< ವಿಮೋಚನಕಾಂಡ 5 >

1 ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ, “ಇಸ್ರಾಯೇಲಿನ ಯೆಹೋವ ದೇವರು, ‘ಮರುಭೂಮಿಯಲ್ಲಿ ನನಗೆ ನನ್ನ ಜನರು ಹಬ್ಬವನ್ನಾಚರಿಸುವುದಕ್ಕೆ ಅವರನ್ನು ಹೋಗಗೊಡಿಸು,’ ಎಂದು ಹೇಳುತ್ತಾರೆ,” ಎಂದರು.
या गोष्टी घडल्यानंतर, मोशे व अहरोन फारोकडे गेले व त्यास म्हणाले, “इस्राएली लोकांचा देव परमेश्वर म्हणतो, माझ्या लोकांनी माझ्यासाठी रानात उत्सव करावा म्हणून त्यांना जाऊ दे.”
2 ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು.
फारो म्हणाला, “हा परमेश्वर कोण आहे? मी त्याचा शब्द का ऐकावा आणि इस्राएलाला जाऊ द्यावे? मी त्या परमेश्वरास ओळखत नाही. म्हणून इस्राएलाला मी जाऊ देणार नाही.”
3 ಆಗ ಅವರು ಫರೋಹನಿಗೆ, “ಹಿಬ್ರಿಯರ ದೇವರು ನಮ್ಮನ್ನು ಸಂದರ್ಶಿಸಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿವಸ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞ ಅರ್ಪಿಸುವುದಕ್ಕೆ ನಾವು ಹೋಗಬೇಕು. ಇಲ್ಲವಾದರೆ ಅವರು ಉಪದ್ರವದಿಂದಲೋ ಖಡ್ಗದಿಂದಲೋ ನಮ್ಮನ್ನು ದಂಡಿಸುವರು,” ಎಂದರು.
मग अहरोन व मोशे म्हणाले, “इब्री लोकांचा देव आम्हांशी बोलला आहे. म्हणून आम्हांला रानात तीन दिवसाच्या वाटेवर जाऊ द्यावे आणि तेथे आमचा देव परमेश्वर याल यज्ञार्पण करू द्यावे अशी आम्ही आपणाला विनंती करतो. आणि आम्ही जर असे केले नाही तर तो मरीने किंवा तलवारीने आमच्यावर तुटून पडेल.”
4 ಈಜಿಪ್ಟಿನ ಅರಸನು ಅವರಿಗೆ, “ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸಗಳನ್ನು ಮಾಡದಂತೆ ಏಕೆ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಗಳಿಗೆ ಹೋಗಿ,” ಎಂದನು.
परंतु मिसराचा राजा फारो त्यांना म्हणाला, “हे मोशे, हे अहरोना, तुम्ही लोकांस काम सोडून जायला का लावता? तुम्ही आपल्या कामावर माघारी चालते व्हा.
5 ಇದಲ್ಲದೆ ಫರೋಹನು, “ಈಗ ಹಿಬ್ರಿಯರು ಈ ದೇಶದಲ್ಲಿ ಹೆಚ್ಚಿದ್ದಾರೆ. ನೀವು ಅವರನ್ನು ಅವರ ಬಿಟ್ಟಿಕೆಲಸಗಳಿಂದ ನಿಲ್ಲಿಸಿಬಿಡುತ್ತೀರಲ್ಲಾ?” ಎಂದನು.
फारो त्यांना असेही म्हणाला, येथे आता आमच्या देशात खूप इब्री आहेत आणि तुम्ही त्यांना काम करण्यापासून थांबवत आहात.”
6 ಅದೇ ದಿನದಲ್ಲಿ ಫರೋಹನು ಬಿಟ್ಟಿಕೆಲಸ ಮಾಡಿಸುವವರಿಗೂ ಅವರ ಮೇಲ್ವಿಚಾರಕರಿಗೂ,
त्याच दिवशी फारोने मुकादमांना व नायकांना आज्ञा दिली.
7 “ನೀವು ಇನ್ನು ಇಟ್ಟಿಗೆಗಳನ್ನು ಮಾಡುವುದಕ್ಕೆ ಮೊದಲಿನ ಹಾಗೆ ಜನರಿಗೆ ಒಣಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ.
तो त्यांना म्हणाला, “तुम्ही लोकांस विटा बनवण्याकरिता आजपर्यंत सतत गवत दिलेले आहे. परंतु आता त्यांना लागणारे गवत त्यांना स्वत: शोधून आणायला सांगा.
8 ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದ್ದರಿಂದ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞವನ್ನು ಅರ್ಪಿಸೋಣ,’ ಎಂದು ಕೂಗುತ್ತಾರೆ.
तरी पूर्वी इतक्याच विटा त्यांनी बनवल्या पाहिजेत. त्यामध्ये काही कमी करून स्वीकारू नका. कारण ते आळशी झाले आहेत. म्हणूनच ते ओरड करून म्हणतात, आम्हांला जाण्याची परवानगी दे आणि आमच्या देवाला यज्ञ करू दे.
9 ಈ ಜನರು ಸುಳ್ಳು ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ. ಅವರು ದುಡಿಯಲಿ,” ಎಂದು ಆಜ್ಞಾಪಿಸಿದನು.
तेव्हा त्यांच्यावर अधिक काम लादून त्यांना सतत कामात ठेवा. म्हणजे मग खोट्या बोलण्यावर विश्वास ठेवणार नाहीत.”
10 ಆಗ ಬಿಟ್ಟಿಕೆಲಸವನ್ನು ಮಾಡಿಸುವವರೂ ಮೇಲ್ವಿಚಾರಕರೂ ಹೊರಗೆ ಹೋಗಿ ಜನರಿಗೆ, “ಫರೋಹನು ಹೀಗೆ ಹೇಳುತ್ತಾನೆ: ‘ನಾನು ನಿಮಗೆ ಒಣಹುಲ್ಲು ಕೊಡುವುದಿಲ್ಲ.
१०म्हणून लोकांचे मुकादम व नायक लोकांकडे जाऊन म्हणाले, “फारो असे म्हणतो, तुम्हास विटा बनवण्यासाठी लागणारे गवत देणार नाही.
11 ನಿಮಗೆ ಹುಲ್ಲು ಎಲ್ಲಿ ದೊರಕುವುದೋ, ಅಲ್ಲಿಗೆ ನೀವೇ ಹೋಗಿ ತೆಗೆದುಕೊಳ್ಳಿರಿ. ಆದರೆ ನಿಮ್ಮ ಕೆಲಸವು ಏನೂ ಕಡಿಮೆಯಾಗಬಾರದು,’ ಎಂದು ಹೇಳಿದ್ದಾನೆ,” ಎಂದರು.
११तेव्हा तुम्हास लागणारे गवत तुम्ही स्वत: च आणले पाहिजे. तुमचे काम काही कमी होणार नाही.”
12 ಆಗ ಜನರು ಒಣಹುಲ್ಲಿಗಾಗಿ ಕಳೆಕೀಳಿಸುವುದಕ್ಕೆ ಈಜಿಪ್ಟ್ ದೇಶದಲ್ಲೆಲ್ಲಾ ಚದರಿಹೋದರು.
१२म्हणून मग लोक गवत शोधण्याकरता सर्व मिसर देशभर पांगले.
13 ಇದಲ್ಲದೆ ಬಿಟ್ಟಿಕೆಲಸ ಮಾಡಿಸುವವರು, “ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿದಂತೆಯೇ, ಪ್ರತಿಯೊಂದು ದಿನದಲ್ಲಿ, ಆ ದಿನದ ಕೆಲಸವನ್ನು ತೀರಿಸಿಬಿಡಬೇಕು,” ಎಂದು ಹೇಳಿ ಅವರನ್ನು ತ್ವರೆಪಡಿಸಿದರು.
१३त्यांच्यावर नेमलेले मुकादम त्यांच्याकडून अधिक काम करवून घेऊन पूर्वी इतक्याच विटा तयार करण्याकरता त्यांच्यामागे सतत तगादा लावत.
14 ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, “ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಏಕೆ ಒಪ್ಪಿಸಲಿಲ್ಲ,” ಎಂದು ಹೇಳಿ ಅವರನ್ನು ಹೊಡೆಸಿದರು.
१४मिसराच्या मुकादमांनी इस्राएली लोकांवर नायक नेमले होते. त्यांना फारोच्या मुकादमांनी मार देऊन विचारले की, “तुम्ही पूर्वी जेवढ्या विटा बनवत होता तेवढ्या आता का बनवत नाही?”
15 ಇಸ್ರಾಯೇಲರ ಮೇಲ್ವಿಚಾರಕರು ಫರೋಹನ ಬಳಿಗೆ ಹೋಗಿ, “ಏಕೆ ನಿಮ್ಮ ದಾಸರಿಗೆ ಹೀಗೆ ಮಾಡುತ್ತೀರಿ?
१५मग इस्राएली नायक तक्रार घेऊन फारोकडे गेले व म्हणाले, “आम्ही जे तुमचे सेवक त्या आमच्याशी तुम्ही अशा प्रकारे का वागत आहा?
16 ನಿಮ್ಮ ದಾಸರಿಗೆ ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ, ‘ಇಟ್ಟಿಗೆಗಳನ್ನು ಮಾಡಿರಿ’ ಎಂದು ನಮಗೆ ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಆದರೆ ತಪ್ಪು ನಿಮ್ಮ ಸ್ವಂತ ಜನರಲ್ಲಿಯೇ ಇದೆ,” ಎಂದರು.
१६तुम्ही आम्हांला गवत देत नाही, परंतु पूर्वी इतक्याच विटा बनवण्याचा हुकूम करता, आणि आता आपल्या दासांना मार मिळत आहे. पण सारा दोष आपल्या लोकांचा आहे.”
17 ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ನೀವು, ‘ನಾವು ಹೋಗಿ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುತ್ತೇವೆ,’ ಎಂದು ಹೇಳುತ್ತೀರಿ.
१७फारो म्हणाला, “तुम्ही आळशी आहात, म्हणूनच तुम्ही म्हणता, आम्हांला परमेश्वरास यज्ञ करायला जाऊ देण्याची परवानगी दे.
18 ಆದ್ದರಿಂದ ಈಗ ಹೋಗಿ ಕೆಲಸಮಾಡಿರಿ. ಹುಲ್ಲನ್ನು ನಿಮಗೆ ಕೊಡುವುದಕ್ಕಾಗುವುದಿಲ್ಲ. ಆದರೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ತಯಾರಿಸಬೇಕು,” ಎಂದನು.
१८आता आपल्या कामावर माघारी जा. तुम्हास गवत काही मिळायचे नाही, परंतु पूर्वीप्रमानेच विटा तुम्ही केल्या पाहिजेत.
19 ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದ್ದರಿಂದ, ಇಸ್ರಾಯೇಲರ ಮೇಲ್ವಿಚಾರಕರು ತಾವು ದುರವಸ್ಥೆಯಲ್ಲಿ ಇದ್ದೇವೆಂದು ತಿಳಿದುಕೊಂಡರು.
१९आपण संकटात आहोत हे इस्राएली नायकांना समजले. कारण पूर्वी इतक्याच विटा व रोजचे काम त्यांना शक्य नव्हते.”
20 ಅವರು ಫರೋಹನ ಬಳಿಯಿಂದ ಹೊರಗೆ ಬಂದಾಗ, ದಾರಿಯಲ್ಲಿ ಕಾದಿದ್ದ ಮೋಶೆಯನ್ನೂ, ಆರೋನನನ್ನೂ ಸಂಧಿಸಿದರು.
२०फारोच्या भेटीनंतर परत जाताना त्यांना वाटेत मोशे व अहरोन भेटले;
21 ಅವರು ಮೋಶೆ ಆರೋನರಿಗೆ, “ಯೆಹೋವ ದೇವರು ನಿಮ್ಮನ್ನು ನೋಡಿ ನ್ಯಾಯತೀರಿಸಲಿ! ಏಕೆಂದರೆ ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ. ನಮ್ಮನ್ನು ಸಂಹರಿಸುವುದಕ್ಕೆ ನೀವು ಅವರ ಕೈಗೆ ಖಡ್ಗವನ್ನು ಕೊಟ್ಟಿದ್ದೀರಿ,” ಎಂದರು.
२१तेव्हा ते मोशे व अहरोन ह्यांना म्हणाले, “परमेश्वर तुम्हांकडे पाहो व तुम्हास शिक्षा करो. कारण फारो व त्याचे सेवक यांच्या दृष्टीने तुम्ही आम्हांला अपमानकारक केले आहे. आम्हांला मारून टाकण्यासाठी तुम्ही त्यांच्या हातात जणू तलवारच दिली आहे.”
22 ಆಗ ಮೋಶೆಯು ಯೆಹೋವ ದೇವರ ಬಳಿಗೆ ಬಂದು, “ಸ್ವಾಮಿ, ಈ ಜನರಿಗೆ ಏಕೆ ಕಷ್ಟವನ್ನು ಕೊಟ್ಟಿದ್ದೀರಿ? ಏಕೆ ನನ್ನನ್ನು ಕಳುಹಿಸಿದಿರಿ?
२२मग मोशेने परमेश्वराकडे परत जाऊन प्रार्थना करून म्हटले, “प्रभू, तू या लोकांस का त्रास देत आहेस? पहिली गोष्ट म्हणजे तू मला का पाठवलेस?
23 ನಾನು ಫರೋಹನ ಬಳಿಗೆ ಬಂದು ನಿಮ್ಮ ಹೆಸರಿನಲ್ಲಿ ಮಾತನಾಡಿದಂದಿನಿಂದ, ಈ ಜನರಿಗೆ ಅವನು ಕೇಡನ್ನೇ ಮಾಡುತ್ತಿದ್ದಾನೆ. ನೀವು ನಿಮ್ಮ ಜನರನ್ನು ರಕ್ಷಿಸಲಿಲ್ಲವಲ್ಲಾ,” ಎಂದನು.
२३मी तुझ्या नावाने बोलण्यासाठी फारोकडे आलो, तेव्हापासून तो या लोकांस त्रास देत आहे. आणि तू आपल्या लोकांस मुक्त तर मुळीच केले नाहीस.”

< ವಿಮೋಚನಕಾಂಡ 5 >