< ಧರ್ಮೋಪದೇಶಕಾಂಡ 3 >

1 ಆಗ ನಾವು ಹಿಂದಿರುಗಿ ಬಾಷಾನಿನ ಕಡೆಗೆ ಮೇಲಕ್ಕೆ ಹೊರಟೆವು. ಆಗ ಬಾಷಾನಿನ ಅರಸನಾದ ಓಗನು ತನ್ನ ಸಮಸ್ತ ಜನರ ಸಂಗಡ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈಗೆ ಹೊರಟುಬಂದನು.
मग आपण वळसा घेऊन बाशानच्या वाटेने निघालो. तेव्हा बाशानाचा राजा ओग आणि त्याची सेना युद्धासाठी एद्रई येथे चाल करून आली.
2 ಆಗ ಯೆಹೋವ ದೇವರು ನನಗೆ, “ನೀನು ಅವನಿಗೆ ಭಯಪಡಬೇಡ. ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ, ಅವನ ಸಮಸ್ತ ಜನರನ್ನೂ, ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು.
परमेश्वर मला म्हणाला, त्यास भिऊ नका. तो, त्याची प्रजा आणि त्याची भूमी मी तुमच्या हाती दिलेली आहे. हेशबोनवर राज्य करणारा अमोऱ्यांचा राजा सीहोन ह्याचे केले तसेच याचेही करा.
3 ಈ ಪ್ರಕಾರ ನಮ್ಮ ದೇವರಾದ ಯೆಹೋವ ದೇವರು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲರನ್ನೂ ನಮ್ಮ ಕೈಗಳಲ್ಲಿ ಒಪ್ಪಿಸಿದರು. ಒಬ್ಬನಾದರೂ ತಪ್ಪಿಸಿಕೊಂಡು ಬದುಕುಳಿಯದಂತೆ ಅವರನ್ನು ಹೊಡೆದೆವು.
आमचा देव परमेश्वर ह्याने बाशानाचा राजा ओग आणि त्याची प्रजा आमच्या हाती दिली. आम्ही त्यास असा मार दिला की त्यांच्यापैकी कोणीही जिवंत राहिले नाही.
4 ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ಜಯಿಸಿದೆವು. ನಾವು ಅವರಿಂದ ವಶಪಡಿಸಿಕೊಳ್ಳದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ, ಅರ್ಗೋಬಿನ ಸಮಸ್ತ ಸುತ್ತಲಿನ ಪ್ರದೇಶದ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.
मग ओगच्या ताब्यातील सर्वच्या सर्व साठ नगरे म्हणजे अर्गोबाचा सारा प्रदेश घेतला, बाशानातले ओगचे राज्य ते हेच.
5 ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆ, ಬಾಗಿಲು, ಅಗುಳಿಗಳಿಂದ ಭದ್ರವಾಗಿದ್ದವು. ಅವುಗಳಲ್ಲದೆ ಬಯಲುಸೀಮೆಯ ಪಟ್ಟಣಗಳು ಬಹಳ ಇದ್ದವು.
या सर्व नगरांना भक्कम तटबंदी होती. त्यांना उंच भिंती, वेशी, मजबूत अडसर होते. याव्यतिरिक्त तट नसलेली खेडी पुष्कळच होती.
6 ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು. ಪುರುಷರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು.
हेशबोनच्या सीहोन राजाच्या नगरांप्रमाणेच येथेही आम्ही समुळ नाश केला. पुरुष, स्त्रिया, मुलेबाळे कोणालाही म्हणून शिल्लक ठेवले नाही.
7 ಎಲ್ಲಾ ಪಶುಗಳನ್ನೂ ಪಟ್ಟಣಗಳನ್ನೂ ಸೂರೆಮಾಡಿಬಿಟ್ಟೆವು.
गुरेढोरे आणि नगरातील लूट मात्र घेतली.
8 ಆ ಕಾಲದಲ್ಲಿ ನಾವು ಯೊರ್ದನ್ ನದಿಯ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರಸರ ಕೈಯಿಂದ ಸ್ವಾಧೀನಮಾಡಿಕೊಂಡೆವು.
“अशाच पद्धतीने अमोऱ्यांच्या दोन राजांच्या ताब्यातला प्रदेशही आपण घेतला, तो म्हणजे यार्देनच्या पूर्वेकडचा, आर्णोन खोऱ्यापासून हर्मोन पर्वतापर्यंतचा.
9 ಹೆರ್ಮೋನಿಗೆ ಸೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೆನೀರ್ ಎಂದೂ ಕರೆಯುತ್ತಾರೆ.
(सीदोनी लोक या हर्मोन पर्वताला सिर्योन म्हणतात. पण अमोरी लोक सनीर म्हणतात.)
10 ಬಯಲುಸೀಮೆಯ ಎಲ್ಲಾ ಪಟ್ಟಣಗಳನ್ನೂ, ಎಲ್ಲಾ ಗಿಲ್ಯಾದನ್ನೂ ಬಾಷಾನಿನಲ್ಲಿ ಓಗನ ರಾಜ್ಯದಲ್ಲಿ ಪಟ್ಟಣಗಳಾದ ಸಲ್ಕಾ ಎದ್ರೈವರೆಗೆ ಎಲ್ಲಾ ಬಾಷಾನನ್ನೂ ಸ್ವಾಧೀನಮಾಡಿಕೊಂಡೆವು.
१०माळावरील सर्व नगरे, सगळा गिलाद प्रांत तसेच बाशानच्या ओगच्या राज्यातील सलेखा व एद्रई सकट सर्व प्रांत आम्ही काबीज केला.”
11 ರೆಫಾಯರಲ್ಲಿ ಬಾಷಾನಿನ ಅರಸನಾದ ಓಗನು ಮಾತ್ರ ಉಳಿದಿದ್ದನು. ಅವನ ಮಂಚವು ಕಬ್ಬಿಣದ ಮಂಚ. ಅದು ಅಮ್ಮೋನಿಯರ ರಬ್ಬಾದಲ್ಲಿ ಈಗಲೂ ಉಂಟಲ್ಲವೋ? ಅದರ ಉದ್ದ ಪುರುಷನ ಕೈ ಅಳತೆಯ ಪ್ರಕಾರ ಒಂಬತ್ತು ಮೊಳ, ಅಗಲ ನಾಲ್ಕು ಮೊಳ ಇತ್ತು.
११रेफाई लोकांपैकी बाशानाचा राजा ओग तेवढा अजून जिवंत होता. त्याचा पलंग लोखंडाचा होता. तो पलंग तेरा फूट लांब आणि सहा फूट रुंद होता. अम्मोन्यांच्या राब्बा नगरात तो अजूनही आहे.
12 ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ಹಳ್ಳದ ಸಮೀಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು, ಅರ್ಧ ಗಿಲ್ಯಾದ್ ಬೆಟ್ಟವನ್ನೂ, ಅದರ ಪಟ್ಟಣಗಳನ್ನೂ ರೂಬೇನ್ಯರ ಪ್ರದೇಶದವರೆಗೂ, ಗಾದನ ಪ್ರದೇಶದವರೆಗೂ ಕೊಟ್ಟೆನು.
१२“तेव्हा ती जमीन आम्ही काबीज केली. रऊबेनी आणि गादी यांना त्यातील काही भाग मी दिला. तो असाः आर्णोन खोऱ्यातील अरोएर नगरापासून गिलादाच्या डोंगराळ प्रदेशाचा अर्धा भाग व त्यातील नगरे.
13 ಮಿಕ್ಕ ಗಿಲ್ಯಾದನ್ನು ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಗೋತ್ರಕ್ಕೆ ಕೊಟ್ಟೆನು. ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಸೀಮೆಯನ್ನೂ, ರೆಫಾಯರ ದೇಶವೆಂದು ಎನಿಸಿಕೊಳ್ಳುವ ಸಮಸ್ತ ಬಾಷಾನನ್ನೂ ಅವರಿಗೆ ಕೊಟ್ಟೆನು.
१३गिलादाचा उरलेला अर्धा भाग आणि संपूर्ण बाशान मनश्शेच्या अर्ध्या वंशाला दिले.” बाशान म्हणजे ओगचे राज्य त्याच्या एका भागाला अर्गोब म्हणतात (ह्यालाच रेफाईचा देशही म्हणतात.
14 ಮನಸ್ಸೆಯ ಮಗ ಯಾಯೀರನು ಅರ್ಗೋಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯವರೆಗೆ ಸ್ವಾಧೀನಮಾಡಿಕೊಂಡು, ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನವರೆಗೆ ಹವ್ವೋತ್ ಯಾಯೀರೆಂದು ಹೆಸರಿಟ್ಟನು.
१४मनश्शेचा मुलगा याईर याने गशूरी आणि माकाथी यांच्या सीमेपर्यंत अर्गोबाचा सर्व प्रदेश हस्तगत केला. आणि बाशानाला आपले नाव दिले म्हणून आजही लोक त्यास हव्वोथ-याईराची नगरेच म्हणतात.)
15 ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು.
१५आणि गिलाद प्रदेश मी माखीर याला दिला.
16 ಗಿಲ್ಯಾದ್ ಮೊದಲುಗೊಂಡು ಅರ್ನೋನ್ ತಗ್ಗಿನವರೆಗೂ ಯಬ್ಬೋಕ್ ಹೊಳೆಯವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ಹೊಳೆಯು ಅವರ ಮೇರೆ.
१६त्याचा पुढचा प्रदेश रऊबेनी आणि गादी ह्यांना गिलादापासून आर्णोन खोऱ्याच्या मध्यभागापासून अम्मोन्यांच्या सीमेवरील यब्बोक नदीपर्यंत त्याची सरहद्द ठरवली.
17 ಅದಲ್ಲದೆ ಪಶ್ಚಿಮದಲ್ಲಿ ಅವರ ಪ್ರದೇಶ ಅರಾಬಾದ ಯೊರ್ದನ್ ನದಿಯವರೆಗೆ ಹರಡಿತ್ತು, ಅದರಲ್ಲಿ ಕಿನ್ನೆರೆತ್ ಮೊದಲ್ಗೊಂಡು ಪೂರ್ವದಲ್ಲಿರುವ ಪಿಸ್ಗಾದ ಕೆಳಗಿರುವ ಉಪ್ಪಿನ ಸಮುದ್ರವಾದ ಬಯಲು ಸಮುದ್ರದವರೆಗೆ ವ್ಯಾಪಿಸಿತ್ತು.
१७तसेच किन्नेरेथापासुन अरबाचा समुद्र म्हणजेच क्षार समुद्र ईथपर्यंतचा पिसगाची उतरण व त्याच्या तळाशी असलेला अराबा व यार्देनेच्या पुर्वेकडील प्रदेश मी त्यांना दिला.
18 ಆ ಕಾಲದಲ್ಲಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಯ ಅರ್ಧ ಗೋತ್ರಕ್ಕೂ ಆಜ್ಞಾಪಿಸಿದ್ದೇನೆಂದರೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ದೇಶವನ್ನು ಸೊತ್ತಾಗಿ ಕೊಟ್ಟಿದ್ದಾರೆ. ನಿಪುಣರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಆಯುಧ ಧರಿಸಿಕೊಂಡು ನದಿದಾಟಿ ಹೋಗಬೇಕು.
१८त्यावेळी मी त्या सर्वांना आज्ञा दिली की यार्देन नदीच्या अलीकडचा हा प्रदेश “तुमचा देव परमेश्वर ह्याने तुमच्या हवाली केला आहे. पण तुमच्यापैकी सर्व लढाऊ पुरुषांनी पुढाकार घेऊन, हत्यारबंद होऊन आपल्या इस्राएली भाऊबंदाना पलीकडे घेऊन जावे.
19 ನಿಮಗೆ ಬಹಳ ಪಶುಗಳಿವೆ ಎಂದು ನನಗೆ ಗೊತ್ತಿದೆ. ಆದರೆ ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳೂ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಲಿ.
१९तुमच्या स्त्रिया, मुलेबाळे आणि गुरेढोरे (ती बरीच आहेत हे मला माहीत आहे) इथेच मी दिलेल्या नगरात राहतील.
20 ಯೆಹೋವ ದೇವರು ನಿಮಗೆ ವಿಶ್ರಾಂತಿ ಕೊಟ್ಟ ಹಾಗೆಯೇ ನಿಮ್ಮ ಸಹೋದರರಿಗೂ ವಿಶ್ರಾಂತಿಯನ್ನು ಕೊಡುವರು. ನಿಮ್ಮ ದೇವರಾದ ಯೆಹೋವ ದೇವರು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವರು. ಅದುವರೆಗೆ ನೀವು ಅವರೊಂದಿಗೆ ಸೇರಿ ಯುದ್ಧಕ್ಕೆ ಹೋಗಿರಿ. ಅನಂತರ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ನಿಮಗೆ ಕೊಟ್ಟ ಸ್ಥಳಗಳಗೆ ಹಿಂತಿರುಗಿ ಬರಬಹುದು.”
२०आणि तुमच्याचप्रमाणे तुमच्या भाऊबंदांना परमेश्वर विसावा देईल, व तुमचा देव परमेश्वर ह्याने त्यांना देऊ केलेला यार्देनेपलीकडचा देश तेही ताब्यात घेतील; त्यानंतर जो प्रदेश मी तुम्हास दिलेला आहे तेथे तुम्ही सर्व आपापल्या वतनावर परत या.”
21 ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾಪಿಸಿ, “ನಿಮ್ಮ ದೇವರಾದ ಯೆಹೋವ ದೇವರು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣುಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳನ್ನೂ ಯೆಹೋವ ದೇವರು ಹಾಗೆಯೇ ಮಾಡುವರು.
२१मग मी यहोशवाला असे सांगितले की, “या दोन राजांचे तुमचा देव परमेश्वर ह्याने काय केले हे तू पाहिलेच. पुढेही ज्या ज्या राज्यात तू जाशील त्या सर्वांचे परमेश्वर असेच करील.
22 ನೀವು ಅವುಗಳಿಗೆ ಭಯಪಡಬೇಡಿರಿ, ನಿಮ್ಮ ದೇವರಾದ ಯೆಹೋವ ದೇವರೇ ನಿಮಗೋಸ್ಕರ ಯುದ್ಧಮಾಡುವರು,” ಎಂದೆನು.
२२तेथील राजांना घाबरु नका. कारण युद्धात तुमचा देव परमेश्वर तुमच्या बाजूने लढणार आहे.”
23 ಆ ಕಾಲದಲ್ಲಿ ನಾನು ಯೆಹೋವ ದೇವರಿಗೆ:
२३मग त्या वेळी मी परमेश्वरास विनंती करून म्हणालो,
24 “ಸಾರ್ವಭೌಮ ಯೆಹೋವ ದೇವರೇ, ನೀವು ನಿಮ್ಮ ಸೇವಕನಿಗೆ ನಿಮ್ಮ ಮಹತ್ವವನ್ನೂ ನಿಮ್ಮ ಹಸ್ತಬಲವನ್ನೂ ತೋರಿಸಲಾರಂಭಿಸಿದಿರಿ. ನಿಮ್ಮ ಮಹತ್ಕಾರ್ಯಗಳ ಹಾಗೆಯೂ, ನಿಮ್ಮ ಪರಾಕ್ರಮದ ಹಾಗೆಯೂ ಮಾಡಲು ಶಕ್ತರಾದ ದೇವರು ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ ಯಾರಿದ್ದಾರೆ?
२४“हे प्रभू परमेश्वरा, तू तुझ्या दासास आपला महान व सामर्थ्यशाली हात दाखवत आहेस. तुझ्यासारखे थोर प्रताप करणारा देव स्वर्गात किंवा पृथ्वीवर दुसरा कोण आहे?
25 ನಾನು ದಾಟಿ ಹೋಗಿ, ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೆಯ ದೇಶವನ್ನೂ ಆ ಒಳ್ಳೆಯ ಬೆಟ್ಟವನ್ನೂ ಲೆಬನೋನನ್ನೂ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬಿನ್ನೈಸಿದೆನು.
२५तेव्हा कृपाकरून मला यार्देन नदी पलीकडची सुपीक भूमी, चांगला डोंगराळ प्रदेश आणि लबानोन पाहू दे.”
26 ಆದರೆ ಯೆಹೋವ ದೇವರು ನಿಮ್ಮ ನಿಮಿತ್ತ ನನ್ನ ಮೇಲೆ ಕೋಪಮಾಡಿ, ನನ್ನ ಮನವಿಯನ್ನು ಕೇಳಲಿಲ್ಲ. ಯೆಹೋವ ದೇವರು ನನಗೆ, “ಇನ್ನು ಸಾಕು, ಈ ವಿಷಯದಲ್ಲಿ ನನ್ನ ಸಂಗಡ ಇನ್ನು ಮಾತನಾಡಬೇಡ.
२६पण तुमच्यापायी परमेश्वर माझ्यावर रुष्ट झाला होता. त्याने माझे म्हणणे ऐकले नाही. तो म्हणाला, “पुरे, आता एक शब्दही बोलू नको.
27 ಪಿಸ್ಗಾದ ತುದಿಗೆ ಏರಿ, ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ, ಪೂರ್ವಕ್ಕೂ ಕಣ್ಣೆತ್ತಿ ಅದನ್ನು ಕಣ್ಣಾರೆ ನೋಡು. ಈ ಯೊರ್ದನನ್ನು ನೀನು ದಾಟಿ ಹೋಗುವುದಿಲ್ಲ.
२७पिसगाच्या शिखरावर जा. आणि तेथून पूर्व, पश्चिम, उत्तर, दक्षिण अशा चारी दिशांना बघ. तेथून तुला सर्वकाही दिसेल पण यार्देनच्या पलीकडे तू पाऊल ठेवू शकणार नाहीस.
28 ಆದರೆ ಯೆಹೋಶುವನಿಗೆ ಆಜ್ಞಾಪಿಸಿ, ಅವನಿಗೆ ದೃಢಮಾಡಿ ಬಲಪಡಿಸು. ಅವನು ಈ ಜನರ ಮುಂದೆ ದಾಟಿ ಹೋಗಿ, ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು,” ಎಂದು ಹೇಳಿದರು.
२८यहोशवाला मात्र तू सूचना दे. त्यास उत्तेजन देऊन समर्थ कर. कारण तोच लोकांस पलीकडे नेईल. तू तो देश पाहशील पण यहोशवाच त्यांना ती जमीन राहण्यासाठी मिळवून देईल.”
29 ಆಗ ನಾವು ಬೇತ್ ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.
२९“आणि आम्ही बेथ-पौराच्या समोरच्या खोऱ्यात राहिलो.”

< ಧರ್ಮೋಪದೇಶಕಾಂಡ 3 >