ಪಾಲನ್ನು ಯೋವಾಬನಿಗೂ, ಎರಡನೆಯ ಪಾಲನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆಗಿರುವ ಅಬೀಷೈಗೂ, ಮೂರನೆಯ ಪಾಲನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿದನು. ತರುವಾಯ ಅರಸನು ಸೈನಿಕರಿಗೆ, “ನಾನೂ ನಿಮ್ಮ ಸಂಗಡ ಹೊರಟು ಬರುತ್ತೇನೆ,” ಎಂದನು.
सर्वांची त्याने तीन गटात विभागणी केली. यवाब, अबीशय यवाबाचा भाऊ आणि सरुवेचा मुलगा आणि गथ येथील इत्तय या तिघांना एकेक गटाचे प्रमुख म्हणून नेमले आणि सर्वांची रवानगी केली. तेव्हा राजा दावीद त्यांना म्हणाला, मी ही तुमच्याबरोबर येतो.
3 ಆದರೆ ಸೈನಿಕರು ಅವನಿಗೆ, “ನೀನು ನಮ್ಮ ಸಂಗಡ ಬರಬೇಡ. ಏಕೆಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವುದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸಮನಾಗಿದ್ದೀ. ಈಗ ನೀನು ಊರಿನಲ್ಲಿದ್ದು, ನಮಗೆ ಸಹಾಯವಾಗಿರುವುದೇ ಉತ್ತಮ,” ಎಂದರು.
पण लोक म्हणाले नाही तुम्ही आमच्याबरोबर येता कामा नये. कारण आम्ही युध्दातून पळ काढला किंवा आमच्यातले निम्मे लोक या लढाईत कामी आले तरी अबशालोमच्या लोकांस त्याची फिकीर नाही. पण तुम्ही एकटे आम्हा दहाहजारांच्या ठिकाणी आहात. तेव्हा तुम्ही शहरात रहावे हे बरे. शिवाय गरज पडली तर तुम्ही आमच्या मदतीला येणारच.
4 ಆಗ ಅರಸನು ಅವರಿಗೆ, “ನಿಮಗೆ ಸರಿಕಾಣಿಸುವುದನ್ನು ಮಾಡುತ್ತೇನೆ,” ಎಂದನು. ಅರಸನು ಬಾಗಿಲ ಬಳಿಯಲ್ಲಿ ನಿಂತನು. ಸೈನಿಕರೆಲ್ಲಾ ನೂರು ನೂರಾಗಿಯೂ, ಸಾವಿರ ಸಾವಿರಗಳಾಗಿಯೂ ಹೊರಟರು.
तेव्हा दावीद राजा लोकांस म्हणाला, मी तुमच्या म्हणण्याप्रमाणे करीन. राजा मग वेशीपाशी उभा राहिला. सैन्य बाहेर पडले, शंभर आणि हजाराच्या गटात ते निघाले.
5 ಅರಸನು ಯೋವಾಬನಿಗೂ, ಅಬೀಷೈಯಿಗೂ, ಇತ್ತೈಗೂ ಆಜ್ಞಾಪಿಸಿ, “ನನಗೋಸ್ಕರ ಯುವಕನಾದ ಅಬ್ಷಾಲೋಮನೊಂದಿಗೆ ಮೃದುವಾಗಿ ವರ್ತಿಸಿರಿ,” ಎಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಟ ಆಜ್ಞೆಯನ್ನು ಸೈನಿಕರೆಲ್ಲರೂ ಕೇಳಿದರು.
यवाब, अबीशय आणि इत्तय यांना राजाने आज्ञा दिली माझ्यासाठी एक करा, अबशालोमशी सौम्यपणाने वागा राजाची ही आज्ञा सर्वांच्या कानावर गेली.
6 ಅನಂತರ ಸೈನಿಕರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು. ಯುದ್ಧವು ಎಫ್ರಾಯೀಮ್ ಅಡವಿಯಲ್ಲಿತ್ತು.
अबशालोमच्या इस्राएल सैन्यावर दावीदाचे सैन्य चालून गेले. एफ्राईमाच्या अरण्यात ते लढले.
7 ಅಲ್ಲಿ ಇಸ್ರಾಯೇಲರು ದಾವೀದನ ಸೇವಕರ ಮುಂದೆ ಸಂಹಾರವಾದರು.
दावीदाच्या सैन्याने इस्राएलाचा पराभव केला. त्यांची वीस हजार माणसे त्यादिवशी मारली गेली.
8 ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು. ಇಪ್ಪತ್ತು ಸಾವಿರ ಸೈನಿಕರು ಸತ್ತರು. ಅಲ್ಲಿನ ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಸೈನಿಕರಲ್ಲಿ ಖಡ್ಗದಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.
देशभर युध्द पेटले. त्या दिवशी तलवारीला बळी पडली त्यापेक्षा जास्त माणसे जंगलामुळे मरण पावली.
9 ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಅಬ್ಷಾಲೋಮನು ಹೇಸರಗತ್ತೆಯ ಮೇಲೆ ಏರಿದ್ದನು. ಆ ಹೇಸರಗತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ, ಅವನ ತಲೆಯು ಆ ಮರದ ಕೊಂಬೆಯಲ್ಲಿ ಸಿಕ್ಕಿಕೊಂಡಿತು. ಆದ್ದರಿಂದ ಅವನು ಹತ್ತಿದ್ದ ಹೇಸರಗತ್ತೆಯು ಹೊರಟುಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.
अबशालोमचा दावीदाच्या अधिकाऱ्यांशी सामना झाला, तेव्हा अबशालोम खेचरावर बसून निसटायचा प्रयत्न करू लागला. ते खेचर एका मोठ्या एला वृक्षाच्या खालून जात असताना त्याच्या जाडजूड फांद्यामध्ये अबशालोमचे डोके अडकले. खेचर निघून गेले आणि अबशालोम अधांतरी लोंबकळत राहिला.
10 ಅದನ್ನು ಒಬ್ಬನು ಕಂಡು ಯೋವಾಬನಿಗೆ, “ಅಬ್ಷಾಲೋಮನು ಒಂದು ಏಲಾ ಮರದಲ್ಲಿ ತೂಗಾಡುವುದನ್ನು ಕಂಡೆನು,” ಎಂದನು.
१०एकाने हे पाहिले आणि यवाबाला सांगितले, अबशालोमला मी एला वृक्षावरून लोंबकळताना पाहिले.
11 ಅದಕ್ಕೆ ಯೋವಾಬನು ತನಗೆ ಅದನ್ನು ತಿಳಿಸಿದವನಿಗೆ, “ನೀನು ಕಂಡು ಅವನನ್ನು ಏಕೆ ಕಡಿದು ನೆಲಕ್ಕೆ ಉರುಳಿಸಲಿಲ್ಲ? ನಾನು ನಿನಗೆ ಹತ್ತು ಬೆಳ್ಳಿ ನಾಣ್ಯಗಳನ್ನು, ಒಂದು ಬೆಳ್ಳಿ ನಡುಕಟ್ಟನ್ನು ಕೊಡುತ್ತಿದ್ದೆನು,” ಎಂದನು.
११यवाब त्या मनुष्यास म्हणाला, मग तू त्याचा वध करून त्यास जमिनीवर का पाडले नाहीस? मी तुला दहा रौप्यमुद्रा आणि एक पट्टा इनाम दिला असता.
12 ಆದರೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ, ನಾನು ಅರಸನ ಮಗನ ಮೇಲೆ ನನ್ನ ಕೈಚಾಚುವುದಿಲ್ಲ. ಏಕೆಂದರೆ, ‘ಅಬ್ಷಾಲೋಮನೆಂಬ ಯುವಕನೊಡನೆ ಸೌಮ್ಯದಿಂದ ನಡೆದು ಕಾಪಾಡಿರಿ,’ ಎಂದು ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಯನಿಗೂ, ಇತ್ತೈಗೂ ಸ್ಪಷ್ಟವಾಗಿ ಆಜ್ಞಾಪಿಸಿದ್ದನು.
१२तो मनुष्य म्हणाला, तुम्ही हजार रौप्यमुद्रा देऊ केल्या असत्या तरी मी राजकुमाराला इजा पोचू दिली नसती. कारण तुम्ही, अबीशय, आणि इत्तय यांना राजाने केलेला हुकूम आम्ही ऐकला आहे. राजा म्हणाला होता, लहान अबशालोमला घातपात होणार नाही याची काळजी घ्या.
13 ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಏಕೆ ಮೋಸಮಾಡಿಕೊಳ್ಳಬೇಕು. ಏಕೆಂದರೆ ಅರಸನಿಗೆ ಯಾವ ಕಾರ್ಯವೂ ಮರೆಯಾಗಿರುವುದಿಲ್ಲ. ನೀನೇ ನನಗೆ ವಿರೋಧವಾಗಿ ನಿಲ್ಲುವಿ,” ಎಂದನು.
१३अबशालोमला मी मारले असते तर राजाला ते समजलेच असते आणि तुम्ही मला शिक्षा केली असती.
14 ಆಗ ಯೋವಾಬನು, “ನಾನು ಹೀಗೆ ನಿನ್ನ ಮುಂದೆ ಆಲಸ್ಯ ಮಾಡೆನು,” ಎಂದು ಹೇಳಿ, ಮೂರು ಈಟಿಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು, ಅಬ್ಷಾಲೋಮನು ಇನ್ನೂ ಏಲಾ ಮರದ ಮಧ್ಯದಲ್ಲಿ ಜೀವದಿಂದಿರುವಾಗ, ಅವುಗಳನ್ನು ಅವನ ಹೃದಯದಲ್ಲಿ ತಿವಿದನು.
१४यवाब म्हणाला, इथे वेळ दवडण्यात काही अर्थ नाही. अबशालोम अजून जिवंत असून एलावृक्षात अजून तसाच लटकत होता. यवाबाने तीन भाले घेतले आणि ते अबशालोमवर फेकले. भाले अबशालोमच्या हृदयातून आरपार गेले.
15 ಆಗ ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯುವಕರು ಸುತ್ತಿಕೊಂಡು, ಅಬ್ಷಾಲೋಮನನ್ನು ಕೊಂದುಹಾಕಿದರು.
१५यवाबाजवळ दहा तरुण सैनिक त्याचे लढाईतील मदतनीस म्हणून होते. त्यांनी भोवती जमून अबशालोमचा वध केला.
16 ಆಗ ಯೋವಾಬನು ತುತೂರಿಯನ್ನು ಊದಿದ್ದರಿಂದ, ಸೈನಿಕರು ಇಸ್ರಾಯೇಲರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು. ಏಕೆಂದರೆ ಯೋವಾಬನು ಜನರನ್ನು ತಡೆದನು.
१६यवाबाने रणशिंग फुंकले आणि लोकांस अबशालोमच्या इस्राएली सैन्याचा पाठलाग थांबवायला सांगितले.
17 ಅವರು ಅಬ್ಷಾಲೋಮನನ್ನು ತೆಗೆದುಕೊಂಡು, ಅಡವಿಯಲ್ಲಿರುವ ಒಂದು ದೊಡ್ಡ ಗುಂಡಿಯಲ್ಲಿ ಹಾಕಿ, ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆದರೆ ಇಸ್ರಾಯೇಲರೆಲ್ಲರೂ ತಮ್ಮ ಗುಡಾರಗಳಿಗೆ ಓಡಿಹೋದರು.
१७यवाबाच्या मनुष्यांनी अबशालोमचा मृतदेह अरण्यातील एका खंदकात नेऊन टाकला. त्यावर दगडांची रास रचून तो खंदक भरून टाकला. अबशालोमाबरोबर आलेल्या इस्राएलींनी पळ काढला आणि ते घरी परतले.
18 ಅಬ್ಷಾಲೋಮನು ಜೀವದಿಂದಿರುವಾಗ, “ನನ್ನ ಹೆಸರನ್ನು ಜ್ಞಾಪಕಾರ್ಥವಾಗಿ ಉಳಿಸಲು ನನಗೆ ಮಗನಿಲ್ಲ,” ಎಂದು ಹೇಳಿ, ಅವನು ತಗ್ಗಿನಲ್ಲಿರುವ ಒಂದು ಕಲ್ಲಿನ ಸ್ತಂಭವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಈ ದಿನದವರೆಗೂ ಅಬ್ಷಾಲೋಮನ ಸ್ಮಾರಕಸ್ತಂಭ ಎಂದು ಕರೆಯಲಾಗುತ್ತದೆ.
१८अबशालोमने राजाच्या खोऱ्यात पूर्वीच एक स्तंभ उभारलेला होता. आपले नाव चालवायला पुत्र नाही म्हणून त्याने त्या स्तंभाला स्वत: चेच नाव दिले होते. आजही तो अबशालोम स्मृतीस्तंभ म्हणून ओळखला जातो.
19 ಆಗ ಚಾದೋಕನ ಮಗ ಅಹೀಮಾಚನು, “ಯೆಹೋವ ದೇವರು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾರೆಂಬ ವರ್ತಮಾನವನ್ನು ಅರಸನಿಗೆ ತಿಳಿಸುವ ಹಾಗೆ, ನಾನು ಓಡಿ ಹೋಗುವೆನು,” ಎಂದನು.
१९सादोकाचा मुलगा अहीमास यवाबाला म्हणाला मला धावत जाऊन ही बातमी राजाला सांगू दे. परमेश्वराने त्याच्या शत्रूचा नि: पात केला आहे हे मी त्यास सांगतो.
20 ಆದರೆ ಯೋವಾಬನು ಅವನಿಗೆ, “ನೀನು ಈ ಹೊತ್ತು ವರ್ತಮಾನ ತೆಗೆದುಕೊಂಡು ಹೋಗಬೇಡ. ಮತ್ತೊಂದು ದಿವಸ ವರ್ತಮಾನ ತೆಗೆದುಕೊಂಡು ಹೋಗಬಹುದು. ಏಕೆಂದರೆ ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತೆಗೆದುಕೊಂಡು ಹೋಗಬೇಡ,” ಎಂದನು.
२०यवाब त्यास म्हणाला, आज तुला दावीदाकडे ही बातमी घेऊन जाता येणार नाही. नंतर जाऊन तू सांग पण आज नको. कारण खुद्द राजाचा पुत्र मरण पावला आहे.
21 ಯೋವಾಬನು ಕೂಷ್ಯ ದೇಶವಾಸಿಯಾದ ಒಬ್ಬನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು,” ಎಂದನು. ಕೂಷ್ಯ ದೇಶವಾಸಿ ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು.
२१मग यवाब कूश येथील एकाला म्हणाला, तू पाहिलेस त्याचे वर्तमान राजाला जाऊन सांग त्या मनुष्याने यवाबला अभिवादन केले मग तो दावीदाकडे निघाला.
22 ಆಗ ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, ಏನೇ ಆಗಲಿ, “ನಾನು ಕೂಷ್ಯ ದೇಶವಾಸಿ ಹಿಂದೆ ಓಡಿಹೋಗುವ ಹಾಗೆ ಅಪ್ಪಣೆಕೊಡಬೇಕು,” ಎಂದನು. ಅದಕ್ಕೆ ಯೋವಾಬನು, “ನನ್ನ ಮಗನೇ, ನೀನು ಏಕೆ ಹೋಗಲು ಬಯಸುತ್ತಿರುವೆ? ನಿನಗೆ ಪ್ರಶಸ್ತಿಯನ್ನು ತರುವ ಯಾವುದೇ ಸುದ್ದಿ ನಿನ್ನ ಬಳಿ ಇಲ್ಲ,” ಎಂದನು.
२२सादोकाचा मुलगा अहीमास याने पुन्हा यवाबाकडे विनवणी केली. काय होईल ते होईल, पण मलाही त्या कूशीच्या पाठोपाठ धावत जाऊ दे. यवाब म्हणाला मुला तू ही बातमी नेऊन काय करणार? त्यासाठी काही तुला इनाम मिळायचे नाही.
23 ಅವನು, “ಏನೇ ಆಗಲಿ, ನಾನು ಓಡಿ ಹೋಗುತ್ತೇನೆ,” ಎಂದನು. ಯೋವಾಬನು, “ಓಡು,” ಎಂದನು. ಆಗ ಅಹೀಮಾಚನು ಬಯಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.
२३अहीमास म्हणाला; “काहीही होवो, मला धावत जाऊ द्या.” तेव्हा यवाबाने त्यास म्हटले, “धाव.” अहीमास मग यार्देनच्या खोऱ्यातून धावत निघाला. त्याने त्या कूशीला मागे टाकले.
24 ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ, ಕಣ್ಣುಗಳನ್ನೆತ್ತಿ ನೋಡಲಾಗಿ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿಬರುವುದನ್ನು ಕಂಡನು.
२४राजा वेशीच्या दोन दरवाजांमध्येच बसला होता. तेव्हा पहारेकरी तटबंदीवरील छपरावर चढला. त्याने इकडे तिकडे पाहिले तेव्हा त्यास एक मनुष्य धावत येताना दिसला.
25 ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು, “ಅವನು ಒಬ್ಬನಾಗಿ ಬಂದರೆ, ಅವನ ಬಳಿ ಒಳ್ಳೆಯ ಸಮಾಚಾರ ಇರುವುದು,” ಎಂದನು. ಅವನು ಬಂದು ಸಮೀಪಿಸಿದನು.
२५पहारेकऱ्याने हे राजाला ओरडून मोठ्याने सांगितले. राजा दावीद म्हणाला, तो एकटाच असेल तर त्याचा अर्थ तो काहीतरी बातमी घेऊन येत आहे. धावता धावता तो मनुष्य शहराच्या जवळ येऊन पोहचतो तोच,
26 ಕಾವಲುಗಾರನು ಬೇರೊಬ್ಬನು ಓಡಿಬರುವುದನ್ನು ಕಂಡು, ಬಾಗಿಲು ಕಾಯುವವನನ್ನು ಕರೆದು, “ಇಗೋ, ಮತ್ತೊಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ,” ಎಂದನು. ಅದಕ್ಕೆ ಅರಸನು, “ಅವನೂ ಸಹ ಒಳ್ಳೆಯ ಸಮಾಚಾರ ತೆಗೆದುಕೊಂಡು ಬರುತ್ತಾನೆ,” ಎಂದನು.
२६पहारेकऱ्याने आणखी एकाला धावत येताना पाहिले. पहारेकरी द्वाररक्षकाला म्हणाला, तो पाहा आणखी एक मनुष्य एकटाच धावत येतोय तेव्हा राजा म्हणाला, तो ही बातमी आणतोय.
27 ಕಾವಲುಗಾರನು, “ಮೊದಲನೆಯವನ ಓಟವು ಚಾದೋಕನ ಮಗ ಅಹೀಮಾಚನ ಓಟದ ಹಾಗೆ ಇರುವುದೆಂದು ನನಗೆ ಕಾಣುತ್ತದೆ,” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಒಳ್ಳೆಯ ಸಮಾಚಾರ ತರುತ್ತಾನೆ,” ಎಂದನು.
२७पहारेकरी म्हणाला, पहिल्याचे धावणे मला सादोकाचा मुलगा अहीमास याच्यासारखे वाटते. राजा म्हणाला, अहीमास चांगला गृहस्थ आहे. त्याच्याजवळ चांगलीच बातमी असणार
28 ಆಗ ಅಹೀಮಾಚನು ಕೂಗಿ ಅರಸನಿಗೆ, “ಎಲ್ಲವೂ ಕ್ಷೇಮ,” ಎಂದು ಹೇಳಿ ಅರಸನ ಮುಂದೆ ಮೋರೆ ಕೆಳಗಾಗಿ, ನೆಲಕ್ಕೆ ಅಡ್ಡಬಿದ್ದು, “ಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಮನುಷ್ಯರನ್ನು ಒಪ್ಪಿಸಿಕೊಟ್ಟ ನಿಮ್ಮ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ,” ಎಂದನು.
२८अहीमासने “सर्व कुशल असो, असे म्हणून राजाला वाकून अभिवादन केले. पुढे तो म्हणाला, परमेश्वर देवाला धन्यवाद द्या. धनीस्वामी, तुमच्याविरुध्द ज्यांनी उठाव केला त्यांना परमेश्वराने पराभूत केले आहे.”
29 ಅರಸನು, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು ಉತ್ತರವಾಗಿ, “ಯೋವಾಬನು ಅರಸನ ಸೇವಕನನ್ನೂ, ನಿನ್ನ ಸೇವಕನಾದ ನನ್ನನ್ನೂ ಕಳುಹಿಸಿದಾಗ ದೊಡ್ಡ ಗೊಂದಲವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ,” ಎಂದನು.
२९राजाने विचारले अबशालोमचे कुशल आहे ना? अहीमास म्हणाला, यवाबाने मला पाठवले तेव्हा मोठी धांदल उडालेली दिसलेली, पण ती कशाबद्दल हे मला कळले नाही.
30 ಅರಸನು, “ನೀನು ಇತ್ತಲಾಗಿ ಬಂದು ನಿಲ್ಲು,” ಎಂದನು. ಅವನು ಅತ್ತಲಾಗಿ ಹೋಗಿ ನಿಂತನು. ಆಗ ಕೂಷ್ಯನು ಬಂದನು.
३०राजाने मग त्यास बाजूला उभे राहून थांबायला सांगितले. अहीमास त्याप्रमाणे पलीकडे झाला आणि थांबला.
31 ಕೂಷ್ಯನು, “ಅರಸನಾದ ನನ್ನ ಒಡೆಯನಿಗೆ ಶುಭವರ್ತಮಾನ ಉಂಟು, ಏನೆಂದರೆ ಯೆಹೋವ ದೇವರು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು, ಸಮಸ್ತರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾರೆ,” ಎಂದನು.
३१मग तो कूशी आला. तो म्हणाला, माझ्या स्वामीसाठी ही बातमी आहे. तुमच्या विरूद्ध पक्षाच्या लोकांस परमेश्वराने चांगली अद्दल घडवली.
32 ಅರಸನು ಕೂಷ್ಯನಿಗೆ, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದನು. ಕೂಷ್ಯನು ಉತ್ತರವಾಗಿ, “ಅರಸನಾದ ನನ್ನ ಒಡೆಯನ ಶತ್ರುಗಳು ಕೇಡು ಮಾಡುವಂತೆ ನಿನಗೆ ವಿರೋಧವಾಗಿ ಏಳುವ ಸಮಸ್ತರಿಗೂ, ಆ ಯುವಕನಿಗಾದ ಹಾಗೆಯೇ ಆಗಲಿ,” ಎಂದನು.
३२राजाने त्यास विचारले, अबशालोम ठीक आहे ना? त्यावर कूशीने सांगितले तुमचे शत्रू आणि तुमच्या वाईटावर असलेले लोक या सगळ्यांची त्या तरुण माणासा सारखी, अबशालोमासारखीच गत होवो.
33 ಆಗ ಅರಸನು ನಡುಗುತ್ತಾ ಊರು ಬಾಗಿಲ ಮೇಲಿರುವ ಕೊಠಡಿಗೆ ಏರಿಹೋದನು. ಹೋಗುವಾಗ, “ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ,” ಎಂದು ಹೇಳಿ ಅತ್ತನು.
३३यावरुन अबशालोम मरण पावला हे राजाला उमगले. तो फार शोकाकुल झाला. वेशीच्या भिंतीवर बांधलेल्या खोलीत तो गेला. तेथे त्यास रडू कोसळले, आपल्या दालनात जाताना तो म्हणाला, “अबशालोम, माझ्या पुत्रा, तुझ्या ऐवजी मीच मरायला हवे होते माझ्या पुत्रा!”

< ಸಮುವೇಲನು - ದ್ವಿತೀಯ ಭಾಗ 18 >