< ಎಸ್ತೇರಳು 7 >

1 ಅರಸನೂ ಹಾಮಾನನೂ ಎಸ್ತೇರ್ ರಾಣಿಯ ಔತಣಕ್ಕೆ ಬಂದರು.
तेव्हा राजा आणि हामान राणी एस्तेरकडे मेजवानीला गेले.
2 ಎರಡನೆಯ ದಿವಸ ದ್ರಾಕ್ಷಾರಸವನ್ನು ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.
मेजवानीच्या या दुसऱ्या दिवशी, ते द्राक्षरस घेत असताना, राजाने पुन्हा एस्तेरला विचारले, एस्तेर राणी, “तुझी विनंती काय आहे? ती मान्य केली जाईल. तुझी मागणी काय आहे? ती अर्ध्या राज्याएवढी असली तरी ती मान्य करण्यांत येईल.”
3 ಆಗ ಎಸ್ತೇರ್ ರಾಣಿಯು ಉತ್ತರವಾಗಿ, “ಅರಸನೇ, ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವಳಾಗಿದ್ದರೆ, ನನ್ನ ಪ್ರಾಣವನ್ನೂ ನನ್ನ ಜನರ ಪ್ರಾಣವನ್ನೂ ಉಳಿಸಬೇಕು. ಇದೇ ನನ್ನ ವಿಜ್ಞಾಪನೆ. ಇದೇ ನನ್ನ ಬೇಡಿಕೆ.
तेव्हा एस्तेर राणी म्हणाली, “राजा, माझ्यावर आपली कृपादृष्टी झाली असून आपली मर्जी असेल तर मला व माझ्या लोकांसही जिवदान द्यावे. एवढेच माझे मागणे आहे.
4 ಏಕೆಂದರೆ ನಾನು ಮತ್ತು ನನ್ನ ಜನರು ದುರಂತಕ್ಕೂ, ಕೊಲೆಗೂ, ಸರ್ವನಾಶಕ್ಕೂ ಮಾರಟವಾಗಿದ್ದೇವೆ. ಒಂದು ವೇಳೆ, ನಾವು ದಾಸರಾಗಿಯಾಗಲಿ, ದಾಸಿಯರಾಗಲಿ ಮಾರಾಟವಾಗಿದ್ದರೆ ನಾನು ಸುಮ್ಮನಿರುತ್ತಿದ್ದೆ. ಅಂಥ ಕಷ್ಟಕ್ಕಾಗಿ ನಾನು ಅರಸನನ್ನು ತೊಂದರೆಪಡಿಸದೆ ಸುಮ್ಮನೆ ಇದ್ದುಬಿಡುತ್ತಿದ್ದೆನು,” ಎಂದಳು.
कारण, आमचा नाश होण्यासाठी, मारले जाण्यासाठी व नाहीसे व्हावे यासाठी मी आणि माझे लोक विकले गेलो आहोत. आमची नुसती गुलाम म्हणून विक्री झाली असती तरी मी गप्प राहिले असते. तरी त्या शत्रूला राजाची हानी भरून देऊ शकले नसते.”
5 ಆಗ ಅರಸನಾದ ಅಹಷ್ವೇರೋಷನು ರಾಣಿಯಾದ ಎಸ್ತೇರಳಿಗೆ, “ಯಾರು ಅವನು? ಈ ಪ್ರಕಾರ ಮಾಡಲು ಧೈರ್ಯಗೊಂಡವನು ಯಾರು? ಅವನು ಎಲ್ಲಿದ್ದಾನೆ?” ಎಂದನು.
तेव्हा राजा अहश्वेरोशाने राणी एस्तेरला विचारले, “असे तुमच्या बाबतीत धाडस करणारा मनुष्य कोण व तो कोठे आहे?”
6 ಅದಕ್ಕೆ ಎಸ್ತೇರಳು, “ಆ ವೈರಿಯೂ ಹಗೆಗಾರನೂ ಬೇರೆ ಯಾರೂ ಅಲ್ಲ, ಈ ದುಷ್ಟ ಹಾಮಾನನೇ!” ಎಂದಳು. ಆಗ ಹಾಮಾನನು ಅರಸನ ಮುಂದೆಯೂ, ರಾಣಿಯ ಮುಂದೆಯೂ ಬೆಪ್ಪಾದನು.
एस्तेर म्हणाली, “तो आपल्या समोरच आहे. हाच तो दृष्ट हामान आमचा शत्रू!” तेव्हा राजा आणि राणीसमोर हामान भयभीत झाला.
7 ಅರಸನು ಕೋಪಗೊಂಡು ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟು, ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು. ಏಕೆಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ಅವನಿಗೆ ತಿಳಿದಿತ್ತು.
राजाला अतिशय संताप आला. द्राक्षरस तसाच टाकून तो उठला आणि बाहेर राजबागेत गेला, पण हामान आपले प्राण वाचवण्याची याचना करत आत राणी एस्तेरजवळ उभा राहिला. राजाने आपले वाईट करण्याचे ठरवले आहे असे त्याने पाहिले.
8 ಅರಸನು ಅರಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ಹಿಂದಿರುಗಿ ಬಂದಾಗ, ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು, “ನನ್ನ ಮುಂದೆಯೇ ಇವನು ರಾಣಿಯನ್ನು ಬಲಾತ್ಕಾರ ಮಾಡಬೇಕೆಂದಿರುವನೋ?” ಎಂದನು. ಆ ಮಾತು ಅರಸನ ಬಾಯಿಂದ ಹೊರಟ ಕೂಡಲೆ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಹಾಕಿದರು.
मग जेथे द्राक्षरस दिला गेला होता त्या दालनामध्ये, राजा बागेतून येऊन उभा राहिला मेजवानीच्या, ज्या आसनावर एस्तेर बसली होती त्यावर हामानाला पडताना राजाने पाहिले. तेव्हा संतापून राजा म्हणाला, “मी घरात असतानाच राणीवर जबरदस्ती करणार आहेस की काय?” राजा असे म्हणाल्याबरोबर सेवक आत आले आणि त्यांनी हामानाचे तोंड झाकले.
9 ಆಗ ರಾಜಕಂಚುಕಿಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ ಬಂದು, “ಇಗೋ, ಅರಸನ ಪ್ರಾಣವನ್ನು ರಕ್ಷಿಸಲು ಮಾತಾಡಿದ ಮೊರ್ದೆಕೈಯನ್ನು ಕೊಲ್ಲುವುದಕ್ಕಾಗಿ ಹಾಮಾನನು ಮಾಡಿಸಿದ ಇಪ್ಪತ್ತೆರಡು ಮೀಟರ್ ಗಲ್ಲುಮರವು ಹಾಮಾನನ ಮನೆಯ ಹತ್ತಿರ ಇದೆ,” ಎಂದನು. ಅದಕ್ಕೆ ಅರಸನು, “ಇವನನ್ನು ಅದರಲ್ಲಿ ನೇತುಹಾಕಿರಿ” ಎಂದನು.
नंतर हरबोना नावाचा राजाच्या सेवकातील एक अधिकारी, म्हणाला “ज्या मर्दखयाने राजाचे रक्षण करण्यासाठी खबर दिली होती त्याच्यासाठी हामानाच्या घराजवळ पन्नास हात उंचीचा खांब उभारला आहे.” राजा म्हणाला “त्याच खांबावर त्यास फाशी द्या.”
10 ಅವರು ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲುಮರದಲ್ಲಿ ಅವನನ್ನು ನೇತುಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
१०तेव्हा मर्दखयासाठी उभारलेल्या खांबावर हामानाला फाशी देण्यात आली. मग राजाचा क्रोध शमला.

< ಎಸ್ತೇರಳು 7 >