< ಧರ್ಮೋಪದೇಶಕಾಂಡ 24 >

1 ಒಬ್ಬನು ತಾನು ಮದುವೆಮಾಡಿಕೊಂಡ ಮಹಿಳೆಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಅಸಂತೃಪ್ತನಾದರೆ, ವಿವಾಹ ವಿಚ್ಛೇದನ ಪತ್ರವನ್ನು ಬರೆದು, ಅವಳ ಕೈಯಲ್ಲಿ ಕೊಟ್ಟು, ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಟ್ಟಾಗ,
एखाद्याला लग्नानंतर आपल्या पत्नीच्या संबंधाने एखादी अयोग्य गोष्ट कळली व ती त्यास आवडेनाशी झाली तर त्याने तिला घटस्फोट लिहून द्यावा; मग तिला घराबाहेर काढावे.
2 ಅವಳು ಅವನ ಮನೆಯನ್ನು ಬಿಟ್ಟುಹೋದ ಮೇಲೆ ಮತ್ತೊಬ್ಬನಿಗೆ ಹೆಂಡತಿಯಾಗಬಹುದು.
त्याच्या घरातून बाहेर पडल्यावर हवे तर तिने दुसरा पती करावा.
3 ಆ ಮತ್ತೊಬ್ಬ ಗಂಡನು ಅವಳನ್ನು ಹಗೆಮಾಡಿ, ವಿವಾಹ ವಿಚ್ಛೇದನ ಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು, ತನ್ನ ಮನೆಯಿಂದ ಕಳುಹಿಸಿಬಿಟ್ಟರೆ, ಇಲ್ಲವೆ ಆ ಎರಡನೆಯ ಗಂಡನು ಸತ್ತರೆ,
त्यातून समजा असे झाले की या पतीचीही तिच्यावर इतराजी झाली आणि त्याने तिला घटस्फोट लिहून दिला तर मात्र त्याने तिला सोडल्यावर पुन्हा पहिल्या पतीने तिच्याशी लग्न करु नये. किंवा हा दुसरा पती मरण पावला तर पहिल्या नवऱ्याने पुन्हा तिच्याशी लग्न करु नये.
4 ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡ ಅವಳನ್ನು ಪುನಃ ಹೆಂಡತಿಯಾಗಿ ಸ್ವೀಕರಿಸಬಾರದು. ಅದು ಯೆಹೋವ ದೇವರ ಮುಂದೆ ಅಸಹ್ಯವೇ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ದೋಷವುಂಟಾಗಲು ಅವಕಾಶ ಕೊಡಬಾರದು.
कारण ती आता भ्रष्ट झालेली आहे. तिच्याशी पहिल्या नवऱ्याने पुन्हा लग्न करणे या गोष्टीचा तुमचा देव परमेश्वर ह्याला वीट आहे. तुमचा देव परमेश्वर तुम्हास देणार असलेल्या या प्रदेशात असे पाप करु नका.
5 ಒಬ್ಬನು ಹೊಸದಾಗಿ ಮದುವೆಯಾಗಿದ್ದರೆ, ಅವನನ್ನು ಯುದ್ಧಕ್ಕೆ ಕಳುಹಿಸಬಾರದು ಅಥವಾ ಜವಾಬ್ದಾರಿಯ ಯಾವುದೊಂದೂ ಕೆಲಸವನ್ನು ಅವನಿಂದ ಮಾಡಿಸಬಾರದು. ಅವನು ಒಂದು ವರ್ಷ ಸ್ವತಂತ್ರನಾಗಿ ತನ್ನ ಮನೆಯಲ್ಲಿದ್ದು, ತಾನು ಮದುವೆಯಾದ ಹೆಂಡತಿಯೊಡನೆ ಸುಖವಾಗಿರಲಿ.
एखाद्याचे नुकतेच लग्न झाले असेल तर त्यास सैन्यात मोहिमेवर पाठवू नये. तसेच त्याच्यावर विशेष कामगिरी सोपवू नये. नववधूला सुखी ठेवण्यासाठी वर्षभर घरीच राहण्याची मोकळीक त्यास द्यावी.
6 ಬೀಸುವ ಕಲ್ಲಿನಲ್ಲಿ ಅಡಿಗಲ್ಲನ್ನಾದರೂ, ಮೇಲಿನ ಕಲ್ಲನ್ನಾದರೂ ಒತ್ತೆಯಾಗಿ ತೆಗೆದುಕೊಳ್ಳಬಾರದು. ಹಾಗೆ ಮಾಡಿದರೆ, ಅದು ವ್ಯಕ್ತಿಯ ಜೀವನೋಪಾಯವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಿರುವುದು.
कोणाला काही उसने दिल्यास त्याबद्दल जाते किंवा जात्याची तळी गाहाण म्हणून ठेवून घेऊ नये, नाहीतर त्याचा जीवच गहाण ठेवून घेतल्यासारखे होईल.
7 ಒಬ್ಬನು ತನ್ನ ಸಹೋದರರಾದ ಇಸ್ರಾಯೇಲರಲ್ಲಿ ಒಬ್ಬನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ನಡುವೆಯಿಂದ ತೆಗೆದುಹಾಕಬೇಕು.
कोणी आपल्या इस्राएली बांधवाचे अपहरण केले आणि गुलाम म्हणून त्याची विक्री केली तर त्या पळवणाऱ्या मनुष्यास ठार करावे व आपल्यामधून अशा दुष्कृत्याचे निर्मूलन करावे.
8 ಕುಷ್ಠರೋಗಿಗಳ ವಿಷಯದಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವುದನ್ನೆಲ್ಲಾ ನೀವು ಜಾಗ್ರತೆಯಿಂದ ಕಾಪಾಡಿ ಕೈಗೊಳ್ಳುವ ಹಾಗೆ ನೋಡಿಕೊಳ್ಳಿ. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನು ನೀವು ಕಾಪಾಡಿ ಕೈಗೊಳ್ಳಬೇಕು.
कोणाला महारोग झाल्याचे आढळले तर लेवी याजकाने सांगितलेल्या सर्व गोष्टींचे काटेकोर पालन करा. माझ्या आज्ञेप्रमाणे याजक सांगतील ते ऐका.
9 ನೀವು ಈಜಿಪ್ಟಿನಿಂದ ಹೊರಗೆ ಬಂದಾಗ, ಮಾರ್ಗದಲ್ಲಿ ನಿಮ್ಮ ದೇವರಾದ ಯೆಹೋವ ದೇವರು ಮಿರ್ಯಾಮಗಳಿಗೆ ಮಾಡಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ.
मिसरमधून बाहेर पडल्यावर पुढच्या प्रवासात मिर्यामचे तुमचा देव परमेश्वर ह्याने काय केले ते चांगले लक्षात असू द्या.
10 ನಿನ್ನ ನೆರೆಯವನಿಗೆ ನೀವು ಯಾವುದೇ ರೀತಿಯ ಸಾಲಕೊಟ್ಟರೆ, ಅವನ ಒತ್ತೆಯನ್ನು ಕೇಳಲು ಅವನ ಮನೆಯಲ್ಲಿ ಪ್ರವೇಶಿಸಬಾರದು.
१०तुम्ही आपल्या शेजाऱ्याला कोणत्याही प्रकारचे कर्ज द्याल तेव्हा तारण मिळवायला त्याच्या घरात शिरू नका.
11 ನೀನು ಹೊರಗೆ ನಿಂತಿರಬೇಕು. ಸಾಲ ಕೊಟ್ಟವನೇ ಒತ್ತೆಯನ್ನು ನಿನಗೆ ಹೊರಗೆ ತರಬೇಕು.
११बाहेरच थांबा. मग ज्याला तुम्ही कर्ज दिले आहे तो आत जाऊन गहाण ठेवण्याची वस्तू घेऊन येईल.
12 ಅವನು ಬಡವನಾದರೆ, ಅವನ ಒತ್ತೆಯನ್ನು ಇಟ್ಟುಕೊಂಡು ರಾತ್ರಿ ಮಲಗಬೇಡ.
१२तो फार गरीब असला तर दुसरे काहीच त्याच्याजवळ गहाण ठेवण्यासारखे नसल्यामुळे आपले कपडे आणील. तर ते वस्त्र अंगावर घेऊन झोपू नका.
13 ನಿನ್ನ ನೆರೆಯವನು ಅದರಲ್ಲಿ ಮಲಗಲು ಸಾಯಂಕಾಲದ ಹೊತ್ತಿಗೆ ಅವನು ಹೊದ್ದುಕೊಳ್ಳುವ ವಸ್ತ್ರವನ್ನು ಹಿಂತಿರುಗಿಸು. ಆಗ ಅವನು ನಿನ್ನನ್ನು ಆಶೀರ್ವದಿಸುವನು. ನೀನು ಮಾಡಿದ್ದು ನಿನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ನೀತಿಯ ಕಾರ್ಯವೆಂದು ಪರಿಗಣಿಸಲಾಗುವುದು.
१३त्यास रोजच्या रोज संध्याकाळ झाली की देत जा म्हणजे त्यास पुरेसे अंथरुन पांघरुण मिळेल. त्याबद्दल तो तुम्हास आशीर्वाद देईल. तुमचा देव परमेश्वर ह्याच्या दृष्टीने हे तुमचे वागणे न्यायीपणाचे व उचित होय.
14 ನಿನ್ನ ನಾಡಿನ ಸಹೋದರನಾಗಲಿ, ಪರದೇಶಿಯವನಾಗಲಿ, ಬಡ ಮತ್ತು ನಿರ್ಗತಿಕನಾಗಿರುವ ಕೂಲಿಯವನನ್ನು ಬಾಧಿಸಬಾರದು.
१४तुमच्याकडे काम करणाऱ्या गरीब आणि गरजू नोकरांचे शोषण करु नका. मग तो इस्राएली बांधव असो की तुमच्या गावात राहणारा कोणी परकीय असो.
15 ಅವನ ದಿನದ ಕೂಲಿಯನ್ನು ಆ ದಿನದಲ್ಲೇ ಸೂರ್ಯನು ಮುಳುಗುವುದರೊಳಗೆ ಅವನಿಗೆ ಕೊಡಬೇಕು. ಏಕೆಂದರೆ ಅವನು ಬಡವನಾಗಿದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ, ಅವನು ನಿನಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆಯಿಡುವನು. ಆಗ ನಿನ್ನ ಮೇಲೆ ಪಾಪದ ಹೊರೆ ಬಿದ್ದೀತು.
१५त्यास रोज सूर्यास्तापूर्वी त्याचा रोजगार देत जा. कारण हातावर पोट असल्यामुळे त्याचा उदरनिर्वाह या पैशावरच होतो. तुम्ही मजुरी दिली नाहीत तर तो परमेश्वराकडे आपले गाऱ्हाणे सांगेल आणि तुम्ही पापाचे धनी व्हाल.
16 ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು.
१६मुलांच्या वागणुकीची शिक्षा म्हणून आई-वडीलांना देहान्तशासन होऊ नये. तसेच आई-वडीलांच्या दुष्कृत्याची सजा म्हणून मुलांना ठार करु नये. ज्याच्या त्याच्या दुष्कृत्याची सजा ज्याला त्यास मिळावी.
17 ಪರನಿಗೂ, ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸಬೇಡ. ವಿಧವೆಯಿಂದ ಉಡುವ ವಸ್ತ್ರವನ್ನು ಒತ್ತೆಯಾಗಿ ತೆಗೆದುಕೊಳ್ಳಬೇಡ.
१७गावातील परकीय आणि अनाथ यांना उचित वागणूक मिळावी. विधवेचा कपडालत्ता गहाण ठेवून घेऊ नये.
18 ನೀನು ಈಜಿಪ್ಟಿನಲ್ಲಿ ದಾಸನಾಗಿದ್ದೆ ಎಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದ್ದರಿಂದ ಈ ಕಾರ್ಯಗಳನ್ನೆಲ್ಲಾ ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
१८मिसरमध्ये तुम्ही गरीब गुलाम होतात आणि तुमचा देव परमेश्वर ह्याने तुम्हास तेथून सोडवून मुक्त केले हे लक्षात ठेवा. दीन दुबळ्यांशी असे वागा हे मी एवढ्यासाठी तुम्हास सांगत आहे.
19 ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ, ಹೊಲದಲ್ಲಿ ಸಿವುಡನ್ನು ಮರೆತುಬಿಟ್ಟರೆ, ಅದನ್ನು ತೆಗೆದುಕೊಳ್ಳುವುದಕ್ಕೆ ತಿರುಗಿಕೊಳ್ಳಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ. ನೀವು ಹೀಗೆ ನಡೆದುಕೊಂಡರೆ, ನಿನ್ನ ದೇವರಾದ ಯೆಹೋವ ದೇವರು ನಿನ್ನ ಎಲ್ಲಾ ದುಡಿಮೆಯಲ್ಲಿ ನಿನ್ನನ್ನು ಆಶೀರ್ವದಿಸುವರು.
१९शेतातील पीक कापताना एखादी पेंढी तिथेच राहिली तर ती आणायला परत जाऊ नका. अनाथ, उपरे विधवा ह्याच्यासाठी ती राहू द्या. त्यांना थोडे धान्य मिळाले तर तुम्हास तुमच्या प्रत्येक कार्यात तुमचा देव परमेश्वर ह्याचा आशीर्वाद मिळेल.
20 ಓಲಿವ್ ಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವದಕ್ಕೆ ಹೋಗಬಾರದು, ಮಿಕ್ಕಿದ್ದನ್ನು ಪರದೇಶದವನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.
२०जैतून वृक्षांच्या फळांसाठी झाडणी कराल तेव्हा डहाळ्यांमध्ये कुठे फळे राहिली आहेत का हे पुन्हा शोधू नको. ती अनाथ, परके, विधवा यांच्यासाठी राहू दे.
21 ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು. ಪರದೇಶಿ, ತಂದೆತಾಯಿ ಇಲ್ಲದ ವ್ಯಕ್ತಿ, ವಿಧವೆ ಇಂಥವರಿಗಾಗಿ ಅದನ್ನು ಬಿಟ್ಟುಬಿಡು.
२१द्राक्षमळ्यातून द्राक्षे खुडताना उरली तर ती द्राक्षे पुन्हा तोडू नको ती अनाथ, परके, व विधवा त्यांच्यासाठीच राहू दे.
22 ನೀವು ಈಜಿಪ್ಟ್ ದೇಶದಲ್ಲಿ ಗುಲಾಮರಾಗಿ ವಾಸವಾಗಿದ್ದಿರಿ ಎಂದು ಜ್ಞಾಪಕಮಾಡಿಕೊಳ್ಳಿರಿ. ಆದ್ದರಿಂದ ಈ ಎಲ್ಲಾ ಕಾರ್ಯಗಳನ್ನು ಮಾಡಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ.
२२तुम्हीही मिसरमध्ये गरीब गुलाम होता म्हणून मी तुम्हास हे करायला सांगत आहे. त्याची आठवण ठेवा आणि गरिबांसाठी एवढे करा.

< ಧರ್ಮೋಪದೇಶಕಾಂಡ 24 >