< ಧರ್ಮೋಪದೇಶಕಾಂಡ 32 >

1 ಆಕಾಶವೇ, ಕಿವಿಗೊಡು. ನಾನು ಮಾತನಾಡುತ್ತೇನೆ. ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.
“हे आकाशा, ऐक मी काय म्हणतो ते.” पृथ्वी ऐक शब्द माझ्या मुखातले.
2 ನನ್ನ ಬೋಧನೆ ಮಳೆಯಂತೆ ಸುರಿಯುವುದು. ನನ್ನ ಮಾತು ಮಂಜಿನಂತೆಯೂ, ಹುಲ್ಲಿನ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವುದು.
पर्जन्याप्रमाणे माझ्या बोधाचा वर्षाव माझे भाषण दहीवराप्रमाणे ठिबको. तो बोध असेल जमिनीवरुन खळखळणाऱ्या पाण्यासारखा. हिरवळीवर रिझमझिमणाऱ्या पावसासारखा. झाडाझुडुपांवर पडणाऱ्या पावसाच्या सरीसारखा.
3 ಏಕೆಂದರೆ ಯೆಹೋವ ದೇವರ ಹೆಸರನ್ನು ನಾನು ಸಾರುತ್ತೇನೆ. ನಮ್ಮ ದೇವರಿಗೆ ಮಹತ್ವವನ್ನು ಕೊಡಿರಿ.
मी परमेश्वराच्या नावाची घोषणा करीन. तुम्हीही परमेश्वराची महती गा!
4 ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, ನೀತಿವಂತರೂ ಯಥಾರ್ಥರೂ ಆದ ದೇವರು.
तो माझा दुर्ग आहे आणि त्याची कृती परिपूर्ण! कारण तो, त्याचे सर्व मार्ग, उचित आहेत! देवच खरा आणि विश्वासू न्यायी आणि सरळ आहे.
5 ಇಸ್ರಾಯೇಲರು ತಮ್ಮನ್ನು ಕೆಡಿಸಿಕೊಂಡರು. ದೇವರ ಮಕ್ಕಳಿಗೆ ತಕ್ಕಂತೆ ನಡೆಯದವರು. ಅವರು ಮೂರ್ಖರಾದ ವಕ್ರ ಸಂತತಿ.
तुम्ही त्याची मुले नाहीत. तुमची पापे त्यास मळीन करतील. तुम्ही लबाड आहात.
6 ಯೆಹೋವ ದೇವರಿಗೆ ಪ್ರತಿಯಾಗಿ ಹೀಗೆ ವರ್ತಿಸುವುದು ಸರಿಯೋ? ಜ್ಞಾನವಿಲ್ಲದ ಬುದ್ಧಿಹೀನ ಜನರೇ, ದೇವರು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೋ? ನಿಮ್ಮನ್ನು ಸೃಷ್ಟಿಸಿ ಸ್ಥಿರಪಡಿಸಿದ್ದು ದೇವರಲ್ಲವೋ?
मूर्ख आणि निर्बुद्ध जन हो, परमेश्वराशी असे वागता? तो तर तुमचा पिता, निर्माता कर्ता आणि धर्ता तोच आहे.
7 ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳಿರಿ. ತಲತಲಾಂತರಗಳ ವರುಷಗಳನ್ನು ಗ್ರಹಿಸಿಕೊಳ್ಳಿರಿ. ನಿಮ್ಮ ತಂದೆಯನ್ನು ಕೇಳಿದರೆ, ಅವರು ನಿಮಗೆ ತಿಳಿಸುವರು. ನಿಮ್ಮ ಹಿರಿಯರನ್ನು ಕೇಳಿದರೆ, ಅವರು ನಿಮಗೆ ಹೇಳುವರು.
आठवण करा पूर्वी काय घडले ते अनेक वर्षा पूर्वी काय काय झाले ते लक्षात आणा; आपल्या बापाला विचारा, तो सांगेल आपल्या वडीलजनांना विचारा, ते सांगतील.
8 ಮಹೋನ್ನತ ದೇವರು ಜನಾಂಗಗಳಿಗೆ ಸ್ಥಳವನ್ನು ಕೊಡುವಾಗಲೂ, ಅವರು ಮಾನವರನ್ನು ವಿಂಗಡಿಸುವಾಗಲೂ, ಇಸ್ರಾಯೇಲರ ಲೆಕ್ಕದ ಪ್ರಕಾರ ಜನರ ಮೇರೆಗಳನ್ನು ಗುರುತಿಸಿಕೊಂಡರು.
परात्पर देवाने लोकांची विभागणी राष्ट्रा राष्ट्रांमध्ये केली. प्रत्येक राष्ट्राला स्वतंत्र भूभाग दिला. देवाने इस्राएल लोंकाच्या संख्येप्रमाणे राष्ट्राच्या सीमा आखल्या.
9 ಏಕೆಂದರೆ ಯೆಹೋವ ದೇವರ ಪಾಲು ಅವರ ಜನರೇ ಆಗಿರುತ್ತಾರೆ. ಯಾಕೋಬ್ಯರೇ ದೇವರ ಸೊತ್ತಿನ ಪಾಲು.
परमेश्वराचा वाटा त्याचे लोक होत. याकोब हाच त्याच्या वतनाचा वाटा आहे.
10 ದೇವರು ಬರಿದಾದ ಮರುಭೂಮಿಯಲ್ಲಿ ಇಸ್ರಾಯೇಲರನ್ನು ಕಂಡು ನಡೆಸಿದರು. ದೇವರು ಇಸ್ರಾಯೇಲರನ್ನು ರಕ್ಷಿಸಿ, ಉಪದೇಶಿಸಿ, ತಮ್ಮ ಕಣ್ಣುಗುಡ್ಡೆಯಂತೆ ಕಾಪಾಡಿದರು.
१०याकोब त्यास तो वाळवंटात भणभणत्या वाऱ्याच्या वैराण प्रदेशात सापडला त्याने त्याच्याजवळ राहून त्याची काळजी घेतली आणि डोळ्यातील बाहूलीप्रमाणे त्यास सांभाळले.
11 ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ, ಅವುಗಳ ಮೇಲೆ ರೆಕ್ಕೆಯನ್ನಾಡಿಸಿ, ತನ್ನ ರೆಕ್ಕೆಗಳನ್ನು ಚಾಚಿ, ಅವುಗಳನ್ನು ತೆಗೆದುಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ,
११इस्राएलाला परमेश्वर गरुडासारखा आहे. गरुड पक्षीण आपल्या पिलांना उडायला शिकवताना घरट्यातून ढकलते. त्यांच्या संरक्षणार्थ त्यांच्याबरोबर तीही उडते. पिल्ले पडली झडली तर धरता यावे म्हणून पंख पसरते आणि पंखावर बसवून त्यांना सुरक्षित जागी आणते. तसा परमेश्वर इस्राएलाला जपतो.
12 ಯೆಹೋವ ದೇವರು ಮಾತ್ರವೇ ಇಸ್ರಾಯೇಲರನ್ನು ನಡೆಸಿಕೊಂಡು ಬಂದರು. ಅನ್ಯದೇವರು ಯಾರೂ ಇಸ್ರಾಯೇಲರ ಸಂಗಡ ಇರಲಿಲ್ಲ.
१२परमेश्वरानेच इस्राएलाला पुढे आणले. दुसरा कोणी देव मदतीला नव्हता.
13 ದೇವರು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ, ಅವರಿಗೆ ವ್ಯವಸಾಯ ವೃದ್ಧಿಯನ್ನುಂಟುಮಾಡಿ, ಬಂಡೆಯಿಂದ ಜೇನೂ, ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದರು.
१३परमेश्वराच्याच पुढाकाराने त्याने या डोंगराळ प्रदेशाचा ताबा घेतला. मग याकोबाने शेतात भरपूर पीक घेतले. परमेश्वराने त्यास खडकातून मध दिला, त्या कठीण खडकातून त्याच्यासाठी तेलही काढले.
14 ಹಸುಗಳ ಕೆನೆಯನ್ನೂ, ಕುರಿಗಳ ಹಾಲನ್ನೂ, ಕುರಿಮರಿಗಳ ಕೊಬ್ಬಿನ ಸಂಗಡ ಬಾಷಾನಿನ ಟಗರುಗಳನ್ನೂ ಹೋತಗಳನ್ನೂ ಉತ್ತಮವಾದ ಗೋಧಿಯನ್ನು ಕೊಟ್ಟರು. ನೀನು ರಕ್ತಗೆಂಪಾದ ದ್ರಾಕ್ಷಾರಸವನ್ನು ಕುಡಿದೆ.
१४गाईम्हशींचे, शेळ्यामेंढ्याचे लोणी आणि दूध, पुष्ट मेंढे व कोकरे, बाशानचे उत्तम प्रतीचे बकरे, उत्कृष्ट गहू हे परमेश्वराने त्यांना दिले. द्राक्षाची लाल मदिराही इस्राएलांनो, तुम्ही प्यालात.
15 ಯೆಶುರೂನು ಎಂಬ ಇಸ್ರಾಯೇಲರು ಕೊಬ್ಬಿ ಹೋದರು. ಅವರು ಹೊಟ್ಟೆ ತುಂಬ ಚೆನ್ನಾಗಿ ತಿಂದು ದಪ್ಪವಾದರು. ಅವರು ತಮ್ಮನ್ನು ಸೃಷ್ಟಿಮಾಡಿದ ದೇವರನ್ನು ಬಿಟ್ಟು, ತಮ್ಮ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದರು.
१५पण यशुरुन पुष्ट होऊन लाथा झाडू लागला. तो धष्टपुष्ट झाला! तो लठ्ठ झाला, तो तुकतुकीत झाला आणि त्याने आपल्या तारणकर्त्या देवाचा त्याग केला! आपले तारण करणारा दुर्गासारखा परमेश्वर तुच्छ मानला.
16 ಅನ್ಯದೇವತೆಗಳಿಂದ ದೇವರಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ದೇವರಿಗೆ ಕೋಪವನ್ನು ಎಬ್ಬಿಸಿದರು.
१६त्यांनी अन्य दैवतांची पूजा करायला सुरुवात केली आणि त्याची ईर्ष्या जागवली. मूर्ती त्यास मान्य नाहीत, तरी या लोकांनी मूर्ती केल्या व त्याचा कोप ओढवला.
17 ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಮುಂಚಿತವಾಗಿ ಅರಿಯದ ದೇವರುಗಳಿಗೆ, ಸಮೀಪದಲ್ಲಿ ಹೊಸದಾಗಿ ತೋರಿ ಬಂದ ದೇವರುಗಳಿಗೆ, ಅಂದರೆ, ಅವರ ಪಿತೃಗಳು ಭಜಿಸದವುಗಳಿಗೆ ಬಲಿ ಅರ್ಪಿಸಿದರು.
१७खरे देव नव्हेत अशा भुतांना त्यांनी यज्ञार्पणे केली. अपरिचित दैवतांची पूजा केली. आपल्या पूर्वजांना पूर्वी कधी माहीत नसलेल्या दैवतांची पूजा केली.
18 ನಿಮ್ಮನ್ನು ಹುಟ್ಟಿಸಿದ ರಕ್ಷಣಾಬಂಡೆಯನ್ನು ನೆನಸದೆ, ನಿಮ್ಮನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿರಿ.
१८आपल्या निर्माणकर्त्याच्या दुर्गाचा त्यांनी त्याग केला. जीवनदायी देवाला ते विसरले.
19 ಯೆಹೋವ ದೇವರು ಅದನ್ನು ನೋಡಿ ಬೇಸರದಿಂದ ತಮ್ಮ ಪುತ್ರಪುತ್ರಿಯರನ್ನು ದಂಡಿಸಿದರು.
१९परमेश्वराने हे पाहिले व आपल्या प्रजेचा धिक्कार केला. कारण प्रजेनेच त्यास चिथवले होते!
20 ದೇವರು, “ನನ್ನ ಮುಖವನ್ನು ಅವರಿಗೆ ಮರೆಮಾಡುವೆನು, ಅವರ ಅಂತ್ಯವು ಏನೆಂದು ನೋಡುವೆನು. ಅವರು ಮೂರ್ಖ ಸಂತತಿಯೇ. ನಂಬಿಕೆಯಿಲ್ಲದ ಮಕ್ಕಳೇ.
२०तो म्हणाला, मी आता त्यांच्यापासून तोंड फिरवतो. त्यांचा शेवट कसा होईल ते मी पाहीन, कारण ही माणसे फार कुटील आहेत. ही मुले अविश्वसनीय मुलांप्रमाणे आहेत.
21 ದೇವರಲ್ಲದವುಗಳಿಂದ ಅವರು ನನಗೆ ರೋಷ ಹುಟ್ಟಿಸಿದರು. ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪವನ್ನು ಎಬ್ಬಿಸಿದರು. ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
२१मूर्तीपूजा करून यांनी माझा कोप ओढवला. मूर्ती म्हणजे देव नव्हेत. क्षुल्लक मूर्ती करून त्यांनी मला क्रुद्ध केले. तेव्हा त्यांना मत्सर वाटेल असे मी करीन. जे एकसंध राष्ट्र नाही अशा लोकांमार्फत, मूढ राष्ट्राच्या योगे मी यांना इर्ष्येस पेटवीन.
22 ಏಕೆಂದರೆ ನನ್ನ ರೋಷ ಬೆಂಕಿಯಂತಿದೆ, ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ, ಅದರ ಫಲವನ್ನೂ ತಿಂದು ಬಿಟ್ಟು, ಬೆಟ್ಟಗಳ ಅಸ್ತಿವಾರವನ್ನು ದಹಿಸುವುದು. (Sheol h7585)
२२माझा क्रोध धगधगणाऱ्या अग्नीप्रमाणे आहे. अधोलोकाच्या तळापर्यंत तो जाळत जातो. पृथ्वी व तिच्यावरील वनस्पती, पर्वतांचे पायथे यांनाही तो भस्मसात करतो. (Sheol h7585)
23 “ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿಡುವೆನು. ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.
२३मी इस्राएलांवर संकटे आणीन. त्यांच्यावर मी माझ्या बाणांचा नेम धरीन.
24 ಅವರು ಹಸಿವೆಯಿಂದ ಬಳಲಿ ಹೋಗುವರು, ಜ್ವಾಲೆಯಿಂದಲೂ ಕಠಿಣ ವ್ಯಾಧಿಯಿಂದಲೂ ಬೀಳುವರು. ಕಾಡುಮೃಗಗಳನ್ನೂ ಧೂಳಿನಲ್ಲಿರುವ ವಿಷಸರ್ಪಗಳನ್ನೂ ಅವರಿಗೆ ವಿರೋಧವಾಗಿ ಕಳುಹಿಸುವೆನು.
२४भुकेने ते कासावीस होतील. भयंकर प्रखर तापाने व भंयकर मरीने ग्रस्त होतील. वनपशू त्यांच्यावर सोडीन. विषारी साप व सरपटणारे प्राणी त्यांना दंश करतील.
25 ಮನೆಯ ಹೊರಗೆ ಖಡ್ಗವೂ ಒಳಗೆ ಭಯವೂ ಇವರಲ್ಲಿರುವುವು. ಪ್ರಾಯಸ್ಥರೂ ಕನ್ನಿಕೆಯರೂ ನರೆಕೂದಲಿನವರೂ ಹಾಲು ಕುಡಿಯುವ ಕೂಸುಗಳೂ ಖಡ್ಗಗಳಿಗೆ ಸಂಹಾರವಾಗುವರು.
२५रस्त्यावर सैन्य त्यांना तलवारीने मारेल व घरात ते भयभीत होतील. तरूण पुरुष, स्त्रिया, लहानमुले व वृद्ध सर्वांना सैन्य ठार करेल.
26 ನಾನು ಅವರನ್ನು ಚದರಿಸಿಬಿಡುವೆನು. ಅವರ ನೆನಪೇ ಮನುಷ್ಯರಲ್ಲಿ ಇರದ ಹಾಗೆ ಮಾಡುತ್ತಿದ್ದೆನು.
२६लोकांच्या आठवणीतून ते पुसले जातील इतका मी या इस्राएलांचा नाश केला असता.
27 ಆದರೆ ಅವರ ವಿರೋಧಿಗಳು ತಪ್ಪಾದ ಭಾವನೆ ಮಾಡಿಕೊಂಡು, ‘ಯೆಹೋವ ದೇವರು ಇವುಗಳನ್ನೆಲ್ಲಾ ಮಾಡಲಿಲ್ಲ, ನಾವೇ ನಮ್ಮ ಕೈಯಿಂದ ಜಯಿಸಿದೆವೆಂದುಕೊಳ್ಳುವರು,’ ಆದ್ದರಿಂದ ನಾನು ಹಿಂತಗೆದುಕೊಂಡೆನು.”
२७पण त्यांचा शत्रू काय म्हणेल हे मला माहीत आहे. आम्ही आमच्या सामर्थ्याने जिंकलो. इस्राएलांचा नाश काही परमेश्वरामुळे झाला नाही, अशी ते बढाई मारतील.
28 ಏಕೆಂದರೆ ಇಸ್ರಾಯೇಲರು ಆಲೋಚನೆ ಇಲ್ಲದ ಜನಾಂಗವೇ. ಅವರಲ್ಲಿ ವಿವೇಕವಿಲ್ಲ.
२८इस्राएल राष्ट्र विचारशून्य आहे, त्यास समज म्हणून नाहीच.
29 ಅವರಿಗೆ ಜ್ಞಾನವಿದ್ದಿದ್ದರೆ ಈ ವಿಷಯಗಳನ್ನೆಲ್ಲಾ ಗ್ರಹಿಸುತ್ತಿದ್ದರು, ತಮ್ಮ ಕಡೆಕಾಲದಲ್ಲಿ ದುರವಸ್ಥೆ ಪ್ರಾಪ್ತವಾಗುವದೆಂದು ತಿಳಿದುಕೊಳ್ಳುತ್ತಿದ್ದರು.
२९ते शहाणे असते तर त्यांना समजले असते. त्यांनी पुढच्या परिणामांचा विचार केला असता.
30 ಇಸ್ರಾಯೇಲ್ ರಕ್ಷಣಾಬಂಡೆ ಅವರನ್ನು ಮಾರಿ, ಯೆಹೋವ ದೇವರು ಅವರನ್ನು ಕೈಬಿಟ್ಟ ಹೊರತು, ಒಬ್ಬನು ಹೇಗೆ ಸಾವಿರ ಮಂದಿಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
३०एक मनुष्य हजारांचा पाठलाग करु शकेल काय? दोघेजण दहा हजारांना सळो की पळे करून सोडू शकतील का? परमेश्वरानेच या जमावला आपल्या शत्रूच्या हवाली केले तरच ते शक्य आहे. खंद्या दुर्गासमान असणाऱ्या परमेश्वराने त्यांना गुलामांसारखे विकले तरच असे घडेल.
31 ಏಕೆಂದರೆ ನಮ್ಮ ರಕ್ಷಣಾಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.
३१आपल्या शत्रूंचा दुर्ग म्हणजे परमेश्वर आपल्या अभेद्य किल्यासारख्या परमेश्वराच्या तोडीचा नाही हे तेही कबूल करतात.
32 ಏಕೆಂದರೆ ಸೊದೋಮಿನ ದ್ರಾಕ್ಷಿಗಿಡದಿಂದಲೂ, ಗೊಮೋರದ ತೋಟದೊಳಗಿಂದಲೂ ಅವರ ದ್ರಾಕ್ಷಿಗಿಡ ಉಂಟಾಯಿತು. ಅವರ ಹಣ್ಣುಗಳು, ವಿಷದ ಹಣ್ಣುಗಳು, ಆ ಹಣ್ಣುಗಳ ಗೊಂಚಲು ಕಹಿಯಾಗಿವೆ.
३२सदोम आणि गमोरा येथल्याप्रमाणे त्यांची द्राक्षे विषारी आहेत त्यांचे घोस कडूच आहेत.
33 ಅವರ ದ್ರಾಕ್ಷಾರಸವು ಸರ್ಪಗಳ ವಿಷವೂ, ಹಾವುಗಳ ಕ್ರೂರ ವಿಷವೂ ಆಗಿದೆ.
३३त्यांची द्राक्षे कडू जहर आणि द्राक्षरस अजगराचे विषारी गरळासमान आहे.
34 “ನಾನು ಇದನ್ನು ನನ್ನ ಉಗ್ರಾಣಗಳಲ್ಲಿ ಸಂಗ್ರಹಿಸಿದ್ದಲ್ಲವೋ? ಇದನ್ನು ನಾನು ಮುದ್ರಿಸಿದ್ದಲ್ಲವೋ?
३४परमेश्वर म्हणतो अर्थात ही शिक्षा सध्या मी राखून ठेवली आहे. माझ्या भांडारात ती बंदीस्त ठेवली आहे.
35 ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ. ತಕ್ಕ ಕಾಲದಲ್ಲಿ ಅವರ ಕಾಲು ಜಾರುವುದು. ಅವರ ವಿನಾಶದ ದಿವಸ ಸಮೀಪವಾಗಿದೆ. ಅವರಿಗೆ ಸಿದ್ಧವಾದ ದುರ್ಗತಿಯ ಕಾಲ ಬೇಗ ಬರುತ್ತವೆ.”
३५अनवधानाने त्यांच्या हातून काही दुष्कृत्ये घडायची मी वाट पाहत आहे. त्यांनी काही वावगे केले की त्यांचा संकटकाळ आलाच म्हणून समजा मी त्यांना शिक्षा करीन.
36 ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.
३६परमेश्वर आपल्या प्रजेची कसोटी पाहील. आपल्या सेवकांवर दया दाखवील. पण गुलाम तसेच स्वतंत्र यांना तो सत्ताहीन, असहाय्य करून सोडील.
37 ಆಗ ಯೆಹೋವ ದೇವರು ಹೀಗನ್ನುವರು: “ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ,
३७परमेश्वर म्हणेल, कोठे आहेत ते खोटे देव? तुम्ही आश्रयासाठी ज्याच्याकडे धाव घेतलीत तो कुठे आहे तुमचा दुर्ग?
38 ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ದೇವರುಗಳು ಎಲ್ಲಿ? ಈಗ ಆ ದೇವರುಗಳು ಎದ್ದು ನಿಮಗೆ ಸಹಾಯ ಮಾಡಲಿ, ನಿಮಗೋಸ್ಕರ ಕಾವಲಾಗಲಿ.
३८ते खोटे दैवत तुमच्या यज्ञातील चरबी खाणारे, तुम्ही अर्पण केलेल्यातील द्राक्षरस प्राशन करणारे दैवत कोठे आहेत? तेव्हा त्या दैवतांनीच उठून यावे व तुम्हास साहाय्य करावे!
39 “ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
३९तेव्हा आता पाहा, मीच खरा आणि एकमेव देव आहे. अन्य कोणी नाही. लोकांचा तारक मी आणि मारकही मीच, त्यांना घायाळ करणारा मी आणि त्यातून बरे करणाराही मीच. माझ्या समर्थ हातांमधून कोणीही कोणालाही सोडवू शकत नाही!
40 ಆಕಾಶದ ಕಡೆ ನನ್ನ ಕೈಯೆತ್ತಿ, ನಾನು ನಿತ್ಯವಾಗಿ ಬದುಕುವಾತನು ಎಂದು ಹೇಳುತ್ತೇನೆ.
४०आकाशाकडे बाहू उभारुन मी हे वचन देत आहे. मी सनातन आहे हे सत्य असेल तर या गोष्टी खऱ्या होतील.
41 ನಾನು ಮಿಂಚುವ ಖಡ್ಗವನ್ನು ಹದಮಾಡಿ, ನನ್ನ ಕೈ ನ್ಯಾಯವನ್ನು ಹಿಡಿದುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ನನ್ನನ್ನು ದ್ವೇಷಿಸುವವರಿಗೆ ಮುಯ್ಯಿತೀರಿಸುವೆನು.
४१माझी लखलखाती तलवार परजून मी शत्रूंना शासन करीन. ते याच शिक्षेला पात्र आहेत.
42 ಸತ್ತವರ ಮತ್ತು ಸೆರೆಯಾದವರ ರಕ್ತದಿಂದಲೂ, ಶತ್ರುವಿಗೆ ಮಾಡಿದ ಪ್ರತೀಕಾರದಿಂದಲೂ ನನ್ನ ಬಾಣಗಳು ಅಮಲೇರುವುದು. ನನ್ನ ಖಡ್ಗವು ಮಾಂಸವನ್ನು ಭಕ್ಷಿಸುವುದು. ಹೀಗೆ ಶತ್ರುಗಳ ನಾಯಕರ ತಲೆ ಬೀಳುವುದು.”
४२माझे शत्रू ठार होतील. त्यांचा पाडाव होईल ते कैद होतील. माझ्या बाणांची टोके त्यांच्या रक्ताने माखतील आणि माझे तलवारीचे पाते शत्रू सैन्याचा शिरच्छेद करील.
43 ಎಲ್ಲಾ ಜನಾಂಗಗಳೇ, ದೇವಜನರ ಸಂಗಡ ಹರ್ಷಿಸಿರಿ. ಏಕೆಂದರೆ ದೇವರು ತಮ್ಮ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುವರು. ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ದೇಶಕ್ಕೋಸ್ಕರವೂ, ತಮ್ಮ ಜನರಿಗೋಸ್ಕರವೂ ದೋಷಪರಿಹಾರ ಮಾಡುವರು.
४३समस्त राष्ट्रांनो, देवाचा प्रजेचा जयजयकार करा. कारण हा देव आपल्या सेवकांच्या बाजूने उभा राहतो. आपल्या सेवकांचा संहार करु पाहणाऱ्यांना शासन करतो. शत्रूला योग्य अशी शिक्षा देतो. आणि आपली प्रजा आणि प्रदेश ह्यांच्यासाठी प्रायश्चित करतो.
44 ಆಗ ಮೋಶೆಯು ನೂನನ ಮಗನಾದ ಹೋಶೇಯನ ಸಂಗಡ ಬಂದು, ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.
४४मोशेने या गीताचे शब्द सर्व इस्राएलांना ऐकू जातील असे ऐकवले. नूनाचा पुत्र होशा (म्हणजेच, यहोशवा) मोशेबरोबर होता.
45 ಮೋಶೆಯು ಈ ಮಾತುಗಳನ್ನೆಲ್ಲಾ ಸಮಸ್ತ ಇಸ್ರಾಯೇಲಿಗೆ ಹೇಳಿ ತೀರಿಸಿದ ತರುವಾಯ ಅವನು ಅವರಿಗೆ,
४५ह्याप्रमाणे मोशेने ही सर्व वचने इस्राएल लोकांस सांगण्याचे संपविल्यावर
46 “ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಈ ನಿಯಮದ ಮಾತುಗಳನ್ನು ಅನುಸರಿಸಬೇಕೆಂದು ನೀವು ನಿಮ್ಮ ಮಕ್ಕಳಿಗೆ ಆಜ್ಞಾಪಿಸಿರಿ.
४६मोशे लोकांस म्हणाला, “मी ज्या गोष्टी आज सांगतो त्या लक्षपूर्वक ऐका. आपल्या मुलाबाळांनाही या नियमशास्त्राचे काटेकोरपणे पालन करायला सांगा.
47 ಏಕೆಂದರೆ ಇದು ನಿಮಗೆ ಕೇವಲ ವ್ಯರ್ಥವಾದದ್ದಲ್ಲ. ಇದು ನಿಮಗೆ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ,” ಎಂದು ಹೇಳಿದನು.
४७त्यांचे महत्व कमी लेखू नका. या आज्ञांवरच तुमचे जीवन अवलंबून आहे. त्यायोगेच तुम्ही आपल्याला मिळणार असलेल्या त्या यार्देन नदीपलीकडच्या प्रदेशात दीर्घकाळ वास्तव्य कराल.”
48 ಆ ದಿವಸವೇ ಯೆಹೋವ ದೇವರು ಮೋಶೆಗೆ,
४८त्याच दिवशी परमेश्वर मोशेशी बोलला. तो म्हणाला,
49 “ನೀನು ಈ ಅಬಾರೀಮ್ ಬೆಟ್ಟದ ಮೇಲೆ ಅಂದರೆ, ಮೋವಾಬ್ ದೇಶದಲ್ಲಿ ಯೆರಿಕೋವಿಗೆ ಎದುರಾಗಿ ಇರುವ ನೆಬೋ ಪರ್ವತದ ಮೇಲೆ ಏರಿ ಹೋಗು. ನಾನು ಇಸ್ರಾಯೇಲರಿಗೆ ಸೊತ್ತಾಗಿ ಕೊಡುವ ಕಾನಾನ್ ದೇಶವನ್ನು ನೋಡು.
४९“मवाब देशात, यरीहो शहराच्या समोर अबारीम पर्वतांमध्ये जो नबो डोंगर आहे त्या डोंगरावर जा. मी इस्राएलांना जो कनान देश देणार आहे तो तू तेथून पाहू शकशील.
50 ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು, ತನ್ನ ಜನರ ಬಳಿಗೆ ಸೇರಿದ ಹಾಗೆ, ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು, ನಿನ್ನ ಜನರ ಬಳಿಗೆ ಸೇರಬೇಕು.
५०या डोंगरावर तुझे निधन होईल. तुझा भाऊ अहरोन हा जसा होर डोंगरावर मृत्यू पावल्यावर स्वजनांना मिळाला तसेच तुझे होईल.
51 ನೀವಿಬ್ಬರೂ ಚಿನ್ ಮರುಭೂಮಿಯಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲರ ಮುಂದೆ ನಂಬದೆ, ನನ್ನ ಪವಿತ್ರತೆಯನ್ನು ಇಸ್ರಾಯೇಲರ ನಡುವೆ ಕಾಪಾಡದೆ ನಂಬದೆ ಹೋದಿರಿ.
५१कारण तुम्ही दोघांनीही माझ्याविरूद्ध पाप केले आहे. कादेश जवळच्या मरीबा झऱ्यापाशी तुम्ही होता. सीन वाळवंटातील ही गोष्ट आहे. तेथे इस्राएलांसमोर तुम्ही माझा विश्वासघात केला तसेच मला पवित्र मानले नाही.
52 ಆದುದರಿಂದ, ನೀನು ಆ ದೇಶವನ್ನು ದೂರದಿಂದ ನೋಡುವೆ, ಆದರೆ ನಾನು ಇಸ್ರಾಯೇಲರಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವುದಿಲ್ಲ,” ಎಂದು ಹೇಳಿದರು.
५२तेव्हा मी इस्राएलांना देणार असलेली भूमी तू पाहू शकतोस पण तुझे तेथे जाणे होणार नाही.”

< ಧರ್ಮೋಪದೇಶಕಾಂಡ 32 >