< ಧರ್ಮೋಪದೇಶಕಾಂಡ 9 >

1 ಇಸ್ರಾಯೇಲರೇ, ಕೇಳಿರಿ, ನೀವು ಹೋಗಿ ನಿಮಗಿಂತ ದೊಡ್ಡ, ಬಲಿಷ್ಠ ಜನಾಂಗಗಳನ್ನೂ, ಆಕಾಶದವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವುದಕ್ಕೆ ಈ ಹೊತ್ತು ಯೊರ್ದನ್ ನದಿಯನ್ನು ದಾಟಲಿದ್ದೀರಿ.
हे इस्राएलांनो ऐका, तुम्ही आज यार्देन नदीपलीकडे जाणार आहात. तुमच्यापेक्षा मोठी आणि शक्तीशाली अशी राष्ट्रे ताब्यात घेणार आहात. तेथील नगरे मोठी आहेत. त्यांची तटबंदी आकाशाला भिडलेली आहे.
2 ಆ ನಾಡಿನ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ. “ಅನಾಕ್ಯರ ಮುಂದೆ ಯಾರು ನಿಲ್ಲುವರು?” ಎಂಬ ಮಾತನ್ನು ಅವರ ಬಗ್ಗೆ ಕೇಳಿದ್ದೀರಿ.
तेथील अनाकी वंशाचे लोक उंच आणि धिप्पाड आहेत. हे तुम्हास माहीत आहेच. त्यांचा पाडाव कोणी करु शकणार नाही असे त्यांच्याविषयी आपल्या हेरांनी म्हटलेले तुम्ही ऐकलेले आहे.
3 ಹೀಗಿರುವುದರಿಂದ ನೀವು ಈ ಹೊತ್ತು ತಿಳಿದುಕೊಳ್ಳತಕ್ಕದ್ದೇನೆಂದರೆ, ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡುವರು. ದೇವರು ಅವರನ್ನು ನಿಮ್ಮ ಮುಂದೆ ಸೋಲಿಸುವರು. ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನೀವು ಅವರನ್ನು ಸ್ವಾಧೀನಪಡಿಸಿಕೊಂಡು ಅವರನ್ನು ಬೇಗ ತೆಗೆದುಹಾಕುವಿರಿ.
पण तुमचा देव परमेश्वर नदी उतरुन आधी तुमच्यापुढे जाणार आहे ह्याची खात्री बाळगा. आणि विध्वंस करणाऱ्या अग्नीसारखा तो आहे. तो राष्ट्रांचा विध्वंस करील. त्या राष्ट्रांना तुमच्यापुढे नमवेल. मग तुम्ही त्यांना घालवून द्याल, त्यांचा तात्काळ पराभव कराल. हे घडणार आहे, असे परमेश्वराने वचनच दिले आहे.
4 ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ತೆಗೆದುಹಾಕಿದಾಗ, “ಯೆಹೋವ ದೇವರು ನಮ್ಮನ್ನು ಈ ದೇಶವನ್ನು ಸ್ವಾಧೀನಪಡಿಸಲು ಕರೆದುಕೊಂಡು ಬಂದಿದ್ದು ನಮ್ಮ ನೀತಿಯ ನಿಮಿತ್ತವೇ,” ಎಂದು ನೀವು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳಬಾರದು. ಆ ಜನಾಂಗಗಳ ಕೆಟ್ಟತನದ ನಿಮಿತ್ತವೇ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.
तुमचा देव परमेश्वर त्या राष्ट्रांना तुमच्यापुढून हुसकावून लावेल. पण आमच्या पुण्याईमुळेच परमेश्वराने हा प्रदेश आमच्या ताब्यात दिला असे मनात आणू नका. कारण ते खोटे आहे. परमेश्वराने त्यांना घालवले ते त्यांच्या दुष्टपणामुळे, तुमच्या सात्विकपणामुळे नव्हे.
5 ನಿಮ್ಮ ನೀತಿಗೋಸ್ಕರವೂ, ನಿಮ್ಮ ಹೃದಯದ ಯಥಾರ್ಥತೆಗೋಸ್ಕರವೂ ನೀವು ಅವರ ದೇಶವನ್ನು ಸ್ವತಂತ್ರಿಸಿಕೊಳ್ಳುವುದಕ್ಕೆ ಬರುವುದಿಲ್ಲ. ಆ ಜನಾಂಗಗಳ ಕೆಟ್ಟತನಕ್ಕೋಸ್ಕರವೂ, ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.
तुम्ही फार चांगले आहा आणि योग्य मार्गाने जगता म्हणून तुम्ही येथे राहायला जाणार आहात असे नाही. या राष्ट्रांच्या दुष्टपणामुळे तुमचा देव परमेश्वर त्यांना घालवून देत आहे आणि अब्राहाम, इसहाक व याकोब या पूर्वजांना दिलेला शब्द तो पाळत आहे.
6 ಹೀಗಿರುವುದರಿಂದ ನಿಮ್ಮ ನೀತಿಗೋಸ್ಕರ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ಒಳ್ಳೆಯ ದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಕೊಡುವುದಿಲ್ಲವೆಂದು ನೀವು ತಿಳಿದುಕೊಳ್ಳಬೇಕು. ಏಕೆಂದರೆ ನೀವು ಹಟಮಾರಿ ಜನಾಂಗವಾಗಿದ್ದೀರಿ.
म्हणून तुम्ही हे निश्चित लक्षात ठेवा की, तुमच्या चांगूलपणामुळे हा उत्तम देश तुमचा देव परमेश्वर तुम्हास वतन म्हणून देत आहे असे नाही, कारण तुम्ही फार ताठमानेचे राष्ट्र आहात.
7 ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ. ಮರೆಯಬೇಡಿರಿ. ನೀವು ಈಜಿಪ್ಟ್ ದೇಶದಿಂದ ಹೊರಟ ದಿವಸ ಮೊದಲ್ಗೊಂಡು ಈ ಸ್ಥಳಕ್ಕೆ ಬರುವವರೆಗೆ ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುತ್ತಿದ್ದೀರಿ.
रानात असताना तुम्ही तुमच्या परमेश्वर देवाचा कोप ओढवून घेतला होता. मिसर सोडल्या दिवसापासून ते इथे येईपर्यंत तुम्ही परमेश्वराच्या आज्ञेविरूद्ध बंड करीत आलेले आहात.
8 ನೀವು ಹೋರೇಬಿನಲ್ಲಿಯೂ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದಾಗ, ಅವರು ನಿಮ್ಮನ್ನು ನಿಮ್ಮ ಮೇಲೆ ಸಿಟ್ಟುಮಾಡಿಕೊಂಡು ನಾಶಮಾಡಬೇಕೆಂದಿದ್ದರು.
होरेबात तुम्ही परमेश्वरास क्रोधाविष्ट केलेत. तेव्हाच तो तुमचा नाश करणार होता.
9 ಆ ಕಲ್ಲಿನ ಹಲಗೆಗಳು ಅಂದರೆ, ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ, ನಲವತ್ತು ದಿವಸ ಹಗಲುರಾತ್ರಿ ಬೆಟ್ಟದಲ್ಲಿದ್ದೆನು. ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ.
त्याचे असे झाले; परमेश्वराने तुमच्याशी केलेला पवित्र करार म्हणजे दगडी पाट्या घेण्यासाठी मी डोंगरावर चढून गेलो. तेथे मी चाळीस दिवस अन् चाळीस रात्री अन्नपाणी न घेता राहिलो.
10 ಆಗ ಯೆಹೋವ ದೇವರು ನನಗೆ ತಮ್ಮ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟರು. ಯೆಹೋವ ದೇವರು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಕೂಡಿದ ದಿನದಲ್ಲಿ ಹೇಳಿದ ಆಜ್ಞೆಗಳೆಲ್ಲಾ ಆ ಹಲಗೆಗಳಲ್ಲಿದ್ದವು.
१०परमेश्वराने त्या पाट्या माझ्या हवाली केल्या. परमेश्वराने आपल्या हाताने त्या पाट्यांवर त्याच्या आज्ञा लिहिल्या. तुम्ही पर्वतापाशी जमलेले असताना देव अग्नीतून तुमच्याशी जे बोलला ते सर्व त्याने लिहिले
11 ನಲವತ್ತು ದಿವಸ ಹಗಲು ರಾತ್ರಿಗಳಾದ ಮೇಲೆ ಯೆಹೋವ ದೇವರು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟರು.
११चाळीस दिवस, चाळीस रात्री झाल्यावर परमेश्वराने त्या आज्ञापटाच्या पाट्या मला दिल्या.
12 ಆಗ ಯೆಹೋವ ದೇವರು, “ಎದ್ದು ಇಲ್ಲಿಂದ ಬೇಗ ಇಳಿದು ಹೋಗು. ಏಕೆಂದರೆ ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿನ್ನ ಜನರು ಕೆಟ್ಟು ಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡಿದ್ದಾರೆ,” ಎಂದು ನನಗೆ ಹೇಳಿದರು.
१२परमेश्वर म्हणाला, “ऊठ आणि ताबडतोब खाली जा. मिसरहून तू आणलेले लोक बिघडले आहेत. इतक्यातच ते माझ्या आज्ञांपासून बहकले आहेत. त्यांनी स्वत: साठी एक ओतीव मूर्ती केली आहे.”
13 ಇದಲ್ಲದೆ ಯೆಹೋವ ದೇವರು ನನಗೆ, “ನಾನು ಈ ಜನರನ್ನು ನೋಡಿದ್ದೇನೆ. ಇಗೋ, ಇದು ಆಜ್ಞೆಗೆ ವಿಧೇಯವಾಗದ ಜನಾಂಗವೇ.
१३परमेश्वर असेही मला म्हणाला, “मी या लोकांस पाहीले आहे. ते फार हट्टी आहेत.
14 ನನ್ನನ್ನು ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು, ನಿಮ್ಮನ್ನು ಅವರಿಗಿಂತ ಬಲಿಷ್ಠವಾದ ಜನಾಂಗವಾಗಿ ಮಾಡುವೆನು,” ಎಂದು ಹೇಳಿದರು.
१४मला आडवू नकोस, त्यांचा नाश करु दे. मी त्यांचे नाव आकाशाखालून खोडून टाकीन. मग मी तुझे, त्यांच्याहून श्रेष्ठ आणि समर्थ असे दुसरे राष्ट्र उभारीन.”
15 ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು. ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು. ಒಡಂಬಡಿಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು.
१५मग मी मागे फिरुन डोंगर उतरुन आलो. डोंगरावर आग धगधगत होती. माझ्या हातात आज्ञापटाच्या दोन पाट्या होत्या.
16 ನಾನು ನೋಡಿದಾಗ, ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಎರಕ ಹೊಯ್ದ ಕರುವನ್ನು ನಿಮಗೆ ಮಾಡಿಕೊಂಡು, ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗ ಬಿಟ್ಟುಬಿಟ್ಟು ಹೋಗಿದ್ದಿರಿ.
१६मी पाहिले की तुमचा देव परमेश्वर त्याच्या इच्छेविरूद्ध वागून तुम्ही पाप केले होते. तुम्ही सोन्याच्या वासराची ओतीव मूर्ती केली होती. परमेश्वर देवाच्या आज्ञा पाळण्याचे थांबवून तुम्ही बहकून गेला होता!
17 ಆಗ ನಾನು ಆ ಎರಡು ಹಲಗೆಗಳನ್ನು ತೆಗೆದುಕೊಂಡು ನನ್ನ ಕೈಯಿಂದ ಬಿಸಾಡಿ, ನಿಮ್ಮ ಮುಂದೆ ಒಡೆದು ಹಾಕಿದೆನು.
१७तेव्हा मी धरलेल्या त्या आज्ञापटाच्या पाट्या हातातून फेकून दिल्या आणि तुमच्या समोर त्या फोडून टाकल्या.
18 ಆಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ಅವರಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಲವತ್ತು ದಿವಸ ಹಗಲುರಾತ್ರಿ ಊಟಮಾಡದೆ, ನೀರು ಕುಡಿಯದೆ, ಯೆಹೋವ ದೇವರ ಮುಂದೆ ಬಿದ್ದಿದ್ದೆನು.
१८मग मी परमेश्वरापुढे जमिनीवर डोके टेकून पूर्वीप्रमाणेच चाळीस दिवस अन् चाळीस रात्र पालथा पडून राहिलो. तुमच्या घोर पापामुळे मी हे केले. परमेश्वराच्या दृष्टीने तुम्ही हे फार वाईट केले आणि परमेश्वराचा कोप ओढवून घेतलात.
19 ಏಕೆಂದರೆ ಯೆಹೋವ ದೇವರು ನಿಮ್ಮನ್ನು ನಾಶಮಾಡುವಂತೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು. ಆದರೆ ಆ ಸಾರಿ ಕೂಡ ಯೆಹೋವ ದೇವರು ನನ್ನ ಬೇಡಿಕೆಯನ್ನು ಕೇಳಿದರು.
१९परमेश्वराच्या कोपाची मला भीती वाटत होती कारण संतापाच्या भरात त्याने तुमचा संहार केला असता. पण या ही वेळी परमेश्वराने माझे ऐकले.
20 ಆರೋನನನ್ನು ನಾಶಮಾಡುವಂತೆ ಯೆಹೋವ ದೇವರು ಅವನ ಮೇಲೆಯೂ ಬಹಳ ಕೋಪಗೊಂಡರು. ಆದ್ದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆ ಮಾಡಿದೆನು.
२०परमेश्वर अहरोनावर इतका संतापला होता की, त्याचा नाश करणार होता. पण मी त्याच्यासाठी प्रार्थना केली.
21 ಇದಲ್ಲದೆ ನೀವು ಯಾವದರ ಮೂಲಕ ಪಾಪವನ್ನು ಮಾಡಿದ್ದೀರೋ ಆ ಚಿನ್ನದ ಕರುವನ್ನು ನಾನು ತೆಗೆದುಕೊಂಡು, ಬೆಂಕಿಯಿಂದ ಸುಟ್ಟು, ಒಡೆದು, ಅರೆದು, ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬಿಸಾಡಿದೆನು.
२१मग तुमचे ते अमंगळ कृत्य, तुम्ही केलेली वासराची मूर्ती मी आगीत जाळून टाकली. नंतर तिचे तुकडे तुकडे करून भस्म करून टाकले व डोंगरावरुन वाहणाऱ्या ओढ्यात फेकून दिले.
22 ನೀವು ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಲ್ಲಿಯೂ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿದಿರಿ.
२२नंतर तबेरा, मस्सा व किब्रोथ-हत्तव्वा येथेही तुम्ही परमेश्वरास संतप्त केलेत.
23 ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿ, “ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ,” ಎಂದು ಹೇಳಿದಾಗ, ನೀವು ನಿಮ್ಮ ದೇವರಾದ ಯೆಹೋವ ದೇವರ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ನಂಬಲಿಲ್ಲ. ಅವರ ಮಾತನ್ನೂ ಕೇಳಲಿಲ್ಲ.
२३जेव्हा परमेश्वराने कादेश-बर्ण्याहून तुम्हास रवाना करून सांगितले की, “जा, व जो देश मी तुम्हास दिला आहे तो ताब्यात घ्या,” तेव्हाही तुम्ही तुमचा देव परमेश्वर ह्याच्या आज्ञेविरुद्ध बंड केले; तुम्ही त्याच्यावर विश्वास ठेवला नाही व त्याचे सांगणे ऐकले नाही.
24 ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದೀರಿ.
२४जेव्हापासून मी तुम्हास ओळखतो तेव्हापासून तुम्ही परमेश्वराचे ऐकण्यासाठी नेहमीच नकार दिलेला आहे.
25 ಹೀಗಿರಲಾಗಿ ಯೆಹೋವ ದೇವರು ನಿಮ್ಮನ್ನು ನಾಶಮಾಡುತ್ತೇನೆಂದು ಹೇಳಿದ್ದರಿಂದ, ನಾನು ಮುಂಚೆ ಬಿದ್ದುಕೊಂಡ ಹಾಗೆಯೇ ನಲವತ್ತು ದಿವಸ ಹಗಲುರಾತ್ರಿ ಯೆಹೋವ ದೇವರ ಮುಂದೆ ಬಿದ್ದಿದ್ದೆನು.
२५तेव्हा मी त्याच्या पायाशी चाळीस दिवस अन् चाळीस रात्री पडून राहिलो. कारण तुमचा नाश करीन असे परमेश्वर म्हणाला होता.
26 ನಾನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ, “ಸಾರ್ವಭೌಮ ಯೆಹೋವ ದೇವರೇ, ನೀವು ನಿಮ್ಮ ಮಹಿಮೆಯಿಂದ ವಿಮೋಚಿಸಿ, ಬಲವಾದ ಕೈಯಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರನ್ನು ನಾಶಮಾಡಬೇಡಿ.
२६मी परमेश्वरास विनवणी केली की हे प्रभू तुझ्या प्रजेचा नाश करु नकोस. तू आपले लोक तुझे वतन खंडून घेतले आहे. तुझ्या सामर्थ्याने तू त्यांना मिसरमधून मुक्त करून बाहेर आणले आहेस.
27 ನಿಮ್ಮ ದಾಸರಾದ ಅಬ್ರಹಾಮ್, ಇಸಾಕ್, ಯಾಕೋಬರನ್ನು ಜ್ಞಾಪಕಮಾಡಿಕೊಳ್ಳಿರಿ. ಈ ಜನರ ಕಾಠಿಣ್ಯದ ಮೇಲೆಯೂ, ಅವರ ದುಷ್ಟತ್ವದ ಮೇಲೆಯೂ, ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡಿ.
२७अब्राहाम, इसहाक आणि याकोब या तुझ्या सेवकांना तू शब्द दिला आहेस तो आठव. त्यांचा ताठरपणा विसरून जा. त्यांची पापे किंवा दुराचार यांच्याकडे दुर्लक्ष कर.
28 ನೀವು ಯಾವ ದೇಶದಿಂದ ನಮ್ಮನ್ನು ಬರಮಾಡಿದಿರೋ, ಆ ದೇಶದವರು, ‘ಯೆಹೋವ ದೇವರು ಇಸ್ರಾಯೇಲರಿಗೆ ವಾಗ್ದಾನ ಮಾಡಿದ ನಾಡಿಗೆ ಅವರನ್ನು ಸೇರಿಸಲಾರದೆ ಹಗೆಮಾಡಿ, ಮರುಭೂಮಿಯಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದರು’ ಎಂದು ಹೇಳುವುದಕ್ಕೆ ಆಸ್ಪದವಾದೀತು.
२८तू त्यांना शासन केलेस तर मिसरमधील लोक म्हणतील, परमेश्वर त्यांना स्वत: च कबूल केलेल्या प्रदेशात नेऊ शकला नाही. त्यांचा तो द्वेष करत होता. म्हणून मारुन टाकण्यासाठीच त्याने त्यांना रानात आणले.
29 ಆದರೂ ನೀವು ನಿಮ್ಮ ದೊಡ್ಡ ಶಕ್ತಿಯಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಹೊರಗೆ ಬರಮಾಡಿದ ನಿಮ್ಮ ಜನವೂ ನಿಮ್ಮ ಸೊತ್ತೂ ಇವರೇ,” ಎಂದು ಹೇಳಿದೆನು.
२९पण हे लोक तुझेच आहेत, म्हणजे तुझे वतन आहेत, तू त्यांना महासामर्थ्याने आपण होऊन मिसर देशातून त्यांना बाहेर आणले आहेस.

< ಧರ್ಮೋಪದೇಶಕಾಂಡ 9 >