< ಧರ್ಮೋಪದೇಶಕಾಂಡ 21 >

1 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ಹತನಾದ ಒಬ್ಬ ವ್ಯಕ್ತಿಯ ಶವವು ಹೊಲದಲ್ಲಿ ಬಿದ್ದಿರುವುದನ್ನು ನೀವು ಕಂಡಾಗ ಮತ್ತು ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ,
तुमचा देव परमेश्वर तुम्हास देणार असलेल्या प्रदेशात एखाद्याचा उघड्यावर खून झालेला आढळला आणि त्यास कोणी मारले हे कळाले नाही
2 ನಿಮ್ಮ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ, ಆ ಹತನಾದವನ ಸುತ್ತಲಿರುವ ಪಟ್ಟಣಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳಲು ಅಳತೆಮಾಡಬೇಕು.
तर तुमच्यापैकी वडीलधारे आणि न्यायाधीश यांनी पुढे येऊन मृतदेहापासून सभोवर पसरलेल्या गावांचे अंतर मोजावे.
3 ಹತನಾದವನಿಗೆ ಸಮೀಪವಾದ ಊರು ಯಾವುದೋ, ಆ ಊರಿನ ಹಿರಿಯರು ಇನ್ನೂ ಕೆಲಸ ಮಾಡದಂಥ, ನೊಗ ಎಳೆಯದಂಥ, ಒಂದು ಕಡಸನ್ನು ತೆಗೆದುಕೊಳ್ಳಬೇಕು.
मग जो गाव प्रेताच्या सर्वात जवळचा असेल तेथील वडिलधाऱ्यांनी आपल्या कळपातील एक कालवड निवडावी. कधीही कामाला न जुंपलेली व अजून न व्यायलेली अशी ती गाय असावी.
4 ಆಮೇಲೆ ಆ ಊರಿನ ಹಿರಿಯರು ಆ ಕಡಸನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜ ಹಾಕದಂಥ ಸ್ಥಳಕ್ಕೆ ತೆಗೆದುಕೊಂಡುಹೋಗಿ, ಅಲ್ಲಿ ಹಳ್ಳದಲ್ಲಿ ಕಡಸನ್ನು ವಧಿಸಬೇಕು.
मग वडीलधाऱ्याने कालवड वाहता झरा असलेल्या खोऱ्यांत आणावी. हे खोरे कधी पेरणी, नांगरणी न झालेले असावे. अशा ठिकाणी तीची मान कापावी.
5 ಲೇವಿಯ ಪುತ್ರರಾದ ಯಾಜಕರು ಹತ್ತಿರ ಇರಬೇಕು. ಏಕೆಂದರೆ ಅವರನ್ನೇ ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಸೇವೆ ಮಾಡುವುದಕ್ಕೂ ಯೆಹೋವ ದೇವರ ಹೆಸರಿನಲ್ಲಿ ಆಶೀರ್ವಾದ ಕೊಡುವುದಕ್ಕೂ ಎಲ್ಲಾ ವಿವಾದ ಹೊಡೆದಾಟಗಳ ವಿಷಯದಲ್ಲಿ ತೀರ್ಮಾನಿಸುವುದಕ್ಕೂ ಆಯ್ದುಕೊಂಡಿದ್ದಾರೆ.
तेव्हा लेवी वंशातील याजकांनी यावेळी तिथे असावे. आपली सेवा करून घ्यायला आणि आपल्या वतीने लोकांस आशीर्वाद द्यायला तुमचा देव परमेश्वर ह्याने त्यांची याजक म्हणून निवड केली आहे. प्रत्येक वादात किंवा मारामारीत ते निवाडा करतील.
6 ಆಮೇಲೆ ಹತನಾದವನ ಶವಕ್ಕೆ ಸಮೀಪವಾಗಿರುವ ಆ ಊರಿನ ಹಿರಿಯರೆಲ್ಲರೂ ತಗ್ಗಿನಲ್ಲಿ ವಧಿಸಿದ ಕಡಸಿನ ಮೇಲೆ ಕೈಗಳನ್ನು ತೊಳೆದುಕೊಳ್ಳಬೇಕು.
मग त्या खोऱ्यात, मृताच्या जवळच्या नगरातील वडील मनुष्यांनी, कालवड मारल्यावर तिच्यावर आपले हात धुवावे.
7 ಅನಂತರ, “ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ. ನಮ್ಮ ಕಣ್ಣುಗಳು ನಡೆದದ್ದನ್ನು ನೋಡಲಿಲ್ಲ.
व स्पष्ट म्हणावे या व्यक्तीला “आमच्या हातून मरण आले नाही. ही घटना घडताना आम्ही पाहिली नाही.
8 ಯೆಹೋವ ದೇವರೇ, ನೀವು ವಿಮೋಚಿಸಿದ ನಿಮ್ಮ ಜನರಾದ ಇಸ್ರಾಯೇಲರಿಗೆ ಕರುಣೆ ಹೊದಿಸಿರಿ. ನಿಮ್ಮ ಜನರಾದ ಇಸ್ರಾಯೇಲರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡಿರಿ,” ಎಂದು ಹೇಳಬೇಕು. ಆ ರಕ್ತಾಪರಾಧವು ಅವರಿಗೆ ಮುಚ್ಚಲಾಗುವುದು.
हे परमेश्वरा, ज्या इस्राएल लोकांचा तू उद्धार केला आहेस. आम्हास शुद्ध कर. एका निरपराध व्यक्तीच्या हत्त्येबद्दल आम्हास दोषी धरु नकोस. त्या निरपराध व्यक्तीच्या हत्येचा दोष राहू देऊ नको. या रक्तपाताच्या दोषाची त्यांना क्षमा केली जावो.”
9 ಈ ಪ್ರಕಾರ ನೀವು ಯೆಹೋವ ದೇವರ ಮುಂದೆ ಸರಿಯಾದದ್ದನ್ನು ಮಾಡಿದರೆ, ರಕ್ತಾಪರಾಧವನ್ನು ನಿಮ್ಮಲ್ಲಿಂದ ತೆಗೆದುಹಾಕುವಿರಿ.
याप्रमाणे परमेश्वराच्या दृष्टीने जे योग्य ते करून तुम्ही आपल्यामधून या निरअपराध मनुष्याच्या हत्येचा दोष तू काढून टाकावा.
10 ನೀವು ಶತ್ರುಗಳ ವಿರುದ್ಧ ಯುದ್ಧಮಾಡಿ, ನಿಮ್ಮ ದೇವರಾದ ಯೆಹೋವ ದೇವರಿಂದ, ನೀವು ಅವರನ್ನು ಸೋಲಿಸಿದರೆ,
१०जेव्हा तू आपल्या शत्रूशी युद्ध करायला जाशील व देव परमेश्वर ह्याच्या साहाय्याने तुम्ही शत्रूला पराभूत कराल व त्यांना बंदीवान कराल.
11 ಸೆರೆ ಹಿಡಿದವರಲ್ಲಿ ಒಬ್ಬ ಸುಂದರ ಸ್ತ್ರೀಯನ್ನು ನಿಮ್ಮಲ್ಲಿ ಯಾರಾದರೂ ಕಂಡು ಇಷ್ಟಪಟ್ಟರೆ, ಅವಳನ್ನು ಮದುವೆ ಮಾಡಿಕೊಳ್ಳಬಹುದು.
११तेव्हा बंदिवानात एखादी सुंदर स्त्री पाहून तिच्यावर तू मोहीत झालास आणि लग्न करावे असे एखाद्याला वाटल्यास.
12 ಅವಳು ತಲೆ ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಂಡು,
१२तेव्हा त्याने तिला आपल्या घरी आणावे. तिने आपले केशवपन करावे व नखे कापावी.
13 ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳವರೆಗೆ ತನ್ನ ತಾಯಿ ತಂದೆಯರನ್ನು ಸ್ಮರಿಸಿ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.
१३तिचे पहिले, युद्धकैदीचे द्योतक असलेले वस्त्रही काढून टाकावे. आपल्या आईवडीलांपासून दुरावल्याबद्दल तिने पूर्ण महिनाभर त्याच्या घरी शोक करावा. मग त्याने तिच्याजवळ जावे. म्हणजे तो तिचा पती व ती त्याची पत्नी होईल.
14 ತರುವಾಯ ಅವಳು ಅವನಿಗೆ ಇಷ್ಟವಾಗದೆ ಹೋದರೆ, ಅವನು ಅವಳನ್ನು ಅವಳು ಬಯಸಿದ ಸ್ಥಳಕ್ಕೆ ಕಳುಹಿಸಿಬಿಡಬೇಕು. ಅವಳನ್ನು ಅವಮಾನಪಡಿಸಿದ್ದರಿಂದ ದಾಸತ್ವಕ್ಕೆ ಮಾರಲೂಬಾರದು, ದಾಸಿಯಂತೆ ನಡೆಸಲೂಬಾರದು.
१४पुढे त्यास ती आवडली नाहीतर त्याने घटस्फोट देऊन तिला मुक्त करावे. पण तिला पैसे देऊन विकू नये. तिला गुलाम म्हणून त्याने वागवता कामा नये. कारण त्याने तिच्याशी शरीरसंबंध ठेवला होता.
15 ಒಬ್ಬ ಮನುಷ್ಯನಿಗೆ ಇಬ್ಬರು ಹೆಂಡತಿಯರಿದ್ದು, ಒಬ್ಬಳನ್ನು ಪ್ರೀತಿಸುತ್ತಲೂ, ಮತ್ತೊಬ್ಬಳನ್ನು ದ್ವೇಷಿಸುತ್ತಲೂ ಇದ್ದರೆ, ಅವರಿಬ್ಬರೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ, ಚೊಚ್ಚಲು ಮಗನು ತಿರಸ್ಕಾರ ಹೊಂದುತ್ತಿರುವ ಹೆಂಡತಿಯಲ್ಲಿಯೇ ಹುಟ್ಟಿದ್ದರೆ,
१५एखाद्याला दोन स्त्रिया असतील आणि त्याचे एकीवर दुसरीपेक्षा जास्त प्रेम असेल. दोघींना मुले असतील. पण नावडतीचा मुलगा सगळ्यात मोठा असेल.
16 ಅವನು ತನ್ನ ಪುತ್ರರಿಗೆ ತನ್ನ ಆಸ್ತಿಯನ್ನು ಹಂಚಿ ಕೊಡುವಾಗ, ತಾನು ಪ್ರೀತಿಮಾಡದ ಹೆಂಡತಿಯ ಚೊಚ್ಚಲ ಮಗನಿಗೆ ಬದಲಾಗಿ ಅವನು ಪ್ರೀತಿಸುವವಳ ಮಗನನ್ನು ಹಿರಿಯನೆಂದು ಮಾಡಕೂಡದು.
१६तर तो आपल्या मुलांना आपली संपत्ती त्याचे वतन म्हणून वाटून देईल तेव्हा नाआवडतीचा मुलगा ज्येष्ठ असताना त्याऐवजी आपल्या मालमत्तेची वाटणी करताना, त्याने आपल्या आवडतीच्या मुलाला जेष्ठत्वाचा हक्क देऊ नये.
17 ಅವನು ಪ್ರೀತಿಮಾಡದವಳ ಮಗನಿಗೆ ತನ್ನ ಬಳಿಯಲ್ಲಿರುವ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು, ಅವನೇ ಜೇಷ್ಠ ಪುತ್ರನೆಂದು ಒಪ್ಪಿಕೊಳ್ಳಬೇಕು. ಏಕೆಂದರೆ ಅವನೇ ಅವನ ಪ್ರಥಮ ಫಲ. ಅವನಿಗೆ ಜೇಷ್ಠ ಪುತ್ರನ ಹಕ್ಕು ಉಂಟು.
१७त्याने आपल्या ज्येष्ठ पुत्र नावडतीचा मुलगा असला तरी त्याचा स्वीकार केला पाहिजे. तसेच आपल्या एकंदर मालमत्तेतील दुप्पट वाटा त्यास दिला पाहिजे. कारण तो ज्येष्ठ पुत्र आहे. व त्यालाच जेष्ठपणाचा हक्क आहे.
18 ಒಬ್ಬ ಮನುಷ್ಯನಿಗೆ ಮೊಂಡನೂ, ತಿರುಗಿ ಬೀಳುವವನೂ ಆದ ಮಗನಿದ್ದರೆ, ಅವನು ತಂದೆತಾಯಿಯ ಮಾತನ್ನೂ ಕೇಳದೆ, ಅವರು ಅವನನ್ನು ಶಿಸ್ತುಪಡಿಸಲು ಹೇಳುವ ಮಾತನ್ನೂ ಕೇಳದೆ ಹೋದರೆ,
१८एखाद्याचा मुलगा हट्टी व बंडखोर, अजिबात न ऐकणारा, आईबापांना न जुमानणारा असेल शिक्षा केली तरी त्यांचे ऐकत नसेल.
19 ಅವನ ತಂದೆತಾಯಿಗಳು ಅವನನ್ನು ಹಿಡಿದು, ಪಟ್ಟಣದ ಹಿರಿಯರ ಬಳಿಗೂ ಅವನ ಊರಿನ ಬಾಗಿಲಿನ ಬಳಿಗೂ ತಂದು,
१९अशावेळी आईवडीलांनी त्यास गावच्या चावडीवर वडीलधाऱ्यांपुढे न्यावे.
20 ಪಟ್ಟಣದ ಹಿರಿಯರಿಗೆ, “ಈ ನಮ್ಮ ಮಗನು ಮೊಂಡನೂ, ತಿರುಗಿ ಬೀಳುವವನೂ, ನಮ್ಮ ಮಾತು ಕೇಳದವನೂ, ಹೊಟ್ಟೆ ಬಾಕನೂ, ಕುಡುಕನೂ ಆಗಿದ್ದಾನೆ,” ಎಂದು ಹೇಳಬೇಕು.
२०या शहरातल्या वडीलधाऱ्यानी त्यांनी सांगावे की, हा उद्दाम व बंडखोर आहे. तसेच तो खादाड व मद्यपी आहे.
21 ಆಗ ಅವನ ಪಟ್ಟಣದ ಜನರೆಲ್ಲರೂ ಅವನು ಸಾಯುವಂತೆ ಅವನ ಮೇಲೆ ಕಲ್ಲೆಸೆಯಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಇಸ್ರಾಯೇಲರಲ್ಲಿ ಇದನ್ನು ಕೇಳಿ ಭಯಪಡುವರು.
२१यावर त्या गावातील मनुष्यांनी या मुलाला दगडांनी मरेपर्यंत मारावे. असे केल्याने तुम्ही हे पाप आपल्यामधून काढून टाकाल. इस्राएलमधील इतर लोकांच्या कानावर ही गोष्ट गेली की ते घाबरुन राहतील.
22 ಒಬ್ಬನು ಮರಣದಂಡನೆಗೆ ಯೋಗ್ಯವಾದ ಅಪರಾಧ ಮಾಡಿದ್ದರಿಂದ, ನೀವು ಅವನಿಗೆ ಮರಣದಂಡನೆಯನ್ನು ವಿಧಿಸಿ, ಅವನ ಶವವನ್ನು ಮರಕ್ಕೆ ತೂಗುಹಾಕಿದ್ದಾದರೆ,
२२एखाद्याचा अपराध मुत्युदंड मिळण्याइतका मोठा असेल, अशावेळी त्याच्या देहांतानंतर लोक त्याचे प्रेत झाडाला टांगतील,
23 ಅವನ ಶವ ರಾತ್ರಿಯಲ್ಲಿ ಮರದ ಮೇಲಿರಬಾರದು. ಅವನನ್ನು ಅದೇ ದಿವಸದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
२३तेव्हा ते रात्रभर झाडावर टांगलेले राहू देऊ नका. त्याच दिवशी कटाक्षाने त्याचे दफन करा. कारण झाडाला टांगलेल्या मनुष्यावर देवाचा शाप असतो. तुमचा देव परमेश्वर तुम्हास देणार असलेली भूमी अशी विटाळू नका.

< ಧರ್ಮೋಪದೇಶಕಾಂಡ 21 >