< ಧರ್ಮೋಪದೇಶಕಾಂಡ 19 >

1 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶದ ಜನಾಂಗಗಳನ್ನು ದೇವರು ತೆಗೆದುಹಾಕಿದ ತರುವಾಯ, ನೀವು ದೇಶವನ್ನು ಸ್ವಾಧೀನಮಾಡಿಕೊಂಡು ಅದರ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಿರಿ.
तुझा देव परमेश्वर ज्या राष्ट्रांची भूमी तुला देत आहे, त्या राष्ट्रांना नष्ट केल्यावर त्यांच्या प्रदेशाचा तू ताबा घेतल्यानंतर, त्यांच्या जागी त्यांची नगरे आणि घरे तुम्ही ताब्यात घ्याल,
2 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ನಿಮ್ಮ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿಮಗಾಗಿ ಪ್ರತ್ಯೇಕಿಸಬೇಕು.
तेव्हा तुझा देव परमेश्वर जो देश तुला देत आहे त्यामध्ये तीन नगरे तुम्ही राखून ठेवा.
3 ಕೈತಪ್ಪಿ ಕೊಲೆ ಮಾಡುವವರೆಲ್ಲರೂ ಅಲ್ಲಿಗೆ ಓಡಿಹೋಗುವುದಕ್ಕೆ ಅನುಕೂಲವಾಗುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದ ಮೇರೆಯನ್ನು ಮೂರು ಭಾಗಮಾಡಿ, ಅವುಗಳ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು.
म्हणजे कोणाच्या हातून मनुष्यवध झाल्यास त्यास तेथे पळून जाता यावे म्हणून रस्ते तयार कर, आणि जो प्रदेश तुझा देव परमेश्वर तुला देत आहे त्या देशाचे तू तीन भाग कर.
4 ಬದುಕಿ ಉಳಿಯಲು ಅಲ್ಲಿ ಓಡಿಹೋಗತಕ್ಕ ಕೊಲೆಪಾತಕನ ವಿವರವೇನೆಂದರೆ, ತಿಳಿಯದೆ ಇಲ್ಲವೆ ಪೂರ್ವ ಕಲ್ಪಿತ ಹಗೆ ಮಾಡದೆ, ತನ್ನ ನೆರೆಯವನನ್ನು ಹೊಡೆದವನೇ.
मनुष्यवध करून या तीनपैकी एका नगरात आश्रयाला येणाऱ्याबद्दल नियम असा: पूर्वीचे वैर नसताना जर कोणी चुकून आपल्या शेजाऱ्याला ठार मारले तर त्याने येथे जावे.
5 ಉದಾಹರಣೆಗೆ: ಒಬ್ಬ ವ್ಯಕ್ತಿ ಕಟ್ಟಿಗೆಯನ್ನು ಕಡಿಯಲು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋದನೆಂದು ಇಟ್ಟುಕೊಳ್ಳೋಣ. ಅಲ್ಲಿ ಒಂದು ಮರವನ್ನು ಕೊಡಲಿಯಿಂದ ಹೊಡೆಯುತ್ತಿರುವಾಗ, ಕೊಡಲಿ ಕಾವಿನಿಂದ ಜಾರಿ, ಆ ಮತ್ತೊಬ್ಬನಿಗೆ ತಗಲಿ ಅವನು ಸತ್ತರೆ, ಹೊಡೆದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.
उदाहरणार्थ, एखादा मनुष्य लाकडे तोडायला त्याच्या शेजाऱ्याबरोबर जंगलात गेला. तेथे झाडावर कुऱ्हाड चालवत असताना चूकून कुऱ्हाडीचे पाते दांड्यापासून निसटले आणि ते नक्की दुसऱ्यावर पडून तो मेला. अशावेळी कुऱ्हाड चालवणाऱ्याने यापैकी एखाद्या नगराच्या आश्रयाला जाऊन आपले प्राण वाचवावे.
6 ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ. ಆದ್ದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯೆ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪ ಬಂಧು ಕೋಪದಿಂದ ಉರಿಯುತ್ತಾ, ಅವನನ್ನು ಹಿಂದಟ್ಟಬಹುದು. ಮಾರ್ಗದ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದು ಹಾಕಬಹುದು.
हे नगर फार दूर असेल तर त्यास तेथपर्यंत पोचता येणार नाही. मृताचा जवळचा नातेवाईक त्याचा पाठलाग करील व त्यास त्या नगरात पोचण्यापूर्वीच गाठेल. आणि रागाच्या भरात त्याचा वध करील. खरे पाहता त्या मनुष्याच्या हातून वैर नसताना मनुष्य हत्या झाली होती तेव्हा तो प्राणदंडाला पात्र नव्हता.
7 ಈ ಕಾರಣದಿಂದಲೇ ನೀವು ಆ ಮೂರು ಆಶ್ರಯಪಟ್ಟಣಗಳನ್ನು ಗೊತ್ತು ಮಾಡಬೇಕೆಂದು ಆಜ್ಞಾಪಿಸಿದ್ದೇನೆ.
म्हणून मी तुला ही आज्ञा करतो अशी तीन नगरे स्वत: साठी राखून ठेव.
8 ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದಂತೆ ನಿಮ್ಮ ಮೇರೆಯನ್ನು ವಿಸ್ತಾರಮಾಡಿ, ನಿಮ್ಮ ಪಿತೃಗಳಿಗೆ ಕೊಡುವುದಾಗಿ ಹೇಳಿದ ದೇಶವನ್ನೆಲ್ಲಾ ನಿಮಗೆ ಕೊಡುವರು.
तुमच्या प्रदेशाचा विस्तार करण्याचे तुमचा देव परमेश्वर ह्याने तुमच्या वशंजाना शपथ दिल्याप्रमाणे, त्यांना वचन दिलेला सर्व प्रदेश तो तुम्हास देईल.
9 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀವು ಕಾಪಾಡಿ ಕೈಗೊಳ್ಳಬೇಕು. ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾರ್ಗಗಳಲ್ಲಿ ಯಾವಾಗಲೂ ನಡೆದರೆ ನೀವು ಈ ಮೂರು ಪಟ್ಟಣಗಳ ಜೊತೆಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
तुमचा देव परमेश्वर ह्याजवर प्रीती करा व त्याने दाखवलेल्या मार्गात नियमीत चालत जा. मी दिलेल्या या आज्ञा तुम्ही पूर्णपणे पाळल्यात तर मग परमेश्वराने तुमच्या प्रदेशाचा विस्तार केला की तुम्ही पहिल्या तीन नगरांच्या भरीला आश्रयासाठी आणखी तीन नगरे निवडा.
10 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗಬಾರದು, ಅಂಥವನಿಗೆ ಮರಣಶಿಕ್ಷೆಯಾದರೆ ಆ ರಕ್ತಾಪರಾಧ ನಿಮ್ಮದಾಗಿಯೇ ಇರುವುದು.
१०म्हणजे तुमचा देव परमेश्वर तुम्हास देणार असलेल्या भूमीवर निर्दोष मनुष्यांचा रक्तपात होणार नाही आणि अशा हत्येचे दोष तुम्हास लागणार नाही.
11 ಆದರೆ ಒಬ್ಬನು ತನ್ನ ನೆರೆಯವನನ್ನು ದ್ವೇಷಿಸಿ ಹೊಂಚು ಹಾಕಿ, ಅವನಿಗೆ ವಿರೋಧವಾಗಿ ಎದ್ದು, ಅವನನ್ನು ಸಾಯುವವರೆಗೂ ಹೊಡೆದು ಕೊಂದುಹಾಕಿ ಈ ಪಟ್ಟಣಗಳಿಗೆ ಓಡಿಹೋದರೆ,
११पण द्वेषापोटीही एखादा मनुष्य संधीची वाट पाहत लपूनछपून दुसऱ्याच्या जिवावर उठेल, त्याच्यावर प्राणघातक हल्ला करून या नगरात पळून गेला.
12 ಆ ಪಟ್ಟಣದ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ, ಅವನಿಗೆ ಮರಣದಂಡನೆಯಾಗುವಂತೆ ಸೇಡು ತೀರಿಸಿಕೊಳ್ಳುವವನ ಕೈಗೆ ಅವನನ್ನು ಒಪ್ಪಿಸಬೇಕು.
१२अशावेळी त्याच्या नगरातील वडिलधाऱ्यांनी माणसे पाठवून त्यास तेथून बाहेर काढावे व मृताच्या नातेवाईकांच्या हवाली करावे. म्हणजे त्यास मृत्यूची शिक्षा झाली पाहिजे.
13 ನೀವು ಅವನ ಮೇಲೆ ದಯೆ ತೋರಬಾರದು. ನಿಮಗೆ ಒಳ್ಳೆಯದಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಾಯೇಲರಲ್ಲಿ ಉಳಿಯದಂತೆ ತೆಗೆದುಹಾಕಬೇಕು.
१३त्या मनुष्यावर दया दाखवू नका परंतु निरपराध मनुष्याच्या हत्येचा दोष इस्राएलातून पुसून टाक म्हणजे तुझे कल्याण होईल.
14 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ದೇಶದೊಳಗೆ ನೀವು ಹೊಂದುವ ಸೊತ್ತಿನಲ್ಲಿ ಹಿರಿಯರು ಇಟ್ಟಂಥ ನಿಮ್ಮ ನೆರೆಯವನ ಮೇರೆಯನ್ನು ಸರಿಸಬಾರದು.
१४शेजाऱ्याच्या जमिनीची सीमा खूण काढू नको. पूर्वीच्या लोकांनी त्या सीमा आखलेल्या आहेत. हे तुमचा देव परमेश्वर ह्याने तुमच्या वाट्याला जेवढे वतन दिले त्याच्या या खूणा आहेत.
15 ಯಾವ ಅಕ್ರಮದ ನಿಮಿತ್ತವೂ, ಅಥವಾ ಪಾಪದ ನಿಮಿತ್ತವೂ ಒಬ್ಬ ಮನುಷ್ಯನಿಗೆ ವಿರೋಧವಾಗಿ ಒಬ್ಬ ಸಾಕ್ಷಿ ನಿಂತುಕೊಳ್ಳಬಾರದು. ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ವಿಷಯವು ಸ್ಥಿರವಾಗುವುದು.
१५एखाद्याने काही गुन्हा किंवा अपराध केला तर, अपराधाचा आरोप कोणावर असेल तर त्यास दोषी ठरवायला एक साक्षीदार पुरेसा नाही. त्याने खरेच गुन्हा केला आहे हे ठरवायला दोन किंवा तीन साक्षीदार तरी हवेतच.
16 ಸುಳ್ಳುಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವುದಕ್ಕೆ ಎದ್ದರೆ,
१६अमक्याच्या हातून अपराध घडला आहे असे एखादा साक्षीदार द्वेषबुद्धीने, मुद्दाम खोटे सांगू शकतो.
17 ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಯೆಹೋವ ದೇವರ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ಹಾಗು ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.
१७अशावेळी त्या दोघांना परमेश्वरासमोर म्हणजे तेथे जे याजक व न्यायाधीश त्यावेळी असतील त्यांच्यापुढे उभे करावे.
18 ನ್ಯಾಯಾಧಿಪತಿಗಳು ಕೂಲಂಕಷವಾಗಿ ವಿಚಾರಣೆ ಮಾಡಬೇಕು. ಆಗ ಇಗೋ, ಆ ಸಾಕ್ಷಿಯು ಸುಳ್ಳುಸಾಕ್ಷಿಯಾಗಿದ್ದರೆ, ಅಂದರೆ ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ,
१८मग न्यायाधीशांनी त्याबाबत कसून चौकशी केली पाहिजे. त्यातून साक्षीदाराचा आपल्या बंधुविरोधात खोटारडेपणा उघडकीला आला,
19 ಅವನು ತನ್ನ ಸಹೋದರನಿಗೆ ಮಾಡುವುದಕ್ಕೆ ಯೋಚಿಸಿದ ಪ್ರಕಾರವೇ ಅವನಿಗೆ ಶಿಕ್ಷೆ ಕೊಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.
१९तर मग तुम्ही त्यास तीच शिक्षा करावी जी त्यास आपल्या बंधूला जे शासन व्हावे असे वाटत होते. अशा रीतीने आपल्यामधून नीच वृत्तीचा नायनाट करा
20 ಆಗ ಉಳಿದವರು ಕೇಳಿ ಭಯಪಟ್ಟು, ಆ ದುಷ್ಟಕೃತ್ಯವನ್ನು ಇನ್ನು ಮುಂದೆ ನಿಮ್ಮ ಮಧ್ಯದಲ್ಲಿ ಮಾಡದಿರುವರು.
२०हे ऐकून इतरांना भीती वाटेल आणि तेथून पुढे तुमच्यामध्ये असे वाईट घडणार नाही.
21 ನೀವು ಅಂಥವರಿಗೆ ಕರುಣೆ ತೋರಿಸಬಾರದು, ಪ್ರಾಣಕ್ಕೆ ಪ್ರತಿಯಾಗಿ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಪ್ರತಿಯಾಗಿ ಕಾಲನ್ನು ಅವನಿಂದ ತೆಗೆದುಬಿಡಬೇಕು.
२१तू दया दाखवू नये. कोणी कोणाचा जीव घेतल्यास त्यालाही देहान्ताचे शासन द्यावे. डोळ्याबद्दल डोळा, दाताबद्दल दात, हाताच्या बदल्यात हात आणि पायाच्या बदल्यात पाय असा दंड करावा.

< ಧರ್ಮೋಪದೇಶಕಾಂಡ 19 >