< ಸಮುವೇಲನು - ದ್ವಿತೀಯ ಭಾಗ 19 >

1 “ಅರಸನು ಅಬ್ಷಾಲೋಮನಿಗೋಸ್ಕರ ಅತ್ತು ದುಃಖ ಪಡುತ್ತಾ ಇದ್ದಾನೆ,” ಎಂದು ಯೋವಾಬನಿಗೆ ತಿಳಿಸಲಾಯಿತು.
लोकांनी ही बातमी यवाबाला सांगितली. ते त्यास म्हणाले, राजा अबशालोमसाठी शोक करत आहे. तो फार दु: खात आहे.
2 “ಅರಸನು ತನ್ನ ಮಗನಿಗೋಸ್ಕರ ವ್ಯಥೆಪಡುತ್ತಿದ್ದಾನೆ,” ಎಂದು ಎಲ್ಲ ಜನರಿಗೂ ಗೊತ್ತಾಗಿದ್ದರಿಂದ ಆ ವಿಜಯದ ದಿನವು ಸಮಸ್ತ ಜನರಿಗೆ ಗೋಳಾಟವಾಗಿ ಮಾರ್ಪಟ್ಟಿತು.
दावीदाच्या सैन्याने त्या दिवशीची लढाई जिंकली होती. पण लोकांसाठी मात्र तो दु: खाचा दिवस ठरला राजा आपल्या मुलाच्या मृत्यूमुळे दु: खात आहे हे ऐकून लोक फार खिन्न झाले.
3 ಆದ್ದರಿಂದ ಜನರು ಯುದ್ಧದಲ್ಲಿ ಓಡಿಹೋಗಿ ಅವಮಾನ ಪಟ್ಟು ಬರುವ ಕಳ್ಳರ ಹಾಗೆ ಪಟ್ಟಣದೊಳಗೆ ಬಂದರು.
ते शांतपणे नगरात परतले, युध्दात पराभूत होऊन तिथून पळ काढलेल्या लोकांप्रमाणे ते दिसत होते.
4 ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು, ಮಹಾಶಬ್ದವಾಗಿ, “ನನ್ನ ಮಗ ಅಬ್ಷಾಲೋಮನೇ, ಅಬ್ಷಾಲೋಮನೇ ನನ್ನ ಮಗನೇ, ನನ್ನ ಮಗನೇ,” ಎಂದು ಕೂಗುತ್ತಿದ್ದನು.
राजा आपला चेहरा झाकून घेऊन आपला मुलगा अबशालोम याच्या नावाने, माझ्या मुला अबशालोमा, असा मोठ्याने आक्रोश करत होता.
5 ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು, ಅವನಿಗೆ, “ನಿನ್ನ ಪ್ರಾಣವನ್ನೂ, ನಿನ್ನ ಪುತ್ರಪುತ್ರಿಯರ ಪ್ರಾಣಗಳನ್ನೂ, ನಿನ್ನ ಹೆಂಡತಿಯರ ಮತ್ತು ಉಪಪತ್ನಿಯರ ಪ್ರಾಣಗಳನ್ನೂ ರಕ್ಷಿಸಿದ ನಿನ್ನ ಸೇವಕರನ್ನು ಈ ಹೊತ್ತು ನಾಚಿಕೆಪಡಿಸಿದ್ದೀ.
यवाब राजाच्या निवासस्थानी आला आणि त्यास म्हणाला, आपल्या सेवकांना तुम्ही आज मान खाली घालायला लावली आहे. तुमच्या सेवकांनी तुमचा जीव वाचवला. तुमचे पुत्र, कन्या, पत्नी, पत्नी दासी यांचे प्राण वाचवले.
6 ನೀನು ನಿನ್ನ ಹಗೆಯವರನ್ನು ಪ್ರೀತಿಮಾಡಿ, ನಿನ್ನನ್ನು ಪ್ರೀತಿಸುವವರನ್ನು ಹಗೆ ಮಾಡಿದ್ದರಿಂದ ಸೇನಾಧಿಪತಿಗಳನ್ನೂ, ಸೈನಿಕರನ್ನೂ ನಿನಗೆ ಏನೂ ಅಲ್ಲವೆಂದು ಈಗ ತಿಳಿಯಮಾಡಿದಿ. ಈ ಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋಮನು ಬದುಕಿದ್ದರೆ, ನಿನಗೆ ಸಂತೋಷವಾಗುತ್ತಿತ್ತು ಎಂದು ನನಗೆ ಅನಿಸುತ್ತದೆ.
ज्यांनी तुमचा द्वेष केला त्यांच्यावर तुम्ही प्रेम दाखवता आहात, आणि ज्यांनी तुमच्यावर लोभ केला त्यांना तुम्ही दूर सारता आहात. तुमची माणसे, तुमचे सेवक यांना तुमच्या दृष्टीने काही किंमत नाही हे तुमच्या वागण्यावरून स्पष्ट झाले आहे. आज अबशालोम जगला असता आणि आम्ही सर्व मरण पावलो असतो तर तुम्हास फार आनंद झाला असता असे दिसते.
7 ಈಗ ನೀನು ಎದ್ದು ಹೊರಟುಬಂದು, ನಿನ್ನ ಸೈನಿಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ, ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವುದಿಲ್ಲವೆಂದು ಯೆಹೋವ ದೇವರ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವನಕಾಲದಿಂದ ಈ ದಿನದವರೆಗೂ ನಿನಗೆ ಬಂದ ಸಮಸ್ತ ಕೇಡಿಗಿಂತ ಅದು ಅಧಿಕ ಕೇಡಾಗಿರುವುದು,” ಎಂದನು.
आता ऊठा आणि आपल्या सेवकांशी बोला. त्यांना प्रोत्साहन द्या. आताच उठून तुम्ही हे ताबडतोब केले नाही, तर आज रात्रीपर्यंत तुमच्या बाजूला एकही मनुष्य उरणार नाही याची मी परमेश्वरासमक्ष ग्वाही देतो. आणि हा तुमच्या बालपणापासूनच्या आयुष्यातला सर्वांत मोठा आघात असेल.
8 ಆಗ ಅರಸನು ಎದ್ದು ಹೋಗಿ ಬಾಗಿಲಲ್ಲಿ ಕುಳಿತನು. “ಅರಸನು ಬಾಗಿಲಲ್ಲಿ ಕುಳಿತಿದ್ದಾನೆ,” ಎಂದು ಸಮಸ್ತ ಸೈನಿಕರಿಗೆ ತಿಳಿದಿದ್ದರಿಂದ, ಸೈನಿಕರೆಲ್ಲರೂ ಅರಸನ ಎದುರಿಗೆ ಬಂದರು. ಆದರೆ ಇಸ್ರಾಯೇಲರು ಮಧ್ಯದಲ್ಲಿ ತಮ್ಮ ತಮ್ಮ ಮನೆಗಳಿಗೆ ಹೋದರು.
तेव्हा राजा उठून वेशीपाशी गेला. राजा तेथे आल्याची खबर सर्वत्र पसरली. तेव्हा सर्व जण राजाच्या दर्शनाला जमले. अबशालोमला पाठिंबा देणारे सर्व इस्राएल लोक आपापल्या ठिकाणी पळून गेले होते.
9 ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿ ಸಮಸ್ತ ಜನರು ತಮ್ಮೊಳಗೆ ಜಗಳ ಮಾಡುತ್ತಾ, “ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಫಿಲಿಷ್ಟಿಯರ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಆದರೆ ಈಗ ಅಬ್ಷಾಲೋಮನಿಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ.
इस्राएलच्या सर्व घराण्यातील लोक आता बोलू लागले “पलिष्टी आणि आपले इतर शत्रू यांच्यापासून राजा दावीदाने आपल्याला संरक्षण दिले, पण तो अबशालोमपासून पळून गेला.”
10 ನಮ್ಮನ್ನು ಆಳಲು ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರುಗಿ ಕರೆದುಕೊಂಡು ಬಾರದೆ, ಸುಮ್ಮನೆ ಇರುವುದು ಏಕೆ?” ಎಂದರು.
१०म्हणून अबशालोमची आपण राज्य करण्यासाठी निवड केली. पण तो आता लढाईत मरण पावला आहे. तेव्हा आपण आता पुन्हा दावीदाला राजा करू.
11 ಆಗ ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ, ಅಬಿಯಾತರನ ಬಳಿಗೂ ಸೇವಕರನ್ನು ಕಳುಹಿಸಿ, “ನೀವು ಯೆಹೂದದ ಹಿರಿಯರಿಗೆ, ‘ಸಮಸ್ತ ಇಸ್ರಾಯೇಲಿನ ಮಾತು ಅರಸನಿಗೆ ಅವನ ಅರಮನೆಯಲ್ಲಿಯೇ ತಿಳಿದಿರುವಾಗ, ಅರಸನನ್ನು ಅವನ ಮನೆಗೆ ತಿರುಗಿ ಕರೆದುಕೊಂಡು ಬರುವಂತೆ ನೀವು ಹಿಂಜರಿದದ್ದೇನು?
११सादोक आणि अब्याथार या याजकांना राजा दावीदाने निरोप पाठवला, यहूदातील वडीलधाऱ्यांशी बोला. त्यांना सांगा, राजा दावीदाला गादीवर आणायला तुम्ही शेवटचे घराणे का आहा? राजाने पुन्हा परतण्याविषयी सर्वच इस्राएल लोकांची बोलणी चाललेली आहेत.
12 ನೀವು ನನ್ನ ಸಹೋದರರೂ, ನನ್ನ ರಕ್ತವೂ, ನನ್ನ ಮಾಂಸವೂ ಆಗಿದ್ದೀರಿ. ಹಾಗಾದರೆ ಅರಸನನ್ನು ತಿರುಗಿ ಬರಮಾಡುವಂತೆ ನೀವು ಹಿಂಜರಿದದ್ದೇನು?’ ಎಂದು ತಿಳಿಸಿರಿ.
१२तुम्ही माझे बांधव, माझ्या कुटुंबातीलच आहात. मग राजाला परत आणणारे तुम्ही शेवटचे घराणे का आहात?
13 ಇದಲ್ಲದೆ ನೀವು ಅಮಾಸನಿಗೆ, ‘ನೀನು ನನ್ನ ರಕ್ತವೂ, ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ, ದೇವರು ನನಗೆ ಏನಾದರೂ ಮಾಡಲಿ,’ ಎಂದು ಹೇಳಿರಿ,” ಎಂದನು.
१३आणि अमासास सांगा, तुम्ही माझ्या कुटुंबाचाच भाग आहात. यवाबाच्या जागी सेनापती म्हणून मी तुमची नेमणूक केली नाही, तर देव मला शासन करो.
14 ಅರಸನು ಸಕಲ ಯೆಹೂದ ಜನರ ಹೃದಯವನ್ನು ಸಂಪೂರ್ಣವಾಗಿ ಗೆದ್ದುಕೊಂಡದ್ದರಿಂದ, ಅವರು ಅರಸನಿಗೆ, “ನೀನೂ, ನಿನ್ನ ಸಮಸ್ತ ಸೇವಕರೂ ತಿರುಗಿ ಬನ್ನಿರಿ,” ಎಂದು ಹೇಳಿ ಕಳುಹಿಸಿದರು.
१४दावीदाने यहूदातील सर्व लोकांच्या हृदयाला हात घातला. त्यामुळे ते सर्व एकदिलाने राजी झाले. यहूदी लोकांनी राजाला संदेश पाठवला की, तुम्ही आणि तुमचे अधिकारी, सेवक यांनी माघारे यावे.
15 ಅರಸನು ತಿರುಗಿ ಯೊರ್ದನಿನವರೆಗೂ ಬಂದನು. ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವುದಕ್ಕೆ ಗಿಲ್ಗಾಲಿಗೆ ಬಂದರು.
१५मग राजा दावीद यार्देन नदीपाशी आला. यहूदातील लोक त्यास भेटायला गिलगाल येथे आले. राजाला यार्देन नदी पार करून आणण्याचा त्यांचा हेतू होता.
16 ಬಹುರೀಮಿನವನೂ ಬೆನ್ಯಾಮೀನ್ಯನೂ ಗೇರನ ಮಗ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸ ದಾವೀದನನ್ನು ಎದುರುಗೊಳ್ಳುವುದಕ್ಕೆ ಬಂದನು.
१६गेराचा पुत्र शिमी हा बन्यामिनी होता तो बहूरीम येथे राहत असे. यहूदातील लोकांसह राजाची भेट घ्यायला तो लगबगीने आला.
17 ಅವನ ಸಂಗಡ ಬೆನ್ಯಾಮೀನ್ಯರಾದ ಸಾವಿರ ಜನರೂ, ಸೌಲನ ಮನೆಯ ಸೇವಕ ಚೀಬನೂ, ಅವನ ಸಂಗಡ ಹದಿನೈದು ಮಂದಿ ಪುತ್ರರೂ, ಅವನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ, ಅರಸನಿಗೆ ಎದುರಾಗಿ ಬಂದರು.
१७बन्यामीनच्या वंशातील हजार माणसेही त्याच्याबरोबर आली. शौलाच्या घराण्यातील सेवक सीबा हा ही आला. आपले पंधरा पुत्र आणि वीस नोकर यांनाही त्याने बरोबर आणले. राजा दावीदाला भेटायला हे सर्व यार्देन नदीजवळ तात्काळ पोहोचले.
18 ಅರಸನ ಮನೆಯವರನ್ನು ಈಚೆ ದಡಕ್ಕೆ ತರುವುದಕ್ಕೂ, ಅವನ ದೃಷ್ಟಿಗೆ ಒಳ್ಳೆಯದಾಗಿ ತೋರಿಸಿದ್ದನ್ನು ಮಾಡುವುದಕ್ಕೂ ಯೊರ್ದನನ್ನು ದಾಟಿ ಬಂದರು. ಆಗ ಗೇರನ ಮಗ ಶಿಮ್ಮಿಯು ಯೊರ್ದನನ್ನು ದಾಟುತ್ತಲೇ, ಅರಸನ ಮುಂದೆ ಬಿದ್ದು ಅರಸನಿಗೆ,
१८राजाच्या कुटुंबियांना उतरून घ्यायला ते यार्देनच्या पलीकडे गेले. राजाला हवे ते करायला ते तयार होते. राजा नदी ओलांडत असताना गेराचा मुलगा शिमी त्याच्या भेटीला आला. शिमीने राजाला जमिनीपर्यंत लवून अभिवादन केले.
19 “ನನ್ನ ಒಡೆಯನೇ, ನನ್ನ ಅಕ್ರಮವನ್ನು ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖತನದಿಂದ ಮಾಡಿದ ಕಾರ್ಯವನ್ನು ನೆನಸದೆ, ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.
१९तो राजाला म्हणाला, स्वामी, माझ्या हातून घडलेल्या अपराधांचा विचार करू नका. महाराज, तुम्ही यरूशलेम सोडून गेलात तेव्हाची माझी कृत्ये विसरून जा.
20 ಏಕೆಂದರೆ ಪಾಪ ಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದ್ದರಿಂದ ಇಗೋ, ನಾನು ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫ್ಯರಲ್ಲಿ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದಿದ್ದೇನೆ,” ಎಂದನು.
२०आपल्या दासाने अपराध केला आहे हे आपला दास जाणून आहे; म्हणून पाहा, आज माझ्या स्वामीराजांच्या भेटीस्तव अवघ्या योसेफ घराण्यातून मीच पहिला आलो आहे.
21 ಆಗ ಚೆರೂಯಳ ಮಗ ಅಬೀಷೈಯನು ಉತ್ತರವಾಗಿ, “ಯೆಹೋವ ದೇವರ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ, ಅದಕ್ಕಾಗಿ ಅವನಿಗೆ ಮರಣದಂಡನೆ ಆಗಬೇಕಲ್ಲವೆ?” ಎಂದನು.
२१पण सरुवेचा मुलगा अबीशय म्हणाला, परमेश्वराने निवडलेल्या राजाविषयी शिमीने शिव्याशाप दिले तेव्हा त्यास ठारच करायला हवे.
22 ಆದರೆ ದಾವೀದನು, “ಚೆರೂಯಳ ಮಕ್ಕಳೇ, ಈ ಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈ ಹೊತ್ತು ಇಸ್ರಾಯೇಲಿನಲ್ಲಿ ಯಾರಿಗೂ ಮರಣದಂಡನೆ ಆಗಬಾರದು, ಏಕೆಂದರೆ ಈ ಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ಗೊತ್ತಾಯಿತಲ್ಲಾ?” ಎಂದನು.
२२दावीद म्हणाला, सरुवेच्या मुलानो मी तुमच्या बरोबर कसे वागावे? तुमचे हे बोलणे आज माझ्या विरूद्ध आहे. इस्राएलमध्ये कोणालाही ठार केले जाणार नाही कारण आज मी इस्राएलचा राजा आहे.
23 ಆಗ ಅರಸನು ಶಿಮ್ಮಿಗೆ, “ನೀನು ಸಾಯುವುದಿಲ್ಲ,” ಎಂದು ಅವನಿಗೆ ಆಣೆ ಇಟ್ಟನು.
२३मग राजा शिमीला म्हणाला, तू मरणार नाहीस. आपण शिमीचा वध करणार नाही, असे राजाने शिमीला वचन दिले.
24 ಸೌಲನ ಮೊಮ್ಮಗ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವವರೆಗೂ ಅವನು ತನ್ನ ಪಾದಗಳನ್ನು ಕಟ್ಟಿಕೊಳ್ಳಲಿಲ್ಲ, ಗಡ್ಡವನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.
२४शौलाचा नातू मफीबोशेथ राजा दावीदाला भेटायला आला. राजा यरूशलेम सोडून गेला तेव्हा पासून तो सुखरुप परतेपर्यंत मफीबोशेथने स्वत: कडे फार दुर्लक्ष केले होते. त्याने दाढी केली नाही, पायांची निगा राखली नाही की कपडे धुतले नाहीत.
25 ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ, ಅರಸನು ಅವನಿಗೆ, “ಮೆಫೀಬೋಶೆತನೇ, ನೀನು ಏಕೆ ನನ್ನ ಸಂಗಡ ಬಾರದೆ ಹೋದೆ?” ಎಂದನು.
२५मफीबोशेथ यरूशलेमेहून आला तेव्हा राजा त्यास म्हणाला, मी तेथून निघालो तेव्हा तू ही माझ्याबरोबर का बाहेर पडला नाहीस?
26 ಅದಕ್ಕವನು, “ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಏಕೆಂದರೆ ನಿನ್ನ ಸೇವಕನು ಕುಂಟನಾಗಿರುವುದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕಿ, ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.
२६मफीबोशेथने सांगितले, महाराज, माझ्या नोकराने, सीबाने, मला फसवले, त्यास मी म्हणालो, मी पांगळा आहे, तेव्हा गाढवावर खोगीर चढव म्हणजे त्यावर बसून मी राजाबरोबर जाईन.
27 ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಮಾಡು.
२७पण त्याने माझ्याशी लबाडी केली. माझ्याविरूद्ध तुमचे कान फुंकले. पण स्वामी, तुम्ही देवदूतासारखे आहात. आपल्याला योग्य वाटेल ते करा.
28 ಏಕೆಂದರೆ ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರೂ ಸತ್ತವರಾಗಿ ಇದ್ದರೂ, ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವುದಕ್ಕೆ ಯೋಗ್ಯನೋ?” ಎಂದನು.
२८माझ्या बापाचे सर्व घराणे स्वामीराजासमोर मृतवत होते; तरी आपण आपल्या दासाची आपल्या पंक्तीस बसणार्‍यांमध्ये नेमणूक केली; महाराजांजवळ आणखी दाद मागायचा मला काय हक्क आहे?
29 ಆಗ ಅರಸನು ಅವನಿಗೆ, “ಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡುವುದೇನು? ನೀನೂ, ಚೀಬನೂ ಭೂಮಿಯನ್ನು ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ,” ಎಂದನು.
२९तेव्हा राजा मफीबोशेथला म्हणाला, आता आपल्या अडचणीविषयी आणखी काही सांगू नकोस. आता माझा निर्णय ऐक तू आणि सीबा जमीन विभागून घ्या.
30 ಮೆಫೀಬೋಶೆತನು ಅರಸನಿಗೆ, “ಹೌದು, ಅರಸನಾದ ನನ್ನ ಒಡೆಯನು ಸಮಾಧಾನದಿಂದ ತಿರುಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಸಮಸ್ತವನ್ನು ತೆಗೆದುಕೊಳ್ಳಲಿ,” ಎಂದನು.
३०मफीबोशेथ राजाला म्हणाला महाराज ती सगळी जमीन खुशाल सीबाला घेऊ द्या. माझे धनी सुखरुप परत आला यामध्ये सगळे आले.
31 ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ರೋಗೆಲೀಮಿನಿಂದ ಅರಸನನ್ನು ಯೊರ್ದನ್ ದಾಟಿಸಲು ಮತ್ತು ಅಲ್ಲಿಂದ ಅವನನ್ನು ಕಳುಹಿಸಲು ಬಂದನು.
३१गिलादाचा बर्जिल्ल्य रोगलीमहून आला. दावीदाला तो यार्देन नदीच्या पलीकडे पोचवायला आला.
32 ಈ ಬರ್ಜಿಲ್ಲೈಯು ಎಂಬತ್ತು ವರ್ಷದವನಾಗಿ ಮಹಾವೃದ್ಧನಾಗಿದ್ದನು. ಅರಸನು ಮಹನಯಿಮಿನಲ್ಲಿ ವಾಸಿಸಿಸುವವರೆಗೂ ಇವನು ಅರಸನನ್ನು ಸಂರಕ್ಷಿಸಿದನು. ಏಕೆಂದರೆ ಅವನು ಬಹು ಸಿರಿವಂತ ಮನುಷ್ಯನಾಗಿದ್ದನು.
३२बर्जिल्ल्यचे वय झाले होते तो ऐंशी वर्षांचा होता. राजा दावीदाचा मुक्काम महनाईम येथे असताना त्याने दावीदाला अन्नधान्य आणि इतर गोष्टी पुरवल्या होत्या. श्रीमंत असल्यामुळे तो एवढे करू शकला.
33 ಆದ್ದರಿಂದ ಅರಸನು ಬರ್ಜಿಲ್ಲೈಗೆ, “ನೀನು ನನ್ನ ಸಂಗಡ ಬಾ, ಯೆರೂಸಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು,” ಎಂದನು.
३३दावीद त्यास म्हणाला, नदी उतरून माझ्याबरोबर चल. तू यरूशलेमेमध्ये माझ्याबरोबर राहिलास तर मी तुझा सांभाळ करीन.
34 ಆದರೆ ಬರ್ಜಿಲ್ಲೈಯು ಅರಸನಿಗೆ, “ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?
३४पण बर्जिल्ल्य राजाला म्हणाला, तुम्हास माझे वय माहीत आहे ना? यरूशलेमपर्यंत मी तुमच्याबरोबर येऊ शकेन असे तुम्हास वाटते का?
35 ನಾನು ಈ ಹೊತ್ತು ಎಂಬತ್ತು ವರ್ಷದವನು. ಇನ್ನು ಒಳ್ಳೆಯದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವುದು, ಕುಡಿಯುವುದು ನಿನ್ನ ಸೇವಕನಿಗೆ ರುಚಿಕರವಾಗಿರುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಏಕೆ ಇನ್ನು ಭಾರವಾಗಿರಬೇಕು?
३५मी ऐंशी वर्षांचा आहे. वार्धाक्यामुळे मी आता बऱ्यावाईटाची पारख करू शकत नाही. खातोपितो त्याची चव सांगू शकत नाही. गाणाऱ्या स्त्री पुरुषांच्या आवाजाला दाद देऊ शकत नाही. राजा, माझ्या राजा तुमच्या मागे लोढणे कशाला लावून देऊ?
36 ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವವರೆಗೂ ಅವರ ಅರಸನ ಸಂಗಡ ಬರುವನು. ಅದಕ್ಕೆ ಇಂಥಾ ಬಹುಮಾನ ಕೊಡುವುದೇನು?
३६आता मला तुमच्याकडून अनुग्रहाची अपेक्षा नाही. मी तुझा सेवक यार्देन नदी उतरून तुमच्याबरोबर येतो. राजाने अशाप्रकारे या बक्षिसाने परतफेड का करावी?
37 ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರುಗಿ ಹೋಗಿ, ನನ್ನ ಪಟ್ಟಣದಲ್ಲಿ ನನ್ನ ತಂದೆತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ನಿನ್ನ ಸೇವಕನಾದ ನನ್ನ ಮಗ ಕಿಮ್ಹಾಮನು ಬರುವನು. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅವನಿಗೆ ಮಾಡು,” ಎಂದನು.
३७पण मला पुन्हा परत घरी जाऊ द्या. म्हणजे माझ्या गावात मी देह ठेवीन आणि माझ्या आईवडीलांच्या कबरेतच माझे दफन होईल. पण किम्हानला आपला चाकर म्हणून बरोबर घेऊन जाऊ शकता. महाराज आपल्या मर्जीप्रमाणे त्यास वागवा.
38 ಆಗ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ನಾನು ಅವನಿಗೆ ಮಾಡುವೆನು. ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು,” ಎಂದನು.
३८तेव्हा राजा म्हणाला, “तर किम्हाम माझ्याबरोबर येईल.” तुला स्मरून मी त्याचे भले करीन. तुझ्यासाठी मी काहीही करायला तयार आहे.
39 ಜನರೆಲ್ಲರೂ ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ, ಬರ್ಜಿಲ್ಲೈಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಸ್ಥಳಕ್ಕೆ ಹಿಂದಿರುಗಿದನು.
३९राजाने बर्जिल्ल्यचे चुंबन घेऊन त्यास आशीर्वाद दिले. बर्जिल्ल्य आपल्या घरी परतला. राजा इतर लोकांबरोबर नदी ओलांडून पलीकडे गेला.
40 ಅರಸನು ಗಿಲ್ಗಾಲಿಗೆ ಬಂದನು. ಹಾಗೆಯೇ ಅವನ ಸಂಗಡ ಕಿಮ್ಹಾಮನು ಬಂದನು. ಯೆಹೂದದ ಸೈನಿಕರೆಲ್ಲರೂ, ಇಸ್ರಾಯೇಲಿನ ಅರ್ಧ ಪಾಲು ಸೈನಿಕರೂ ಅರಸನನ್ನು ಕರೆದುಕೊಂಡು ಬಂದರು.
४०नदी ओलांडून राजा गिलगाल येथे आला. किम्हाम त्याच्याबरोबर होता. यहूदाचे सर्व लोक आणि निम्मे इस्राएल लोक राजाला नदी ओलांडून पोहचवायला आले.
41 ಇಸ್ರಾಯೇಲರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ, “ನಮ್ಮ ಸಹೋದರರಾದ ಯೆಹೂದದ ಮನುಷ್ಯರು ಕಳ್ಳತನವಾಗಿ ನಿನ್ನನ್ನು ಕರೆತಂದದ್ದೇನು? ಅರಸನನ್ನೂ, ಅವನ ಮನೆಯವರನ್ನೂ, ಅವನ ಸಂಗಡ ಇರುವ ದಾವೀದನ ಸಕಲ ಮನುಷ್ಯರನ್ನೂ ಯೊರ್ದನನ್ನು ದಾಟಿಸಿದ್ದೇನು?” ಎಂದರು.
४१सर्व इस्राएल लोक राजाकडे आले. ते म्हणाले, “आमचे बांधव यहूदी यांनी तुमचा ताबा घेऊन तुम्हास आणि तुमच्या कुटुंबियांना यार्देन पार करून आणले असे का?”
42 ಆಗ ಯೆಹೂದದವರೆಲ್ಲರೂ ಇಸ್ರಾಯೇಲರಿಗೆ ಉತ್ತರವಾಗಿ, “ಅರಸನು ನಮಗೆ ಸಮೀಪ ಬಂಧುವಾದುದರಿಂದ, ಈ ಕಾರ್ಯಕ್ಕೋಸ್ಕರ ನೀವು ಕೋಪಗೊಂಡಿರುವುದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ನಾವು ನಮಗಾಗಿ ಏನನ್ನಾದರೂ ತೆಗೆದುಕೊಂಡಿದ್ದೇವೆಯೇ?” ಎಂದರು.
४२तेव्हा सर्व यहूदी लोकांनी त्या इस्राएल लोकांस सांगितले. “कारण राजा आमचा जवळचा आप्त आहे. तुम्हास एवढा राग का यावा? आम्ही राजाचे अन्न खाल्ले काय? ज्यासाठी आम्हास काही द्यावे लागेल? किंवा त्याने आम्हास काही बक्षीस दिले काय?”
43 ಆದರೆ ಇಸ್ರಾಯೇಲರು ಯೆಹೂದ ಜನರಿಗೆ ಉತ್ತರವಾಗಿ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟು. ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರುಗಿ ಕರೆದುಕೊಂಡು ಬರುವುದರ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಏಕೆ ಅಲ್ಪರಾಗಿ ಎಣಿಸಿದಿರಿ?” ಎಂದರು. ಆದರೆ ಇಸ್ರಾಯೇಲರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.
४३इस्राएल लोक म्हणाले, “आमच्याकडे दावीदाचे दहा हिस्से आहेत. तेव्हा तुमच्यापेक्षा आमचा त्याच्यावर जास्त हक्क आहे. असे असून तुम्ही आमच्याकडे दुर्लक्ष केलेत.” असे का? आम्हास तुच्छ लेखले व राजाला परत माघारी आणण्यापूर्वी आमचा सल्ला घेतला नाही? इस्राएलीं पेक्षाही यहूदींची भाषा कठोर होती.

< ಸಮುವೇಲನು - ದ್ವಿತೀಯ ಭಾಗ 19 >