< ಆಮೋಸನು 9 >

1 ಕರ್ತದೇವರು ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ನಾನು ಕಂಡೆನು. ಅವರು ಹೇಳಿದ್ದೇನೆಂದರೆ: “ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು, ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದುಬಿಡು. ಅವರಲ್ಲಿ ಉಳಿದವರನ್ನು ಖಡ್ಗದಿಂದ ಕೊಲ್ಲುವೆನು. ಅವರಲ್ಲಿ ಓಡಿಹೋಗುವವನು ಓಡಿಹೋಗಲಾಗುವುದಿಲ್ಲ.
मी प्रभूला वेदीजवळ उभे असलेले पाहिले, आणि तो म्हणाला, “खांबांच्या माथ्यावर मार, म्हणजे इमारत अगदी उंबऱ्यापासून हादरेल. आणि त्यांच्या डोक्यावर मारून त्याचे तुकडे कर. कोणी जिवंत राहिल्यास, मी त्यास तलवारीने ठार मारीन. त्यांच्यातल्या एकालाही पळून जाता येणार नाही, आणि त्यांच्यातल्या एकालाही सुटता येणार नाही.
2 ಅವರು ಪಾತಾಳದವರೆಗೂ ಅಗೆದುಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು. ಅವರು ಆಕಾಶಕ್ಕೆ ಏರಿಹೋದರೂ, ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು. (Sheol h7585)
ते खणून मृतलोकांत जरी गेले, तरी माझा हात त्यांना तेथून ओढून काढीन. ते आकाशात उंच चढून गेले, तरी मी त्यांना तेथून खाली आणीन. (Sheol h7585)
3 ಅವರು ಕರ್ಮೆಲಿನ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ, ಅಲ್ಲಿಂದ ತೆಗೆಯುವೆನು. ಅವರು ನನ್ನ ದೃಷ್ಟಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಸರ್ಪಕ್ಕೆ ಅಪ್ಪಣೆಕೊಟ್ಟು, ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
ते जरी कर्मेल पर्वताच्या शिखरावर लपले, तरी तेथून मी त्यांना शोधून काढीन. त्यांनी जरी माझ्यापासून लपून समुद्राचा तळ गाठला, तर मी सापाला आज्ञा करीन व तो त्यांना चावेल.
4 ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋಗಿದ್ದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಕೊಲ್ಲುವುದು. “ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.”
ते जरी आपल्या वैऱ्यांपुढे पाडावपणात गेले, तर तेथून मी तलवारीला आज्ञा करीन आणि ती त्यांना ठार मारील. मी आपले डोळे त्यांच्याकडे चांगल्यासाठी नव्हे, तर त्यांना त्रास कसा होईल या करीता लावीन.”
5 ಸೇನಾಧೀಶ್ವರ ಯೆಹೋವ ದೇವರಾದ ಕರ್ತರೇ, ನೀವು ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವುದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನೈಲ್ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಈಜಿಪ್ಟಿನ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವುದು.
आणि ज्याने भूमीला स्पर्श केला म्हणजे ती वितळते, आणि त्यामध्ये राहणारे सर्व शोक करतात, तो प्रभू, सैन्यांचा परमेश्वर आहे, आणि त्यातील सर्व नदीप्रमाणे उठणार व मिसरच्या नदीप्रमाणे पुन्हा बुडणार.
6 ಆಕಾಶದಲ್ಲಿ ಉಪ್ಪರಿಗೆಗಳನ್ನು ಕಟ್ಟಿಕೊಂಡು, ಭೂಮಿಯ ಮೇಲೆ ತಮ್ಮ ತಂಡಗಳನ್ನು ಸ್ಥಾಪಿಸಿ, ಸಮುದ್ರದ ನೀರನ್ನು ಕರೆದು, ಅದನ್ನು ಭೂಮಿಯ ಮೇಲೆ ಹೊಯ್ಯುವಂತೆ ಮಾಡುವಾತರು ಅವರೇ. ಅವರ ಹೆಸರು ಯೆಹೋವ ದೇವರು.
ज्याने आकाशामध्ये आपल्या माड्या बांधल्या, आणि आपला घुमट पृथ्वीत स्थापिला आहे, जो समुद्राच्या पाण्याला बोलवून पृथ्वीच्या पाठीवर ओततो, त्याचे नाव परमेश्वर आहे.
7 “ಇಸ್ರಾಯೇಲರೇ, ನೀವು ನನಗೆ ಕೂಷ್ಯರ ಮಕ್ಕಳ ಹಾಗಲ್ಲವೇ? ನಾನು ನಿಮ್ಮನ್ನು ಈಜಿಪ್ಟಿನಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ತರಲಿಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.
परमेश्वर असे म्हणतो: “इस्राएलाचे लोकहो, तुम्ही मला कूशी लोकांप्रमाणे नाही काय? मी इस्राएलाला मिसर देशातून पलिष्ट्यांना कफतोरमधून आणि अरामींना कीर मधून आणले नाही काय?”
8 “ಸಾರ್ವಭೌಮ ಯೆಹೋವ ದೇವರ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲೆ ಇವೆ. ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋಬಿನ ಮನೆತನದವರನ್ನು ನಾನು ನಿಜವಾಗಿ ನಾಶಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
पाहा, प्रभू परमेश्वराचे डोळे पापी राज्यावर आहे, आणि मी ते पृथ्वीच्या पाठीवरून नष्ट करीन, पण याकोबाच्या घराण्याचा मी संपूर्ण नाश करणार नाही.
9 ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ನಾನು ಇಸ್ರಾಯೇಲರನ್ನು ಎಲ್ಲಾ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ.
“पाहा, मी आज्ञा करीन, धान्य चाळण्यासारखे मी इस्राएलाच्या घराण्याला सर्व राष्ट्रांमध्ये चाळीन, व त्यातील लहान अशी कणी देखील भूमीवर पडणार नाही.”
10 ಕೇಡು ನಮ್ಮನ್ನು ಹಿಂದಟ್ಟದು ಮತ್ತು ನಮ್ಮನ್ನು ತಡೆಯುವದೂ ಇಲ್ಲ, ಎನ್ನುವ ನನ್ನ ಜನರಲ್ಲಿರುವ ಪಾಪಿಗಳೆಲ್ಲರೂ ಖಡ್ಗದಿಂದ ಸಾಯುವರು.
१०माझ्या लोकांतील पापी जे असे म्हणतात, “आमचे काही वाईट होणार नाही किंवा ते आम्हास आडवेही येणार नाही. ते सर्व तलवारीने मारतील.”
11 ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.
११त्या दिवशी दाविदचा मंडप जो पडला आहे, मी तो पुन्हा उभारीन. मी त्यांच्या भिंतीतील भगदाडे बुजवीन आणि जे उद्ध्वस्त झोलेले आहे, ते मी पुन्हा बांधीन. मी त्या पुरातन दिवसात होत्या, तशाच पुन्हा बांधीन.
12 ಆಗ ಅವರು ಎದೋಮಿನ ಮಿಕ್ಕ ಭಾಗವನ್ನೂ, ನನ್ನ ಹೆಸರಿನಿಂದ ಕರೆಯಲಾಗುವ ಎಲ್ಲಾ ಜನಾಂಗಗಳನ್ನೂ ಸ್ವಾಧೀನ ಮಾಡಿಕೊಳ್ಳುವೆನು, ಎಂಬುದಾಗಿ ಇದನ್ನು ಮಾಡುವವರಾದ ಯೆಹೋವ ದೇವರು ಹೇಳುತ್ತಾರೆ.
१२“ह्यासाठी की त्यांनी अदोमाच्या उरलेल्यांना, आणि ज्या राष्ट्रांना माझे नाव ठेवले आहे, त्या सर्व राष्ट्रांना, आपल्या ताब्यात घ्यावे.” परमेश्वर जो हे करतो तो असे म्हणतो.
13 ಯೆಹೋವ ದೇವರು ಹೇಳುವುದೇನೆಂದರೆ: “ದಿನಗಳು ಬರುವುವು,” “ಆಗ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿ ಮಾರುವವನು ಬೀಜ ಹಾಕುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವುವು, ಗುಡ್ಡಗಳೆಲ್ಲಾ ಕರಗುವುವು.
१३परमेश्वर म्हणतो, “असे दिवस येत आहेत की,” नांगरणी करणारा कापणी करणाऱ्याला, द्राक्षे तुडविणारा बी पेरणाऱ्याला, गाठील. आणि पर्वत गोड द्राक्षरस गळू देतील आणि सर्व टेकड्या पाझरतील.
14 ನನ್ನ ಜನರಾದ ಇಸ್ರಾಯೇಲರನ್ನು ಸೆರೆಯಿಂದ ತಿರುಗಿ ಬರಮಾಡುವೆನು. “ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು. ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.
१४मी माझ्या लोकांस, इस्राएलाला, कैदेतून सोडवून परत आणीन, ते उद्ध्वस्त झालेली गावे पुन्हा बांधतील, आणि त्यामध्ये वस्ती करतील. ते द्राक्षांचे मळे लावतील. आणि त्यापासून मिळणारा द्राक्षरस पितील. ते बागा लावतील व त्यापासून मिळणारे पीक खातील.
15 ನಾನು ಇಸ್ರಾಯೇಲರನ್ನು ಅವರ ದೇಶದಲ್ಲಿ ನೆಡುವೆನು. ನಾನು ಅವರಿಗೆ ಕೊಟ್ಟಿರುವ ದೇಶದಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕರು,” ಎಂದು ನಿಮ್ಮ ದೇವರಾದ ಯೆಹೋವ ದೇವರು ಹೇಳುತ್ತಾರೆ.
१५मी त्यांना त्यांच्या देशात रुजवीन आणि मी त्यांना दिलेल्या भूमीतून ते पुन्हा उपटले जाणार नाहीत. परमेश्वर तुझा देव असे म्हणतो.

< ಆಮೋಸನು 9 >