< ಧರ್ಮೋಪದೇಶಕಾಂಡ 2 >

1 ಆಗ ಯೆಹೋವ ದೇವರು ನನಗೆ ಆಜ್ಞಾಪಿಸಿದ ಪ್ರಕಾರ ಮರುಭೂಮಿಗೆ ಹೊರಟು ಕೆಂಪುಸಮುದ್ರದ ಮಾರ್ಗದಲ್ಲಿ ಅನೇಕ ದಿನಗಳು ಸೇಯೀರ್ ಬೆಟ್ಟದ ಮಲೆನಾಡನ್ನು ಸುತ್ತುತ್ತಿದ್ದೆವು.
मोशे आणखीन पुढे म्हणाला; “परमेश्वराने मला सांगितल्याप्रमाणे आपण मागे फिरुन तांबड्या समुद्राच्या वाटेने रानात निघालो बरेच दिवस सेईर डोंगराभोवती फिरत राहिलो.
2 ಆಮೇಲೆ ಯೆಹೋವ ದೇವರು ನನಗೆ,
परमेश्वर तेव्हा मला म्हणाला,
3 “ನೀವು ಈ ಬೆಟ್ಟವನ್ನು ಸುತ್ತಿದ್ದು ಸಾಕು. ಉತ್ತರಕ್ಕೆ ತಿರುಗಿಕೊಳ್ಳಿರಿ.
‘या डोंगराभोवती तुम्ही फार दिवस फिरत राहिला आहात. आता उत्तरेकडे वळा.
4 ನೀವು ಜನರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನೀವು ಸೇಯೀರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಪುತ್ರರ ಗಡಿಯನ್ನು ದಾಟಬೇಕು. ಅವರು ನಿಮಗೆ ಭಯಪಡುವರು. ಆದ್ದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.
आणि लोकांस आणखी एक सांग, तुम्हास वाटेत सेईर लागेल. ती भूमी एसावाच्या वंशाजांची, तुमच्या भाऊबंदांची आहे त्यांना तुमची भीती वाटेल तेव्हा सांभाळा.
5 ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದವಿಡುವಷ್ಟು ಸ್ಥಳವನ್ನಾದರೂ ಕೊಡುವುದಿಲ್ಲ. ಏಕೆಂದರೆ ಸೇಯೀರ್ ಬೆಟ್ಟವನ್ನು ನಾನು ಏಸಾವನಿಗೆ ಸ್ವದೇಶವಾಗಿ ಕೊಟ್ಟಿದ್ದೇನೆ.
त्यांच्याशी भांडू नका. त्यांच्यातली तसूभरही जमीन मी तुम्हास देणार नाही. कारण सेईर डोंगर मी एसावाला वतन म्हणून दिला आहे.
6 ನೀವು ಅಲ್ಲಿ ಉಣ್ಣುವ ಆಹಾರವನ್ನು ಮತ್ತು ಕುಡಿಯುವ ನೀರನ್ನು ಸಹ ಹಣಕೊಟ್ಟು ಕೊಂಡುಕೊಳ್ಳಬೇಕು.’”
तुमचे अन्न पैसे देवून, विकत घेवून खा. पाणीही विकत घेवून प्या.
7 ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದಾರೆ. ನೀವು ಈ ದೊಡ್ಡ ಮರುಭೂಮಿಯಲ್ಲಿ ಸಂಚಾರ ಮಾಡಿದ್ದನ್ನು ದೇವರು ಗಮನಿಸಿದ್ದಾರೆ. ಈ ನಲವತ್ತು ವರ್ಷ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದರು. ನಿಮಗೆ ಏನೂ ಕಡಿಮೆ ಆಗಲಿಲ್ಲ.
तुमच्या हातच्या सर्व कार्यात तुमचा देव परमेश्वर याने तुम्हास आशीर्वादीत केले आहे. तुमच्या या रानातील वाटचालीकडे त्याचे लक्ष आहे. गेली चाळीस वर्षे तुमचा देव परमेश्वर तुमच्या सोबत राहीला आहे. तुम्हास कशाचीही वाण पडली नाही.’
8 ಈ ಪ್ರಕಾರ ನಾವು ಸೇಯೀರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಓರೆಯಾಗಿ ತಿರುಗಿಕೊಂಡು ಅರಾಬಾದ ಮಾರ್ಗವನ್ನು ಬಿಟ್ಟು ಏಲತ್, ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ, ಮೋವಾಬಿನ ಮರುಭೂಮಿಯ ಮಾರ್ಗವಾಗಿ ಹಾದು ಹೋದೆವು.
तेव्हा एसावचे वंशज राहत असलेल्या सेईर वरुन आपण गेलो. एलाथ आणि एसयोन-गेबेर वरून येणारा अराबाचा मार्ग आपण सोडला आणि मवाबाच्या रानातल्या रस्त्याला आपण वळालो.
9 ಆಗ ಯೆಹೋವ ದೇವರು ನನಗೆ, “ಮೋವಾಬ್ಯರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ಏಕೆಂದರೆ ನಾನು ಅವರ ದೇಶದಲ್ಲಿ ನಿನಗೆ ಸೊತ್ತನ್ನು ಕೊಡುವುದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಆರ್ ಎಂಬ ಪ್ರದೇಶವನ್ನು ಕೊಟ್ಟೆನಲ್ಲವೇ?” ಎಂದರು.
परमेश्वर मला म्हणाला, ‘मवाबाला उपद्रव करू नका. त्यांच्याशी युद्धाचा प्रंसग आणू नका. त्यांच्यातली जमीन मी तुम्हास देणार नाही. कारण आर नगर मी लोटच्या वंशजांना इनाम दिले आहे.’”
10 ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ಬಲಿಷ್ಠರೂ ಬಹುಜನರೂ ಎತ್ತರವಾದವರೂ ಆಗಿದ್ದರು.
१०पूर्वी तेथे एमी लोक राहत असत. ते बहुसंख्य, धिप्पाड व अनाकी लोकांप्रमाणे महाकाय होते.
11 ಅವರು ಅನಾಕ್ಯರ ಹಾಗೆ ರೆಫಾಯರಿಗೆ ಸೇರಿದವರೆಂದು ಹೇಳುವದುಂಟು. ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.
११या एमींना लोक अनाकी यांच्याप्रमाणेच रेफाई समजत असत. पण मवाबी लोक त्यांना एमी म्हणतात.
12 ಅದೇ ಪೂರ್ವಕಾಲದಲ್ಲಿ ಹೋರಿಯರು ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವ ದೇವರು ಕೊಟ್ಟ ನಾಡನ್ನು ಹೇಗೆ ಸ್ವಾಧೀನ ಮಾಡಿಕೊಂಡರೋ, ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ, ಅವರ ನಾಡಿನಲ್ಲಿ ವಾಸಮಾಡಿದರು.
१२पूर्वी सेईरात होरी लोकही राहत असत. पण एसावाच्या वंशजांनी त्यांची जमीन बळकावली, होरींचा संहार केला व तेथे स्वत: वस्ती केली. परमेश्वराने त्यांना दिलेल्या देशाचे इस्राएलींनी जसे केले तसेच त्यांनी इथे केले.
13 “ಈಗ ಎದ್ದು ಜೆರೆದ್ ಹಳ್ಳವನ್ನು ದಾಟಿರಿ,” ಎಂದು ಯೆಹೋವ ದೇವರು ಹೇಳಿದ ಮೇಲೆ ನಾವು ಜೆರೆದ್ ಹಳ್ಳವನ್ನು ದಾಟಿದೆವು.
१३“मग परमेश्वराने मला जेरेद ओढ्यापलीकडे जायला सांगितले.” त्याप्रमाणे आपण जेरेद ओढ्यापलीकडे गेलो.
14 ನಾವು ಕಾದೇಶ್ ಬರ್ನೇಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳವನ್ನು ದಾಟಿದವರೆಗೆ ಗತಿಸಿದ ಕಾಲವು ಮೂವತ್ತೆಂಟು ವರ್ಷ. ಯೆಹೋವ ದೇವರು ಅವರಿಗೆ ಪ್ರಮಾಣ ಮಾಡಿದ ಪ್ರಕಾರ ಅಷ್ಟರಲ್ಲಿ ಆ ಸಂತತಿಯ ಸೈನಿಕರೆಲ್ಲರು ಸತ್ತುಹೋಗಿದ್ದರು.
१४कादेश बर्ण्या सोडून जेरेद ओढ्यापलीकडे पोहोचेपर्यंत अडतीस वर्षे उलटली होती. तोपर्यंत आपल्या पिढीतील सर्व लढवय्ये मरण पावले होते. परमेश्वराने शपथ वाहिल्या प्रमाणे हे झाले.
15 ಪಾಳೆಯದಿಂದ ಅವರನ್ನು ಸಂಪೂರ್ಣವಾಗಿ ಹೊರಹಾಕುವವರೆಗೂ ಯೆಹೋವ ದೇವರ ಹಸ್ತವು ಅವರ ಮೇಲಿತ್ತು.
१५त्यांचा समूळ नाश होईपर्यंत छावणीतून त्यांचा संहार करावा म्हणून परमेश्वराचा त्यांच्यावर हात उगारलेला होता
16 ಉಳಿದ ಯುದ್ಧ ಮಾಡುವವರು ಜನರೊಳಗಿಂದ ಸತ್ತು ಹೋದ ಮೇಲೆ,
१६ह्याप्रकारे सर्व योद्धे मरण पावले, ती पिढी नामशेष झाली,
17 ಯೆಹೋವ ದೇವರು ನನ್ನೊಂದಿಗೆ ಮಾತನಾಡಿ ನನಗೆ,
१७परमेश्वर मला म्हणाला,
18 “ಇಂದು ನೀನು ಮೋವಾಬಿನ ಮೇರೆಯಾದ ಆರ್ ಎಂಬ ಸ್ಥಳವನ್ನು ದಾಟಬೇಕು.
१८“तुला आज मवाबाची सीमा ओलांडून आर नगरापलीकडे जायचे आहे.
19 ಅಮ್ಮೋನ್ಯರ ಹತ್ತಿರಕ್ಕೆ ನೀವು ಬಂದಾಗ, ಅವರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನೂ ಕೊಡುವುದಿಲ್ಲ” ಎಂದರು.
१९तेथे अम्मोनी लोक भेटतील. त्यांना उपद्रव देऊ नको. त्यांच्याशी युध्द करू नको. त्यांच्या जमिनीतील वाटा मी तुला देणार नाही. कारण ते लोटाचे वंशज असून त्यांना मी ती वतन दिली आहे.”
20 ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದುದರಿಂದ ಅದು ಸಹ ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರಿಗೆ ಜಂಜುಮ್ಯರೆಂದು ಕರೆದರು.
२०त्या भागाला “रेफाई देश” असेही म्हणतात. पूर्वी तेथे रेफाई लोकांची वस्ती होती. अम्मोनी त्यांना “जमजुम्मी” म्हणत.
21 ಅವರು ಅನಾಕ್ಯರ ಹಾಗೆ ಬಲಿಷ್ಠರೂ ಬಹುಜನರೂ ಎತ್ತರವಾದವರೂ ಆಗಿದ್ದರು. ಆದರೆ ಯೆಹೋವ ದೇವರು ಅವರನ್ನು ಅಮ್ಮೋನಿಯರ ಮುಂದೆ ತೆಗೆದುಹಾಕಿದ್ದರು. ಹೀಗೆ ಅಮ್ಮೋನಿಯರು ಅವರನ್ನು ಹೊರಡಿಸಿ, ಅವರ ಬದಲಾಗಿ ವಾಸಿಸಿದರು.
२१जमजुम्मी संख्येने पुष्कळ व सशक्त होते. अनाकी लोकांप्रमाणे ते धिप्पाड होते. पण त्यांचा संहार करायला अम्मोनी लोकांस परमेश्वराचे साहाय्य होते. आता त्या जमिनीचा ताबा घेऊन अम्मोनी तेथे राहतात.
22 ಯೆಹೋವ ದೇವರು ಸೇಯೀರಿನಲ್ಲಿ ವಾಸವಾಗಿರುವ ಏಸಾವನ ಮಕ್ಕಳಿಗೆ ಮಾಡಿದ ಹಾಗೆ ಆಯಿತು. ದೇವರು ಅವರ ಮುಂದೆ ಹೋರಿಯರನ್ನು ತೆಗೆದುಹಾಕಿದರು. ಹೀಗೆ ಅವರು ಹೋರಿಯರನ್ನು ಹೊರಡಿಸಿ, ಇವರ ಬದಲಾಗಿ ಇಂದಿನವರೆಗೂ ವಾಸಿಸುತ್ತಿದ್ದಾರೆ.
२२एसावाच्या वंशजांनाही देवाचे असेच पाठबळ होते. पूर्वी सेईर येथे होरी लोक राहत असत. त्यांनी त्यांना हुसकावून लावले. पण एसावाच्या वंशजांनी होरींचा संहार केला व आजपर्यंत ते तेथे राहतात.
23 ಹಾಗೆ ಗಾಜಾ ಪಟ್ಟಣದವರೆಗೂ ವಾಸವಾಗಿದ್ದ ಅವ್ವೀಯರನ್ನು ಕಫ್ತೋರಿಂದ ಬಂದ ಕಫ್ತೋರ್ಯರು ನಾಶಮಾಡಿ, ಅವರ ಬದಲಾಗಿ ವಾಸಿಸಿದರು.
२३त्याचप्रमाणे अव्वी लोक गज्जापर्यंतच्या खेड्यात वस्ती करून होते, त्यांचा कफतोराहून आलेल्या कफतोरी लोकांनी उच्छेद करून त्यांची भूमी बळकावली आणि आता ते तेथे राहत आहेत.
24 “ಈಗ ಏಳಿರಿ, ಹೊರಡಿರಿ, ಅರ್ನೋನ್ ಹಳ್ಳವನ್ನು ದಾಟಿರಿ, ಇಗೋ, ಹೆಷ್ಬೋನಿನ ಅರಸ ಅಮೋರಿಯನಾದ ಸೀಹೋನನನ್ನೂ, ಅವನ ದೇಶವನ್ನೂ ನಿಮ್ಮ ಕೈಯಲ್ಲಿ ಕೊಟ್ಟಿದ್ದೇನೆ. ಅವನ ಸಂಗಡ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆರಂಭಮಾಡಿರಿ.
२४पुढे परमेश्वर मला म्हणाला, “आता उठा व आर्णोनाचे खोरे ओलांडून जा. हेशबोनाचा अमोरी राजा सीहोन व त्याचा देश मी तुझ्या हाती दिला आहे, तो देश आपल्या ताब्यात घे आणि त्यास लढाईला प्रवृत्त कर.
25 ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು.
२५तुमच्याविषयी या सर्व आकाशाखालच्या लोकांच्या मनात आज अशी भीती व दहशत निर्माण करीन की, तुमचे वर्तमान ऐकताच ते थरथर कापतील व भयभीत होतील.”
26 ಆಗ ನಾನು ಕೆದೇಮೋತೆಂಬ ಮರುಭೂಮಿಯಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನದ ಸುದ್ದಿಯನ್ನು ತಿಳಿಸುವಂತೆ ದೂತರನ್ನು ಕಳುಹಿಸಿ,
२६मग मी कदेमोथच्या रानातून हेशबोनचा राजा सीहोन याच्याकडे दूताकरवी सलोख्याचा निरोप पाठवला की,
27 “ನಾವು ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಕ್ಕೂ ಬಲಕ್ಕೂ ತಿರುಗದೆ ರಾಜ ಮಾರ್ಗದಿಂದಲೇ ಹೋಗುವೆವು.
२७“तुमच्या देशातून आम्हास जाऊ दे. आमची वाट सोडून आम्ही उजवीडावीकडे वळणार नाही.
28 ನಾವು ಊಣ್ಣುವುದಕ್ಕೆ ಆಹಾರವನ್ನೂ ಕುಡಿಯಲು ನೀರನ್ನು ಹಣಕೊಟ್ಟು ನಿಮ್ಮಿಂದ ಕೊಂಡುಕೊಳ್ಳುತ್ತೇವೆ. ಕಾಲ್ನಡಿಗೆಯಿಂದ ನಿಮ್ಮ ನಾಡನ್ನು ಹಾದು ಹೋಗುತ್ತೇವಷ್ಟೆ.
२८तू पैसे घेऊन मला खाण्यासाठी अन्न विकत दे आणि पाणीही पैसे घेऊन विकत प्यायवयास दे, आम्हास फक्त इथून पलीकडे पायी जाऊ दे.
29 ನಾವು ಯೊರ್ದನಿನ ಆಚೆಗೆ ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ದೇಶಕ್ಕೆ ಹೋಗುವವರಿದ್ದೇವೆ. ಸೇಯೀರಿನಲ್ಲಿ ವಾಸಮಾಡುವ ಏಸಾವನ ಮಕ್ಕಳೂ ಆರ್ ಪ್ರದೇಶದಲ್ಲಿ ವಾಸಮಾಡುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀವೂ ನಮಗೆ ಕೊಡಬೇಕು,” ಎಂದೆನು.
२९यार्देनपलीकडे आमचा देव परमेश्वर आम्हास देणार असलेल्या जमिनीपर्यंत आम्हास जायचे आहे. सेईरच्या एसाव लोकांनी आणि आर येथील मवाबी लोकांनी आम्हास जाऊ दिले तसेच तूही कर.”
30 ಆದರೆ ಹೆಷ್ಬೋನಿನ ಅರಸನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಸಮ್ಮತಿಸಲಿಲ್ಲ. ಏಕೆಂದರೆ ಅವನನ್ನು ನಿಮ್ಮ ಕೈಯಲ್ಲಿ ಒಪ್ಪಿಸುವ ಹಾಗೆ ನಿಮ್ಮ ದೇವರಾದ ಯೆಹೋವ ದೇವರು ಅವನ ಬುದ್ಧಿಯನ್ನು ಮಂಕುಮಾಡಿ, ಹೃದಯವನ್ನು ಕಠಿಣಪಡಿಸಿದರು. ಈಗಾಗಲೇ ಅದು ನೆರವೇರಿದೆ.
३०पण हेशबोनचा राजा सीहोन आपल्या देशातून जाऊ देईना. आपण त्यास पराभूत करावे म्हणूनच तुमचा देव परमेश्वर ह्याने त्यास कठोर केले. त्याचे मन कठीण केले. आज तुम्ही पाहातच आहात की तो देश आपल्या हाती आहे.
31 ಇದಲ್ಲದೆ ಯೆಹೋವ ದೇವರು ನನಗೆ, “ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸುವುದಕ್ಕೆ ಆರಂಭಮಾಡಿದ್ದೇನೆ, ಅವನ ದೇಶವನ್ನು ಸೊತ್ತಾಗಿ ಹೊಂದುವಂತೆ ವಶಪಡಿಸಿಕೊಳ್ಳುವುದಕ್ಕೆ ಆರಂಭಮಾಡು,” ಎಂದು ಹೇಳಿದರು.
३१परमेश्वर मला म्हणाला, “सीहोन राजा आणि त्याचा देश हे मी तुमच्या हवाली करत आहे. त्याचा देश तुझे वतन व्हावे म्हणून त्यांचा ताबा घे.”
32 ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಚಗೆ ಹೊರಟುಬಂದನು.
३२आणि तेव्हा सीहोन व त्याची प्रजा याहस येथे आमच्याबरोबर लढाईसाठी सज्ज झाले.
33 ನಮ್ಮ ದೇವರಾದ ಯೆಹೋವ ದೇವರು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿದ್ದರಿಂದ, ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಸೋಲಿಸಿದೆವು.
३३परमेश्वर देवाने त्यास आपल्या ताब्यात दिले म्हणून आम्ही त्याचा, त्याच्या मुलांचा व सर्व लोकांचा पराभव करू शकलो.
34 ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತೆಗೆದುಕೊಂಡು, ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು. ಒಬ್ಬರನ್ನೂ ಉಳಿಸಲಿಲ್ಲ.
३४त्यांच्या सर्व नगरांचा आम्ही ताबा घेतला व पुरुष, स्त्रिया, मुलेबाळे ह्याच्यासह सर्वांचा समूळ नाश केला, कोणालाही जिवंत ठेवले नाही.
35 ಪಶುಗಳನ್ನು ಮಾತ್ರ ನಮಗೆ ತೆಗೆದುಕೊಂಡು, ಪಟ್ಟಣಗಳನ್ನು ಸೂರೆಮಾಡಿದೆವು.
३५तेथील पशू आणि जिंकलेल्या नगरातील लुट मात्र आम्ही आमच्यासाठी घेतली.
36 ಅರ್ನೋನಿನ ತೀರದಲ್ಲಿರುವ ಅರೋಯೇರ್ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ. ನಮ್ಮ ದೇವರಾದ ಯೆಹೋವ ದೇವರು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದರು.
३६आर्णोन खोऱ्याच्या कडेला वसलेले अरोएर नगर, खोऱ्याच्या मध्यावरील एक नगर तसेच आर्णोन खोरे ते गिलादापर्यंत सर्व नगरे, आमचा देव परमेश्वर याने आम्हास दिली. आम्हास दुर्गम असे एकही नगर नव्हते.
37 ಅಮ್ಮೋನಿಯರ ದೇಶದ ಯಬ್ಬೋಕ್ ನದಿಯ ಬಳಿಯಲ್ಲಿರುವ ಸ್ಥಳವನ್ನೂ ಪರ್ವತ ಪಟ್ಟಣವನ್ನೂ ನಮ್ಮ ದೇವರಾದ ಯೆಹೋವ ದೇವರು ನಮಗೆ ಬೇಡವೆಂದ ಕಾರಣ, ಆ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ.
३७अम्मोन्याचा प्रदेश वगळता फक्त यब्बोक नदीच्या किनाऱ्यावर तसेच डोंगराळ प्रदेशातील नगरांकडे आम्ही गेलो नाही. कारण आमचा देव परमेश्वर याने तेथे जाण्यास बंदी केली होती.

< ಧರ್ಮೋಪದೇಶಕಾಂಡ 2 >