< ಪ್ರಸಂಗಿ 12 >

1 ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ,” ಎಂದು ನೀನು ಹೇಳುವ ವರ್ಷಗಳು ಸಮೀಪಿಸುವುದಕ್ಕೆ ಮೊದಲು, ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ದೇವರನ್ನು ಸ್ಮರಿಸು.
तू आपल्या तारुण्याच्या दिवसातसुद्धा आपल्या निर्माणकर्त्याला स्मर. अनर्थाचे दिवस येण्यापूर्वी, आणि तेव्हा अशी वर्षे येण्यापूर्वी तू म्हणशील, त्यामध्ये मला काही सुख नाही.
2 ಸೂರ್ಯ ಚಂದ್ರ ನಕ್ಷತ್ರಗಳೂ ನಿನಗೆ ಮೊಬ್ಬಾಗಿ, ಮಳೆಯ ಮೋಡಗಳು ಮತ್ತೆ ಬರುವುದಕ್ಕಿಂತ ಮೊದಲು ದೇವರನ್ನು ಸ್ಮರಿಸು.
सूर्य, चंद्र आणि तारे यांच्या प्रकाशापूर्वी अंधकार वाढेल आणि पावसानंतर काळोखे ढग परत येतील.
3 ಆ ದಿನದಲ್ಲಿ ಮನೆ ಕಾಯುವವರು ನಡುಗುವರು. ಬಲವಾದ ಮನುಷ್ಯರು ಸಹ ತಾವಾಗಿಯೇ ಬಗ್ಗುವರು. ಅರೆಯುವವರು ಕೆಲವರೇ ಉಳಿದಿರುವುದರಿಂದ ಸುಮ್ಮನಿರುವರು. ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು.
त्यावेळी महालाचे पहारेकरी थरथरतील आणि बळकट मनुष्य वाकतील, आणि दळणाऱ्या स्त्रिया थांबतील कारण त्या थोड्या आहेत, आणि ज्या खिडक्यातून पाहणाऱ्या आहेत त्यांना स्पष्ट दिसणार नाही.
4 ಬೀದಿ ಬಾಗಿಲುಗಳು ಮುಚ್ಚಿರುವುವು, ಅರೆಯುವ ಶಬ್ದವು ಕಡಿಮೆಯಾಗುವುದು; ಪಕ್ಷಿಯ ಶಬ್ದವಾದಾಗ ಎದ್ದೇಳುವುದು ತಡವಾಗುವುದು. ಮುಂಜಾನೆಯ ಗಾನಸ್ವರ ಮಂದವಾಗುವುದು.
त्यासमयी जेव्हा रस्त्यातील दरवाजे बंद होतील आणि जात्याचा आवाज थांबेल, तेव्हा पक्ष्याच्या शब्दाने मनुष्य बिथरेल, आणि मुलींच्या गायनाचास्वर लुप्त होईल.
5 ಎತ್ತರವನ್ನು ಕಂಡು ಹೆದರಿಕೆಯಾಗುವುದು. ದಾರಿಯ ಅಪಾಯಗಳ ಬಗ್ಗೆ ಅಂಜಿಕೆಯಾಗುವುದು. ಬಾದಾಮಿಯ ಮರದಂತೆ ಹೂವು ಬಿಡುವುದು. ಮಿಡತೆಯು ಸಹ ಭಾರಾವಾಗಿರುವುದು. ಆಸೆ ಕುಂದಿಹೋಗುವುದು. ಈ ರೀತಿಯಾಗಿ ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಟು ಹೋಗುವರು. ಗೋಳಾಡುವವರು ಬೀದಿಯಲ್ಲಿ ತಿರುಗಾಡುವರು.
तेव्हा मनुष्यास उंचावरच्या ठिकाणांची आणि रस्त्यावरील पुढील धोक्यांची भीती वाटेल, आणि तेव्हा बदामाचे झाड फुलेल, आणि तेव्हा टोळ स्वतःपुढे भारी असा वाटेल, आणि तेव्हा स्वाभाविक इच्छा दुर्बल होईल. नंतर मनुष्य आपल्या सनातन घरास जातो, आणि शोक करणारे रस्त्यात फिरतात.
6 ಬೆಳ್ಳಿಯಂತ ಸರ ಕಿತ್ತುಹೋಗುವುದು, ಬಂಗಾರದಂತ ಬಟ್ಟಲು ಜಜ್ಜಿ ಹೋಗುವುದು. ಮಣ್ಣಿನ ಮಡಕೆಯು ಬುಗ್ಗೆಯ ಹತ್ತಿರ ಒಡೆದು ಹೋಗುವುದು. ಬಾವಿಯ ರಾಟೆ ಮುರಿಯುವುದು.
तू आपल्या निर्माणकर्त्याचे स्मरण कर, रुप्याची तार तुटण्यापूर्वी किंवा सोन्याचा कटोरा चेपण्यापूर्वी, अथवा झऱ्याजवळ घागर फुटण्यापूर्वी, अथवा पाण्याचा रहाट विहिरीकडे मोडला जाईल,
7 ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.
ज्या ठिकाणापासून ती आली, माती परत मातीला मिळेल, आणि देवाने दिलेला आत्मा त्याजकडे परत जाईल.
8 “ವ್ಯರ್ಥ, ವ್ಯರ್ಥವೇ! ಎಲ್ಲವೂ ವ್ಯರ್ಥವೇ!” ಎಂದು ಪ್ರಸಂಗಿ ಹೇಳುತ್ತಾನೆ.
उपदेशक म्हणतो, धुक्याची वाफ, प्रत्येक गोष्ट नष्ट होणारी वाफ आहे.
9 ಇದಲ್ಲದೆ ಜ್ಞಾನವಂತ ಪ್ರಸಂಗಿಯು ಇನ್ನೂ ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು. ಅನೇಕ ಜ್ಞಾನೋಕ್ತಿಗಳನ್ನು ಅವನು ಪರೀಕ್ಷಿಸಿ, ವಿಚಾರಿಸಿ ಕ್ರಮಪಡಿಸಿದನು.
उपदेशक ज्ञानी होता आणि म्हणून तो लोकांस ज्ञान शिकवीत गेला. त्याने अभ्यास व निरक्षण करून व पुष्कळ म्हणीचा संच केला.
10 ಪ್ರಸಂಗಿಯು ಸೂಕ್ತ ವಾಕ್ಯಗಳನ್ನು ಹುಡುಕಿ ಕಂಡುಹಿಡಿದನು. ಹಾಗೆ ಬರೆದವುಗಳು ಯಥಾರ್ಥ ಮತ್ತು ಸತ್ಯವಾದ ಮಾತುಗಳು.
१०उपदेशकाने स्पष्ट व सत्याची सरळमार्गी वचने शोधून लिहिण्याचा प्रयत्न केला.
11 ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗಿರುತ್ತವೆ. ಅವರು ಸಂಗ್ರಹಿಸಿದ ವಚನಗಳು ಒಬ್ಬ ಆತ್ಮಿಕ ಕುರುಬನಿಂದ ನೆಟ್ಟ ಮೊಳೆಗಳ ಹಾಗೆ ಕೊಡಲಾಗಿವೆ.
११ज्ञानाची वचने आरींसारखी आहेत. शिक्षकाची त्याच्या म्हणीच्या संग्रहातील वचने खोल ठोकलेल्या खिळ्यांसारखी आहेत. ती एकाच मेंढपाळाकडून शिकविण्यात आली आहेत.
12 ನನ್ನ ಮಗುವೇ, ಇವುಗಳನ್ನಲ್ಲದೇ, ನೀನು ಎಚ್ಚರಿಕೆಯಿಂದ ಇರಬೇಕಾದ ವಿಷಯಗಳು ಇನ್ನೂ ಇವೆ. ಬಹಳ ಪುಸ್ತಕಗಳ ರಚನೆಗೆ ಅಂತ್ಯವಿಲ್ಲ. ಅತಿಯಾದ ಅಭ್ಯಾಸವು ದೇಹಕ್ಕೆ ಆಯಾಸ.
१२माझ्या मुला, त्याखेरीज अधिक सावध रहा. पुष्कळ पुस्तके रचण्याला, काही अंत नाही. खूप अभ्यास देहाला थकवा आणेल.
13 ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.
१३याविषयाचा शेवट हाच आहे, सर्व काही ऐकल्यानंतर, तू देवाचे भय धर आणि त्याच्या आज्ञा पाळ. कारण सर्व मानवजातीचे सारे कर्तव्य हेच आहे.
14 ಏಕೆಂದರೆ ಒಳ್ಳೆಯದಾಗಿರಲಿ, ಕೆಟ್ಟದ್ದಾಗಿರಲಿ, ದೇವರು ಆ ಎಲ್ಲಾ ಕಾರ್ಯಗಳನ್ನೂ ಪ್ರತಿಯೊಂದು ರಹಸ್ಯವನ್ನೂ ನ್ಯಾಯವಿಚಾರಣೆಗೆ ತರುವರು.
१४देव सगळ्या कृत्यांचा न्याय करील, त्याबरोबर प्रत्येक गुप्त गोष्टीचा, मग ती वाईट असो किंवा चांगली.

< ಪ್ರಸಂಗಿ 12 >